ಮಡಿಕೇರಿ ಜೂ.13 NEWS DESK : ಕೊಡಗು ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಮತ್ತು ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸುವ ಕುರಿತು ಪ್ರವಾಸೋದ್ಯಮ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುವುದಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೊಡಗು ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರವನ್ನು ಮತ್ತಷ್ಟು ಅಭಿವೃಧ್ಧಿ ಪಡಿಸಬೇಕು. ಮೂಲಸೌಲಭ್ಯಗಳನ್ನು ಕಲ್ಪಿಸಬೇಕು, ಪ್ರವಾಸಿಗರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾದಂತೆ ಕ್ರಮಗಳನ್ನು ಕೈಗೊಳ್ಳಬೇಕು ಎಂದರು. ಹೋಂಸ್ಟೇಗಳಿಗೆ ಸಂಬಂಧಿಸಿದಂತೆ ವಾಣಿಜ್ಯ ಬಳಕೆ ಹಾಗೂ ಗೃಹ ಬಳಕೆ ವಿದ್ಯುತ್ ಶುಲ್ಕ ಸಂಬಂಧ ಒಂದೇ ರೀತಿಯ ಡೆಫಿನೇಶನ್ ಇರಬೇಕು. ವಿದ್ಯುತ್ ಶುಲ್ಕ ಸಂಬಂಧ ಪ್ರವಾಸೋದ್ಯಮ ಸಚಿವರು, ಉನ್ನತ ಮಟ್ಟದ ಅಧಿಕಾರಿಗಳು ಹಾಗೂ ಆರು ಜಿಲ್ಲೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು. ಪ್ರವಾಸೋದ್ಯಮದ ಆಕರ್ಷಣೆಗೆ ಸ್ವಚ್ಛತೆ ಕಾಪಾಡುವುದು ಅಗತ್ಯ, ಎಲ್ಲೆಂದರಲ್ಲಿ ಕಸ ಹಾಕಬಾರದು. ಪ್ಲಾಸ್ಟಿಕ್ನ್ನು ಕಡ್ಡಾಯವಾಗಿ…
ಲೇಖಕ: admin
ಮಡಿಕೇರಿ ಜೂ.13 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನೂತನ ಅಧ್ಯಕ್ಷರಾಗಿ ಸದಾನಂದ ಗೌಡ ಮಾವಜಿ ಅವರು ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ. ನಗರದ ಕಾಫಿ ಕೃಪಾ ಕಟ್ಟಡದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ ರಿಜಿಸ್ಟಾçರ್ ಚಿನ್ನಸ್ವಾಮಿ, ಸಿಬ್ಬಂದಿಗಳಾದ ಜ್ಯೋತಿ, ಶೋಭ ಇದ್ದರು. ಸದಾನಂದಗೌಡ ಮಾವಜಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಳ ತಾಲ್ಲೂಕಿನ ಮಂಡೆಕೋಲು ಗ್ರಾಮದ ಮಾವಜಿ ಕುಟುಂಬದವರಾಗಿದ್ದಾರೆ. ಅಧಿಕಾರ ವಹಿಸಿಕೊಂಡ ಬಳಿಕ ನಗರದ ಜಿಲ್ಲಾಡಳಿತ ಭವನಕ್ಕೆ ತೆರಳಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅವರನ್ನು ಭೇಟಿ ಮಾಡಿ ಪರಿಚಯಿಸಿಕೊಂಡರು. ಈ ಸಂದರ್ಭದಲ್ಲಿ ಶಾಸಕರಾದ ಡಾ.ಮಂತರ್ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅವರು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ…
ಮಡಿಕೇರಿ ಜೂ.13 NEWS DESK : ಕರ್ನಾಟಕ ಸರ್ಕಾರದ ಬಸ್ ಸೇವೆಗಳಲ್ಲಿ ಒಂದಾದ ನೂತನ ‘ಅಶ್ವಮೇಧ’ ಬಸ್ಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಗುರುವಾರ ಚಾಲನೆ ನೀಡಿದರು. ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಿ ಮಾತನಾಡಿದ ಶಾಸಕರು ಮಡಿಕೇರಿ-ಸೋಮವಾರಪೇಟೆ ಮಾರ್ಗದಲ್ಲಿ ಬೆಂಗಳೂರಿಗೆ ತೆರಳಲು ಸಾರ್ವಜನಿಕರ ಬಹುದಿನದ ಬೇಡಿಕೆಯಾಗಿತ್ತು, ಬೇಡಿಕೆಯನ್ನು ಈಡೇರಿಸಲಾಗಿದೆ ಎಂದರು. ಮಡಿಕೇರಿ ಕೆಎಸ್ಆರ್ಟಿಸಿ ಘಟಕದಿಂದ ಸೋಮವಾರಪೇಟೆ ಮಾರ್ಗ 3 ಬಸ್ಗಳು, ಕುಶಾಲನಗರದಿಂದ 2 ಬಸ್ಗಳು ಸಂಚರಿಸುತ್ತಿವೆ. ಮಡಿಕೇರಿ ಕೆಎಸ್ಆರ್ಟಿಸಿ ಘಟಕದಲ್ಲಿ 97 ಬಸ್ಗಳು ವಿವಿಧ ಮಾರ್ಗದಲ್ಲಿ ಸಂಚಾರ ಮಾಡುತ್ತಿವೆ. ಕುಶಾಲನಗರ ಕೆಎಸ್ಆರ್ಟಿಸಿ ಆರಂಭವಾದ ನಂತರ ಮತ್ತಷ್ಟು ಬಸ್ಗಳು ಸಂಚರಿಸಲಿವೆ ಮಡಿಕೇರಿ-ಸೋಮವಾರಪೇಟೆ-ಅರಕಲಗೋಡು-ಚೆನ್ನರಾಯಪಟ್ಟಣ ಮಾರ್ಗ ಪ್ರತಿ ದಿನ ಬೆಳಗ್ಗೆ 10.15 ಗಂಟೆಗೆ ಹೊರಟು ಸಂಜೆ 4.45 ಗಂಟೆಗೆ ಬೆಂಗಳೂರು ತಲುಪಲಿದೆ ಎಂದು ಶಾಸಕರು ಮಾಹಿತಿ ನೀಡಿದರು. ಮಡಿಕೇರಿ ಕೆಎಸ್ಆರ್ಟಿಸಿ ಘಟಕದ ವ್ಯವಸ್ಥಾಪಕರಾದ ವೀರಭದ್ರಸ್ವಾಮಿ, ಸಂಚಾರಿ ನಿಯಂತ್ರಕರು ಮತ್ತಿತರರು ಇದ್ದರು.
ಸುಂಟಿಕೊಪ್ಪ ಜೂ.13 NEWS DESK : ಹರದೂರು ಅಂಚೆ ಕಚೇರಿಯಲ್ಲಿ ಕಳೆದ 42 ವರ್ಷಗಳಿಂದ ಪೋಸ್ಟ್ ಮಾಸ್ಟರಾಗಿ ಸೇವೆ ಸಲ್ಲಿಸುತ್ತಿದ್ದ ಬಿ.ಬಿ.ಜಿನ್ನಪ್ಪ ಅವರು ನಿವೃತ್ತಿ ಹೊಂದಿದ್ದು, ಅವರ ಸೇವೆಯನ್ನು ಸ್ಮರಿಸಿ ಹರದೂರು ಗ್ರಾಮಸ್ಥರು ಬೀಳ್ಕೊಡುಗೆ ನೀಡಿದರು. ಗ್ರಾಮದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಹರದೂರು, ಗರಗಂದೂರು ಗ್ರಾಮಸ್ಥರು ಬಿ.ಬಿ.ಜಿನ್ನಪ್ಪ ಅವರನ್ನು ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭ ಮಾತನಾಡಿದ ಗ್ರಾ.ಪಂ ಸದಸ್ಯ ಎ.ಸಿ.ಸುಬ್ಬಯ್ಯ, ಬಿ.ಬಿ.ಜಿನ್ನಪ್ಪ ಅವರು ಗ್ರಾಮ ವ್ಯಾಪ್ತಿಯಲ್ಲಿ ಉತ್ತಮ ಸೇವೆ ಸಲ್ಲಿಸಿ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ. ಈ ಭಾಗದ ಜನರ ಸಂಕಷ್ಟಕ್ಕೆ ನೆರವಾಗಿದ್ದಾರೆ. ಸಮಾಜ ಸೇವೆಯಲ್ಲಿ ಮುಂದಾಗಿದ್ದ ಇವರ ನಿವೃತ್ತಿ ಜೀವನ ಸುಖಕರವಾಗಿರಲೆಂದು ಹಾರೈಸಿದರು. ಗ್ರಾಮಸ್ಥರಾದ ಚಂಗಪ್ಪ ಮಾತನಾಡಿ, ಪೋಸ್ಟ್ ಮಾಸ್ಟರಾಗಿ ನಗು ನಗುತ್ತಾ ಕಾರ್ಯನಿರ್ವಹಿಸುತ್ತಿದ್ದರು. ಜನರ ಸೇವೆಯಲ್ಲಿ ಮುಂದಾಗಿದ್ದ ಇವರು ಎಲ್ಲರೊಂದಿಗೆ ಬೆರೆತು ಜನರ ಕಷ್ಟಗಳಿಗೆ ನೆರವಾಗುತ್ತಿದ್ದರು ಇವರ ಸೇವೆ ಸ್ಮರಣೀಯ ಎಂದರು. ಈ ಸಂದರ್ಭ ಗ್ರಾಮಸ್ಥರಾದ ಎ.ಸಿ.ಪೊನ್ನಪ್ಪ, ಎಂ.ಎ.ವಸಂತ, ರಾಘವೇಂದ್ರ ಭಟ್, ಉಮೇಶ್ಚಂದ್ರ(ಪವಿ), ಸತೀಶ್ಚಂದ್ರ, ಎಸ್.ವಿಶ್ವನಾಥ್, ಶ್ರುತಿ ವಿಸ್ವನಾಥ್ ಹಾಗೂ…
ಮಡಿಕೇರಿ ಜೂ.13 NEWS DESK : ರಾಷ್ಟ್ರೀಯ ಸಮಗ್ರತೆ ಮತ್ತು ಶಾಂತಿಯ ಸಂದೇಶವನ್ನು ಸಾರುವ ನಿಟ್ಟಿನಲ್ಲಿ ಜುಲೈನಲ್ಲಿ ಕೊಡಗಿನಿಂದ ಕನ್ಯಾಕುಮಾರಿಯವರೆಗೆ ಪಾದಯಾತ್ರೆ ಹಮ್ಮಿಕೊಂಡಿರುವುದಾಗಿ ಉಡುಪಿಯ ಕಡೆಕಾರ್ ನಿವಾಸಿ ಜಯಪ್ರಕಾಶ್ ಶೆಟ್ಟಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಿಂದ ಜುಲೈ ಎರಡನೇ ವಾರದಲ್ಲಿ ಪಾದಯಾತ್ರೆ ಆರಂಭಿಸಲಿದ್ದೇನೆ. 40 ದಿನಗಳಲ್ಲಿ 900 ಕಿ.ಮೀ ಕ್ರಮಿಸುವ ಉದ್ದೇಶವಿದ್ದು, ಪಾದಯಾತ್ರೆಯ ಸಮಯದಲ್ಲಿ ಕಾಂಗ್ರೆಸ್ ಮುಖಂಡರಾಗಿದ್ದ ದಿ.ಆಸ್ಕರ್ ಫೆರ್ನಾಂಡಿಸ್ ಬೆಂಬಲಿಗರು ನನ್ನೊಂದಿಗೆ ಪಾಲ್ಗೊಳ್ಳುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು. ದಿವಂಗತ ಆಸ್ಕರ್ ಫೆರ್ನಾಂಡಿಸ್ರ ಸರಳತೆ ಮತ್ತು ಸತ್ಯ ನಿಷ್ಟತೆಗೆ ಈ ಪಾದಯಾತ್ರೆಯನ್ನು ಅರ್ಪಿಸುತ್ತಿದ್ದು, ಜಾತ್ಯತೀತವಾಗಿ ಮತ್ತು ಪಕ್ಷಾತೀತವಾಗಿ ಯಾತ್ರೆಯನ್ನು ಕೈಗೊಂಡಿರುವುದಾಗಿ ಹೇಳಿದರು. 2017ರಲ್ಲಿ ಉಡುಪಿಯಿಂದ ಮುಂಬೈಗೆ 32 ದಿನಗಳ 1050 ಕಿ.ಮೀ. ದೂರದ ಪಾದಯಾತ್ರೆ, ಸಾಬರಮತಿಯಿಂದ ದಂಡಿಗೆ 14 ದಿನಗಳಲ್ಲಿ 410 ಕಿ.ಮೀ. ಮತ್ತು ದೆಹಲಿಯಿಂದ ವಾಘಾ-ಅಟ್ಟಾರಿ ಗಡಿಯವರೆಗೆ 16 ದಿನಗಳಲ್ಲಿ 500 ಕಿ.ಮೀ. ಪಾದಯಾತ್ರೆ ನಡೆಸಿರುವುದಾಗಿ ಮಾಹಿತಿ ನೀಡಿದ ಜಯಪ್ರಕಾಶ್…
ಮಡಿಕೇರಿ ಜೂ.13 NEWS DESK : ಕೂಡಿಗೆಯ ಎ ಕ್ರಿಯೇಟಿವ್ ಡ್ಯಾನ್ಸ್ ಅಕಾಡೆಮಿಯ ತೃತೀಯ ವಾರ್ಷಿಕೋತ್ಸವದ ಅಂಗವಾಗಿ ಜು.6 ಮತ್ತು 7 ರಂದು ರಾಜ್ಯಮಟ್ಟದ ನೃತ್ಯ ಸ್ಪರ್ಧೆ `ಡ್ಯಾನ್ಸ್-ಡ್ಯಾನ್ ಸೀಸನ್-1′ ನಡೆಯಲಿದೆ ಎಂದು ಅಕಾಡೆಮಿಯ ಸ್ಥಾಪಕ ಹಾಗೂ ನೃತ್ಯ ಸಂಯೋಜಕ ಕೆ.ಎಸ್.ಅಕ್ತರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗಿನ ನೃತ್ಯ ಕಾರ್ಯಕ್ರಮಗಳಲ್ಲಿ ಮೊದಲ ಬಾರಿಗೆ ರಿಯಾಲಿಟಿ ಶೋ ಮಾದರಿಯ ನೃತ್ಯ ಸ್ಪರ್ಧೆ ನಡೆಯುತ್ತಿದ್ದು, ಕುಶಾಲನರದ ಸಹಕಾರ ಭವನದಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು. ಸೋಲೋ, ಕಪಲ್ ಹಾಗೂ ಗುಂಪು ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು, ಈ ಮೂರು ವಿಭಾಗಗಳಲ್ಲಿಯೂ ಸ್ಪರ್ಧಾಳುಗಳ ವಯೋಮಿತಿ 3 ರಿಂದ 9 ವರ್ಷದ ಮಕ್ಕಳು (ಸಬ್ ಜೂನಿಯರ್ ವಿಭಾಗ), 10 ರಿಂದ 14 ವರ್ಷದ ಮಕ್ಕಳು (ಜೂನಿಯರ್ ವಿಭಾಗ) ಹಾಗೂ 15 ವರ್ಷ ಮೇಲ್ಪಟ್ಟವರ (ಸೀನಿಯರ್ ವಿಭಾಗ)ದಲ್ಲಿ ಸ್ಪರ್ಧೆ ನಡೆಯಲಿದೆ. ಒಟ್ಟು ರೂ.1.50 ಲಕ್ಷದ…
ವಿರಾಜಪೇಟೆ ಜೂ.13 NEWS DESK : ವಿರಾಜಪೇಟೆ ಮದರ್ ತೆರೇಸಾ ಸೇವಾ ಕೇಂದ್ರದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ಹಾಗೂ ಲೇಖನ ಸಾಮಾಗ್ರಿಗಳನ್ನು ವಿತರಿಸಲಾಯಿತು. ಪಟ್ಟಣದ ಸಂತ ಅನ್ನಮ್ಮ ಶಾಲಾ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ 175 ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಹಾಗೂ ಲೇಖನ ಸಾಮಾಗ್ರಿಗಳನ್ನು ವಿತರಿಸಲಾಯಿತು. ಈ ಸಂದರ್ಭ ಮಾತನಾಡಿದ ಸಂತ ಅನ್ನಮ್ಮ ದೇವಾಲಯದ ಮುಖ್ಯ ಗುರುಗಳಾದ ವಂ. ಜೇಮ್ಸ್ ಡೋಮಿನಿಕ್, ಸಂಘದ ಕಾರ್ಯವನ್ನು ಶ್ಲಾಘಿಸಿದರು. ಮದರ್ ತೆರೇಸಾ ಅವರ ಆದರ್ಶಗಳು ಮಕ್ಕಳಿಗೆ ದಾರಿದೀಪವಾಗಬೇಕು ಎಂದು ತಿಳಿಹೇಳಿದರು. ಸಂತ ಅನ್ನಮ್ಮ ಪಿ.ಯು ಕಾಲೇಜಿನ ಪ್ರಾಂಶುಪಾಲರಾದ ವಂ. ಗುರುಗಳಾದ ಮದಲೈ ಮುತ್ತು ಮಕ್ಕಳಿಗೆ ಆಶೀರ್ವಚನ ನೀಡುತ್ತಾ, ಮಕ್ಕಳು ಇದರ ಪ್ರಯೋಜನವನ್ನು ಪಡೆದು ಮುಂದೆ ಒಳ್ಳೆಯ ವ್ಯಕ್ತಿಗಳಾಗಿ ಸಮಾಜ ಸೇವೆ ಮಾಡಲು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಡಾ. ಅದ್ವೈತ ಸುರೇಶ್, ಪೊವೆಲ್ ಮೆನೇಜಸ್ ಎಂಬಿಎ ಪ್ರಥಮ ರ್ಯಾಂಕ್, ಕುಮಾರಿ ಅನುಷಾ ಮಚಾಡೋ ಎಂಬಿಎನಲ್ಲಿ ಚಿನ್ನದ ಪದಕ ವಿಜೇತೆ ಹಾಗೂ ವಿರಾಜಪೇಟೆ ಕಾವೇರಿ…
ಕುಶಾಲನಗರ ಜೂ.13 NEWS DESK : ಸ್ಕೌಟ್ಸ್ ಮತ್ತು ಗೈಡ್ಸ್ ಗಳು ಸನ್ನಡತೆ, ಸದ್ಭಾವನೆ, ಶಿಸ್ತು ಮತ್ತು ಸೇವಾ ಮನೋಭಾವನೆಗಳಂತಹ ಶಿಕ್ಷಣವನ್ನು ನೀಡುವುದರೊಂದಿಗೆ ಭಾರತದ ಸಂಪನ್ಮೂಲ ವ್ಯಕ್ತಿಯಾಗಿ ರೂಪಿಸುವಲ್ಲಿ ಮಹತ್ತರ ಪಾತ್ರ ನಿರ್ವಹಿಸುತ್ತದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಗೈಡ್ಸ್ ಆಯುಕ್ತರು ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ ಹೇಳಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆ ಹಾಗೂ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸಂಘಟನೆ ಹಾಗೂ ಕಾರ್ಯಚಟುವಟಿಕೆಗಳ ಪರಿಚಯ ಕುರಿತು ಹಾಗೂ ವಿಶ್ವ ಬಾಲ ಕಾರ್ಮಿಕರ ದಿನಾಚರಣೆಯ ಮಹತ್ವ ಕುರಿತು ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗಿಗಳಾಗುವುದರಿಂದ ಶಿಸ್ತು, ದಕ್ಷತೆ, ನಾಯಕತ್ವ ಗುಣಗಳು ಬೆಳೆಯುತ್ತವೆ ಎಂದರು. ಜೂ.18 ರಿಂದ 24 ರ…
ಮಡಿಕೇರಿ ಜೂ.13 NEWS DESK : ಹರದೂರು ಗ್ರಾ.ಪಂ ವ್ಯಾಪ್ತಿಯ ಗರಗಂದೂರು ಮುಖ್ಯ ರಸ್ತೆ ಬದಿ ನಡೆಯುತ್ತಿರುವ ನೂತನ ಕಾಂಕ್ರೀಟ್ ಚರಂಡಿ ನಿರ್ಮಾಣ ಕಾಮಗಾರಿಯ ಗುಣಮಟ್ಟವನ್ನು ಶಾಸಕ ಡಾ.ಮಂತರ್ ಗೌಡ ಪರಿಶೀಲಿಸಿದರು. ಈ ಸಂದರ್ಭ ಪಂಚಾಯಿತಿ ಉಪಾಧ್ಯಕ್ಷ ಸಲೀಂ, ಅಧಿಕಾರಿಗಳು ಹಾಗೂ ಮತ್ತಿತರರು ಹಾಜರಿದ್ದರು.
ವಿರಾಜಪೇಟೆ ಜೂ.13 NEWS DESK : ಬ್ರಿಟಿಷರ ವಿರುದ್ಧ ಯುದ್ಧ ಮಾಡಿ ಗೆದ್ದ ಪ್ರಥಮ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ ಇಂದಿಗೂ ಮಹಿಳೆಯರಿಗೆ ಆದರ್ಶ ಪ್ರಾಯವಾಗಿದ್ದಾರೆ ಎಂದು ಹನುಗೋಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಬಿ.ಕೆ ಪ್ರಕಾಶ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತಿಹಾಸ ವಿಭಾಗದಿಂದ ನಡೆದ ವಿಶೇಷ ಉಪನ್ಯಾಸನ ಕಾರ್ಯಕ್ರಮದಲ್ಲಿ “ಕರ್ನಾಟಕ ಸ್ವಾತಂತ್ರ್ಯ ಹೋರಾಟದ ಮೈಲುಗಳು” ಎಂಬ ವಿಷಯದ ಕುರಿತು ಮಾತನಾಡಿದ ಅವರು, ಕಿತ್ತೂರಿನ ಚಿಕ್ಕ ಸಂಸ್ಥಾನದಲ್ಲಿ ರಾಜ್ಯಭಾರ ಮಾಡುತ್ತಿದ್ದ ರಾಣಿ ಚೆನ್ನಮ್ಮ, ಬ್ರಿಟೀಷರು ತಮ್ಮ ಸ್ವಾತಂತ್ರ್ಯ ಸಂಸ್ಥಾನ ಹಾಗೂ ಬೊಕ್ಕಸದ ಮೇಲೆ ಕಣ್ಣು ಹಾಕಿದ್ದನ್ನು ಕಂಡು ಪ್ರತಿ ಉತ್ತರ ಕೊಟ್ಟ ದಿಟ್ಟ ಮಹಿಳೆ ಇಂದಿಗೂ ನಮಗೆಲ್ಲ ಆದರ್ಶರಾಗಿದ್ದಾರೆ. ಚೆನ್ನಮ್ಮನವರ ದೃಢ ನಿರ್ಧಾರ, ಹೋರಾಟದ ಮನೋಭಾವ ಎಲ್ಲರಿಗೂ ತಿಳಿಸುವ ಸಲುವಾಗಿ ಪ್ರತಿ ವರ್ಷ ರಾಜ್ಯ ಸರ್ಕಾರ ಅಕ್ಟೋಬರ್ ತಿಂಗಳಿನಲ್ಲಿ ಕಿತ್ತೂರು ಉತ್ಸವ ನಡೆಸಿಕೊಂಡು ಬರುತ್ತಿದೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ…






