ಸುಂಟಿಕೊಪ್ಪ ಜೂ.2 NEWS DESK : ಭಾರತೀಯ ಜನತಾ ಪಕ್ಷದ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರ ಕ್ಷೇತ್ರಕ್ಕೆ ನಡೆಯಲಿರುವ ಚುನಾವಣೆಯ ಹಿನ್ನಲೆಯಲ್ಲಿ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಸುಂಟಿಕೊಪ್ಪ ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷ ಧನುಕಾವೇರಪ್ಪ ಹಾಗೂ ಕಾರ್ಯಕರ್ತರು ಮತಯಾಚನೆ ಮಾಡಿದರು. ಸುಂಟಿಕೊಪ್ಪ ವ್ಯಾಪ್ತಿಯ ಸರಕಾರಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಸಂತ ಮೇರಿ ಆಂಗ್ಲ ಮಾದ್ಯಮ ಶಾಲೆ, ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆ, ಗದ್ದೆಹಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಸರಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಭೇಟಿ ನೀಡಿ ಬಿಜೆಪಿ ಅಭ್ಯರ್ಥಿಗಳಾದ ಪದವೀಧರ ಕ್ಷೇತ್ರದ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಭೋಜೇಗೌಡರಿಗೆ ಮತದಾನ ಮಾಡಿ ಗೆಲ್ಲಿಸುವಂತೆ ಮನವಿ ಮಾಡಿದರು. ಈ ಸಂದರ್ಭ ಚುನಾವಣೆ ಸಂಚಾಲಕರಾದ ಪಿ.ಆರ್.ಸುನಿಲ್ಕುಮಾರ್, ಚಂದ್ರಶೇಖರ್ ಹೆರೂರು, ಅಧ್ಯಕ್ಷ ಗೌತಮ್, ಪ್ರಶಾಂತ್, ಪ್ರಧಾನ ಕಾರ್ಯದರ್ಶಿ ವಿ.ಕೆ.ರಾಜು, ಪದ್ಮನಾಭ ನೆಲ್ಯುಹುದಿಕೇರಿ, ಮಂಡಲ ಅಧ್ಯಕ್ಷ ಗೌತಮ್, ಸಹನಾ ಮತ್ತಿತರರು ಇದ್ದರು.
ಲೇಖಕ: admin
ಸುಂಟಿಕೊಪ್ಪ ಜೂ.2 NEWS DESK : ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ನೂತನ ಧರ್ಮಗುರುಗಳಾಗಿ ರೇ.ವಂ.ಫಾ.ವಿಜಯಕುಮಾರ್ ಭಾನುವಾರ ಅಧಿಕಾರ ವಹಿಸಿಕೊಂಡರು. ಸಂತ ಅಂತೋಣಿ ದೇವಾಲಯದಲ್ಲಿ ಮಡಿಕೇರಿ ವಲಯ ಗುರುಗಳು, ಸಂತ ಮೈಕಲರ ದೇವಾಲಯದ ಧರ್ಮಗುರುಗಳಾದ ರೇ.ವಂ.ಫಾಧರ್ ಜಾರ್ಜ್ ದೀಪಕ್ ಹಾಗೂ ಸೋಮವಾರಪೇಟೆ ಜಯವೀರ ಮಾತೆ ದೇವಾಲಯದ ಧರ್ಮಗುರುಗಳಾದ ಅವಿನಾಶ್ ಅವರುಗಳು ದಿವ್ಯ ಬಲಿಪೂಜೆಯನ್ನು ಸರ್ಮಪಿಸಿದರು. ಸಂತ ಅಂತೋಣಿ ದೇವಾಲಯದಲ್ಲಿ ಧರ್ಮಗುರುಗಳಾಗಿ ಸೇವೆ ಸಲ್ಲಿಸುತ್ತಿದ್ದ ಫಾ.ಅರುಳ್ ಸೇಲ್ವಕುಮಾರ್ ಅವರು ವರ್ಗಾವಣೆಗೊಂಡಿದ್ದು ತೆರವಾದ ಸ್ಥಾನಕ್ಕೆ ಮೈಸೂರು ಸಂತ ಜೋಸೆಫರ ದೇವಾಲಯದಲ್ಲಿ ಧರ್ಮಗುರುಗಳಾಗಿದ್ದ ರೇ.ವಂ.ಫಾ.ವಿಜಯಕುಮಾರ್ ಅವರನ್ನು ನೇಮಿಸಲಾಗಿದೆ. ಮಡಿಕೇರಿ ವಲಯ ಗುರುಗಳಾದ ರೇ.ವಂ.ಫಾಧರ್ ಜಾರ್ಜ್ ದೀಪಕ್ ಅವರು ನೂತನ ಧರ್ಮಗುರುಗಳಿಗೆ ಅಧಿಕಾರ ಹಸ್ತಾಂತರಿಸಿದರು. ನಂತರ ಮಾತನಾಡಿದ ಅವರು ರೇ.ವಂ.ಫಾ.ವಿಜಯಕುಮಾರ್ ಅವರ ಸೇವೆಯಿಂದ ಈ ದೇವಾಲಯವು ಮತ್ತಷ್ಟು ಏಳಿಗೆಯನ್ನು ಕಾಣಲಿ ಎಂದು ಹಾರೈಸಿದರು. ನೂತನ ಧರ್ಮಗುರು ರೇ.ವಂ.ಫಾ.ವಿಜಯಕುಮಾರ್ ಮಾತನಾಡಿ ಎಲ್ಲರ ಪ್ರೀತಿ, ವಿಶ್ವಾಸ, ಸಲಹೆ ಸಹಕಾರ ಪಡೆದು ಉತ್ತಮ ಸೇವೆಯನ್ನು ಸಲ್ಲಿಸುವ ಆಶಯವನ್ನು ವ್ಯಕ್ತಪಡಿಸಿದರು.
ಮಡಿಕೇರಿ ಜೂ.2 NEWS DESK : ರಸಾಯನಿಕ ಯುಕ್ತ ಜಂಕ್ ಆಹಾರಗಳನ್ನು ದೂರವಿಟ್ಟು ನಿಸಗ೯ದಲ್ಲಿ ಸ್ವಾಭಾವಿಕವಾಗಿ ಸಿಗುವ ತರಕಾರಿ ಕಾಯಿಪಲ್ಯೆಗಳನ್ನು ಬಳಸಿ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳುವಂತೆ , ಕೊಡಗಿನ ಪ್ರಥಮ ಪಾಕಶಾಸ್ತ್ರ ಕೈಪಿಡಿಯ ಲೇಖಕಿ ಚೆಟ್ಟಳ್ಳಿಯ ಆಶಾ ತಿಮ್ಮಪ್ಪಯ್ಯ ಸಲಹೆ ನೀಡಿದ್ದಾರೆ. ಅರಮೇರಿ ಕಳಂಚೇರಿ ಮಠದ ಲಿಂಗರಾಜೇಂದ್ರ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ‘ ಹೊಂಬೆಳಕು ‘ ಮಾಸಿಕ ತತ್ವ ಚಿಂತನಾ ಗೋಷ್ಠಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ” ಉತ್ತಮ ಆಹಾರದ ಮೂಲಮಂತ್ರಗಳು ” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದ ಅವರು ವ್ಯಾಪಾರೀಕರಣ ಇಂದು ವ್ಯಾಪಕವಾಗಿ ಹರಡುತ್ತಿದೆ, ಈ ದಿನಗಳಲ್ಲಿ ದಾರಿ ತಪ್ಪಿಸುವ ಜಾಹೀರಾತುಗಳಿಗೆ ಮಾರುಹೋಗಿ ದೇಹಕ್ಕೆ ಅಗತ್ಯವಿಲ್ಲದ ತಿನಿಸುಗಳನ್ನು ತಿನ್ನುವುದು ತಪ್ಪಬೇಕು ಎಂದು ಅವರು ಅಭಿಪ್ರಾಯಪಟ್ಟರು. ಪ್ರಕೃತಿಯು ಕಾಲಕಾಲಕ್ಕೆ ನಮಗೆ ಪೂರೈಸುವ ಎಲ್ಲಾ ರೀತಿಯ ಹಣ್ಣುಗಳನ್ನು ನಾವು ಸೇವಿಸುವ ಮೂಲಕ ಉತ್ತಮ ಆರೋಗ್ಯವನ್ನು ಹೊಂದಬಹುದಾಗಿದೆ. ಹಾಗೆಯೇ ಕಣಿಲೆ, ಬಾಳೆ ದಿಂಡು, ಹಲಸು ಮೊದಲಾದ ತಿನಿಸುಗಳನ್ನು ಮಕ್ಕಳಿಗೆ ನೀಡುವ…
ಸುಂಟಿಕೊಪ್ಪ ಜೂ.2 NEWS DESK : ಹಿಂಬದಿಯಿಂದ ಸ್ಕೂಟಿಗೆ ಇನ್ನೋವಾ ವಾಹನ ಡಿಕ್ಕಿಯಾಗಿ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಸುಂಟಿಕೊಪ್ಪದ ಅಯ್ಯಪ್ಪ ದೇವಸ್ಥಾನದ ಬಳಿ ನಡೆದಿದೆ. ಇನ್ನೋವಾ ವಾಹನ ಡಿಕ್ಕಿಯಾಗಿ ಸ್ಕೂಟಿ ಸವಾರ ಇಬ್ರಾಹಿಂ (60) ಅವರು ರಸ್ತೆಗೆ ಬಿದ್ದ ಪರಿಣಾಮ ತಲೆಗೆ ತೀವ್ರ ರೀತಿಯಲ್ಲಿ ಗಾಯವಾಗಿದೆ. ಸುಂಟಿಕೊಪ್ಪ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕೇರಳದ ಕಣ್ಣೂರಿನಿಂದ ಕುಶಾಲನಗರ ಕಡೆಗೆ ತೆರಳುತ್ತಿದ್ದ ಇನ್ನೋವಾ ಇಬ್ರಾಹಿಂ ಅವರ ಸ್ಕೂಟಿಗೆ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಸುಂಟಿಕೊಪ್ಪ ಪೋಲಿಸ್ ಠಾಣಾಧಿಕಾರಿ ಎಂ.ಸಿ.ಶ್ರೀಧರ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ ಜೂ.2 NEWS DESK : ವಿರಾಜಪೇಟೆಯ ಆಶೀರ್ವಾದ್ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ ವತಿಯಿಂದ ಜೂ.10 ರಂದು ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿರುವ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಸಹಕಾರದೊಂದಿಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಉದ್ಯೋಗ ಮೇಳ ನಡೆಯಲಿದೆ. ಈವೆಂಟ್ ಐಟಿ, ಇಂಜಿನಿಯರಿಂಗ್, ಮಾರ್ಕೆಟಿಂಗ್, ಹಣಕಾಸು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು. 10 ನೇ ತರಗತಿ ಹಾಗೂ ಯಾವುದೇ ವಿದ್ಯಾರ್ಹತೆ ಹೊಂದಿರುವ 18 ವರ್ಷ ಮೇಲ್ಪಟ್ಟ ಅಭ್ಯರ್ಥಿಗಳು ಈ ಉದ್ಯೋಗಮೇಳದಲ್ಲಿ ಭಾಗವಹಿಸಬಹುದು. ಉದ್ಯೋಗಾಕಾಂಕ್ಷಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ವಿರಾಜಪೇಟೆಯ ಆಶೀರ್ವಾದ್ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿಯಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ ಹಾಜರಾಗಲು ಸಂಸ್ಥೆಯ ಸಲಹೆಗಾರರಾದ ಮೇಘ ಮನವಿ ಮಾಡಿದ್ದಾರೆ. ನೋಂದಣಿ ಶುಲ್ಕ ಇರುವುದಿಲ್ಲ, ಹೆಚ್ಚಿನ ಮಾಹಿತಿಗೆ ಮೊ.ಸಂ.70259 94000 ನ್ನು ಸಂಪರ್ಕಿಸಬಹುದಾಗಿದೆ. ಆಶೀರ್ವಾದ್ ಇನ್ಸ್ಟಿಟ್ಯೂಟ್ ಆಫ್…
ಮಡಿಕೇರಿ ಜೂ.2 NEWS DESK : ಸಂವಿಧಾನದ ಆಶಯ ಈಡೇರಬೇಕಾದರೆ ಪತ್ರಕರ್ತರು ಅನಿವಾರ್ಯವಾಗಿದ್ದಾರೆ. ಸಮಾಜದಲ್ಲಿ ನಡೆಯುವ ವಿದ್ಯಮಾನಗಳನ್ನು ಸಂಬಂಧಪಟ್ಟವರಿಗೆ ತಿಳಿಸುವ ಮೂಲಕ ಸಮಸ್ಯೆಗಳಿದ್ದರೆ ಪರಿಹರಿಸುವುದು, ತಪ್ಪುಗಳಿದ್ದರೆ ತಿದ್ದಿಕೊಳ್ಳುವಂತೆ ಮಾಡಿ ಸದೃಢ ಸಮಾಜ ಕಟ್ಟುವಲ್ಲಿ ಪತ್ರಕರ್ತರ ಪಾತ್ರ ಮಹತ್ತರವಾಗಿದೆ ಎಂದು ಮುಖ್ಯಮಂತ್ರಿ ಕಾನೂನು ಸಲಹೆಗಾರರು, ವೀರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ತಿಳಿಸಿದ್ದಾರೆ. ಕೊಡಗು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಬೆಳ್ಳಿ ಮಹೋತ್ಸವದ ಸ್ಮರಣ ಸಂಚಿಕೆ “ಪಿಂಜರಿ” ಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಪತ್ರಕರ್ತರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಪತ್ರಕರ್ತರ ನಡುವೆ ತನಗೆ ಒಡನಾಟ ಇರುವ ಕಾರಣ ನೋವು- ನಲಿವಿನ ಪೂರ್ಣ ಅರಿವಿದೆ. ಪತ್ರಕರ್ತರು ಸಂಘಟಿತರಾಗಿ ಸರಕಾರದ ಮಟ್ಟದಲ್ಲಿ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಬೇಕು. ಸಮಸ್ಯೆ ಪರಿಹಾರಕ್ಕೆ ಎಂದಿಗೂ ಜೊತೆಗಿರುವೆ ಎಂದು ಅಭಯ ನೀಡಿದರು. ರಜತ ಮಹೋತ್ಸವವನ್ನು ಹಬ್ಬದ ರೀತಿಯಲ್ಲಿ ಪತ್ರಕರ್ತರು ಸಂಭ್ರಮಿಸುವುದರೊಂದಿಗೆ ಅರ್ಥಪೂರ್ಣವಾಗಿ ಆಚರಿಸಿರುವುದು ಗಮನಾರ್ಹವಾಗಿದೆ. ಪ್ರೆಸ್ ಕ್ಲಬ್ 25 ವರ್ಷಗಳ ಕಾಲ ನಡೆದು ಬಂದ ಹಾದಿಯನ್ನು ಯಾರೂ ಮರೆಯಬಾರದು. ಸ್ಮರಣ ಸಂಚಿಕೆಗಳಿಂದ…
ಉಡುಪಿ ಜೂ.2 NEWS DESK : ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ವತಿಯಿಂದ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ನಿಮಿತ್ತ ಉಡುಪಿಯಲ್ಲಿ ಶಾಸಕ ಯಶ್ಪಾಲ್ ಸುವರ್ಣ ಹಾಗೂ ಪ್ರಭಾವಿ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಜಂಟಿಯಾಗಿ ಭರ್ಜರಿ ಪ್ರಚಾರ ನಡೆಸಿದರು. ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಪ್ರಚಾರ ಕಾರ್ಯ ಆರಂಭಿಸಿದ ಅರುಣ್ ಪುತ್ತಿಲ ಬಾರ್ ಅಸೋಸಿಯನ್ ಪದಾಧಿಕಾರಿಗಳನ್ನು ಭೇಟಿಯಾಗಿ ಮತಯಾಚಿಸಿದರು. ಉಡುಪಿ ಕಟಪಾಡಿಯ ಆನಂದತೀರ್ಥ ವಿದ್ಯಾಲಯ, ಉಡುಪಿ ಟೌನ್ ಸಹಕಾರಿ ಬ್ಯಾಂಕ್, ವಿದ್ಯೋದಯ ಪಬ್ಲಿಕ್ ಸ್ಕೂಲ್ ಉಡುಪಿ, ಸಿಟಿ ಹಾಸ್ಪಿಟಲ್ ಉಡುಪಿ,ಪ್ರಸಾದ್ ನೇತ್ರಾಲಯ ಉಡುಪಿ, ಗಾಂಧಿ ಹಾಸ್ಪಿಟಲ್ ಉಡುಪಿ , ಶ್ರೀ ಪೂರ್ಣಪ್ರಜ್ಞ ಇವ್ನಿಂಗ್ ಸ್ಕೂಲ್ ಉಡುಪಿ,ಬೆಲ್ ಓ ಸಿಲ್ ಕಾರ್ಖಾನೆ, ಬಾಳಿಗ ಫಿಶ್ ನೆಟ್ಸ್ ಕಾರ್ಖಾನೆ, ಪ್ರಕಾಶ್ ಇಂಡಸ್ಟ್ರಿ ಅಂಬಲಪಾಡಿಯಲ್ಲಿ ಶಾಸಕ ಯಶ್ಪಾಲ್ ಸುವರ್ಣ ಹಾಗೂ ಅರುಣ್ ಪುತ್ತಿಲ ಜಂಟಿಯಾಗಿ ಮತಯಾಚನೆ ನಡೆಸಿದರು. ಈ ಸಂದರ್ಭ ಉಡುಪಿ ಜಿಲ್ಲಾ ಬಿಜೆಪಿ ವಕ್ತಾರೆ ಶ್ರೀಮತಿ ಗೀತಾಂಜಲಿ ಸುವರ್ಣ ಜೊತೆಗಿದ್ದರು. ಉಡುಪಿ ಜಿಲ್ಲಾ…
ಮಡಿಕೇರಿ ಜೂ.2 NEWS DESK : ಪದವೀಧರ ಕ್ಷೇತ್ರದ ಅಭ್ಯರ್ಥಿ ಖ್ಯಾತ ಮಕ್ಕಳ ತಜ್ಞ ಡಾ.ಧನಂಜಯ ಸರ್ಜಿಯ ಕ್ರ.ಸಂ 2ಕ್ಕೆ ಮತದಾನ ಮಾಡುವಂತೆ ರಾಜ್ಯದ ಖ್ಯಾತ ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ಮನವಿ ಮಾಡಿದ್ದಾರೆ. ಜಯದೇವ ಆಸ್ಪತ್ರೆಯ ಖ್ಯಾತ ಹೃದ್ರೋಗ ತಜ್ಞ ಡಾ. ಸಿಎನ್ ಮಂಜುನಾಥ್ ಅವರು ಈ ಬಾರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿದ್ದು, ಡಾ.ಸರ್ಜಿ ಅವರಿಗೆ ಮತದಾನ ಮಾಡುವಂತೆ ನೈರುತ್ಯ ಪದವೀಧರ ಕ್ಷೇತ್ರದ ಪದವೀಧರ ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಪದವೀಧರ ಮತದಾರರು ಜೂ.3ರಂದು ನಡೆಯುವ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಡಾ.ಧನಂಜಯ ಸರ್ಜಿ ಅವರಿಗೆ ಮತದಾನ ಮಾಡುವ ಮೂಲಕ ವಿಧಾನ ಪರಿಷತ್ತಿನ ಘನತೆ ಗೌರವ ಹೆಚ್ಚಾಗುವಂತೆ ಮಾಡಬೇಕು ಎಂದು ಕೋರಿದ್ದಾರೆ. ಡಾ.ಸಿ.ಎನ್.ಮಂಜುನಾಥ್ ರಾಜ್ಯದ ಖ್ಯಾತ ಹೃದ್ರೋಗ ತಜ್ಞರಾಗಿದ್ದು ಜಯದೇವ ಆಸ್ಪತ್ರೆಯಲ್ಲಿ ಹಲವು ವರ್ಷ ಸೇವೆ ಸಲ್ಲಿಸಿ ಹಲವು ಪ್ರಶಸ್ತಿಗಳನ್ನು ಗೆದ್ದುಕೊಂಡಿದ್ದಾರೆ. ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಶಿವಮೊಗ್ಗದ ಖ್ಯಾತ ಮಕ್ಕಳ ತಜ್ಞರಾಗಿದ್ದು, ಹಲವು ಅನಾಥ ಮಕ್ಕಳ ಪಾಲನೆಯನ್ನು ಮಾಡುತ್ತಿದ್ದಾರೆ.
ಮಡಿಕೇರಿ ಜೂ.1 NEWS DESK : ರಸ್ತೆಯಲ್ಲಿ ವಾಹನ ಚಲಾಯಿಸುವಾಗ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ವಾಹನ ಮಾಲೀಕರು ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ, ವಾಹನ ಪರವಾನಿಗೆ ಹೊಂದಿಲ್ಲದವರಿಗೆ ವಾಹನ ಚಲಾಯಿಸಲು ಆಸ್ಪದ ನೀಡಬಾರದು. ಅಪ್ರಾಪ್ತ ವಯಸ್ಸಿನ ಮಕ್ಕಳು ವಾಹನ ಚಲಾಯಿಸುವುದು ಕಂಡುಬಂದಲ್ಲಿ ವಾಹನ ಮಾಲೀಕರ ಮೇಲೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಎಚ್ಚರಿಕೆ ನೀಡಿದ್ದಾರೆ. ಅತೀ ವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸುವುದು, ಬೈಕ್, ಕಾರುಗಳನ್ನು ಚಲಾಯಿಸುವಾಗ ಯಾವುದೇ ರೀತಿಯ ಸ್ಟಂಟ್ಗಳನ್ನು ಮಾಡಿರುವ ಭಾವಚಿತ್ರ, ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಬಗ್ಗೆ ಮಾಹಿತಿ ನೀಡಿ ಸಹಕರಿಸುವಂತೆ ಮನವಿ ಮಾಡಿದ್ದಾರೆ. ರಸ್ತೆಯಲ್ಲಿ ಯಾವುದೇ ಅಪಘಾತಗಳು ಸಂಭವಿಸಿದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ತುರ್ತು ಸಹಾಯವಾಣಿ 112 ಕ್ಕೆ ಕರೆ ಮಾಡಿ ಮತ್ತು ಕೆ.ಎಸ್.ಪಿ ತಂತ್ರಾಶದ ಮೂಲಕವೂ ಮಾಹಿತಿ ನೀಡಬಹುದು. ಅಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ಎಸ್ಪಿ ಸ್ಪಷ್ಟಪಡಿಸಿದ್ದಾರೆ.
ಮಡಿಕೇರಿ ಜೂ.1 NEWS DESK : ಅಪ್ರಾಪ್ತ ಚಾಲಿಸಿದ ಟ್ರ್ಯಾಕ್ಟರ್ ಡಿಕ್ಕಿಯಾಗಿ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸುಂದರನಗರದಲ್ಲಿ 2024 ಮೇ 31 ರಂದು ಬೈಕ್ ಸವಾರರೊಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರ್ಯಾಕ್ಟರ್ ಮಾಲೀಕರಾದ ಬಾಲಕನ ತಾಯಿ ತುಳಸಿ.ಟಿ ಹಾಗೂ ತಂದೆ ಪರಮೇಶ್ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಕುಶಾಲನಗರ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ ಸುಮಾರು 9 ಗಂಟೆ ಸುಮಾರಿನಲ್ಲಿ ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಚಿಕ್ಕತ್ತೂರು ಗ್ರಾಮದ ನಿವಾಸಿ ಶಿವಶಂಕರ್ (22) ಮೃತಪಟ್ಟಿದ್ದರು. ಬೈಕ್ ಸವಾರ ಮೃತನಾಗಿರುವ ಕುರಿತು ದೂರು ಸ್ವೀಕರಿಸಿದ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು 279, 304(ಎ) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು. ಈ ಪ್ರಕರಣದಲ್ಲಿ ಸುಂದರನಗರ ವಿನಾಯಕ ಬಡವಾಣೆ ನಿವಾಸಿ ತುಳಸಿ.ಟಿ ಹಾಗೂ ಪರಮೇಶ್ ಅವರ ಅಪ್ರಾಪ್ತ ವಯಸ್ಸಿನ ಪುತ್ರ ಟ್ರ್ಯಾಕ್ಟರ್ ಅನ್ನು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿ ದ್ವಿಚಕ್ರ ವಾಹನಕ್ಕೆ ಅಪಘಾತಗೊಳಿಸಿರುವುದು ತನಿಖೆಯಿಂದ…






