ಲೇಖಕ: admin

ಮಡಿಕೇರಿ ಜೂ.15 NEWS  DESK : ಜನಪ್ರತಿನಿಧಿಯಾಗಿ ಆಯ್ಕೆಯಾದವರು ತಮ್ಮ ಭೇಟಿಗೆ ಬರಲಿ ಎಂದು ಕಾಯುವುದರ ಬದಲು ಜನರ ಬಳಿ ತೆರಳಿ ಅವರ ಸಮಸ್ಯೆ ಆಲಿಸಿ ಬಗೆಹರಿಸಿದರೆ ಮಾತ್ರ ನೈಜ ಪ್ರಜಾಪ್ರಭುತ್ವ ಕಾಣಲು ಸಾಧ್ಯ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಇಂಗಿತ ವ್ಯಕ್ತಪಡಿಸಿದ್ದಾರೆ. ವಿಧಾನ ಸೌಧದಲ್ಲಿರುವ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿ ನಡೆಸಿ ಮಾತನಾಡಿದ ಪೊನ್ನಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಸ್ಪಂದನಾ ಕಾರ್ಯಕ್ರಮಗಳನ್ನು ಕ್ಷೇತ್ರದಲ್ಲಿ ನಡೆಸಲು ಸೂಚನೆ ನೀಡಿದ್ದು, ಈ ನಿಟ್ಟಿನಲ್ಲಿ ಜೂ.19 ರಂದು ವಿರಾಜಪೇಟೆ ಪಟ್ಟಣಕ್ಕೆ ಸಂಭಂದಿಸಿದಂತೆ ಜನರ ಅಹವಾಲು ಆಲಿಸಲು ಜನಸ್ಪಂದನಾ ಕಾರ್ಯಕ್ರಮ ನಡೆಯಲಿದೆ. ನಂತರ ಪ್ರತಿ ಗ್ರಾಮೀಣ ಭಾಗದಲ್ಲಿ ಕಾರ್ಯಕ್ರಮ ನಡೆಯಲಿದೆ. ಆಯಾ ಭಾಗಕ್ಕೆ ಸಂಬಂಧಿಸಿದ ನಾಗರಿಕರು ಭಾಗವಹಿಸಬಹುದು ಎಂದು ವಿನಂತಿ ಮಾಡಿದ್ದಾರೆ. ಜನಸ್ಪಂದನಾ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಸೇರಿದಂತೆ ಎಲ್ಲಾ ಹಿರಿಯ, ಕಿರಿಯ ಅಧಿಕಾರಿಗಳು ಉಪಸ್ಥಿತರಿದ್ದು ಜನರ ಸಮಸ್ಯೆ ಬಗೆ ಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಿದ್ದಾರೆ. ನಾಗರೀಕರು…

Read More

ಮಡಿಕೇರಿ ಜೂ.15 NEWS DESK : ಮೂಲತಃ ಬಾಳೆಲೆ ಗ್ರಾಮದವರಾದ ಈ ಹಿಂದೆ ಕೊಡಗಿನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಕ್ಯಾಪ್ಟನ್ ಮಲಚೀರ ಅಯ್ಯಪ್ಪ ಅವರು ಕೇಂದ್ರ ಸಿವಿಲ್ ಏವಿಯೇಷನ್ ಇಲಾಖೆಯ ಅಧೀನದ ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯೂರಿಟಿಯ ಜಂಟಿ/ವಿಭಾಗೀಯ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ. ಅಯ್ಯಪ್ಪ ಅವರು (2014 ಬ್ಯಾಚ್ ಐ.ಪಿ.ಎಸ್) ಕೊಡಗಿನಲ್ಲಿ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ ಬಳಿಕ ಕರ್ನಾಟಕ ಲೋಕಾಯುಕ್ತದ ಎಸ್.ಪಿ. ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಕೇಂದ್ರದ ಸೇವೆಗೆ ಅವರನ್ನು ನಿಯೋಜಿಸಲಾಗಿದೆ.

Read More

ಮಡಿಕೇರಿ ಜೂ.15 NEWS DESK: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕುಶಾಲನಗರ ವ್ಯಾಪ್ತಿಯ ಮುಳ್ಳುಸೋಗೆ ಶ್ರೀ ಕನ್ನಂಬಾಡಿಯಮ್ಮ ಮಾರಮ್ಮ ದೇವಾಲಯದ ಅಭಿವೃದ್ಧಿಗೆ ದೇಣಿಗೆ ನೀಡಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ 1,50,000 ಚೆಕ್‍ಅನ್ನು ಯೋಜನೆಯ ಜಿಲ್ಲಾ ನಿರ್ದೇಶಕರಾದ ಲೀಲಾವತಿ  ದೇವಾಲಯದ ಆಡಳಿತ ಮಂಡಳಿಗೆ ವಿತರಣೆ ಮಾಡಿದರು. ಈ ಸಂದರ್ಭ ಮಾತನಾಡಿದ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಗಣೇಶ್, ಶ್ರೀ ಕ್ಷೇತ್ರದಿಂದ ಪ್ರಸಾದ ರೂಪವಾಗಿ ಕೊಡಮಾಡಿದ ಮೊತ್ತವನ್ನು ಕೃತಜ್ಞತಾ ಪೂರಕವಾಗಿ ಸ್ವೀಕರಿಸಿದ್ದೇವೆ ಎಂದರು. ಈ ಸಂದರ್ಭ ಸೋಮವಾರಪೇಟೆ ತಾಲೂಕು ಯೋಜನಾಧಿಕಾರಿ ರೋಹಿತ್, ವಲಯದ ಮೇಲ್ವಿಚಾರಕರಾದ ಪೂರ್ಣಿಮಾ, ಸೇವಾ ಪ್ರತಿನಿಧಿ ಕುಸುಮ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಳ್ಳುಸೋಗೆ ಒಕ್ಕೂಟದ ಅಧ್ಯಕ್ಷರಾದ ರಾಧಾ,  ದೇವಸ್ಥಾನ ಆಡಳಿತ ಮಂಡಳಿಯ ನಿರ್ದೇಶಕರುಗಳು, ಸದಸ್ಯರುಗಳು ಹಾಜರಿದ್ದರು.

Read More

ಮಡಿಕೇರಿ ಜೂ.14 NEWS DESK : ಮಾನ್ಯ ಸರ್ವೋಚ್ಚ ನ್ಯಾಯಾಲಯವು ವಿಶೇಷ ಲೋಕ್ ಅದಾಲತ್‍ನ್ನು ಜುಲೈ, 29 ರಿಂದ ಆಗಸ್ಟ್, 03 ರವರೆಗೆ ನಡೆಸಲು ಉದ್ದೇಶಿಸಿದ್ದು, ಈ ಹಿನ್ನೆಲೆಯಲ್ಲಿ ಪಕ್ಷಕಾರರುಗಳಿಗೆ, ಎದುರುದಾರರ ಜೊತೆ ಪೂರ್ವಭಾವಿ ಲೋಕ್ ಅದಾಲತ್‍ನ್ನು ನಡೆಸಲು ವಿಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಮಾಡಲಾಗಿರುತ್ತದೆ. ಎಲ್ಲಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳಲ್ಲಿ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಗಳಲ್ಲಿ ವಿಡಿಯೋ ಕಾನ್ಫರೆನ್ಸ್ ಕೇಂದ್ರಗಳನ್ನು ಸ್ಥಾಪಿಸಲು ತೀರ್ಮಾನಿಸಲಾಗಿದೆ. ಎಲ್ಲಾ ಪಕ್ಷಕಾರರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾನ್ಯ ಸರ್ವೋಚ್ಚ ನ್ಯಾಯಾಲಯವು ನಡೆಸುವ ಪೂರ್ವಭಾವಿ ಲೋಕ್ ಅದಾಲತ್‍ನಲ್ಲಿ ಭಾಗವಹಿಸಲು ಅನುಕೂಲ ಮಾಡಲಾಗಿರುತ್ತದೆ. ಈ ವಿಶೇಷ ಲೋಕ್ ಅದಾಲತ್‍ನಲ್ಲಿ ರಾಜೀ ಸಂಧಾನಕ್ಕೆ ಗುರುತಿಸಲಾದ ಪ್ರಕರಣಗಳ ಪಟ್ಟಿಯನ್ನು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವೆಬ್‍ಸೈಟ್‍ನಲ್ಲಿ ವರದಿಯಾಗಿರುತ್ತದೆ. ಇದರಿಂದ ಈ ಪ್ರಕರಣಗಳಲ್ಲಿನ ಎಲ್ಲಾ ಪಕ್ಷಕಾರರುಗಳು ತಮ್ಮ ವಾಸಸ್ಥಳಗಳ ವ್ಯಾಪ್ತಿಯಲ್ಲಿ ಬರುವ ತಾಲ್ಲೂಕು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳಲ್ಲಿ ತೆರೆಯಲಾಗಿರುವ ವಿಡಿಯೋ ಕಾನ್ಫರೆನ್ಸ್ ಕೇಂದ್ರಗಳಿಗೆ ಭೇಟಿ ಕೊಟ್ಟು ಜು.29…

Read More

ಮಡಿಕೇರಿ ಜೂ.15 NEWS DESK  : ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಅವರಿಗೆ ಕೊಡಗು-ಮೈಸೂರು ಗಡಿಯಲ್ಲಿ ಬಿಜೆಪಿ ಪ್ರಮುಖರು, ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು. ನಂತರ ಸಂಸದ ಯದುವೀರ್ ಕುಶಾಲನಗರದದಲ್ಲಿ ಕಾವೇರಿ ಮಾತೆ ಹಾಗೂ ಗಣಪತಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ‌‌ ರವಿ‌ಕಾಳಪ್ಪ, ಪ್ರಮುಖರಾದ ಸುನಿಲ್ ಸುಬ್ರಮಣಿ, ವಿ.ಕೆ.ಲೋಕೇಶ್, ಮಹೇಶ್ ಜೈನ್, ಆರ್.ಕೆ.ಚಂದ್ರ, ಅನಿತಾ ಪೂವಯ್ಯ, ಗೌತಮ್, ಸೋಮೇಶ್, ಎಂ.ಎಂ.ಚರಣ್, ಮಧುಸೂದನ್, ರಾಮನಾಥನ್ ಮತ್ತಿತರರು ಹಾಜರಿದ್ದರು.

Read More

ಮೈಸೂರು ಜೂ.15 NEWS DESK : ಬ್ಯಾಂಕಿನವರಂತೆ ಮಾತಾಡಿ, ಆನ್‌ ಲೈನ್‌ ಉದ್ಯೋಗ , ಷೇರು ಮಾರುಕಟ್ಟೆ ಹಣದ ಅಮಿಷ ಒಡ್ಡಿ ಹಣ ದೋಚುವ ಗ್ಯಾಂಗ್‌ ನ ವಂಚಕರು ಇದೀಗ ಅರಣ್ಯ ಇಲಾಖೆಯ ಆನ್ಲೈನ್‌ ರಿಸರ್ವೇಶನ್ ಗೂ ನಕಲಿ‌ ವೆಬ್‌ಸೈಟ್‌ ತೆರೆದು ಹಣ ದೋಚುತ್ತಿರುವ ಬಗ್ಗೆ ಅರಣ್ಯ ಇಲಾಖೆಯು ಪ್ರವಾಸಿಗರಿಗೆ ಎಚ್ಚರಿಸಿದೆ. ಕಳೆದ ಜನವರಿ ತಿಂಗಳಿನಲ್ಲಿ ನಾಗರಹೊಳೆ ನ್ಯಾಷನಲ್‌ ಪಾರ್ಕ್‌ ಎಂಬ ನಕಲಿ ವೆಬ್‌ ಸೈಟ್‌ ತೆರೆದು ಪ್ರವಾಸಿಗರಿಗೆ ಸಫಾರಿ ಹಾಗೂ ರೂಂ ಬುಕಿಂಗ್‌ ಎಂದು ಹಣ ವಂಚಿಸುತಿದ್ದ ಗ್ಯಾಂಗ್‌ ಇದೀಗ ಮತ್ತೆ ಸಕ್ರಿಯವಾಗಿದೆ. ನಾಗರಹೊಳೆಯ ಕಾಕನಕೋಟೆ, ವೀರನಗೊಸಳ್ಳಿ ಮತ್ತು ನಾಣಚ್ಚಿ ಕೇಂದ್ರಗಳ ಮೂಲಕ ಸಫಾರಿಗೆ ತೆರಳಲು ಪ್ರವಾಸಿಗರಿಗೆ ಆನ್‌ಲೈನ್‌ ಬುಕಿಂಗ್‌ ವ್ಯವಸ್ಥೆ ಇದೆ. ಈ ಹಿಂದೆ ಜನವರಿಯಲ್ಲಿ ನಕಲಿ ವೆಬ್‌ ಸೈಟ್‌ ಮೂಲಕ ಇಲ್ಲಿಗೆ ಬುಕಿಂಗ್‌ ಮಾಡಿಕೊಂಡು ಪ್ರವಾಸಿಗರಿಗೆ ಸಾವಿರಾರು ರೂಪಾಯಿ ವಂಚನೆ ಮಾಡಲಾಗಿತ್ತು. ಪ್ರವಾಸಿಗರು ಬುಕಿಂಗ್‌ ಮಾಡಿದ ಹಿನ್ನೆಲೆಯಲ್ಲಿ ಆರಾಮವಾಗಿ ಸಫಾರಿ ಕೇಂದ್ರಕ್ಕೆ ಬಂದಾಗಲೇ ನಕಲಿ ಬುಕಿಂಗ್‌ ವಂಚನೆ…

Read More

ಮಡಿಕೇರಿ ಜೂ.14 NEWS DESK : ರಕ್ತದಾನ ಮಹಾದಾನವಾಗಿದ್ದು, ಕೊಡಗು ವಿಶ್ವ ವಿದ್ಯಾನಿಲಯಕ್ಕೆ ಒಳಪಡುವ ಎಲ್ಲಾ ಕಾಲೇಜುಗಳಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗುವುದು ಎಂದು ಚಿಕ್ಕಅಳುವಾರ ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ ಆಲೂರ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಕ್ತನಿಧಿ ಕೇಂದ್ರ, ಜಿಲ್ಲಾಸ್ಪತ್ರೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಸೋಮವಾರಪೇಟೆ ತಾಲ್ಲೂಕು, ಕೊಡಗು ವಿಶ್ವ ವಿದ್ಯಾಲಯ, ಭಾರತೀಯ ರೆಡ್‌ಕ್ರಾಸ್ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ವಿಶ್ವವಿದ್ಯಾನಿಲಯದ ಚಿಕ್ಕ ಅಳುವಾರದ ಜ್ಞಾನ ಕಾವೇರಿ ಕ್ಯಾಂಪಸ್ ನಲ್ಲಿ ಶುಕ್ರವಾರ ನಡೆದ ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಕ್ತದಾನದಿಂದಾಗುವ ಲಾಭಗಳ ಕುರಿತು ಅರಿವು ಮೂಡಿಸಿಕೊಳ್ಳುವುದು ಮುಖ್ಯ. ಮುಂಬರುವ ದಿನಗಳಲ್ಲಿ ಕೊಡಗು ವಿಶ್ವ ವಿದ್ಯಾನಿಲಯಕ್ಕೆ ಒಳಪಟ್ಟ ಎಲ್ಲಾ ಕಾಲೇಜುಗಳಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ರಕ್ತದಾನ ದಿನಾಚರಣೆ ಕಾರ್ಯಕ್ರಮವನ್ನು ಕಳೆದ 20 ವರ್ಷಗಳಿಂದ ಆಚರಿಸಿಕೊಂಡು…

Read More

ಮಡಿಕೇರಿ ಜೂ.14 NEWS DESK : ಚಲಿಸುತ್ತಿದ್ದ ಕಾರಿಗೆ ಸಿಲುಕಿ ಜಿಂಕೆಯೊಂದು ಮೃತಪಟ್ಟಿರುವ ಘಟನೆ ಕುಶಾಲನಗರ- ಮಡಿಕೇರಿ ಹೆದ್ದಾರಿಯ ಆನೆಕಾಡು ಮೀಸಲು ಅರಣ್ಯದ ಬಳಿ ನಡೆದಿದೆ. ಕುಶಾಲನಗರ ಕಾರು ಶೋ ರೂಮ್ ನಿಂದ ಮಡಿಕೇರಿ ಶೋರೂಮ್ ಗೆ ತೆರಳುತ್ತಿದ್ದ ಹೊಸ ಕಾರಿಗೆ ಅತ್ತೂರು ಅರಣ್ಯ ವಲಯದಿಂದ ಆನೆಕಾಡು ಮೀಸಲು ಅರಣ್ಯ ವಲಯದ ಕಡೆಗೆ ಸಾಗುತ್ತಿದ್ದ ಜಿಂಕೆ ಸಿಲುಕಿದೆೆ. ತೀವ್ರವಾಗಿ ಗಾಯಗೊಂಡ ಜಿಂಕೆ ಸ್ಥಳದಲ್ಲೇ ಮೃತಪಟ್ಟಿದೆ. ಕಾರು ಕೂಡ ಜಖಂಗೊಂಡಿದ್ದು, ಆನೆಕಾಡು ಮೀಸಲು ಅರಣ್ಯದ ಉಪವಲಯ ಅರಣ್ಯ ಅಧಿಕಾರಿ ದೇವಯ್ಯ ಹಾಗೂ ಸಿಬ್ಬಂದಿಗಳು ಸ್ಥಳ ಮಹಜರು ನಡೆಸಿ ಕಾರು ಚಾಲಕನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಸ್ಥಳಕ್ಕೆ ಕುಶಾಲನಗರ ವಲಯ ಅರಣ್ಯ ಅಧಿಕಾರಿ ರತನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Read More

ಮಡಿಕೇರಿ ಜೂ.14 NEWS DESK : ರಾಷ್ಟ್ರೀಯ ಸೇವಾಯೋಜನೆ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣವನ್ನು ಹೆಚ್ಚಿಸಲು ಮತ್ತು ಪ್ರತಿಭೆಗೆ ಉತ್ತಮ ವೇದಿಕೆಯನ್ನು ಕಲ್ಪಸಿಕೊಡುತ್ತದೆ ಎಂದು ರಾಜ್ಯಮಟ್ಟ ಅತ್ಯುತ್ತಮ ಎನ್.ಎಸ್.ಎಸ್ ಅಧಿಕಾರಿ ಪ್ರಶಸ್ತಿ ವಿಜೇತೆ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ಸ್ನಾತಕೋತ್ತರ ವಿಭಾಗದ ಅರ್ಥಶಾಸ್ತ್ರ ಉಪನ್ಯಾಸಕಿ ಮಧುರ ಅಭಿಪ್ರಾಯ ವ್ಯಕ್ತಪಡಿಸಿದರು. ಮಂಗಳೂರು ವಿಶ್ವವಿದ್ಯಾನಿಲಯದ ಹಾಗೂ ಕೊಡಗು ವಿಶ್ವ ವಿದ್ಯಾನಿಲಯಯ ಅಧಿನಕ್ಕೆ ಒಳಪಡುವ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ 2023-24ನೇ ಸಾಲಿನ ರಾಷ್ಟ್ರೀಯ ಸೇವಾಯೋಜನೆಯ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು, ಮಾತನಾಡಿದರು. ವಿದ್ಯಾರ್ಥಿಗಳ ಭವಿಷ್ಯ ರೂಪಿಸಿಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆ ಸಹಕಾರಿಯಾಗಿದೆ. ಇದು ನಾಯಕತ್ವಗುಣ ಬೆಳೆಸುವುದರ ಜೊತೆಗೆ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆ ಕಲ್ಪಿಸುತ್ತದೆ ಎಂದರು. ಎನ್‍ಎಸ್‍ಎಸ್‍ನಲ್ಲಿ ಕೇವಲ ಕೆಲಸ ಮಾಡಬೇಕು ಎಂದುಕೊಳ್ಳದೆ ಸ್ವಯಂ ಸೇವಕರ ಸೇವೆ ಎಂಬುದನ್ನು ಅರಿತುಕೊಳ್ಳಬೇಕು. ಇಲ್ಲಿ ಕಲಿತ ಗುಣಗಳನ್ನ ಜೀವನದಲ್ಲೂ ಅಳವಡಿಸಿಕೊಳ್ಳುವಂತೆ ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಪ್ರೊ.…

Read More

ಮಡಿಕೇರಿ ಜೂ.14 NEWS DESK : ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಅಧಿನಿಯಮ ಜಾರಿಗೊಳಿಸಿದ ಹಿನ್ನಲೆಯಲ್ಲಿ ಈ ಕಾಯ್ದೆಯನ್ನು ಜಾರಿಗೊಳಿಸುವಲ್ಲಿ ಮಹತ್ತರ ಪಾತ್ರವಹಿಸಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ  ಅವರನ್ನು ದೊಡ್ಡಬಳ್ಳಾಪುರ ವಕೀಲರ ಸಂಘದ ಸಂಘದಿಂದ ಸನ್ಮಾನಿಸಲಾಯಿತು. ಎ.ಎಸ್.ಪೊನ್ನಣ್ಣ ನವರ ವಿಧಾನ ಸೌಧ ಕಚೇರಿಗೆ ಭೇಟಿ ನೀಡಿದ ಸಂಘದ ಪ್ರಮುಖರು ಹಾಗೂ ಪದಾಧಿಕಾರಿಗಳು ಶಾಸಕರನ್ನು ಸನ್ಮಾನಿಸಿ ಗೌರವಿಸಿದರು. ಇದೇ ಸಂದರ್ಭ ಕಚೇರಿ ಕಟ್ಟಡ ನಿರ್ಮಾಣಕ್ಕೆ ಮನವಿ ಸಲ್ಲಿಸಿದರು. ಸಂಘದ ಅಧ್ಯಕ್ಷ ಎಂ.ರವಿ, ಪದಾಧಿಕಾರಿಗಳಾದ ಕೃಷ್ಣಮೂರ್ತಿ, ಮುನಿರಾಜ್, ವಿಜಯ್ ಕುಮಾರ್, ಸದಸ್ಯರಾದ ಶಿವಕುಮಾರ್, ಮಹಮದ್ ಮಮ್ತಾಜ್, ಪ್ರಭಾಕರ್,ಸೈಯದ್ ನಾಜಿಮ್,ಪ್ರವೀಣ್ ಕುಮಾರ್,ಮೋಹನ್ ಕುಮಾರ್ ಹಾಜರಿದ್ದರು.

Read More