ಚೆಟ್ಟಳ್ಳಿ ಜೂ.11 NEWS DESK : ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಮತಪಡೆಯುವ ಮೂಲಕ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರದ ಎನ್.ಡಿ.ಎ ಸರಕಾರದ ಆಡಳಿತದ ಚುಕ್ಕಾಣಿ ಹಿಡಿದ ಹಿನ್ನೆಲೆ ಚೆಟ್ಟಳ್ಳಿ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು. ಬಿಜೆಪಿ ಕಾರ್ಯಕರ್ತರು ಪಕ್ಷದ ಬಾವುಟ ಹಿಡಿದು ವಿಜಯದ ಘೋಷಣೆ ಕೂಗುತ್ತಾ ಪಟ್ಟಣದುದ್ದಕ್ಕೂ ಮೆರವಣಿಗೆ ತೆರಳಿ ಮಾನವ ಸರಪಳಿ ನಿರ್ಮಿಸಿದರು. ಈ ಸಂದರ್ಭ ಸೋಮವಾರಪೇಟೆ ಮಂಡಳ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ಮಾತನಾಡಿ, ಈ ಬಾರಿಯ ಲೋಕಸಭಾ ಚುನವಣೆಯಲ್ಲಿ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳು ಯಾವುದೇ ಫಲಕಾರಿಯಾಗಲಿಲ್ಲ. ಪಕ್ಷದ ಕಾರ್ಯಕರ್ತರ ಶ್ರಮದ ಫಲವಾಗಿ ಕೇಂದ್ರದಲ್ಲಿ ಎನ್ ಡಿ ಎ ಸರಕಾರ ಗೆಲುವನ್ನು ಸಾಧಿಸಿದೆ ಎಂದರು. ಬಿಜೆಪಿ ಹಿರಿಯ ಕಾರ್ಯಕರ್ತ ಬಲ್ಲಾರಂಡ ಮಣಿ ಉತ್ತಪ್ಪ ಮಾತನಾಡಿ, ಈ ಬಾರಿಯ ಬಿಜೆಪಿಯ ಮತ ಚಿದ್ರಗೊಳ್ಳುವ ಮೂಲಕ ಬಿಜೆಪಿ ಪತನಗೊಳ್ಳಲಿದೆ ಎಂದು ಕಾಂಗ್ರೆಸಿಗರು ಭವಿಷ್ಯ ನುಡಿದಿದ್ದರು. ಆದರೆ ಅದು ಹುಸಿಯಾಗಿ ಎನ್ ಡಿಎ ಕೇಂದ್ರದ ಚಿಕ್ಕಾಣಿ ಹಿಡಿದಿದೆ ಎಂದು…
ಲೇಖಕ: admin
ವಿರಾಜಪೇಟೆ ಜೂ.11 NEWS DESK : ವಿರಾಜಪೇಟೆಯ ಎ ಟೆಕ್ ಎಜುಕೇಶನಲ್ ಸೆಂಟರ್ ವತಿಯಿಂದ ಸಂಸ್ಥೆಯ ಸಭಾಂಗಣದಲ್ಲಿ ಶಂಕರಾಚಾರ್ಯ ಟ್ರಸ್ಟ್ ಹಾಗೂ ಮೈಸೂರಿನ ನೈಸ್ ಸಂಸ್ಥೆಯ ಸಹಯೋಗದೊಂದಿಗೆ ಉದ್ಯೋಗ ಮೇಳ ನಡೆಯಿತು. ಮೇಳವನ್ನು ಉದ್ಘಾಟಿಸಿ ಮಾತನಾಡಿದ ವಿರಾಜಪೇಟೆ ಪುರಸಭೆ ಸದಸ್ಯ ಎಸ್.ಹೆಚ್.ಮತೀನ್, ಇದೊಂದು ಉತ್ತಮ ಕಾರ್ಯಕ್ರಮವಾಗಿದ್ದು, ಎಷ್ಟೋ ವಿದ್ಯಾವಂತ ನಿರುದ್ಯೋಗಿಗಳು ಬದುಕು ನಿರ್ಮಿಸಿಕೊಳ್ಳಲು ಉದ್ಯೋಗ ಮೇಳಗಳು ಸಹಕಾರಿ ಎಂದರು. ನಮ್ಮ ಮಕ್ಕಳು ತಮ್ಮ ವಿದ್ಯಾಭ್ಯಾಸ ಮುಗಿಸಿ ಮುಂದೆ ಯಾವ ಕೆಲಸವನ್ನು ಮಾಡಬಹುದು. ಅವರ ವಿದ್ಯಾಹರ್ತೆಗೆ ತಕ್ಕಂತೆ ಉದ್ಯೋಗ ಸಿಗಬೇಕು ಎಂದು ನಿರ್ಧರಿಸಲು ಈ ರೀತಿಯ ಉದ್ಯೋಗ ಮೇಳ ಸಹಕಾರಿಯಾಗಿದೆ ಎಂದರು. ಮುಂದಿನ ದಿನಗಳಲ್ಲಿ ಉದ್ಯೋಗ ಮೇಳಗಳು ನಡೆದರೆ ಸ್ಥಳೀಯ ಉದ್ಯೋಗಕಾಂಕ್ಷಿಗಳಿಗೆ ಅವಕಾಶ ದೊರೆತಂತಾಗುತ್ತದೆ. ಉದ್ಯೋಗ ಮೇಳಗಳ ಲಾಭವನ್ನು ಎಲ್ಲಾರೂ ಸದುಪಯೋಗ ಪಡಿಸಿಕೊಳ್ಳುವಂತೆ ಮತೀನ್ ಹೇಳಿದರು. ಪುರಸಭೆ ಮಾಜಿ ಉಪಾಧ್ಯಕ್ಷೆ ತಸ್ನೀಂ ಅಕ್ತರ್ ಮಾತನಾಡಿ, ಸ್ಥಳೀಯ ಮಕ್ಕಳಿಗೆ ತಮ್ಮ ಕೌಶಲ್ಯ ಮತ್ತು ಅವರ ಸಾಮಥ್ರ್ಯಕ್ಕೆ ತಕ್ಕಂತೆ ಉದ್ಯೋಗ ವಿನಿಮಯ ಮಾಡಿಕೊಳ್ಳಲು ಉತ್ತಮ ಕಾರ್ಯಕ್ರಮ…
ನಾಪೋಕ್ಲು ಜೂ.11 NEWS DESK : ಗಿಡಗಳನ್ನು ನೆಡುವುದು ಮುಖ್ಯವಲ್ಲ, ನೆಟ್ಟ ಗಿಡಗಳನ್ನು ಪೋಷಣೆ ಮಾಡುವುದು ಮುಖ್ಯ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಂಸ್ಥೆಯ ಸಂಪಾಜೆ ವಲಯ ಅಧ್ಯಕ್ಷ ಎಂ.ಧನಂಜಯ ಹೇಳಿದರು. ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಸ್ಥಳೀಯ ಸಂಸ್ಥೆ ಸಂಪಾಜೆ ವತಿಯಿಂದ ವಿವಿಧ ಶಾಲೆಗಳಲ್ಲಿ ಭೂಮಿಯ ಮರುಸ್ಥಾಪನೆ ಮತ್ತು ಹಸಿರು ಬರ ಪರಿಸ್ಥಿತಿ ನಿರ್ವಹಣೆ ಎಂಬ ಧ್ಯೇಯ ವಾಕ್ಯದಡಿಯಲ್ಲಿ ಆಯೋಜಿಸಲಾದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಬಲ್ಲಮಾವಟಿಯ ನೇತಾಜಿ ಪ್ರೌಢಶಾಲೆಯಲ್ಲಿ ಗಿಡ ನೆಟ್ಟು ಮಾತನಾಡಿದರು. ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯಿಂದ ಪರಿಸರ ಸಂರಕ್ಷಣೆ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಮಡಿಕೇರಿ ತಾಲ್ಲೂಕಿನ ಆಯ್ದ 15 ಶಾಲೆಗಳಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದರ ಅಂಗವಾಗಿ ನಾಪೋಕ್ಲು ಹೋಬಳಿಯ ನಾಲ್ಕು ಶಾಲೆಗಳಲ್ಲಿ ಗಿಡ ನೆಡಲಾಯಿತು ಎಂದರು. ಬಲ್ಲಮಾವಟಿ ಮತ್ತು ಭಾಗಮಂಡಲ ಪಂಚಾಯತಿ ವ್ಯಾಪ್ತಿಯ ವಿವಿಧ ಶಾಲೆಗಳಲ್ಲಿ ಗಿಡಗಳನ್ನು ನೆಟ್ಟು ಪೋಷಣೆ ಮಾಡಿ ಸಂರಕ್ಷಿಸುವಂತೆ ವಿದ್ಯಾರ್ಥಿಗಳಿಗೆ…
ನಾಪೋಕ್ಲು ಜೂ.11 NEWS DESK : ಮಹಿಳೆಯರು ಸಂಘ-ಸಂಸ್ಥೆಗಳ ಪ್ರತಿನಿಧಿಗಳಾಗಿ ಪಾಲ್ಗೊಂಡು ಸಮಾಜದಲ್ಲಿ ಬೆರೆತು ಅಭಿವೃದ್ಧಿ ಹೊಂದಬೇಕು ಎಂದು ಜಿ.ಪಂ ಮಾಜಿ ಸದಸ್ಯೆ, ನಿವೃತ್ತ ಪ್ರಾಧ್ಯಾಪಕಿ ಬೊಪ್ಪಂಡ ಬೊಳ್ಳಮ್ಮ ನಾಣಯ್ಯ ಹೇಳಿದರು. ಕೂರುಳಿ ಸುಭಾಷ್ ನಗರ ಸಮುದಾಯ ಭವನದಲ್ಲಿ ನಡೆದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೂರುಳಿ ಸುಭಾಷ್ ನಗರ ಕಾರ್ಯಕ್ಷೇತ್ರದ ಪರಮೇಶ್ವರಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಅವರು, ಮಾತನಾಡಿದರು. ಸಂಘ ಸಂಸ್ಥೆಗಳನ್ನು ಕಟ್ಟಿ ಬೆಳೆಸುವುದು ಒಂದು ಕಲೆ ಎಂದ ಅವರು ಮಕ್ಕಳಿಗೆ ಶಿಕ್ಷಣ ಕೊಡುವಲ್ಲಿ ಪೋಷಕರ ಪಾತ್ರ ಬಗ್ಗೆ ಮಾತನಾಡಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದರುದರು. ಸಂಘದ ಮೇಲ್ವಿಚಾರಕ ಸುನಿಲ್ ಸಂಘದ ಧ್ಯೇಯೋದ್ದೇಶಗಳ ಬಗ್ಗೆ ವಿವರಿಸಿದರು. ಪರಮೇಶ್ವರಿ ಜ್ಞಾನ ವಿಕಾಸ ಕೇಂದ್ರದ ಅಧ್ಯಕ್ಷೆ ದೈನಬ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರತಿನಿಧಿ ಉಮಾಲಕ್ಷ್ಮಿ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು. ಸಂಘದ ಸದಸ್ಯ ಟಿ.ಆರ್.ಪೊನ್ನಮ್ಮ ಸ್ವಾಗತಿಸಿದರು. ಸಾವಿತ್ರಿ ನಿರೂಪಿಸಿ, ವಂದಿಸಿದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಜೂ.11 NEWS DESK : ದಾರುಲ್ ಉಲೂಮ್ ಹೈಯರ್ ಸೆಕೆಂಡರಿ ಮದರಸಾದ ಎಸ್.ಕೆ.ಎಸ್.ಬಿ.ವಿ ವಾರ್ಷಿಕ ಮಹಾ ಸಭೆಯು ವ್ಯವಸ್ಥಾಪಕ ಉನೈಸ್ ಫೈಝಿ ಅದ್ಯಕ್ಷತೆಯಲ್ಲಿ ನಡೆಯಿತು. ಪ್ರಾಂಶುಪಾಲ ಎಂ.ತಮ್ಲೀಖ್ ದಾರಿಮಿ ಸಭೆಯನ್ನು ಉದ್ಘಾಟಿಸಿ ಮಹೋನ್ನತ ಉಲಮಾರು ರಚಿಸಿದ ವಿದ್ಯಾರ್ಥಿ ಸಂಘದ ಶಕ್ತಿಯನ್ನು ಬಲಪಡಿಸಲು ಕರೆ ನೀಡಿದರು. ಪ್ರಮುಖರಾದ ರಾಝಿಕ್ ರೆಹ್ಮಾನಿ ಸ್ವಾಗತಿಸಿದರು. ಸಭೆಯ ನಂತರ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಚೇರ್ಮೆನ್ ಆಗಿ ಮುಹಮ್ಮದ್ ರಾಝಿಕ್ ರಹ್ಮಾನಿ, ಸಂಚಾಲಕರಾಗಿ ಶಕೀರ್ ಪೈಝಿ, ಸಂಯೋಜಕರಾಗಿ ನಫೀರ್ ಮುಸ್ಲಿಯಾರ್, ಅಧ್ಯಕ್ಷರಾಗಿ ಎಂ.ಎಸ್.ಶಾಹಿದ್, ಕಾರ್ಯದರ್ಶಿಯಾಗಿ ಅಮಾನ್ ಶಾನಿದ್ ನೇಮಕಗೊಂಡರು. ಕೋಶಾಧಿಕಾರಿಯಾಗಿ ಅರ್ಶದ್, ಕಾರ್ಯನಿರತ ಕಾರ್ಯದರ್ಶಿಯಾಗಿ ಜಾಫರ್, ಉಪಾಧ್ಯಕ್ಷರುಗಳಾಗಿ ತೌಫೀಖ್, ಅಶ್ವಾಕ್, ನಿಯಾಸ್, ಸಹ ಕಾರ್ಯದರ್ಶಿಗಳಾಗಿ ಮುಹಮ್ಮದ್ ಕೈಫ್, ಕೆ.ಎನ್.ನಿಹಾಲ್, ಅಬ್ದುಲ್ ಅಹದ್ ನೇಮಕಗೊಂಡರು. ಅದಬ್ ಸಂಯೋಜಕರಾಗಿ ಹಾಶಿರ್ ಮುಸ್ತಫಾ, ಟೆಕ್ ಸಂಯೋಜಕರಾಗಿ ಸವಾದ್ ಸಮದ್, ಅಲಿಫ್ ಸಂಯೋಜಕರಾಗಿ ಎಂ.ಯು.ರಿಹಾನ್, ಕಿದ್ಮ ಕ್ಯಾಪ್ಟನ್ ಬಿ.ಯು.ಸ್ವಫ್ವಾನ್ ಸೇರಿದಂತೆ ಹಲವು ಸದಸ್ಯರನ್ನು ನೇಮಕ ಮಾಡಲಾಯಿತು.
ಮಡಿಕೇರಿ ಜೂ.11 NEWS DESK : ಬೀದರ್’ನಲ್ಲಿ ಎನ್.ಸಿ.ಸಿ ಆಯೋಜಿಸಿದ್ದ ರಾಷ್ಟ್ರೀಯ ವಾಯುಪಡೆ ಬೆಸುಗೆ ಶಿಬಿರ (National Airforce Attachment Camp- NAAC) ದಲ್ಲಿ ಎನ್.ಸಿ.ಸಿ ಕೆಡೆಟ್(ಏರ್ ವಿಂಗ್) ಪಾಲಚಂಡ ತರುಣ್ ತಿಮ್ಮಯ್ಯ ಭಾಗಹಿಸಿ ವಿವಿಧ ತರಬೇತಿ ಪಡೆದಿದ್ದಾರೆ. ವಾಯುಪಡೆಯ ಪೈಲಟ್’ಗಳಿಗೆ ಅತ್ಯಾಧುನಿಕ ಯುದ್ಧ ವಿಮಾನಗಳ ಮೂರನೇ ಹಂತದ ಚಾಲನಾ ತರಬೇತಿಯನ್ನು ನೀಡುವ ಕೇಂದ್ರವಾದ ಬೀದರ್’ನ ವಾಯುಪಡೆಯ ತರಬೇತಿ ಕೇಂದ್ರದಲ್ಲಿ ಈ ಶಿಬಿರವನ್ನು ಆಯೋಜಿಸಲಾಗಿತ್ತು. ಮಂಗಳೂರಿನ ಸೆಂಟ್ ಅಲೋಶಿಯಸ್ ಕಾಲೇಜಿನ ಬಯೊಟೆಕ್ ಎರಡನೇ ವರ್ಷದ ವಿದ್ಯಾರ್ಥಿಯಾಗಿರುವ ತರುಣ್ ತಿಮ್ಮಯ್ಯ ಸೇರಿದಂತೆ ಕರ್ನಾಟಕ ಗೋವ ವಿಭಾಗದ 14 ಕೆಡೆಟ್’ಗಳು ಈ ಶಿಬಿರದಲ್ಲಿ ಪಾಲ್ಗೊಂಡು ವಾಯುಪಡೆಯ ವಿವಿಧ ತರಬೇತಿಗಳನ್ನು ಪಡೆದುಕೊಂಡಿದ್ದಾರೆ. ಶಿಬಿರದಲ್ಲಿ ಸೇನೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಾದAir Force Common Admission test (AFCAT), Combined Difference Service (CDS), National Difference Academy (NDA) ಮತ್ತು Services Selection Board (SSB) ಮುಂತಾದ ಪರೀಕ್ಷೆಗೆ ಬೇಕಾದ ಮಾಹಿತಿ ಹಾಗು ತರಬೇತಿ ಕಾರ್ಯಾಗಾರ ಹಮ್ಮಿಕೊಂಡು…
ನಾಪೋಕ್ಲು ಜೂ.11 NEWS DESK : ವಾಹನಗಳ ಚಾಲನಾ ಪರವಾನಗಿ, ಸೂಕ್ತ ದಾಖಲೆಗಳು ಇಲ್ಲದೇ ವಾಹನಗಳನ್ನು ಚಲಾಯಿಸಬಾರದು ಎಂದು ನಾಪೋಕ್ಲು ಪೊಲೀಸ್ ಠಾಣೆಯ ಠಾಣಾಧಿಕಾರಿ ಮಂಜುನಾಥ್ ಹೇಳಿದರು. ಸಮೀಪದ ಚೆರಿಯಪರಂಬುವಿನ ಕರ್ನಾಟಕ ಪಬ್ಲಿಕ್ ಶಾಲಾ(ಞಠಿs) ಮೈದಾನದಲ್ಲಿ ಸ್ಥಳೀಯ ಯುವಕರಿಗೆ ಹಾಗೂ ವಾಹವ ಸವಾರರಿಗೆ ತಿಳಿಹೇಳಿದ ಅವರು ಜೀವ ಅಮೂಲ್ಯವಾದದ್ದು,.ರಸ್ತೆ ಸುರಕ್ಷತಾ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಿ ಕಾನೂನುಗಳನ್ನು ಗೌರವಿಸಬೇಕು ಎಂದರು. ವಾಹನ ಸವಾರರನ್ನು ತಪಾಸಣೆ ಮಾಡಿ ಹೆಲ್ಮೆಟ್ ಹಾಕದೆ ಚಲಾಯಿಸದವರಿಗೆ, ಇನ್ಸೂರೆನ್ಸ್ ಇಲ್ಲದ, ಸೀಟ್ ಬೆಲ್ಟ್ ಇಲ್ಲದೆ ಚಾಲನೆ ಮಾಡಿದವರಿಗೆ, ಬೈಕ್ ಗಳಲ್ಲಿ ಎರಡಕ್ಕಿಂತ ಹೆಚ್ಚು ಮಂದಿ ಕುಳಿತು ಸಾಗಿದವರಿಗೆ ತಿಳುವಳಿಕೆ ಮೂಡಿಸಿ, ಎಚ್ಚರಿಕೆ ನೀಡಲಾಯಿತು. ಚಾಲನಾ ಪರವಾನಗಿ ಇಲ್ಲದೆ ವಾಹನ ಚಲಾಯಿಸುವುದು, ಪಟ್ಟಣ ವ್ಯಾಪ್ತಿಯಲ್ಲಿ ಎಲ್ಲೆಂದರಲ್ಲಿ ವಾಹನ ನಿಲುಗಡೆ ಮಾಡಿ ಸಂಚಾರಿ ವಾಹನಗಳಿಗೆ ಜನಸಾಮಾನ್ಯರಿಗೆ ಅಡ್ಡಿಪಡಿಸುವುದು, ಅಪ್ರಾಪ್ತ ಯುವಕರು ವಾಹನ ಚಾಲನೆ ಮಾಡುವುದು ಕಂಡುಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಜೂ.11 NEWS DESK : ಮರಂದೋಡ ಶಕ್ತಿ ಕೇಂದ್ರದಿಂದ ಬಿಜೆಪಿ ಕಾರ್ಯಕರ್ತರು ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ಸ್ವೀಕರಿಸಿದ ಹಿನ್ನೆಲೆ ಹಾಗೂ ದೇಶದ ಸುಭಿಕ್ಷೆಗಾಗಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಚಂಡೀರ ಜಗದೀಶ್, ಚಂಡೀರ ಮುದ್ದಪ್ಪ, ಬೂತ್ ಮಟ್ಟದ ಕಾರ್ಯದರ್ಶಿ ಬಾರಿಕೆ ನಂದ ಮತ್ತು ಯುವಮೋರ್ಚಾ ಪದಾಧಿಕಾರಿಗಳಾದ ಚಂಡೀರ ರೋಷನ್, ಮೇರಿಯಂಡ ಆದೇಶ ಬೋಪಯ್ಯ, ಮಾರ್ಚಂಡ ಪಳಂಗಪ್ಪ, ಚಂಡೀರ ವಿಜಯ್, ಚಂಡೀರ ನಂದ, ಮೇರಿಯಂಡ ನೀತಾ ಆದೇಶ್, ಕೊಲೆಯಂಡ ಅಶೋಕ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ದೇವಾಲಯದ ಮುಖ್ಯ ಅರ್ಚಕ ಕುಶ ಭಟ್, ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಜೂ.11 NEWS DESK : ಸೋಮವಾರಪೇಟೆ ಹೋಂ ಸ್ಟೇ ಅಸೋಸಿಯೇಷನ್ ವತಿಯಿಂದ ಹೋಂಸ್ಟೇ ಸದಸ್ಯರುಗಳಿಗೆ ಕೈಗಾರಿಕ ಭೇಟಿ ನಡೆಯಿತು. ಅಯಾತನ ರೆಸಾರ್ಟ್ ಗೆ ಭೇಟಿ ನೀಡಿದ ಸದಸ್ಯರು ರೆಸಾರ್ಟ್ ನ ಕಾರ್ಯ ನಿರ್ವಹಣೆ, ಆಡಳಿತ, ರೆಸಾರ್ಟ್ ನ ಸೌಲಭ್ಯಗಳು, ಕೊಟ್ಟಡಿಗಳ ನಿರ್ವಹಣೆ, ರೆಸಾರ್ಟ್ ನ ರೆಸ್ಟೋರೆಂಟ್, ಸ್ಪಾ, ಬಗ್ಗೆ ಮಾಹಿತಿ ಪಡೆದುಕೊಂಡರು. ನಂತರ ಹೋಂಸ್ಟೇ ಅಸೋಸಿಯೇಷನ್ ಸದಸ್ಯರುಗಳಿಗೆ ಐಇಂದ್ರ ಹೋಂ ಸ್ಟೇಯಲ್ಲಿ ಅಡುಗೆ ಸ್ಪರ್ಧೆ ನಡೆಯಿತು. ಸ್ಪರ್ಧೆಯ ತೀರ್ಪುಗಾರರಾಗಿ ಅಯಾತನ ರೆಸಾರ್ಟ್ ನ ಜನರಲ್ ಮ್ಯಾನೇಜರ್ ಎಂ.ಜಿಷ್ಣು , ಸೀನಿಯರ್ ಎಕ್ಸಿಕ್ಯೂಟಿವ್ ಷಪ್ ಜೂಲಿಯಸ್ ಬಿಸ್ವಾಸ್, ಮ್ಯಾನೇಜರ್ ಉನ್ನಿಕೃಷ್ಣನ್ ಕಾರ್ಯನಿರ್ವಹಿಸಿದರು. ಅಡುಗೆ ಸ್ಪರ್ಧೆ ವಿಜೇತರಿಗೆ ಐಇಂದ್ರ ಹೋಂ ಸ್ಟೇ ಮಾಲೀಕರಾದ ಜಯಪ್ರಕಾಶ್ ಬಹುಮಾನ ವಿತರಿಸಿದರು. ಈ ಸಂದರ್ಭ ಹೋಂಸ್ಟೇಷನ್ ಅಧ್ಯಕ್ಷ ಸಿ.ಕೆ.ರೋಹಿತ್, ಉಪಾಧ್ಯಕ್ಷ ಯೋಗೇಶ್ ಪಟೇಲ್, ಕಾರ್ಯದರ್ಶಿ ಅಭಿನಂದ್ ಹಾಗೂ ಖಜಾಂಚಿ ಪ್ರೀತಮ್ ಗೌಡ ಹಾಗೂ ಹೋಂ ಸ್ಟೇ ಅಸೋಸಿಯೇಷನ್ ನ ಎಲ್ಲಾ ಸದಸ್ಯಗಳು ಹಾಜರಿದ್ದರು.
ಮಡಿಕೇರಿ ಜೂ.11 NEWS DESK : ಮೂಲತಃ ಸುಂಟಿಕೊಪ್ಪದವರಾದ ಹೊಸಕೋಟೆ ಸಮೀಪದ ಅಂದಗೋವೆ ಪೈಸಾರಿಯಲ್ಲಿ ನೆಲೆಸಿದ್ದ ಬಾಲ ಸುಂದರಂ (58) ನಿಧನ ಹೊಂದಿದ್ದಾರೆ. ಮೃತರು ಪತ್ನಿ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ.






