ಕುಶಾಲನಗರ ಜು.27 NEWS DESK : ಪತ್ರಿಕಾರಂಗ ನೈಜ ಸಮಸ್ಯೆಗಳ ವಸ್ತು ಸ್ಥಿತಿ ವಿಚಾರಗಳನ್ನು ಪ್ರಕಟಿಸುವ ಮೂಲಕ ಕಾರ್ಯಾಂಗದ ಕಿವಿ ಹಿಂಡುವ ಮೂಲಕ ಸಮಾಜದ ಅಭಿವೃದ್ಧಿಯಲ್ಲಿ ಸಮಗ್ರ ಪಾತ್ರ ವಹಿಸುತ್ತಿವೆ ಎಂದು ಕುಶಾಲನಗರ ತಾಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ ಅಭಿಪ್ರಾಯಪಟ್ಟಿದ್ದಾರೆ. ಕುಶಾಲನಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆದ ಪತ್ರಿಕಾ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಮಸ್ಯೆಗಳನ್ನು ಮತ್ತು ವಸ್ತುಸ್ಥಿತಿ ವಿಚಾರಗಳನ್ನು ಅರಿತು ನೈಜ ಸುದ್ಧಿಯಾಗಿ ಪ್ರಕಟಿಸಿದಲ್ಲಿ ಸಮಸ್ಯೆಗಳಿಗೆ ಪರಿಹಾರ ಕಾಣುವ ಮೂಲಕ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಅನುವು ಮಾಡಿದಂತಾಗುತ್ತದೆ ಎಂದರು. ಈ ಸಂದರ್ಭ ಮಾತನಾಡಿದ ಅವರು ಕುಶಾಲನಗರ ತಾಲೂಕು ಪತ್ರಕರ್ತರ ಕಾರ್ಯವೈಖರಿ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕುಶಾಲನಗರ ಪುರಸಭೆ ಮುಖ್ಯ ಅಧಿಕಾರಿ ಕೃಷ್ಣಪ್ರಸಾದ್ ಮಾತನಾಡಿ ನಾಲ್ಕನೇ ಅಂಗವಾದ ಪತ್ರಿಕಾ ರಂಗ ಸಮಾಜದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಸುದ್ದಿ ಮಾಡುವ ಭರಾಟೆಯ ನಡುವೆ ಸತ್ಯಾಸತ್ಯತೆ ಬಗ್ಗೆ ಕೂಡ ಅವಲೋಕನ ಮಾಡಬೇಕಾಗಿದೆ ಎಂದರು.…
ಲೇಖಕ: admin
ಸುಂಟಿಕೊಪ್ಪ ಜು.27 NEWS DESK : 7ನೇ ಹೊಸಕೋಟೆ ಕಲ್ಲುಕೋರೆಯ ಜನಾರ್ಧನ ಪೂಜಾರಿ ಎಂಬವರ ಮನೆಯ ಮೇಲೆ ಮರ ಬಿದ್ದ ಪರಿಣಾಮ ಮನೆಯ ಮೇಲ್ಚಾವಣಿ ಹಾಗೂ ಗೃಹ ಉಪಯೋಗಿ ವಸ್ತುಗಳು ಹಾನಿಗೊಂಡಿದೆ. ಕೂಡಲೇ 7ನೇ ಹೊಸಕೋಟೆ ಮತ್ತು ಕಲ್ಲುಕೋರೆ ನಿವಾಸಿಗಳು ಹಾಗೂ ಅಕ್ಕ ಪಕ್ಕದ ನಿವಾಸಿಗಳು ಆಗಮಿಸಿ ಮನೆಯ ಹೆಂಚುಗಳನ್ನು ಅಳವಡಿಸಿ ಮನೆಯನ್ನು ದುರಸ್ತಿ ಪಡಿಸುವಲ್ಲಿ ನೆರವಾದರು.
ಸುಂಟಿಕೊಪ್ಪ ಜು.27 NEWS DESK : ಜಿಲ್ಲೆಯಲ್ಲಿ ವರುಣನ ಆರ್ಭಟ ಕೊಂಚ ಮಟ್ಟಿಗೆ ಇಳಿಮುಖಗೊಂಡಿದ್ದರೂ ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯಲ್ಲಿ ಹಾನಿ ಪ್ರಮಾಣ ಹೆಚ್ಚಾಗುತ್ತಿದೆ. ಸುಂಟಿಕೊಪ್ಪ ಗ್ರಾಮ ಪಂಚಾಯತಿಗೆ ಸೇರಿದ ಪಂಪ್ ಹೌಸ್ ರಸ್ತೆಯ ನಿವಾಸಿ ಸುಲೈಕ ಎಂಬವರ ವಾಸದ ಮನೆಯು ಭಾಗಶಃ ಕುಸಿದು ಬಿದ್ದು ಹಾನಿಯಾಗಿದೆ. ಸ್ಥಳಕ್ಕೆ ಗ್ರಾಮ ಪಂಚಾಯತಿ ಸದಸ್ಯ ಪ್ರಸಾದ್ ಕುಟ್ಟಪ್ಪ ಸ್ಥಳಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದರು. ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿ ನಾಗೇಂದ್ರ ಭೇಟಿ ನೀಡಿದರು.
ಹರಿಹರ ಜು 27 NEWS DESK : ಸರ್ಕಾರ ಮತ್ತು ಸಂಘಟನೆ ಒಟ್ಟಿಗೆ ಹೋದಾಗ ಪತ್ರಕರ್ತರ ಸಮಸ್ಯೆಗಳಿಗೆ ಪರಿಹಾರ ಸಾಧ್ಯ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ತಾಲ್ಲೂಕು ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಶ್ರೀಮಂತರ ಮನೆಯ ಮಕ್ಕಳು ಪತ್ರಿಕಾ ವೃತ್ತಿಗೆ ಬರುವುದು ಕಡಿಮೆ. ಉಳಿದ ಎಲ್ಲಾ ವರ್ಗದ ಜನತೆ ಸರ್ಕಾರದ ಸವಲತ್ತುಗಳನ್ನು ಕೇಳಿ ಪಡೆದುಕೊಳ್ಳುವ ಹಾಗೆಯೇ, ಪತ್ರಕರ್ತರೂ ಕೂಡ ಸರ್ಕಾರದ ಕಾರ್ಯಕ್ರಮಗಳನ್ನು ತಮ್ಮ ಹಕ್ಕು ಎಂದು ಭಾವಿಸಿ ಪಡೆದುಕೊಳ್ಳಬೇಕು ಎಂದರು. ಕೋವಿಡ್ ಸಂದರ್ಭದಲ್ಲಿ ಪತ್ರಕರ್ತರು ಅನುಭವಿಸಿದ ಸಂಕಷ್ಟಗಳನ್ನು ನಾನು ಹತ್ತಿರದಿಂದ ಗಮನಿಸಿದ್ದೇನೆ. ಆದ್ದರಿಂದ ಸರ್ಕಾರದ ಜನಪರ ಕಾರ್ಯಕ್ರಮಗಳ ಅನುಕೂಲ ಪಡೆದುಕೊಳ್ಳಲು ಪತ್ರಕರ್ತರು ಹಿಂಜರಿಯಬಾರದು ಎಂದರು. ದಾವಣಗೆರೆ ಪತ್ರಕರ್ತರ ಸಮ್ಮೇಳನದ ಫಲಪ್ರದದಿಂದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸಿಗುವಂತಾಗಿದೆ. ಕಾರ್ಯನಿರತ ಮತ್ತು ಕಾರ್ಯಮರೆತ ಪತ್ರಕರ್ತರಿಬ್ಬರೂ ಬಸ್ ಪಾಸ್ ಕೇಳುತ್ತಿದ್ದಾರೆ. ಇದು ಸಾಧ್ಯವಿಲ್ಲ. ಏಕೆಂದರೆ ಸರ್ಕಾರದ ಸವಲತ್ತು ದುರುಪಯೋಗ ಆಗಬಾರದು. ಈ ಬಗ್ಗೆ ಪತ್ರಕರ್ತರೂ ಸ್ವಯಂ ತೀರ್ಮಾನ ಮಾಡಿಕೊಳ್ಳಬೇಕು ಎಂದರು. ತಾಲ್ಲೂಕು…
ವಿರಾಜಪೇಟೆ ಜು.27 NEWS DESK : ಭಾರಿ ಮಳೆಗೆ ಬೈರಂಬಾಡ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡದ ಮೇಲೆ ಉರುಳಿ ಬಿದ್ದಿದ್ದ ಬೃಹತ್ ಗಾತ್ರದ ಮರವನ್ನು ಬೈರಂಬಾಡ ಗ್ರಾಮಸ್ಥರು ತೆರವುಗೊಳಿಸಿದರು. ಕ್ರೇನ್ ಕೇಬಲ್ ಗಳ ಬಳಕೆ ಮಾಡಿದ್ದರೂ ಶಾಲಾ ಗೋಡೆಯಿಂದ ಸ್ವಲ್ಪ ಜರುಗಿದ ಮರವನ್ನು ಸುಲಭದಲ್ಲಿ ತೆರವುಗೊಳಿಸಲಾಗಲಿಲ್ಲ. ನಂತರಗ್ರಾಮಸ್ಥರ ಸಹಕಾರದಿಂದ ಮರವನ್ನು ನೆಲಕುರುಳಿಸಲಾಯಿತು. ಈ ಸಂದರ್ಭ ಹಾಲುಗುಂದ ಗ್ರಾ.ಪಂ ಅಧ್ಯಕ್ಷ ಪಂಡಿಕಂಡ ದಿನೇಶ್, ಸದಸ್ಯರಾದ ಪೂವಯ್ಯ, ಶಾಲಾ ಮುಖ್ಯ ಶಿಕ್ಷಕಿ ಪದ್ಮ, ಶಿಕ್ಷಕಿ ಪ್ರತಿಮಾ ಹಾಗೂ ಗ್ರಾಮಸ್ಥರು ಹಾಜರಿದ್ದರು.
ಸೋಮವಾರಪೇಟೆ ಜು.27 NEWS DESK : ದೇವಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ಅಂಗವಾಗಿ ಪಟ್ಟಣದ ಬಸವೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ನಡೆಯಿತು. ಚಾಮುಂಡೇಶ್ವರಿ ಭಜನಾ ಮಂಡಳಿ ವತಿಯಿಂದ ದೇವಾಲಯದಲ್ಲಿ ಆಷಾಡ ಮಾಸದ ಅಂಗವಾಗಿ ಪ್ರತಿ ಶುಕ್ರವಾರವೂ ದೇವಿಗೆ ವಿಶೇಷ ಪೂಜೆ ನಡೆಯುತ್ತಿದೆ. ಇಂದು ಚಾಮುಂಡೇಶ್ವರಿ ದೇವಿಯ ವರ್ಧಂತಿ ಮಹೋತ್ಸವ ಅಂಗವಾಗಿ ಅರ್ಚಕ ಮೋಹನಮೂರ್ತಿ ಶಾಸ್ತ್ರಿಗಳ ಪುರೋಹಿತ್ವದಲ್ಲಿ ಅಷ್ಟೋತ್ತರ, ಅರ್ಚನೆ ವಿಶೇಷ ಪೂಜೆ ಸೇರಿದಂತೆ ವಿಶೇಷ ಪೂಜೆ ನಡೆಯಿತು. ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ ನೆರವೇರಿತು. ಈ ಸಂದರ್ಭ ಭಜನಾ ಮಂಡಳಿಯ ಪ್ರಮುಖರುಗಳಾದ ನಾಗಮಣಿ ಯುವರಾಜ್, ಕವಿತಾ ಸಂಜಯ್, ಗೀತಾರಾಜ್, ಭಗವತಿ ದೇಶಮುಖ್, ಲತಾ ಮಂಜುನಾಥ್, ವೀರಶೈವ ಸಮಾಜದ ನಿರ್ದೇಶಕರುಗಳಾದ ಭಾಗ್ಯಶಡಾಕ್ಷರಿ, ಯುವರಾಜ್, ಯೋಗೇಶ್ ಹಾಗೂ ಮಂಜುನಾಥ್ ಮುಂತಾದವರು ಹಾಜರಿದ್ದರು.
ಮೈಸೂರು ಜು.27 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಸೂಕ್ತ ಕ್ರಮದ ಭರವಸೆ ನೀಡಿದರು.
ಮಡಿಕೇರಿ ಜು.27 NEWS DESK : ಕಾಗಿ೯ಲ್ ಕದನದಲ್ಲಿ ಹುತಾತ್ಮರಾದ 527 ಯೋಧರ ಸ್ಮರಣೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ 527 ಹಣತೆಗಳನ್ನು ಬೆಳಗಿಸುವ ಮೂಲಕ ವಿನೂತನವಾಗಿ ಕಾಗಿ೯ಲ್ ವಿಜಯ ದಿನವನ್ನು ಭಾವನಾತ್ಮಕಾಗಿ ಆಚರಿಸಲಾಯಿತು. ನಗರದ ಗಾಂಧಿ ಭವನದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಆಯೋಜಿತ ಕಾಯ೯ಕ್ರಮದಲ್ಲಿ ಸಾವ೯ಜನಿಕರೂ ಸೇರಿದಂತೆ ರೋಟರಿ ಸದಸ್ಯರು 527 ಹಣತೆಗಳನ್ನು ಬೆಳಗಿಸಿದರು, ಕಾಗಿ೯ಲ್ ಸಮರದಲ್ಲಿ ಭಾರತದ ಹೆಮ್ಮೆಯ 527 ಯೋಧರು 25 ವಷ೯ಗಳ ಹಿಂದೆ ಪ್ರಾಣತ್ಯಾಗ ಮಾಡಿದ್ದರು, ಈ ಯೋಧರ ತ್ಯಾಗಬಲಿದಾನದ ಸ್ಮರಣೆಯಲ್ಲಿ 527 ಹಣತೆಗಳನ್ನು ಬೆಳಗಿಸಿ ಅವರನ್ನು ಸ್ಮರಿಸುವ ಪ್ರಯತ್ನ ಇದಾಗಿದೆ ಎಂದು ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪೊನ್ನಚ್ಚನ ಮಧುಸೂದನ್ ಹೇಳಿದರು. ಕಾಗಿ೯ಲ್ ವಿಜಯ್ ದಿವಸ್ ಅಂಗವಾಗಿ ಮಡಿಕೇರಿಯ ಮದ್ರಾಸ್ ರೆಜಿಮೆಂಟ್ ನಲ್ಲಿ 22 ವಷ೯ಗಳ ಕಾಲ ಸೇವೆ ಸಲ್ಲಿಸಿ ಅನೇಕ ಸೇವಾ ಮೆಡಲ್ ಗಳನ್ನು ಪಡೆದು ಸೇನೆಯಿಂದ ನಿವೖತ್ತರಾದ ಸೇನಾಧಿಕಾರಿ ಬಿ,ಕೆ, ಲೋಕೇಶ್ ಮತ್ತು ಪತ್ನಿ ಕಲ್ಪನ ಲೋಕೇಶ್ ಅವರನ್ನು ಮಿಸ್ಟಿ…
ಮಡಿಕೇರಿ ಜು.27 NEWS DESK : ಸರ್ಕಾರಿ ಕೆಲಸಕ್ಕೆ ಸೇರುವ ಪ್ರತಿಯೊಬ್ಬರು ಸರ್ಕಾರಿ ಕರ್ತವ್ಯ ಎಂದು ಭಾವಿಸದೆ ಅದನ್ನು ಜನರ ಸೇವೆ ಎಂದೇ ಪರಿಗಣಿಸಿ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಕಿವಿಮಾತು ಹೇಳಿದರು. ವಿಧಾನಸೌಧದಲ್ಲಿರುವ ಪೊನ್ನಣ್ಣ ಅವರ ಕಛೇರಿಗೆ ಆಡಳಿತಾತ್ಮಕ ಸಲಹೆ ಕೇಳಲು ಬಂದ ನೂತನವಾಗಿ ಪೋಲಿಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಅಭಿನಂದಿಸಿ ಅವರು ಮಾತನಾಡಿದರು. ಯಾವುದೇ ಸರ್ಕಾರಿ ಅಧಿಕಾರಿ ಕೆಲಸ ಆರಂಭಿಸುವಾಗ ಜನರ ಸೇವೆ ಮಾಡುತ್ತೇನೆ ಎಂಬ ಸಂಕಲ್ಪತೊಟ್ಟು ವೃತ್ತಿ ಆರಂಭಿಸಬೇಕು. ಸಾಮಾನ್ಯ ಜನರಿಗೆ ಅಧಿಕಾರಿಗಳೊಂದಿಗೆ ಹೇಗೆ ವರ್ತಿಸಬೇಕು ಎಂಬ ಜ್ಞಾನ ಪೂರ್ಣವಾಗಿ ಇರುವುದಿಲ್ಲ. ಹಾಗಾಗಿ ಅವರನ್ನು ಅರ್ಥೈಸಿಕೊಂಡು ಕೆಲಸ ಮಾಡಬೇಕು. ಆಗ ಮಾತ್ರ ಜನಾನುರಾಗಿ ಅಧಿಕಾರಿ ಎಂದು ಗುರುತಿಸಿಕೊಳ್ಳಲು ಸಾಧ್ಯ ಎಂದು ಪೊನ್ನಣ್ಣ ಸಲಹೆ ನೀಡಿದರು.
ಮಡಿಕೇರಿ ಜು.27 NEWS DESK : ಜಿಲ್ಲೆಯ ವಿವಿಧೆಡೆ ಮಳೆಯಿಂದ ಹಾನಿ ಉಂಟಾದ ಪ್ರದೇಶಗಳಿಗೆ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ಪರಿಶೀಲಿಸಿದರು. ವಿಧಾನಸಭಾ ಅಧಿವೇಶನ ಮುಕ್ತಾಯವಾದ ಬೆನ್ನಲ್ಲೇ ಜಿಲ್ಲೆಗೆ ಆಗಮಿಸಿ ಮಳೆಯಿಂದಾಗಿ ಅಪಾರ ಪ್ರಮಾಣದ ಹಾನಿಗೊಳಗಾದ ಬೇಳೂರು ಬಾಣೆ, ಸೂರ್ಲಬ್ಬಿ, ಜಂಬೂರು ಪುನರ್ವಸತಿ ಕೇಂದ್ರ, ಮಾದಾಪುರ, ಸೂರ್ಲಬ್ಬಿ ರಸ್ತೆ, ಶಾಂತಳ್ಳಿ ಗುಡ್ಡ ಕುಸಿತ ಪ್ರದೇಶಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ತ್ವರಿತ ಕ್ರಮಕ್ಕೆ ಸೂಚನೆ ನೀಡಿದರು.






