ಲೇಖಕ: admin

ಮಡಿಕೇರಿ ಜೂ.13 NEWS DESK : ಸೋಮವಾರಪೇಟೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ವತಿಯಿಂದ ಬಳಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಬಳಗುಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೆಚ್.ಆರ್.ಮೋಹನ ಮಾತನಾಡಿ, ಸಾರ್ವಜನಿಕರು ಮನೆಯಿಂದ ಕಸ ನೀಡುವ ಸಂದರ್ಭ ಒಣ ಕಸ ಹಾಗೂ ಹಸಿ ಕಸ ವಿಂಗಡಿಸಿ ನೀಡಬೇಕು. ಅತಿಯಾದ ಪ್ಲಾಸ್ಟಿಕ್ ಹಾಗೂ  ರಾಸಾಯನಿಕ ವಸ್ತುಗಳನ್ನು ಬಳಸದಂತೆ ಮಕ್ಕಳಿಗೆ ಸಲಹೆ ನೀಡಿದರು. ಪ್ರತಿಯೊಬ್ಬರು ಗಿಡನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದರು. ಕಾರ್ಯಕ್ರಮದಲ್ಲಿ ಸೋಮವಾರಪೇಟೆ ಆರಕ್ಷಕ ಠಾಣೆಯ ಆರಕ್ಷಕ ಶಶಿಕುಮಾರ್, ಶಾಲೆಯ ಮುಖ್ಯೋಪಾಧ್ಯಾಯರಾದ ಭಾಗ್ಯ, ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ರಶಿದ್, ಆಶಾ ಕಾರ್ಯಕರ್ತರಾದ ಬಿ.ಆರ್.ಶಾರದ, ಶಾಂತಳ್ಳಿ ವಲಯದ ಮೇಲ್ವಿಚಾರಕ ಲಕ್ಷ್ಮಣ್, ಕೃಷಿ ಮೇಲ್ವಿಚಾರಕರಾದ ರಾಜಣ್ಣ, ಸೇವಾ ಪ್ರತಿನಿಧಿ ಸುನಿತಾ, ಶಾಲಾ ಸಹ ಶಿಕ್ಷಕರು, ಗ್ರಾ.ಪಂ  ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.    

Read More

ಸುಂಟಿಕೊಪ್ಪ ಜೂ.13 NEWS DESK : ಸುಂಟಿಕೊಪ್ಪ ಪೊಲೀಸ್ ಠಾಣೆಯ ಠಾಣಾಧಿಕಾರಿ ಎಂ.ಸಿ.ಶ್ರೀಧರ್ ಅವರು ರಸ್ತೆ ಸುರಕ್ಷತಾ ನಿಯಮಗಳು ಮತ್ತು ಪಾಲನೆಯ ಬಗ್ಗೆ ಸುಂಟಿಕೊಪ್ಪ ವ್ಯಾಪ್ತಿಯ ಶಾಲಾ ಕಾಲೇಜು ಮಕ್ಕಳಲ್ಲಿ ಜಾಗೃತಿ ಮೂಡಿಸಿದರು. ಸಂತ ಮೇರಿ ಶಾಲಾ ವಾಹನದಲ್ಲಿ ಹಾಗೂ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ತೆರಳಿ ರಸ್ತೆ ಸುರಕ್ಷತಾ ನಿಯಮಗಳು, ಅವುಗಳನ್ನು ಪಾಲಿಸುವ ಬಗ್ಗೆ ಮತ್ತು ವೈಯಕ್ತಿಕ ಸುರಕ್ಷತೆಯ ಕಾನೂನು ನಿಯಮಗಳ ಕುರಿತು ಮಕ್ಕಳಲ್ಲಿ ಅರಿವು ಮೂಡಿಸಿದರು. ಕಾಲೇಜು ಪ್ರಾಂಶುಪಾಲರಾದ ಶ್ರೀಲತಾ ಹಾಗೂ ಉಪನ್ಯಾಸಕರು ಇದ್ದರು. ರಾಜ್ಯ ಹೆದ್ದಾರಿಯಲ್ಲಿ ಶಾಲಾ ವಾಹನ ಹಾಗೂ ದ್ವಿಚಕ್ರ ವಾಹನಗಳ ಸವಾರರಿಗೆ ರಸ್ತೆ ಸುರಕ್ಷತೆ ಕುರಿತು ವಿವರಿಸಿದ ಠಾಣಾಧಿಕಾರಿಗಳು ಮಕ್ಕಳನ್ನು ಶಾಲೆಗಳಿಗೆ ಕರೆದೊಯ್ಯುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಪೋಷಕರಿಗೆ ಕಿವಿಮಾತು ಹೇಳಿದರು.

Read More

ಸುಂಟಿಕೊಪ್ಪ ಜೂ.13 NEWS DESK : ಬಿದ್ದು ಸಿಕ್ಕಿದ ಹಣವನ್ನು ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಆಶಾ ಕಾರ್ಯಕರ್ತೆ ಹಾಗೂ ಬೆಳೆಗಾರರೊಬ್ಬರು ಪ್ರಾಮಾಣಿಕತೆ ಮೆರೆದಿದ್ದಾರೆ. ಸುಂಟಿಕೊಪ್ಪದ ಗಿರಿಯಪ್ಪ ಮನೆ ನಿವಾಸಿ ಯಂಕನ ಕೌಶಿಕ್ ಎಂಬುವವರಿಗೆ ಸೇರಿದ ರೂ.500 ಮುಖಬೆಲೆಯ ಒಟ್ಟು ರೂ.16 ಸಾವಿರ ಕಳೆದು ಹೋಗಿತ್ತು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ವೈರಲ್ ಆಗಿತ್ತು. ಸುಂಟಿಕೊಪ್ಪದ ವಿಎಸ್‍ಎಸ್‍ಎನ್ ಮುಂಭಾಗದಲ್ಲಿ ಆಶಾ ಕಾರ್ಯಕರ್ತೆ ವೀಣಾ ಹಾಗೂ ಬೆಳೆಗಾರ ಸತೀಶ್ ಎಂಬುವವರಿಗೆ ಹಣ ದೊರೆತ್ತಿತ್ತು. ಇವರಿಬ್ಬರು ಸುಂಟಿಕೊಪ್ಪ ಪೊಲೀಸ್ ಠಾಣೆಗೆ ಹಣವನ್ನು ತಲುಪಿಸಿದರು. ವಿಷಯ ತಿಳಿದ ಯಂಕನ ಕೌಶಿಕ್ ತಮ್ಮ ಹಣದ ಲೆಕ್ಕಾಚಾರ ಮತ್ತು ಸೂಕ್ತ ದಾಖಲೆಯನ್ನು ಠಾಣಾಧಿಕಾರಿ ಎಂ.ಸಿ.ಶ್ರೀಧರ್ ಅವರ ಮುಂದೆ ಹಾಜರುಪಡಿಸಿ ಹಣವನ್ನು ಮರಳಿ ಪಡೆದರು. ಪ್ರಮಾಣಿಕತೆ ಮೆರೆದು ಮಾದರಿಯಾದ ವೀಣಾ ಹಾಗೂ ಸತೀಶ್ ಅವರಿಗೆ ಕೌಶಿಕ್ ಕೃತಜ್ಞತೆ ಸಲ್ಲಿಸಿದರು.

Read More

ಮಡಿಕೇರಿ ಜೂ.13 NEWS DESK : ಇತ್ತೀಚೆಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ನೇತೃತ್ವದ ಎನ್‍ಡಿಎ ಸರಕಾರ ಸಚಿವ ಸಂಪುಟದಲ್ಲಿ ಪರಿಶಿಷ್ಟರಿಗೆ ಸೂಕ್ತ ಸ್ಥಾನ ನೀಡದೆ ಕಡೆಗಣಿಸಿದೆ ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕರ್ನಾಟಕ ರಾಜ್ಯದಲ್ಲಿ 17 ಬಿಜೆಪಿ ಮತ್ತು ಇಬ್ಬರು ಜೆಡಿಎಸ್ ಸೇರಿ 19 ಮಂದಿ ಎನ್‍ಡಿಎ ಮೈತ್ರಿ ಕೂಟದ ಸಂಸದರಿದ್ದಾರೆ. ಇವರಲ್ಲಿ ಐವರು ಪ್ರಬಲ ಸಮುದಾಯದವರಿಗೆ ಮಾತ್ರ ಸಚಿವ ಸಂಪುಟದಲ್ಲಿ ಸ್ಥಾನ ನೀಡಿ ಪರಿಶಿಷ್ಟರನ್ನು ನಿರ್ಲಕ್ಷಿಸಲಾಗಿದೆ ಎಂದು ಟೀಕಿಸಿದ್ದಾರೆ. ಬಿಜೆಪಿ ಕೇವಲ ಮತ ಬ್ಯಾಂಕ್ ರಾಜಕಾರಣದಲ್ಲಿ ತೊಡಗಿದೆ, ಭಾವನಾತ್ಮಕ ವಿಚಾರಗಳ ಮೂಲಕ ಪರಿಶಿಷ್ಟರ ಮತಗಳನ್ನು ಕೂಡ ತನ್ನೆಡೆಗೆ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಪರಿಶಿಷ್ಟರು ಬೆಂಬಲಿಸಿದ ಕಾರಣದಿಂದಾಗಿ ರಾಜ್ಯದಲ್ಲಿ ಬಿಜೆಪಿ 17 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿದೆ. ಮತ ಗಳಿಕೆಗೆ ಮಾತ್ರ ಪರಿಶಿಷ್ಟರನ್ನು ಬಳಸಿಕೊಂಡು ಅಧಿಕಾರಕ್ಕೆ ಬಂದ ನಂತರ ಉನ್ನತ ಸ್ಥಾನಮಾನವನ್ನು ನೀಡದೆ ಕಡೆಗಣಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಇತ್ತೀಚಿನ…

Read More

ವಿರಾಜಪೇಟೆ ಜೂ.13 NEWS DESK : ವಿರಾಜಪೇಟೆಯ ಕೊಡಗು ಬಾಲವಲೀಕಾರ್ ಉತ್ತಮ ಜೀವನ ಸಹಕಾರ ಸಂಘಕ್ಕೆ ಅಪೆಕ್ಸ್ ಬ್ಯಾಂಕ್ 1.50 ಲಕ್ಷ ರೂ. ಅನುದಾನ ನೀಡಿದೆ. ಈ ಕುರಿತು ಮಾಹಿತಿ ನೀಡಿದ ಸಂಘದ ಅಧ್ಯಕ್ಷ ಬಿ.ಜಿ.ನಟರಾಜ್ ಬೋರ್ಕರ್ ಅವರು, ಕೊಡಗು ಡಿಸಿಸಿ ಬ್ಯಾಂಕ್ ನ ಅಧ್ಯಕ್ಷ ಕೊಡಂದೇರ ಪಿ.ಬಾಂಡ್ ಗಣಪತಿ ಅವರ ಸಹಕಾರದಿಂದ ಈ ಅನುದಾನ ಸಂಘಕ್ಕೆ ದೊರೆತ್ತಿದ್ದು, ಆಡಳಿತ ಮಂಡಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು. ದೊರೆತ ಅನುದಾನವನ್ನು ಸಂಘದ ಅಭಿವೃದ್ಧಿ ಕಾರ್ಯಗಳಿಗೆ ಬಳಸಲಾಗುವುದು ಎಂದರು. ಈ ಸಂದರ್ಭ ಸಂಘದ ಉಪಾಧ್ಯಕ್ಷರಾದ ಸ್ವಾತಿ ಬಿ.ಪಿ, ಕಾರ್ಯದರ್ಶಿ ಉದಯಶಂಕರ್ ಬಿ.ಆರ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Read More

ಮಡಿಕೇರಿ ಜೂ.13 NEWS DESK :  ಜೀವನದ ಮೊದಲ ನಾಯಕ ಅಪ್ಪ, ಅಪ್ಪ ಎಂದರೇ ಜೀವನದ ಉದಕ್ಕೂ ಮುಗಿಯದ ಅನುಬಂಧ. ತನ್ನ ಕಷ್ಟಗಳನ್ನು ಯಾರೊಂದಿಗೂ ಹಂಚಿಕೊಳ್ಳದೆ ತನ್ನ ಮಕ್ಕಳ ಶ್ರೇಯೋಭಿವೃದ್ಧಿ ಶ್ರಮಿಸುವ ಒಂದೇ ಒಂದು ಜೀವ ಅದು ಅಪ್ಪ. ಅಪ್ಪ ಎಂಬ ಪದದ ವ್ಯಕ್ತಿ ಯಾರು? ಮಕ್ಕಳ ಬದುಕಿನಲ್ಲಿ ಅಪ್ಪ ಎಂಬ ವ್ಯಕ್ತಿಯ ಪಾತ್ರವೇನ್ನೂ ಎಂಬುದನ್ನು ನಾವು ನೆನಪಿಸಿಕೊಳ್ಳಬೇಕಾದ ದಿನ ಅಪ್ಪಂದಿರ ದಿನ. ಭೂಮಿಗಿಳಿದ ಮಗುವಿನ ಸಕಲ ಜವಾಬ್ದಾರಿಗಳನ್ನು ಹೊರುವ ತಂದೆ. ಇನ್ನೊಂದು ತಾಯಿಯ ಮಮತೆಯ ಮಡಿಲು ಇವು ಜನಿಸಿದ ಮಗುವಿನ ಮೊದಲ ದೇವಲೋಕ, ಏನು ಅರೀವಿಲ್ಲದ ಜೀವನಕ್ಕೆ ತಂದೆ ತಾಯಿಯ ಬೆಲೆ ಹಾಗೂ ಆ ಪದದ ಅರ್ಥ ಗೊತ್ತಾಗುವುದೇ ಅವುಗಳನೂ ಕಳೆದು ಕೊಂಡಾಗ ಮಾತ್ರ ಎನ್ನಬಹುದು. ಪ್ರತಿ ವರ್ಷ ಜೂನ್ 3ನೇ ಭಾನುವಾರದಂದು ಅಪ್ಪಂದಿರಿಗೆ ಗೌರವ ಕೊಡುವ ಸಲುವಾಗಿ ಅಂತರರಾಷ್ಟ್ರೀಯ ಅಪ್ಪಂದಿರ ದಿನವನ್ನು ಆಚರಣೆ ಮಾಡಲಾಗುತ್ತಿದೆ. ಭಾರತ ಅಮೇರಿಕ ಸೇರಿದಂತೆ ಪ್ರಪಂಚದ 100ಕ್ಕೂ ಅಧಿಕ ದೇಶದಲ್ಲಿ ಈ ದಿನವನ್ನು ಅಪ್ಪಂದಿರ…

Read More

ಸೋಮವಾರಪೇಟೆ ಜೂ.12 NEWS DESK : ಸೋಮವಾರಪೇಟೆ ತಾಲ್ಲೂಕು ಜಾನಪದ ಪರಿಷತ್ ಹಾಗು ಒಕ್ಕಲಿಗರ ಯುವ ವೇದಿಕೆ ಆಶ್ರಯದಲ್ಲಿ ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಉಚಿತ ರಕ್ತದಾನ ಶಿಬಿರದಲ್ಲಿ, ಜಿಲ್ಲಾ ರಕ್ತ ನಿಧಿ ಘಟಕದ ಅಧಿಕಾರಿ ಡಾ.ಕರುಂಬಯ್ಯ ಹಾಗೂ ಸೋಮವಾರಪೇಟೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಪ್ರಯೋಗಶಾಲೆಯ ಸಿಬ್ಬಂದಿ ತಸ್ಮಿಯಾ ಬಾನು ಅವರುಗಳನ್ನು ಸನ್ಮಾನಿಸಲಾಯಿತು. ಜಾನಪದ ಪರಿಷತ್ ಅಧ್ಯಕ್ಷ ಕೆ.ಎ. ಪ್ರಕಾಶ್, ಒಕ್ಕಲಿಗರ ಯುವ ವೇದಿಕೆ ಅಧ್ಯಕ್ಷ ಚಕ್ರವರ್ತಿ ಸುರೇಶ್, ಸ್ಥಾಪಕಾಧ್ಯಕ್ಷ ಬಿ.ಜೆ. ದೀಪಕ್, ಆಸ್ಪತ್ರೆಯ ಆಡಳಿತಾಧಿಕಾರಿ ಮೀನಾಕ್ಷಿ ಇದ್ದರು.

Read More

ಸೋಮವಾರಪೇಟೆ ಜೂ.12 NEWS DESK : ಸೋಮವಾರಪೇಟೆ ತಾಲ್ಲೂಕು ಮೊಗೇರ ಸೇವಾ ಸಮಾಜದ ವತಿಯಿಂದ ಪಟ್ಟಣದ ಪತ್ರಿಕಾ ಭವನದಲ್ಲಿ ಈಚೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಸಮುದಾಯದ ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮೊಗೇರ ಸೇವಾ ಸಮಿತಿಯ ರಾಜ್ಯ ಸಮಿತಿ ಸದಸ್ಯ ಪಿ.ಕೆ.ಚಂದ್ರು ಮಾತನಾಡಿ, ಮೊಗೇರ ಸಮಾಜದ ಮಕ್ಕಳು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು. ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನ ಹರಿಸಬೇಕೆಂದು ಕರೆ ನೀಡಿದರು. ಸಂಘಟನೆಯ ಜಿಲ್ಲಾಧ್ಯಕ್ಷ ಜನಾರ್ಧನ್ ಮಾತನಾಡಿ, ಮೊಗೇರ ಸಮಾಜದ ವತಿಯಿಂದ ಸಮುದಾಯದ ಅಭಿವೃದ್ಧಿಗೆ ಹಲವಷ್ಟು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಸಮುದಾಯದವರು ಸಂಘಟನೆಯಾದಲ್ಲಿ ಮಾತ್ರ ಎಲ್ಲಾ ರೀತಿಯ ಸವಲತ್ತು ಪಡೆಯಲು ಸಾಧ್ಯ. ಈ ನಿಟ್ಟಿನಲ್ಲಿ ಸಂಘವನ್ನು ಇನ್ನಷ್ಟು ಬಲಪಡಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷ ಬಿ.ಎಂ. ದಾಮೋಧರ್, ಕಾರ್ಯದರ್ಶಿ ಹರೀಶ್, ತಾಲೂಕು ಅಧ್ಯಕ್ಷ ವಸಂತ್, ಕಾರ್ಯದರ್ಶಿ ಕೆ.ಕೆ. ಗಣೇಶ್, ಉಪಾಧ್ಯಕ್ಷ ಹರೀಶ್, ಖಜಾಂಚಿ ಜಯಪ್ರಕಾಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Read More

ಮಡಿಕೇರಿ ಜೂ.12 NEWS DESK : ಸೋಮವಾರಪೇಟೆ ಬಸವೇಶ್ವರ ರಸ್ತೆಯ ನಿವಾಸಿಗಳಾದ ಶಾರದ ಮತ್ತು ಎ.ಪಿ.ಶಂಕರಪ್ಪ ಅವರು 3.50 ಲಕ್ಷ ರೂ. ವೆಚ್ಚದಲ್ಲಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ನಿರ್ಮಿಸಿಕೊಟ್ಟ ಹಿನ್ನೆಲೆಯಲ್ಲಿ, ಶ್ರೀಗಂಧ ಹಾಲ್‌ನಲ್ಲಿ ನಡೆದ ಲಯನ್ಸ್ ಕಾರ್ಯಕ್ರಮದಲ್ಲಿ ಇಬ್ಬರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಜಿಲ್ಲಾ ಗವರ್ನರ್ ಡಾ. ಮೆಲ್ವಿನ್ ಡಿಸೋಜಾ, ಲಯನ್ಸ್ ಅಧ್ಯಕ್ಷ ಎ.ಎಸ್.ಮಹೇಶ್, ಪದಾಧಿಕಾರಿಗಳಾದ ಕೆ.ಡಿ.ವೀರಪ್ಪ, ರೋಹಿತ್, ಕೆ.ಎಂ. ಜಗದೀಶ್, ಲಿಯೋ ಜಿಲ್ಲಾಧ್ಯಕ್ಷೆ ರಂಜಿತಾ ಶೆಟ್ಟಿ, ಅಧ್ಯಕ್ಷೆ ಪ್ರತೀಕ್ಷ ಇದ್ದರು.

Read More

ಸೋಮವಾರಪೇಟೆ ಜೂ.12 NEWS DESK : ಜಿಲ್ಲಾ ಲೋಕಾಯುಕ್ತ ವತಿಯಿಂದ ಸಾರ್ವಜನಿಕರ ಕೊಂದುಕೊರತೆ ಸಭೆ ಹಾಗೂ ಅಹವಾಲು ಸ್ವೀಕಾರ ಸಭೆ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆಯಿತು. ಲೋಕಾಯುಕ್ತ ಡಿವೈಎಸ್‌ಪಿ ಪವನ್‌ಕುಮಾರ್ ಸಾರ್ವಜನಿಕರ ಸಮಸ್ಯೆ ಆಲಿಸಿದರು. ಕೃಷಿ ಜಮೀನಿಗೆ ತೆರಳಲು ಸೂಕ್ತ ರಸ್ತೆಯಿಲ್ಲ. ಒತ್ತುವರಿ ತೆಗೆಸುವಂತೆ ಕಂದಾಯ ಇಲಾಖೆಗೆ 2020ರಲ್ಲಿ ದೂರು ನೀಡಿದ್ದೇನೆ. ರಸ್ತೆಗೆ ಬೇಲಿ ಹಾಕಿಕೊಂಡಿರುವವರಿಂದ ಜೀವಬೆದರಿಕೆ ಇದೆ. ಪೊಲೀಸ್ ಠಾಣೆಗೆ ದೂರು ನೀಡಿದರೂ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ತಲ್ತಾರೆಶೆಟ್ಟಳ್ಳಿ ಗ್ರಾಮದ ಕೆ.ಡಿ.ಗುರುಪ್ಪ ಸಮಸ್ಯೆ ಹೇಳಿಕೊಂಡರು. ದೂರು ನೀಡಿದಾಗ ಪೊಲೀಸ್ ಇಲಾಖೆ ಎರಡು ಕಡೆಯವರನ್ನು ಕರೆಸಿ ಚರ್ಚಿಸಿ ಸಮಸ್ಯೆಯನ್ನು ಇತ್ಯರ್ಥ ಪಡಿಸಬೇಕು. ಒಂದು ಕಡೆಯಿಂದ ಕರೆದು ಚರ್ಚಿಸಿದರೆ ಯಾವುದೇ ಪ್ರಯೋಜನವಿಲ್ಲ. ಕೂಡಲೇ ಇಬ್ಬರನ್ನು ಕರೆದು ಸಮಸ್ಯೆ ಪರಿಹರಿಸುವಂತೆ ಠಾಣಾಧಿಕಾರಿ ರಮೇಶ್ ಅವರಿಗೆ ಸೂಚಿಸಿದರು. ಕಂದಾಯ ಇಲಾಖಾಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ, ಪೈಸಾರಿ ಜಾಗವಾದಲ್ಲಿ ಕೂಡಲೇ ಬಿಡಿಸಿಕೊಡುವ ಕೆಲಸ ಮಾಡಬೇಕು ಎಂದು ಡಿವೈಎಸ್‌ಸಿ ಸೂಚಿಸಿದರು. ಕೊಡ್ಲಿಪೇಟೆ ಹೇಮಾವತಿ ಹಿನ್ನೀರಿನಲ್ಲಿ ಇಟ್ಟಿಗೆ…

Read More