ಲೇಖಕ: admin

ಮಡಿಕೇರಿ ಜೂ.7 NEWS DESK : ಕಕ್ಕಬ್ಬೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿದ್ಯಾರ್ಥಿಗಳು ಶಾಲೆಯ ಆವರಣದಲ್ಲಿ ಹಣ್ಣಿನ ಗಿಡಗಳನ್ನು ನೆಟ್ಟು ಪರಿಸರ ಜಾಗೃತಿ ಮೂಡಿಸಿದರು. ಭಾಗಮಂಡಲ ಉಪ ವಲಯ ಅರಣ್ಯಾಧಿಕಾರಿ ಫಿರೋಜ್‍ಖಾನ್ ಹಾಗೂ ಕಾಳೇಗೌಡ ಮತ್ತು ಅರಣು ಇಲಾಖೆ ಸಿಬ್ಬಂದಿಗಳು ಮಾತನಾಡಿ, ಪರಿಸರ ಸಂರಕ್ಷಣೆಯ ಕುರಿತು ಮಾಹಿತಿ ನೀಡಿದರು. ಈ ಸಂದರ್ಭ ಕುಂಜಿಲ-ಕಕ್ಕಬ್ಬೆ ಗ್ರಾ.ಪಂ ಪಿಡಿಒ ವೈ.ಬಿ.ಅಶೋಕ್ ಕುಮಾರ್, ಗ್ರಾ.ಪಂ ಸದಸ್ಯರಾದ ಹೆಚ್.ಡಿ.ಇಂದಿರಾ, ಶಾಲಾ ಶಿಕ್ಷಕರಾದ ಮಾಲತಿ ನಾಗರಾಜ್, ಎಂ.ಹೆಚ್.ರಜೀನಾ, ಕೆ.ಎ.ಜಲಜಾಕ್ಷಿ ಹಾಗೂ ಮಕ್ಕಳು ಹಾಜರಿದ್ದರು.

Read More

ಮಡಿಕೇರಿ ಜೂ.7 NEWS DESK : ಪೊನ್ನಂಪೇಟೆಯ ಕಾಟ್ರಕೊಲ್ಲಿಯ ಎಸ್‍ಎನ್‍ಡಿಪಿ  ಸದಸ್ಯರಾದ ಮಣಿ ಹಾಗೂ ಶುಭ ದಂಪತಿಗಳ ಪ್ರಥಮ ಪುತ್ರಿ  ಅಶ್ವದಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆಯು ಇಂದು ಮಧ್ಯಾಹ್ನದ ನಂತರ ಪೊನ್ನಂಪೇಟೆಯ ಹಿಂದೂ ರುದ್ರಭೂಮಿಯಲ್ಲಿ ನಡೆಯಲಿದೆ. ಅಶ್ವದಿ ವಿರಾಜಪೇಟೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ಬಿ.ಎ.ಪದವಿ ವ್ಯಾಸಂಗ ಮಾಡುತ್ತಿದ್ದು, ಕಾಲೇಜಿನ ಪ್ರಾಂಶುಪಾಲರು ಭೋದಕ ಮತ್ತು ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

Read More

ಮೈಸೂರು ಜೂ.7 NEWS DESK : ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯ ಡಾ.ಧನಂಜಯ ಸರ್ಜಿ ಭರ್ಜರಿ ಬಹುಮತದಿಂದ ಗೆಲುವು ಕಂಡಿದ್ದಾರೆ. ರೋಚಕ ಕದನದಲ್ಲಿ ಬಿಜೆಪಿಯ ಧನಂಜಯ ಸರ್ಜಿ , ಕಾಂಗ್ರೇಸ್‍ನ ಆಯನೂರು ಮಂಜುನಾಥ್ , ಪಕ್ಷೇತರ ಅಭ್ಯರ್ಥಿ ಮಾಜಿ ಶಾಸಕ ರಘುಪತಿ ಭಟ್ ಕಣದಲ್ಲಿ ಇದ್ದರು. ದಾವಣಗೆರೆಯ ಹೊನ್ನಳ್ಳಿಯಿಂದ ಶಿವಮೊಗ್ಗ, ಉಡುಪಿ- ಚಿಕ್ಕಮಗಳೂರು, ದಕ್ಷಿಣ ಕನ್ನಡ, ಮಡಿಕೇರಿಯ ವರೆಗೆ ಐದುವರೆ ಲೋಕಸಭಾ ಕ್ಷೇತ್ರಗಳನ್ನೊಳಗೊಂಡ ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ ಶಿವಮೊಗ್ಗದ ಖ್ಯಾತ ಮಕ್ಕಳ ತಜ್ಞ ಡಾ.ಧನಂಜಯ ಸರ್ಜಿಯವರು 37627 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಜಯಭೇರಿ ಬಾರಿಸಿದರು. ಕಾಂಗ್ರೇಸ್‍ನ ಆಯನೂರು ಮಂಜುನಾಥ್ 13516 , ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್ 7039, ಎಸ್ ಪಿ ದಿನೇಶ್ 2518 ಮತಗಳನ್ನು ಪಡೆದರು. ಮೈಸೂರಿನ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಮತಎಣಿಕೆ ನಡೆದಿದ್ದು, ಮಧ್ಯರಾತ್ರಿ 12 ಗಂಟೆಗೆ ಪದವೀಧರ ಕ್ಷೇತ್ರದ ಫಲಿತಾಂಶ ಹೊರಬಿದ್ದಿದೆ. ಒಟ್ಟು 66497 ಮತಗಳು ಚಲಾವಣೆಯಾಗಿದ್ದು ಅದರಲ್ಲಿ 61382 ಮತಗಳು ಅಂಗೀಕೃತವಾಗಿತ್ತು.…

Read More

ಮೈಸೂರು ಜೂ.6 NEWS DESK : ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ನ ಎಸ್.ಎಲ್.ಭೋಜೇಗೌಡ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕುಮಾರ್ ಸೋಲು ಅನುಭವಿಸಿದ್ದಾರೆ. ಭೋಜೇಗೌಡರು 9829 ಮತಗಳನ್ನು ಗಳಿಸಿ 5267 ಮತಗಳ ಅಂತರದಿಂದ ಗೆಲುವು ಸಾಧಿಸಿದರು. ಕೆ.ಕೆ.ಮಂಜುನಾಥ್ ಕುಮಾರ್ 4562 ಮತಗಳನ್ನಷ್ಟೇ ಪಡೆದರು. ಒಟ್ಟು 19479 ಮತಗಳು ಚಲಾವಣೆಗೊಂಡಿದ್ದು, 821 ಮತಗಳು ಅಸಿಂಧು ಆಗಿವೆ. ಬಿಜೆಪಿ, ಜೆಡಿಎಸ್ ಮೈತ್ರಿ ಕೂಟದ ಭೋಜೇಗೌಡರ ಗೆಲುವಿನಿಂದ ಕಾಂಗ್ರೆಸ್ ಗೆ ಆಘಾತವಾಗಿದೆ. ಜೆಡಿಎಸ್ ಕಾರ್ಯಕರ್ತರು ಜಯಘೋಷದೊಂದಿಗೆ ಸಂಭ್ರಮಿಸಿದರು.

Read More

ಮಡಿಕೇರಿ ಜೂ.6 NEWS DESK : ಮೈಸೂರು ಸಂಸ್ಥಾನದಲ್ಲಿ ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮ ದಿನಾಚರಣೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಕೊಡಗು ಜಿಲ್ಲಾ ಘಟಕ ವತಿಯಿಂದ ಸರಳವಾಗಿ ಆಚರಿಸಲಾಯಿತು. ನಗರದ ಜಿಲ್ಲಾ ಕಸಾಪ ಕಚೇರಿಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಕಸಾಪ ಪದಾಧಿಕಾರಿಗಳು ಪುಷ್ಪಾರ್ಚನೆ ನೆರವೇರಿಸಿ ಗೌರವ ಅರ್ಪಿಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಕನ್ನಡ, ನಾಡು-ನುಡಿಗೆ ಮೈಸೂರು ಸಂಸ್ಥಾನದಲ್ಲಿ ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಅಪಾರ ಎಂದು ಕೊಂಡಾಡಿದರು. ಶಿಕ್ಷಣ, ಆರೋಗ್ಯ, ನೀರಾವರಿ, ಕೈಗಾರಿಕೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ತಮ್ಮ ಅಧಿಕಾರ ಅವಧಿಯಲ್ಲಿ ಹೆಚ್ಚಿನ ಕಾಳಜಿ ವಹಿಸಿ ಅಭಿವೃದ್ಧಿಗೆ ಮುನ್ನುಡಿ ಬರೆದಿದ್ದಾರೆ ಎಂದು ಟಿ.ಪಿ.ರಮೇಶ್ ವಿವರಿಸಿದರು. ಸರ್ವರಿಗೂ ಸಾಮಾಜಿಕ ನ್ಯಾಯ ಒದಗಿಸುವಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಶ್ರಮಿಸಿದ್ದಾರೆ. ರಾಜರ ಆಡಳಿತದ ಮೂಲಕ ಜನಸಾಮಾನ್ಯರ ಬದುಕಿಗೆ ಸಾಧ್ಯವಾದಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಾ ಇಂದಿಗೂ…

Read More

ಮಡಿಕೇರಿ ಜೂ.6 NEWS DESK : ವಿಶ್ವ ಪರಿಸರ ದಿನದ ಅಂಗವಾಗಿ ವಿರಾಜಪೇಟೆ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಅಭಿವೃದ್ದಿಗೊಂಡ ಅಮೃತ್ ಸರೋವರ ಕೆರೆಗಳ ದಡದಲ್ಲಿ ಸಸಿಗಳನ್ನು ನೆಡುವುದರ ಮೂಲಕ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮನರೇಗಾ ಸಹಾಯಕ ನಿರ್ದೇಶಕರಾದ ಎಂ.ಡಿ.ಶ್ರೀನಿವಾಸ್ ಗಿಡಗಳನ್ನು ಸಾಂಕೇತಿಕವಾಗಿ ನೆಡುವುದರ ಮೂಲಕ ಚಾಲನೆ ನೀಡಿ, ನೀರಿನ ಸಂರಕ್ಷಣೆ ಹಾಗೂ ಉಳಿವಿಗಾಗಿ ಮನರೇಗಾ ಯೋಜನೆಯಡಿ ಕೆರೆಗಳನ್ನು ಅಭಿವೃದ್ದಿಪಡಿಸಲಾಗಿದೆ. ಕೆರೆಗಳ ದಡದಲ್ಲಿ ಅಲಂಕಾರಿಕ ಹಾಗೂ ನೆರಳು ನೀಡುವ ಸಸಿಗಳನ್ನು ಬೆಳೆಸುವುದು ಸೂಕ್ತವಾಗಿದೆ ಎಂದು ತಿಳಿಸಿದರು. ಈ ಸಂದರ್ಭ ಹುದಿಕೇರಿ ಅಧ್ಯಕ್ಷರಾದ ಕಾವೇರಮ್ಮ, ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಾದ ಅನೀಲ್, ತಾಂತ್ರಿಕ ಸಹಾಯಕ ಅಭಿಯಂತರರಾದ ನಿರಂಜನ್, ಹೇಮಂತ್, ತಾಲ್ಲೂಕು ಸಂಯೋಜಕರಾದ ನರೇಂದ್ರ ಹಾಗೂ ಪಂಚಾಯಿತಿ ಸಿಬ್ಬಂದಿ ವರ್ಗದವರು ಹಾಜರಿದ್ದರು.

Read More

ಮಡಿಕೇರಿ ಜೂ.6 NEWS DESK : ವಿದ್ಯಾರ್ಥಿ ಜೀವನದಲ್ಲಿರುವಾಗಲೇ ಪರಿಸರದ ಬಗ್ಗೆ ಹೆಚ್ಚಿನ ಅರಿವು ಮತ್ತು ಕಾಳಜಿಯನ್ನು ಬೆಳೆಸಿಕೊಳ್ಳಬೇಕು ಎಂದು ಜಿ.ಪಂ.ಸಿಇಒ ವರ್ಣಿತ್ ನೇಗಿ ತಿಳಿಸಿದರು. ಕೊಡಗು ಜಿಲ್ಲಾ ಪಂಚಾಯತ್ ಮತ್ತು ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಗಾಳಿಬೀಡು ಗ್ರಾಮ ಪಂಚಾಯತಿಯ ಚಪ್ಪಂಡ ಕೆರೆ ಅಮೃತ ಸರೋವರ ದಂಡೆಯಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪರಿಸರವನ್ನು ಸಂರಕ್ಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಮಕ್ಕಳೆಲ್ಲರೂ ಪರಿಸರ ನಾಯಕರು ಎಂದು ಬಣ್ಣಿಸಿದರು. ಗಿಡ ನೆಡುವುದು ಮಾತ್ರವೇ ಪರಿಸರ ಸಂರಕ್ಷಣೆಯಲ್ಲ. ವಿದ್ಯುತ್‍ನ ಮಿತ ಬಳಕೆ, ಇಂಧನಗಳ ಮಿತ ಬಳಕೆ ಸಹ ಪರಿಸರ ಸಂರಕ್ಷಣೆಯ ಪ್ರಮುಖ ಭಾಗವಾಗಿದೆ ಎಂದು ತಿಳಿಸಿದರು. ಇದೇ ವೇಳೆ ಮಹಾತ್ಮಗಾಂಧಿ ನರೇಗಾ ಯೋಜನೆಯಡಿಯಲ್ಲಿ ಅಭಿವೃದ್ಧಿ ಪಡಿಸಲಾಗಿರುವ ಚಪ್ಪಂಡ ಕೆರೆ ಅಮೃತ ಸರೋವರದ ದಂಡೆಯಲ್ಲಿ ಮಾವು, ಹಲಸು ಸೇರಿದಂತೆ ವಿವಿಧ ಬಗೆಯ ಸಸಿಗಳನ್ನು ನೆಡಲಾಯಿತು. ಶಾಲಾ ಮಕ್ಕಳಿಗೆ ಚಿತ್ರಕಲೆ ಸ್ಪರ್ಧೆ ನಡೆಯಿತು. ಗಾಳಿಬೀಡು ಗ್ರಾ.ಪಂ ಅಧ್ಯಕ್ಷರಾದ ಬಿ.ಜಿ.ಉಷಾ, ಜಿ.ಪಂ.ಉಪ ಕಾರ್ಯದರ್ಶಿ ಜಿ.ಧನರಾಜು,…

Read More

ಮಡಿಕೇರಿ ಜೂ.6 NEWS DESK : ಪಾರಾಣೆಯ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಪಠ್ಯ ಪುಸ್ತಕಗಳನ್ನು ವಿತರಿಸಿದರು. ಈ ಸಂದರ್ಭ ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಪ್ರಮುಖರಾದ ತೆನ್ನಿರಾ ಮೈನಾ, ಶರೀನ್, ಗಿರೀಶ್ ಹಾಜರಿದ್ದರು. ವರದಿ : ನೌಫಲ್ ಕಡಂಗ

Read More

ವಿರಾಜಪೇಟೆ ಜೂ.6 NEWS DESK  : ದೇವಣಗೇರಿ ಬಿ.ಸಿ.ಪ್ರೌಢಶಾಲೆಯ ಸಸ್ಯಕಾಶಿ ಇಕೋಕ್ಲಬ್ ವತಿಯಿಂದ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ವಿವಿಧ ಸಸಿಗಳನ್ನು ನೆಟ್ಟರು. ನಂತರ ಜಾಗೃತಿ ಜಾಥಾ ಮೂಲಕ ಪರಿಸರ ಸಂರಕ್ಷಣೆಗೆ ಕರೆ ನೀಡಿದರು. ಈ ಸಂದರ್ಭ ಶಾಲಾ ಮುಖ್ಯೋಪದ್ಯಾಯರಾದ ಲೋಕೇಶ್ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. 

Read More

ಮಡಿಕೇರಿ ಜೂ.6 NEWS DESK : ಸುಭದ್ರ ದೇಶಕ್ಕಾಗಿ ಕೊಡಗಿನ ಸ್ವಾಭಿಮಾನಿ ಮತದಾರರು ಕಾಂಗ್ರೆಸ್ ನ ಬಿಟ್ಟಿಭಾಗ್ಯಗಳನ್ನು ತಿರಸ್ಕರಿಸಿ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರನ್ನು ಗೆಲ್ಲಿಸಿದ್ದಾರೆ ಎಂದು ಕೊಡಗು ಜಿಲ್ಲಾ ಬಿಜೆಪಿ ವಕ್ತಾರ ಸುಬ್ರಮಣ್ಯ ಉಪಾಧ್ಯಾಯ ಅಭಿಪ್ರಾಯಪಟ್ಟಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡಗು ಜಿಲ್ಲೆ ಎಂದೆಂದಿಗೂ ಬಿಜೆಪಿಯ ಭದ್ರಕೋಟೆ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದರೂ ಯದುವೀರ್ ಅವರಿಗೆ 73 ಸಾವಿರಕ್ಕೂ ಅಧಿಕ ಮತಗಳ ಮುನ್ನಡೆಯನ್ನು ನೀಡಿದ್ದಾರೆ. ಸ್ವಾಭಿಮಾನಿ ಮತದಾರರಿಗೆ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಜನರ ತೆರಿಗೆ ಹಣವನ್ನು ಅಭಿವೃದ್ಧಿ ಕಾರ್ಯಗಳಿಗೆ ವಿನಿಯೋಗಿಸದೆ ಜನರಿಗೆ ಬೇಡವಾದ ಬಿಟ್ಟಿಭಾಗ್ಯಗಳಿಗೆ ಮೀಸಲಿಡುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಮತದಾರರು ಸರಿಯಾದ ಪಾಠವನ್ನೇ ಕಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಷ್ಠೆಯ ಕಣವಾಗಿದ್ದ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೀನಾಯವಾಗಿ ಸೋಲು ಕಂಡಿದ್ದಾರೆ. ಜಿಲ್ಲೆಯ ಇಬ್ಬರು ಕಾಂಗ್ರೆಸ್ ಶಾಸಕರುಗಳು ಮತ ಗಳಿಸಿಕೊಡುವಲ್ಲಿ ವಿಫಲರಾಗಿದ್ದಾರೆ. ಇಂಡಿಯಾ…

Read More