ಲೇಖಕ: admin

ಮಡಿಕೇರಿ ಜೂ.10 NEWS DESK : ಕೊಡಗು ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಸರಕಾರಿ ಜಾಗವನ್ನು ಕಡಿಮೆ ದರಕ್ಕೆ ಗುತ್ತಿಗೆ ಆಧಾರದಲ್ಲಿ ನೀಡುವ ಆದೇಶ ಹಿಂಪಡೆಯಬೇಕು, ಅಪಾಯಕಾರಿ ಜಾಗದಲ್ಲಿರುವ ಬಡ ಕುಟುಂಬಗಳಿಗೆ ನಿವೇಶನ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಎಂ) ನೆಲ್ಲಿಹುದಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನೆಲ್ಲಿಹುದಿಕೇರಿ ಗ್ರಾ.ಪಂ ಎದುರು ಜಮಾಯಿಸಿದ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಬಡವರ, ಕೂಲಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಂತೆ ಘೋಷಣೆಗಳನ್ನು ಕೂಗಿದರು. ಈ ಸಂದರ್ಭ ಮಾತನಾಡಿದ ಸಿಪಿಐಎಂ ಕಾರ್ಯದರ್ಶಿ ಪಿ.ಆರ್.ಭರತ್, ಉಳ್ಳವರ ಪರವಾದ ನಿಯಮಗಳನ್ನು ತಕ್ಷಣ ರೂಪಿಸುವ ಸರಕಾರಗಳು ಬಡವರು ಹಾಗೂ ಕೂಲಿ ಕಾರ್ಮಿಕರನ್ನು ನಿರ್ಲಕ್ಷಿಸುತ್ತಲೇ ಬರುತ್ತಿವೆ. ಬಡವರಿಗೆ ವಾಸವಿರಲು ನಿವೇಶನ ಅಥವಾ ವಸತಿಯನ್ನು ನೀಡಿ ಎಂದು ಒತ್ತಾಯಿಸಿ ಕಳೆದ ಹಲವು ವರ್ಷಗಳಿಂದ ಸಿಪಿಐಎಂ ಪಕ್ಷ ಹೋರಾಟಗಳನ್ನು ನಡೆಸಿಕೊಂಡು ಬಂದಿದ್ದರೂ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸ್ಪಂದಿಸಿಲ್ಲವೆಂದು ಟೀಕಿಸಿದರು. ನೆಲ್ಲಿಹುದಿಕೇರಿ ಗ್ರಾಮ ವ್ಯಾಪ್ತಿಯಲ್ಲಿ ಕಡು ಬಡತನದಲ್ಲಿರುವ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು, ದಲಿತರು, ಆದಿವಾಸಿಗಳು,…

Read More

ಮಡಿಕೇರಿ ಜೂ.10 NEWS DESK : ಕೊಡಗು ಜಿಲ್ಲೆಯಾದ್ಯಂತ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ವಿರುದ್ಧ ಕೊಡವರು ಜಾಗೃತರಾಗದಿದ್ದರೆ ಅಪಾಯ ಕಾದಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ನಡೆಯುತ್ತಿರುವ ಭೂಪರಿವರ್ತನೆಗಳ ವಿರುದ್ಧ ಸಿಎನ್‌ಸಿ ಸಂಘಟನೆ ವತಿಯಿಂದ ಬಾಳೆಲೆಯಲ್ಲಿ ಆಯೋಜಿಸಿದ್ದ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಒಂದು ಸಾವಿರ ಮರಗಳನ್ನು ಕಡಿಯಲು ಅನುಮತಿ ಪಡೆದು ಕೋಟ್ಯಾಂತರ ರೂ. ಬೆಲೆ ಬಾಳುವ ಸುಮಾರು 3 ರಿಂದ 4 ಸಾವಿರ ಮರಗಳನ್ನು ಹನನ ಮಾಡಲಾಗಿದೆ. ಈ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದರು. ಕಾಫಿ ತೋಟಗಳ ಭೂಪರಿವರ್ತನೆಯಿಂದ ಕೊಡಗಿನ ಎಲ್ಲಾ ಗ್ರಾಮಗಳು ನಾಶವಾಗುತ್ತಿವೆ. ಮಣ್ಣು ಅಗೆಯುವ ಕೆಲಸದಿಂದ ಬಹುವಾರ್ಷಿಕ ಜಲಮೂಲಗಳ ನರ ಕೇಂದ್ರಗಳು ಈಗಾಗಲೇ ಮುಚ್ಚಿವೆ. ಇದರಿಂದ ಕೊಡಗಿನ ಮೇಲಾಗುವ ಅಪಾಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಬೇಕು. ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ, ಎಸ್.ಟಿ ಟ್ಯಾಗ್, ಕೊಡವರ ಆಂತರಿಕ ರಾಜಕೀಯ…

Read More

ಮಡಿಕೇರಿ ಜೂ.10 NEWS DESK : ನಾಪೋಕ್ಲು ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ವಿಶ್ವ ಆಹಾರ ಸುರಕ್ಷತಾ ದಿನ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿಶ್ವ ಆಹಾರ ಸುರಕ್ಷತಾ ದಿನದ ಮಹತ್ವ, ಆಹಾರ ಸುರಕ್ಷತೆ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ನೀಡಲಾಯಿತು. ಈ ವರ್ಷದ ವಿಶ್ವ ಆಹಾರ ಸುರಕ್ಷತಾ ದಿನದ ಘೋಷವಾಕ್ಯ “ಆಹಾರ ಸುರಕ್ಷತೆ–ಅನಿರೀಕ್ಷಿತ ಘಟನೆಗಳಿಗೆ ಸಿದ್ದರಾಗಿ” ಎಂಬುದರ ಬಗ್ಗೆ ಮತ್ತು ಇದರ ಮಹತ್ವದ ಬಗ್ಗೆ ಮಾಹಿತಿ ನೀಡಲಾಯಿತು. ಅಲ್ಲದೆ ಮಕ್ಕಳಿಗೆ ಪ್ರಬಂಧ ಸ್ಪರ್ಧೆ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಅಂಕಿತ ಅಧಿಕಾರಿ ಡಾ. ಇ.ಅನಿಲ್ ಧಾವನ್, ನಾಪೋಕ್ಲು ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ಪ್ರಾಂಶುಪಾಲರು ಹಾಗೂ ಹಿರಿಯ ಆಹಾರ ಸುರಕ್ಷತಾಧಿಕಾರಿ ಜೆ.ಎನ್.ಮಂಜುನಾಥ್, ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹಾಜರಿದ್ದರು.

Read More

ಮಡಿಕೇರಿ ಜೂ.10 NEWS DESK : ವಿವಿಧ ವಿಭಾಗದಲ್ಲಿ ಸಾಧನೆ ತೋರಿದ ಪ್ರತಿಭೆಗಳನ್ನು ಗುರುತಿಸಿ ಅವರುಗಳನ್ನು ಕರ್ನಾಟಕದ ಎಲ್ಲೆಡೆ ಪರಿಚಯಿಸುವ ಸಲುವಾಗಿ ಹೊರ ತಂದ ಬಾಗಲಕೋಟೆಯ ಸಾಹಿತಿ ಹಾಗೂ ಶಿಕ್ಷಕರಾದ ಮುತ್ತು ಯ ವಡ್ಡರ ಅವರ “ಎಲೆ ಮರೆ ಕಾಯಿಗಳು” ಸಾಧಕರ ಪರಿಚಯ ಕೃತಿಯಲ್ಲಿ ಕೊಡಗಿನ ನಟಿ, ನಿರ್ಮಾಪಕಿ, ಸಹ ನಿರ್ದೇಶಕಿ ಹಾಗೂ ಬರಹಗಾರ್ತಿ ಈರಮಂಡ ಹರಿಣಿ ವಿಜಯ್ ಅವರು ಸ್ಥಾನ ಪಡೆದುಕೊಂಡಿದ್ದಾರೆ. “ಎಲೆ ಮರೆ ಕಾಯಿಗಳು” ಕೃತಿಯಲ್ಲಿ ಎಲ್ಲಿಯೂ ಪರಿಚಯವಾಗದ 46 ಮಂದಿ ಸಾಧಕರನ್ನು ಪರಿಚಯಿಸಲಾಗಿದ್ದು, ಇದರಲ್ಲಿ ಕೊಡಗಿನ ಈರಮಂಡ ಹರಿಣಿ ವಿಜಯ್ ಅವರ ಪರಿಚಯವನ್ನು ಮಾಡಿಕೊಡಲಾಗಿದೆ. ಲಯನ್ಸ್ ಕ್ಲಬ್ ಆಫ್ ಮೈಸೂರ್ ಮಿಲೇನಿಯಮ್, ಕನ್ನಡ ನುಡಿಮುತ್ತು ಸಾಹಿತ್ಯ ವೇದಿಕೆ ಕರ್ನಾಟಕ, ನಿಸರ್ಗ ಸಂಗೀತ ಮಹಾವಿದ್ಯಾಲಯ ಹನುಮಸಾಗರ ಹಾಗೂ ಮೈಸೂರು ಸಂಜನಾ ಪ್ರತಿಷ್ಠಾನ ಬಳಗದ ಸಂಯುಕ್ತಾಶ್ರಯದಲ್ಲಿ ಮೈಸೂರಿನ ನಟರಾಜ ಶಿಕ್ಷಣ ಸಂಸ್ಥೆಗಳ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹರಿಣಿ ವಿಜಯ್ ಸೇರಿದಂತೆ ಕರ್ನಾಟಕದ ವಿವಿಧೆಡೆಯಿಂದ ಆಗಮಿಸಿದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ…

Read More

ಮಡಿಕೇರಿ ಜೂ.10 NEWS DESK : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ 1999-2002 ರ ವಾಣಿಜ್ಯ ಬ್ಯಾಚ್ ನ ಹಳೇ ವಿದ್ಯಾರ್ಥಿಗಳ ಭಾವನಾತ್ಮಕ ಪುನರ್ಮಿಲನ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ತಮಗೆ ವಿದ್ಯೆ ಕಲಿಸಿದ ಉಪನ್ಯಾಸಕ ವೃಂದದವರಿಗೆ ವಂದಿಸಿದ ಹಳೇ ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದ ನೆನಪುಗಳನ್ನು ಮೆಲುಕು ಹಾಕಿದರು. ಕಾಲೇಜ್ ನ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜು ಪ್ರಾಂಶುಪಾಲ ಮೇಜರ್ ಪ್ರೊ.ಡಾ.ಬಿ.ರಾಘವ ಅವರು ಸಾಮಾಜಿಕ ಜಾಲತಾಣವನ್ನು ಸಮರ್ಥವಾಗಿ ಬಳಸಿ, ಕಳಚಿಹೋದ ಸಂಬಂಧವನ್ನು ಬೆಸೆಯುವತ್ತ ಐತಿಹಾಸಿಕ ಹೆಜ್ಜೆ ಇರಿಸಿದ 1999-2002ನೇ ವಾಣಿಜ್ಯ ಬ್ಯಾಚ್ ನ ವಿದ್ಯಾರ್ಥಿಗಳ ಶ್ರಮ ಶ್ಲಾಘನೀಯ. ಇದು ಕಾಲೇಜ್ ನ ಎಲ್ಲಾ ವಿದ್ಯಾರ್ಥಿಗಳಿಗೆ ಆದರ್ಶವಾಗಲಿದೆ ಎಂದು ಬಣ್ಣಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ.ಗಾಯತ್ರಿ ದೇವಿ ಮಾತನಾಡಿ, ವಿದ್ಯೆ ಕಲಿಸಿದ ಗುರುಗಳನ್ನು ನೆನಪಿಸಿಕೊಳ್ಳದ ಇಂದಿನ ದಿನಗಳಲ್ಲಿ, ಒಂದು ನಿರ್ದಿಷ್ಟ ಬ್ಯಾಚ್‍ನ ವಿದ್ಯಾರ್ಥಿಗಳು ಕಾಲೇಜಿನ ಉಪನ್ಯಾಸಕರನ್ನು ಕೃತಜ್ಞತಾಪೂರ್ವಕವಾಗಿ ವಂದಿಸಿರುವ ಕಾರ್ಯ ಕಾಲೇಜ್ ನ ಇತಿಹಾಸದ ಪುಟಗಳಲ್ಲಿ…

Read More

ಮಡಿಕೇರಿ ಜೂ.10 NEWS DESK : ಕಂಡಕರೆ ಗಾಂಧಿ ಯುವಕ ಸಂಘ ಹಾಗೂ ಸರ್ವಧರ್ಮೀಯ ಬಡಹೆಣ್ಣುಮಕ್ಕಳ ಸಾಮೂಹಿಕ ವಿವಾಹ ಆಚರಣಾ ಸಮಿತಿ ವತಿಯಿಂದ ಸಮಾಜ ಸೇವಕ, ಕೆ.ನಿಡುಗಣೆ ಗ್ರಾ.ಪಂ ಸದಸ್ಯ ಜಾನ್ಸನ್ ಪಿಂಟೋ ಅವರಿಗೆ ‘ಮಾದರಿ ಜನಪ್ರತಿನಿಧಿ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಂಡಕರೆಯಲ್ಲಿ ನಡೆದ ಸರ್ವಧರ್ಮೀಯ ಬಡಹೆಣ್ಣುಮಕ್ಕಳ ಸಾಮೂಹಿಕ ವಿವಾಹ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಸಮಿತಿಯ ಪ್ರಮುಖರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಈ ಸಂದರ್ಭ ಸೇವ್ ದಿ ಡ್ರೀಮ್ಸ್ ಮುಖ್ಯಸ್ಥರಾದ ಜಾಬಿರ್ ನಿಝಾಮಿ, ಅಂತರಾಷ್ಟ್ರೀಯ ಮಾಜಿ ರಗ್ಬಿ ಆಟಗಾರ ಹಾಗೂ ವಿರಾಜಪೇಟೆ ನಗರ ಕಾಂಗ್ರೆಸ್ ಅಧ್ಯಕ್ಷ ಮಾದಂಡ ತಿಮ್ಮಯ್ಯ, ಗಾಂಧಿ ಯುವಕ ಸಂಘದ ಅಧ್ಯಕ್ಷ ಹಾಗೂ ಪತ್ರಕರ್ತ ಇಸ್ಮಾಯಿಲ್ ಕಂಡಕರೆ, ಕೊಡಗು ಜಿಲ್ಲಾ ಹಿಂದೂ ಮಲಯಾಳಿ ಸಮಾಜದ ಸಲಹೆಗಾರ, ಹಾಗೂ ಎಸ್.ಎನ್.ಡಿ.ಪಿ ಮಡಿಕೇರಿ ಶಾಖಾ ಅಧ್ಯಕ್ಷರಾದ ಟಿ.ಆರ್ ವಾಸುದೇವ್, ಕರ್ನಾಟಕ ರಾಜ್ಯ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಉಸ್ಮಾನ್ ಮತ್ತಿತರರು ಉಪಸ್ಥಿತರಿದ್ದರು.

Read More

ಮಡಿಕೇರಿ ಜೂ.10 NEWS DESK : ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಸಭೆ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಜಿ.ಪೀಟರ್ ಅವರು ಮಡಿಕೇರಿ ಬ್ಲಾಕ್ ನಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವ ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಪಿ.ಎ.ಹನೀಫ್ ಅವರು ಮಾತನಾಡಿ ಕಾಂಗ್ರೆಸ್ ಪಕ್ಷಕ್ಕೆ ಶೇ.100 ರಷ್ಟು ಮತಗಳನ್ನು ನೀಡುತ್ತಾ ಬರುತ್ತಿರುವ ಅಲ್ಪಸಂಖ್ಯಾತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಮತ್ತು ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು. ಒಂದು ವೇಳೆ ಕಡೆಗಣಿಸಿದರೆ ಅಲ್ಪಸಂಖ್ಯಾತರಿಗೆ ನಾವು ದ್ರೋಹ ಮಾಡಿದಂತಾಗುತ್ತದೆ ಎಂದರು. ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ ಕೊಟ್ಟಮುಡಿ, ಕೊಡಗು ಜಿಲ್ಲಾ ಕಾಂಗ್ರೆಸ್ ಗೌರವ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ನಗರಸಭಾ ಸದಸ್ಯ ಯಾಕುಬ್ ಮಾತನಾಡಿದರು. ಸಭೆಯಲ್ಲಿ ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಎಂ.ಸೈಯ್ಯದ್ ಬಾವ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಂಘÀಟನಾ ಕಾರ್ಯದರ್ಶಿ ಮುನೀರ್ ಮಾಚಾರ್, ಗ್ಯಾರಂಟಿ ಯೋಜನೆ ಸಮಿತಿ…

Read More

ಮಡಿಕೇರಿ ಜೂ.10 NEWS DESK : ಸೌಹಾರ್ದತೆಯ ಸಮಾಜ ನಿರ್ಮಾಣ ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯವಾಗಿದೆ ಎಂದು ಸೇವ್ ದಿ ಡ್ರೀಮ್ಸ್ ಮುಖ್ಯಸ್ಥ ಜಾಬಿರ್ ನಿಝಾಮಿ ಅಭಿಪ್ರಾಯಪಟ್ಟರು. ಕಂಡಕರೆಯಲ್ಲಿ ನಡೆದ ಗಾಂಧಿ‌ ಯುವಕ ಸಂಘ ಹಾಗೂ ಸರ್ವಧರ್ಮೀಯ ಬಡಹೆಣ್ಣುಮಕ್ಕಳ ಸಾಮೂಹಿಕ ವಿವಾಹ ಆಚರಣಾ ಸಮಿತಿ ವತಿಯಿಂದ ಸರ್ವಧರ್ಮೀಯ ಬಡಹೆಣ್ಣುಮಕ್ಕಳ ಸಾಮೂಹಿಕ ವಿವಾಹ ಮೊದಲ ಹಂತ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಅವರು ಮಾತನಾಡಿದರು. ಭಾರತ ದೇಶವು ಎಲ್ಲಾ, ಜಾತಿ ಧರ್ಮಗಳನ್ನೊಳಗೊಂಡ ದೇಶವಾಗಿದೆ. ಸಮಾಜದಲ್ಲಿ ಸೌಹಾರ್ದತೆ ಸ್ಥಾಪಿಸಲು ಎಲ್ಲರೂ ಶ್ರಮಿಸಬೇಕಾಗಿದೆ. “ಸೌಹಾರ್ದ ನಮ್ಮ ಉದ್ದೇಶ, ಸೌಹಾರ್ದತೆ ನಮ್ಮ ಸಂದೇಶ” ಎಂಬ ಅಮೂಲ್ಯವಾದ ಧ್ಯೇಯವಾಕ್ಯದೊಂದಿಗೆ ಗಾಂಧಿ ಯುವಕ ಸಂಘವು ಸರ್ವಧರ್ಮೀಯ ಬಡಹೆಣ್ಣುಮಕ್ಕಳ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಸುತ್ತಿರುವುದು ಎಲ್ಲರಿಗೂ ಮಾದರಿಯಾಗಿದೆ. ವೈಯಕ್ತಿಕವಾಗಿ ನಾನು ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ವಿರೋಧಿಸುವವನು.ಆದರೆ ಗಾಂಧಿ ಯುವಕ ಸಂಘವು ಬಡ, ಅನಾಥ ಹೆಣ್ಣುಮಗಳನ್ನು ಗುರುತಿಸಿ, ಅರ್ಹರಿಗೆ ಸಹಾಯ ಮಾಡುವ ಮೂಲಕ ಸಾಮೂಹಿಕ…

Read More

ಕಡಂಗ ಜೂ.10 NEWS DESK : ಸರಕಾರಿ ಪ್ರಾಥಮಿಕ ಹಿರಿಯ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಿಸಲಾಯಿತು. ಪೊದ್ದಮಾನಿ ಗ್ರಾಮಸ್ಥರಾದ ಅನ್ನಂಭೀರ ಗಿರೀಶ್ ಮತ್ತು ಕುಟುಂಬದವರು ವಿದ್ಯಾರ್ಥಿಗಳಿಗೆ ನೋಟ್ ಬುಕ್ ಹಾಗೂ ಇನ್ನಿತರ ಶೈಕ್ಷಣಿಕ ಸಾಮಾಗ್ರಿಗಳನ್ನು ವಿತರಿಸಿದರು. ಈ ಸಂದರ್ಭ ಶಾಲೆಯ ಅಧ್ಯಾಪಕರು, ವಿದ್ಯಾರ್ಥಿಗಳು ಹಾಜರಿದ್ದರು. ವರದಿ : ನೌಫಲ್ 

Read More

ಸೋಮವಾರಪೇಟೆ ಜೂ.10 NEWS DESK : ಸೋಮವಾರಪೇಟೆ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿರುವ ವೈದ್ಯರ ಕೊರತೆಯನ್ನು ಖಂಡಿಸಿ ಇಂದು ಬಿಜೆಪಿ ಪ್ರತಿಭಟನೆ ನಡೆಸಿತು. ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ನೇಮಕಕ್ಕೆ ಒತ್ತಾಯಿಸಿ ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಮೆರವಣಿಗೆಯಲ್ಲಿ ತೆರಳಿ ತಹಶೀಲ್ದಾರ್ ನವೀನ್ ಕುಮಾರ್ ಅವರಿಗೆ ಮನವಿ ಸಲ್ಲಿಸಲು ಮುಂದಾದರು. ತಡವಾಗಿ ಹೊರಬಂದ ತಹಶೀಲ್ದಾರ್ ವಿರುದ್ಧ ಅಸಮಾಧಾನ ಹೊರಹಾಕಿದ ಪ್ರತಿಭಟನಾಕಾರರು ವೈದ್ಯರ ನೇಮಕಕ್ಕೆ ಒಂದು ವಾರದ ಗಡುವು ನೀಡಿದರು. ಈ ಸಂದರ್ಭ ಮಾತನಾಡಿದ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಎಸ್.ಜಿ.ಮೆದಪ್ಪ ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಹಲವು ಸಮಯಗಳಿಂದ ವೈದ್ಯರುಗಳಿಲ್ಲದೆ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ.ಇರುವ ವೈದ್ಯರು ಆಸ್ಪತ್ರೆಗೆ ಬರುವ ರೋಗಿಗಳನ್ನು ಮಡಿಕೇರಿ, ಮೈಸೂರು ಹಾಗೂ ಮಂಗಳೂರಿಗೆ ಕಳುಹಿಸುತ್ತಿದ್ದಾರೆ. ಇದರಿಂದ ಬಡ ರೋಗಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಇದೆಲ್ಲಾ ಅರಿವಿದ್ದರೂ ಸ್ವತಃ ವೈದ್ಯರಾಗಿರುವ ಶಾಸಕರು ನಿರ್ಲಕ್ಷ್ಯ ಭಾವನೆ ತೋರುತಿದ್ದಾರೆ ಎಂದು ಆರೋಪಿಸಿದರು. ಸುತ್ತಮುತ್ತಲೂ ಗುಡ್ಡಗಾಡು ಪ್ರದೇಶ ಆಸ್ಪತ್ರೆಗೆ ದಿನನಿತ್ಯ ನೂರಾರು ಮಂದಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬರುತ್ತಾರೆ…

Read More