ಮಡಿಕೇರಿ ಜೂ.21 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಹಾಗೂ ಸದಸ್ಯರಾದ ಚಂದ್ರಶೇಖರ ಪೆರಾಲು, ತೇಜಕುಮಾರ್ ಕುಡೆಕಲ್, ಚಂದ್ರಾವತಿ ಬಡ್ಡಡ್ಕ, ಲತಾ ಕುದ್ಪಾಜೆ, ಪಿ.ಎಸ್.ಕಾರ್ಯಪ್ಪ, ಡಾ.ಎನ್.ಎ.ಜ್ಞಾನೇಶ್ ಅವರು ಬೆಂಗಳೂರಿನಲ್ಲಿ ಭೇಟಿ ಮಾಡಿ ಪುಷ್ಪಗುಚ್ಛ ನೀಡಿದರು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಎರಡು ಅಕಾಡೆಮಿಗಳ ಅಧ್ಯಕ್ಷರು ಮತ್ತು ಸದಸ್ಯರನ್ನು ಅಭಿನಂದಿಸಿದರು. ಕೊಡಗು ಜಿಲ್ಲೆಯಲ್ಲಿ ಎರಡು ಅಕಾಡೆಮಿಗಳನ್ನು ಉತ್ತುಂಗಕ್ಕೆ ಕೊಂಡೊಯ್ಯುವಲ್ಲಿ ಶ್ರಮಿಸುವಂತೆ ಪೊನ್ನಣ್ಣ ಸಲಹೆ ನೀಡಿದರು. ಕೊಡವ ಮತ್ತು ಅರೆಭಾಷೆಗಳಿಗೆ ತನ್ನದೇ ಆದ ಇತಿಹಾಸ ಮತ್ತು ವೈವಿಶಿಷ್ಟತೆ ಇದ್ದು, ಕೊಡವ ಮತ್ತು ಅರೆಭಾಷೆ ಬೆಳವಣಿಗೆಗೆ ಹೆಚ್ಚಿನ ಪರಿಶ್ರಮ ಅಗತ್ಯ. ಆ ನಿಟ್ಟಿನಲ್ಲಿ ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಕಾರ್ಯ ಪ್ರವೃತ್ತರಾಗುವಂತೆ ಶಾಸಕರು ಸಲಹೆ ನೀಡಿದರು.
ಲೇಖಕ: admin
ಮಡಿಕೇರಿ ಜೂ.21 NEWS DESK : `ನೀಟ್’ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಶಂಕೆ ಇದ್ದು, ಉನ್ನತ ಮಟ್ಟದ ತನಿಖೆ ನಡೆಸಬೇಕು ಮತ್ತು ಮರು ಪರೀಕ್ಷೆಯಾಗಬೇಕು ಎಂದು ಒತ್ತಾಯಿಸಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಇಂದಿರಾಗಾಂಧಿ (ಚೌಕಿ) ವೃತ್ತದಿಂದ ಮೆರವಣಿಗೆ ಮೂಲಕ ಸಾಗಿದ ಒಕ್ಕೂಟದ ಪ್ರಮುಖರು ಹಾಗೂ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಜಮಾಯಿಸಿ ಬೇಡಿಕೆಯ ಈಡೇರಿಕೆಗಾಗಿ ಘೋಷಣೆಗಳನ್ನು ಕೂಗಿ, ಮರು ಪರೀಕ್ಷೆ ನಡೆಸುವಂತೆ ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ ಒಕ್ಕೂಟದ ಜಿಲ್ಲಾಧ್ಯಕ್ಷ ಪಿ.ಎಂ.ಅಬ್ದುಲ್ ರಾಶೀದ್, ನೀಟ್ ಪರೀಕ್ಷೆಯ ಫಲಿತಾಂಶ ವಿವಾದಗಳಿಂದ ಕೂಡಿದ್ದು, ಭಾರೀ ಅಕ್ರಮ ನಡೆದಿರುವ ಸಾಧ್ಯತೆ ಇದೆ. ನೀಟ್ ಪರೀಕ್ಷೆಯ ಪಶ್ನೆ ಪತ್ರಿಕೆ ಸೋರಿಕೆ ಹಾಗೂ ವಿವಾದಾತ್ಮಾಕ ಫಲಿತಾಂಶದ ಕಾರಣದಿಂದ ದೇಶದ ಲಕ್ಷಾಂತರ ವೈದ್ಯಕೀಯ ಸೀಟ್ ಆಕಾಂಕ್ಷಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು. ಕಳೆದ ಸಾಲಿನ ನೀಟ್ ಪರೀಕ್ಷೆಯಲ್ಲಿ ಮೊದಲ ರ್ಯಾಂಕ್ ಬೆರಳೆಣಿಕೆಯ ವಿದ್ಯಾರ್ಥಿಗಳಿಗೆ ಬಂದಿದ್ದರೆ, ಈ ಬಾರಿ ಒಟ್ಟು 67 ವಿದ್ಯಾರ್ಥಿಗಳಿಗೆ ಮೊದಲ…
ಮಡಿಕೇರಿ ಜೂ.21 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಹಾಗೂ ಸದಸ್ಯರಾದ ಚಂದ್ರಶೇಖರ ಪೆರಾಲು, ತೇಜಕುಮಾರ್ ಕುಡೆಕಲ್, ಚಂದ್ರಾವತಿ ಬಡ್ಡಡ್ಕ, ಲತಾ ಕುದ್ಪಾಜೆ, ಪಿ.ಎಸ್.ಕಾರ್ಯಪ್ಪ, ಡಾ.ಎನ್.ಎ.ಜ್ಞಾನೇಶ್ ಅವರು ಬೆಂಗಳೂರಿನಲ್ಲಿ ಭೇಟಿ ಮಾಡಿ ಪುಷ್ಪಗುಚ್ಛ ನೀಡಿದರು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಎರಡು ಅಕಾಡೆಮಿಗಳ ಅಧ್ಯಕ್ಷರು ಮತ್ತು ಸದಸ್ಯರನ್ನು ಅಭಿನಂದಿಸಿದರು. ಕೊಡಗು ಜಿಲ್ಲೆಯಲ್ಲಿ ಎರಡು ಅಕಾಡೆಮಿಗಳನ್ನು ಉತ್ತುಂಗಕ್ಕೆ ಕೊಂಡೊಯ್ಯುವಲ್ಲಿ ಶ್ರಮಿಸುವಂತೆ ಪೊನ್ನಣ್ಣ ಸಲಹೆ ನೀಡಿದರು. ಕೊಡವ ಮತ್ತು ಅರೆಭಾಷೆಗಳಿಗೆ ತನ್ನದೇ ಆದ ಇತಿಹಾಸ ಮತ್ತು ವೈವಿಶಿಷ್ಟತೆ ಇದ್ದು, ಕೊಡವ ಮತ್ತು ಅರೆಭಾಷೆ ಬೆಳವಣಿಗೆಗೆ ಹೆಚ್ಚಿನ ಪರಿಶ್ರಮ ಅಗತ್ಯ. ಆ ನಿಟ್ಟಿನಲ್ಲಿ ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಕಾರ್ಯ ಪ್ರವೃತ್ತರಾಗುವಂತೆ ಶಾಸಕರು ಸಲಹೆ ನೀಡಿದರು.
ಮಡಿಕೇರಿ ಜೂ.21 NEWS DESK : ಇದೇ ಜೂ.27 ರಿಂದ ಜು.2 ರವರೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸೈನಿಕ ಕಲ್ಯಾಣ ಇಲಾಖೆಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿಯು ಒಂದು ವಿಶಿಷ್ಟ ಕಾರ್ಯಕ್ರಮವಾಗಿದ್ದು, ಯಾರಿಗೂ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸಬೇಕು. ವಸತಿ ಊಟೋಪಚಾರ ಸೇರಿದಂತೆ ಹಲವು ಮೂಲ ಸೌಕರ್ಯಗಳನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಸ್ಪಷ್ಟ ನಿರ್ದೇಶನ ನೀಡಿದರು. ಸೈನಿಕ ಭರ್ತಿ ಕಾರ್ಯಾಲಯದ ನಿರ್ದೇಶಕರಾದ ಕರ್ನಲ್ ಗೌರವ್ ತಾಪ ಮಾತನಾಡಿ, ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಕಲ್ಪಿಸಬೇಕಿದೆ. ಲೋಕೋಪಯೋಗಿ, ಸೆಸ್ಕ್, ಪದವಿ ಪೂರ್ವ ಶಿಕ್ಷಣ, ಅಗ್ನಿಶಾಮಕ ದಳ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವೈದ್ಯಕೀಯ ಶಿಕ್ಷಣ, ಸೆಸ್ಕ್, ಬಿಎಸ್ಎನ್ಎಲ್ ಹೀಗೆ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಅಗತ್ಯ ಸಹಕಾರ ನೀಡುವಂತೆ ನಿರ್ದೇಶನ…
ಮಡಿಕೇರಿ ಜೂ.21 NEWS DESK : ದೇಹ ಮತ್ತು ಮನಸ್ಸಿನ ನಡುವೆ ಸಮನ್ವಯ ಸಾಧಿಸಲು ಯೋಗಾಭ್ಯಾಸ ಅಗತ್ಯವಾಗಿದೆ ಜಿಲ್ಲಾಧಿಕಾರಿ ವೆಂಕಟ್ರಾಜಾ ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಕೊಡಗು ವೈದ್ಯಕೀಯ ಶಿಕ್ಷಣ, ಜಿಲ್ಲಾ ಪೊಲೀಸ್, ಯುವ ಸಬಲೀಕರಣ ಮತ್ತು ಕ್ರೀಡೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಸಮಾಜ ಕಲ್ಯಾಣ, ಪದವಿ ಪೂರ್ವ ಶಿಕ್ಷಣ, ಎನ್ಎಸ್ಎಸ್ ಮತ್ತು ಎನ್ಸಿಸಿ ಘಟಕ, ನೆಹರು ಯುವ ಕೇಂದ್ರ, ಕೊಡಗು ಯುವ ಒಕ್ಕೂಟ, ಭಾರತೀಯ ರೆಡ್ಕ್ರಾಸ್ ಸಂಸ್ಥೆ, ಯೋಗ ಭಾರತಿ, ಪ್ರಣವ ಯೋಗ ಕೇಂದ್ರ, ಪತಂಜಲಿ ಯೋಗ ಶಿಕ್ಷಣ, ಆರ್ಟ್ ಆಪ್ ಲಿವಿಂಗ್, ಸ್ಕೌಟ್ಸ್ ಮತ್ತು ಗೈಡ್ಸ್, ನೀಮಾ ಸಂಸ್ಥೆ ಹೀಗೆ ಸರ್ಕಾರಿ ಮತ್ತು ಸರ್ಕಾರೇತರ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ `ಯೋಗ ಫಾರ್ ಸೆಲ್ಫ್ ಅಂಡ್ ಸೊಸೈಟಿ’ ಹೆಸರಿನಲ್ಲಿ ನಗರದ ಗೌಡ ಸಮಾಜದಲ್ಲಿ ನಡೆದ ಅಂತರರಾಷ್ಟ್ರೀಯ 10ನೇ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಆರೋಗ್ಯವೇ ಭಾಗ್ಯವಾಗಿದ್ದು, ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಯೋಗ ಸಹಕಾರಿಯಾಗಿದೆ…
ಮಡಿಕೇರಿ ಜೂ.21 NEWS DESK : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ದೇವಟ್ಪರಂಬ್ ನರಮೇಧದ ಸ್ಮಾರಕ ಸ್ಥಳದಲ್ಲಿ ಪುಷ್ಪ ನಮನ ಸಲ್ಲಿಸಲಾಯಿತು. ಹತ್ಯೆಗೀಡಾದ ಹಿರಿಯರಿಗೆ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಪುಷ್ಪ ನಮನ ಸಲ್ಲಿಸಿ ಕೊಡವ ಜನಾಂಗದ ಯೋಗಕ್ಷೇಮಕ್ಕಾಗಿ ಮತ್ತು ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆಯನ್ನು ಸಾಧಿಸಲು ಶಕ್ತಿಯನ್ನು ನೀಡುವಂತೆ ಪ್ರಾರ್ಥಿಸಲಾಯಿತು. ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗಕ್ಕೆ ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕುಗಳು ಮತ್ತು ಎಸ್ಟಿ ಟ್ಯಾಗ್ ನೀಡಬೇಕು. ಅಂತರರಾಷ್ಟ್ರೀಯ ಕಾನೂನಿನಡಿಯಲ್ಲಿ ಕೊಡವ ಬುಡಕಟ್ಟಿನ ಮಾತೃ ಮಣ್ಣಿನಲ್ಲಿ ಐತಿಹಾಸಿಕ ನಿರಂತರತೆಗಾಗಿ ಸಾರ್ವತ್ರಿಕ ಮನ್ನಣೆಯನ್ನು ಕಲ್ಪಿಸಬೇಕು. ದೇವಟ್ಪರಂಬ್ನಲ್ಲಿ ಅಂತರಾಷ್ಟ್ರೀಯ ಕೊಡವ ನರಮೇಧದ ಸ್ಮಾರಕವನ್ನು ನಿರ್ಮಿಸಬೇಕು. ವಿಶ್ವರಾಷ್ಟ್ರ ಸಂಸ್ಥೆಯ ಅಂತರರಾಷ್ಟ್ರೀಯ ಹತ್ಯಾಕಾಂಡದ ಸ್ಮರಣಾರ್ಥ ಪಟ್ಟಿಯಲ್ಲಿ ದೇವಟ್ಪರಂಬು ಕೊಡವರ ದುರಂತ ನರಮೇಧವನ್ನು ಸೇರಿಸಬೇಕು ಎಂದು ನಾಚಪ್ಪ ಒತ್ತಾಯಿಸಿದರು. ಗಾಳಿಯಲ್ಲಿ ಗುಂಡು ಹಾರಿಸಿ ಹಿರಿಯರಿಗೆ ಗೌರವ ಅರ್ಪಿಸಿದರು. ಸಿಎನ್ಸಿ ಪ್ರಮುಖರಾದ ಕಲಿಯಂಡ ಪ್ರಕಾಶ್, ಮಂದಪಂಡ ಮನೋಜ್, ಅರೆಯಡ ಗಿರೀಶ್ ಹಾಗೂ ಚೀಯಬೇರ ಸತೀಶ್ ಹಾಜರಿದ್ದರು.
ಮಡಿಕೇರಿ ಜೂ.21 NEWS DESK : ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ರವರ 133ನೇ ಜನ್ಮದಿನಾಚರಣೆ ಕಾರ್ಯಕ್ರಮ ಜೂ.28 ರಂದು ನಗರದಲ್ಲಿ ನಡೆಯಲಿದ್ದು, ಈ ಸಂದರ್ಭ ವೃದ್ಧಾಶ್ರಮದ ಹಿರಿಯರಿಗೆ ವಸ್ತ್ರ ವಿತರಣೆ ಮತ್ತು ಪೌರ ಕಾರ್ಮಿಕರಿಗೆ ಸ್ವೆಟರ್ಗಳನ್ನು ವಿತರಿಸಲಾಗುತ್ತದೆಂದು ದಸಂಸ ಜಿಲ್ಲಾ ಸಂಚಾಲಕರಾದ ಹೆಚ್.ಎಲ್.ದಿವಾಕರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಪತ್ರಿಕಾ ಭವನದ ಸಭಾಂಗಣದಲ್ಲಿ ಮಧ್ಯಾಹ್ನ 2 ಗಂಟೆಗೆ ಆಯೋಜಿತ ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಕೆ. ರಾಮರಾಜನ್ ಅವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಾ. ನವೀನ್, ಸಮಾಜ ಕಲ್ಯಾಣ ಇಲಾಖಾ ಉಪ ನಿರ್ದೇಶಕರಾದ ಶೇಖರ್, ನಗರಸಭಾ ಪೌರಾಯುಕ್ತರಾದ ವಿಜಯ್, ಹೊಟೇಲ್ ಉದ್ಯಮಿ ಪ್ರದೀಪ್ ಕರ್ಕೇರ ಪಾಲ್ಗೊಳ್ಳಲಿದ್ದಾರೆಂದು ಮಾಹಿತಿ ನೀಡಿದರು. ಹಿರಿಯರಿಗೆ ವಸ್ತ್ರ ವಿತರಣೆ- ದಸಂಸ ಸಂಘನೆಯ ವತಿಯಿಂದ ಕಳೆದ ಇಪ್ಪತ್ತೈದು ವರ್ಷಗಳಿಂದ ವೃದ್ಧಾಶ್ರಮದ ಹಿರಿಯ ಜೀವಗಳಿಗೆ ಡಾ. ಅಂಬೇಡ್ಕರ್ ಜನ್ಮದಿನಾಚರಣೆ ಸಂದರ್ಭ ಹೊಸ ಬಟ್ಟೆಗಳನ್ನು ನೀಡುತ್ತಾ ಬರಲಾಗುತ್ತಿದೆ. ಈ ಬಾರಿಯೂ ಸಮಾರಂಭದಲ್ಲಿ ನಗರದ…
ಮಡಿಕೇರಿ ಜೂ.21 NEWS DESK : ಜಿಲ್ಲೆಯಲ್ಲಿ ಒತ್ತುವರಿ ಮಾಡಿಕೊಂಡಿರುವ ಸರಕಾರಿ ಜಾಗವನ್ನು ಕಡಿಮೆ ದರಕ್ಕೆ ಗುತ್ತಿಗೆ ನೀಡುವ ಆದೇಶವನ್ನು ತಕ್ಷಣ ಹಿಂಪಡೆಯಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ವತಿಯಿಂದ ಜೂ.24 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದೆಂದು ಸಂಘಟನೆಯ ಕೊಡಗು ಜಿಲ್ಲಾ ಸಮಿತಿಯ ಅಧ್ಯಕ್ಷ ಪಿ.ಆರ್.ಭರತ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೋಮವಾರ ಬೆಳಿಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು. ಜಿಲ್ಲೆಯಲ್ಲಿ 3 ಲಕ್ಷಕ್ಕಿಂತಲೂ ಹೆಚ್ಚು ಕಾರ್ಮಿಕರು ಬಾಡಿಗೆ ಮನೆ, ತೋಟದ ಲೈನ್ಮನೆ, ಅಪಾಯಕಾರಿಯಾಗಿರುವ ನದಿ ದಡ, ಬೆಟ್ಟಗುಡ್ಡಗಳ ಮೇಲೆ ಮನೆ ನಿರ್ಮಿಸಿ ಸಂಕಷ್ಟದ ಬದುಕನ್ನು ನಡೆಸುತ್ತಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಇರುವ ಆದಿವಾಸಿ, ದಲಿತ ಸಮುದಾಯಗಳು, ಅಲ್ಪಸಂಖ್ಯಾತರು ಸೇರಿದಂತೆ ಬಡ ಕುಟುಂಬಗಳು ಸ್ವಂತ ಮನೆ, ನಿವೇಶನಕ್ಕಾಗಿ ಹೋರಾಟ ನಡೆಸುತ್ತಲೇ ಬಂದಿದ್ದಾರೆ. ಆದರೆ ಸಂವಿಧಾನದಲ್ಲಿ ಹೇಳಿರುವಂತೆ ಇಲ್ಲಿಯವರೆಗೆ ಮೂಲಭೂತ ಹಕ್ಕನ್ನು ಪಡೆದುಕೊಳ್ಳಲು ಸಾಧ್ಯವಾಗಿಲ್ಲ…
ಮಡಿಕೇರಿ ಜೂ.21 NEWS DESK : ಜಿಲ್ಲೆಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಅಭಿವೃದ್ದಿ ಪಡಿಸಲಾದ ಅಮೃತ್ ಸರೋವರ ಕೆರೆಗಳ ದಡದಲ್ಲಿ ” ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಿ ಯೋಗದ ಮಹತ್ವವನ್ನು ತಿಳಿಸಲಾಯಿತು. ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳನ್ನು ಅಭಿವೃದ್ದಿಪಡಿಸುವ ಮೂಲ ಉದ್ದೇಶದಿಂದ ಆಜಾದಿ- ಕಾ ಅಮೃತ್ ಮಹೋತ್ಸವದ ಅಂಗವಾಗಿ ಅಮೃತ್ ಸರೋವರ ಅಭಿಯಾನದಡಿ ಕೆರೆಗಳನ್ನು ಮನರೇಗಾ ಯೋಜನೆಯಡಿ ಅಭಿವೃದ್ದಿಪಡಿಸಲಾಯಿತು. ಆಯುಕ್ತಾಲಯದ ನಿರ್ದೇಶನದಂತೆ ಈ ಬಾರಿಯ ಅಂತರಾಷ್ಟ್ರೀಯ ಯೋಗ ದಿನವನ್ನು ಕೊಡಗು ಜಿಲ್ಲೆಯ ವಿವಿಧ ಗ್ರಾ.ಪಂ ಗಳಲ್ಲಿ ಅಭಿವೃದ್ಧಿಪಡಿಸಲಾದ ಅಮೃತ್ ಸರೋವರ ಕೆರೆಗಳ ದಡದಲ್ಲಿ ಮನರೇಗಾ ಕೂಲಿ ಕಾರ್ಮಿಕರು, ಶಾಲಾ ಮಕ್ಕಳು, ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಸ್ವ-ಸಹಾಯ ಸಂಘದ ಮಹಿಳೆಯರು ಹಾಗೂ ಸ್ಥಳೀಯ ಜನರ ಒಳಗೊಂಡಂತೆ ವಿವಿಧ ಯೋಗ ಆಸನಗಳನ್ನು ಮಾಡುವ ಮೂಲಕ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕೂಡಿಗೆ ಜೂ.21 NEWS DESK : ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಕೂಡುಮಂಗಳೂರು ಗ್ರಾ.ಪಂ, ಶಾಲೆಯ ರಾಷ್ಟ್ರೀಯ ಸೇವಾ ಯೋಜನೆ ( ಎನ್.ಎಸ್.ಎಸ್.) , ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶಾಲಾ ಘಟಕ, ಕುಶಾಲನಗರ ಜೆ.ಸಿ.ಐ.ಕಾವೇರಿ ಸಂಸ್ಥೆ, ಅಳಿಲು ಸೇವಾ ಟ್ಟಸ್ಟ್ ನ ವತಿಯಿಂದ ಶಾಲೆಯ ದೈಹಿಕ ಶಿಕ್ಷಣ ವಿಭಾಗ, ರೆಡ್ ರಿಬ್ಬನ್ ಕ್ಲಬ್ ಹಾಗೂ ಸಹಯೋಗದೊಂದಿಗೆ ವಿಶ್ವ ಯೋಗೋತ್ಸವವನ್ನು ಆಚರಿಸಲಾಯಿತು. ಯೋಗೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ನಿವೃತ್ತ ಉಪನ್ಯಾಸಕ ಎಚ್.ಎಚ್.ಸುಂದರ್, ಯೋಗವು ನಮ್ಮ ದೈಹಿಕ ಹಾಗೂ ಮಾನಸಿಕ ದೃಢತೆಗೆ ಸಹಕಾರಿಯಾಗಿದೆ. ಇಂದಿನ ಜೀವನ ಶೈಲಿಗೆ ಯೋಗವು ತುಂಬಾ ಸಹಕಾರಿಯಾಗಿದೆ ಎಂದರು. ವಿದ್ಯಾರ್ಥಿಗಳು ಯೋಗವನ್ನು ದಿನನಿತ್ಯದ ಚಟುವಟಿಕೆಯ ಒಂದು ಭಾಗವಾಗಿ ರೂಢಿಸಿಕೊಂಡರೆ ಉತ್ತಮ ಆರೋಗ್ಯ ಕಂಡುಕೊಳ್ಳಲು ಸಾಧ್ಯ ಎಂದರು. ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಯೋಗ ದಿನದ ಮಹತ್ವ ಕುರಿತು ವಿವರಣೆ ನೀಡಿ ನಾವು ಪ್ರತಿನಿತ್ಯ ಯೋಗಾಭ್ಯಾಸ ಮಾಡಿದರೆ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯಕ್ಕೆ ತುಂಬಾ ಸಹಕಾರಿಯಾಗಿದೆ.…






