ಲೇಖಕ: admin

ಮಡಿಕೇರಿ ಜೂ.4 NEWS DESK : ಪ್ರಧಾನಿ ನರೇಂದ್ರಮೋದಿ ಅವರ ಆಡಳಿತವನ್ನು ಮೆಚ್ಚಿ, ಒಳ್ಳೆಯ ಅಭ್ಯರ್ಥಿ ಎನ್ನುವ ಅಭಿಮಾನದಿಂದ ಯದುವೀರ್ ಒಡೆಯರ್ ಅವರನ್ನು ಕೊಡಗಿನ ಜನ ನಿರೀಕ್ಷೆಗೂ ಮೀರಿ ಮತಗಳನ್ನು ನೀಡಿ ಗೆಲ್ಲಿಸಿದ್ದಾರೆ ಎಂದು ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಳೆದ ಬಾರಿಯಂತೆಯೆ ಉತ್ತಮ ಮುನ್ನಡೆಯನ್ನು ಜಿಲ್ಲೆಯ ಜನತೆ ನೀಡಿದ್ದಾರೆ. ಜಿಲ್ಲೆಯ ಮತದಾರ ಕಾಂಗ್ರೆಸ್ ಪಕ್ಷದ ಎಲ್ಲಾ ಭಾಗ್ಯ ಮತ್ತು ಗ್ಯಾರಂಟಿಗಳನ್ನು ಬದಿಗಿಟ್ಟು ಮೋದಿ ನಾಯಕತ್ವಕ್ಕೆ ಬೆಂಬಲವನ್ನು ಮತದಾನದ ಮೂಲಕ ನೀಡಿದ್ದಾರೆ. ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದರೂ ಮತದಾರರು ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಜನರ ನಿರೀಕ್ಷೆ ಹುಸಿಯಾಗದಂತೆ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತೇವೆ ಎಂದು ಭರವಸೆ ನೀಡಿದರು.

Read More

ಮಡಿಕೇರಿ ಜೂ.4 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ತೋಟಗಾರಿಕೆ ಇಲಾಖೆ, ವಕೀಲರ ಸಂಘ, ಮಡಿಕೇರಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಕೊಡಗು ಜಿಲ್ಲಾ ಸಮಿತಿ, ಮಡಿಕೇರಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ ಜೂ.5 ರಂದು ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ‘ಭೂ ಮರುಸ್ಥಾಪನೆ, ಮರು ಭೂಮೀಕರಣ ಹಾಗೂ ಬರ ತಡೆಯುವಿಕೆ’ ವಿಷಯದಡಿ ಕಾರ್ಯಕ್ರಮ ನಡೆಯಲಿದೆ. ಜೂ.5 ರಂದು ಬೆಳಗ್ಗೆ 9.30 ಗಂಟೆಗೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಜಾಥಾ ಹಾಗೂ ಗಿಡ ನೆಡುವ ಕಾರ್ಯಕ್ರಮ ನಡೆಯಲಿದೆ. ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಹೊಸಮನಿ ಪುಂಡಲಿಕ, ಹಿರಿಯ…

Read More

ಮಡಿಕೇರಿ ಜೂ.4 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿರುವ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರಿಗೆ ಕೊಡಗು ಜಿಲ್ಲೆಯಲ್ಲಿ 73859 ಮತಗಳು ಲೀಡ್ ದೊರೆತ್ತಿದೆ. ಮಡಿಕೇರಿ ಕ್ಷೇತ್ರದಲ್ಲಿ 41408 ಮತ್ತು ವಿರಾಜಪೇಟೆ ಕ್ಷೇತ್ರದಲ್ಲಿ  32451 ಲೀಡ್ ದೊರೆತ್ತಿದೆ. ಕಳೆದ ಚುನಾವಣೆಯಲ್ಲಿ ಪ್ರತಾಪ್ ಸಿಂಹ ಅವರಿಗೆ ಕೊಡಗು ಜಿಲ್ಲೆ ಸುಮಾರು 85 ಸಾವಿರ ಲೀಡ್ ನೀಡಿತ್ತು.

Read More

ಮಡಿಕೇರಿ ಜೂ.4 NEWS DESK : ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಹದಿನೇಳು ಪೋಷಕಾಂಶಗಳ ಅಗತ್ಯವಿರುತ್ತದೆ. ಇವುಗಳಲ್ಲಿ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಸ್ವಾಭಾವಿಕವಾಗಿ ದೊರೆಯಲಿದ್ದು, ಗಾಳಿ ಮತ್ತು ನೀರಿನ ಮೂಲಕ ಸಸ್ಯಗಳಿಗೆ ಲಭ್ಯವಾಗುತ್ತವೆ. ಉಳಿದ ಹದಿನಾಲ್ಕು ಪೋಷಕಾಂಶಗಳಲ್ಲಿ ಸಾರಜನಕ, ರಂಜಕ, ಪೊಟ್ಯಾಷ್ ಹೆಚ್ಚಿನ ಪ್ರಮಾಣದಲ್ಲಿ ಬೇಕಿದ್ದು ಇವುಗಳನ್ನು ಪ್ರಧಾನ ಪೋಷಕಾಂಶಗಳೆಂದು, ಕ್ಯಾಲ್ಸಿಯಂ, ಮೆಗ್ನೆಷಿಯಂ, ಗಂಧಕ, ಕಬ್ಬಿಣ, ಜಿಂಕ್, ಬೋರಾನ್, ತಾಮ್ರ, ಮ್ಯಾಂಗನೀಸ್, ಮಾಲಿಬಿನಂ, ಕ್ಲೋರಿನ್ ಮತ್ತು ನಿಕಲ್ ಕಡಿಮೆ ಪ್ರಮಾಣದಲ್ಲಿ ಬೇಕಿದ್ದು ಇವುಗಳನ್ನು ಲಘು ಪೋಷಕಾಂಶಗಳೆಂದು ವಿಂಗಡಿಸಲಾಗಿದೆ. ಇವುಗಳಲ್ಲಿ ಯಾವುದೇ ಒಂದು ಪೋಷಕಾಂಶದ ಕೊರತೆಯಾದರೂ ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿ ಇಳುವರಿ ಕುಂಠಿತವಾಗುತ್ತದೆ. ಪ್ರಧಾನ ಪೋಷಕಾಂಶಗಳು ಮತ್ತು ಲಘು ಪೋಷಕಾಂಶಗಳಿಗೆ ಭೂಮಿಯೇ ಮುಖ್ಯ ಆಧಾರ, ಮಣ್ಣಿನಿಂದ ಈ ಎಲ್ಲಾ ಪೋಷಕಾಂಶಗಳು ಬೆಳೆಗಳಿಗೆ ಬೇಕಾದ ಪ್ರಮಾಣದಲ್ಲಿ ದೊರೆಯುವುದಿಲ್ಲವಾದ್ದರಿಂದ ಬಾಹ್ಯವಾಗಿ ನೀಡುವುದು ಅನಿವಾರ್ಯ. ಬೆಳೆಗಳಿಗೆ ಬೇಕಾಗುವ ಈ ಬಾಹ್ಯ ಪೋಷಕಾಂಶಗಳನ್ನು ಸಾವಯವ (ಕೊಟ್ಟಿಗೆ ಗೊಬ್ಬರ, ಹಸಿರೆಲೆ ಗೊಬ್ಬರ ಹಿಂಡಿ…

Read More

ಮಡಿಕೇರಿ ಜೂ.4 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರ ವಿರುದ್ಧ 139262 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ. ಯದುವೀರ್ ಒಡೆಯರ್  ಅವರು ಒಟ್ಟು 795503 ಮತಗಳನ್ನು ಪಡೆದರೆ ಲಕ್ಷ್ಮಣ್ ಅವರು 656241 ಮತಗಳನ್ನಷ್ಟೇ ಪಡೆಯಲು ಶಕ್ತರಾದರು. ಮತ ಎಣಿಕೆಯ ಎಲ್ಲಾ ಸುತ್ತುಗಳಲ್ಲಿ ಯದುವೀರ್ ಮುನ್ನಡೆಯನ್ನು ಕಾಯ್ದುಕೊಂಡರು. ಕೊಡಗು ಜಿಲ್ಲೆಯಲ್ಲಿ ಯದುವೀರ್ ಅವರಿಗೆ ಸುಮಾರು 73859 ಮತಗಳು ಲೀಡ್ ದೊರೆತ್ತಿದೆ. ಕಳೆದ ಚುನಾವಣೆಯಲ್ಲಿ ಕೊಡಗು ಪ್ರತಾಪ್ ಸಿಂಹ ಅವರಿಗೆ ಸುಮಾರು 85 ಸಾವಿರ ಮತಗಳನ್ನು ಲೀಡ್ ನೀಡಿತ್ತು. ಪ್ರತಾಪ್ ಸಿಂಹ ಅವರು ಕಳೆದ ಬಾರಿ 138647 ಮತಗಳ  ಅಂತರದಿಂದ ಕಾಂಗ್ರೆಸ್ ನ ವಿಜಯಶಂಕರ್ ಅವರ ವಿರುದ್ಧ ಗೆಲುವು ದಾಖಲಿಸಿದ್ದರು. ಯದುವೀರ್ ಅವರ ಗೆಲುವಿನಿಂದ ಕೊಡಗು ಬಿಜೆಪಿಯಲ್ಲಿ ಸಂಭ್ರಮ ಮನೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು- ಕೊಡಗು ಪ್ರತಿಷ್ಠೆಯ ಕ್ಷೇತ್ರವಾಗಿತ್ತಾದರೂ ಗೆದ್ದು ಬೀಗಲು ಸಾಧ್ಯವಾಗಿಲ್ಲ.

Read More

ಕುಶಾಲನಗರ, ಜೂ.4 NEWS DESK :  ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್.ಡಿ.ಎಂ.ಸಿ., ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್, ರಾಷ್ಟ್ರೀಯ ಸೇವಾ ಯೋಜನಾ( ಎನ್.ಎಸ್.ಎಸ್.) ಹಾಗೂ ಸುಂಟಿಕೊಪ್ಪ ಜೆ.ಸಿ.ಐ.ಘಟಕದ ವತಿಯಿಂದ “ಭೂ ಮರುಸ್ಥಾಪನೆ, ಮರು ಭೂಮೀಕರಣ ಹಾಗೂ ಬರ ತಡೆಯುವಿಕೆ”ಎಂಬ ಕೇಂದ್ರ ವಿಷಯದಡಿ ‘ವಿಶ್ವ ಪರಿಸರ ದಿನಾಚರಣೆ:2024 ರ ಅಂಗವಾಗಿ ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ “ಪರಿಸರ ಸಂಭ್ರಮ”: “ನಮ್ಮನಡೆ ಪರಿಸರದೆಡೆಗೆ” “ಗೋ ಗ್ರೀನ್ ಅಭಿಯಾನ” ಕ್ಕೆ ಚಾಲನೆ ನೀಡಲಾಯಿತು. ರಾಷ್ಟ್ರೀಯ ಹಸಿರು ಪಡೆಯ ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್, ಪರಿಸರ ಸಂರಕ್ಷಣೆಯು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಭವಿಷ್ಯದ ದೃಷ್ಟಿಯಿಂದ ನಾವು ಅರಣ್ಯ ಸಂರಕ್ಷಣೆಗಾಗಿ ಹೆಚ್ಚೆಚ್ಚು ಗಿಡ ಮರಗಳನ್ನು ಬೆಳೆಸಿ ಅರಣ್ಯ ಪ್ರದೇಶವನ್ನು ವೃದ್ಧಿಸುವ ಮೂಲಕ ಪರಿಸರ ಸಂರಕ್ಷಣೆಗೆ ಎಲ್ಲರೂ ಮುಂದಾಗಬೇಕು ಎಂದರು. ವಿದ್ಯಾರ್ಥಿಗಳು ತಮ್ಮನ್ನು ಪರಿಸರ ಸಂರಕ್ಷಣಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಭವಿಷ್ಯದಲ್ಲಿ ಪರಿಸರ ರಾಯಭಾರಿಗಳಾಗಿ ರೂಪುಗೊಳ್ಳಬೇಕು ಎಂದು ಪ್ರೇಮಕುಮಾರ್ ಹೇಳಿದರು. ವಿದ್ಯಾರ್ಥಿಗಳು…

Read More

ಮಡಿಕೇರಿ ಜೂ.4 NEWS DESK : ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ-ಗಾಳಿ ಪ್ರಾರಂಭವಾಗಿದ್ದು, ವಿದ್ಯುತ್ ಅವಘಡಗಳು ಉಂಟಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಅಲ್ಲದೆ ವಿದ್ಯುತ್ ಸರಬರಾಜಿನಲ್ಲಿ ಹೆಚ್ಚಿನ ಪ್ರಮಾಣದ ವಿದ್ಯುತ್ ಅಡಚಣೆಗಳು ಉಂಟಾಗುತ್ತಿದ್ದು, ಸಾರ್ವಜನಿಕರು ಯಾವುದೇ ರೀತಿಯ ವಿದ್ಯುತ್ ಜಾಲದ ವ್ಯತ್ಯಯಗಳನ್ನು (ವಿದ್ಯುತ್ ಮಾರ್ಗದ ತಂತಿ ಹಾಗೂ ಕಂಬಗಳು ತುಂಡಾಗುವುದು) ಗಮನಿಸಿದಲ್ಲಿ, ಸ್ವತಃ ಕ್ರಮಕೈಗೊಳ್ಳದೇ (ವಿದ್ಯುತ್ ತಂತಿಗಳನ್ನು ಸ್ಪರ್ಶಿಸದೇ) ತಕ್ಷಣ ಚಾಮುಂಡೇಶ್ವರ ವಿದ್ಯುತ್ ಸರಬರಾಜು ನಿಗಮ ನಿಯಮಿತದ ದೂರವಾಣಿ ಸಂಖ್ಯೆಗಳಲ್ಲಿ ತಮ್ಮ ದೂರುಗಳನ್ನು ದಾಖಲಿಸುವಂತೆ ಕೋರಿದೆ. ಗ್ರಾಹಕರು ಸಂಪರ್ಕಿಸಲು ಸಾಧ್ಯವಾಗದಿದ್ದಲ್ಲಿ ಪರ್ಯಾಯವಾಗಿ ವಾಟ್ಸ್‍ಆಪ್ ಮೂಲಕ ಪೋಟೋ ಸಂದೇಶವನ್ನು ನೀಡಬಹುದು. ಕೊಡಗು ಜಿಲ್ಲೆಯ(24*7) ಟೋಲ್ ಪ್ರೀ ಸರ್ವೀಸ್ ಸೆಂಟರ್‍ನ ದೂರವಾಣಿ ಸಂಖ್ಯೆ 1912, ಗ್ರಾಹಕರ ಸೇವಾ ಕೇಂದ್ರ ಸಂಖ್ಯೆ 9449598665. ಮಡಿಕೇರಿ ತಾಲ್ಲೂಕಿಗೆ ಸಂಬಂಧಿಸಿದಂತೆ ಮಡಿಕೇರಿ, ತಾಳತ್‍ಮನೆ, ಮೂರ್ನಾಡು, ಸಂಪಾಜೆ, ಭಾಗಮಂಡಲ, ನಾಪೋಕ್ಲು ಶಾಖೆಗಳಿಗೆ ಮತ್ತು ಗ್ರಾಹಕರ ಸೇವಾ ಕೇಂದ್ರಕ್ಕೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿನಯಕುಮಾರ್ 9449598602, ಸಹಾಯಕ ಜೂನಿಯರ್ ಎಂಜಿನಿಯರ್‍ಗಳು ಸಂಪತ್ ಕುಮಾರ್(ಮಡಿಕೇರಿ)…

Read More

ಮಾದಾಪುರ ಜೂ.4 NEWS DESK : ಹಟ್ಟಿಹೊಳೆಯಲ್ಲಿ ನಡೆದ ಮೊದಲನೇ ವರ್ಷದ ಹಟ್ಟಿಹೊಳೆ ಕ್ರಿಕೆಟ್ ಲೀಗ್‍ನಲ್ಲಿ ಟೀಮ್ ರ‍್ಯಾಬಿಟ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದರೆ, ಹಟ್ಟಿ ಕ್ರಿಕೆಟರ್ಸ್ ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಡಬೇಕಾಯಿತು. ಐದು ಓವರ್‌ಗಳ ಈ ಕ್ರಿಕೆಟ್ ಪಂದ್ಯಾಟದಲ್ಲಿ ಟಾಸ್ ಗೆದ್ದ ಟೀಮ್ ರ್ಯಾಬಿಟ್ ತಂಡ ಬೌಲಿಂಗ್ ಆಯ್ಕೆ ಮಾಡಿತು. ಮೊದಲು ಬ್ಯಾಟ್ ಮಾಡಿದ ಹಟ್ಟಿ ಕ್ರಿಕೇಟರ್ಸ್ ಐದು ಓವರ್‌ ಗಳಲ್ಲಿ ಕೇವಲ 26 ರನ್ ಗಳಿಸಲಷ್ಟೇ ಸಾದ್ಯವಾಯಿತು. ಈ ಗುರಿಯನ್ನು ಬೆನ್ನಟ್ಟಿದ ಟೀಮ್ ರ‍್ಯಾಬಿಟ್ ತಂಡ 4.1 ಓವರ್‍ಗಳಲ್ಲಿ ಗೆಲುವಿನ ದಡ ಸೇರಿತು. ಇದರೊಂದಿಗೆ ಟೀಮ್ ರ್ಯಾಬಿಟ್ ತಂಡ ಮೊದಲೇ ಆವೃತ್ತಿಯ ಮೊದಲ ಚಾಂಪಿಯನ್ ಆಗಿ ಹೊರಹೊಮ್ಮಿತು. ಈ ಮೊದಲು ಪಂದ್ಯಾಟವನ್ನು ಮೇ 10 ಮತ್ತು 11 ರಂದು ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಆ ದಿನಗಳಲ್ಲಿ ಮಳೆ ಬಂದ ಕಾರಣ ಪಂದ್ಯಾಟವನ್ನು ಜೂನ್ 1 ಮತ್ತು 2 ರಂದು ನಡೆಸಲಾಯಿತು. ಬಹುಮಾನ ವಿತರಣೆ : ಪಂದ್ಯಾಟದ ಮ್ಯಾನ್ ಆಫ್…

Read More

ಮಡಿಕೇರಿ ಜೂ.4 NEWS DESK :  ಮಾನವೀಯ ಸ್ನೇಹಿತರ ಒಕ್ಕೂಟದ ಸದಸ್ಯರ ಸಮ್ಮಿಲನ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ನಗರದ ಕ್ರೆಸೆಂಟ್ ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ನಿವೃತ್ತ ಸುಬೇದಾರ್ ಮೇಜರ್ ಡೇವಿಡ್ ವೇಗಸ್ ಉದ್ಘಾಟಿಸಿದರು. ಒಕ್ಕೂಟದ ಅಡ್ಮಿನ್ ಶಶಿಕುಮಾರ್ ಪ್ರಸ್ತಾವಿಕ ಮಾತನಾಡಿ,  ನಮ್ಮ ಒಕ್ಕೂಟವೂ ಜಿಲ್ಲೆಯ ಕಡು ಬಡವರ ಸಂಕಷ್ಟಗಳಿಗೆ ಕೈಲಾದ ಸಹಾಯವನ್ನು ಮಾಡುತ್ತಾ ಬರುತ್ತಿದ್ದು, ಮುಂದಿನ ದಿನಗಳಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಲಾಗುವುದೆಂದರು.ಎಂದು ಹೇಳಿದರು. ಸಮಾಜ ಸೇವಕ ಮೈಕಲ್ ವೇಗಸ್  ಮಾತನಾಡಿ, ಒಕ್ಕೂಟದ ಕಾರ್ಯ ಚಟುವಟಿಕೆಗಳ ಬಗ್ಗೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು. ಒಕ್ಕೂಟದ ಅಡ್ಮಿನ್ ಎಂ.ಇ.ಮಹಮ್ಮದ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಲ್ಲಮಾವಟಿ ನೇತಾಜಿ ಪ್ರೌಢಶಾಲೆಯ ಶಿಕ್ಷಕ ಮೆಹಬೂಬ್ ಸಾಬ್, ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ ಸುಕುಮಾರ್, ಸಮಾಜ ಸೇವಕಿ ಗಾಯತ್ರಿ ನರಸಿಂಹ , ಸುಂಟಿಕೊಪ್ಪದ ಹಿರಿಯ ಸಾಫ್ಟ್ವೇರ್ ಇಂಜಿನಿಯರ್ ನಿಯಾಝ್ ಮುಂತಾದವರು ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ಪತ್ರಕರ್ತ ಎಂ.ಇ.ಮಹಮ್ಮದ್ ರಚಿಸಿದ ಒಕ್ಕೂಟದ ಧ್ಯೇಯ ಗೀತೆಯನ್ನು ಮಡಿಕೇರಿ ತಾಲೂಕು ಕನ್ನಡ…

Read More

ಗುಜರಾತ್  ಜೂ.4 NEWS DESK :  ಗುಜರಾತ್‍ ನ ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಗೃಹ ಸಚಿವ ಅಮಿತ್ ಶಾ ಜಯ ದಾಖಲಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸೋನಾಲ್ ಪಟೇಲ್ ವಿರುದ್ಧ 5.5 ಲಕ್ಷ ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. 1989ರಿಂದಲೂ ಸತತವಾಗಿ ಬಿಜೆಪಿ ಈ ಕ್ಷೇತ್ರವನ್ನು ತನ್ನ ತೆಕ್ಕೆಯಲ್ಲಿ ಇರಿಸಿಕೊಂಡಿದೆ.

Read More