ಲೇಖಕ: admin

ವಿರಾಜಪೇಟೆ ಜೂ.5 NEWS DESK : ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಎನ್. ಎಸ್. ಎಸ್ ಘಟಕ, ನೇಚರ್ ಕ್ಲಬ್ ಘಟಕ, ಯುವ ರೆಡ್ ಕ್ರಾಸ್ ಘಟಕ, ಅರಣ್ಯ ಇಲಾಖೆ, ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಗಿಡ ನೆಡುವುದರ ಮೂಲಕ ಪರಿಸರ ಜಾಗೃತಿ ಮೂಡಿಸಿದರು. ಕಾರ್ಯಕ್ರಮದಲ್ಲಿ  ವಿರಾಜಪೇಟೆಯ ಉಪ ಅರಣ್ಯಾಧಿಕಾರಿ ಮಧುಕುಮಾರ್ ಮಾತನಾಡಿ, ವಿದ್ಯಾರ್ಥಿಗಳಿಗೆ ಗಿಡ ನೆಡುವುದರ ಮತ್ತು ಪರಿಸರ ಸಂರಕ್ಷಣೆಯಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ವಿವರಿಸಿದರು. ವಿದ್ಯಾರ್ಥಿಗಳು ಪರಿಸರವನ್ನು ಉಳಿಸಿ ಬೆಳೆಸಬೇಕು, ಆ ನಿಟ್ಟಿನಲ್ಲಿ ಸಮಾಜದಲ್ಲಿ ಜಾಗೃತಿ ಮೂಡಿಸುವ ಕಾರ್ಯ ಆಗಬೇಕು ಎಂದ ಅವರು ಅರಣ್ಯ ಇಲಾಖೆಯು ಪರಿಸರ ಸಂರಕ್ಷಣೆಗೆ ವಹಿಸಿರುವ ಕ್ರಮಗಳ ಬಗ್ಗೆ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪ ಮತ್ತು ಪಿಯು ಕಾಲೇಜು ಪ್ರಾಂಶುಪಾಲರಾದ ರೆ. ಫಾ. ಮದಲೈ ಮುತ್ತು,  ನಾವು ಪರಿಸರವನ್ನು ಸಂರಕ್ಷಿಸಿದರೆ ಮುಂದೊಂದು ದಿನ ಅದು ನಮ್ಮನ್ನು…

Read More

ಕೊಳ್ಳೇಗಾಲ ಜೂ.5 NEWS DESK : ಕಾಮಗೆರೆಯ ಸಂತ ಫ್ರಾನ್ಸಿಸ್ ಕ್ಷೇವಿಯರ್ ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಜಾಗೃತಿ ಜಾಥಾ ನಡೆಯಿತು. ವಿದ್ಯಾಸಂಸ್ಥೆಯ ವ್ಯವಸ್ಥಾಪಕರಾದ ರೆ.ಫಾ.ಐಸಾಕ್ ರತ್ನಾಕರ್ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿದ್ದು, ವಿದ್ಯಾರ್ಥಿಗಳು ಸಾರ್ವಜನಿಕ ಜಾಗೃತಿಯನ್ನು ಮೂಡಿಸಿ ಪ್ರತಿಯೊಬ್ಬರಲ್ಲೂ ಪರಿಸರ ಪ್ರಜ್ಞೆ ಮೂಡಿಸಬೇಕೆಂದು ಹೇಳಿದರು. ಜಾಥಾವು ಕಾಮಗೆರೆ ಗ್ರಾಮದಾದ್ಯಂತ ಸಾಗಿ ಘೋಷಣೆಗಳನ್ನು ಕೂಗುವುದರ ಮೂಲಕ ಸಾರ್ವಜನಿಕ ಜಾಗೃತಿ ಮೂಡಿಸುವ ಪ್ರಯತ್ನವನ್ನು ಶಾಲಾ ಮಕ್ಕಳು ಮಾಡಿದರು. ನಂತರ ಶಾಲೆಯಲ್ಲಿ ಗಿಡವನ್ನು ನೆಟ್ಟು ಪ್ರತಿಯೊಬ್ಬರು ಪರಿಸರ ಸಂರಕ್ಷಣೆಗೆ ಪಣತೊಡಬೇಕೆಂದರು. ಈ ಸಂದರ್ಭ ಮುಖ್ಯ ಶಿಕ್ಷಕ ಅಂತೋಣಿರಾಜ್, ಶಿಕ್ಷಕರು, ಸಿಬ್ಬಂದಿಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳು ಹಾಜರಿದ್ದರು.

Read More

ಪುತ್ತೂರು ಜೂ.5 NEWS DESK : ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ನಡೆಸಿದ ನೀಟ್‌ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳದ ಕ್ರಿಯೇಟಿವ್‌ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಕೆ.ಎಸ್‌.ಕಾರ್ತಿಕ್‌ 99.8976127 ಪರ್ಸಂಟೈಲ್‌ ನೊಂದಿಗೆ 698 ಅಂಕಗಳನ್ನು ಗಳಿಸಿರುತ್ತಾರೆ. ಕೆ.ನೇಹಾ ಉದಪುಡಿ 99.8815839 ಪರ್ಸಂಟೈಲ್‌ ನೊಂದಿಗೆ 696 ಅಂಕಗಳನ್ನು ಗಳಿಸಿ ಅಭೂತಪೂರ್ವ ಸಾಧನೆಗೈದಿದ್ದಾರೆ. ಇತರ ವಿದ್ಯಾರ್ಥಿಗಳಾದ ಆದಿತ್ಯ ಶೇಟ್‌ 687, ಆನ್ಯಾ ಡಿ.ಜೆ ಗೌಡ 683, ಪ್ರೇಮ್‌ ಸಾಗರ್‌ ಪಾಟೀಲ್‌ 675, ಸತೀಶ್‌ ಗೌಡ ಪಿ. ಎಂ 678, ಫರ್ಹಾನ್‌ ಟಿ.ಪಿ 675, ಸ್ನೇಹಾ ವಸ್ತ್ರದ್‌ 673, ಆರ್ಯ ರಾವ್‌ ಟಿ.ಪಿ 666, ಸಿಂಚನ ಆರ್‌. ಹೆಚ್‌ 664, ಪ್ರಿಯಾಂಕ ಕೆ.ಬಿ 660, ಸಿ ಜನಶ್ರೀ ಕುಮಾರ್‌ 663, ಪಂಕಜ್‌ ಭಟ್‌ 662, ಹೇಮಶ್ರೀ ಬಿ. ಕೆ 647, ವಿಶ್ರುತ ಎಂ. ಎಸ್‌ 645, ಅಭಿನವ್‌ ಹೆಚ್.ಬಿ 640, ಬಿ.ಇ ಹಿತೈಷ್‌ 639,…

Read More

ಮಡಿಕೇರಿ ಜೂ.5 NEWS DESK : ಹಾಕತ್ತೂರು ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಹೆಚ್.ಡಿ.ಎಫ್.ಸಿ ಬ್ಯಾಂಕ್ ಮಡಿಕೇರಿಯ ಶಾಖೆ, ಹಾಕತ್ತೂರು ತೊಂಭತ್ತಮನೆಯ ತ್ರಿನೇತ್ರ ಯುವಕ ಸಂಘ, ಕೊಡಗು ಜಿಲ್ಲಾ ಹಾಗೂ ಮಡಿಕೇರಿ ತಾಲ್ಲೂಕು ಯುವ ಒಕ್ಕೂಟ ಮತ್ತು ಹಾಕತ್ತೂರು ಸರಕಾರಿ ಪ್ರೌಢ ಶಾಲೆಯ ಸಹಯೋಗದಲ್ಲಿ ಶಾಲಾ ಮೈದಾನದಲ್ಲಿ ಗಣ್ಯರು ಹಾಗೂ ವಿದ್ಯಾರ್ಥಿಗಳು ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಿದರು. ಈ ಸಂದರ್ಭ ಹೆಚ್‍ಡಿಎಫ್‍ಸಿ ಬ್ಯಾಂಕ್ ಮಡಿಕೇರಿ ಶಾಖೆ ವ್ಯವಸ್ಥಾಪಕ ನಾರಾಯಣ್, ಸಿಬ್ಬಂದಿ ಗಳಾದ ಕವನ, ಮಂಜುಳಾ, ಹಿತೇಶ್, ಕುಮಾರ್, ಭರತ್ ಶ್ರೀನಿವಾಸ, ತ್ರಿನೇತ್ರ ಯುವಕ ಸಂಘದ ಅಧ್ಯಕ್ಷ ಪಿ.ಪಿ.ಸುಕುಮಾರ್, ಮಾಜಿ ಅಧ್ಯಕ್ಷ ಟಿ.ಕೆ.ಸಂತೋಷ್. ಗ್ರಾ.ಪಂ ಸಿಬ್ಬಂದಿಗಳಾದ ಸೋವಿಯತ್, ಅಹ್ಮದ್, ಗ್ರಂಥಪಾಲಕಿ ಸುನೀತಾ, ಹಾಕತ್ತೂರು ಸರಕಾರಿ ಪ್ರೌಢಶಾಲೆ ಶಿಕ್ಷಕರಾದ ಎಂ.ವನಜ, ಸಿ.ಎಂ.ಮುನೀರ್, ಬಿ.ಎನ್.ಜಯಂತಿ, ಕೆ.ಕೆ.ಪುಷ್ಪ, ಕೆ.ಜಿ.ಭವಾನಿಶಂಕರ್, ಕೆ.ಎಸ್.ಸಹನಾ ಶಾಲಾ ವಿದ್ಯಾರ್ಥಿಗಳು ಹಾಜರಿದ್ದರು.  

Read More

:: 28 ಕ್ಷೇತ್ರಗಳ ವಿಜೇತ ಅಭ್ಯರ್ಥಿಗಳು ::  ಬಾಗಲಕೋಟೆ ಕ್ಷೇತ್ರ: ಪಿ.ಸಿ.ಗದ್ದಿಗೌಡರ್​-ಬಿಜೆಪಿ​ ಬೆಂಗಳೂರು ಕೇಂದ್ರ ಕ್ಷೇತ್ರ: ಪಿ.ಸಿ.ಮೋಹನ್- ಬಿಜೆಪಿ ಬೆಂಗಳೂರು ಉತ್ತರ ಕ್ಷೇತ್ರ: ಶೋಭಾ ಕರಂದ್ಲಾಜೆ-ಬಿಜೆಪಿ ಬೆಂಗಳೂರು ದಕ್ಷಿಣ ಕ್ಷೇತ್ರ: ತೇಜಸ್ವಿ ಸೂರ್ಯ- ಬಿಜೆಪಿ ಬೆಂಗಳೂರು ಗ್ರಾಮಾಂತರ: ಡಾ. ಮಂಜುನಾಥ್​-ಬಿಜೆಪಿ ಬೆಳಗಾವಿ ಕ್ಷೇತ್ರ: ಜಗದೀಶ್ ಶೆಟ್ಟರ್- ಬಿಜೆಪಿ ಬಳ್ಳಾರಿ ಕ್ಷೇತ್ರ: ಇ. ತುಕಾರಾಂ- ಕಾಂಗ್ರೆಸ್​ ಬೀದರ್ ಕ್ಷೇತ್ರ: ಸಾಗರ್ ಈಶ್ವರ ಖಂಡ್ರೆ- ಕಾಂಗ್ರೆಸ್​ ಬಿಜಾಪುರ ಕ್ಷೇತ್ರ: ರಮೇಶ್​ ಜಿಗಜಿಣಗಿ- ಬಿಜೆಪಿ ಚಾಮರಾಜನಗರ ಕ್ಷೇತ್ರ: ಸುನಿಲ್ ಬೋಸ್- ಕಾಂಗ್ರೆಸ್​ ಚಿಕ್ಕಬಳ್ಳಾಪುರ ಕ್ಷೇತ್ರ: ಕೆ.ಸುಧಾಕರ್- ಬಿಜೆಪಿ ಚಿಕ್ಕೋಡಿ ಕ್ಷೇತ್ರ: ಪ್ರಿಯಾಂಕಾ ಸತೀಶ್ ಜಾರಕಿಹೊಳಿ- ಕಾಂಗ್ರೆಸ್​ ಚಿತ್ರದುರ್ಗ ಕ್ಷೇತ್ರ: ಗೋವಿಂದ ಕಾರಜೋಳ- ಬಿಜೆಪಿ ದಕ್ಷಿಣ ಕನ್ನಡ ಕ್ಷೇತ್ರ: ಬ್ರಿಜೇಶ್ ಚೌಟಾ- ಬಿಜೆಪಿ ದಾವಣಗೆರೆ ಕ್ಷೇತ್ರ: ಪ್ರಭಾ ಮಲ್ಲಿಕಾರ್ಜುನ್- ಕಾಂಗ್ರೆಸ್​ ಧಾರವಾಡ ಕ್ಷೇತ್ರ: ಪ್ರಲ್ಹಾದ್​ ಜೋಶಿ- ಬಿಜೆಪಿ ಕಲಬುರಗಿ ಕ್ಷೇತ್ರ: ರಾಧಾಕೃಷ್ಣ-ಕಾಂಗ್ರೆಸ್​ ಹಾವೇರಿ ಕ್ಷೇತ್ರ: ಬಸವರಾಜ ಬೊಮ್ಮಾಯಿ- ಬಿಜೆಪಿ ಕೋಲಾರ ಕ್ಷೇತ್ರ: ಎಂ ಮಲ್ಲೇಶ್ ಬಾಬು- ಜೆಡಿಎಸ್​…

Read More

ಮಡಿಕೇರಿ ಜೂ.5 NEWS DESK : ಲಯನ್ಸ್ ಕ್ಲಬ್ ಸೋಮವಾರಪೇಟೆ ಮತ್ತು ಲಯನ್ಸ್ ಕ್ಲಬ್ ಹೆರಿಟೇಜ್ ಸಿಟಿ ಮೈಸೂರು  ಸಹಯೋಗದೊಂದಿಗೆ ಸೋಮವಾರಪೇಟೆಯ ಬಸವೇಶ್ವರ ರಸ್ತೆಯಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಕುರ್ಚಿಗಳನ್ನು ನೀಡಲಾಯಿತು. ಲಯನ್ಸ್ ವಲಯಾಧ್ಯಕ್ಷ  ಚೆಟ್ಟಿಮಾಡ ರೋಹಿತ್ ಅಂಗನವಾಡಿ ಕಾರ್ಯಕರ್ತೆಗೆ ಹಸ್ತಾಂತರಿಸಿದರು. ಈ ಸಂದರ್ಭ ಲಯನ್ಸ್ ಸೋಮವಾರಪೇಟೆ ಅಧ್ಯಕ್ಷ ಎ.ಎಸ್.ಮಹೇಶ್, ಕಾರ್ಯದರ್ಶಿ ಕೆ.ಡಿ.ವೀರಪ್ಪ, ಸಿ.ಕೆ.ಲೀಲಾರಾಮ್ ಮಲ್ಲಪ್ಪ ಹಾಜರಿದ್ದರು.

Read More

ಮಡಿಕೇರಿ ಜೂ.5 NEWS DESK : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ 2023 ನೇ ಸಾಲಿನ ವಾರ್ಷಿಕ ಪ್ರಶಸ್ತಿಗಾಗಿ ವರದಿಗಳನ್ನು ಆಹ್ವಾನಿಸಲಾಗಿದೆ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾದವರು ಮಾತ್ರ ವರದಿ ಸಲ್ಲಿಸಬಹುದಾಗಿದ್ದು, ಜೂ.20 ರೊಳಗೆ ತಮ್ಮ ವರದಿಯನ್ನು ಪತ್ರಿಕಾಭವನಕ್ಕೆ ತಲುಪಿಸಬೇಕಾಗಿದೆ.ನಂತರ ಬಂದ ವರದಿಗಳನ್ನು ಸ್ವೀಕರಿಸಲಾಗುವುದಿಲ್ಲ. ವರದಿಗಳು 2023 ರ ಜನವರಿಯಿಂದ 2023 ಡಿಸೆಂಬರ್ 31 ರೊಳಗೆ ಪ್ರಕಟವಾಗಿರಬೇಕು. ಪ್ರಶಸ್ತಿಗೆ ವರದಿ ಹಾಕುವವರು ಮೂರು ಪ್ರತಿಗಳನ್ನು ಹಾಕಬೇಕು. ದೃಶ್ಯಮಾಧ್ಯಮದವರು ತಮ್ಮ ಚಾನಲ್​ ಗಳಲ್ಲಿ ಪ್ರಸಾರವಾದ ವರದಿಯ ಸಿಡಿ ಯನ್ನು ಸಲ್ಲಿಸಬೇಕು. ಪಂದ್ಯಂಡ ಬೆಳ್ಯಪ್ಪ ಸ್ಮರಣಾರ್ಥ ಅತ್ಯುತ್ತಮ ಗ್ರಾಮೀಣ ವರದಿ ಪ್ರಶಸ್ತಿ,  ಸಂಘದ ಮಾಜಿ ಅಧ್ಯಕ್ಷರಾದ ಕೆ.ಕೆ.ಶಶಿಧರ್ ಸ್ಮರಣಾರ್ಥ ಕ್ರೀಡಾ ವರದಿ ಪ್ರಶಸ್ತಿ, ಸಂಘದ ಉಪಾಧ್ಯಕ್ಷರಾಗಿದ್ದ ಸಿ.ಎನ್.ಸುನಿಲ್ ಕುಮಾರ್ ಸ್ಮರಣಾರ್ಥ ಅತ್ಯುತ್ತಮ ವಿಡಿಯೋಗ್ರಫಿ ಪ್ರಶಸ್ತಿ, ನಿವೃತ್ತ ವಾರ್ತಾಧಿಕಾರಿ ಪಳೆಯಂಡ ಪೊನ್ನಪ್ಪ ಸ್ಥಾಪಿಸಿದ ಅತ್ಯುತ್ತಮ ತನಿಖಾ ವರದಿ ಪ್ರಶಸ್ತಿ, ಕೋವರ್ ಕೊಲ್ಲಿ ಇಂದ್ರೇಶ್ ತಮ್ಮ ತಂದೆ ಚಂದ್ರಶೇಖರ್ ಅವರ ಹೆಸರಲ್ಲಿ ಸ್ಥಾಪಿಸಿದ ಮಾನವೀಯ ವರದಿ ಪ್ರಶಸ್ತಿ, ರಾಜ್ಯ…

Read More

ಮಡಿಕೇರಿ ಜೂ.5 NEWS DESK : ಮೈಸೂರು-ಕೊಡಗು ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರಾಜಮಾತೆ  ಪ್ರಮೋದಾ ದೇವಿ ಅವರೊಂದಿಗೆ ಪ್ರಮಾಣ ಪತ್ರ ಸ್ವೀಕರಿಸಿದರು. ಮೈಸೂರು ಜಿಲ್ಲಾಧಿಕಾರಿ ಡಾ.ರಾಜೇಂದ್ರ  ಪ್ರಮಾಣ ಪತ್ರ ನೀಡಿದರು. ಈ ಸಂದರ್ಭ ಶಾಸಕ ಜಿ.ಟಿ.ದೇವೇಗೌಡ,  ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಮೈಸೂರು ಜಿ.ಪಂ.ಸಿಇಒ ಹಾಗೂ ಚುನಾವಣಾ ವೀಕ್ಷಕರು ಇದ್ದರು.

Read More

ಸುಂಟಿಕೊಪ್ಪ ಜೂ.5 NEWS DESK : ಸುಂಟಿಕೊಪ್ಪ ಬಿಜೆಪಿ ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಸುಂಟಿಕೊಪ್ಪದ ಕನ್ನಡ ವೃತ್ತದಲ್ಲಿ ಪಕ್ಷದ ಧ್ವಜವನ್ನು ಹಿಡಿದು, ಪಟಾಕಿ ಸಿಡಿಸಿ ವಿಜಯೋತ್ಸವವನ್ನು ಆಚರಿಸಿದರು. ಕನ್ನಡವೃತ್ತದಲ್ಲಿ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು ಪಕ್ಷದ ಧ್ವಜವನ್ನು ಹಿಡಿದು ರಾಷ್ಟ್ರದ ಪ್ರಧಾನಿಯಾದ ನರೇಂದ್ರಮೋದಿ, ಕೇಂದ್ರ ಗೃಹ ಸಚಿವ ಅಮಿತ್‍ಶಾ, ರಾಜಾಧ್ಯಕ್ಷ ಬಿ.ವೈ.ವಿಜೇಯೇಂದ್ರ, ಬಿ.ಎಸ್.ಯಡಿಯೂರಪ್ಪ, ಜೆಡಿಎಸ್ ಪಕ್ಷ ಹಾಗೂ ಎನ್‍ಡಿಎಗಳಿಗೆ ಜೈಕಾರ ಕೂಗಿ ಸಂಭ್ರಮಿಸಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್, ಸುಂಟಿಕೊಪ್ಪ ಸ್ಥಾನೀಯ ಸಮಿತಿ ಅಧ್ಯಕ್ಷ ಧನುಕಾವೇರಪ್ಪ, ಕಾರ್ಯದರ್ಶಿ ವಿ.ಕೆ.ರಾಜ, ಅಧ್ಯಕ್ಷರಾದ ಪ್ರಶಾಂತ್(ಕೋಕ), ಪಂ.ಸದಸ್ಯರುಗಳಾದ ಬಿ.ಎಂ.ಸುರೇಶ್, ಗೀತಾ, ಪಕ್ಷದ ಹಿರಿಯ ಮುಖಂಡ ಡಿ.ನರಸಿಂಹ, ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಬಿ.ಕೆ.ಮೋಹನ, ಗ್ರಾ.ಪಂ.ಮಾಜಿ ಅಧ್ಯಕ್ಷೆ ಬಿ.ಐ.ಭವಾನಿ, ಮಾಜಿ ಸದಸ್ಯರುಗಳಾದ ಗೀತಾ, ಆನಂದ, ಹರೀಶ್, ಸಹನಾ ಹಾಗೂ ಬಿಜೆಪಿ ಕಾರ್ಯರ್ತರು ಇದ್ದರು.

Read More

ಮಡಿಕೇರಿ ಜೂ.4 : ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಎಂ.ಲಕ್ಷ್ಮಣ ಅವರ ಗೆಲುವಿಗಾಗಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಾಕಷ್ಟು ಪರಿಶ್ರಮ ಪಟ್ಟರೂ ಗೆಲುವು ಸಾಧ್ಯವಾಗಿಲ್ಲ. ಜನರ ತೀರ್ಪಿಗೆ ತಲೆ ಬಾಗುತ್ತೇವೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲು ಎಷ್ಟು ಶ್ರಮ ವಹಿಸಿದ್ದೆವೋ ಅಷ್ಟೇ ಶ್ರಮ ಈ ಬಾರಿಯೂ ಪಟ್ಟಿದ್ದೇವೆ. ಆದರೆ ಕಾಂಗ್ರೆಸ್‌ಗೆ ಗೆಲುವು ಸಾಧ್ಯವಾಗದಿರುವುದು ನಿರಾಶೆ ಮೂಡಿಸಿದೆ. ಬಿಜೆಪಿಯ ಸಾಂಪ್ರದಾಯಿಕ ಮತಗಳು ಪರಿವರ್ತನೆಯಾಗಿಲ್ಲ. ಜನರ ತೀರ್ಪನ್ನು ಒಪ್ಪಿಕೊಳ್ಳುತ್ತೇವೆ ಎಂದರು.

Read More