ಕೂಡಿಗೆ ಜೂ.22 NEWS DESK : ಯೋಗವು ಮಾನವನ ದೇಹವನ್ನು ಶಾರೀರಿಕವಾಗಿ, ಆಧ್ಯಾತ್ಮಿಕವಾಗಿ, ಬೌದ್ಧಿಕವಾಗಿ ಸಯೋಜನೆಗೊಳಿಸಿ ಸಮತೋಲನದಲ್ಲಿರಿಸಿ ಮನುಷ್ಯನನ್ನು ರೋಗಮುಕ್ತಗೊಳ್ಳುತ್ತದೆ ಎಂದು ಸದ್ಗುರು ಅಪ್ಪಯ್ಯ ಸ್ವಾಮಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಪುಷ್ಪ ಹೇಳಿದರು. ಕೂಡಿಗೆಯ ಸದ್ಗುರು ಅಪ್ಪಯ್ಯ ಸ್ವಾಮಿ ಪ್ರೌಢಶಾಲಾ ಸಭಾಂಗಣದಲ್ಲಿ ಏರ್ಪಡಿಸಿದ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶಾದ್ಯಂತ ಪ್ರಪಂಚದಾದ್ಯಂತ ಯೋಗ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಯೋಗ ಕೇವಲ ಒಂದು ದಿನಕ್ಕೆ ಸೀಮಿತವಾಗದೆ ನಿತ್ಯದ ದಿನಚರಿಯಾಗಬೇಕು. ಯೋಗದಿಂದ ಮಾನಸಿಕ ದೈಹಿಕವಾಗಿ ಸದೃಢವಾಗುವುದರ ಮೂಲಕ ಸ್ವಾಸ್ಥ ಸಮಾಜ ನಿರ್ಮಾಣಕ್ಕೆ ನಾಂದಿಯಾಗುತ್ತದೆ ಎಂದು ತಿಳಿಸಿದರು. ಶಿಕ್ಷಕ ಸೋಮಯ್ಯ ಮಾತನಾಡಿ. ಊಟ ಬಲ್ಲವನಿಗೆ ರೋಗವಿಲ್ಲ ಮಾತು ಬಲ್ಲವನಿಗೆ ಜಗಳವಿಲ್ಲ ಎಂಬ ಹಿರಿಯರ ನಾನ್ನುಡಿಯಂತೆ ಯೋಗ ಮತ್ತು ಧ್ಯಾನ ಮಾಡುವುದರಿಂದ ಸದೃಢ ಆರೋಗ್ಯವಂತ ಜೀವನ ನಡೆಸಬಹುದು ಎಂಬ ಸತ್ಯವನ್ನು ಅರಿತು ಪ್ರತಿದಿನವೂ ಯೋಗ ಮಾಡಿ ರೋಗ ರುಜಿನಗಳಿಂದ ದೂರವಿದ್ದು, ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು. ಶಾಲಾ ಶಿಕ್ಷಕಿ ಕುಸುಮ ಮಾತನಾಡಿ, ವಿಶ್ವಕ್ಕೆ ಯೋಗ ಮತ್ತು…
ಲೇಖಕ: admin
ಸುಂಟಿಕೊಪ್ಪ ಜೂ.22 NEWS DESK : ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜು ಆವರಣದಲ್ಲಿ ಕಾಲೇಜು ವಿದ್ಯಾರ್ಥಿಗಳು ವಿವಿಧ ಯೋಗಾಸನ ಮಾಡಿ ಗಮನ ಸೆಳೆದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯರಾದ ಶ್ರೀಲತಾ ಯೋಗಭ್ಯಾಸದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಹೇಳಿದರು. ವಿದ್ಯಾರ್ಥಿಗಳು ದೈಹಿಕ, ಮಾನಸಿಕವಾಗಿ ಸದೃಢರಾಗಿ ಹಾಗೂ ಏಕಾಗ್ರತೆಯನ್ನು ಸಾಧಿಸಲು ಪ್ರತಿದಿನ ಯೋಗಭ್ಯಾಸ ಮಾಡುವುದು ಒಳಿತು ಎಂದರು. ಸ್ವಸ್ಥ ಸಮಾಜ ನಿರ್ಮಾಣಕ್ಕೆ ಯೋಗಭ್ಯಾಸವು ಇಂದಿನ ದಿನಮಾನಗಳಲ್ಲಿ ಅಗತ್ಯವಾಗಿದೆ ಎಂದು ನುಡಿದರು. ಮಾರ್ಗದರ್ಶಕರಾದ ಅಭಿಷೇಕ್ ಮಾತನಾಡಿ ದೇಹ ಮನಸ್ಸನ್ನು ಸಂಯೋಜಿಸುವ ಶೇಷ್ಠ ವಿದ್ಯೆಯೇ ಯೋಗಭ್ಯಾಸ ಎಂದು ನುಡಿದ ಅವರು ಪತಂಜಲಿ ಮಹರ್ಷಿಯ ಕೊಡುಗೆಯನ್ನು ಧನ್ಯತಾ ಭಾವದಿಂದ ಸ್ಮರಿಸಿದರು. ರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ತುತ್ತಾಗಿ ಯೋಗಭ್ಯಾಸದ ದಿನಾಚರಣೆಯನ್ನು ಅಳವಡಿಸಿಕೊಳ್ಳಬೇಕಾಗಿರುವುದರ ಮಹತ್ವ ತಿಳಿಸಿದರು. ನಂತರ ವಿದ್ಯಾರ್ಥಿಗಳಿಗೆ ವೃಕ್ಷಾಸನ, ತಾಡಾಸನ, ವಜ್ರಾಸನ, ಕಪಾಲಭಾತಿ, ಸೂರ್ಯನಮಸ್ಕಾರ ಇತ್ಯಾದಿ ಕೆಲವು ಸರಳ ಆಸನಗಳನ್ನು ಮಾಡಿ ತೋರಿಸಿ, ವಿದ್ಯಾರ್ಥಿಗಳು ಅನುಸರಿಸುವಂತೆ ಹೇಳಿದರು.
ಮಡಿಕೇರಿ ಜೂ.22 NEWS DESK : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಉದ್ಯೋಗಮೇಳವು ಜೂ.27 ರಂದು ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ‘ನಡೆಯಲಿದೆ. ಉದ್ಯೋಗ ಮೇಳದಲ್ಲಿ ಪ್ಯಾಲೇಸ್ ಟೊಯಾಟೋ, ಕುಶಾಲನಗರ, ಅಟೋಲೈವ್ ಮಲ್ಟಿನ್ಯಾಷನಲ್ ಕಂಪನಿ, ಮೈಸೂರು, ಕ್ಲಬ್ ಮಹೀಂದ್ರ, ಮಡಿಕೇರಿ, ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ಪೆಂಟಟೆಕ್, ಮಡಿಕೇರಿ, ಕಾವೇರಿ ಹೋಂಡಾ, ಕುಶಾಲನಗರ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ. ಅಭ್ಯರ್ಥಿಗಳು ಸ್ವಯಂ-ವಿವರ (ಬಯೋಡೇಟಾ)ಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ರೇಖಾ ಗಣಪತಿ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ, ಈ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ…
ಮಡಿಕೇರಿ ಜೂ.21 NEWS DESK : ಸಿದ್ದಾಪುರದ ಕಾಫಿ ತೋಟ ಸೇರಿದಂತೆ ಕೊಡಗು ಜಿಲ್ಲೆಯಾದ್ಯಂತ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ತಕ್ಷಣ ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿ ಜೂ.24 ರಂದು ಗೋಣಿಕೊಪ್ಪ ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಸಿಎನ್ಸಿ ವತಿಯಿಂದ ಸೋಮವಾರ ಬೆಳಿಗ್ಗೆ 10.30 ಗಂಟೆಗೆ ಶಾಂತಿಯುತ ಮಾನವ ಸರಪಳಿ ನಿರ್ಮಿಸಿ ಕೊಡವ ಲ್ಯಾಂಡ್ ನ ರಕ್ಷಣೆಗಾಗಿ ಹಕ್ಕೊತ್ತಾಯ ಮಂಡಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಭೂಮಾಫಿಯಾಗಳು ಹಾಗೂ ರಾಜಕೀಯ ಬೆಂಬಲಿತರು ಕೊಡಗಿನ ಕಾವೇರಿ ಜಲಾನಯನ ಪ್ರದೇಶದ ಭೂಮಿಗಳನ್ನು ದೊಡ್ಡ ಮಟ್ಟದಲ್ಲಿ ಖರೀದಿಸುತ್ತಿದ್ದು, ಕಪ್ಪು ಹಣದ ಚಲಾವಣೆಯಾಗುತ್ತಿದೆ. ಬೃಹತ್ ಕಾಫಿ ತೋಟಗಳ ಖರೀದಿಯ ನಂತರ ಅಕ್ಕಪಕ್ಕದ ಸಣ್ಣ ಹಿಡುವಳಿದಾರರ ಭೂಮಿಯನ್ನು ಹಣದ ಆಮಿಷವೊಡ್ಡಿ ಕಬಳಿಸಲಾಗುತ್ತಿದೆ. ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ಮೂಲಕ ರೆಸಾರ್ಟ್ಗಳು, ದೈತ್ಯಾಕಾರದ ವಿಲ್ಲಾಗಳು, ಲೇಔಟ್ ಗಳು, ಮನೆಗಳು ಟೌನ್ ಶಿಪ್ ಗಳು, ವಾಣಿಜ್ಯ…
ಸೋಮವಾರಪೇಟೆ ಜೂ.21 NEWS DESK : ಸೋಮವಾರಪೇಟೆಯ ನಿರಂತರ ಯೋಗ ಕೇಂದ್ರ, ಜೇಸಿಐ ಸೋಮವಾರಪೇಟೆ ಪುಷ್ಪಗಿರಿ ,ಒಕ್ಕಲಿಗರ ಪ್ರಗತಿಪರ ಮಹಿಳಾ ವೇದಿಕೆ, ಆಯುಷ್ ಇಲಾಖೆ, ಜ್ಞಾನವಿಕಾಸ ಆಂಗ್ಲ ಮಾಧ್ಯಮ ಶಾಲೆ ಹಾಗು ಯೋಗ ಕರ್ಮಸ್ಯ ಕೌಶಲ ಕೇಂದ್ರ ವತಿಯಿಂದ ಸೋಮವಾರಪೇಟೆಯ ಮಾನಸ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು. ದಿನದ ಮಹತ್ವದ ಕುರಿತು ಯೋಗ ಶಿಕ್ಷಕರಾದ ಕಿಬ್ಬೆಟ್ಟ ಗಣೇಶ್, ಪ್ರಶಾಂತ್ ಹಾಗು ಆಯುಷ್ ಇಲಾಖೆ ವೈದ್ಯರಾದ ಶ್ವೇತಾ ಮಾತನಾಡಿದರು.
ಸೋಮವಾರಪೇಟೆ ಜೂ.21 NEWS DESK : ಶಾಲಾ ಶಿಕ್ಷಣ ಇಲಾಖೆ ಜಂಟಿ ನಿರ್ದೆಶಕರಾದ ಗೀತಾಂಬ ಅವರು ಸೋಮವಾರಪೇಟೆ ತಾಲೂಕಿನ ಸರಕಾರಿ ಪದವಿಪೂರ್ವ ಕಾಲೇಜಿನ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು. ನಂತರ ನೇರುಗಳಲೆ ಸರಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಶಾಲಾ ಶೈಕ್ಷಣಿಕ ಪ್ರಗತಿಯನ್ನು ಪರಿಶೀಲಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭ ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ, ಸಂಪನ್ಮೂಲ ಸಮನ್ವಯಾಧಿಕಾರಿ ಹೇಮಂತ್ ಇದ್ದರು.
ಸೋಮವಾರಪೇಟೆ ಜೂ.21 NEWS DESK : ಶಾಲಾ ಶಿಕ್ಷಣ ಇಲಾಖೆ, ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆ, ಸರಕಾರಿ ಪದವಿಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗ, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಇಲ್ಲಿನ ಸಿಂಥೆಟಿಕ್ ಟರ್ಫ್ ಮೈದಾನದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳು ಯೋಗಾಭ್ಯಾಸ ಮಾಡಿದರು. ವಿಶ್ವ ಯೋಗ ದಿನದ ಮಹತ್ವದ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ ಮಾತನಾಡಿ, ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯಕ್ಕೆ ಯೋಗ ಸಹಕಾರಿ. ವಿದ್ಯಾರ್ಥಿಗಳು ನಿರಂತರವಾಗಿ ಯೋಗಾಭ್ಯಾಸ ಮಾಡುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು. ಯೋಗದ ಪ್ರಯೋಜನ ಕುರಿತು ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಬೆಳ್ಯಪ್ಪ, ಉಪನ್ಯಾಸಕಿ ತಿಲೋತ್ತಮೆ ಮಾತನಾಡಿದರು. ಕುವೆಂಪು ವಿದ್ಯಾಸಂಸ್ಥೆಯ ಬಿಟಿಸಿಜಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲರಾದ ಮಿಲ್ಡ್ರೆಡ್ ಗೋನ್ಸಾಲ್ವೇಸ್, ತಾಲೂಕು ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಗೋವಿಂದೇಗೌಡ ಇದ್ದರು.
ಸೋಮವಾರಪೇಟೆ ಜೂ.21 NEWS DESK : ಆಕಸ್ಮಿಕ ಬೆಂಕಿಯಿಂದ ಮನೆಯೊಂದು ಹೊತ್ತಿ ಉರಿದಿರುವ ಘಟನೆ ಶುಕ್ರವಾರ ಮಧ್ಯಾಹ್ನ ಹಾನಗಲ್ಲು ಬಾಣೆಯಲ್ಲಿ ಸಂಭವಿಸಿದೆ. ಲೀಲಾವತಿ ಎಂಬವರಿಗೆ ಸೇರಿದ ಮನೆಯಾಗಿದ್ದು, ಸೊಸೆಯೊಂದಿಗೆ ವಾಸವಾಗಿದ್ದರು. ಸೊಸೆ ಪಟ್ಟಣಕ್ಕೆ ತೆರಳಿದ್ದಾಗ, ಲೀಲಾವತಿ ಅವರು ಮನೆಯ ಹೊರಗೆ ಕೆಲಸ ಮಾಡುತ್ತಿದ್ದ ಸಂದರ್ಭ ಇದ್ದಕ್ಕಿದ್ದಂತೆ ಮನೆಗೆ ಬೆಂಕಿ ಹತ್ತಿಕೊಂಡಿದೆ. ಟಿ.ವಿ. ಫ್ರಿಡ್ಜ್, ಬಟ್ಟೆ ಇತರ ಸಾಮಾಗ್ರಿಗಳು ಸುಟ್ಟ ಹೋಗಿವೆ. ತುಂಬ ಹಳೆಯದಾದ ಹೆಂಚಿನ ಮನೆಯಾಗಿದ್ದು, ಮರಮುಟ್ಟುಗಳು ಗೆದ್ದಲು ಹಿಡಿದಿದ್ದ ಪರಿಣಾಮ, ಬೇಗನೆ ಬೆಂಕಿ ಹತ್ತಿಕೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದರು. ಸ್ಥಳಕ್ಕೆ ಆಗ್ನಿಶಾಮಕ ದಳದ ಸಿಬ್ಬಂದಿ ತೆರಳಿ ಬೆಂಕಿಯನ್ನು ಆರಿಸಿದ್ದಾರೆ. ಅನಾಹುತಕ್ಕೆ ಕಾರಣ ತಿಳಿದು ಬಂದಿಲ್ಲ. ಸೋಮವಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮಡಿಕೇರಿ ಜೂ.21 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಪ್ರತಿಕೃತಿಯನ್ನು ರಾಜಕೀಯ ದುರುದ್ದೇಶದಿಂದ ದಹಿಸಿದ ಬಿಜೆಪಿ ಮಂದಿ ಬಹಿರಂಗ ಕ್ಷಮೆಯಾಚಿಸಬೇಕು ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಜಾಲತಾಣದ ಜಿಲ್ಲಾ ಉಪಾಧ್ಯಕ್ಷ ಆರ್.ಪಿ.ಚಂದ್ರಶೇಖರ್ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಯಾವುದೇ ಕಾರಣವಿಲ್ಲದೆ ಪೊನ್ನಣ್ಣ ಅವರ ಪ್ರತಿಕೃತಿ ದಹಿಸಿದ ಪ್ರಕರಣ ಹಿಂದೆ ರಾಜಕೀಯ ದುರುದ್ದೇಶ ಇರುವುದು ಸ್ಪಷ್ಟವಾಗಿದೆ. ಶುದ್ಧ ರಾಜಕಾರಣದಿಂದ ಜನರ ಮನಗೆದ್ದು ಪೊನ್ನಣ್ಣ ಅವರನ್ನು ರಾಜಕೀಯವಾಗಿ ಎದುರಿಸಲಾಗದವರು ಪ್ರತಿಕೃತಿ ದಹಿಸಿ ವಿಕೃತಿ ಮೆರೆದಿದ್ದಾರೆ ಎಂದು ಆರೋಪಿಸಿದ್ದಾರೆ. ಸಾಮಾಜಿಕ ಕಳಕಳಿ ಇರುವ ಉತ್ತಮ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಪೊನ್ನಣ್ಣ ಅವರನ್ನು ಇಡೀ ರಾಜ್ಯದ ರಾಜಕೀಯ ಕ್ಷೇತ್ರವೇ ಗೌರವದಿಂದ ಕಾಣುತ್ತಿದೆ. ಆದರೆ ಅವರ ತವರು ಜಿಲ್ಲೆಯಲ್ಲೇ ಬಿಜೆಪಿ ಮಂದಿ ಅಗೌರವ ತೋರುವ ಮೂಲಕ ಕೊಡಗಿನ ಜನರನ್ನು ಅವಮಾನಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎ.ಎಸ್.ಪೊನ್ನಣ್ಣ ಅವರು ತಮ್ಮ ದಕ್ಷ ಆಡಳಿತ ಮತ್ತು…
ಮಡಿಕೇರಿ ಜೂ.21 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಹಾಗೂ ಸದಸ್ಯರಾದ ಚಂದ್ರಶೇಖರ ಪೆರಾಲು, ತೇಜಕುಮಾರ್ ಕುಡೆಕಲ್, ಚಂದ್ರಾವತಿ ಬಡ್ಡಡ್ಕ, ಲತಾ ಕುದ್ಪಾಜೆ, ಪಿ.ಎಸ್.ಕಾರ್ಯಪ್ಪ, ಡಾ.ಎನ್.ಎ.ಜ್ಞಾನೇಶ್ ಅವರು ಬೆಂಗಳೂರಿನಲ್ಲಿ ಭೇಟಿ ಮಾಡಿ ಪುಷ್ಪಗುಚ್ಛ ನೀಡಿದರು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಎರಡು ಅಕಾಡೆಮಿಗಳ ಅಧ್ಯಕ್ಷರು ಮತ್ತು ಸದಸ್ಯರನ್ನು ಅಭಿನಂದಿಸಿದರು. ಕೊಡಗು ಜಿಲ್ಲೆಯಲ್ಲಿ ಎರಡು ಅಕಾಡೆಮಿಗಳನ್ನು ಉತ್ತುಂಗಕ್ಕೆ ಕೊಂಡೊಯ್ಯುವಲ್ಲಿ ಶ್ರಮಿಸುವಂತೆ ಪೊನ್ನಣ್ಣ ಸಲಹೆ ನೀಡಿದರು. ಕೊಡವ ಮತ್ತು ಅರೆಭಾಷೆಗಳಿಗೆ ತನ್ನದೇ ಆದ ಇತಿಹಾಸ ಮತ್ತು ವೈವಿಶಿಷ್ಟತೆ ಇದ್ದು, ಕೊಡವ ಮತ್ತು ಅರೆಭಾಷೆ ಬೆಳವಣಿಗೆಗೆ ಹೆಚ್ಚಿನ ಪರಿಶ್ರಮ ಅಗತ್ಯ. ಆ ನಿಟ್ಟಿನಲ್ಲಿ ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಕಾರ್ಯ ಪ್ರವೃತ್ತರಾಗುವಂತೆ ಶಾಸಕರು ಸಲಹೆ ನೀಡಿದರು.






