ನಾಪೋಕ್ಲು ಡಿ.20 NEWS DESK : ಇತಿಹಾಸ ಪ್ರಸಿದ್ಧ ಸತ್ಯ ಸಂಧತೆಯ ಬೇತು ಗ್ರಾಮದ ಮಕ್ಕಿ ಶ್ರೀ ಶಾಸ್ತವು ದೇವರ ಹಬ್ಬವು ಶ್ರದ್ಧಾಭಕ್ತಿಯಿಂದ ಸಂಪನ್ನಗೊಂಡಿತು. ಉತ್ಸವದ ಅಂಗವಾಗಿ ಸಾಂಪ್ರದಾಯಿಕವಾಗಿ ಭಕ್ತಾದಿಗಳು ಹಾಗೂ ದೇವಾಲಯದ ತಕ್ಕ ಮುಖ್ಯಸ್ಥರು ದೇವರಿಗೆ ಹರಕೆ ರೂಪದಲ್ಲಿ ಮಣ್ಣಿನ ಪ್ರತಿಕೃತಿ ನಾಯಿ ಒಪ್ಪಿಸುವ ಕಾರ್ಯಕ್ರಮದ ಮುಖಾಂತರ ಹಬ್ಬಕ್ಕೆ ಚಾಲನೆ ನೀಡಿದರು. ನಂತರ ದೇವಾಲಯದ ಆವರಣದಲ್ಲಿ ತಕ್ಕ ಮುಖ್ಯಸ್ಥರು ಸೇರಿ ಕೊಟ್ಟಿ ಹಾಡುವ ಕಾರ್ಯಕ್ರಮ ನಡೆಸಲಾಯಿತು. ರಾತ್ರಿ ಅಂಧಿಬೊಳ್ಕ್ (ದೀಪಾರಾಧನೆ) ಕಾರ್ಯಕ್ರಮ ನಡೆಯಿತು. ನಂತರ ಬೆಳಗ್ಗಿನ ವರೆಗೆ ವಿವಿಧ ದೈವಗಳ ಕೋಲ ನಡೆದು, ಕಲ್ಯಾಟ ಅಜ್ಜಪ್ಪ ದೈವದ ಕೋಲ ನಡೆಯಿತು. ಮಧ್ಯಾಹ್ನ ನೆರೆದಿದ್ದ ಭಕ್ತಾಧಿಗಳಿಗೆ ಅನ್ನದಾನ, ಅಪರಾಹ್ನ ಶ್ರೀ ವಿಷ್ಣು ಮೂರ್ತಿ ಮೇಲೇರಿ (ಚೌಂಡಿ ಅಗ್ನಿ ಪ್ರವೇಶ) ನೆರವೇರಿತು. ಉತ್ಸವದಲ್ಲಿ ದೇವಾಲಯದ ತಕ್ಕ ಮುಖ್ಯಸ್ಥರು, ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಊರ ಮತ್ತು ಪರವೂರಿನ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು. :: ವಿಶೇಷತೆ :: ಮಕ್ಕಿ ಶ್ರೀ ಶಾಸ್ತವು ದೇವರ…
ಲೇಖಕ: admin
ಮಡಿಕೇರಿ NEWS DESK ಡಿ.20 : ಪೊನ್ನಂಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣದಲ್ಲಿ ತಪ್ಪತಸ್ಥ ವ್ಯಕ್ತಿಗೆ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿದೆ. ಈ ಪ್ರಕರಣದ ತನಿಖೆಯಲ್ಲಿ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಮಡಿಕೇರಿಯ ಕವಾಯತು ಮೈದಾನದಲ್ಲಿ ಬೆಳ್ಳಿ ಪದಕವಿರುವ ಪ್ರಶಂಸನಾ ಪತ್ರವನ್ನು ನೀಡಿ ಅಭಿನಂದಿಸಿದರು.
ನಾಪೋಕ್ಲು ಡಿ.21 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಅರೆಭಾಷೆ ಗೌಡ ವಿಕಾಸ ವೇದಿಕೆ ವತಿಯಿಂದ ಶಾಲಾ ಮಕ್ಕಳ ಅರೆಭಾಷೆ ರಸಪ್ರಶ್ನೆ ಸ್ಪರ್ಧೆ-2025 ಅನ್ನು ಡಿ.25 ರಂದು ಬೆಳಿಗ್ಗೆ 10 ಗಂಟೆಗೆ ಮಡಿಕೇರಿ ಸುದರ್ಶನ ವೃತ್ತದ ಬಳಿಯ ಗಾಂಧಿ ಭವನದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಾಜಿ ವಹಿಸಲಿದ್ದು, ಸಂಪನ್ಮೂಲ ವ್ಯಕ್ತಿಯಾಗಿ ಭಾಗಮಂಡಲದ ಶ್ರೀ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದಿವಾಕರ ಕುಂದಲ್ಪಾಡಿ ವಹಿಸಲಿದ್ದಾ ಮುಖ್ಯ ಅತಿಥಿಗಳಾಗಿ ಅರೆಭಾಷೆ ಗೌಡ ವಿಕಾಸ ವೇದಿಕೆಯ ನಿರ್ದೇಶಕ ಪ್ರಹ್ಲಾದ್ ಪೊಕ್ಕೋಳಂಡ್ರ ಪಾಲ್ಗೊಳ್ಳಲಿದ್ದಾರೆ. ಅರೆಭಾಷೆ ಹಿರಿಯ ಸಾಹಿತಿ ಬೈತಡ್ಕ ಜಾನಕಿ ಬೆಳ್ಳಪ್ಪ, ಹಾಕತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ತೆಕ್ಕಡೆ ಕುಮಾರಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ಚೊಕ್ಕಾಡಿ ಪ್ರೇಮಾ ರಾಘವಯ್ಯ ಕೊಡಗು ಗೌಡ ಸಮಾಜಗಳ ಒಕ್ಕೂಟದ ನಿರ್ದೇಶಕಿ ಪುದಿಯನೆರವನ ರೇವತಿ ರಮೇಶ್…
ಮಡಿಕೇರಿ ಡಿ.20 NEWS DESK : ಕುಶಾಲನಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಡಳಿತ ಮಂಡಳಿಗೆ ನಾಮ ನಿರ್ದೇಶಿತ ಸದಸ್ಯರಾಗಿ ಕುಡೆಕಲ್ ಗಣೇಶ್ ಹಾಗೂ ಚೈತನ್ಯ ಚಂದ್ರಮೋಹನ್ ಅವರನ್ನು ನೇಮಿಸಲಾಗಿದೆ. ಕುಶಾಲನಗರ ಪತ್ರಿಕಾ ಭವನದಲ್ಲಿ ಅಧ್ಯಕ್ಷರಾದ ಎಂ ಎನ್ ಚಂದ್ರಮೋಹನ್ ಅಧ್ಯಕ್ಷತೆಯಲ್ಲಿ ನಡೆದ ಪ್ರಥಮ ಆಡಳಿತ ಮಂಡಳಿಯ ಸಭೆಯಲ್ಲಿ ಆಯ್ಕೆ ನಡೆಯಿತು. ವಿವಿಧ ಸಮಿತಿಗಳ ಸಂಚಾಲಕರ ನೇಮಕ ಮಾಡಲಾಯಿತು. ಕ್ಷೇಮಾಭಿವೃದ್ಧಿ ಸಮಿತಿಯ ಸಂಚಾಲಕರಾಗಿ ಕೆ.ಕೆ.ನಾಗರಾಜ ಶೆಟ್ಟಿ, ಸಾಂಸ್ಕ್ರತಿಕ ಸಮಿತಿಯ ಸಂಚಾಲಕರಾಗಿ ಜಯಪ್ರಕಾಶ್, ಕ್ರೀಡಾ ಸಮಿತಿಯ ಸಂಚಾಲಕರಾಗಿ ಕೆ.ಜೆ.ಶಿವರಾಜ್, ಪತ್ರಿಕಾ ಭವನದ ನಿವೇಶನ ಹಾಗೂ ಕಟ್ಟಡ ಸಮಿತಿಯ ಸಂಚಾಲಕರಾಗಿ ಎಂ.ಎನ್.ಚಂದ್ರಮೋಹನ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲು ಸಭೆ ನಿರ್ಣಯ ಕೈಗೊಂಡಿದೆ. ಮುಂಬರುವ ಜನವರಿ 2 ನೇ ತಾರೀಖಿನಂದು ಕುಶಾಲನಗರದಲ್ಲಿ ವಾಸವಿ ಸಪ್ತಾಹ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಡೆಯುವ ಮಾದಕ ವಸ್ತುಗಳ ಬಗ್ಗೆ ಜಾಗೃತಿ ಅಭಿಯಾನ ಮತ್ತು ಅಪರಾಧ ತಡೆಗಟ್ಟುವ ಕುರಿತು ಪೊಲೀಸ್ ಇಲಾಖೆಯೊಂದಿಗೆ ನಡೆಯುವ ಕಾರ್ಯಕ್ರಮಕ್ಕೆ ಸಂಘದ ಸಹಯೋಗ ನೀಡುವುದು ಮತ್ತು ಆಗಸ್ಟ್ ತಿಂಗಳವರೆಗೆ…
ಮಡಿಕೇರಿ ಡಿ.20 NEWS DESK : ಮದ್ರಾಸ್ ರೆಜಿಮೆಂಟ್ ಅಭಿಲೇಖಾಲಯವು(ರೆಕಾರ್ಡ್ ದಿ ಮದ್ರಾಸ್ ರೆಜಿಮೆಂಟ್) ಮದ್ರಾಸ್ ರೆಜಿಮೆಂಟ್ನ ಮಾಜಿ ಸೈನಿಕರು ಹಾಗೂ ಇತರರೊಂದಿಗೆ ಪರಸ್ಪರ ಸಂಪರ್ಕ ಸುಗಮಗೊಳಿಸುವ ಗುರಿಯೊಂದಿಗೆ ಬೈಕ್ ರ್ಯಾಲಿಯನ್ನು ಹಮ್ಮಿಕೊಂಡಿದೆ. ಈ ಮೂಲಕ ಮಾಜಿ ಸೈನಿಕರು ಮತ್ತು ಅವರ ಕುಟುಂಬಗಳಿಗೆ ಸಂಬಂಧಿಸಿದ ಕಲ್ಯಾಣ ಕಾರ್ಯಕ್ರಮಗಳಿಗೆ ಸಂಬಂಧಿಸಿದ ಕುಂದುಕೊರತೆ ಪರಿಹರಿಸಲಾಗುವುದು.ಈ ರ್ಯಾಲಿಯು ಜ.6 ರಂದು ಮಡಿಕೇರಿಗೆ ಆಗಮಿಸಲಿದ್ದು, ಮದ್ರಾಸ್ ರೆಜಿಮೆಂಟ್ನ ಮಾಜಿ ಸೈನಿಕರು ಹಾಗೂ ವೀರನಾರಿಯರು ಈ ರ್ಯಾಲಿಯಲ್ಲಿ ಪಾಲ್ಗೊಳ್ಳುವುದರ ಮೂಲಕ ತಮ್ಮ ಪಿಂಚಣಿ ಹಾಗೂ ಇತರೆ ಕುಂದುಕೊರತೆಗಳನ್ನು ಪರಿಹರಿಸಿಕೊಳ್ಳಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಿ.ಆರ್.ಶೆಟ್ಟಿ ಅವರು ತಿಳಿಸಿದ್ದಾರೆ.
ಕೊಚ್ಚಿ NEWS DESK ಡಿ.20 : ಅನಾರೋಗ್ಯದಿಂದ ಬಳಲುತ್ತಿದ್ದ ಮಲಯಾಳಂ ಚಿತ್ರರಂಗದ ಖ್ಯಾತ ನಿರ್ದೇಶಕ, ನಟ ಹಾಗೂ ನಿರ್ಮಾಪಕ ಶ್ರೀನಿವಾಸನ್ (69) ಅವರು ಇಂದು ನಿಧನರಾಗಿದ್ದಾರೆ. ಶ್ರೀನಿವಾಸನ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಂಡು ಬಂದ ಹಿನ್ನೆಲೆ ತ್ರಿಪ್ಪುನಿತುರಾದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ನಿಧನರಾದರು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು ಉದಯಂಪೀರೂರಿನ ತಮ್ಮ ನಿವಾಸದಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಸುಮಾರು ಐದು ದಶಕಗಳ ಕಾಲ 225ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಶ್ರೀನಿವಾಸನ್ ಅವರು ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿ ಚಿತ್ರಪ್ರೇಮಿಗಳ ಅಚ್ಚುಮೆಚ್ಚಿನ ನಟನಾಗಿ ಖ್ಯಾತಿ ಗಳಿಸಿದ್ದರು. ಕೇರಳದ ತಲಶ್ಶೇರಿ ಬಳಿಯ ಪಟ್ಯಂನಲ್ಲಿ 1956ರ ಏಪ್ರಿಲ್ 6 ರಂದು ಜನಿಸಿದ ಶ್ರೀನಿವಾಸನ್, ಕದಿರೂರಿನಲ್ಲಿ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು. 1977ರಲ್ಲಿ ಪಿ.ಎ. ಬ್ಯಾಕರ್ ಅವರ ‘ಮಣಿಮುಳಕ್ಕಂ’ ಚಿತ್ರದ ಮೂಲಕ ಶ್ರೀನಿವಾಸನ್ ನಟನೆ ಆರಂಭಿಸಿದರು.
ಮಡಿಕೇರಿ ಡಿ.20 NEWS DESK : 33/11 ಕೆ.ವಿ ಮೂರ್ನಾಡು ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಎಫ್2 ನಾಪೋಕ್ಲು ಹಾಗೂ ಎಫ್5 ಹೊದ್ದೂರು ಫೀಡರ್ಗಳಲ್ಲಿ ಡಿಸೆಂಬರ್, 21 ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಹೊದ್ದೂರು, ಕಬಡಗೇರಿ, ಕಕ್ಕಬ್ಬೆ, ಕೊಳಕೇರಿ, ಕುಂಜಿಲ, ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ, ಪೆರೂರು, ನಾಪೋಕ್ಲು ಟೌನ್, ಕೊಟ್ಟಮುಡಿ, ಪಾಲೂರು, ಚೆರಿಯಪರಂಬು, ಹಳೆ ತಾಲೂಕು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಮಡಿಕೇರಿ ಡಿ.20 NEWS DESK : ಮಹಾಲೇಖಪಾಲರ ಕಚೇರಿಯ ಮುಖ್ಯ ಮಹಾಲೇಖಪಾಲರು, ಡೆಪ್ಯೂಟಿ ಅಕೌಂಟೆಂಟ್ ಜನರಲ್, ಹಿರಿಯ ಲೆಕ್ಕಾಧಿಕಾರಿಗಳು, ಬ್ಯಾಂಕುಗಳು ಹಾಗೂ ಖಜಾನೆ ಇಲಾಖೆಯಿಂದ ಅಪರ ನಿರ್ದೇಶಕರು, ಪಿಂಚಣಿ ಪಾವತಿ ಮತ್ತು ನಿರ್ವಹಣಾ ಖಜಾನೆ, ಬೆಂಗಳೂರು ಇವರ ಸಮನ್ವಯದೊಂದಿಗೆ ಪಿಂಚಣಿದಾರರ ಕುಂದುಕೊರತೆ ಮತ್ತು ಅಹವಾಲುಗಳಿಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಡಿಸೆಂಬರ್, 26 ರಂದು ಬೆಳಗ್ಗೆ 10.30 ಗಂಟೆಗೆ ಮೈಸೂರು ವಿಭಾಗ ಮಟ್ಟದ ಪಿಂಚಣಿ ಅದಲಾತ್ ಹಾಗೂ ಜಿಪಿಎಫ್ ಅದಾಲತ್ ಕಾರ್ಯಕ್ರಮ ನಡೆಯಲಿದೆ. ಆಯಾಯ ಜಿಲ್ಲೆಗಳಲ್ಲಿ ವಾಸವಿರುವ ಪಿಂಚಣಿದಾರರು ಈ ಪಿಂಚಣಿ ಅದಾಲತ್ನಲ್ಲಿ ಭಾಗವಹಿಸಿ ತಮ್ಮ ಕುಂದುಕೊರತೆಗಳನು ನಿವಾಹಿಸಿಕೊಳ್ಳಬಹುದು ಎಂದು ಚಿಕ್ಕಮಗಳೂರು ಜಿಲ್ಲಾ ಖಜಾನೆಯ ಉಪ ನಿರ್ದೇಶಕರು ಕೋರಿದ್ದಾರೆ.
ಮಡಿಕೇರಿ ಡಿ.20 NEWS DESK : ರಾಷ್ಟ್ರದ ನಾಗರಿಕ ನೋಂದಣಿ ಜನನ ಮತ್ತು ಮರಣ ಅಧಿನಿಯಮ 1960 ರನ್ವಯ ಕರ್ನಾಟಕ ಜನನ ಮತ್ತು ಮರಣ ನೋಂದಣಿ 1970 ಮತ್ತು ಪುನರ್ ರಚಿತ ಕರ್ನಾಟಕ ಜನನ ಮರಣ ನೋಂದಣಿ ಕಾಯ್ದೆ ನಿಯಮ 1990 ರ ರನ್ವಯ ಜನನ ಮತ್ತು ಮರಣ ನೋಂದಣಿ ಕಡ್ಡಾಯವಾಗಿದ್ದು, ಪ್ರಸ್ತುತ ಜನನ ಮತ್ತು ಮರಣ ನೋಂದಣಿಯನ್ನು 2015 ರ ಏಪ್ರಿಲ್, 01 ರಿಂದ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಜನ್ಮ ತಂತ್ರಾಂಶದ ಮೂಲಕ ಆನ್ಲೈನ್ ನೋಂದಣಿಯನ್ನು ನಿರ್ವಹಿಸಲಾಗುತ್ತಿದ್ದು, ಅದರಂತೆ ಜನನ ಮರಣ ನೋಂದಣಿ(ತಿದ್ದುಪಡಿ-2023) ಅಧಿನಿಯಮ 1960, ಕರ್ನಾಟಕ ಜನನ ಮರಣ ನೋಂದಣಿ (ತಿದ್ದುಪಡಿ 2024) ರಂತೆ ನಿಯಮಗಳಲ್ಲಿ ಕೆಲವು ಮಾರ್ಪಾಡಾಗಿದ್ದು, ಅದರಂತೆ ನಿಯಮಗಳನ್ನು ಪಾಲಿಸಬೇಕಾಗಿ ಕೋರಿದೆ. ಜನನ ಮರಣ ನೋಂದಣಿಯಲ್ಲಿ ಕಡ್ಡಾಯವಾಗಿ ಅನುಸರಿಸಬೇಕಾದ ಪ್ರಮುಖ ಅಂಶಗಳು; ಜನನ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ನಮೂನೆ-1 ರ ಕಾಲಂ 4 ಮತ್ತು 5 ರಲ್ಲಿ ತಂದೆ ತಾಯಿಗಳ ಆಧಾರ್ ಸಂಖ್ಯೆ ಲಭ್ಯವಿಲ್ಲದಿದ್ದಲ್ಲಿ…
ಮಡಿಕೇರಿ ಡಿ.20 NEWS DESK : ಜಿಲ್ಲೆಯಾದ್ಯಂತ ಡಿ.21 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವ ಸಂಬಂಧ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಎರಡನೇ ಸುತ್ತಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪೂರ್ವ ಸಿದ್ದತೆ ಬಗ್ಗೆ ವಿಡಿಯೋ ಸಂವಾದ ಮೂಲಕ ಸಭೆ ನಡೆಸಿ, ಹಲವು ಸಲಹೆ ಸೂಚನೆ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್ ಅವರು ಮಾಹಿತಿ ನೀಡಿ ಜಿಲ್ಲೆಯಲ್ಲಿ 0 ತಿಂಗಳಿನಿಂದ 05 ವರ್ಷದ ಒಳಗಿನ ಒಟ್ಟು 32,702 ಮಕ್ಕಳಿದ್ದು, ನಗರ ವ್ಯಾಪ್ತಿಯಲ್ಲಿ 3,275 ಗ್ರಾಮೀಣ ವ್ಯಾಪ್ತಿಯಲ್ಲಿ 29,427 ಮಕ್ಕಳಿರುತ್ತಾರೆ. ಇವರಲ್ಲಿ ಸ್ಥಿರವಾಸಿತ ವಲಸೆ ಒಟ್ಟು 15,788 ಮಕ್ಕಳು, ವಲಸೆ ಕಾರ್ಮಿಕರ 4,112 ಮಕ್ಕಳು ಇದ್ದಾರೆ ಎಂದರು. ಜಿಲ್ಲೆಯಲ್ಲಿ ಒಟ್ಟು 470 ಬೂತ್, 32 ಸಂಚಾರಿ ಬೂತ್, ಒಂದು ಸಂಚಾರಿ ಬೂತ್ನ್ನು ಮಾಡಲಾಗಿದೆ. ಬೂತ್ಗಳಲ್ಲಿ ಲಸಿಕೆ ನೀಡಲು 1,946 ಲಸಿಕೆದಾರರು, 85 ಮೇಲ್ವಿಚಾರಕರು 973 ಮನೆ ಭೇಟಿ ನೀಡುವ…






