ಲೇಖಕ: admin

ವಿರಾಜಪೇಟೆ ಜೂ.21  NEWS DESK : ಕೆದಮುಳ್ಳೂರು ಗ್ರಾ.ಪಂ ವ್ಯಾಪ್ತಿಯ ತೋಮರ (ತೋರ) ಗ್ರಾಮದಲ್ಲಿ 2019ರಲ್ಲಿ ಸಂಭವಿಸಿದ ಭೂ ಕುಸಿತ ಪ್ರದೇಶಗಳಿಗೆ ವಿರಾಜಪೇಟೆ ತಾಲೂಕು ದಂಡಾಧಿಕಾರಿ ಹಾಗೂ ತಹಶೀಲ್ದಾರ್ ರಾಮಚಂದ್ರ ಮತ್ತು ಕಂದಾಯ ಇಲಾಖೆಯ ಸಿಬ್ಬಂದಿಗಳು ಭೇಟಿ ಪರಿಶೀಲನೆ ನಡೆಸಿದರು. ಭೂ ಕುಸಿತ ಪ್ರದೇಶಗಳ ಸಮೀಪದ ಮನೆಗಳಿಗೆ ಭೇಟಿ ನೀಡಿ ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ಮುಂಜಾಗ್ರತ ಕ್ರಮ ವಹಿಸುವಂತೆ ನಿವಾಸಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭ ವಿರಾಜಪೇಟೆ ಕಂದಾಯ ಇಲಾಖೆಯ ಪರಿವೀಕ್ಷಕರಾದ ಎಂ.ಎಲ್.ಹರೀಶ್, ಗ್ರಾಮ ಆಡಳಿತಾಧಿಕಾರಿ ಅನುಶಾ, ನೂತನ್, ಅಜಯ್ ಹಾಜರಿದ್ದರು. ವರದಿ : ಕಿಶೋರ್ ಕುಮಾರ್ ಶೆಟ್ಟಿ 

Read More

ಸೋಮವಾರಪೇಟೆ ಜೂ.21 NEWS DESK : ಕೊಡಗು ಜಿಲ್ಲಾ ಮತ್ತು ಸೋಮವಾರಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್, ಮಹಿಳಾ ಸಹಕಾರ ಸಮಾಜ, ಅಕ್ಕನ ಬಳಗದ ಆಶ್ರಯದಲ್ಲಿ ಕವಯಿತ್ರಿ ಜಲಜಾ ಶೇಖರ್ ಅವರ “ಪ್ರತೀಕ್ಷ” ಮತ್ತು “ವಿಲೋಕನ” ಕೃತಿಗಳ ಬಿಡುಗಡೆಗೊಂಡಿತು. ಸೋಮವಾರಪೇಟೆಯ ಮಹಿಳಾ ಸಹಕಾರ ಸಮಾಜದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಲೋಕನ ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಕೊಡಗು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ.ಅನಂತಶಯನ, 22 ಲೇಖನಗಳನ್ನು ಹೊಂದಿರುವ ವಿಲೋಕನ ಕೃತಿ ಒಂದು ಸುಂದರವಾದ ಪುಸ್ತಕವಾಗಿದೆ. ಇದರಲ್ಲಿ ವಿವಿಧ ವಿಚಾರಗಳಿದ್ದು, ಸಂಗ್ರಹಕ್ಕೆ ಯೋಗ್ಯವಾಗಿದೆ. ಇಂದು ಪುಸ್ತಕ ಬರೆಯುವುದಕ್ಕೂ ಹೆಚ್ಚಿನ ಜವಾಬ್ದಾರಿ ಪುಸ್ತಕ ಬಿಡುಗಡೆ ಮತ್ತು ಅದರ ಮಾರುಕಟ್ಟೆ ವಿಸ್ತರಣೆಗೆ ಬೇಕಾಗಿದೆ. ಇದರೊಂದಿಗೆ ಹಣ ಕೊಟ್ಟು ಪುಸ್ತಕ ತೆಗೆದುಕೊಂಡು ಓದುವವರ ಸಂಖ್ಯೆಯೂ ಹೆಚ್ಚಬೇಕಿದೆ ಎಂದು ಹೇಳಿದರು. ಪ್ರತೀಕ್ಷ ಕವನ ಸಂಕಲನವನ್ನು ಬಿಡುಗಡೆಗೊಳಿಸಿ ಮಾತನಾಡಿದ ನಿವೃತ್ತ ಪ್ರಾಂಶುಪಾಲ ಪ್ರೊ.ಧರ್ಮಪ್ಪ, ಅಣ್ಣ ಬಸವಣ್ಣ ಮತ್ತು ಅಕ್ಕಮಹಾದೇವಿ ಮೇಲಿನ ಕವನಗಳು ಗಮನ ಸೆಳೆಯುತ್ತವೆ. ಕವಿಗಳು ಎಂದಿಗೂ ಕಲ್ಪನಾಲೋಕದಲ್ಲಿ ಇದ್ದು, ಅವರ…

Read More

ಮಡಿಕೇರಿ ಜೂ.21 NEWS DESK : ವಿರಾಜಪೇಟೆಯಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಮಂದಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆಯ ಜನಪ್ರಿಯ ಶಾಸಕ ಎ.ಎಸ್.ಪೊನ್ನಣ್ಣ ಅವರ ಪ್ರತಿಕೃತಿ ದಹಿಸಿ ವಿಕೃತಿ ಮೆರೆದಿರುವುದು ಖಂಡನೀಯವೆಂದು ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಬಿ.ವೈ.ರಾಜೇಶ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಶುದ್ಧ ರಾಜಕಾರಣಕ್ಕೆ ಹೆಸರಾಗಿರುವ ಕೊಡಗಿನ ಘನತೆಗೆ ಬಿಜೆಪಿ ಚ್ಯುತಿ ತಂದಿದೆ. ಎ.ಎಸ್.ಪೊನ್ನಣ್ಣ ಅವರ ಜನಪ್ರಿಯತೆಯನ್ನು ಸಹಿಸದೆ ಈ ರೀತಿಯ ಕೀಳು ಮಟ್ಟದ ರಾಜಕೀಯ ಪ್ರದರ್ಶಿಸಿದೆ. ಅಭಿವೃದ್ಧಿ ಕಾರ್ಯಗಳಲ್ಲಿ ಮುಂಚೂಣಿಯಲ್ಲಿರುವ ಪೊನ್ನಣ್ಣ ಅವರಿಗೆ ರಾಜ್ಯ ಮಟ್ಟದಲ್ಲಿ ಘನತೆ, ಗೌರವವಿದೆ. ವಿರಾಜಪೇಟೆ ಕ್ಷೇತ್ರದಲ್ಲಿ ಜನಪ್ರಿಯತೆ ಇದೆ. ಇದನ್ನು ಅರಗಿಸಿಕೊಳ್ಳಲಾಗದ ಬಿಜೆಪಿ ಮಂದಿ ವಿನಾಕಾರಣ ಪ್ರತಿಕೃತಿ ದಹಿಸಿ ವಿಕೃತಿ ಮೆರೆದಿದ್ದಾರೆ ಎಂದು ಆರೋಪಿಸಿದ್ದಾರೆ. ಕಳೆದ 25 ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ಅಧಿಕಾರವಿಲ್ಲದಿದ್ದರೂ ಕಾಂಗ್ರೆಸ್ ಮಂದಿ ಆಡಳಿತ ಪಕ್ಷದಲ್ಲಿರುವವರ ಪ್ರತಿಕೃತಿ ದಹಿಸಿ ಅಗೌರವ ತೋರುವ ರಾಜಕೀಯ ಪ್ರದರ್ಶಿಸಿಲ್ಲ. ಈಗ ಅಧಿಕಾರ ಕಳೆದುಕೊಂಡು ಹತಾಶೆಗೊಂಡಿರುವ ಬಿಜೆಪಿ ಪ್ರತಿಕೃತಿ…

Read More

ವಿರಾಜಪೇಟೆ ಜೂ.21 NEWS DESK : ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಸದೃಢತೆಗೆ ಯೋಗ ಸಹಕಾರಿಯಾಗಿದೆ ಎಂದು ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕರು ಮತ್ತು ಸೆಂಟ್ ಆನ್ಸ್ ಪಿಯು ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಮದಲೈ ಮುತ್ತು ಅಭಿಪ್ರಾಯಪಟ್ಟರು. ಕಾಲೇಜಿನಲ್ಲಿ ಎನ್.ಎಸ್.ಎಸ್, ದೈಹಿಕ ಶಿಕ್ಷಣ ವಿಭಾಗ, ರೆಡ್ ಕ್ರಾಸ್ ಘಟಕ ಮತ್ತು ಸೆಂಟ್ ಆನ್ಸ್ ಪಿಯು ಕಾಲೇಜಿನ ವತಿಯಿಂದ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿ, ಯೋಗವು ವ್ಯಕ್ತಿಯ ಏಕಾಗ್ರತೆಗೆ ಅತೀ ಮುಖ್ಯವಾಗಿದ್ದು, ಸಕಲ ರೋಗಗಳ ನಿವಾರಣೆಗೂ ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಯೋಗದ ಮಹತ್ವವನ್ನು ಸಮಾಜಕ್ಕೆ ಸಾರಿ ಪ್ರಚಾರ ಪಡಿಸುವ ಅಗತ್ಯವಿದೆ. ಯೋಗದಿಂದ ಮಾನಸಿಕ ಸ್ಥಿರತೆ ಮೂಡಲು ಸಾಧ್ಯ ಎಂದರು. ಸೆಂಟ್ ಆನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ಇಡೀ ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ ಕೀರ್ತಿ ಭಾರತಕ್ಕೆ ಸಲ್ಲುತ್ತದೆ. ಇಂದು ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸುತ್ತಿದ್ದು, ಯೋಗವು ಇಂದಿನ ಸನ್ನಿವೇಶದಲ್ಲಿ ಪ್ರಸ್ತುತವಾಗಿದೆ ಎಂದರು. ವೇದಿಕೆಯಲ್ಲಿ ಕಾಲೇಜಿನ ಎನ್.ಎಸ್.ಎಸ್.…

Read More

ಮಡಿಕೇರಿ ಜೂ.21 NEWS DESK : ವಿರಾಜಪೇಟೆಯ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರ ಪ್ರತಿಕೃತಿ ದಹಿಸಿ ಕೀಳು ಮಟ್ಟದ ರಾಜಕೀಯ ಪ್ರದರ್ಶಿಸಿರುವ ಬಿಜೆಪಿಯ ಹದ್ದು ಮೀರಿದ ವರ್ತನೆಯನ್ನು ತೀವ್ರವಾಗಿ ಖಂಡಿಸುವುದಾಗಿ ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರ ಎ.ಎಸ್.ಟಾಟು ಮೊಣ್ಣಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜಕೀಯ ಕ್ಷೇತ್ರಕ್ಕೆ ಕಳಂಕವಾಗಿರುವ ಮತ್ತು ಸ್ವಾರ್ಥ ರಾಜಕಾರಣಕ್ಕೆ ಹೆಸರುವಾಸಿಯಾಗಿರುವ ಬಿಜೆಪಿಗರ ನೀಚ ಮನೋಸ್ಥಿತಿಯನ್ನು ಕ್ಷಮಿಸಲು ಸಾಧ್ಯವಿಲ್ಲ. ಬಿಜೆಪಿಯ ಈ ವರ್ತನೆಯಿಂದ ಕೊಡಗು ಜಿಲ್ಲೆಯ ಘನತೆಗೆ ದಕ್ಕೆಯಾಗಿದೆ ಎಂದು ತಿಳಿಸಿದ್ದಾರೆ. ವಿರಾಜಪೇಟೆ ಕ್ಷೇತ್ರದಲ್ಲಿ ಪೊನ್ನಣ್ಣ ಅವರ ಜನಪ್ರಿಯತೆ ಹೆಚ್ಚುತ್ತಿರುವುದು ಮತ್ತು ಸರಕಾರದ ಮಟ್ಟದಲ್ಲಿ ಪ್ರಭಾವಿಯಾಗಿರುವುದನ್ನು ಸಹಿಸದ ಬಿಜೆಪಿ ಮಂದಿ ಬೆಲೆ ಏರಿಕೆಯ ನೆಪ ಮಾಡಿಕೊಂಡು ಜನರ ಹಾದಿ ತಪ್ಪಿಸುವ ಪ್ರಯತ್ನ ಮಾಡಿದ್ದಾರೆ. ವಿರಾಜಪೇಟೆ ಕ್ಷೇತ್ರದಲ್ಲಿ ಕಳೆದ 25 ವರ್ಷಗಳಲ್ಲಿ ನಡೆಯದೆ ಇರುವ ಅಭಿವೃದ್ಧಿ ಕಾರ್ಯಗಳು ಪೊನ್ನಣ್ಣ ಅವರ ದಕ್ಷ ಆಡಳಿತದಿಂದ ಒಂದೇ ವರ್ಷದಲ್ಲಿ ಕಾರ್ಯಗತಗೊಂಡಿದೆ. ರಾತ್ರಿ, ಹಗಲೆನ್ನದೆ ತಮ್ಮ…

Read More

ಮಡಿಕೇರಿ ಜೂ.21 NEWS DESK : ಕರ್ನಾಟಕ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಜೂನ್ 21 ಮತ್ತು 22 ರಂದು ಅತಿ ಹೆಚ್ಚು (115.5-204.4 ಮಿಮೀ) ಭಾರೀ (64.5-115.5 ಮಿಮೀ) ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂನ್ 23 ರಿಂದ 25 ರ ಅವಧಿಯಲ್ಲೂ 204.4 ಮಿಮೀ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

Read More

ವಿರಾಜಪೇಟೆ ಜೂ.21 NEWS DESK : ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪ್ರತಿಭಟನೆಗಳನ್ನು ಮಾಡುವುದು ಸಂವಿಧಾನ ಬದ್ದವಾದರು. ತೈಲ ಬೆಲೆ ಏರಿಕೆಯನ್ನು ಖಂಡಿಸಿ ಭಾ.ಜ.ಜ. ರಾಷ್ಟ್ರ ನಾಯಕರ ಮತ್ತು ಶಾಸಕರ ಅಣುಕು ಶವ ಯಾತ್ರೆ ನಡೆಸಿ ಪ್ರತಿಕೃತಿ ದಹನ ಮಾಡಿರುವುದು ತನ್ನ ವಿಕೃತಿಯನ್ನು ಮೆರೆದಿರುವುದು ಖಂಡನೀಯ ಎಂದು ಕಾಂಗ್ರೆಸ್ ಪಕ್ಷದ ಪ್ರಮುಖರು ಆರೋಪಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ನಗರ ಮತ್ತು ಬ್ಲಾಕ್ ಕಾಂಗ್ರೆಸ್ ವಿರಾಜಪೇಟೆ ಘಟಕದಿಂದ ರಾಷ್ಟ್ರನಾಯಕರು ಸೇರಿದಂತೆ ಶಾಸಕರ ಭಾವಚಿತ್ರವನ್ನಿಟ್ಟು ಅಣುಕು ಶವ ಯಾತ್ರೆ ನಡೆಸಿ ಪ್ರತಿಕೃತಿ ದಹನ ಮಾಡಿರುವುದು ಖಂಡನೀಯ ಎಂದರು. ಪಕ್ಷಾತೀತವಾಗಿ ಜನಮನ್ನಣೆಯನ್ನು ಗಳಿಸಿರುವ ಕೊಡಗಿನ ಜನಪ್ರಿಯ ಶಾಸಕರು ಮತ್ತು ನೇರ ದಿಟ್ಟ ನುಡಿಯ ಜನಪ್ರತಿನಿಧಿ ಎಂದು ರಾಜ್ಯಮಟ್ಟದ ಮಾಧ್ಯಮಗಳಿಂದ ಪ್ರಶಂಸೆಗೆ ಪಾತ್ರರಾಗಿರುವ ಎ.ಎಸ್.ಪೊನ್ನಣ್ಣ ಅವರ ಭಾವಚಿತ್ರ ಇರಿಸಿ ಮತ್ತು ಕಾಂಗ್ರೆಸ್ ಪಕ್ಷ ರಾಷ್ಟ್ರ ಮಟ್ಟದ ನಾಯಕರ ಅಣುಕು ಶವಯಾತ್ರೆ ನಡೆಸಿ ದಹನ ಮಾಡಿರುವ ಕೌರ್ಯವು…

Read More

ಮಡಿಕೇರಿ ಜೂ.21 NEWS DESK : ಕೊಡಗು ಗೌಡ ನಿವೃತ್ತ ನೌಕರರ ಸಂಘದ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ಸಾರ್ವಜನಿಕರಿಗಾಗಿ ನಡೆದ ಕಣ್ಣು ತಪಾಸಣಾ ಶಿಬಿರದಲ್ಲಿ ಅವಶ್ಯವಿದ್ದವರಿಗೆ ಉಚಿತ ಕನ್ನಡಕವನ್ನು ವಿತರಿಸಲಾಯಿತು. ಕುಶಾಲನಗರದ ಸರಕಾರಿ ಪಾಲಿಟೆಕ್ನಿಕ್ ಕಾಲೇಜ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜ್ ನ ಪ್ರಬಾರ ಪ್ರಂಶುಪಾಲ ಪಿ.ಪರ್ವತರಾಜನ್ ಅವರು ಕನ್ನಡವನ್ನು ವಿತರಿಸಿ ಮಾತನಾಡಿದರು. ಇದೊಂದು ಸಾಮಾಜಿಕ ಕಳಕಳಿಯ ಉತ್ತಮ ಕಾರ್ಯಕ್ರಮವಾಗಿದ್ದು, ಗ್ರಾಮೀಣ ಭಾಗದ ಜನರಿಗೆ ಇದು ಹೆಚ್ಚು  ಪ್ರಯೋಜನವಾಗಲಿದೆ. ಇನ್ನು ಮುಂದೆಯೂ ಸಂಘ ಇಂತಹ ಪ್ರಯೋಜನಕಾರಿ ಕಾರ್ಯಕ್ರಮಗಳನ್ನು ಹೆಚ್ಚು ಹೆಚ್ಚು ಆಯೋಜಿಸಲಿ ಎಂದು ಸಲಹೆ ನೀಡಿದರು. ಕಾಲೇಜ್ ನ ರಿಜಿಸ್ಟ್ರಾರ್ ಕೆ.ಎ.ಮೇರಿ ಮಾತನಾಡಿ ಈ ಇಳಿ ವಯಸ್ಸಿನಲ್ಲೂ ಸಂಘದ ಪದಾಧಿಕಾರಿಗಳು ಕೈಗೊಂಡಿರುವ ಜನಪರ ಕಾರ್ಯಕ್ರಮ ಅತ್ಯುತ್ತಮವಾಗಿದೆ. ಈ ರೀತಿಯ ಕಾರ್ಯಕ್ರಮಗಳನ್ನು ನಡೆಸುವುದರಿಂದ ಬಡ ಜನರ ಆಶೋತ್ತರಗಳಿಗೆ ಸಹಾಯ ಮಾಡಿದಂತಾಗುತ್ತದೆ ಎಂದು ತಿಳಿಸಿದರು. ಸಂಘದ ಅಧ್ಯಕ್ಷ ಕೋರನ ವಿಶ್ವನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಕುದುಪಜೆ ಬೋಜಪ್ಪ,…

Read More

ಮಡಿಕೇರಿ ಜೂ.21 NEWS DESK : ಜಮ್ಮು-ಕಾಶ್ಮೀರದ ಶ್ರೀನಗರದ ದಾಲ್‌ ಸರೋವರದ ಬಳಿ ಏರ್ಪಡಿಸಲಾದ 10 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಂಡರು.

Read More

ಬೆಂಗಳೂರು ಜೂ.21 NEWS DESK : ಬಳ್ಳಾರಿಯ ಜೆ.ಎಸ್.ಡಬ್ಲ್ಯೂ ಟೌನ್ ಶಿಪ್ ನಲ್ಲಿ ಸಂತೋಷ್ ಲಾಡ್ ಫೌಂಡೇಷನ್ ಮತ್ತು ಶ್ವಾಸ ಯೋಗ ಸಂಸ್ಥೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡು ಯೋಗಾಭ್ಯಾಸ ಮಾಡಿದರು. ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ಧಿಗಾಗಿ ಯೋಗ ಒಂದು ಪರಿಣಾಮಕಾರಿ ಸಾಧನ. ಇಂದು ಅಂತಾರಾಷ್ಟ್ರೀಯ ಯೋಗ ದಿನ. ಇಡೀ ಜಗತ್ತು ಭಾರತದ ಕೊಡುಗೆಯಾದ ಯೋಗದ ಮಹತ್ವವನ್ನು ಅರಿತು ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದರು.

Read More