ವಿರಾಜಪೇಟೆ ಜೂ.5 NEWS DESK : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿರಾಜಪೇಟೆ ವಿಭಾಗದ ವಿರಾಜಪೇಟೆ ಪ್ರಾದೇಶಿಕ ಅರಣ್ಯ ವಲಯದ ವತಿಯಿಂದ ವಿರಾಜಪೇಟೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯಿಂದ ಶಾಲಾ ಆವರಣದಲ್ಲಿ ವಿವಿಧ ಗಿಡಗಳನ್ನು ನೆಡಲಾಯಿತು. ಬಳಿಕ ವಿದ್ಯಾರ್ಥಿಗಳಿಗೆ ಪರಿಸರ ದಿನಾಚರಣೆ ಹಾಗೂ ಗಿಡಗಳನ್ನು ನೆಡುವುದರ ಮಹತ್ವದ ಬಗ್ಗೆ ಅರಿವು ಮೂಡಿಸಲಾಯಿತು. ಪರಿಸರ ಸಂರಕ್ಷಣೆ ಮಾಡುವುದರ ಕುರಿತು ಮಾಹಿತಿ ನೀಡಲಾಯಿತು. ಈ ಸಂದರ್ಭ ವಿರಾಜಪೇಟೆ ಡಿ.ಸಿ.ಎಫ್. ಜಗನಾಥ್ ಎನ್.ಎಚ್, ಎಸಿಎಫ್ ನೆಹರು ಕೆ.ಎ, ಪ್ರೊಬೇಷನರಿ ಎಸಿಎಫ್ ಕುಮಾರಿ ಮಹಾಲಕ್ಷ್ಮಿ, ಆರ್.ಎಫ್.ಓ ಕೆ.ಎಂ.ದೇವಯ್ಯ, ಉಪ ವಲಯ ಅರಣ್ಯಾಧಿಕಾರಿ ಕೆ.ಆರ್.ಆನಂದ, ಎಂ.ಎಸ್.ಮೋನಿಷಾ, ಸಚಿನ್ ನಿಂಬಾಳ್ಕರ್, ಜನಾರ್ಧನ, ಡಿ.ಪಿ.ಸಂಜಿತ್, ಗಸ್ತು ಅರಣ್ಯಾ ಪಾಲಕರಾದ ಚಂದ್ರಶೇಕರ ಅಮರಗೋಳ, ವಿರಾಜಪೇಟೆ ಅರಣ್ಯ ಇಲಾಖೆ ಸಿಬ್ಬಂದಿಗಳು, ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲರಾದ ಷಡಕ್ಷರಿ ಹಾಗೂ ಶಿಕ್ಷಕರುಗಳು, ಎಲ್ಲಾ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಇದ್ದರು.
ಲೇಖಕ: admin
ಮಡಿಕೇರಿ ಜೂ.5 NEWS DESK : ವಿಶ್ವ ಪರಿಸರ ದಿನಾಚರಣೆಯು ನಗರದಲ್ಲಿ ಅರ್ಥಪೂರ್ಣವಾಗಿ ಜರುಗಿತು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದ ಬಳಿ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಹೊಸಮನಿ ಪುಂಡಲಿಕ ಅವರು ಪರಿಸರ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷ ಎಂ.ಎ.ನಿರಂಜನ್, ಪರಿಸರ ಉಳಿದಲ್ಲಿ ಮಾತ್ರ ಮಾನವನ ಬದುಕು ಉತ್ತಮವಾಗಿರಲು ಸಾಧ್ಯ. ಆ ನಿಟ್ಟಿನಲ್ಲಿ ಗಿಡ, ಮರಗಳನ್ನು ಯಥೇಚ್ಛವಾಗಿ ಬೆಳೆಸಿ ಪರಿಸರವನ್ನು ಸಂರಕ್ಷಿಸಬೇಕು ಎಂದು ಕರೆ ನೀಡಿದರು. ವರ್ಷದಿಂದ ವರ್ಷಕ್ಕೆ ವಾತಾವರಣದಲ್ಲಿನ ಹವಾಮಾನ ವೈಪರೀತ್ಯವನ್ನು ಕಾಣಬಹುದಾಗಿದೆ. ಆದ್ದರಿಂದ ಪರಿಸರವನ್ನು ಸಂರಕ್ಷಣೆ ಮಾಡುವತ್ತ ಪ್ರತಿಯೊಬ್ಬರೂ ಗಮನಹರಿಸಬೇಕು ಎಂದು ಕೋರಿದರು. ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಬಿ.ಜಯಲಕ್ಷ್ಮಿ, ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ, ವಕೀಲರ ಸಂಘದ ಅಧ್ಯಕ್ಷರಾದ ಎಂ.ಎ.ನಿರಂಜನ್, ಹೆಚ್ವುವರಿ ಪೊಲೀಸ್ ವರಿಷ್ಠಾಧಿಕಾರಿ…
ಮಡಿಕೇರಿ ಜೂ.5 NEWS DESK : ಮದೆ ಮಹೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಸಿದ್ದರಾಜು ಬೆಳ್ಳಯ್ಯ ಅವರು ಪರಿಸರ ದಿನಾಚರಣೆ ಮಹತ್ವ ಕುರಿತು ಮಾತನಾಡಿ, ಇಡೀ ವಿಶ್ವಕ್ಕೆ ಇರುವುದು ಒಂದೇ ಭೂಮಿ, ಆದರೆ ಭೂಮಿಯ ಮೇಲೆ ವಾಸಿಸುವ ಸುಮಾರು 700 ಕೋಟಿ ಜನಸಂಖ್ಯೆಗೆ ವಾಸಿಸುತ್ತಿದ್ದು, ಈ ಭೂಮಿಯನ್ನು ರಕ್ಷಿಸ ಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು. ಮನುಕುಲಕ್ಕೆ ಸಂಸ್ಕಾರ ಪ್ರಾರಂಭವಾಗುವುದು ಮನೆಯಿಂದಲೇ ಈ ಸಂಸ್ಕಾರದಲ್ಲಿ ಪರಿಸರ ಸಂರಕ್ಷಣೆ ಒಂದಾಗಿದ್ದು, ನಾವು ಪರಿಸರವನ್ನು ಸಂರಕ್ಷಿಸಿದರೆ ಪರಿಸರವು ನಮ್ಮನ್ನು ಸಂರಕ್ಷಿಸುತ್ತದೆ. ನೆಲ ಜಲ ಮತ್ತು ಭೂಮಿಯು ಮನುಕುಲಕ್ಕೆ ಎಲ್ಲವನ್ನು ಪರಿಶುದ್ಧವಾದದ್ದನ್ನೇ ನೀಡಿದೆ ಎಂದರು. ಕಾರ್ಯಕ್ರಮದಲ್ಲಿ ಅರ್ಥಶಾಸ್ತ್ರ ಉಪನ್ಯಾಸಕರಾದ ವಾಣಿ, ರಾಜ್ಯಶಾಸ್ತ್ರ ಉಪನ್ಯಾಸಕರಾದ ಯೋಗಿತ, ಇತಿಹಾಸ ಉಪನ್ಯಾಸಕ ಪರಶುರಾಮಪ್ಪ, ಕನ್ನಡ ಉಪನ್ಯಾಸಕ ಶ್ರೀನಿವಾಸ್ ಮತ್ತು ಧರ್ಮಸ್ಥಳ ಸ್ವಸಹಾಯ ಸಂಘದ ಕ್ಷೇತ್ರ ಸಹಾಯಕರಾದ ಸಬೀನಾ ಮತ್ತು ಸಂತೋಷ್ ಹಾಜರಿದ್ದರು.
ಮಡಿಕೇರಿ ಜೂ.5 NEWS DESK : ಪರಿಸರ ಸಂರಕ್ಷಣೆ ಮಾಡಿದಲ್ಲಿ ಉತ್ತಮ ಮಳೆ, ಬೆಳೆ ನಿರೀಕ್ಷಿಸಲು ಸಾಧ್ಯ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪರಿಸರದ ರಾಯಭಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಜಿ.ಪಂ.ಸಿಇಒ ವರ್ಣಿತ್ ನೇಗಿ ಕರೆ ನೀಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ತೋಟಗಾರಿಕೆ ಇಲಾಖೆ, ವಕೀಲರ ಸಂಘ, ಮಡಿಕೇರಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಕೊಡಗು ಜಿಲ್ಲಾ ಸಮಿತಿ, ಮಡಿಕೇರಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪರಿಸರ ಸಂರಕ್ಷಣೆ ಪ್ರತಿನಿತ್ಯ ಚಟುವಟಿಕೆಯಾಗಿದ್ದು, ಪರಿಸರ ಸ್ವಚ್ಛತೆಗೆ ಹೆಚ್ಚಿನ ಗಮನಹರಿಸಬೇಕು. ಎಲ್ಲೆಂದರಲ್ಲಿ ಕಸವನ್ನು ಬಿಸಾಡಬಾರದು. ಪರಿಸರ ಸ್ವಚ್ಛತೆಗೆ ಆದ್ಯತೆ ನೀಡುವುದರ ಜೊತೆಗೆ ಗಿಡ ಮರಗಳನ್ನು…
ಮಡಿಕೇರಿ ಜೂ.5 NEWS DESK : ಪಾಲಂಗಾಲದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲೆಯ ಆವರಣದಲ್ಲಿ ಗಣ್ಯರು ಹಾಗೂ ಪುಟಾಣಿಗಳು ವಿವಿಧ ಸಸಿಗಳನ್ನು ನೆಟ್ಟರು. ಈ ಸಂದರ್ಭ ಕೆದಮುಳ್ಳೂರು ಗ್ರಾ.ಪಂ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರಾದ ನಡಿಕೇರಿಯಂಡ ಶೀಲಾ ಮೇದಪ್ಪ, ಗ್ರಾ.ಪಂ ಉಪಾಧ್ಯಕ್ಷ ಪರಮೇಶ್ವರ್, ಮುಖ್ಯೋಪಾಧ್ಯಾಯರಾದ ಬಿ.ಟಿ.ದೇವರಾಜ್, ಶಿಕ್ಷಕರು, ಅಕ್ಷರ ದಾಸೋಹ ಸಿಬ್ಬಂದಿಗಳು, ಅಂಗನವಾಡಿ ಸಿಬ್ಬಂದಿ ವರ್ಗ, ಪೋಷಕರು, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಮಡಿಕೇರಿ ಜೂ.5 NEWS DESK : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿರಾಜಪೇಟೆ ಪ್ರಾದೇಶಿಕ ಅರಣ್ಯ ವಲಯ, ವಿರಾಜಪೇಟೆ ವಿಭಾಗದ ವತಿಯಿಂದ ಜಯಪ್ರಕಾಶ ನಾರಾಯಣ ಪ್ರೌಢಶಾಲೆಯ ಲೋಟಸ್ ಇಕೋ ಕ್ಲಬ್ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪರಿಸರ ಜಾಗೃತಿ ಮೂಡಿಸಲಾಯಿತು. ಶಾಲೆಯ ಹೊರ ಆವರಣದಲ್ಲಿ ಅರಣ್ಯ ಇಲಾಖೆಯಿಂದ ವಿಶ್ವ ಪರಿಸರ ದಿನಾಚರಣೆ ಹಾಗೂ ಗಿಡಗಳನ್ನು ನೆಡುವುದರ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ಈ ಸಂದರ್ಭ ವಿರಾಜಪೇಟೆ ಡಿ.ಸಿ.ಎಫ್. ಜಗನಾಥ್ ಎನ್.ಎಚ್, ಎಸಿಎಫ್ ನೆಹರು ಕೆ.ಎ, ಪ್ರೊಬೇಷನರಿ ಎಸಿಎಫ್ ಕುಮಾರಿ ಮಹಾಲಕ್ಷ್ಮಿ, ಆರ್.ಎಫ್.ಓ ಕೆ.ಎಂ.ದೇವಯ್ಯ, ಜಯಪ್ರಕಾಶ್ ನಾರಾಯಣ ಸ್ಮಾರಕ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ರಾಜೇಗೌಡ, ವಿರಾಜಪೇಟೆ ಅರಣ್ಯ ಇಲಾಖೆ ಸಿಬ್ಬಂದಿಗಳು, ಜಯಪ್ರಕಾಶ ನಾರಾಯಣ ಪ್ರೌಢಶಾಲೆಯ ಶಿಕ್ಷಕರುಗಳು, ಎಲ್ಲಾ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಇದ್ದರು.
ಬೆಂಗಳೂರು ಜೂ.5 NEWS DESK : ಬೆಂಗಳೂರಿನ ವಾಯುಸೇನೆಯ ಸಲಕರಣೆಗಳ ನಿರ್ವಹಣಾ ಘಟಕದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಏರ್ ಕಮಾಡೋರ್ ಮನೋಜ್ ಕುಮಾರ್ ನೇತೃತ್ವದಲ್ಲಿ ಏರ್ ಆಫೀಸರ್ ಕಮಾಂಡಿಂಗ್, ಸಿಬ್ಬಂದಿಗಳು ಡಿಪೋ ಕ್ಯಾಂಪಸ್ ಮತ್ತು ಗಗನ್ ವಿಹಾರದಲ್ಲಿ 100 ಕ್ಕೂ ಹೆಚ್ಚು ಸಸಿಗಳನ್ನು ನೆಟ್ಟು ಪರಿಸರ ಜಾಗೃತಿ ಮೂಡಿಸಿದರು. ಅಲ್ಲದೆ ತಮ್ಮ ತೋಟಗಳಲ್ಲಿ ಹೆಚ್ಚಿನ ಮರಗಳನ್ನು ನೆಡುವಂತೆ ಸಲಹೆ ನೀಡಿದರು. ಇದೇ ಸಂದರ್ಭ ಡಿಪೋದ ಎಲ್ಲಾ ಸಿಬ್ಬಂದಿಗಳು ಪರಿಸರ ಸಂರಕ್ಷಣೆಯ ಕುರಿತು ಪ್ರತಿಜ್ಞೆ ಮಾಡಿದರು.
ಮಡಿಕೇರಿ ಜೂ.5 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಯದುವೀರ್ ಅವರು ಜಯಭೇರಿ ಬಾರಿಸಿದ್ದಾರೆ. ಇದು ಪ್ರಜಾಪ್ರಭುತ್ವದ ಗೆಲುವಾಗಿದ್ದು, ಜಾತ್ಯತೀತ ಜನತಾದಳದ ಬಲ ಮತ್ತಷ್ಟು ಹೆಚ್ಚಾಗಿದೆ ಎಂದು ಕೊಡಗು ಜಿಲ್ಲಾ ಜೆಡಿಎಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮೂಟೆರ ಪುಷ್ಪಾವತಿ ರಮೇಶ್ ಹರ್ಷ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ದೇಶದಲ್ಲಿ ಎನ್ಡಿಎ ಮೈತ್ರಿ ಕೂಟ ಬಹುಮತ ಪಡೆದುಕೊಂಡಿದೆ. ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಯ ಫಲವಾಗಿ 19 ಸ್ಥಾನಗಳು ಲಭಿಸಿದೆ. ಮೈಸೂರು- ಕೊಡಗು ಕ್ಷೇತ್ರ ನಿರೀಕ್ಷೆಯಂತೆ ಮೈತ್ರಿ ಅಭ್ಯರ್ಥಿಯ ಪಾಲಾಗಿದೆ. ಇದು ಜೆಡಿಎಸ್ ಗೆ ಇರುವ ಜನಬೆಂಬಲಕ್ಕೆ ಸಾಕ್ಷಿಯಾಗಿದೆ. ಯದುವೀರ್ ಅವರಿಗೆ ಕೊಡಗು ಜೆಡಿಎಸ್ ಅಭಿನಂದನೆ ಸಲ್ಲಿಸುತ್ತದೆ ಎಂದು ತಿಳಿಸಿದ್ದಾರೆ. ಜೆಡಿಎಸ್ ವರಿಷ್ಠರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಕ್ಷೇತ್ರದಲ್ಲಿ 2,84,620 ಬೃಹತ್ ಮತಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಕೋಲಾರ ಕ್ಷೇತ್ರದಲ್ಲೂ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್…
ವಿರಾಜಪೇಟೆ ಜೂ.5 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ವಿರಾಜಪೇಟೆ ತಾಲೂಕು ಕಾನೂರು ವಲಯ ಬ್ರಹ್ಮಗಿರಿ ಕಾರ್ಯ ಕ್ಷೇತ್ರದ ತ್ರೈಮಾಸಿಕ ಒಕ್ಕೂಟ ಸಭೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಿರಿಯ ವೈಧ್ಯರಾದ ಶರತ್ ಮಾತನಾಡಿ, ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳು, ಕ್ಯಾನ್ಸರ್ ಕಾಯಿಲೆಗಳು, ಸ್ತ್ರೀಯರಲ್ಲಿ ಉಂಟಾಗುವ ದುಷ್ಪರಿಣಾಮಗಳು ಹಾಗೂ ಅದರಿ0ದ ಹಂತ ಹಂತವಾಗಿ ಹೊರಗೆ ಬರಬೇಕು ಎಂಬುದರ ಬಗ್ಗೆ ಮಾಹಿತಿ ನೀಡಿದರು. ವಲಯ ಮೇಲ್ವಿಚಾರಕರಾದ ಸುಜೀರ್ ಕುಲಾಲ್ ಯೋಜನೆಯ ಕಾರ್ಯಕ್ರಮಗಳು ಹಾಗೂ ತಂಬಾಕು ಸೇವನೆಯ ದುಷ್ಪರಿಣಾಮಗಳ ಬಗ್ಗೆ ತಿಳಿಸಿದರು. ಒಕ್ಕೂಟ ಅಧ್ಯಕ್ಷರಾದ ಸುನೀತ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೇವಾ ಪ್ರತಿನಿಧಿ ಮುತ್ತಪ್ಪ, ದಿವ್ಯ, ಒಕ್ಕೂಟದ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಹಾಜರಿದ್ದರು.
ಮಡಿಕೇರಿ ಜೂ.5 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಇಂಡಿಯಾ ಕೂಟದ ಅಭ್ಯರ್ಥಿಗೆ ಸೋಲಾಗಿದೆ, ಜನರು ನೀಡಿರುವ ತೀರ್ಪನ್ನು ಸ್ವಾಗತಿಸುತ್ತೇವೆ ಎಂದು ಇಂಡಿಯಾ ಮಿತ್ರ ಪಕ್ಷ ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ತಿಳಿಸಿದ್ದಾರೆ. ಜನಸಾಮಾನ್ಯರ ಆಶಯಗಳಿಗೆ ವಿರುದ್ಧವಾಗಿದ್ದ ಎನ್ಡಿಎ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ “ಬೈ ಬೈ ಮೋದಿ” ಅಭಿಯಾನವನ್ನು ಆಮ್ ಆದ್ಮಿ ಪಾರ್ಟಿ ಹಮ್ಮಿಕೊಂಡಿತ್ತು. ಆದರೆ ಮತದಾರರು ಮತ್ತೆ ಮೋದಿ ಹಾಗೂ ಎನ್ಡಿಎ ಅಭ್ಯರ್ಥಿಗೆ ಬಹುಮತ ನೀಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯ ಈ ತೀರ್ಪನ್ನು ಪಕ್ಷ ಸ್ವಾಗತಿಸುತ್ತದೆ ಎಂದು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ನೂತನ ಸಂಸದ ಯದುವೀರ್ ಒಡೆಯರ್ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಜಿ.ಪಂ ಮತ್ತು ತಾ.ಪಂ ಚುನಾವಣೆ ವೇಳೆಗೆ ಆಮ್ ಆದ್ಮಿ ಪಾರ್ಟಿಯನ್ನು ಬಲಿಷ್ಠವಾಗಿ ಸಂಘಟಿಸಲಾಗುವುದು ಎಂದು ಭೋಜಣ್ಣ ಸೋಮಯ್ಯ ತಿಳಿಸಿದ್ದಾರೆ.






