ಲೇಖಕ: admin

ಮಡಿಕೇರಿ ಜೂ.3 NEWS DESK : ಸಿದ್ದಾಪುರ ಕಾವೇರಿ ಜಲಾನಯನ ಪ್ರದೇಶದ ಕಾಫಿ ತೋಟ ಸೇರಿದಂತೆ ಕೊಡಗು ಜಿಲ್ಲೆಯಾದ್ಯಂತ ನಡೆಯುತ್ತಿರುವ ಬೃಹತ್ ಭೂಪರಿವರ್ತನೆಗಳನ್ನು ತಡೆಯದಿದ್ದಲ್ಲಿ ಮುಂದೊಂದು ದಿನ ಪವಿತ್ರ ಕಾವೇರಿಯ ತವರು ಕೊಡವ ಲ್ಯಾಂಡ್ ಮರೆಯಾಗಿ ಕೊಡವರು ಅಲೆಮಾರಿಗಳಾಗಬೇಕಾಗುತ್ತದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಆತಂಕ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಭೂಪರಿವರ್ತನೆಯ ವಿರುದ್ಧ ಬಿರುನಾಣಿಯಲ್ಲಿ ಶಾಂತಿಯುತ ಮಾನವ ಸರಪಳಿ ನಿರ್ಮಿಸುವ ಮೂಲಕ ಸಿಎನ್‍ಸಿಯ ಜನಜಾಗೃತಿ ಕಾರ್ಯಕ್ರಮವನ್ನು ಆರಂಭಿಸಿದ ಅವರು ಕೊಡವ ಲ್ಯಾಂಡ್ ನ್ನು ಉಳಿಸಿಕೊಳ್ಳಲು ಕೊಡವರೆಲ್ಲರು ಒಗ್ಗೂಡುವಂತೆ ಕರೆ ನೀಡಿದರು. ಭೂಪರಿವರ್ತನೆಯಿಂದ ಸಾವಿರಾರು ಮಂದಿ ನೆಲೆಸುವ ಸಾಧ್ಯತೆ ಇದೆ. ಈ ಬೆಳವಣಿಗೆಯಿಂದ ಕೊಡಗಿನಲ್ಲಿ ಜನಸಂಖ್ಯಾ ಸ್ಫೋಟ ಸಂಭವಿಸಿ ಆದಿಮಸಂಜಾತ ಬುಡಕಟ್ಟು ಜನಾಂಗ ಮೂಲನಿವಾಸಿ ಕೊಡವರ ಅಸ್ತಿತ್ವಕ್ಕೆ ದಕ್ಕೆ ಬರಬಹುದು ಎಂದು ತಿಳಿಸಿದರು. ಮೂಲನಿವಾಸಿಗಳು ವಾಸದ ಮನೆ ನಿರ್ಮಿಸಲು ಅನುಮತಿ ಕೋರಿದರೆ ಹಸಿರು ವಲಯ ಪ್ರದೇಶವೆಂದು ಅಡ್ಡಿ ಪಡಿಸುವ ಆಡಳಿತ ವ್ಯವಸ್ಥೆ ಭೂಮಾಫಿಯಾಗಳು ಸಾವಿರಾರು ಏಕರೆ ಹಸಿರ ಭೂಮಿಯನ್ನು…

Read More

ಮಡಿಕೇರಿ ಜೂ.3 NEWS DESK : ಮುಂಗಾರು ಸಂದರ್ಭದಲ್ಲಿ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪವನ್ನು ಎದುರಿಸುವಲ್ಲಿ ಅಗತ್ಯ ಮುನ್ನೆಚ್ಚರ ವಹಿಸುವ ಸಂಬಂಧ ಈಗಾಗಲೇ ಆಗಮಿಸಿರುವ ಎನ್‍ಡಿಆರ್‍ಎಫ್ ತಂಡವು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರನ್ನು ಭೇಟಿ ಮಾಡಿ ಮಳೆಗಾಲದಲ್ಲಿ ಅನುಸರಿಸಬೇಕಾದ ಕಾರ್ಯ ಚಟುವಟಿಕೆ ಬಗ್ಗೆ ಚರ್ಚಿಸಿದರು. ಎನ್‍ಡಿಆರ್‍ಎಫ್‍ನ ಅಜಯ್ ಕುಮಾರ್ ನೇತೃತ್ವದ ತಂಡವು ಜಿಲ್ಲಾಧಿಕಾರಿ ಅವರ ಜೊತೆ ಚರ್ಚಿಸಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ ಮಳೆ ಸಂಬಂಧ ಹವಾಮಾನ ಇಲಾಖೆಯಿಂದ ಕಾಲಕಾಲಕ್ಕೆ ಬಿಡುಗಡೆ ಆಗುವ ಮಾಹಿತಿಯನ್ನು ಅಪ್‍ಡೇಟ್ ಮಾಡಲಾಗುತ್ತದೆ. ಆ ನಿಟ್ಟಿನಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಎಚ್ಚರವಹಿಸಿ, ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಬೇಕು ಎಂದರು. ಜಿಲ್ಲಾ ವಿಪತ್ತು ನಿರ್ವಹಣಾ ಪರಿಣತರಾದ ಅನನ್ಯ ವಾಸುದೇವ, ಎನ್‍ಡಿಆರ್‍ಎಫ್ ತಂಡ ಪ್ರಮುಖರು ಇದ್ದರು. ಎನ್‍ಡಿಆರ್‍ಎಫ್ ತಂಡವು ಬೆಂಗಳೂರಿನ ಆರ್‍ಆರ್‍ಸಿ ವಿಭಾಗದಿಂದ ಆಗಮಿಸಿದೆ.

Read More

ಮಡಿಕೇರಿ ಜೂ.3 NEWS DESK : ಬ್ಯೂ ಬ್ಯಾಂಡ್ ಸಂಸ್ಥೆ ವತಿಯಿಂದ ನಾಸಿಕ್ ನಲ್ಲಿ ಆಯೋಜಿತ ಜೂನಿಯರ್ ನ್ಯಾಷನಲ್ ರ‍್ಯಾಲಿ ಚಾಂಪಿಯನ್ ಶಿಪ್ ನ ರ‍್ಯಾಲಿ ಆಫ್ ಮಹರಾಷ್ಟ್ರದಲ್ಲಿ ಮೇಕೇರಿಯ ಅಭಿನ್ ರೈ ಎರಡನೇ ಸ್ಥಾನ ಪಡೆದಿದ್ದಾರೆ. ಇಂಡಿಯನ್ ನ್ಯಾಷನಲ್ ರ‍್ಯಾಲಿ ಚಾಂಪಿಯನ್ ಶಿಪ್ ನ ವಿಭಾಗ 3 ರಲ್ಲಿ ಪಾಲ್ಗೊಂಡಿದ್ದ ಅಭಿನ್ ರೈ ನಾಲ್ಕನೇ ಸ್ಥಾನ ಪಡೆದಿದ್ದು, ದೇಶದ ವಿವಿಧೆಡೆಗಳ 29 ರ‍್ಯಾಲಿ ಚಾಲಕರು ಈ ವಿಭಾಗದಲ್ಲಿ ಪಾಲ್ಗೊಂಡಿದ್ದರು. ಅಭಿನ್ ರೈ ಮೇಕೇರಿ ಗ್ರಾಮದ ರತ್ನಾಕರ್ ರೈ ಮತ್ತು ನಮಿತಾ ರೈ ದಂಪತಿ ಪುತ್ರನಾಗಿದ್ದು, ಕಳೆದ ವಷ೯ ರಾಷ್ಟ್ರೀಯ ಚಾಂಪಿಯನ್ ಶಿಪ್ ನಲ್ಲಿ ಚಾಂಪಿಯನ್ ಆಗಿದ್ದರು.

Read More

ಮಡಿಕೇರಿ ಜೂ.3 NEWS DESK : ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ  ಯಾವುದಾದರೂ ನೆರೆ ಹಾವಳಿಯಂತಹ ಪ್ರಾಕೃತಿಕ ವಿಕೋಪಗಳು ಸಂಭವಿಸಿದರೆ ಸಾರ್ವಜನಿಕರ ಸಹಾಯಕ್ಕೆ ಧಾವಿಸಲು ಜಿಲ್ಲಾ ಪೊಲೀಸ್ ಇಲಾಖೆಯಿಂದ ಡಿಎಆರ್, ಮಡಿಕೇರಿ, ಸೋಮವಾರಪೇಟೆ ಮತ್ತು ವಿರಾಜಪೇಟೆ ಉಪ ವಿಭಾಗಗಳ ತಲಾ 15 ಸಿಬ್ಬಂದಿಗಳನ್ನೊಳಗೊಂಡ 4 ವಿಪತ್ತು ನಿರ್ವಹಣಾ ತಂಡವನ್ನು ರಚಿಸಲಾಗಿದ್ದು, ಈ ತಂಡಗಳಿಂದ  ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ರಕ್ಷಣಾ ಕಾರ್ಯಾಚರಣೆಯ ಅಭ್ಯಾಸವನ್ನು ನಡೆಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ನೇತೃತ್ವದಲ್ಲಿ ನಡೆದ ಅಭ್ಯಾಸ ಕಾರ್ಯಾಚರಣೆಯಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿ಼ಷ್ಠಾಧಿಕಾರಿ ಕೆ.ಎಸ್.ಸುಂದರ್ ರಾಜ್, ಕುಶಾಲನಗರ ವೃತ್ತ ನಿರೀಕ್ಷಕ ಕೆ.ರಾಜೇಶ್ ಹಾಗೂ ಇತರೆ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.

Read More

ಮಡಿಕೇರಿ ಜೂ.3 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ  ಗೋಣಿಕೊಪ್ಪಲಿನ ನದಿ ಪುನಶ್ಚೇತನ ಕಾಮಗಾರಿಯನ್ನು ಪರಿಶೀಲಿಸಿದರು. ನಂತರ ಮಾತನಾಡಿದ ಶಾಸಕ ಪೊನ್ನಣ್ಣ, ಘನತ್ಯಾಜ್ಯ ನಿರ್ವಹಣೆಗೆ ನಿರ್ದೇಶನ ನೀಡಿ ಈ ನದಿ ಮೊದಲಿನಂತೆ ನೀರು ಹರಿಯುವಂತಾಗಬೇಕು. ಈ ಕೆಲಸಕ್ಕೆ ಹಲವಾರು ಸಂಸ್ಥೆಗಳು ಕೈಜೋಡಿಸಿದ್ದು, ಕ್ಲೀನ್‌ ಕೂರ್ಗ್‌ ಇನಿಶಿಯೇಟಿವ್ ಸಂಸ್ಥೆ ವೈಜ್ಞಾನಿಕ ತಡೆ ಟ್ರಾಶ್ ಬ್ಯಾರಿಯರ್‌ ಯನ್ನು ಅಳವಡಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು. ಈ ಸಂದರ್ಭ ಗೋಣಿಕೊಪ್ಪ ಪಂಚಾಯಿತಿಯ ಅಧ್ಯಕ್ಷ ಪ್ರಮೋದ್ ಗಣಪತಿ ಹಾಜರಿದ್ದರು.

Read More

ಮಡಿಕೇರಿ ಜೂ.3 NEWS DESK : ಕೊಡಗು ಜಿಲ್ಲಾ ಮರಾಠ-ಮರಾಟಿ ಸಮಾಜ ಸೇವಾ ಸಂಘದ 28ನೇ ವಾರ್ಷಿಕ ಮಹಾಸಭೆ ಹಾಗೂ ವಾರ್ಷಿಕೋತ್ಸವ ತಾಳತ್ತಮನೆಯ ಸಂಘದ ನಿವೇಶನದಲ್ಲಿ ಸಂಭ್ರಮದಿಂದ ನಡೆಯಿತು. ಕೊಡಗು ಜಿಲ್ಲಾ ಮರಾಠ-ಮರಾಟಿ ಸಮಾಜ ಸೇವಾ ಸಂಘ, ಮಹಿಳಾ ವೇದಿಕೆ ಮತ್ತು ಯುವ ವೇದಿಕೆಯ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಯಕ್ರಮನ್ನು ಕಾಸರಗೋಡಿನ ನಿವೃತ್ತ ಹಿರಿಯ ಮಕ್ಕಳ ತಜ್ಞ ಡಾ.ಬಿ.ನಾರಾಯಣ ಉದ್ಘಾಟಿಸಿ ಮಾತನಾಡಿದರು. ಮಕ್ಕಳು ಮೊಬೈಲ್ ಬಳಸುವುದನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಲು ಹೆಚ್ಚಿನ ನೀರನ್ನು ಸೇವಿಸಬೇಕೆಂದು ಸಲಹೆ ನೀಡಿದರು. ಬೆಂಗಳೂರಿನ ರಾಷ್ಟ್ರೀಯ ವೈಮಾಂತರಿಕ್ಷ ಪ್ರಯೋಗ ಶಾಲೆಯ ಮುಖ್ಯ ವಿಜ್ಞಾನಿ ಎಂ.ಟಿ.ಶೋಭಾವತಿ ಅವರು ಮಾತನಾಡಿ, 85 ಸದಸ್ಯರಿಂದ ಸ್ಥಾಪನೆಯಾದ ಸಂಘದ ಸದಸ್ಯತ್ವವನ್ನು 763ಕ್ಕೆ ಹೆಚ್ಚಿಸಿದ ಆಡಳಿತ ಮಂಡಳಿಯ ಶ್ರಮ ಶ್ಲಾಘನೀಯವೆಂದರು. ಸಂಘದ ಬೆಳವಣಿಗೆ, ಸಂಘ ಹೊಂದಿರುವ ಆಸ್ತಿ ಮತ್ತು ಕಟ್ಟಡ ನಿರ್ಮಾಣದ ವಿವಿಧ ಹಂತಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಸಮಾಜದ ಕಟ್ಟಡ ಕಾಮಗಾರಿ ಸಂಪೂರ್ಣಗೊಳ್ಳಲು ಸರ್ವರೂ ಸಹಕರಿಸಬೇಕೆಂದು ಕರೆ ನೀಡಿದರು. ಸಂಘದ ಹಿರಿಯ…

Read More

ಮಡಿಕೇರಿ ಜೂ.3 NEWS DESK : ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ ಮತ್ತು ದೈಹಿಕ ಶಿಕ್ಷಣ ವಿಭಾಗ ಬಿ.ಎಸ್.ಹೆಚ್ ವತಿಯಿಂದ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಒಳಾಂಗಣ ಕ್ರೀಡಾಂಗಣದಲ್ಲಿ ವಿದ್ಯಾರ್ಥಿಗಳಿಗೆ 15 ದಿನಗಳ ಕಾಲ ಉಚಿತ ಟೇಬಲ್ ಟೆನ್ನಿಸ್ ಮತ್ತು ಚೆಸ್ ತರಬೇತಿ ಶಿಬಿರ ನಡೆಯಿತು. ಶಿಬಿರದಲ್ಲಿ ಜಿಲ್ಲೆಯ ಸುಮಾರು 48 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯದ ಡೀನ್ ಡಾ. ಜಿ.ಎಂ.ದೇವಗಿರಿ, ಶಿಸ್ತುಬದ್ಧ ಜೀವನಕ್ಕೆ ಕ್ರೀಡೆ ಸಹಕಾರಿ ಎಂದರು. ಶಿಬಿರವನ್ನು ಸಹಾಯಕ ಪ್ರಾಧ್ಯಾಪಕ ಡಾ. ಕೆ.ಎ.ಈಶ್ವರ್ ಆಯೋಜಿಸಿದರು.

Read More

ಮಡಿಕೇರಿ ಜೂ.3 NEWS DESK : ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿ ಗ್ರಾಮಾತರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಾದ ಅಭ್ಯತ್ ಮಂಗಲ ನಿವಾಸಿ ಪ್ರಶಾಂತ್.ಹೆಚ್.ಕೆ (32) ಹಾಗೂ ಎಂ.ಬಾಡಗ ನಿವಾಸಿ ಬೋಪಯ್ಯ ಎ.ಎಸ್ (31) ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಗಿದೆ. 419.93 ಗ್ರಾಂ ಗಾಂಜಾ, ಕೃತ್ಯಕ್ಕೆ ಬಳಸಿದ 2 ಮೊಬೈಲ್ ಮತ್ತು 1 ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಮೂರ್ನಾಡು ನಗರದ ಕುಂಬಳದಾಳು ರಸ್ತೆಯಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಸರಬರಾಜು ಮತ್ತು ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆ ಪೊಲೀಸರು ದಾಳಿ ನಡೆಸಿದರು. ಮಡಿಕೇರಿ ಉಪವಿಭಾಗದ ಡಿವೈಎಸ್‍ಪಿ ಮಹೇಶ್ ಕುಮಾರ್, ಮಡಿಕೇರಿ ಗ್ರಾಮಾಂತರ ಪಿಐ ಉಮೇಶ್.ಯು, ಪಿಎಸ್‍ಐಗಳಾದ ಶ್ರೀನಿವಾಸಲು, ರಮೇಶ್ ಕರಕಿಕಟ್ಟಿ ಹಾಗೂ ಸಿಬ್ಬಂದಿಗಳ ವಿಶೇಷ ತಂಡ ತನಿಖೆ ನಡೆಸಿ ಕಾರ್ಯಾಚರಣೆ ನಡೆಸಿತು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ. ::: ವಿಶೇಷ ಸೂಚನೆ ::: ಯುವಕ-ಯುವತಿಯರು ಮಾದಕ…

Read More

ಮಡಿಕೇರಿ ಜೂ.3 NEWS DESK : ಸೋಮವಾರಪೇಟೆ ಲಯನ್ಸ್ ಕ್ಲಬ್ ನ ಸದಸ್ಯರಾದ ಶಾರದಾ ಶಂಕರ್ ಹಾಗೂ ಎ.ಪಿ.ಶಂಕರಪ್ಪ ಅವರು ವಿಕಾಸ್ ಜನ ಸೇವಾ ಟ್ರಸ್ಟ್‌ ವೃದ್ಧಾಶ್ರಮಕ್ಕೆ ತಟ್ಟೆ ಮತ್ತು ಲೋಟವನ್ನು ನೀಡಿದರು. ಲಯನ್ಸ್ ಸೇವಾ ಸಂಸ್ಥೆಯ ಅಧ್ಯಕ್ಷ ಎ.ಎಸ್.ಮಹೇಶ್, ಕೆ.ಎಂ.ಜಗದೀಶ್,  ವಲಯಾಧ್ಯಕ್ಷರಾದ ಸಿ.ಕೆ.ರೋಹಿತ್ , ಎಸ್.ಎನ್.ಯೋಗೇಶ್ ಹಾಗೂ ಸುಬ್ಬಯ್ಯ ಹಾಜರಿದ್ದು, ವಿವಿಧ ಆಹಾರ ಸಾಮಗ್ರಿಗಳನ್ನು ವಿತರಿಸಿದರು. ಈ ಸಂದರ್ಭ ವಿಕಾಸ ಜನ ಸೇವಾ ಟ್ರಸ್ಟ್ ನ ಮುಖ್ಯಸ್ಥ ಮಂಜುನಾಥ್  ಹಾಜರಿದ್ದು, ಎಲ್ಲರನ್ನೂ ಅಭಿನಂದಿಸಿದರು.

Read More

ನಾಪೋಕ್ಲು ಜೂ.2 NEWS DESK : ಕುಂಜಿಲದ ಪಯ್ಯಡಿ ಕುಟುಂಬಸ್ಥರು ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಗ್ರಾಂಡ್ ರಾತೀಬ್ ಹಾಗೂ ದುವಾ ಮಜ್ಲಿಸ್ ಪಯ್ಯಡಿ ಹಂಸ ಅವರ ಮನೆಯಲ್ಲಿ ಸಂಭ್ರಮದಿಂದ ನಡೆಯಿತು. ಕುಂಜಿಲ ಖುತುಬುಲ್ ಆರಿಫೀನ್ ರಾತೀಬ್ ಸಂಘದ ನೇತೃತ್ವದಲ್ಲಿ ರಾತೀಬ್ ಮಜ್ಲಿಸ್‍ ಕಾರ್ಯಕ್ರಮ ನಡೆದಿದ್ದು, ದುವಾ ನೇತೃತ್ವವನ್ನು ಕತೀಬರಾದ ನಿಝಾರ್ ಅಹ್ಸನಿ ಕಕ್ಕಡಿಪುರಮ್ ಉಸ್ತಾದ್  ವಹಿಸಿದ್ದರು. ಈ ಸಂದರ್ಭ ಮಾತನಾಡಿದ ಹುಸೇನ್ ಉಸ್ತಾದ್ ಸರ್ವರಿಗೂ ಶುಬಕೋರಿ, ಎಲ್ಲರೂ ಸಮರಸ್ಯದಿಂದ ಬಾಳುವಂತೆ ಕರೆ ನೀಡಿದರು. ಪ್ರಮುಖರಾದ ಮುಸಾ ಮಾತನಾಡಿ ಮುಂದಿನ ವರ್ಷ ರಾತೀಬ್ ಅನ್ನು ಮತ್ತಷ್ಟು ಸಂಭ್ರಮದಿಂದ ನಡೆಸುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಸುಲೇಮಾನ್ ದಾರಿಮಿ,ಅಧ್ಯಕ್ಷರಾದ ಹಂಸ, ಹಸನ್, ಸಿರಾಜ್ ಸೇರಿದಂತೆ ಕುಟುಂಬಸ್ಥರು ಹಾಗೂ ಸಮುದಾಯ ಬಾಂಧವರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವರದಿ : ಸಾಜಿದ್ ಪಯ್ಯಡಿ 

Read More