ಯದುವೀರ್-4,51,165 ಲಕ್ಷ್ಮಣ್- 3,51,968 ಯದುವೀರ್ – 99,197 ಮತಗಳ ಮುನ್ನಡೆ
ಲೇಖಕ: admin
ಯದುವೀರ್ – 4,12,685 ಲಕ್ಷ್ಮಣ್ – 3,23,857 ಯದುವೀರ್ – 88,828 ಮತಗಳ ಮುನ್ನಡೆ
ಯದುವೀರ್- 3,863,45 ಲಕ್ಷ್ಮಣ್- 3,012,22 ಯದುವೀರ್ 86,123 ಮತಗಳ ಮುನ್ನಡೆ
ಕಡಂಗ ಜೂ.4 NEWS DESK : ಎಸ್ ಎಸ್ ಎಫ್ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಜಿಲ್ಲೆಯ ಅಧೀನದಲ್ಲಿರುವ ಡಿವಿಷನ್ ಹಾಗೂ ಸೆಕ್ಟರ್ ಸಮಿತಿಗಳ ನಾಯಕರ ಕ್ಯಾಂಪ್ ಹಾಗೂ ಜಿಲ್ಲಾ ಸಮಿತಿಯ ಕೌನ್ಸಿಲ್ ಸಭೆಯು ಕೊಂಡಂಗೇರಿಯ ಶಾದಿ ಮಹಲ್ ನಲ್ಲಿ ನಡೆಯಿತು. ರಾಜ್ಯ ಸಮಿತಿ ಸದಸ್ಯರಾದ ಆರಿಫ್ ಸಖಾಫಿ ನೇತೃತ್ವದಲ್ಲಿ ಜಿಲ್ಲಾ ಕೌನ್ಸಿಲ್ ನಡೆಯಿತು. ಸಯ್ಯಿದುನಾ ಅಬ್ದುಲ್ಲಾಹಿ ಸಖಾಫ್ ಹಳ್ರಮಿ ಅವರ ಝಿಯಾರತ್ ನೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮವನ್ನು ಎಸ್.ಎಸ್.ಎಫ್ ಮಾಜಿ ರಾಜ್ಯ ಕಾರ್ಯದರ್ಶಿ ಮುಬಶ್ಶಿರ್ ಅಹ್ಸನಿ ಉಸ್ತಾದ್ ಉದ್ಘಾಟಿಸಿದರು. ನಂತರ ಜಿಲ್ಲೆಯ ವಿವಿಧ ಕಡೆಗಳಿಂದ ಬಂದ ನಾಯಕರಿಗೆ ಎಸ್.ವೈ.ಎಸ್ ಕೇರಳ ರಾಜ್ಯ ಕಾರ್ಯದರ್ಶಿ ಅಬ್ದುಲ್ ಕಲಾಂ ಮಾಸ್ಟರ್ ತರಗತಿ ನಡೆಸಿದರು. ಈಗಿನ ಕಾಲದಲ್ಲಿ ಸಾಂಘಿಕ ಕಾರ್ಯಾಚರಣೆಯ ಕುರಿತು ಆಳವಾಗಿ ವಿವರಿಸಿದರು. ಎಸ್ ಎಸ್ ಎಫ್ ಜಿಲ್ಲಾದ್ಯಕ್ಷ ಝುಬೈರ್ ಸಅದಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ರಾಜ್ಯ ಕಾರ್ಯದರ್ಶಿ ಮುಜೀಬ್, ರಾಜ್ಯ ಸಮಿತಿ ಸದಸ್ಯರಾದ ಇಬ್ರಾಹಿಂ ಮಾಸ್ಟರ್ ಜಿಲ್ಲಾ ಕೋಶಾಧಿಕಾರಿ ಸಯ್ಯದ್ ಶಿಹಾಬ್…
ಕುಶಾಲನಗರ ಜೂ.4 NEWS DESK : ಕೊಡಗು ಅಂಚೆ ಇಲಾಖೆಯ ನೌಕರರ ಆಶ್ರಯದಲ್ಲಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಪ್ರಶಸ್ತಿಯನ್ನು ಸೋಮವಾರಪೇಟೆ ಉಪ ವಿಭಾಗ ತಂಡ ತನ್ನದಾಗಿಸಿಕೊಂಡಿದ್ದು, ಮಡಿಕೇರಿ ಉಪ ವಿಭಾಗ ತಂಡ ದ್ವಿತೀಯ ಸ್ಥಾನ ಪಡೆಯಿತು. ಸ್ಥಳೀಯ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ಪಂದ್ಯಾವಳಿಯಲ್ಲಿ ಕೊಡಗು ಜಿಲ್ಲೆಯ ಅಂಚೆ ವಿಭಾಗದ ಮೂರು ಉಪವಿಭಾಗ ಮತ್ತು ಪ್ರಧಾನ ಅಂಚೆ ಕಚೇರಿ ಸೇರಿದಂತೆ ಒಟ್ಟು ನಾಲ್ಕು ತಂಡಗಳು ಪಾಲ್ಗೊಂಡಿದವು. ಹಾಸನ ಅಂಚೆ ವಿಭಾಗದ ಉಪ ಅಧೀಕ್ಷಕರಾದ ಹೆಚ್.ಸೋಮಯ್ಯ ಪಂದ್ಯಾವಳಿಗೆ ಚಾಲನೆ ನೀಡಿದರು. ಮಡಿಕೇರಿ ಅಂಚೆ ನಿರೀಕ್ಷಕರಾದ ಬಿ.ಡಿ.ಮಂಜುನಾಥ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಪಂದ್ಯ ಪುರುಷೋತ್ತಮರಾಗಿ ಶಿವಕುಮಾರ್, ಉತ್ತಮ ತಂಡವಾಗಿ ಮಡಿಕೇರಿ ಉಪ ವಿಭಾಗ ಪ್ರಶಸ್ತಿ ಪಡೆದುಕೊಂಡಿತು. ಪಂದ್ಯಾವಳಿಯಲ್ಲಿ ಮಡಿಕೇರಿ ಪ್ರಧಾನ ಕಚೇರಿಯ ಪ್ರಮುಖರಾದ ಬೇಬಿ ಜೋಸೆಫ್, ಸಿಎಲ್ ಮಹೇಶ್, ಸಂದೀಪ್, ಸೋಮಪ್ಪ, ವಿರಾಜಪೇಟೆ ಉಪವಿಭಾಗದ ಮಂಜು, ಶಫೀರ್, ಸತ್ಯ ಪ್ರಸನ್ನ, ಸೋಮವಾರಪೇಟೆ ಉಪವಿಭಾಗದ ಉಪ ಅಧೀಕ್ಷಕ ಶಿವಕುಮಾರ್, ಅಶೋಕ್, ಎಂ.ಎಸ್.ಮಂಜುನಾಥ್ , ಭಾಸ್ಕರ್…
ಕುಶಾಲನಗರ ಜೂ.4 NEWS DESK : ಪೋಷಕರು ತಮ್ಮ ಮಕ್ಕಳು ಮಾದಕ ವಸ್ತುಗಳ ಚಟಕ್ಕೆ ಬಲಿಯಾಗದಂತೆ ಎಚ್ಚರ ವಹಿಸಬೇಕಾಗಿದೆ ಎಂದು ಕುಶಾಲನಗರ ಸಂಚಾರಿ ಠಾಣೆಯ ಪೋಲೀಸ್ ಹೆಡ್ ಕಾನ್ಸ್ಟೇಬಲ್ ಆಶಾ ತಿಳಿಸಿದ್ದಾರೆ. ಕುಶಾಲನಗರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಿಣ ಅಭಿವೃದ್ಧಿ ಯೋಜನೆಯ ಕುಶಾಲನಗರ ವಲಯದ ಆಶ್ರಯದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಸಹಯೋಗದೊಂದಿಗೆ ಒಕ್ಕೂಟ ಸಭೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಪ್ರಯುಕ್ತ ನಡೆದ ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದರು. ಹೆಚ್ಚಿನ ಸಂಖ್ಯೆಯಲ್ಲಿ ಯುವಜನತೆ ಮಾದಕ ವಸ್ತುಗಳ ಚಟಕ್ಕೆ ಬಲಿಯಾಗುತ್ತಿದ್ದಾರೆ. ಶಾಲಾ ಕಾಲೇಜು ಮಕ್ಕಳು ಇದರಿಂದ ಹೊರತಾಗಿಲ್ಲ. ಮೊಬೈಲ್ ದುರುಪಯೋಗ ಮಾಡದಂತೆ ಗಮನಹರಿಸಬೇಕು ವಾಹನಗಳನ್ನು ಚಲಾಯಿಸಲು ಅಪ್ರಾಪ್ತರಿಗೆ ನೀಡಬಾರದು. ಮಕ್ಕಳ ಬಗ್ಗೆ ಸಂಪೂರ್ಣ ಜಾಗೃತಿ ವಹಿಸುವುದು ಪೋಷಕರ ಆದ್ಯ ಕರ್ತವ್ಯವಾಗಿದೆ ಎಂದರು. ಜನಜಾಗೃತಿ ವೇದಿಕೆ ಸದಸ್ಯರಾದ ವಿ.ಡಿ. ಪುಂಡರೀಕಾಕ್ಷ ಅವರು ಮಾತನಾಡಿ, ಮಕ್ಕಳಿಗೆ ತಮ್ಮ ಜವಾಬ್ದಾರಿಯನ್ನು ತಿಳಿಸಿಕೊಡುವ ಕೆಲಸವಾಗಬೇಕಾಗಿದೆ. ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕಾಗಿ ಪ್ರತಿಯೊಬ್ಬರೂ ಪಣತೊಡಬೇಕಾಗಿದೆ ಎಂದು…
ಸುಂಟಿಕೊಪ್ಪ, ಜೂ.3 NEWS DESK : ಗರಗಂದೂರು ಬಿ ತೋಟದ ಸಮೀಪದ (ಹೊಸತೋಟ) ಬಸ್ ಸ್ಟ್ಯಾಂಡ್ ನಲ್ಲಿ ವ್ಯಕ್ತಿಯೋರ್ವರ ಮೃತ ದೇಹ ಪತ್ತೆಯಾಗಿದೆ. ಸೋಮವಾರ ಸಂಜೆ ಹೊಸತೋಟ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದ್ದು, ಮೃತ ವ್ಯಕ್ತಿ ಮೈಸೂರು ಜಿಲ್ಲೆಯ ಇಲವಾಲ ಸಮೀಪದ ಹೊಸಕೋಟೆ ಚಂದ್ರು (42) ಎಂದು ಗುರುತಿಸಲಾಗಿದೆ. ಊಟದ ಬ್ಯಾಗ್ ಇರಿಸಿಕೊಂಡಿದ್ದ ಚಂದ್ರು, ಬಸ್ ನಿಲ್ದಾಣದಲ್ಲಿ ಕುಳಿತಲ್ಲೇ ಅಸುನಿಗಿದ್ದಾರೆ. ಮೃತ ದೇಹವನ್ನು ಮಡಿಕೇರಿ ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಸುಂಟಿಕೊಪ್ಪ ಪೊಲೀಸ್ ಠಾಣೆಗೆ ಮಾಹಿತಿ ಬಂದಮೇರೆಗೆ ಠಾಣಾಧಿಕಾರಿ ಎಂ.ಸಿ.ಶ್ರೀಧರ್ ಹಾಗೂ ಸಿಬ್ಬಂದಿಗಳು ತೆರಳಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ ಜೂ.3 NEWS DESK : ಆದಿವಾಸಿಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ ಒದಗಿಸಲು ಎಸ್ಟಿ ಜನಾಂಗಕ್ಕೆ ಒಳ ಮೀಸಲಾತಿ ನೀಡಬೇಕೆಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಒತ್ತಾಯಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಹಿಂದೆ ಇದ್ದ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರಕಾರ ಒಳಮೀಸಲಾತಿಯನ್ನು ತಂದು ಕೆಲವು ಸಮುದಾಯಗಳಿಗೆ ನೆರವಾಗಿದೆ. ಇದೀಗ ರಾಜ್ಯದಲ್ಲಿ ಅಧಿಕಾರದಲ್ಲಿರುವ ಅಹಿಂದ ಪರ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಸರಕಾರ ಎಸ್ಟಿ ಜನಾಂಗಕ್ಕೆ ಒಳ ಮೀಸಲಾತಿ ನೀಡುವ ಮೂಲಕ 49 ಸಮುದಾಯಗಳಿಗೆ ನ್ಯಾಯ ಒದಗಿಸಲಿ ಎಂದರು. ಎಸ್ಟಿ ಜನಾಂಗಕ್ಕೆ ಒಳ ಮೀಸಲಾತಿ ನೀಡಲು ಸರಕಾರ ಸಮಿತಿಯೊಂದನ್ನು ರಚಿಸಬೇಕು. ಈ ಬೇಡಿಕೆಯ ಕುರಿತು ಆದಿವಾಸಿಗಳಿರುವ ಪ್ರದೇಶಗಳಲ್ಲಿ ಜನಜಾಗೃತಿ ಮೂಡಿಸಲಾಗುವುದು ಮತ್ತು ಸರಕಾರದ ಗಮನ ಸೆಳೆಯಲಾಗುವುದು ಎಂದು ಹೇಳಿದರು. ಜಾತಿ ಜನ ಗಣತಿ ವರದಿಯನ್ನು ಬಿಡುಗಡೆ ಮಾಡಿದರೆ ನಿಖರವಾದ ಅಂಕಿ ಅಂಶಗಳು ಲಭಿಸಲಿದ್ದು, ಜನಸಂಖ್ಯಾ ಆಧಾರದಲ್ಲಿ ಮೀಸಲಾತಿ ನೀಡಿ ಆದಿವಾಸಿಗಳಿಗೆ ನ್ಯಾಯ…
ಮಡಿಕೇರಿ ಜೂ.3 NEWS DESK : ನೈಋತ್ಯ ಪದವೀದರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಇಂದು ನಡೆದ ಚುನಾವಣೆಗೆ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಶಾಂತಿಯುತ ಮತದಾನ ನಡೆಯಿತು. ನೈಋತ್ಯ ಪದವೀಧರ ಕ್ಷೇತ್ರದ ಕೊಡಗಿನ 3909 ಮತದಾರರಲ್ಲಿ 3170 ಮಂದಿ ತಮ್ಮ ಹಕ್ಕನ್ನು ಚಲಾಯಿಸುವ ಮೂಲಕ ಶೇ.81.09 ಮತದಾನ ದಾಖಲಾಗಿದೆ. ಶಿಕ್ಷಕರ ಕ್ಷೇಢತ್ರದ 1578 ಮತದಾರರಲ್ಲಿ 1371 ಮಂದಿ ಮತ ಚಲಾಯಿಸುವ ಮೂಲಕ ಶೇ.86.88 ಮತದಾನವಾಗಿದೆ. ಜಿಲ್ಲಾ ಕೇಂದ್ರ ಮಡಿಕೇರಿ, ತಾಲ್ಲೂಕು ಕೇಂದ್ರಗಳಾದ ವಿರಾಜಪೇಟೆ, ಸೋಮವಾರಪೇಟೆ, ಪೊನ್ನಂಪೇಟೆ ಮತ್ತು ಕುಶಾಲನಗರದಲ್ಲಿ ವ್ಯವಸ್ಥೆಮಾಡಲಾಗಿದ್ದ ಮತಗಟ್ಟೆಗಳಲ್ಲಿ ಇಂದು ಬೆಳಗ್ಗಿನಿಂದಲೆ ಶಿಕ್ಷಕರು ಮತ್ತು ಪದವೀಧರರು ಸರದಿಯ ಸಾಲಿನಲ್ಲಿ ನಿಂತು ಉತ್ಸಾಹದಿಂದ ಮತದಾನ ಮಾಡುತ್ತಿದ್ದುದು ಗೋಚರಿಸಿತು. ಮಡಿಕೇರಿಯ ನಗರಸಭಾ ಕಚೇರಿಯಲ್ಲಿ ವ್ಯವಸ್ಥೆ ಮಾಡಿದ್ದ ಪದವೀಧರರ ಕ್ಷೇತ್ರದ ಚುನಾವಣಾ ಮತಗಟ್ಟೆಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪಂಚಾಯ್ತಿ ಸಿಇಒ ವರ್ಣಿತ್ ನೇಗಿ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅವರು ಒಟ್ಟಾಗಿ ಬಂದು ಸರದಿಯ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದು ವಿಶೇಷವಾಗಿತ್ತು. ನೈಋತ್ಯ…
ಸುಂಟಿಕೊಪ್ಪ ಜೂ.3 NEWS DESK : ಸುಂಟಿಕೊಪ್ಪದ ಅಯ್ಯಪ್ಪ ಸ್ವಾಮಿ ದೇವಾಲಯದ ಬಳಿ ಭಾನುವಾರ ನಡೆದಿದ್ದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸ್ಕೂಟಿ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕೆದಕಲ್ ಗ್ರಾಮದ ಏಳನೇ ಮೈಲು ನಿವಾಸಿ ಇಬ್ರಾಹಿಂ (60) ಮೃತ ದುರ್ದೈವಿ. ಸುಂಟಿಕೊಪ್ಪದಿಂದ ಕುಶಾಲನಗರದತ್ತ ತೆರಳುತ್ತಿದ್ದ ಸ್ಕೂಟಿಗೆ ಹಿಂಬದಿಯಲ್ಲಿ ಬರುತ್ತಿದ್ದ ಕೇರಳ ಕಣ್ಣೂರಿನ ಇನ್ನೋವಾ ಕಾರು ಡಿಕ್ಕಿಯಾಗಿತ್ತು. ಗಾಯಾಳು ಇಬ್ರಾಹಿಂ ಅವರನ್ನು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಆಗಲಿದ್ದಾರೆ.






