ಮಡಿಕೇರಿ ಜೂ.14 NEWS DESK : ಸುಂಟಿಕೊಪ್ಪ ಹೋಬಳಿ ಅತ್ತೂರು ನಲ್ಲೂರು ಗ್ರಾಮದಲ್ಲಿ ದಲಿತರು ಹಾಗೂ ಹಿಂದುಳಿದವರ ಮೇಲೆ ನಾಲ್ವರು ವ್ಯಕ್ತಿಗಳಿಂದ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದ್ದು, ತಕ್ಷಣ ಇವರುಗಳನ್ನು ಗಡಿಪಾರು ಮಾಡಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯ ನೇತೃತ್ವದಲ್ಲಿ ಗ್ರಾಮಸ್ಥರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರಿಗೆ ದೂರು ನೀಡಿದ್ದಾರೆ. ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷ ಹೆಚ್.ಎಲ್.ದಿವಾಕರ್ ಮಾತನಾಡಿ ಅತ್ತೂರು-ನಲ್ಲೂರು ಗ್ರಾಮದಲ್ಲಿ ಸುಮಾರು 150 ಮಂದಿ ದಲಿತರು ಹಾಗೂ ಹಿಂದುಳಿದವರು ವಾಸ ಮಾಡುತ್ತಿದ್ದು, ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದಾರೆ. ಆದರೆ ಅದೇ ಗ್ರಾಮದ ನಾಲ್ವರು ಯುವಕರು ಸಂಘಟನೆಗಳ ಹೆಸರಿನಲ್ಲಿ ದೌರ್ಜನ್ಯ ನಡೆಸಿ ನೆಮ್ಮದಿ ಕೆಡಿಸಿದ್ದಾರೆ ಎಂದು ಆರೋಪಿಸಿದರು. ಕೆಲವು ದಿನಗಳ ಹಿಂದೆ ಗ್ರಾಮದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ, ಪ್ರಕರಣದ ಹಾದಿ ತಪ್ಪಿಸಲು ಯತ್ನಿಸಿದ್ದಾರೆ. ಇದೇ ರೀತಿ ಮುಂದುವರೆದರೆ ಮುಂದೆ ದೊಡ್ಡ ಅನಾಹುತ ಸಂಭವಿಸುವ ಆತಂಕವಿದೆ. ಆದ್ದರಿಂದ ತಕ್ಷಣ ನಾಲ್ವರನ್ನು ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು. ಗ್ರಾಮಸ್ಥರಾದ ಸ್ವಾತಿ ಮಾತನಾಡಿ, ಕೆಲವು…
ಲೇಖಕ: admin
ಜಮ್ಶೆಡ್ಪುರ ಜೂ.14 NEWS DESK : ಜಾರ್ಖಂಡ್ನ ಪೂರ್ವ ಸಿಂಗ್ಭೂಮ್ ಜಿಲ್ಲೆಯ ರೈಲು ನಿಲ್ದಾಣದ ಬಳಿ ಶುಕ್ರವಾರ ಗೂಡ್ಸ್ ರೈಲಿಗೆ ಸಿಲುಕಿ ಇಬ್ಬರು ಎಳೆ ಮಕ್ಕಳು ಸೇರಿದಂತೆ ಮೂವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಮ್ಶೆಡ್ಪುರ ನಗರದ ಹೊರವಲಯದಲ್ಲಿರುವ ಗೋವಿಂದಪುರ ಹಾಲ್ಟ್ ನಿಲ್ದಾಣದ ಬಳಿ ವ್ಯಕ್ತಿಯೊಬ್ಬ ಎರಡು ವರ್ಷದ ಬಾಲಕ ಮತ್ತು ಮೂರು ವರ್ಷದ ಬಾಲಕಿ ಜೊತೆಯಲ್ಲಿ ಮುಂಜಾನೆ ಹಳಿ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಮೂವರು ಒಂದೇ ಕುಟುಂಬದ ಸದಸ್ಯರು ಎಂದು ಹೇಳಲಾಗಿದೆ. ಮೂವರು ಪ್ರಾಯಶಃ ಪೂರ್ವ ಸಿಂಗ್ಭೂಮ್ ಜಿಲ್ಲೆಯ ಪೊಟ್ಕಾ ಬ್ಲಾಕ್ನ ನಿವಾಸಿಗಳಾಗಿದ್ದು, ಅವರನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಗೋವಿಂದಪುರ ಪೊಲೀಸ್ ಠಾಣೆಯ ಅಧಿಕಾರಿ ಪ್ರಕಾಶ್ ಕುಮಾರ್ ತಿಳಿಸಿದ್ದಾರೆ. ಗೋವಿಂದಪುರ ಹಾಲ್ಟ್ ರೈಲು ನಿಲ್ದಾಣವು ಆಗ್ನೇಯ ರೈಲ್ವೆಯ ಚಕ್ರಧರಪುರ ವಿಭಾಗದ ಅಡಿಯಲ್ಲಿ ಬರುತ್ತದೆ. ಮೃತದೇಹಗಳನ್ನು ಇಲ್ಲಿನ ಎಂಜಿಎಂ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಮಡಿಕೇರಿ ಜೂ.14 NEWS DESK : ಇತ್ತೀಚೆಗೆ ಗೋವಾದಲ್ಲಿ ನಡೆದ ರಾಷ್ಟ್ರೀಯ ಮುಕ್ತ ಕಬಡ್ಡಿ ಪಂದ್ಯಾವಳಿಯಲ್ಲಿ “ರೈಸಿಂಗ್ ಸ್ಟಾರ್ ಕೊಡಗು” ತಂಡ ಚಿನ್ನದ ಪದಕ ಗೆದ್ದುಕೊಂಡಿದೆ. ಡಿಫೆಂಡರ್ ಆಗಿ ಉತ್ತಮ ಪ್ರದರ್ಶನ ತೋರಿದ ಪಾಲೂರು ಗ್ರಾಮದ ಆರ್.ಸಮರ್ಥ ಚಿನ್ನದ ಪದಕ ಗೆದ್ದಿದ್ದಾರೆ. ಇವರು ರಾಜೇಶ್ ಬಂಗೇರ ಹಾಗೂ ಕವಿತಾ ದಂಪತಿ ಪುತ್ರ. ತರಬೇತುದಾರ ಸುರೇಶ್ ಟಿ. ಅವರ ನೇತೃತ್ವದಲ್ಲಿ ನಡೆದ ಬೇಸಿಗೆ ಶಿಬಿರದಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡು ಈ ಸಾಧನೆ ಮಾಡಿದ್ದಾರೆ. ಸಮರ್ಥ್ ನ ಸಾಧನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಹಿರಿಯ ಕ್ರೀಡಾಪಟು ಆನಂದ ಪೂಜಾರಿ ಅವರು ಮುಂದಿನ ದಿನಗಳಲ್ಲಿ ಕ್ರೀಡಾಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡಲಿ ಎಂದು ಶುಭ ಕೋರಿದ್ದಾರೆ.
ಮಡಿಕೇರಿ ಜೂ.14 NEWS DESK : ಪಾರಾಣೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚುನಾವಣೆಯ ಮೂಲಕ ಶಾಲಾ ನಾಯಕರನ್ನು ನೇಮಕ ಆಯ್ಕೆಮಾಡಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ವೇದಪ್ರಸಾದ್ ನಿರ್ದೇಶನದಂತೆ ನಡೆದ ಚುನಾವಣೆಯಲ್ಲಿ ಪ್ರಧಾನಮಂತ್ರಿಯಾಗಿ ಜೆ.ಸಿ.ಮನು, ಉಪ ಪ್ರಧಾನಿಯಾಗಿ ಹೆಚ್.ಪಿ.ಪೊನ್ನಪ್ಪ, ಗೃಹ ಮಂತ್ರಿಗಳಾಗಿ ಪ್ರೀತಂ ಮತ್ತು ತಶ್ವಿನ್ , ಆರೋಗ್ಯ ಮಂತ್ರಿಗಳಾಗಿ ರಚನ ಮತ್ತು ನವ್ಯ, ಕ್ರೀಡಾ ಮಂತ್ರಿಯಾಗಿ ಪೊನ್ನಪ್ಪ ಆಯ್ಕೆಯಾದರು. ಸಾಂಸ್ಕೃತಿಕ ಸಚಿವರಾಗಿ ತಾನ್ಸಿ ಮತ್ತು ಸಿಂಧು, ಸ್ವಚ್ಚತಾ ಸಚಿವರಾಗಿ ನೇಹಾಲ್ ಮತ್ತು ಶಶಾಂಕ್, ತೋಟಗಾರಿಕೆ ಮಂತ್ರಿಗಳಾಗಿ ಡೆವಿನ್ ಕರುಂಬಯ್ಯ, ಮತ್ತು ಹೇಮಂತ್, ವಾರ್ತಾ ಮಂತ್ರಿಯಾಗಿ ನಂದಿನಿ, ಆಹಾರ ಮಂತ್ರಿಗಳಾಗಿ ಸಿಂಧು ಮತ್ತು ಪೂಜ ನೇಮಕಗೊಂಡರು. ಪ್ರಜಾಪ್ರಭುತ್ವ ಮಾದರಿಯಲ್ಲಿ ಗುಪ್ತ ಮತದಾನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಿತು. ನಂತರ ಮಾತನಾಡಿದ ಮುಖ್ಯ ಶಿಕ್ಷಕ ವೇದ ಪ್ರಸಾದ್, ಮಕ್ಕಳ ಮನಸ್ಸಿನಲ್ಲಿ ಪ್ರಜಾಪ್ರಭುತ್ವದ ಮಹತ್ವ ಮತ್ತು ದೇಶಕಟ್ಟುವಲ್ಲಿನ ಜವಾಬ್ದಾರಿಯ ಅರಿವನ್ನು ಈಗಿನಿಂದಲೇ ಜಾಗೃತಿಗೊಳಿಸಿದರೆ, ಮುಂದಿನ ಭವ್ಯ ಬಲಿಷ್ಠ ದೇಶದ ಕನಸು ನನಸಾಗಲಿದೆ ಮತ್ತು ವಿದ್ಯಾರ್ಥಿಗಳಿಗೆ ಬಾಲ್ಯದಲ್ಲಿಯೆ…
ಮಡಿಕೇರಿ ಜೂ.14 NEWS DESK : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಜೂ.23 ರಂದು ನಗರದಲ್ಲಿ ಸಾರ್ವಜನಿಕರಿಗಾಗಿ ‘ಪ್ರಕೃತಿ-ಪರಿಸರ’ ವಿಷಯದ ಕುರಿತು ಜಿಲ್ಲಾ ಮಟ್ಟದ ಕವಿಗೋಷ್ಠಿ ಆಯೋಜಿಸಲಾಗಿದೆ ಎಂದು ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಬ್ಬಿರ ಸರಸ್ವತಿ ತಿಳಿಸಿದ್ದಾರೆ.. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10.30 ಗಂಟೆಗೆ ನಗರದ ಭಾರತೀಯ ವಿದ್ಯಾಭವನದ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಸಾಹಿತಿ ಕಿಗ್ಗಾಲು ಗಿರೀಶ್ ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದರು. ಕವಿಗೋಷ್ಠಿಯಲ್ಲಿ ಆಯ್ಕೆಯಾದ ಮೊದಲ ಮೂರು ಅತ್ಯುತ್ತಮ ಕವನಗಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ಮತ್ತು ಭಾಗವಹಿಸಿದ ಎಲ್ಲಾ ಕವಿ, ಕವಯತ್ರಿಗಳಿಗೆ ಪ್ರಶಂಸನಾ ಪತ್ರ ನೀಡಲಾಗುವುದೆಂದು ಎಂದು ಬಬ್ಬಿರ ಸರಸ್ವತಿ ಹೇಳಿದರು. ಮಕ್ಕಳ ಕವನಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಮೊದಲು ನೋಂದಾಯಿತ 30 ಕವನಗಳಿಗೆ ಕಾರ್ಯಕ್ರಮದಲ್ಲಿ ವಾಚನ ಮಾಡಲು ಅವಕಾಶ ಕಲ್ಪಿಸಲಾಗುವುದು. ಆಸಕ್ತ ಕವಿಗಳು ಜೂ.22ರ ಒಳಗೆ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ…
ಮಡಿಕೇರಿ ಜೂ.14 NEWS DESK : ಅನುದಾನದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರದಿಂದಲೇ ಪರಿಶಿಷ್ಟರಿಗೆ ಅನ್ಯಾಯವಾಗುತ್ತಿರುವುದರಿಂದ ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ನೈತಿಕತೆ ಕೆಪಿಸಿಸಿ ವಕ್ತಾರ ಹಾಗೂ ಲೋಕಸಭಾ ಚುನಾವಣೆಯ ಪರಾಜಿತ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರಿಗಿಲ್ಲ ಎಂದು ಕೊಡಗು ಜಿಲ್ಲಾ ಬಿಜೆಪಿ ಎಸ್ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸರ್ವರನ್ನೂ ಒಗ್ಗೂಡಿಸಿಕೊಂಡು ಸರ್ವರ ವಿಕಾಸಕ್ಕಾಗಿ ಅಭಿವೃದ್ಧಿ ಕಾರ್ಯಗಳನ್ನು ಜಾರಿಗೆ ತರುತ್ತಿರುವ ಬಿಜೆಪಿ ನೇತೃತ್ವದ ಎನ್ಡಿಎ ಸರಕಾರಕ್ಕೆ ಲಕ್ಷ್ಮಣ್ ಅವರು ಪಾಠ ಮಾಡುವ ಅಗತ್ಯವಿಲ್ಲ. ಕಾಂಗ್ರೆಸ್ ಸರಕಾರದಿಂದ ಪರಿಶಿಷ್ಟರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಅವರು ಮೊದಲು ಧ್ವನಿ ಎತ್ತಲಿ ಎಂದು ಒತ್ತಾಯಿಸಿದ್ದಾರೆ. ಕಳೆದ ಹತ್ತು ವರ್ಷಗಳ ಕಾಲ ದೇಶದಲ್ಲಿ ಆಡಳಿತ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರಕಾರ ಹಿಂದುಳಿದ ವರ್ಗ, ಪರಿಶಿಷ್ಟರು ಹಾಗೂ ಅಲ್ಪಸಂಖ್ಯಾತರ ಏಳಿಗೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಯೋಜನೆಗಳನ್ನು ರೂಪಿಸಿದೆ. ಆದರೆ ಹಲವು ದಶಕಗಳ ಕಾಲ ಕೇಂದ್ರದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಈ…
ಸುಂಟಿಕೊಪ್ಪ ಜೂ.14 NEWS DESK : ಸುಂಟಿಕೊಪ್ಪ ಪದವಿ ಪೂರ್ವ ಕಾಲೇಜಿನ 2024-25ನೇ ಸಾಲಿನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆಪ್ರಕ್ರಿಯೆಯು ಗುಪ್ತಮತದಾನದ ಮೂಲಕ ನಡೆಯಿತು. ಮತದಾನ ಸಂಚಾಲಕರು ಹಾಗೂ ಮತದಾರ ಸಾಕ್ಷರತಾ ಅಧಿಕಾರಿ ಸರಳಾ ಮಾತನಾಡಿ, ದೇಶವನ್ನು ಕಟ್ಟುವ ತೀಕ್ಷ್ಣ ಆಯುಧವೇ ಮತದಾನ ಎಂದರು. ಸಂವಿಧಾನವು ನಮಗೆ ಮತದಾನದಂತಹ ಪವಿತ್ರವಾದ ಹಕ್ಕುನ್ನು ನೀಡಿದೆ. ದೇಶಕಟ್ಟುವ ಕಾಯಕದಲ್ಲಿ ಪ್ರಜೆಗಳು ಭಾಗಿಯಾಗುವ ಅವಕಾಶವನ್ನು ಕಲ್ಪಿಸಿಕೊಟ್ಟಿರುವ ಬಗ್ಗೆ ವಿವರಿಸಿದರು. ಕಾಲೇಜಿನಲ್ಲಿ ಅಸ್ತಿತ್ವದಲ್ಲಿರುವ ಮತದಾನ ಸಾಕ್ಷರತಾ ಸಂಘದ ಕಾರ್ಯಚಟುವಟಿಕೆ ಬಗ್ಗೆ ಮಾಹಿತಿ ನೀಡಿದ ಅವರು, ನಾಳಿನ ಸುಂದರ ದೇಶವನ್ನು ಕಟ್ಟಲು ಇರುವ ತೀಕ್ಷ್ಣವಾದ ಆಯುಧವೇ ಮತದಾನ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಶ್ರೀಲತಾ, ಯುವ ಮತದಾರರು ಪ್ರಜಾಪ್ರಭುತ್ವದ ಭವಿಷ್ಯ. ದೇಶದ ಭವಿಷ್ಯಕ್ಕಾಗಿ ಉತ್ತಮ ನಾಯಕರನ್ನು ಆಯ್ಕೆ ಮಾಡಲು ಯುವಕರು ತಮ್ಮ ಮತದಾನದ ಶಕ್ತಿಯನ್ನು ಬುದ್ಧಿವಂತಿಕೆಯಿಂದ ಬಳಸಬೇಕೆಂದು ಕರೆ ನೀಡಿದ ಅವರು, ಈ ಉದ್ದೇಶದಿಂದ ಕಾಲೇಜಿನಲ್ಲಿ ಮಾದರಿ ಚುನಾವಣೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.…
ಸೋಮವಾರಪೇಟೆ ಜೂ.14 NEWS DESK : ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ರಜತ ಮಹೋತ್ಸವ ಹಾಗೂ ವಾರ್ಷಿಕ ಮಹಾಸಭೆಯು ಜೂ.18 ರಂದು ನಡೆಯಲಿದೆ. ಬೆಳಿಗ್ಗೆ 10.30ಕ್ಕೆ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆಯಲಿರುವ ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸಿ.ಕೆ.ಮಲ್ಲಪ್ಪ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಂಘದ ಅಧ್ಯಕ್ಷ ಬಿ.ಬಿ.ಮಾದಮಯ್ಯ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪ್ರದೀಪ್ ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ಸಂಘದ ಹಿರಿಯ ಸದಸ್ಯರುಗಳಾದ ಎಂ.ಎಸ್.ಶಿವಮೂರ್ತಿ, ಜಿ.ಎಸ್. ಹೂವಯ್ಯ, ಹೆಚ್.ಕೆ. ಕುಟ್ಟಪ್ಪ, ಎ.ಯು.ವಿಶಾಲಾಕ್ಷಿ, ಗೌರಮ್ಮ, ಎಸ್.ಆರ್.ಪುಟ್ಟಣಯ್ಯ, ಡಿ.ಪಿ.ಲೇಶಮ್ಮ, ಬಿ.ಎನ್.ರಂಗಸ್ವಾಮಿ, ಡಿ.ಎಸ್.ಸದಾಶಿವ, ಹೆಚ್.ಎಸ್. ಗುಂಡಪ್ಪ, ಕೆ.ಕೆ.ಅಯ್ಯಪ್ಪ ಮತ್ತು ಕೆ.ಎಸ್.ನಾಗರಾಜು ಅವರನ್ನು ಸನ್ಮಾನಿಸಲಾಗುವುದು ಎಂದು ಸಂಘದ ಕಾರ್ಯದರ್ಶಿ ಬಿ.ಎಂ.ಆನಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೋಮವಾರಪೇಟೆ ಜೂ.14 NEWS DESK : ಬಳಗುಂದ ತೋಟಗಾರಿಕೆ ಕ್ಷೇತ್ರ ಮತ್ತು ಕೂಡಿಗೆ ತೋಟಗಾರಿಕಾ ಕ್ಷೇತ್ರದಲ್ಲಿ ಉತ್ತಮ ಗುಣಮಟ್ಟದ ತೆಂಗು ಮತ್ತು ಅಡಿಕೆ ಸಸಿಗಳು ಇಲಾಖಾ ದರದಲ್ಲಿ ರೈತರಿಗೆ ವಿತರಿಸಲು ಲಭ್ಯವಿರುವುದಾಗಿ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಡಾ.ಮಂಜುನಾಥ್ ಶೆಟ್ಟಿ ತಿಳಿಸಿದ್ದಾರೆ. ತೆಂಗು ಗಿಡವೊಂದಕ್ಕೆ ರೂ.75 ಹಾಗೂ ಅಡಿಕೆ ಗಿಡಕ್ಕೆ ರೂ.25 ನಿಗಧಿಗೊಳಿಸಲಾಗಿದೆ. ಬಿಪಿಎಲ್ ಕಾರ್ಡ್ ಮತ್ತು ನರೇಗಾ ಉದ್ಯೋಗ ಚೀಟಿ ಹೊಂದಿರುವ ರೈತರಿಗೆ ಸಸಿಗಳನ್ನು ನಾಟಿ ಮಾಡಲು ನಿಯಮಾನುಸಾರ ಪ್ರೋತ್ಸಾಹಧನವನ್ನು ನರೇಗಾ ಮುಖಾಂತರ ನೀಡಲು ಅವಕಾಶವಿದೆ ಎಂದು ಡಾ.ಮಂಜುನಾಥ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಬಳಗುಂದ ತೋಟಗಾರಿಕೆ ಕ್ಷೇತ್ರ 9844360764, ಕೂಡಿಗೆ ತೋಟಗಾರಿಕೆ ಕ್ಷೇತ್ರ 8762937704 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಲು ಕೋರಿದೆ.
ಸೋಮವಾರಪೇಟೆ ಜೂ.14 : ನಿವೇಶನ ರಹಿತ ಕೂಲಿ ಕಾರ್ಮಿಕರಿಗೆ, ಬಡವರಿಗೆ, ಆದಿವಾಸಿಗಳಿಗೆ ಸರ್ಕಾರ ನಿವೇಶನ ಕಲ್ಪಿಸಬೇಕೆಂದು ಆಗ್ರಹಿಸಿ ಯುನೈಟೆಡ್ ಪ್ಲಾಂಟೇಷನ್ ವರ್ಕರ್ಸ್ ಯೂನಿಯನ್ ಸೋಮವಾರಪೇಟೆಯಲ್ಲಿ ಪ್ರತಿಭಟನೆ ನಡೆಸಿತು. ಯೂನಿಯನ್ ಜಿಲ್ಲಾಧ್ಯಕ್ಷ ಹೆಚ್.ಎಂ.ಸೋಮಪ್ಪ ನೇತೃತ್ವದಲ್ಲಿ ವಿವೇಕಾನಂದ ಸರ್ಕಲ್ನಿಂದ ಪ್ರಮುಖ ಸೋಮವಾರಪೇಟೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಸಾಗಿದ ಪ್ರತಿಭಟನಕಾರರು ಜೇಸಿ ವೇದಿಕೆಯಲ್ಲಿ ಸಮಾವೇಶಗೊಂಡ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿದರು. ಜಿಲ್ಲೆಯಲ್ಲಿ ಕೃಷಿ ಕಾರ್ಮಿಕರು ಸ್ವಂತ ನಿವೇಶನವಿಲ್ಲದೆ ಮಾಲೀಕರ ಲೈನ್ ಮನೆಯಲ್ಲಿ ವಾಸಮಾಡುತ್ತಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ನಿವೇಶನಕ್ಕಾಗಿ ಹೋರಾಟ ಮಾಡಲಾಗುತ್ತಿದೆ. ಮಾದಾಪುರ, ಹರದೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಪೈಸಾರಿ ಜಾಗ ಗುರುತಿಸಿ ಕಂದಾಯ ಇಲಾಖೆಗೆ ಮಾಹಿತಿ ನೀಡಲಾಗಿದೆ. ಆದರೆ ಇದುವರೆಗೆ ನಿವೇಶನ ರಹಿತರಿಗೆ ನಿವೇಶನ ನೀಡಿಲ್ಲ ಎಂದು ಸೋಮಪ್ಪ ದೂರಿದರು. ಜಿಲ್ಲೆಯಲ್ಲಿರುವ ಪೈಸಾರಿ ಜಾಗ ಉಳ್ಳವರ ಪಾಲಾಗುತ್ತಿದೆ. ಸ್ವಾತಂತ್ರ್ಯ ಸಿಕ್ಕಿ 7 ದಶಕಗಳು ಕಳೆದರೂ ಕಾರ್ಮಿಕರಿಗೆ ವಾಸಕ್ಕೆ ಮನೆ ಕೊಡದ ಸರ್ಕಾರಗಳಿಗೆ ಧಿಕ್ಕಾರವಿರಲಿ ಎಂದರು. ಜಿಲ್ಲೆಯಲ್ಲಿ ಕಾಡಾನೆ, ಹುಲಿದಾಳಿಗೆ ಕಾರ್ಮಿಕರು ಜೀವ ಕಳೆದುಕೊಳ್ಳುತ್ತಿದ್ದಾರೆ.…






