ಲೇಖಕ: admin

ಮಡಿಕೇರಿ ಜೂ.1 NEWS DESK : ಸಿದ್ದಾಪುರದ ಕಾಫಿ ತೋಟದ ಬೃಹತ್ ಭೂಪರಿವರ್ತನೆ ಸೇರಿದಂತೆ ಕೊಡಗು ಜಿಲ್ಲೆಯಾದ್ಯಂತ ನಡೆಯುತ್ತಿರುವ ಭೂಪರಿವರ್ತನೆಗಳ ವಿರುದ್ಧ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಜೂ.3 ರಿಂದ ಜಿಲ್ಲಾವ್ಯಾಪಿ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಸೋಮವಾರ ಬಿರುನಾಣಿಯಿಂದ ಜನಜಾಗೃತಿ ಕಾರ್ಯಕ್ರಮವನ್ನು ಆರಂಭಿಸಲಾಗುವುದು. ಮುಂದಿನ ದಿನಗಳಲ್ಲಿ ಮಡಿಕೇರಿ, ಸುಂಟಿಕೊಪ್ಪ, ಮಾದಾಪುರ, ಚೆಟ್ಟಳ್ಳಿ, ಚೇರಂಬಾಣೆ, ಮೂರ್ನಾಡು, ಕಕ್ಕಬೆ, ನಾಪೋಕ್ಲು, ವಿರಾಜಪೇಟೆ, ಸಿದ್ದಾಪುರ, ಗೋಣಿಕೊಪ್ಪ, ತಿತಿಮತಿ, ಬಾಳೆಲೆ, ಪೊನ್ನಂಪೇಟೆ, ಹುದಿಕೇರಿ, ಕುಟ್ಟ, ಶ್ರೀಮಂಗಲ, ಟಿ.ಶೆಟ್ಟಿಗೇರಿ ಮತ್ತಿತರೆಡೆ ಕೂಡ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಕಾಫಿ ತೋಟಗಳ ಭೂಪರಿವರ್ತನೆಯಿಂದ ಕೊಡಗಿನ ಎಲ್ಲಾ ಗ್ರಾಮಗಳು ನಾಶವಾಗುತ್ತಿವೆ. ಮಣ್ಣು ಅಗೆಯುವ ಕೆಲಸದಿಂದ ಬಹುವಾರ್ಷಿಕ ಜಲಮೂಲಗಳ ನರ ಕೇಂದ್ರಗಳು ಈಗಾಗಲೇ ಮುಚ್ಚಿವೆ. ಈ ಬಗ್ಗೆ ಜಿಲ್ಲೆಯ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ. ಇದರೊಂದಿಗೆ ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ,…

Read More

ಮಡಿಕೇರಿ ಜೂ.1 NEWS DESK : ಜಿಲ್ಲೆಯಲ್ಲಿ ಮುಂಗಾರು ಆರಂಭವಾಗುವ ಲಕ್ಷಣಗಳು ಕಾಣುತ್ತಿದ್ದು, ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯವಾಗದಂತೆ ಗಮನಹರಿಸುವಂತೆ ಸಗಟು ಹಾಗೂ ಚಿಲ್ಲರೆ ರಸಗೊಬ್ಬರ ಮಾರಾಟಗಾರರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಪೂರೈಕೆ, ವಿತರಣೆ, ದಾಸ್ತಾನು ಮತ್ತಿತರ ವಿಷಯ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಂಗಾರು ಸಂದರ್ಭದಲ್ಲಿ ಗುಣಮಟ್ಟದ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಪೂರೈಕೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಕೃಷಿಕರಿಂದ ದೂರು ಕೇಳಿ ಬರದಂತೆ ಎಚ್ಚರವಹಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ನುಡಿದರು. ಈ ಬಾರಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಆದ್ದರಿಂದ ಜಿಲ್ಲೆಗೆ ಬೇಕಿರುವ ರಸಗೊಬ್ಬರ ದಾಸ್ತಾನು ಮಾಡಿಕೊಂಡು ಕೃಷಿಕರಿಗೆ ಕಾಲಕಾಲಕ್ಕೆ ಪೂರೈಸಬೇಕು. ರಸಗೊಬ್ಬರ ದಾಸ್ತಾನು, ವಿತರಣೆ ಸಂಬಂಧ ಮಾಹಿತಿಯ ಪಟ್ಟಿಯನ್ನು ಪ್ರತೀ ನಿತ್ಯ ಪ್ರಕಟಿಸುವುದರ ಜೊತೆಗೆ ಮಾಧ್ಯಮಗಳಲ್ಲಿಯೂ ಬಿಡುಗಡೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಸಲಹೆ ಮಾಡಿದರು. ಜಿ.ಪಂ.ಸಿಇಒ ವರ್ಣಿತ್…

Read More

ಶಿವಮೊಗ್ಗ ಜೂ.1 NEWS DESK :  ಶಿವಮೊಗ್ಗ ಗ್ರಾಮಾಂತರ ಬಿಜೆಪಿ ವತಿಯಿಂದ ನೈರುತ್ಯ ಪದವೀಧರ ಕ್ಷೇತ್ರದ ಮತದಾರರೊಂದಿಗೆ ಜಿಲ್ಲಾ ಬಂಜಾರ ಸಭಾಭವನದಲ್ಲಿ ಸಮಾವೇಶ ನಡೆಸಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಪರವಾಗಿ ಮತ ಯಾಚಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮಾಂತರ ಮಾಜಿ ಶಾಸಕರಾದ ಕೆ.ಬಿ.ಅಶೋಕ್ ನಾಯ್ಕ್, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ವಿಧಾನ ಪರಿಷತ್ ಸದಸ್ಯರಾದ ಎಸ್. ರುದ್ರೆಗೌಡ್ರು, ಡಿ.ಎಸ್.ಅರುಣ್, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್.ದತ್ತಾತ್ರಿ, ತಾಲ್ಲೂಕು ಅಧ್ಯಕ್ಷ ಸಿಂಗನಹಳ್ಳಿ ಸುರೇಶ್, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಬಸವರಾಜಪ್ಪ,ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ತಮ್ಮಡಿಹಳ್ಳಿ ನಾಗರಾಜ್, ಕೆಎಂಎಫ್ ನಿರ್ದೇಶಕರಾದ ದಿನೇಶ್ ಬುಳ್ಳಾಪುರ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ವೀರಭದ್ರಪ್ಪ ಪೂಜಾರ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಗಣೇಶ್ ಪಿಳ್ಳಂಗಿರಿ, ಜಿಲ್ಲಾ ಉಪಾಧ್ಯಕ್ಷರಾದ ಅಣ್ಣಪ್ಪ, ಮಹಿಳಾ ಮೋರ್ಚಾ ಅಧ್ಯಕ್ಷರಾದ ನಾಗರತ್ನ ಪ್ರಕಾಶ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ಪ್ರೇಮಾ ಸುಧಾಕರ್, ತಮಿಳು ಸಮಾಜದ ಮುಖಂಡ ಪೆರುಮಾಳ್, ಮಾಜಿ ತಾಲ್ಲೂಕು ಅಧ್ಯಕ್ಷ ಭಾಗ್ಯ ಜಗದೀಶ್, ಬಿಜೆಪಿ ಯುವ…

Read More

ಮಡಿಕೇರಿ ಜೂ.1 NEWS DESK : ಕುಶಾಲನಗರ “220/11 ಕೆವಿ ಮತ್ತು 66/11 ಕೆವಿ ಸುಂಟಿಕೊಪ್ಪ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಜೂ.3 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯ ವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ, ಕುಶಾಲನಗರ ಪಟ್ಟಣ, ಹೆಬ್ಬಾಲೆ ಶಿರಂಗಾಲ, ಕೂಡಿಗೆ, ರಸಲ್‍ಪುರ, ಭುವನಗಿರಿ, ಬಲಮುರಿ, ಹಾರಂಗಿ, ನಂಜರಾಯಪಟ್ಟಣ, ಎಸ್.ಎಲ್.ಎನ್, ಸಿದ್ದಲಿಂಗಪುರ ಕಾವೇರಿ ನಿಸರ್ಗಧಾಮ, ಸೋಮೇಶ್ವರ, ಕೂಡುಮಂಗಳೂರು, ನಾಕೂರು, ಮಾದಾಪುರ, ಹಟ್ಟಿಹೊಳೆ, ಕಾಂಡನಕೊಲ್ಲಿ, ಗರ್ವಾಲೆ, ಬಿಳಿಗೇರಿ, ಕಂಬಿಬಾಣೆ, ಕೊಡಗರಹಳ್ಳಿ, ಉಪ್ಪುತೋಡು, ಚೆಟ್ಟಳ್ಳಿ, ಶಿರಂಗಾಲ, ವಾಲ್ನೂರು ತ್ಯಾಗತ್ತೂರು, ಮತ್ತಿಕಾಡು, ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಇಇ ಅನಿತಾ ಬಾಯಿ ಕೋರಿದ್ದಾರೆ.

Read More

ಮಡಿಕೇರಿ ಜೂ.1 NEWS DESK : ಮುಂಗಾರು ಸಂದರ್ಭದಲ್ಲಿ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ಅಗತ್ಯ ಮುನ್ನೆಚ್ಚರ ವಹಿಸುವ ಸಂಬಂಧ ಎನ್ ಡಿ ಆರ್ ಎಫ್ ತಂಡವು ಕೊಡಗು ಜಿಲ್ಲೆಗೆ ಆಗಮಿಸಿದೆ. ಎನ್ ಡಿ ಆರ್ ಎಫ್ ತಂಡದಲ್ಲಿ 25 ಪರಿಣತರಿದ್ದು, ಇವರನ್ನು ಕುಶಾಲನಗರ ತಾಲ್ಲೂಕು ಆಡಳಿತ ಬರಮಾಡಿಕೊಂಡಿತು. ಈ ಸಂದರ್ಭದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ಅನನ್ಯ ವಾಸುದೇವ ಇದ್ದರು.

Read More

ಮಡಿಕೇರಿ ಜೂ.1 NEWS DESK : ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಮತ ಎಣಿಕೆ ಜೂ. 4 ರಂದು ನಡೆಯಲಿದ್ದು, ಈ ದಿನದಂದು ಕೊಡಗು ಜಿಲ್ಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಜೂ. 4 ರಂದು ಬೆಳಗ್ಗೆ 6 ಗಂಟೆಯಿಂದ ಅದೇ ದಿನ ಮಧ್ಯರಾತ್ರಿ 12 ಗಂಟೆಯವರೆಗೆ ಕೊಡಗು ಜಿಲ್ಲೆಯಾದ್ಯಂತ ಗುಂಪು ಸೇರುವುದು, ಪಟಾಕಿ ಸಿಡಿಸುವುದು, ವಿಜಯೋತ್ಸವ, ಮೆರವಣಿಗೆ, ಪ್ರತಿಭಟನೆ, ಖಾಸಗಿ ವ್ಯಕ್ತಿಗಳು ಧ್ವನಿವರ್ಧಕ ಬಳಸುವುದು, ಮಾರಕ ಆಯುಧಗಳನ್ನು ಹೊಂದಿರುವುದು ಅಥವಾ ಹಿಡಿದು ಓಡಾಡುವುದು ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ  ಆದೇಶ ಹೊರಡಿಸಿದ್ದಾರೆ.

Read More

ಮಡಿಕೇರಿ ಜೂ.1 NEWS DESK : ಲೇಖಕಿ ಪ್ರತಿಮಾ ಹರೀಶ್ ರೈ ಬರೆದಿರುವ ಅಂತರಗಂಗೆ ಪುಸ್ತಕ ಜೂ.9 ರಂದು ಲೋಕಾಪ೯ಣೆಯಾಗಲಿದೆ. ನಗರದ ರೆಡ್ ಬ್ರಿಕ್ಸ್ ಇನ್ ನ ಸತ್ಕಾರ್ ಸಭಾಂಗಣದಲ್ಲಿ ಜೂ.9 ರಂದು  ಬೆಳಗ್ಗೆ 10.30 ಗಂಟೆಗೆ ಆಯೋಜಿತ ಕಾಯ೯ಕ್ರಮವನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಉದ್ಘಾಟಿಸಲಿದ್ದು, ಸಾಹಿತಿ ಸಾಹಿತಿ ಶ.ಗ. ನಯನತಾರಾ ಅಂತರಗಂಗೆಯನ್ನು ಲೋಕಾಪ೯ಣೆ ಮಾಡಲಿದ್ದಾರೆ. ಮಡಿಕೇರಿ ಆಕಾಶವಾಣಿ ಉದ್ಘೋಷಕರು ಸುಬ್ರಾಯ ಸಂಪಾಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕೊಡಗು ವಿಶ್ವವಿದ್ಯಾನಿಲಯದ ಕನ್ನಡ ಉಪನ್ಯಾಸಕ ಡಾ. ಜಮೀರ್ ಅಹಮ್ಮದ್ ಕೃತಿಯ ಕುರಿತು ಮಾತನಾಡಲಿದ್ದಾರೆ. ಶಕ್ತಿ ಪತ್ರಿಕೆಯ ಪ್ರಧಾನ ಸಂಪಾದಕ ಜಿ.ರಾಜೇಂದ್ರ, ಮಡಿಕೇರಿ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಅನಿಲ್ ಹೆಚ್.ಟಿ., ಕೊಡಗು ಬಂಟರ ಸಂಘದ ಅಧ್ಯಕ್ಷ ಡಿ.ಜಗದೀಶ್ ರೈ, ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಲೇಖಕಿ ಪ್ರತಿಮಾ ಹರೀಶ್ ರೈ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

Read More

ಮಡಿಕೇರಿ ಜೂ.1 NEWS DESK : ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಡಿಕೇರಿ ನಗರದ ಎ.ಎಲ್.ಜಿ.ಕ್ರೆಸೆಂಟ್ ಶಾಲೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿಯ ವತಿಯಿಂದ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ ನಡೆಯಿತು. ಜಿಲ್ಲೆಯ ಸುಮಾರು 160 ಕ್ಕಿಂತಲೂ ಹೆಚ್ಚಿನ ಮಕ್ಕಳು ಚಿತ್ರಕಲೆ ಸ್ಪರ್ಧೆ ಮತ್ತು 30 ಮಕ್ಕಳು, 30 ಮಕ್ಕಳು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಮಕ್ಕಳ ಪರಿಸರ ಜಾಗೃತಿ ಮೂಡಿಸುವ ಚಿತ್ರ ಪ್ರದರ್ಶನ ಎಲ್ಲರ ಗಮನ ಸೆಳೆಯಿತು. ಸ್ಪರ್ಧೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳೊಂದಿಗೆ ಅಂಗನವಾಡಿ ಮಕ್ಕಳು, ಎಲ್.ಕೆ.ಜಿ. ಮತ್ತು ಯು.ಕೆ.ಜಿ.ಮಕ್ಕಳು ಕೂಡ ಅತಿ ಉತ್ಸಾಹದಿಂದ ಪಾಲ್ಗೊಂಡು ಪರಿಸರ ಸಂರಕ್ಷಣೆ ಕುರಿತು ವೈವಿಧ್ಯಮಯ ಚಿತ್ರಗಳನ್ನು ರಚಿಸಿದ್ದರು. ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಪರಿಸರವನ್ನು ಹಾಳು ಮಾಡುತ್ತಿರುವುದನ್ನು ಪರಿಸರ ನಾಶ, ಬರಗಾಲಕ್ಕೆ ಆಹ್ವಾನ ನಿರೂಪಿಸುವ ಚಿತ್ರ, ಅರಣ್ಯ ನಾಶ, ಮನುಷ್ಯನಿಂದ ಜೀವ ಭಿಕ್ಷೆ ಬೇಡುತ್ತಿರುವ ವೃಕ್ಷ ದೇವತೆ, ಸುಂದರ ಪರಿಸರದ ರಮಣೀಯ ಚಿತ್ರಗಳು, ನೆಲ-…

Read More

ಮಡಿಕೇರಿ ಜೂ.1 NEWS DESK : ನಾವು ಪ್ರಾಕೃತಿಕ ಸಂಪನ್ಮೂಲಗಳನ್ನು ಸಂರಕ್ಷಣೆ ಮಾಡುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಕೊಡುಗೆಯಾಗಿ ನೀಡಬೇಕಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯು ಹೇಳಿದರು. ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕೊಡಗು ಪ್ರಾದೇಶಿಕ ಕಚೇರಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವತಿಯಿಂದ ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಕೊಡಗು ಜಿಲ್ಲಾ ಸಮಿತಿಯ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಗರದ ಎ.ಎಲ್.ಜಿ.ಕ್ರೆಸೆಂಟ್ ಶಾಲೆಯಲ್ಲಿ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆದ ಪರಿಸರ ಸಂರಕ್ಷಣೆ ಕುರಿತು ಚಿತ್ರಕಲೆ ಹಾಗೂ ಪ್ರಬಂಧ ಸ್ಪರ್ಧೆಯ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಾವು ನೆಲ- ಜಲ, ಅರಣ್ಯ, ಪರಿಸರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಪರಿಸರ ಮಾಲಿನ್ಯ ಉಂಟಾಗದ ರೀತಿಯಲ್ಲಿ…

Read More

ಮಡಿಕೇರಿ ಜೂ.1 NEWS DESK : ಬೆಂಗಳೂರಿನ ಬನ್ನೇರುಘಟ್ಟದ ಪ್ರಖ್ಯಾತ ಫೋರ್ಟಿಸ್ ಆಸ್ಪತ್ರೆ ವತಿಯಿಂದ ಜೂ.2 ರಂದು ಮೊಣಕಾಲು ನೋವಿನ ಚಿಕಿತ್ಸಾ ಶಿಬಿರ ಮಡಿಕೇರಿಯಲ್ಲಿ ನಡೆಯಲಿದೆ. ನಗರದ ರೇಸ್‍ಕೋರ್ಸ್ ರಸ್ತೆಯಲ್ಲಿರುವ ಹರ್ಷ ಹೆಲ್ತ್ ಕೇರ್ ಕ್ಲಿನಿಕ್‍ ನಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಶಿಬಿರ ನಡೆಯಲಿದ್ದು, ಆರ್ಥ್ರೋಸ್ಕೋಫಿ ಮತ್ತು ಸ್ಪೋರ್ಟ್ಸ್ ಮೆಡಿಸಿನ್ ಟ್ರಾಮಾ ಕನ್ಸಲ್ಟೆಂಟ್ ಹಾಗೂ ಹಿರಿಯ ಸಲಹೆಗಾರರಾದ ಡಾ. ಕೆ.ಯೋಗೇಶ್, ಸೊಂಟ, ಮೊಣಕಾಲು ಮತ್ತು ಕೀಲು ನೋವುಗಳು, ನಡೆಯಲು ಕಷ್ಟವಾಗುವಿಕೆ, ವೃದ್ಧರಿಗಾಗಿ ಕೀಲು ಬದಲಿ ವ್ಯವಸ್ಥೆ, ಕೀಹೋಲ್ ಮೂಳೆ ಚಿಕಿತ್ಸೆಯ ಕಾರ್ಯಾಚರಣೆಗಳು, ರೊಬೊಟಿಕ್ ಜಾಯಿಂಟ್ ರಿಪ್ಲೇಸ್ಮೆಂಟ್ ಕುರಿತು ಉಚಿತ ಸಮಾಲೋಚನೆ ಹಾಗೂ ಚಿಕಿತ್ಸೆ ನೀಡಲಿದ್ದಾರೆ. ನಿಗಧಿತ ಭೇಟಿಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಅವಿನಾಶ್-7829128776 ಸಂಪರ್ಕಿಸಬಹುದಾಗಿದೆ.      

Read More