ಮಡಿಕೇರಿ ಜೂ.15 NEWS DESK : ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸುವಂತೆ ಪೌರಾಯುಕ್ತರಿಗೆ ಲೋಕಾಯುಕ್ತ ಡಿವೈಎಸ್ಪಿ ಪವನ್ ಕುಮಾರ್ ಸೂಚಿಸಿದ್ದಾರೆ. ನಗರದ ತಹಶೀಲ್ದಾರ್ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು. ಬೀದಿ ನಾಯಿಗಳ ಹಾವಳಿ ಜೊತೆಗೆ ಬಿಡಾಡಿ ಜಾನುವಾರುಗಳ ಸಂಖ್ಯೆ ಹೆಚ್ಚಾಗಿದ್ದು, ಜಾನುವಾರುಗಳನ್ನು ಗೋಶಾಲೆಗೆ ಸ್ಥಳಾಂತರಿಸುವುದು ಮತ್ತಿತರ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತ ಡಿವೈಎಸ್ಪಿ ನಿರ್ದೇಶನ ನೀಡಿದರು. ನಗರ ಸ್ವಚ್ಚತೆ ಸಂಬಂಧಿಸಿದಂತೆ ಕಸ ವಿಲೇವಾರಿ ಸಮರ್ಪಕ ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು. ಈ ಕುರಿತು ಪ್ರತಿಕ್ರಿಯಿಸಿದ ನಗರಸಭೆ ಪೌರಾಯುಕ್ತರು ಬೀದಿನಾಯಿ ಹಾವಳಿ ನಿಯಂತ್ರಣಕ್ಕೆ ನಿಯಮಾನುಸಾರ ಕ್ರಮವಹಿಸಲಾಗಿದೆ. ಕಸ ವಿಲೇವಾರಿ ಸಂಬಂಧ 10 ಎಕರೆ ಜಾಗ ಗುರುತಿಸಲಾಗಿದ್ದು, ಅರಣ್ಯ ಇಲಾಖೆಯಿಂದ ಎನ್ಒಸಿ ನೀಡಬೇಕಿದೆ ಎಂದು ಮಾಹಿತಿ ನೀಡಿದರು. ಹೆಬ್ಬೆಟ್ಟಗೇರಿ ಗ್ರಾಮದ ಸಾರ್ವಜನಿಕರೊಬ್ಬರು 2018 ಮತ್ತು 2019 ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಮನೆ…
ಲೇಖಕ: admin
ಕ್ರೀಡಾಂಗಣದ ಉಸ್ತುವಾರಿ ಹುದ್ದೆ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿರುವ ಮಡಿಕೇರಿಯ ಜಿಲ್ಲಾ ಕ್ರೀಡಾಂಗಣಕ್ಕೆ ಕ್ರೀಡಾಂಗಣದ ಉಸ್ತುವಾರಿ ಹುದ್ದೆಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08272-220986 ಮತ್ತು 9480032712 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ತಿಳಿಸಿದ್ದಾರೆ. ಮಹಿಳಾ ಕ್ಷೇಮಪಾಲಕರ ಹುದ್ದೆ : ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿರುವ ಕಿರಿಯರ ಕ್ರೀಡಾ ವಸತಿ ನಿಲಯಕ್ಕೆ ಮಹಿಳಾ ಕ್ಷೇಮಪಾಲಕರ(ಕೇರ್ಟೇಕರ್) ಹುದ್ದೆಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹಗಲು ಮತ್ತು ರಾತ್ರಿಯ ವೇಳೆಯಲ್ಲಿ ಕ್ಷೇಮಪಾಲಕರು ಕಿರಿಯರ ಕ್ರೀಡಾ ನಿಲಯದಲ್ಲಿಯೇ ಇರಬೇಕು. ಮಹಿಳಾ ಅಭ್ಯರ್ಥಿಯಾಗಿರಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ. 08272-220986 ಮತ್ತು 9480032712 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಮಡಿಕೇರಿ ಜೂ.15 NEWS DESK : ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿಯು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜೂ.27 ರಿಂದ ಜು.2 ರವರೆಗೆ ನಡೆಯಲಿದೆ. ಈ ಕುರಿತು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ವಿಡಿಯೊ ಸಂವಾದ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೇನಾ ನೇಮಕಾತಿ ರ್ಯಾಲಿಯನ್ನು ಸುಗಮವಾಗಿ ನಡೆಸಲು ಎಲ್ಲಾ ಹಂತದ ಅಧಿಕಾರಿಗಳು ಶ್ರಮಿಸುವಂತೆ ಸೂಚಿಸಿದರು. ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಬಾಲಸುಬ್ರಮಣಂ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.
ಸುಂಟಿಕೊಪ್ಪ ಜೂ.15 NEWS DESK : ಮಾದಾಪುರ ಗ್ರಾಮ ಪಂಚಾಯಿತಿಯಲ್ಲಿ ಹಲವು ಸಮಸ್ಯೆಗಳ ಆಗರವಾಗಿದ್ದು, ಅಭಿವೃದ್ಧಿ ಕಾರ್ಯಗಳು ಕುಂಟಿತಗೊಂಡಿದೆ. 2ನೇ ಅವಧಿಯ ಅಧ್ಯಕ್ಷರ ಆಯ್ಕೆಯಾಗಿ ಒಂದು ವರ್ಷ ಸಮೀಪಿಸುತ್ತಿದೆ. ಜಿಲ್ಲೆಯ ಎಲ್ಲಾ ಪಂಚಾಯಿತಿಗಳ ಗ್ರಾಮ ಸಭೆ, ನೂತನ ಅಧ್ಯಕ್ಷರ ಆಯ್ಕೆಯಾದ ನಂತರ ಹಲವು ಅಭಿವೃದ್ಧಿ ಕಾರ್ಯಗಳು ನಡೆದರೂ ಮಾದಾಪುರ ಗ್ರಾ.ಪಂ ನ ಗ್ರಾಮಸಭೆ ಮಾತ್ರ ಇನ್ನೂ ನಡೆಸಲು ಆಡಳಿತ ಮಂಡಳಿಗೆ ಸಮಯಾವಕಾಶ ಕೂಡಿ ಬಂದಂತೆ ಕಾಣುತ್ತಿಲ್ಲ. ಆಗಾಗ್ಗೆ ಮಾದಾಪುರ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಯ ವರ್ಗಾವಣೆಯಾಗುತ್ತಿದ್ದು, ಈಗ ಅಧಿಕಾರ ಸ್ವೀಕರಿಸಿಕೊಂಡ ಪಿಡಿಓ ಅವರಿಗೆ ಐಗೂರು ಹಾಗೂ ಮಾದಾಪುರ ಪಂಚಾಯಿತಿಯ ಹೆಚ್ಚುವರಿ ಜವಾಬ್ದಾರಿ ನೀಡುವುದರಿಂದ ಜನರ ಸಮಸ್ಯೆಗಳಿಗೆ ಸ್ಪಂದನೆ ಸಿಗುತ್ತಿಲ್ಲ ಗ್ರಾಮಸ್ಥರು ಆರೋಪಿಸಿದ್ದಾರೆ. ಜಂಬೂರು ಗ್ರಾಮದಲ್ಲಿ ಕಾಮಗಾರಿ ಮಿಷನ್ ಯೋಜನೆಯ ಕಾಮಗಾರಿ ಅರ್ಧದಲ್ಲೇ ಸ್ಥಗಿತಗೊಂಡಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಜ್ವಲಂತವಾಗಿ ಉಳಿದಿದೆ. ಜಲಜೀವನ್ ಯೋಜನೆ ಅರ್ಧದಲೇ ಕೆಲಸ ಸ್ಥಗಿತಗೊಂಡಿದ್ದರೂ ಈ ಬಗ್ಗೆ ಗ್ರಾ.ಪಂ ಏನು ಕ್ರಮಕೈಗೊಂಡಿಲ್ಲ ದೂರಿದ್ದಾರೆ. ಸೆಪ್ಟಿಂಕ್ ಟ್ಯಾಂಕ್ನ ನೀರು ಚರಂಡಿಯಲ್ಲಿ ನಿಂತು…
ಮಡಿಕೇರಿ ಜೂ.15 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ನೂತನ ಸಂಸದ ಯದುವೀರ್ ಒಡೆಯರ್ ಅವರು ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲದ ಶ್ರೀಭಗಂಡೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಸಂಸದರಾಗಿ ಗೆಲುವು ಸಾಧಿಸಿದ ನಂತರ ಇದೇ ಮೊದಲ ಬಾರಿಗೆ ಕೊಡಗು ಜಿಲ್ಲೆಗೆ ಆಗಮಿಸಿದ ಯದುವೀರ್ ಅವರಿಗೆ ಗಡಿಭಾಗ ಕೊಪ್ಪದಲ್ಲಿ ಬಿಜೆಪಿ ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು. ನಂತರ ಸಂಸದರು ತಲಕಾವೇರಿ, ಭಾಗಮಂಡಲಕ್ಕೆ ತೆರಳಿ ಪೂಜೆ ಸಲ್ಲಿಸಿದರು. ನಾಪೋಕ್ಲುವಿಗೆ ತೆರಳಿದ ಅವರು ಶ್ರೀಭಗವತಿ ದೇವಾಲಯದಲ್ಲಿ ಸೂಜೆ ಸಲ್ಲಿಸಿ, ದೇವಾಲಯದ ಸಭಾಂಗಣದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ನಡೆಸಿದರು. ತಮ್ಮ ಗೆಲುವಿಗಾಗಿ ಶ್ರಮಿಸಿದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ ಅವರು ಜಿಲ್ಲೆಯ ಜನರ ನಿರೀಕ್ಷೆಯಂತೆ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡುವುದಾಗಿ ಭರವಸೆ ನೀಡಿದರು. ಪಾಡಿ ಶ್ರೀಇಗ್ಗುತ್ತಪ್ಪ ದೇವಾಲಯಕ್ಕೂ ಭೇಟಿ ನೀಡಿ ಪೂಜೆ ಸಲ್ಲಿಸಿದ ಯದುವೀರ್ ಅವರು ದೇವಾಲಯದ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಿದರು. ಕುಶಾಲನಗರದಲ್ಲಿ…
ಕೂಡಿಗೆ ಜೂ.15 NEWS DESK : ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ದೈಹಿಕ ಶಿಕ್ಷಣ ವಿಭಾಗ, ರಾಷ್ಟ್ರೀಯ ಸೇವಾ ಯೋಜನೆ ( ಎನ್.ಎಸ್.ಎಸ್.) ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶಾಲಾ ಘಟಕ, ಹಾಗೂ ರೆಡ್ ರಿಬ್ಬನ್ ಕ್ಲಬ್, ಘಟಕ ಹಾಗೂ ಭಾರತ್ ಸ್ಕೌಟ್ಸ್ & ಗೈಡ್ಸ್ ಘಟಕದ ಸಹಯೋಗದೊಂದಿಗೆ ಶಾಲಾ ಮಕ್ಕಳಿಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜೂ.21 ರಂದು ನಡೆಯಲಿರುವ ವಿಶ್ವ ಯೋಗೋತ್ಸವ ಪೂರ್ವಭಾವಿಯಾಗಿ ಮಕ್ಕಳ ಯೋಗಾಭ್ಯಾಸಕ್ಕೆ ಚಾಲನೆ ನೀಡಲಾಯಿತು. ವಿಶ್ವ ಯೋಗದ ದಿನದ ಮಹತ್ವ ಕುರಿತು ಮಾಹಿತಿ ನೀಡಿದ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್, ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯಕ್ಕೆ ಯೋಗಾಭ್ಯಾಸವು ತುಂಬಾ ಸಹಕಾರಿಯಾಗಿದೆ. ವಿದ್ಯಾರ್ಥಿಗಳು ನಿರಂತರವಾಗಿ ಯೋಗಾಭ್ಯಾಸ ಮಾಡುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು. ಬೆಳಗಿನ ಯೋಗವು ನಮ್ಮ ಮೆದುಳಿನ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ನಮ್ಮ ಮೆದುಳನ್ನು ಅಧ್ಯಯನ ಮಾಡಲು ಅಥವಾ ಕೆಲಸ ಮಾಡಲು ಹೆಚ್ಚು ಸಕ್ರಿಯವಾಗಿಸುತ್ತದೆ. ಇದು ಸಂತೋಷ ಮತ್ತು…
ಮಡಿಕೇರಿ ಜೂ.15 NEWS DESK : ನಾಲಡಿ ಸ.ಕಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಿಸಲಾಯಿತು. ನಾಲಡಿ ಗ್ರಾಮಸ್ಥರಾದ ಪರದಂಡ ವಿಠಲ, ಕೋಡಿಮಣಿಯಂಡ ರವಿ ಹಾಗೂ ಪಟ್ಟೇಮನೆ ಕೃಷ್ಣ ಅವರು ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಡ್ ಪುಸ್ತಕವನ್ನು ಕೊಡುಗೆಯಾಗಿ ನೀಡಿದರು. ಇದೇ ಸಂದರ್ಭ ಶಾಲೆಯ ಶಿಕ್ಷಕರು ಹಾಗೂ ಪೋಷಕರು ದಾನಿಗಳಿಗೆ ಅಭಿನಂದನೆ ಸಲ್ಲಿಸಿದರು.
ಮಡಿಕೇರಿ ಜೂ.15 NEWS DESK : ಸಿದ್ದಾಪುರದ ಕಾಫಿ ತೋಟ ಸೇರಿದಂತೆ ಕೊಡಗು ಜಿಲ್ಲೆಯಾದ್ಯಂತ ನಡೆಯುತ್ತಿರುವ ಬೃಹತ್ ಭೂಪರಿವರ್ತನೆಯನ್ನು ವಿರೋಧಿಸಿ ಜೂ.17ರಂದು ಸಿದ್ದಾಪುರದಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಶಾಂತಿಯುತ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸೋಮವಾರ ಬೆಳಿಗ್ಗೆ 10.30 ಗಂಟೆಗೆ ಸಿದ್ದಾಪುರ ಪಟ್ಟಣದಲ್ಲಿ ಮಾನವ ಸರಪಳಿ ನಿರ್ಮಿಸಿ ಬೃಹತ್ ಭೂಪರಿವರ್ತನೆ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸುವಂತೆ ಒತ್ತಾಯಿಸಲಾಗುವುದು ಎಂದು ಹೇಳಿದ್ದಾರೆ. ಬೃಹತ್ ಭೂಪರಿವರ್ತನೆಯಿಂದ ಕೊಡಗಿನಲ್ಲಿ ಜನಸಂಖ್ಯಾ ಸ್ಫೋಟ ಸಂಭವಿಸಿ ಆದಿಮಸಂಜಾತ ಬುಡಕಟ್ಟು ಜನಾಂಗ ಮೂಲನಿವಾಸಿ ಕೊಡವರ ಅಸ್ತಿತ್ವಕ್ಕೆ ದಕ್ಕೆ ಬರಬಹುದು. ಕಾಫಿ ತೋಟವನ್ನು ಪರಿವರ್ತಿಸುವ ಮೂಲಕ ದೈತ್ಯಾಕಾರದ ವಿಲ್ಲಾಗಳು, ಮೆಗಾ ಟೌನ್ಶಿಪ್ಗಳು ಮತ್ತು ಮನೆ ನಿವೇಶನಗಳನ್ನು ನಿರ್ಮಿಸಲು ಅವಕಾಶ ಮಾಡಿಕೊಡಲಾಗುತ್ತಿದೆ. ಯುನೆಸ್ಕೋದ ವಿಶ್ವ ಪರಂಪರೆಯ ತಾಣದಡಿಯಲ್ಲಿ ಬರುವ ತಡಿಯಂಡಮೋಲ್ನ ಕೆಳಗೆ ಕಾಫಿ ತೋಟಗಳು ಪರಿವರ್ತನೆಯಾಗಿದೆ. ಮಕ್ಕಂದೂರಿನ ಪಶ್ಚಿಮಘಟ್ಟಗಳ ವಲಯದಲ್ಲಿ ರೆಸಾರ್ಟ್ ಅನ್ನು ನಿರ್ಮಿಸಲಾಗಿದೆ. ಗಾಳಿಬೀಡಿನ ಹಸಿರು ಬೆಲ್ಟ್…
ಮಡಿಕೇರಿ ಜೂ.15 NEWS DESK : ಇದೀಗ ಜಿಲ್ಲೆಗೆ ಮುಂಗಾರು ಕಾಲಿಟ್ಟಿದೆ.ಬಹುತೇಕ ಕಡೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಮುಕ್ತಿ ಸಿಕ್ಕಿದೆ.ಆದರೆ ವಿರಾಜಪೇಟೆ ತಾಲ್ಲೂಕಿನ ಹಾಲುಗುಂದ ಗ್ರಾ.ಪಂ ವ್ಯಾಪ್ತಿಯ ಎಲಿಯಂಗಾಡು ಹಾಗೂ ಅತ್ತಪಟ್ಟಿ ವ್ಯಾಪ್ತಿಯ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಎದುರಾಗಿದೆ. ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದಾಗ ಗ್ರಾಮಕ್ಕೆ ಟ್ಯಾಂಕರ್ ಮೂಲಕ ನೀರಿನ ಪೂರೈಕೆ ಮಾಡಲಾಗುತ್ತಿತ್ತು. ಆದರೆ ಇದೀಗ ಮಳೆ ಬಂದಿರುವುದರಿಂದ ಟ್ಯಾಂಕರ್ ಮೂಲಕ ಕುಡಿಯುವ ನೀರಿನ ಪೂರೈಕೆಯನ್ನು ಸ್ಥಗಿತಮಾಡಲಾಗಿದೆ. ಗ್ರಾಮದಲ್ಲಿ ಕೊಳವೆ ಬಾವಿಗಳು ಸಂಪೂರ್ಣ ಬತ್ತಿಹೋಗಿದ್ದು, ಅದಲ್ಲದೇ ಜಲಜೀವನ್ ಕುಡಿಯುವ ನೀರಿನ ಯೋಜನೆ ಕೂಡ ಯಾರಿಗೂ ಪ್ರಯೋಜನಕ್ಕೆ ಬಂದಿಲ್ಲ. ಎರಡು ದಿನಗಳ ಹಿಂದೆ ಗ್ರಾಮಕ್ಕೆ ಇ.ಒ ಕೂಡ ಭೇಟಿ ನೀಡಿದ್ದರು. ಸಮಸ್ಯೆ ಬಗ್ಗೆ ಅವರ ಗಮನಕ್ಕೆ ತಂದಿದ್ದರು ಕೂಡ ಇದುವರೆಗೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಗ್ರಾ.ಪಂ ಸದಸ್ಯ ಅಬ್ದುರೆಹಮಾನ್ (ಅಂದಾಯಿ) ಮಾತನಾಡಿ, ಕುಡಿಯುವ…
ಮಡಿಕೇರಿ ಜೂ.15 NEWS DESK : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಕೊಡಗು ವತಿಯಿಂದ ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ಜೂ.18 ರಿಂದ 24 ರವರೆಗೆ ಶಿಕ್ಷಕರಿಗೆ ನಡೆಯುವ ಮೂಲ ತರಬೇತಿ ಮತ್ತು ಮುಂದುವರೆದ ತರಬೇತಿ ನಡೆಯಲಿದೆ. ಈ ಶಿಬಿರದ ಉದ್ಘಾಟನೆಯು ಜೂ.19 ರಂದು ಬೆಳಗ್ಗೆ 10.30 ಗಂಟೆಗೆ ನಡೆಯಲಿದೆ ಎಂದು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ ತಿಳಿಸಿದ್ದಾರೆ.






