ಪುತ್ತೂರು ಜೂ.3 NEWS DESK : ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ 2023-24ನೇ ಸಾಲಿನ ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶವು ಪ್ರಕಟಗೊಂಡಿದ್ದು, ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ಶೇ.99 ಫಲಿತಾಂಶದೊಂದಿಗೆ ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಇದೇ ಮೇ ತಿಂಗಳಿನಲ್ಲಿ ನಡೆದ ಪರೀಕ್ಷೆಗೆ ಕಾಲೇಜಿನಿಂದ ಒಟ್ಟು 266 ವಿದ್ಯಾರ್ಥಿಗಳು ಹಾಜರಾಗಿದ್ದು, 252 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 9 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕಾಲೇಜಿನ ವಿಭಾಗವಾರು ಫಲಿತಾಂಶಗಳ ಪೈಕಿ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್-ಶೇ.100, ಕಂಪ್ಯೂಟರ್ ಸೈನ್ಸ್-ಶೇ.99, ಇಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್- ಶೇ.98, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ-ಶೇ.100 ಹಾಗೂ ಸಿವಿಲ್ ಇಂಜಿನಿಯರಿಂಗ್ ವಿಭಾಗ- ಶೇ.96 ಫಲಿತಾಂಶವನ್ನು ದಾಖಲಿಸಿವೆ. ಈ ಪೈಕಿ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ವಿಭಾಗದ ಪ್ರಥಮ ಬ್ಯಾಚಿನ ವಿದ್ಯಾರ್ಥಿಗಳು ಶೇ.100 ಫಲಿತಾಂಶವನ್ನು ಗಳಿಸಿಕೊಂಡು ವಿಶೇಷ ಸಾಧನೆಯನ್ನು ಮಾಡಿದ್ದಾರೆ. ಅರ್ಹ ವಿದ್ಯಾರ್ಥಿಗಳು ಕ್ಯಾಂಪಸ್ ನೇಮಕಾತಿಯ ಮೂಲಕ ವಿವಿಧ ಕಂಪೆನಿಗಳಿಗೆ ಆಯ್ಕೆಯಾಗಿದ್ದು, ಕೆಲವು ವಿದ್ಯಾರ್ಥಿಗಳು ಈಗಾಗಲೇ ಉದ್ಯೋಗಕ್ಕೆ…
ಲೇಖಕ: admin
ಮಡಿಕೇರಿ ಜೂ.3 NEWS DESK : ನೈರುತ್ಯ ಪದವೀಧರ ಕ್ಷೇತ್ರ ಸಂಬಂಧ ಜಿಲ್ಲಾಧಿಕಾರಿ ವೆಂಕಟ್ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ ಹಾಗೂ ಉಪವಿಭಾಗಾಧಿಕಾರಿ ವಿನಾಯಕ್ ನರ್ವಾಡೆ ಅವರು ನಗರಸಭೆಯಲ್ಲಿ ಸ್ಥಾಪಿಸಲಾಗಿದ್ದ ಮತಗಟ್ಟೆಯಲ್ಲಿ ಮತದಾನ ಮಾಡಿದರು.
ಮೂರ್ನಾಡು ಜೂ.3 NEWS DESK : ಮೂರ್ನಾಡು ಗಾಂಧಿನಗರದ ಶ್ರೀ ದುರ್ಗಾಪರಮೇಶ್ವರಿ ದೇವಾಲಯದ 11ನೇ ವರ್ಷದ ವಾರ್ಷಿಕ ಉತ್ಸವವು ಜೂ. 5 ಮತ್ತು 7 ರಂದು ನಡೆಯಲಿದೆ. ಶ್ರೀ ದುರ್ಗಾ ಪರಮೇಶ್ವರಿ ದೇವಾಲಯದಲ್ಲಿ ವಾರ್ಷಿಕಉತ್ಸವದ ಪ್ರಯುಕ್ತ ಜೂ.5 ರಂದು ಸಂಜೆ 4 ಗಂಟೆಗೆ ಮಹಾಪೂಜೆ, 7 ಗಂಟೆಗೆ ಮಹಾಮಂಗಳಾರತಿ ನಡೆಯಲಿದ್ದು, ನಂತರ ತೀರ್ಥಪ್ರಸಾದ ವಿತರಣೆ ನಡೆಯಲಿದೆ. ಜೂ.7 ರಂದು ಬೆಳಗ್ಗೆ 7 ಗಂಟೆಗೆ ಮಹಾಪೂಜೆ ನಡೆಯಲಿದ್ದು, ನಂತರ ಭಕ್ತಾದಿಗಳಿಂದ ದೇವರಿಗೆ ಹರಕೆ ವಸ್ತುಗಳನ್ನು ಒಪ್ಪಿಸಲಾಗುವುದು. 3 ಗಂಟೆಗೆ ಮಹಾಪೂಜೆ, ತೀರ್ಥಪ್ರಸಾದ ವಿನಿಯೋಗ ಹಾಗೂ ಅನ್ನಸಂತರ್ಪಣೆ ನೆರವೇರಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ. ಚಿತ್ರ ಮತ್ತು ವರದಿ : ಟಿ.ಸಿ. ನಾಗರಾಜ್, ಮೂರ್ನಾಡು
ಮಡಿಕೇರಿ ಜೂ.3 NEWS DESK : ಕರ್ನಾಟಕ ವಿಧಾನ ಪರಿಷತ್ ನೈರುತ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರ ಚುನಾವಣೆ-2024 ರ ಅಂಗವಾಗಿ ಕುಶಾಲನಗರ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸಂಖ್ಯೆ 31 ರಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕುಮಾರ್ ಮತ ಚಲಾಯಿಸಿದರು.
ಮಡಿಕೇರಿ ಜೂ.3 NEWS DESK : ವಿಧಾನ ಪರಿಷತ್ತು ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಪೊನ್ನಂಪೇಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿರುವ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.
ಮಡಿಕೇರಿ ಜೂ.2 NEWS DESK : ಕಳೆದ ವರ್ಷದಂತೆ ಪ್ರಸಕ್ತ ಸಾಲಿನಲ್ಲೂ ಮಳೆಗಾಲದಲ್ಲಿ ಮಳೆಯ ಕೊರತೆ ಎದುರಾಗುವ ಸಾಧ್ಯತೆ ಇದೆ ಎಂದು ಬೆಂಗಳೂರಿನ ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣೆಯ ನಿವೃತ್ತ ಉಪ ಮಹಾ ನಿರ್ದೇಶಕ ಡಾ.ಹೆಚ್.ಎಸ್.ಎಂ.ಪ್ರಕಾಶ್ ತಿಳಿಸಿದ್ದಾರೆ. ಇಂದಿನವರೆಗಿನ ಜಿಯೋ ಮೀಟಿಯೋರಾಲಜಿ ಅಧ್ಯಯನದ ಆಧಾರದಂತೆ 2024ನೇ ಸಾಲಿನ ಜೂನ್ ನಿಂದ ಸೆಪ್ಟೆಂಬರ್ ಅವಧಿಯ ಮುಂಗಾರು ಕಳೆದ 2023ನೇ ಸಾಲಿನ ಪರಿಸ್ಥಿತಿಯಂತೆ ಇರಲಿದೆ ಎನ್ನುವುದು ತಿಳಿದು ಬಂದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಕಳೆದ ಸಾಲಿನ ಮುಂಗಾರು ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ತೀರಾ ದುರ್ಬಲವಾಗಿದ್ದ ಹಿನ್ನೆಲೆಯಲ್ಲಿ ವಾಡಿಕೆಗಿಂತಲೂ ಕಡಿಮೆ ಮಳೆಯಾಗಿ ಜಿಲ್ಲೆಯ ತಾಲ್ಲೂಕುಗಳನ್ನು ಬರದ ಪಟ್ಟಿಗೆ ಸೇರಿಸಲಾಗಿತ್ತು. ಈ ಬಾರಿಯ ಮುಂಗಾರು ಕೂಡ ಕೊರತೆಯ ಮುಂಗಾರು ಆಗುವ ಸಾಧ್ಯತೆಯಿದೆ. ಹಿಂಗಾರಿನ ಬಗ್ಗೆ ಅಕ್ಟೋಬರ್ 2024ರ ಮೊದಲ ವಾರದಲ್ಲಿ ನಿಷ್ಕರ್ಷೆ ಮಾಡಬಹುದಾಗಿದೆ ಎಂದು ಡಾ.ಹೆಚ್.ಎಸ್.ಎಂ.ಪ್ರಕಾಶ್ ಹೇಳಿದ್ದಾರೆ. ::: ಕೊರತೆಗೆ ಕಾರಣ ::: ಆವಿಯ ಮೂಲಗಳಾದ ಭಾರತ ದೇಶದ ಸುತ್ತಮುತ್ತಲಿನ ಸುಮತ್ರ, ಇಂಡೋನೇಷ್ಯಾ, ಫಿಲಿಪ್ಪೀನ್ಸ್, ಪಪುವಾ ನ್ಯೂ…
ಮಡಿಕೇರಿ ಜೂ.2 NEWS DESK : ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ವಿರಾಜಪೇಟೆ ತಾಲ್ಲೂಕಿನ ಇಂಜಲಗೆರೆ ಗ್ರಾಮದಲ್ಲಿ ನಡೆದಿದೆ. ಕಾಡಾನೆ ದಾಳಿಯಲ್ಲಿ ಸಿಬ್ಬಂದಿ ಮುರುಗ ಎಂಬುವವರು ತೀವ್ರವಾಗಿ ಗಾಯಗೊಂಡಿದ್ದು, ವಿರಾಜಪೇಟೆ ಆಸಪತ್ರೆಯಲ್ಲಿ ದಾಖಲಿಸಲಾಗಿದೆ. ಉಳಿದವರು ಅಪಾಯದಿಂದ ಪಾರಾಗಿದ್ದಾರೆ. ಕಾಫಿತೋಟದಲ್ಲಿ ಬೀಡುಬಿಟ್ಟ 12 ಕಾಡಾನೆಗಳ ಹಿಂಡನ್ನು ಕಾಡಿಗಟ್ಟುವ ಕಾರ್ಯಾಚರಣೆ ಸಂದರ್ಭ ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆಯೇ ವನ್ಯಜೀವಿಗಳು ದಾಳಿ ಮಾಡಿವೆ. ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅರಣ್ಯ ಅಧಿಕಾರಿಗಳು ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುರುಗ ಅವರ ಆರೋಗ್ಯ ವಿಚಾರಿಸಿದರು.
ಮಡಿಕೇರಿ ಜೂ.2 NEWS DESK : ಕೊಳ್ಳೇಗಾಲ ಕಾಮಗೆರೆಯ ಸಂತ ಫ್ರಾನ್ಸಿಸ್ ಕ್ಷೇವಿಯರ್ ಚರ್ಚ್ ನ ಧರ್ಮಗುರುಗಳು ಮತ್ತು ವಿದ್ಯಾಸಂಸ್ಥೆಯ ವ್ಯವಸ್ಥಾಪಕರಾಗಿ ರೆ.ಫಾ.ಐಸಾಕ್ ರತ್ನಾಕರ್ ರವರು ಅಧಿಕಾರವನ್ನು ಸ್ವೀಕರಿಸಿದರು. ಮೈಸೂರು ಧರ್ಮಕ್ಷೇತ್ರದ ಶ್ರೇಷ್ಠ ಗುರುಗಳಾದ ಫಾ.ಆಲ್ಫ್ರೆಡ್ ಜಾನ್ ಮೆಂಡೋಂಜಾ ಚರ್ಚ್ ನಲ್ಲಿ ಧಾರ್ಮಿಕ ವಿಧಿ ವಿಧಾನದೊಂದಿಗೆ ಅಧಿಕಾರವನ್ನು ಹಸ್ತಾಂತರ ಮಾಡಿಸಿದರು ಮತ್ತು ವಿಶೇಷ ಪೂಜಾ ಕಾರ್ಯಕ್ರಮವು ಈ ಸಂದರ್ಭದಲ್ಲಿ ಜರುಗಿತು. ರೆ.ಫಾ.ಐಸಾಕ್ ರತ್ನಾಕರ್ ರವರು ಈ ಹಿಂದೆ ವಿರಾಜಪೇಟೆಯ ಸಂತ ಅನ್ನಮ್ಮ ವಿದ್ಯಾಸಂಸ್ಥೆಯಲ್ಲಿ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮಾತ್ರವಲ್ಲದೆ ಸಾರ್ವಜನಿಕ ವಲಯದಲ್ಲಿ ಜನಾನುರಾಗಿದ್ದರು. ಅಧಿಕಾರ ಸ್ವೀಕಾರ ಸಂದರ್ಭದಲ್ಲಿ ಹನೂರು ಕ್ಷೇತ್ರದ ಶಾಶಕರಾದ ಎಂ. ಆರ್. ಮಂಜುನಾಥ್ ರವರು ಚರ್ಚ್ ಗೆ ಆಗಮಿಸಿ ನೂತನ ಧರ್ಮಗುರುಗಳಿಗೆ ಶುಭ ಕೋರಿದರು. ಭಕ್ತರು, ಸಾರ್ವಜನಿಕರು, ಚರ್ಚ್ ಪಾಲನಾ ಸಮಿತಿಯವರು ಉಪಸ್ಥಿತರಿದ್ದರು.
ಸೋಮವಾರಪೇಟೆ ಜೂ.2 NEWS DESK : ಸೋಮವಾರಪೇಟೆ ಸಮೀಪದ ನಗರೂರು ಗ್ರಾಮದಲ್ಲಿ ಯುವಕನೋರ್ವನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಘಟನೆಯ ಬಗ್ಗೆ ಸಂಶಯ ವ್ಯಕ್ತಪಡಿಸಿರುವ ಮೃತನ ಕುಟುಂಬಸ್ಥರು ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಗರೂರು ಗ್ರಾಮದಲ್ಲಿ ವಿದ್ಯುತ್ ಟ್ರಾನ್ಸ್ಫಾರ್ಮರ್ ನ ಕಂಬದಲ್ಲಿ ಹಾನಗಲ್ಲು ಶೆಟ್ಟಳ್ಳಿ ಗ್ರಾಮದ ಕೆ.ಪಿ.ಲೋಕೇಶ ಹಾಗೂ ಬಿ.ಯು.ಹರ್ಷಿಣಿ ಅವರ ಪುತ್ರ, ಉಲ್ಲಾಸ್ (21) ಎಂಬ ಯುವಕನ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ತನಿಖೆ ನಡೆಸಿ, ಕಾನೂನು ಕ್ರಮ ಕೈಗೊಳ್ಳಬೇಕೆಂದು ಮೃತ ಉಲ್ಲಾಸ್ ನ ತಂದೆ ದೂರಿನಲ್ಲಿ ಮನವಿ ಮಾಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಡಿಕೇರಿಯ ಶವಾಗಾರಕ್ಕೆ ಸಾಗಿಸಲಾಗಿದೆ. ಮೃತನ ತಂದೆ ನೀಡಿದ ದೂರಿನ ಅನ್ವಯ ಮೊಕದ್ದಮೆ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಸೋಮವಾರಪೇಟೆ ಜೂ.2 NEWS DESK : ಸಿದ್ಧಲಿಂಗಪುರದ ಅರಸಿನಕುಪ್ಪೆ ಶ್ರೀ ಮಂಜುನಾಥ ಸ್ವಾಮಿ ಕ್ಷೇತ್ರದಲ್ಲಿ ತಾ. 5 ಮತ್ತು 6 ರಂದು ನವ ಚಂಡಿಕಾ ಯಾಗ ನೆರವೇರಿಸಲಾಗುವುದು ಎಂದು ದೇವಾಲಯದ ಚಂಡಿಕಾಯಾಗ ನಿರ್ವಹಣಾ ಸಮಿತಿ ಅಧ್ಯಕ್ಷ ಹೊಸೊಕ್ಲು ಸತೀಶ್ ತಿಳಿಸಿದ್ದಾರೆ. ಅರಸಿನಕುಪ್ಪೆಯಲ್ಲಿರುವ ಶ್ರೀ ಮಂಜುನಾಥ ಸ್ವಾಮಿ ಕ್ಷೇತ್ರದಲ್ಲಿ ಈಗಾಗಲೇ ನವನಾಗನಾಥ ದೇವಾಲಯ ನಿರ್ಮಾಣಗೊಂಡಿದ್ದು, ಶ್ರೀ ಮಂಜುನಾಥ ಸ್ವಾಮಿ ದೇವಾಲಯದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಎನ್.ಎಂ. ಮುತ್ತಪ್ಪ ಹಾಗೂ ಗೌರವಾಧ್ಯಕ್ಷರಾಗಿ ಎನ್.ಎಂ. ಮುದ್ದಪ್ಪ ಅವರುಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ಷೇತ್ರದ ಪ್ರಧಾನ ಗುರುಗಳಾದ ಶ್ರೀರಾಜೇಶ್ನಾಥ್ ಜೀ ಅವರ ಮಾರ್ಗದರ್ಶನದಲ್ಲಿ, ಪ್ರಧಾನ ಅರ್ಚಕ ಜಗದೀಶ್ ಉಡುಪ ಅವರ ಪೌರೋಹಿತ್ಯದಲ್ಲಿ ಪ್ರತಿ 15 ದಿನಗಳಿಗೊಮ್ಮೆ ಪಂಚಮಿ ಪೂಜೆ, ವಾರ್ಷಿಕ ಮಹಾಶಿವರಾತ್ರಿ ಉತ್ಸವ, ಯುಗಾದಿ, ಧನುರ್ಮಾಸದಲ್ಲಿ ವಿಶೇಷ ಪೂಜೆಗಳು ನಡೆಯುತ್ತಿವೆ ಎಂದರು. ಇದೇ ಪ್ರಥಮ ಬಾರಿಗೆ ಕ್ಷೇತ್ರದಲ್ಲಿ ಲೋಕ ಕಲ್ಯಾಣಾರ್ಥ ನವ ಚಂಡಿಕಾಯಾಗ ಆಯೋಜಿಸಿದ್ದು, ಎರಡು ದಿನಗಳ ಕಾಲ ವಿಶೇಷ ಪೂಜಾ ಕೈಂಕರ್ಯಗಳು ನಡೆಯಲಿವೆ. ತಾ. 5 ರಿಂದ…






