ಲೇಖಕ: admin

ಕುಶಾಲನಗರ ಜೂ.12 NEWS DESK : ಕುಶಾಲನಗರ ಹಾಗೂ ಹಾರಂಗಿ ರಸ್ತೆಯಲ್ಲಿ ವಾಹನಗಳ ವೇಗ ನಿಯಂತ್ರಣಕ್ಕಾಗಿ ಹಂಪ್ ಅಳವಡಿಸುವಂತೆ ಆಗ್ರಹಿಸಿ ಕೂಡುಮಂಗಳೂರು ಗ್ರಾ.ಪಂ ಸದಸ್ಯ ಕೆ.ಬಿ.ಶಂಶುದ್ಧೀನ್  ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಕುಶಾಲನಗರ ತಾಲ್ಲೂಕು ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಅವರು ಕುಶಾಲನಗರ ಹಾರಂಗಿ ರಸ್ತೆಯಲ್ಲಿ ವಿಪರೀತವಾಗಿ ಅಪಘಾತಗಳು ಸಂಭವಿಸುತ್ತಿವೆ.‌ ಮೂಕಾಂಬಿಕ ಕಾಲೇಜು, ಸುಂದರನಗರ ಪ್ರಥಮ ದರ್ಜೆ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಹಾಗೂ ಕಾರ್ಮಿಕರು ರಸ್ತೆಯಲ್ಲಿ ನಡೆದಾಡುತ್ತಾರೆ. ವಾಹನಗಳ ಅತಿವೇಗದಿಂದ ಸಾರ್ವಜನಿಕರು ರಸ್ತೆಯಲ್ಲಿ ಭಯದಿಂದ ಸಂಚರಿಸುವಂತಾಗಿದೆ. ಕುಶಾಲನಗರ ಹಾರಂಗಿ ರಸ್ತೆಯು ಹೊಸದಾಗಿ ಡಾಂಬರೀಕರಣ ಹಾಗೂ ರಸ್ತೆ ಅಗಲೀಕರಣವಾಗಿರುವುದರಿಂದ ವಾಹನಗಳು ಅತಿವೇಗವಾಗಿ ಸಂಚರಿಸುತ್ತಿರುತ್ತವೆ. ಹದಿನೈದು ದಿನಗಳ ಹಿಂದೆ 22 ವರ್ಷದ ಯುವಕ‌ ಅಪಘಾತದಿಂದ ಸಾವನ್ನಪ್ಪಿದ್ದಾನೆ. ರಸ್ತೆಹುಬ್ಬು ಇಲ್ಲದ ಕಾರಣ ವಾಹನಗಳ ಅತಿವೇಗ ಹಾಗೂ ಅಜಾಗರೂಕತೆಯಿಂದ ರಸ್ತೆಯಲ್ಲಿ ಆಗಾಗ ಅಪಘಾತಗಳು ಸಂಭವಿಸುತ್ತಿವೆ. ಸಂಬಂಧಪಟ್ಟ ಪೊಲೀಸ್ ಇಲಾಖೆಗೆ ಪಂಚಾಯಿತಿಯಿಂದ ಪತ್ರ ವ್ಯವಹಾರ ನಡೆಸಲಾಗಿದ್ದು, ಯಾವುದೇ ಕ್ರಮ‌ಕೈಗೊಂಡಿರುವುದಿಲ್ಲ ಎಂದು ಆರೋಪಿಸಿದರು. ಆದ್ದರಿಂದ ಇದನ್ನು ಗಂಭೀರವಾಗಿ ಪರಿಗಣಿಸಿ, ಕುಶಾಲನಗರ…

Read More

ಮಡಿಕೇರಿ ಜೂ.12 NEWS DESK : ಸಮರ್ಥ ಕನ್ನಡಿಗರು ಸಂಸ್ಥಯ ಕೊಡಗು ಜಿಲ್ಲಾ ಘಟಕದ ವತಿಯಿಂದ ನಿಮ್ಮ ಪ್ರತಿಭೆ ನಮ್ಮ ಪ್ರೋತ್ಸಾಹ ಕಾಯ೯ಕ್ರಮ ಆಯೋಜಿಲಾಗಿದ್ದು, ಮಕ್ಕಳಿಗೆ ವೈಯಕ್ತಿಕ ನೃತ್ಯ ಹಾಗೂ ಕಥೆ ಹೇಳುವ ಆನ್ ಲೈನ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಸಂಘಟನೆಯ ಜಿಲ್ಲಾ ಸಂಚಾಲಕಿ ಕೆ.ಜಯಲಕ್ಷ್ಮಿ ತಿಳಿಸಿದ್ದಾರೆ. ಸ್ಪಧೆ೯ಯ ವಿವರ ಇಂತಿದೆ : ಕಥೆ ಹೇಳುವ ಸ್ಪರ್ಧೆ :  ನಿಯಮಗಳು : ವೈಯಕ್ತಿಕ ಸ್ಪರ್ಧೆಯಾಗಿದ್ದು, 3 ವರ್ಷದಿಂದ 6 ವರ್ಷದ ಒಳಗಿನ ಮಕ್ಕಳು ಮಾತ್ರ ಭಾಗವಹಿಸಬೇಕು, ಮೂರು ನಿಮಿಷ ಅವಧಿಯಲ್ಲಿ ಕಥೆಯ ನೀತಿಯನ್ನು ಹೇಳಬೇಕು., ಕಥೆ ಕನ್ನಡದಲ್ಲಿಯೇ ಇರಬೇಕು. ನೃತ್ಯ ಸ್ಪರ್ಧೆ :  7 ವರ್ಷದಿಂದ 12 ವರ್ಷದ ಒಳಗಿನ ಮಕ್ಕಳು ಭಾಗವಹಿಸಬಹುದು. ಕನ್ನಡ ಭಕ್ತಿಗೀತೆಗಳಿಗೆ 3 ನಿಮಿಷದ ಅವಧಿಯೊಳಗೆ ನೃತ್ಯ ಮಾಡಬೇಕು. ಭರತನಾಟ್ಯ ಸ್ಪರ್ಧೆ :  ಚಲನಚಿತ್ರದ ಗೀತೆಗೆ ಭರತನಾಟ್ಯ ಮಾಡುವಂತಿಲ್ಲ, ಭರತನಾಟ್ಯ ದ ಉಡುಗೆ – ತೊಡುಗೆ ಕಡ್ಡಾಯ., 3 ನಿಮಿಷದ ಅವಧಿ, 12 ವರ್ಷದಿಂದ 18 ವರ್ಷದ…

Read More

ಮಡಿಕೇರಿ, ಜೂ.12 NEWS DESK : ರೋಟರಿ ಮಿಸ್ಟಿಹಿಲ್ಸ್ ವತಿಯಿಂದ ಫೀ.ಮಾ.ಕಾರ್ಯಪ್ಪ ಕಾಲೇಜಿಗೆ ಅವಶ್ಯವಿದ್ದ ಶೌಚಾಲಯವನ್ನ ನಿರ್ಮಿಸಿ ಕೊಡಲಾಗಿದೆ. ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪಿ.ಎಲ್.ಧರ್ಮ, ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ, ಮಿಸ್ಟಿಹಿಲ್ಸ್ ಅಧ್ಯಕ್ಷ ಪ್ರಮೋದ್ ರೈ, ಪ್ರಾಂಶುಪಾಲ ಡಾ. ಸಿ.ಬಿ.ರಾಮಚಂದ್ರ, ಕೊಟ್ಟುಕತ್ತಿರ ಯಶೋಧ ಪ್ರಕಾಶ್, ಕುಲಸಚಿವ ಡಾ.ಸೀನಪ್ಪ ಶೌಚಾಲಯ ಕಟ್ಟಡ ಉದ್ಘಾಟಿಸಿದರು. ಪ್ರಾಂಶುಪಾಲ ಮೇ. ಡಾ.ರಾಘವ ಮಾತನಾಡಿ, ಮಿಸ್ಟಿಹಿಲ್ಸ್ ಕಾಲೇಜಿನ ಏಳಿಗೆಗೆ ಕೈ ಜೋಡಿಸುತ್ತಿರುವುದಾಗಿ ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರಮೋದ್ ರೈ ಮಾತನಾಡಿ ಶೌಚಾಲಯವನ್ನು ರೋಟರಿ ಜಿಲ್ಲಾ ಗ್ರಾಂಟ್‍ನಿಂದ ಸುಮಾರು ರೂ. 1.81 ಲಕ್ಷ ವೆಚ್ಚದಲ್ಲಿ ನಿರ್ಮಿಸಿದುದಾಗಿ ಹೇಳಿದರು. ಸ್ಥಾಪಕ ಅಧ್ಯಕ್ಷ ಬಿ.ಜಿ.ಅನಂತ ಶಯನ ಮಾತನಾಡಿ ಸಂಸ್ಥೆಯು ಎರಡು ದಶಕಗಳಿಂದ ಕಾಲೇಜಿನೊಂದಿಗೆ ಯೋಜನೆಗಳನ್ನು, ಕಾರ್ಯಕ್ರಮಗಳನ್ನು ನಡೆಸುತ್ತಿರುವುದಾಗಿ ವಿವರಿಸಿದರು. ಸ್ಥಳದಲ್ಲಿ ರೋಟರಿ ಉಪರಾಜ್ಯಪಾಲ ಡಿ.ಎಂ.ತಿಲಕ್, ಮಾಜಿ ಎ.ಜಿ.ರವೀಂದ್ರ ರೈ, ನಾಮಾಂಕಿತ ಅಧ್ಯಕ್ಷ ಮಧುಸೂದನ್ ಹಾಗೂ ಸದಸ್ಯರು ಹಾಜರಿದ್ದರು.

Read More

ವಿರಾಜಪೇಟೆ ಜೂ.12 NEWS DESK : ಮಂಗಳೂರು ವಿಶ್ವವಿದ್ಯಾಲದ ಬಿ.ಎಸ್ಸಿ ಪದವಿ ಪರೀಕ್ಷೆಯಲ್ಲಿ ಶೇ.97 ರಷ್ಟು ಅಂಕಗಳನ್ನು ಪಡೆದು ವಿಶ್ವವಿದ್ಯಾಲಯ ಮಟ್ಟದಲ್ಲಿ ಆರನೇ ರ‍್ಯಾಂಕ್ ಪಡೆದ ಸೆಂಟ್ ಆನ್ಸ್ ಪದವಿ ಕಾಲೇಜಿನ ವಿದ್ಯಾರ್ಥಿನಿ ವಿನಿಷಾರನ್ನು ಕಾಲೇಜಿನ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭ ಪದವಿ ಕಾಲೇಜಿನ ವ್ಯವಸ್ಥಾಪಕ ಮತ್ತು ಪಿಯು ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಮದಲೈ ಮುತ್ತು, ಸಂತ ಅನ್ನಮ್ಮ ದೇವಾಲಯದ ಪ್ರಧಾನ ಧರ್ಮಗುರುಗಳು ಮತ್ತು ವಿದ್ಯಾಸಂಸ್ಥೆಯ ವ್ಯವಸ್ಥಾಪಕ ರೆ.ಫಾ.ಜೇಮ್ಸ್ ಡೊಮಿನಿಕ್, ಪದವಿ ಕಾಲೇಜು ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಐಕ್ಯೂಎಸಿ ಸಂಚಾಲಕಿ ಹೇಮ ಮತ್ತು ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು.

Read More

ಕುಶಾಲನಗರ ಜೂ.12 NEWS DESK : ಎಸ್‍.ಕೆ.ಎಸ್‍.ಎಸ್‍.ಎಫ್ ಕೊಡಗು ಜಿಲ್ಲಾ ಸಮಿತಿಯ ವತಿಯಿಂದBRUSH UP – 2K24  ಜಿಲ್ಲಾ ಸಮಿತಿ ಹಾಗೂ ಉಪಸಮಿತಿಗಳ ನಾಯಕರಿಗೆ ತರಬೇತಿ ಕಾರ್ಯಕ್ರಮ ನಡೆಯಿತು. ಕುಶಾಲನಗರದ ಬಿಜಿಟಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಎಸ್‍.ಕೆ.ಎಸ್‍.ಎಸ್‍.ಎಫ್ ರಾಜ್ಯ ಸಮಿತಿ ಉಪಾಧ್ಯಕ್ಷ  ತಮ್ಲೀಕ್ ದಾರಿಮಿ ಉದ್ಘಾಟಿಸಿದರು. ಪ್ರಸ್ತುತ ಸಾಲಿನಲ್ಲಿ ಎಸ್‍.ಕೆ.ಎಸ್‍.ಎಸ್‍.ಎಫ್ ಶಾಖಾ ಸಮಿತಿಯು ರೋಗಿಗಳಿಗೆ ಸಂಗ್ರಹಿಸುವ ಸಹಾಯ ಧನದಲ್ಲಿ ಜಿಲ್ಲೆಯಲ್ಲಿಯೇ ಅತ್ಯಧಿಕ ಮೊತ್ತವನ್ನು ಸಂಗ್ರಹಿಸಿದ ಸಿದ್ದಾಪುರ, ನೆಲ್ಲಿಹುದಿಕೇರಿ ಹಾಗೂ ಕೊಡ್ಲಿಪೇಟೆ ಶಾಖೆಗಳಿಗೆ ಕಾರ್ಯಕ್ರಮದಲ್ಲಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಮಾಧ್ಯಮ ವಿಭಾಗದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಉನೈಸ್ ಹುಂಡಿ, ಫರ್ಹಾನ್ ನೆಲ್ಲಿಹುದಿಕೇರಿ ಹಾಗೂ ಸಿದ್ದೀಕ್ ಶನಿವಾರಸಂತೆ ಅವರನ್ನು ಅಭಿನಂದಿಸಲಾಯಿತು. ಎಸ್‍.ಕೆ.ಎಸ್‍.ಎಸ್‍.ಎಫ್  ಜಿಲ್ಲಾಧ್ಯಕ್ಷ ಶುಹೈಬ್ ಫೈಝಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್‍.ಕೆ.ಎಸ್‍.ಎಸ್‍.ಎಫ್ ರಾಜ್ಯ ಉಪಾಧ್ಯಕ್ಷರಾದ ಇಕ್ಬಾಲ್ ಬಾಳಿಲ, ಪ್ರಮುಖರಾದ  ಹಂಸ ಹಾಜಿ, ಅಬ್ದುಲ್ ಮಜೀದ್, ಅಬ್ದುಲ್ಲಾ ಫ್ಲೈ ಕೂರ್ಗ್ ಹಾಗೂ ಜಿಲ್ಲಾ ಸಮಿತಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಉಪಸಮಿತಿಗಳ ನಾಯಕರುಗಳು ಮತ್ತು ಸದಸ್ಯರುಗಳು ಭಾಗವಹಿಸಿದ್ದರು. ಜಿಲ್ಲಾ ಪ್ರಧಾನ…

Read More

ಮಡಿಕೇರಿ ಜೂ.12 NEWS DESK : ಕೊಡಗಿನ ಸೈನಿಕ ಶಾಲೆಯಲ್ಲಿ ಎನ್‍ಸಿಸಿ ಶಿಬಿರ ನಡೆಯುತ್ತಿದ್ದು, ಶಿಬಿರಾರ್ಥಿಗಳು ಹಾರಂಗಿ ಜಲಾಶಯದ ಆವರಣದಲ್ಲಿ ಸ್ವಚ್ಛತಾ ಶ್ರಮದಾನ ನಡೆಸಿದರು. ಶಿಬಿರಾರ್ಥಿಗಳು ಜಲಾಶಯದ ಆವರಣ ಸುತ್ತ ಬಿದ್ದಿರುವ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸ್ವಚ್ಛಗೊಳಿಸಿದರು. ಅಭಿಯಾನದಲ್ಲಿ ಸುಮಾರು 168 ಎನ್‍ಸಿಸಿ ಶಿಬಿರಾರ್ಥಿಗಳು, ನಾಲ್ಕು ಎನ್‌ಸಿಸಿ ಅಧಿಕಾರಿಗಳು ಹಾಗೂ ಸೈನಿಕ ಶಾಲೆ ಕೊಡಗಿನ ಸಿಬ್ಬಂದಿ ವರ್ಗದವರು ಹಾಜರಿದ್ದರು.

Read More

ನವದೆಹಲಿ ಜೂ.11 NEWS DESK : ಕೇಂದ್ರ ಸರಕಾರದ ಬೃಹತ್ ಕೈಗಾರಿಕೆ ಖಾತೆಯ ಸಚಿವರಾಗಿ ಹೆಚ್.ಡಿ.ಕುಮಾರಸ್ವಾಮಿ ಅವರು ಅಧಿಕಾರ ವಹಿಸಿಕೊಂಡರು. ಭಾರತವು ಜಗತ್ತಿನ 3ನೇ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮುವ ಸಂಕಲ್ಪ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕನಸು ನನಸು ಮಾಡುವುದು ಮತ್ತು ಕೈಗಾರಿಕಾ ಕ್ಷೇತ್ರದಲ್ಲಿ ಉತ್ಪಾದನೆಯನ್ನು ಗಣನೀಯವಾಗಿ ಹೆಚ್ಚಿಸಿ ದೇಶಾದ್ಯಂತ ವಿಸ್ತೃತವಾಗಿ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಕ್ರಿಯಾಶೀಲವಾಗಿ ಶ್ರಮಿಸಲಾಗುವುದು ಎಂದು ಸಚಿವ ಕುಮಾರಸ್ವಾಮಿ ಭರವಸೆ ನೀಡಿದರು. ಈ ಸಂದರ್ಭ ಸಚಿವಾಲಯದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಿವಿಧ ವಿಚಾರಗಳ ಕುರಿತು ಚರ್ಚಿಸಿದರು.

Read More

ಮಡಿಕೇರಿ ಜೂ.11 NEWS DESK : ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿ ಕೂಟ ಸರಕಾರದ ಸಚಿವ ಸಂಪುಟದಲ್ಲಿ ದಲಿತ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರಿಗೆ ಸೂಕ್ತ ಸ್ಥಾನಮಾನ ನೀಡದೆ ಸಾಮಾಜಿಕ ನ್ಯಾಯವನ್ನು ಕಡೆಗಣಿಸಲಾಗಿದೆ ಎಂದು ಲೋಕಸಭಾ ಚುನಾವಣೆಯ ಪರಾಜಿತ ಅಭ್ಯರ್ಥಿ, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಟೀಕಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರ ಸಚಿವ ಸಂಪುಟದಲ್ಲಿ 72 ಸಚಿವರ ಪೈಕಿ ಒಂದೇ ಸಮುದಾಯದ 25 ಮಂದಿಗೆ ಸ್ಥಾನ ನೀಡಲಾಗಿದೆ. ಶೇ.2 ರಷ್ಟು ಇರುವ ಬ್ರಾಹ್ಮಣರು ಸಂಪುಟದಲ್ಲಿ ಶೇ.35 ರಷ್ಟು ಸ್ಥಾನ ಪಡೆದುಕೊಂಡಿದ್ದಾರೆ. ಬೇರೆ ಸಮುದಾಯದವರು ಬಿಜೆಪಿಗೆ ಮತದಾನ ಮಾಡಿಲ್ಲವೇ ಎಂದು ಪ್ರಶ್ನಿಸಿದರು. ಕರ್ನಾಟದಲ್ಲಿ 17 ಬಿಜೆಪಿ ಸಂಸದರಿದ್ದು, ಐವರಿಗೆ ಸಚಿವ ಸ್ಥಾನ ನೀಡಲಾಗಿದೆ. ದಲಿತ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರನ್ನು ಕಡೆಗಣಿಸಲಾಗಿದೆ. ಲಿಂಗಾಯಿತ ಸಮುದಾಯದ ವಿ.ಸೋಮಣ್ಣ ಅವರಿಗೆ ರಾಜ್ಯ ಖಾತೆ ಸ್ಥಾನ ನೀಡಲಾಗಿದೆ. ನಿಜವಾಗಿಯೂ ಬಿಜೆಪಿ ಬಳಿ ಸಾಮಾಜಿಕ ನ್ಯಾಯ ಇದೆಯೇ ಎಂದು ಪ್ರಶ್ನಿಸಿದರು. ಕೇಂದ್ರದಲ್ಲಿ ಸಚಿವರಾಗಿರುವ…

Read More

ಕಡಂಗ ಜೂ.11 NEWS DESK : ಕಳೆದ ಒಂದು ತಿಂಗಳಿನಿಂದ ಕೊಟ್ಟಮುಡಿ ಮತ್ತು ಹೊದವಾಡ ಗ್ರಾಮವನ್ನು ವಿದ್ಯುತ್ ಸಮಸ್ಯೆ ಕಾಡುತ್ತಿದೆ. ಸುದೀರ್ಘ ಕಾಲ ವಿದ್ಯುತ್ ಸಂಪರ್ಕವಿಲ್ಲದೆ ವಿದ್ಯಾರ್ಥಿಗಳು, ವರ್ತಕರು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಚೆಸ್ಕಾಂ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಸ್ಪಂದನೆ ದೊರೆತ್ತಿಲ್ಲವೆಂದು ಅಸಮಾಧಾನಗೊಂಡ ಗ್ರಾಮಸ್ಥರು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಪೊನ್ನಣ್ಣ ಅವರಿಗೆ ಮನವಿ ಸಲ್ಲಿಸಿ ಸಮಸ್ಯೆಯನ್ನು ವಿವರಿಸಿದರು. ತಕ್ಷಣ ಸ್ಪಂದಿಸಿದ ಶಾಸಕರು ಚೆಸ್ಕಾಂ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ವಿದ್ಯುತ್ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು. ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮೈಸಿ ಕತ್ತಣಿರ, ಸಮಾಜ ಸೇವಕ ಅಹಮ್ಮದ್ ಪಿ.ಯು, ಕಾಂಗ್ರೆಸ್ ಕಾರ್ಯಕರ್ತರಾದ ಜಕರಿಯ ಅಲಿ ಬಷೀರ್ ಮನವಿ ಸಲ್ಲಿಸುವ ಸಂದರ್ಭ ಹಾಜರಿದ್ದರು. (ವರದಿ : ನೌಫಲ್ ಕಡಂಗ)

Read More

ಮಡಿಕೇರಿ ಜೂ.11 NEWS DESK : ರಾಷ್ಟ್ರ ಮಟ್ಟದಲ್ಲಿ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ನಡೆಯುವ ‘ನೀಟ್’ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಶಂಕೆ ಇದ್ದು, ಉನ್ನತ ಮಟ್ಟದ ತನಿಖೆ ನಡೆಸಬೇಕು ಮತ್ತು ಮರು ಪರೀಕ್ಷೆಯಾಗಬೇಕು ಎಂದು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ(ಎನ್‌ಎಸ್‌ಯುಐ)ದ ಜಿಲ್ಲಾಧ್ಯಕ್ಷ ಪಿ.ಎಂ.ಅಬ್ದುಲ್ ರಶೀದ್ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀಟ್ ಪರೀಕ್ಷೆಯನ್ನು ದೇಶವ್ಯಾಪಿ ನಡೆಸಲಾಗಿದ್ದು, ಜಿಲ್ಲೆಯಲ್ಲಿ ಸುಮಾರು 30 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. ನೀಟ್ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ವಿವಾದಾತ್ಮಕ ಫಲಿತಾಂಶದ ಕಾರಣದಿಂದ ಉನ್ನತ ವ್ಯಾಸಂಗದ ಹಂಬಲ ಹೊಂದಿದ್ದ ಹಲವು ವಿದ್ಯಾರ್ಥಿಗಳ ಕನಸು ನುಚ್ಚು ನೂರಾಗಿದೆ. ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆಗಳು ಕೂಡ ನಡೆದಿದೆ ಎಂದು ಆರೋಪಿಸಿದರು. ‘ನೀಟ್’ ಪರೀಕ್ಷಾ ಅಕ್ರಮಗಳ ಬಗ್ಗೆ ಸೂಕ್ತ ತನಿಖೆೆಗೆ ಕೇಂದ್ರ ಮುಂದಾಗದಿದ್ದಲ್ಲಿ ವಿದ್ಯಾರ್ಥಿಗಳು ಒಗ್ಗೂಡಿ ಜಿಲ್ಲಾ ಮಟ್ಟದಲ್ಲಿ ಶೀಘ್ರದಲ್ಲೆ ಪ್ರತಿಭಟನೆ ನಡೆಸಿ, ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲು ನಿರ್ಧರಿಸಿರುವುದಾಗಿ ತಿಳಿಸಿದರು. ನೀಟ್ ಪರೀಕ್ಷೆಯಲ್ಲಿ ಅಕ್ರಮಗಳು…

Read More