ಲೇಖಕ: admin

ಕುಶಾಲನಗರ ಮತ್ತು ಸೋಮವಾರಪೇಟೆ : ಕುಶಾಲನಗರ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದುಕೊರತೆಗಳನ್ನು ನಿವಾರಿಸಲು ಸಭೆಯು ಜೂನ್, 24 ರಂದು ಬೆಳಗ್ಗೆ 11.30 ರಿಂದ ಮಧ್ಯಾಹ್ನ 12.30 ಗಂಟೆವರೆಗೆ ಕುಶಾಲನಗರ ಉಪವಿಭಾಗ ಕಚೇರಿ ಆವರಣದಲ್ಲಿ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಹಾಗೆಯೇ ಸೋಮವಾರಪೇಟೆ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದುಕೊರತೆಗಳನ್ನು ನಿವಾರಿಸಲು ಸಭೆಯು ಜೂ.24 ರಂದು ಮಧ್ಯಾಹ್ನ 2.30 ರಿಂದ 3.30 ಗಂಟೆವರೆಗೆ ಸೋಮವಾರಪೇಟೆ ಉಪವಿಭಾಗ ಕಚೇರಿ ಆವರಣದಲ್ಲಿ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಕುಶಾಲನಗರ ಮತ್ತು ಸೋಮವಾರಪೇಟೆ ವ್ಯಾಪ್ತಿಯ ಸಾರ್ವಜನಿಕರು/ ವಿದ್ಯುತ್ ಗ್ರಾಹಕರ ವಿದ್ಯುತ್‍ಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಸಭೆ ಹಾಜರಾಗುವಂಎ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ. ಮಡಿಕೇರಿ :: ಮಡಿಕೇರಿ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದುಕೊರತೆ ನಿವಾರಿಸುವ ಸಭೆಯು ಜೂನ್, 25 ರಂದು ಬೆಳಗ್ಗೆ 11.30…

Read More

ಮಡಿಕೇರಿ ಜೂ.20 NEWS DESK : ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿನ ಪ್ರಧಾನಮಂತ್ರಿ ಮತ್ಸ್ಯ ಸಂಪದ (ಪಿಎಂಎಂಎಸ್‍ವೈ) ಯೋಜನೆಯಡಿ (1.4) ಹೊಸ ಮೀನುಕೃಷಿ ಕೊಳಗಳ ನಿರ್ಮಾಣ ಮತ್ತು (1.5) ಹೂಡಿಕೆ ವೆಚ್ಚಕ್ಕೆ ಸಹಾಯ (ಸಾಮಾನ್ಯ, ಮಹಿಳೆ ಮತ್ತು ಪ.ಜಾತಿ ಫಲಾನುಭವಿಗಳಿಗೆ ಮಾತ್ರ). ಮತ್ತು (2.7) ಕಡಲಚಿಪ್ಪು ಕೃಷಿ (ಮಸ್ಸೆಲ್ಸ್, ಕ್ಲಾಮ್ಸ್, ಮುತ್ತು ಇತ್ಯಾದಿ) (1-ಮಹಿಳೆ). (5.4) ಬ್ಯಾಕ್ಯಾರ್ಡ್ ಮಿನಿ ಆರ್.ಎ.ಎಸ್ ಘಟಕಗಳ ಸ್ಥಾಪನೆ(1-ಮಹಿಳೆ) ಹಾಗೂ (6.5) ಮೋಟಾರ್ ಸೈಕಲ್ ಮತ್ತು ಐಸ್‍ಬಾಕ್ಸ್(1-ಮಹಿಳೆ). ಈ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜು.12 ಕೊನೆ ದಿನವಾಗಿದೆ. ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.40 ರಷ್ಟು ಮತ್ತು ಶೇ.60ರಷ್ಟು, ಪ.ಜಾತಿ ಮತ್ತು ಮಹಿಳಾ ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಮಡಿಕೇರಿ, ಪೊನ್ನಂಪೇಟೆ ಮತ್ತು ಸೋಮವಾರಪೇಟೆ ಅವರನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

Read More

ಮಡಿಕೇರಿ ಜೂ.20 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ವತಿಯಿಂದ ಅಂತರಾಷ್ಟ್ರೀಯ 10ನೇ ಯೋಗ ದಿನಾಚರಣೆಯು ಜೂನ್, 21 ರಂದು ಬೆಳಗ್ಗೆ 6.30 ಗಂಟೆಗೆ ನಗರದ ಕೆಳಗಿನ ಗೌಡ ಸಮಾಜದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಬೋಸರಾಜು ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕರಾದ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರು ಮತ್ತು ಶಾಸಕರಾದ ಎ.ಎಸ್.ಪೊನ್ನಣ್ಣ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಬೋಜೇಗೌಡ, ಡಾ.ಧನಂಜಯ ಸರ್ಜಿ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಜಿ.ಪಂ.ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಸಿ.ರೇಣುಕಾದೇವಿ ಇತರರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಜೂ.20 NEWS DESK : ಹಳೆಯ ಕಟ್ಟಡವೊಂದು ಇದ್ದಕ್ಕಿದ್ದಂತೆ ಕುಸಿದು ಬಿದ್ದ ಪರಿಣಾಮ ಹಲವರು ಗಾಯಗೊಂಡಿರುವ ಘಟನೆ ಕೊಡಗು ಜಿಲ್ಲೆಯ ಗೋಣಿಕೊಪ್ಪ ಪಟ್ಟಣದಲ್ಲಿ ನಡೆದಿದೆ. ಇಂದು ಮಧ್ಯಾಹ್ನ ಕಟ್ಟಡ ನೆಲಸಮಗೊಂಡಿದ್ದು, ಅಗ್ನಿಶಾಮಕ ದಳ ಮತ್ತು ಎನ್‍ಡಿಆರ್‍ಎಫ್ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ 7 ಮಂದಿಯನ್ನು ರಕ್ಷಿಸಿದ್ದಾರೆ. ಆರು ಮಂದಿ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದು, ತೀವ್ರವಾಗಿ ಗಾಯಗೊಂಡಿರುವ ಒಬ್ಬರನ್ನು ಮೈಸೂರು ಆಸ್ಪತೆಗೆ ಸ್ಥಳಾಂತರಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಗೋಣಿಕೊಪ್ಪ ಪೊಲೀಸ್ ಠಾಣೆಯ ಅಧಿಕಾರಿಗಳು, ಗ್ರಾ.ಪಂ ಪ್ರತಿನಿಧಿಗಳು, ಅಧಿಕಾರಿಗಳು, ಎನ್‍ಡಿಆರ್‍ಎಫ್ ಅಧಿಕಾರಿಗಳು ಕಾರ್ಯಾಚರಣೆಗೆ ಸಹಕಾರ ನೀಡಿದರು. ಕಟ್ಟಡದಲ್ಲಿದ್ದ ಮಳಿಗೆಗಳಲ್ಲಿ ಬಿರಿಯಾನಿ ಸೆಂಟರ್ ಮತ್ತು ಮಟನ್ ಸ್ಟಾಲ್ ಕಾರ್ಯನಿರ್ವಹಿಸುತ್ತಿತ್ತು. ಅದೃಷ್ಟವಶಾತ್ ಮಳಿಗೆಗಳಲ್ಲಿ ಇದ್ದವರು ಅಪಾಯದಿಂದ ಪಾರಾಗಿದ್ದಾರೆ.

Read More

ಮಡಿಕೇರಿ ಜೂ.20 NEWS DESK : ಕುಡಗೋಲು ಕಣದ ರೋಗದ ಬಗ್ಗೆ ಸಾರ್ವಜನಿಕರು ಹಾಗೂ ಗಿರಿಜನರು ಅರಿವು ಜಾಗೃತಿ ಮೂಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆ, ಮಡಿಕೇರಿ, ಬೆಂಗಳೂರು ಭಾರತೀಯ ತೈಲ ನಿಗಮ ಭಾರತೀಯ ವಿಜ್ಞಾನ ಸಂಸ್ಥೆ, ಪ್ರಾಜೆಕ್ಟ್ ಚಂದನ, ರಾಜ್ಯ ರಕ್ತಕೋಶ, ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ವಿರಾಜಪೇಟೆ ತಾಲ್ಲೂಕಿನ ಬಾಳುಗೋಡು ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ವಿಶ್ವ ಕುಡಗೋಲು ಕಣ ರೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಾರ್ವಜನಿಕರು ಹಾಗೂ ಗಿರಿಜನರು ಕಾಲಕಾಲಕ್ಕೆ ತಪಾಸಣೆ ಮಾಡಿಸಿಕೊಳ್ಳಬೇಕು. ಇದಕ್ಕೆ ಎಲ್ಲಾ ಇಲಾಖೆಗಳ ಸಹಕಾರ ಅತೀ ಮುಖ್ಯ…

Read More

ಮಡಿಕೇರಿ ಜೂ.20 NEWS DESK : ಹಳೆಯ ಕಟ್ಟಡವೊಂದು ಇದ್ದಕ್ಕಿದ್ದಂತೆ ಕುಸಿದು ಬಿದ್ದ ಪರಿಣಾಮ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಡಗು ಜಿಲ್ಲೆಯ ಗೋಣಿಕೊಪ್ಪ ಪಟ್ಟಣದಲ್ಲಿ ನಡೆದಿದೆ. ಇಂದು ಮಧ್ಯಾಹ್ನ ಕಟ್ಟಡ ನೆಲಸಮಗೊಂಡಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಮೂವರನ್ನು ರಕ್ಷಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಒಬ್ಬರನ್ನು ಮೈಸೂರು ಆಸ್ಪತೆಗೆ ಸ್ಥಳಾಂತರಿಸಲಾಗಿದೆ. ಇನ್ನೂ ಮೂವರು ಕಟ್ಟಡದ ಅವಶೇಷಗಳಡಿ ಸಿಲುಕಿರುವ ಶಂಕೆ ಇದ್ದು, ಕಾರ್ಯಾಚರಣೆ ಮುಂದುವರೆದಿದೆ. ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕಟ್ಟಡದಲ್ಲಿದ್ದ ಮಳಿಗೆಯಲ್ಲಿ ಬಿರಿಯಾನಿ ಸೆಂಟರ್ ನಡೆಯುತ್ತಿತ್ತು.

Read More

ಮಡಿಕೇರಿ ಜೂ.20 NEWS DESK : ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಮೈಸೂರು ಹಾಗೂ ಮೈಸೂರು-ಮಂಡ್ಯ ಮತ್ತು ಕೊಡಗು ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟ ಸಂಯುಕ್ತಾಶ್ರಯದಲ್ಲಿ ಜೂ.22 ರಂದು ಕೊಡಗು ಜಿಲ್ಲಾ ಸೌಹಾರ್ದ ಸಹಕಾರಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು ಮತ್ತು ಮುಖ್ಯಕಾರ್ಯನಿರ್ವಾಹಕರುಗಳಿಗೆ ವಿಷಯಾಧಾರಿತ ತರಬೇತಿ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಿಗ್ಗೆ 10.30 ಗಂಟೆಗೆ ಮಡಿಕೇರಿಯ ಹೋಟೆಲ್ ದಿ ಫೋರ್ಟ್ ಮರ್ಕರಾ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಅಧ್ಯಕ್ಷ ಜಿ ನಂಜನಗೌಡ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಮಾಜಿ ನಿರ್ದೇಶಕ ಎಸ್.ಕೆ.ಮಂಜುನಾಥ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಮಾಜಿ ನಿರ್ದೇಶಕ ಹಾಗೂ ಪೊನ್ನಂಪೇಟೆ ಇಗ್ಗುತ್ತಪ್ಪ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ನಿರ್ದೇಶಕ ಎಂ.ಕೆ.ಸೋಮಯ್ಯ, ಮೈಸೂರು, ಮಂಡ್ಯ ಮತ್ತು ಕೊಡಗು ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದ ಅಧ್ಯಕ್ಷ  ಎಸ್.ಆರ್. ನಾರಾಯಣ ರಾವ್, ಸಹಕಾರ ಸಂಘಗಳ ನಿವೃತ್ತ ಹಿರಿಯ…

Read More

ಮಡಿಕೇರಿ ಜೂ.20 NEWS DESK : ಭಾರತೀಯ ಜನತಾ ಪಾರ್ಟಿ ಸೋಮವಾರಪೇಟೆ ಮಂಡಲ ಮತ್ತು ಕುಶಾಲನಗರ ಮಹಾಶಕ್ತಿ ಕೇಂದ್ರದ ವತಿಯಿಂದ ಜೂ.21 ರಂದು 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಲಿದೆ ಎಂದು ಸೋಮವಾರಪೇಟೆ ಮಂಡಲದ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ತಿಳಿಸಿದ್ದಾರೆ. ಕುಶಾಲನಗರದ ರೈತ ಸಹಕಾರ ಭವನದಲ್ಲಿ ಬೆಳಿಗ್ಗೆ 7.15ಕ್ಕೆ ನಡೆಯಲಿರುವ ಕಾರ್ಯಕ್ರಮವನ್ನು ಬಿಜೆಪಿಯ ಹಿರಿಯ ಮುಖಂಡ ಜಿ.ಎಲ್.ನಾಗರಾಜ್  ಉದ್ಘಾಟಿಸಲಿದ್ದಾರೆ. ಯೋಗ ಶಿಕ್ಷಕ ಶಿವರಾಂ ಯೋಗ ತರಬೇತಿ ನೀಡಲಿದ್ದಾರೆ. ಆಸಕ್ತರು ಯೋಗ ಮ್ಯಾಟ್ ತರುವಂತೆ ಅವರು ಮನವಿ ಮಾಡಿದ್ದಾರೆ.

Read More

ವಿರಾಜಪೇಟೆ ಜೂ.20 NEWS DESK : ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯನ್ನು ವಿರೋಧಿಸಿ ವಿರಾಜಪೇಟೆ ಪಟ್ಟಣದಲ್ಲಿ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಗಡಿಯಾರ ಕಂಬದ ಬಳಿ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಕಾಂಗ್ರೆಸ್ ನಾಯಕರುಗಳ ಪ್ರತಿಕೃತಿಯನ್ನು ದಹಿಸಿ ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ರಾಜ್ಯ ಕಾಂಗ್ರೆಸ್ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವುದರಿಂದ ಅಗತ್ಯ ವಸ್ತುಗಳ ಬೆಲೆ ದುಬಾರಿಯಾಗಿ ಜನಸಾಮಾನ್ಯರ ಜೀವನ ಸಂಕಷ್ಟಕ್ಕೆ ಸಿಲುಕಲಿದೆ. ಆಟೋ, ಟ್ಯಾಕ್ಸಿ ಚಾಲಕರು ಕೂಡ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಆರೋಪಿಸಿದರು. ಸರಕಾರ ತಕ್ಷಣ ಬೆಲೆ ಇಳಿಕೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಬಿಜೆಪಿ ವಿರಾಜಪೇಟೆ ಮಂಡಲದ ಅಧ್ಯಕ್ಷ ಸುವಿನ್ ಗಣಪತಿ, ಪ್ರಧಾನ ಕಾರ್ಯದರ್ಶಿಗಳಾದ ಮಂಜು ಗಣಪತಿ, ಅಜಿತ್ ಕರುಂಬಯ್ಯ, ಮಾಜಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ವಿವಿಧ ಮೋರ್ಚಾ, ಪ್ರಕೋಷ್ಠ, ಶಕ್ತಿ ಕೇಂದ್ರ, ಬೂತ್ ಮತ್ತಿತರ ಘಟಕಗಳ ಪ್ರಮುಖರು…

Read More

ಕುಶಾಲನಗರ ಜೂ.20 NEWS DESK : ಶಿಕ್ಷಕರು ಶಾಲಾ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಬೆಳೆಸುವ ಮೂಲಕ ಅವರನ್ನು ಭವಿಷ್ಯದಲ್ಲಿ ಉತ್ತಮ ಪರಿಸರ ಸಂರಕ್ಷಕರಾಗಿ ರೂಪಿಸುವಲ್ಲಿ ವಿಶೇಷ ಗಮನ ಹರಿಸಬೇಕು ಎಂದು ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಭಾಗ್ಯಮ್ಮ ಸಲಹೆ ನೀಡಿದರು. ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ, ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಘಟಕದ ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಇಕೋ ಕ್ಲಬ್ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ವತಿಯಿಂದ ಶಾಲಾವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಸಂಭ್ರಮಾಚರಣೆಯಲ್ಲಿ ನೇರಳೆ ಗಿಡ ನೆಟ್ಟು ಮಾತನಾಡಿದರು. ಅರಣ್ಯ ಮತ್ತು ಪರಿಸರ ಸಂರಕ್ಷಣೆ ನೆಮ್ಮಲ್ಲರ ಕರ್ತವ್ಯವಾಗಿದೆ. ಹಣ ಆಸ್ತಿಗಳಿಕೆಗಿಂತಲೂ ಉತ್ತಮ ಪರಿಸರ ಮನುಕುಲದ ಸಂಪತ್ತು. ಮಾನವ ಪ್ರಕೃತಿ ಒಂದು ಅವಿಭಾಜ್ಯ ಅಂಗ. ಪ್ರಕೃತಿ ಉಳಿದರೆ ಮಾತ್ರ ಮಾನವನ ಉಳಿವು ಸಾಧ್ಯವಾಗುತ್ತಿದೆ. ಪ್ರಕೃತಿ ಮತ್ತು ಮನುಷ್ಯ ಒಂದೇ ನಾಣ್ಯದ ಎರಡು ಮುಖಗಳಂತೆ. ಮಾನವ…

Read More