ಮಡಿಕೇರಿ ಜೂ.21 NEWS DESK : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ವತಿಯಿಂದ ನಡೆದ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ ಮೆಂಟ್ ಅಂತರ ಕಾಲೇಜು ಚರ್ಚಾ ಸ್ಪರ್ಧೆಯಲ್ಲಿ ಮಡಿಕೇರಿಯ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ ಮೆಂಟ್ ವಿದ್ಯಾರ್ಥಿನಿ ರಶ್ಮಿತಾ ಹಾಗೂ ಬಿ.ಬಿ.ದೇಚಕ್ಕ ಭಾಗವಹಿಸಿ ಪ್ರಥಮ ಬಹುಮಾನ ಹಾಗೂ ಪಾರಿತೋಷಕವನ್ನು ಪಡೆದುಕೊಂಡಿದ್ದಾರೆ. ಇವರನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ ಆರ್.ಎಸ್.ರೇಣುಕಾ ಹಾಗೂ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಲೇಖಕ: admin
ಮಡಿಕೇರಿ ಜೂ.21 NEWS DESK : ಹೆಣ್ಣು ಜಾನಪದ ಸಾಹಿತ್ಯ ರಚನೆಗೆ ಸ್ಫೂರ್ತಿಯಾಗಿದ್ದು ತನ್ನ ಸಂಸಾರದಲ್ಲಿ ಶಕ್ತಿಯಾಗಿದ್ದವಳು ಎಂದು ನಾಪೋಕ್ಲು ಸ.ಪ್ರ.ದ.ಕಾಲೇಜಿನ ಪ್ರಾಂಶುಪಾಲೆ ಡಾ.ಕಾವೇರಿ ಅಭಿಪ್ರಾಯಪಟ್ಟರು. ವಿರಾಜಪೇಟೆ ಸರಾಕರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ವಿಭಾಗದಿಂದ ನಡೆದ ಜಾನಪದ ಸಾಹಿತ್ಯದಲ್ಲಿ ಸ್ತ್ರೀ ಕುರಿತ ವಿಶೇಷ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು, ಮಾತನಾಡಿದರು. ಹೆಣ್ಣು ಸರಿ ಸಮನಾಗಿ ಹೊಲ ಗದ್ದೆಗಳಲ್ಲಿ ದುಡಿದು, ಮನೆಯ ಜವಾಬ್ದಾರಿಯನ್ನು ಹೊತ್ತು, ಸಂಸಾರ ಕುಟುಂಬಗಳ ನಿರ್ವಹಿಸುವಲ್ಲಿ ಹೆಣ್ಣು ಮೇಲುಗೈ ಸಾಧಿಸುವಳು, ಧಾರ್ಮಿಕ ಆಚರಣೆಗಳಲ್ಲಿ, ಸಭೆ ಸಮಾರಂಭಗಳು ನಿರ್ವಹಿಸುವಲ್ಲಿ ಹೆಣ್ಣಿನ ಪಾತ್ರ ಮುಖ್ಯವಾಗಿರುತ್ತದೆ. ಅನೇಕ ಜಾನಪದ ಗೀತೆಗಳಲ್ಲಿ ಹೆಣ್ಣಿನ ತ್ಯಾಗ, ನಿಷ್ಠೆ, ಧೈರ್ಯವನ್ನು ಪ್ರಶಂಸಿಸಲಾಯಿತು. ದಾಂಪತ್ಯದಲ್ಲಿ ಹೆಣ್ಣಿನ ಉದಾರತೆಯನ್ನು ಜಾನಪದ ಗೀತೆಗಳು ತಿಳಿಸುತ್ತವೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ.ಸಿ.ದಯಾನಂದ, ಜಾನಪದವು ಸಾಹಿತ್ಯದ ಮೂಲ ಬೇರು ಮತ್ತು ಪ್ರೇರಣೆ ಆಗಿದೆ ಎಂದು ವಿವರಿಸಿದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ. ಕೆ.ಬಸವರಾಜು ಪ್ರಸ್ತಾವಿಕ ಭಾಷಣ ಮಾಡಿದರೆ. ಸಹಾಯಕ…
ಮಡಿಕೇರಿ ಜೂ.21 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ವತಿಯಿಂದ ಅಂತರಾಷ್ಟ್ರೀಯ 10ನೇ ಯೋಗ ದಿನಾಚರಣೆಯು ಅರ್ಥಪೂರ್ಣವಾಗಿ ಜರುಗಿತು. ನಗರದ ಕೆಳಗಿನ ಗೌಡ ಸಮಾಜದಲ್ಲಿ ಯೋಗಾಭಿಮಾನಿಗಳು ಭಾಗವಹಿಸಿ ಯೋಗ, ಧ್ಯಾನ ಮಾಡಿ ಗಮನ ಸೆಳೆದರು. ಸೂರ್ಯ ನಮಸ್ಕಾರ, ವೃಕ್ಷಾಸನ, ಪಾದಹಸ್ತಾಸನ, ಉದ್ರ್ವಾಸನ, ತಾಡಾಸನ, ಅರ್ಧ ಮತ್ಸೇಂದ್ರಾಸನ, ಭುಜಂಗಾಸನ, ಪವನಮುಕ್ತಾಸನ, ಭದ್ರಾಸನ, ತ್ರಿಕೋನಾಸನ, ಉಷ್ಟ್ರಾಸನ, ವಜ್ರಾಸನ, ಶಲಭಾಸನ, ಶಶಾಂಕಾಸನ, ಮಂಡೂಕಾಸನ, ವಕ್ರಾಸನ, ಮಕರಾಸನ, ಸೇತುಬಂಧಾಸನ, ಉತ್ಥಾನ ಪಾದಾಸನ, ಅರ್ಧಹಲಾಸನ, ಶವಾಸನ, ಕಪಾಲಭಾತಿ, ಶೀತಲಿ ಪ್ರಾಣಾಯಾಮ, ಭ್ರಾಮರಿ ಪ್ರಾಣಾಯಾಮ, ಧ್ಯಾನ, ನಾಡಿಶೋಧ ಪ್ರಾಣಾಯಾಮ ಹೀಗೆ ಹಲವು ರೀತಿಯ ಯೋಗ ಮಾಡಲಾಯಿತು. ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಸಿ.ರೇಣುಕಾದೇವಿ, ಯೋಗ ಗುರು ರಮೇಶ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಮಡಿಕೇರಿ ಜೂ.21 NEWS DESK : ರಾಜಕೀಯ ದುರುದ್ದೇಶದಿಂದ ವಿರಾಜಪೇಟೆಯ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರ ಪ್ರತಿಕೃತಿಯನ್ನು ವಿರಾಜಪೇಟೆಯಲ್ಲಿ ಸುಟ್ಟಿರುವ ಘಟನೆಯನ್ನು ಕೊಡವಾಮೆರ ಕೊಂಡಾಟ ಸಂಘಟನೆ ಖಂಡಿಸಿದೆ ಪಕ್ಷ ರಾಜಕಾರಣ ಅವರವರ ವೈಯಕ್ತಿಕ ಹಕ್ಕು, ಪ್ರತಿಭಟನೆ ಮಾಡುವುದು, ಪ್ರಶ್ನಿಸುವುದು ಪ್ರತಿಪಕ್ಷಗಳ ಕರ್ತವ್ಯ ಮತ್ತು ಹಕ್ಕು ಕೂಡ. ಆದರೆ ಸಂಬಂಧವೇ ಇಲ್ಲದ ವಿಚಾರಕ್ಕೆ ಪೊನ್ನಣ್ಣರ ಪ್ರತಿಕೃತಿ ದಹಿಸಿದ ಘಟನೆ ಇಡೀ ಕೊಡವ ಜನಾಂಗಕ್ಕೆ ಮಾಡಿದ ಅವಮಾನ. ಶವ ಯಾತ್ರೆ ಹಾಗೂ ಸಂಸ್ಕಾರಕ್ಕೆ ಕೊಡವ ಜನಾಂಗದಲ್ಲಿ ತನ್ನದೇ ಆದ ಮಹತ್ವವಿದೆ, ಗೌರವವವಿದೆ. ಆದರೆ ಆ ಪಾವಿತ್ರತೆಯನ್ನೂ ಮೀರಿ ಬೀದಿಯಲ್ಲಿ ನಡೆಸಿದ ಅಣಕುಯಾತ್ರೆ ಕಳವಳಕಾರಿ ಮತ್ತು, ಕೊಡವ ಜನಾಂಗದ ಅವಹೇಳನವಾದದ್ದು. ಪಕ್ಷಾತೀತವಾಗಿ, ಜನಾಂಗೀಯ ಪರವಾಗಿ ನಿಲುವುಳ್ಳವರಾಗಿ, ಈ ಘಟನೆಯನ್ನು ಕೊಡವಾಮೆರ ಕೊಂಡಾಟ ಸಂಘಟನೆ ತೀವ್ರವಾಗಿ ಖಂಡಿಸುವುದಾಗಿ ಸಂಘಟನೆಯ ಪ್ರಮುಖರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಜೂ.20 NEWS DESK : ನಾಗರಹೊಳೆ ಪ್ರವಾಸಿಗರ ಅನುಕೂಲಕ್ಕಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾಗಿರುವ ಮೂರು ಮಿನಿ ಬಸ್ ಗಳಿಗೆ ಇಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ವಿರಾಜಪೇಟೆಯ ಶಾಸಕ ಎ.ಎಸ್.ಪೊನ್ನಣ್ಣ ಅವರು ಹಸಿರು ನಿಶಾನೆ ತೋರಿದರು. ವಿಧಾನಸೌಧದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕರುಗಳಾದ ಜಿ.ಡಿ.ಹರೀಶ್ ಗೌಡ, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರು ಜೂ.20 NEWS DESK : ಕೊಡಗು ಮಾನವ ವನ್ಯಪ್ರಾಣಿ ಸಂಘರ್ಷ ಉಪಶಮನ ಪ್ರತಿಷ್ಠಾನ ನಿಧಿಯ ಮಂಡಳಿಯ 6 ನೇ ಸಭೆಯು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಯಲ್ಲಿ ಮುಖ್ಯಮಂತ್ರಿ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ ಎಸ್ ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಹಾಗೂ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳು ಹಾಜರಿದ್ದು, ಹಲವು ವಿಚಾರಗಳ ಬಗ್ಗೆ ಚರ್ಚಿಸಿದರು. ನಾಗರಹೊಳೆ, ಬಂಡೀಪುರ, ಬಿ.ಆರ್.ಟಿ. ಸೇರಿದಂತೆ ರಾಜ್ಯದ ಅರಣ್ಯ ಪ್ರದೇಶದಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಲಾಂಟನಾ, ಸನ್ನಾ ಮತ್ತು ಇತರ ಕಳೆಯನ್ನು ತ್ವರಿತವಾಗಿ ತೆರವುಗೊಳಿಸಲು ಕ್ರಮ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ನಡೆದ ಹುಲಿ ಸಂರಕ್ಷಣಾ ಪ್ರತಿಷ್ಠಾನದ 15ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹುಲಿ ಪ್ರತಿಷ್ಠಾನದ ಮೂಲ ಉದ್ದೇಶ ಹುಲಿ ಮತ್ತು ಹುಲಿ ಕಾಡಿನ ವೈವಿಧ್ಯಮಯ…
ಮಡಿಕೇರಿ ಜೂ.20 NEWS DESK : ಹಳೆಯ ಕಟ್ಟಡವೊಂದು ಇದ್ದಕ್ಕಿದ್ದಂತೆ ಕುಸಿದು ಬಿದ್ದ ಪರಿಣಾಮ ಒಬ್ಬರು ತೀವ್ರವಾಗಿ ಗಾಯಗೊಂಡು ಅದೃಷ್ಟವಶಾತ್ ಐವರು ಅಪಾಯದಿಂದ ಪಾರಾದ ಘಟನೆ ಕೊಡಗು ಜಿಲ್ಲೆಯ ಗೋಣಿಕೊಪ್ಪ ಪಟ್ಟಣದಲ್ಲಿ ನಡೆದಿದೆ. ಇಂದು ಮಧ್ಯಾಹ್ನ 2 ಗಂಟೆ ವೇಳೆಗೆ ಮುಖ್ಯ ರಸ್ತೆಯಲ್ಲಿದ್ದ ಕಟ್ಟಡ ನೆಲಸಮಗೊಂಡಿದ್ದು, ಐವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದು, ತೀವ್ರವಾಗಿ ಗಾಯಗೊಂಡಿರುವ ದೇವರಪುರ ಗ್ರಾಮದ ಮಧು ಪಿ.ಕೆ ಎಂಬುವವರನ್ನು ಆಸ್ಪತೆಗೆ ದಾಖಲಿಸಲಾಗಿದೆ. ಸುಮಾರು 72 ವರ್ಷಗಳಷ್ಟು ಹಳೆಯದಾದ ಈ ಕಟ್ಟಡದಲ್ಲಿ ಅಂಬೂರ್ ದಮ್ ಬಿರಿಯಾನಿ ಹೊಟೇಲ್ ಮತ್ತು ಮಟನ್ ಅಂಗಡಿ ಕಾರ್ಯ ನಿರ್ವಹಿಸುತ್ತಿತ್ತು. ಕಟ್ಟಡ ಕುಸಿಯುವಾಗ ಉಂಟಾದ ಶಬ್ಧಕ್ಕೆ ಹೊಟೇಲ್ ನಡೆಸುತ್ತಿದ್ದ ತಿರುಮುರುಗನ್, ಅವರ ಕುಟುಂಬದವರು ಹಾಗೂ ಗ್ರಾಹಕರು ಹೊರಗೆ ಓಡಿ ಬಂದಿದ್ದಾರೆ. ಗ್ರಾಹಕರೊಬ್ಬರು ಸಿಕ್ಕಿ ಹಾಕಿಕೊಂಡಿರುವುದಾಗಿ ಮಾಹಿತಿ ಇದ್ದ ಹಿನ್ನೆಲೆ ಗೋಣಿಕೊಪ್ಪ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಗ್ರಾಹಕ ಮಧು ಪಿ.ಕೆ ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದರು. ತಿರುಮುರುಗನ್ (60), ಪತ್ನಿ ಅಲಮೇಲು (46), ಪುತ್ರ…
ಮಡಿಕೇರಿ ಜೂ.20 NEWS DESK : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ವಿವಿಧ ಇಲಾಖೆಗಳ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಕಾರ್ಯಕ್ರಮಗಳ ಯೋಜನೆ ಸಂಬಂಧಿಸಿದಂತೆ ಮಾಹಿತಿ ಪಡೆದು ಅವರು ಮಾತನಾಡಿದರು. ಕಳೆದ ಬಾರಿ ವಿವಿಧ ಇಲಾಖೆಯ ಕಾರ್ಯಕ್ರಮಗಳ ಪ್ರಗತಿ ಸಂಬಂಧಿಸಿದಂತೆ ಮಾಹಿತಿ ಪಡೆದ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಕಳೆದ ವರ್ಷ ಶೇಕಡಾವಾರು ಪ್ರಗತಿ ಸಾಧಿಸಲಾಗಿದ್ದು, ಈ ಬಾರಿಯೂ ಸಹ ಆರಂಭದಿಂದಲೇ ಕಾರ್ಯಕ್ರಮಗಳನ್ನು ಅರ್ಹರಿಗೆ ತಲುಪಿಸುವಂತೆ ಸೂಚನೆ ನೀಡಿದರು. ಸರ್ಕಾರ ನಿಗದಿ ಮಾಡಿರುವ ಗುರಿಯನ್ನು ತಲುಪಬೇಕು. ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಕಾರ್ಯಕ್ರಮಗಳನ್ನು ಆದ್ಯತೆ ಮೇಲೆ ಪ್ರಗತಿ ಸಾಧಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿ.ಪಂ.ಉಪ ಕಾರ್ಯದರ್ಶಿ ಎಸ್.ಧನರಾಜ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ಸಮಗ್ರ ಗಿರಿಜನ ಯೋಜನಾಧಿಕಾರಿ ಎಸ್.ಹೊನ್ನೇಗೌಡ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಸೋಮಸುಂದರ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ…
ಮಡಿಕೇರಿ ಜೂ.20 NEWS DESK : ಕೊಡಗು ಜಿಲ್ಲೆಯಲ್ಲಿ ಜೂ.26 ರಿಂದ ಜು. 5 ರವರೆಗೆ ನಡೆಯುವ ದ್ವಿತೀಯ ಪಿ.ಯು.ಸಿ ಪರೀಕ್ಷೆ-3 ಗಳನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳಾದ ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಮುಖ್ಯ ಅಧೀಕ್ಷಕರು ಕ್ಯಾಮರಾ ಹೊಂದಿರದ ಸಾಮಾನ್ಯ ಮೊಬೈಲ್ ಮಾತ್ರ ಇರಿಸಿಕೊಳ್ಳಬಹುದು. ಉಳಿದಂತೆ ಎಲ್ಲಾ ಪರೀಕ್ಷಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್, ಸ್ಮಾಟ್ ವಾಚ್ ಮುಂತಾದ ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ…
ಮಡಿಕೇರಿ ಜೂ.20 NEWS DESK : ಭಾರತೀಯ ಸೇನೆ/ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಹಿಂದುಳಿದ ವರ್ಗಕ್ಕೆ ಸೇರಿದ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಅಭ್ಯರ್ಥಿಗಳಿಗೆ 2024-25 ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.(ಬಾಲಕರಿಗೆ ಮಾತ್ರ). ಆಸಕ್ತ ಅಭ್ಯರ್ಥಿಗಳು ಜುಲೈ, 10 ರೊಳಗೆ ಅರ್ಜಿ ಸಲ್ಲಿಸಿ ಈ ಸೌಲಭ್ಯವನ್ನು ಪಡೆಯಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ. ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿ ಪ್ರವರ್ಗ-1 ಕ್ಕೆ ರೂ.2.50 ಲಕ್ಷ ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ)ಗಳಿಗೆ ರೂ.1 ಲಕ್ಷ. ಅಭ್ಯರ್ಥಿಯು 10ನೇ ತರಗತಿಯನ್ನು ಉತ್ತೀರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕಗಳನ್ನು ಪಡೆದಿರಬೇಕು. ಗ್ರೇಡಿಂಗ್ ಸಿಸ್ಟಮ್ ಇದ್ದಲ್ಲಿ ಸಮಾನವಾದ ಗ್ರೇಡ್ ಪಡೆದಿರಬೇಕು. ಅಭ್ಯರ್ಥಿಯ ವಯೋಮಿತಿ 17 ರಿಂದ 20 ವರ್ಷದೊಳಗಿರಬೇಕು(10 ಜುಲೈ 2004 ರಿಂದ ಜುಲೈ…






