ಶಿವಮೊಗ್ಗ ಮೇ 31 NEWS DESK : ಶಿವಮೊಗ್ಗ ಗ್ರಾಮಾಂತರ ಬಿಜೆಪಿ ವತಿಯಿಂದ ನೈರುತ್ಯ ಪದವೀಧರ ಕ್ಷೇತ್ರದ ಮತದಾರರೊಂದಿಗೆ ಜಿಲ್ಲಾ ಬಂಜಾರ ಸಭಾಭವನದಲ್ಲಿ ಸಮಾವೇಶ ನಡೆಸಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರ ಪರವಾಗಿ ಮತ ಯಾಚಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮಾಂತರ ಮಾಜಿ ಶಾಸಕ ಕೆ.ಬಿ.ಅಶೋಕ್ ನಾಯ್ಕ್, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ವಿಧಾನ ಪರಿಷತ್ ಸದಸ್ಯರಾದ ಎಸ್. ರುದ್ರೆಗೌಡ್ರು, ಡಿ.ಎಸ್.ಅರುಣ್, ರಾಜ್ಯ ಪ್ರಕೋಷ್ಟಗಳ ಸಂಯೋಜಕ ಎಸ್.ದತ್ತಾತ್ರಿ, ತಾಲ್ಲೂಕು ಅಧ್ಯಕ್ಷ ಸಿಂಗನಹಳ್ಳಿ ಸುರೇಶ್, ಜಿ.ಪಂ ಮಾಜಿ ಅಧ್ಯಕ್ಷ ಬಸವರಾಜಪ್ಪ, ಜಿ.ಪಂ ಮಾಜಿ ಸದಸ್ಯರಾದ ತಮ್ಮಡಿಹಳ್ಳಿ ನಾಗರಾಜ್, ಕೆಎಂಎಫ್ ನಿರ್ದೇಶಕರಾದ ದಿನೇಶ್ ಬುಳ್ಳಾಪುರ, ಜಿ.ಪಂ ಮಾಜಿ ಸದಸ್ಯರಾದ ವೀರಭದ್ರಪ್ಪ ಪೂಜಾರ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಗಣೇಶ್ ಪಿಳ್ಳಂಗಿರಿ, ಜಿಲ್ಲಾ ಉಪಾಧ್ಯಕ್ಷರಾದ ಅಣ್ಣಪ್ಪ, ಮಹಿಳಾ ಮೋರ್ಚಾ ಅಧ್ಯಕ್ಷ ನಾಗರತ್ನ ಪ್ರಕಾಶ್, ಜಿ.ಪಂ ಸದಸ್ಯರಾದ ಪ್ರೇಮಾ ಸುಧಾಕರ್, ತಮಿಳು ಸಮಾಜದ ಮುಖಂಡ ಪೆರುಮಾಳ್, ಮಾಜಿ ತಾಲ್ಲೂಕು ಅಧ್ಯಕ್ಷ ಭಾಗ್ಯ ಜಗದೀಶ್, ಬಿಜೆಪಿ ಯುವ ಮುಖಂಡ…
ಲೇಖಕ: admin
ಪುತ್ತೂರು ಮೇ 31 NEWS DESK : ಎನ್.ಡಿ.ಎ ಮೈತ್ರಿಕೂಟದ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಭೋಜೇಗೌಡ ಹಾಗೂ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಪರ ಪುತ್ತೂರಿನ ಶಾಲಾ ಕಾಲೇಜುಗಳಲ್ಲಿ ಬಿರುಸಿನ ಪ್ರಚಾರ ನಡೆಯಿತು. ಪುತ್ತೂರಿನ ವಕೀಲರ ಸಂಘ, ಪುತ್ತೂರಿನ ನೆಹರುನಗರದ ವಿವೇಕಾನಂದ ಪದವಿಪೂರ್ವ ಕಾಲೇಜು, ಪದವಿ ಕಾಲೇಜು, ಇಂಜಿನಿಯರಿಂಗ್ ಕಾಲೇಜು, ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ, ಆಂಗ್ಲ ಮಾಧ್ಯಮ, ನರೇಂದ್ರ ಪದವಿಪೂರ್ವ ಕಾಲೇಜು, ಅಂಬಿಕಾ ಪದವಿಪೂರ್ವ ಹಾಗೂ ಪದವಿ ಕಾಲೇಜು, ಸಂತ ಫಿಲೋಮಿನಾ ಕಾಲೇಜು, ಜೂನಿಯರ್ ಕಾಲೇಜು ಕೊಂಬೆಟ್ಟು, ಸುಧಾನ ವಸತಿಯುತ ಶಾಲೆ ಮಂಜಲ್ಪಡ್ಪು, ಸಂಪ್ಯ ಅಕ್ಷಯ ಕಾಲೇಜಿನ ಶಿಕ್ಷಕರು ಹಾಗೂ ಶಿಕ್ಷಕೇತರರೊಂದಿಗೆ ಮತಯಾಚಿಸಿದರು. ಬಿಜೆಪಿ ಮುಖಂಡ ಅರುಣ್ ಪುತ್ತಿಲ, ಪುತ್ತೂರು ಬಿಜೆಪಿ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರಸಭಾ ಅಧ್ಯಕ್ಷ ಜೀವಂದರ್ ಜೈನ್, ಪ್ರಸನ್ನ ಮಾರ್ತ , ನಿತೀಶ್ ಶಾಂತಿವನ, ಯುವರಾಜ್ ಪೆರಿಯೋತ್ತಡಿ, ಅಜಿತ್ ಬಲ್ನಾಡು ಸಹಿತ ಹಲವರು ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡರು.
ಮಡಿಕೇರಿ ಮೇ 31 NEWS DESK : ವಯೋನಿವೃತ್ತಿ ಹೊಂದಿದ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನ ಮುಖ್ಯ ಕಾಯ೯ನಿವ೯ಹಣಾಧಿಕಾರಿ ಉಮಾಕಾಂತ್, ಸಹಕಾರ ಸಂಘಗಳ ಜಂಟಿ ನಿಬಂಧಕರು ಹಾಗೂ ಕೊಡಗು ಜಿಲ್ಲೆಯ ಸಹಕಾರ ಸಂಘಗಳ ಸಹಾಯಕ ಎಂ.ಇ ಮೋಹನ್ ಅವರಿಗೆ ಡಿಸಿಸಿ ಬ್ಯಾಂಕ್ ನ ಆಡಳಿತ ಮಂಡಳಿ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು. ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಅಧ್ಯಕ್ಷ ಬಾಂಡ್ ಗಣಪತಿ, ಉಪಾಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ ಸೇರಿದಂತೆ ಬ್ಯಾಂಕ್ ನಿದೇ೯ಶಕರು, ಸಿಬ್ಬಂದಿ ವಗ೯ ಹಾಜರಿದ್ದು, ಉಮಾಕಾಂತ್ ಮತ್ತು ಮೋಹನ್ ಅವರು ಬ್ಯಾಂಕ್ ನ ಶ್ರೆಯೋಭಿವೖದ್ದಿಗಾಗಿ ನೀಡಿದ ಕೊಡುಗೆಯನ್ನು ಸ್ಮರಿಸಿದರು.
ಮಡಿಕೇರಿ ಮೇ 31 NEWS DESK : ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಅಡಿಕೆ ಮತ್ತು ಕರಿಮೆಣಸು ಬೆಳೆಗೆ ವಿಮೆ ಪಾವತಿ ಮಾಡಿದ್ದರೂ ವಿಮಾ ಸಂಸ್ಥೆ ಬೆಳೆಗಾರರ ಖಾತೆಗೆ ವಿಮಾ ಮೊತ್ತವನ್ನು ಪಾವತಿ ಮಾಡುತ್ತಿಲ್ಲವೆಂದು ಆರೋಪಿಸಿ ಮಡಿಕೇರಿ ತಾಲ್ಲೂಕು ಮೂರ್ನಾಡುವಿನ ಮುತ್ತಾರ್ಮುಡಿ ಕುಂಬಳದಾಳು ಗ್ರಾಮದ ಬೆಳೆಗಾರರು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರಿಗೆ ದೂರು ನೀಡಿದ್ದಾರೆ. ಬೆಳೆಗಾರರ ಪರವಾಗಿ ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಬೆಳೆಗಾರರಾದ ತೆಕ್ಕಡೆ ಆರ್.ಸುನಂದ ಹಾಗೂ ದೇವಜನ ಕೆ.ಉತ್ತಯ್ಯ ಅವರು ವಿಮಾ ಸಂಸ್ಥೆಯಿಂದ ಬೆಳೆಗಾರರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು. 2023-24ನೇ ಸಾಲಿನಲ್ಲಿ ಬ್ಯಾಂಕ್ ಖಾತೆಯಿಂದ ಅಡಿಕೆ ಮತ್ತು ಕರಿಮೆಣಸು ಬೆಳೆಗೆ ವಿಮಾ ಸಂಸ್ಥೆಗೆ ಪ್ರೀಮಿಯಂ ಮೊತ್ತವನ್ನು ಪಾವತಿಸಲಾಗಿದೆ. ಇದೇ ಸಾಲಿನಲ್ಲಿ ಮಡಿಕೇರಿ ತಾಲ್ಲೂಕು ಸೇರಿದಂತೆ ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಸರಕಾರವೇ ಘೋಷಣೆ ಮಾಡಿದೆ. ಕಳೆದ ಸಾಲಿನ ಮಳೆಗಾಲದಲ್ಲಿ ಮಳೆ ಬಾರದೆ ಅಡಿಕೆ ಮತ್ತು ಕರಿಮೆಣಸು ಬೆಳೆ ಸಂಪೂರ್ಣವಾಗಿ ನಾಶವಾಗಿದೆ. ಸಕಾಲದಲ್ಲಿ ಬೆಳೆ ಸರಿಯಾಗಿ ಕೈಗೆ ಬಾರದೆ ಬ್ಯಾಂಕ್ ಸಾಲಕ್ಕೆ…
ಕುಶಾಲನಗರ ಮೇ 31 NEWS DESK : ಉತ್ತರ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024-25 ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವದಲ್ಲಿ ಉಭಯ ಶಾಲೆಗಳ ಮಕ್ಕಳು ವಿನೂತನ ರೀತಿಯಲ್ಲಿ ಶಾಲೆಗೆ ಆಗಮಿಸಿದ್ದು, ಗ್ರಾಮಸ್ಥರು ಗಮನ ಸೆಳೆಯಿತು. ಗ್ರಾಮಸ್ಥರು ಮಕ್ಕಳ ಸಂಭ್ರಮಕ್ಕೆ ಸಾಕ್ಷಿಯಾದರು. ಶಾಲಾ ಪ್ರಾರಂಭೋತ್ಸವದ ಮೊದಲ ದಿನ ಕೂಡ್ಲೂರು ಗ್ರಾಮದಲ್ಲಿ ಉಭಯ ಶಾಲೆಯ ವತಿಯಿಂದ ಜಂಟಿಯಾಗಿ ಏರ್ಪಡಿಸಿದ್ದ ಎತ್ತಿನ ಗಾಡಿಯ ಮೆರವಣಿಗೆ ಮೂಲಕ ಶಾಲೆಗೆ ಆಗಮಿಸಿದ ಮಕ್ಕಳಿಗೆ ಶಿಕ್ಷಕರು ಹೂವು ಹಾಗೂ ಸಿಹಿ ವಿತರಿಸಿ ಸ್ವಾಗತಿಸಿ ಶಾಲೆಗೆ ಬರಮಾಡಿಕೊಂಡರು. ಜಾನಪದ ಸಂಸ್ಕೃತಿಯ ಪ್ರತೀಕವಾದ ಎತ್ತಿನ ಗಾಡಿಯನ್ನು ಏರಿದ ಮಕ್ಕಳು ಸರ್ಕಾರಿ ಶಾಲೆಗೆ ಹೋಗೋಣ ಬನ್ನಿ, ಸರ್ಕಾರಿ ಶಾಲೆ ನಮ್ಮ ಹೆಮ್ಮೆ, ಸರ್ಕಾರಿ ಶಾಲೆ ನಮ್ಮೂರ ಶಾಲೆ, ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸೋಣ ಬನ್ನಿ, ‘ಶಿಕ್ಷಣವೇ ಶಕ್ತಿ’ ಎಂಬಿತ್ಯಾದಿ ಘೋಷಣೆಗಳ ಫಲಕಗಳನ್ನು ಹಿಡಿದು ಎತ್ತಿನ ಗಾಡಿಯ ಮೂಲಕ ಸಂಭ್ರಮದಿಂದ…
ವಿರಾಜಪೇಟೆ ಮೇ 31 NEWS DESK : ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನ ಬಿ.ಎಸ್.ಸಿ ವಿದ್ಯಾರ್ಥಿನಿ ಪಿ.ವಿ.ವಿನಿಷಾ ಆರು ಸೆಮಿಸ್ಟರ್ ಪರೀಕ್ಷೆಗಳಲ್ಲಿ 4200 ಅಂಕಗಳಿಗೆ 4086 ಅಂಕಗಳನ್ನು ಪಡೆದು ಶೇ. 97.29 ರಷ್ಟು ಸಾಧನೆ ಮಾಡಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಆರನೇ ರ್ಯಾಂಕ್ ಪಡೆದು ಕೊಡಗು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ವಿನಿಷಾ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ.ಆರ್.ವಿಜಯ್ ಹಾಗೂ ಕೆ.ವಿದ್ಯಾ ದಂಪತಿಗಳ ಪುತ್ರಿ. ಪ್ರಸ್ತುತ ವಿನಿಷಾ ಮೈಸೂರಿನ ಜೆ. ಎಸ್. ಎಸ್. ಶಿಕ್ಷಣ ಸಂಸ್ಥೆಯಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿನಿ ವಿನಿಷಾ ಸಾಧನೆಯನ್ನು ಸೆಂಟ್ ಆನ್ಸ್ ಪದವಿ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಶ್ಲಾಘಿಸಿದ್ದಾರೆ.
ಹುಣುಸೂರು ಮೇ 31 NEWS DESK : ಜಾನುವಾರುಗಳನ್ನು ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸಲು ಯತ್ನಿಸುತ್ತಿದ್ದ ಪ್ರಕರಣವನ್ನು ಹುಣುಸೂರು ಪೊಲೀಸರು ಬೇಧಿಸಿದ್ದಾರೆ. ಸುಮಾರು 40 ಗೋವುಗಳನ್ನು ರಕ್ಷಿಸಿರುವ ಪೊಲೀಸರು ಮೂರು ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಹುಣಸೂರು ತಾಲ್ಲೂಕಿನ ರತ್ನಪುರಿಯ ಮನೆಯೊಂದರ ಪಕ್ಕದ ಗೋದಾಮಿನಲ್ಲಿ ಜಾನುವಾರುಗಳು ಪತ್ತೆಯಾಗಿವೆ. ಜಾನುವಾರುಗಳನ್ನು ತುಂಬಿದ್ದ ಹಾಲಿನ ವಾಹನ ಸೇರಿದಂತೆ ಮೂರು ಗೋಡ್ಸ್ ವಾಹನಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಮೇರೆಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ನಂದಿನಿ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಗೋಪಾಲಕೃಷ್ಣರ ಮಾರ್ಗದರ್ಶನದಲ್ಲಿ ಹುಣಸೂರು ನಗರ ಠಾಣಾಧಿಕಾರಿಗಳಾದ ಸಂತೋಷ್ ಕಶ್ಯಪ್, ರಾಮಚಂದ್ರನಾಯ್ಕ, ಅಚ್ಚುತ್ತನ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದರು.
ಮಡಿಕೇರಿ ಮೇ 31 NEWS DESK : ಕೊಡಗು ಪ್ರೆಸ್ ಕ್ಲಬ್ 2023-24 ನೇ ಸಾಲಿನ ಮಹಾಸಭೆ, ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಬೆಳ್ಳಿ ಮಹೋತ್ಸವದ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮ ಜೂ.2 ರಂದು ನಡೆಯಲಿದೆ. ಜೂ.2 ರಂದು ಬೆಳಗ್ಗೆ 10.30 ಗಂಟೆಗೆ ಪ್ರೆಸ್ ಕ್ಲಬ್ ವಾರ್ಷಿಕ ಮಹಾಸಭೆ ನಡೆಯಲಿದೆ. 12 ಗಂಟೆಗೆ ವಾರ್ಷಿಕ ಪ್ರಶಸ್ತಿ ಪ್ರದಾನ, ಸಾಧಕರಿಗೆ ಸನ್ಮಾನ ಹಾಗೂ ಬೆಳ್ಳಿ ಮಹೋತ್ಸವದ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಸ್ಮರಣಸಂಚಿಕೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ಶಾಸಕರಾದ ಎ.ಎಸ್.ಪೊನ್ನಣ್ಣ ಬಿಡುಗಡೆ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಉದ್ಯಮಿ ನಾಪಂಡ ಮುದ್ದಪ್ಪ, ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿಯ ಅಧ್ಯಕ್ಷರಾದ ಡಾ.ಉಳ್ಳಿಯಡ ಎಂ.ಪೂವಯ್ಯ, ಮಹಾಪೋಷಕರಾದ ಜಿ.ರಾಜೇಂದ್ರ, ಗೌರವ ಅಧ್ಯಕ್ಷರಾದ ಬಿ.ಆರ್ ಸವಿತಾ ರೈ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್ ಗುಹ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಮೇ 31 NEWS DESK : ಜಿಲ್ಲೆಯ ವಿವಿಧ ಶಾಲೆಗಳಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಶಿಕ್ಷಕರು ವಿದ್ಯಾರ್ಥಿಗಳಿಗೆ ಹೂ ನೀಡಿ, ಸಿಹಿ ಹಂಚಿ ಬರಮಾಡಿಕೊಂಡರು. ಪ್ರಾರಂಭೋತ್ಸವದ ಅಂಗವಾಗಿ ಶಾಲೆಯನ್ನು ತಳಿರು ತೋರಣ ಹಾಗೂ ಹೂವುಗಳಿಂದ ಶೃಂಗರಿಸಲಾಗಿತ್ತು. ನಗರದ ಸಂತ ಮೈಕಲರ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಹೂವು ನೀಡುವುದರ ಮೂಲಕ ಸ್ವಾಗತಿಸಿ, ಸಿಹಿ ಹಂಚಿದರು.
ಮಡಿಕೇರಿ ಮೇ 31 NEWS DESK : ರಾಜ್ಯ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಜಿಲ್ಲಾ ರೈತ ಮೋರ್ಚಾದಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು. ನಗರದ ಕೃಷಿ ಅಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ರೈತ ಮೋರ್ಚಾದ ಪ್ರಮುಖರು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯದಲ್ಲಿ ರೈತರ ಸಂಕಷ್ಟದ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಕಾಳಜಿ ಇಲ್ಲ ಎಂದು ಆರೋಪಿಸಿದರು. ರಾಜ್ಯ ರೈತ ಮೋರ್ಚಾದ ಕಾರ್ಯದರ್ಶಿ ಡಾ.ಬಿ.ಸಿ.ನವೀನ್ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಬಿಜೆಪಿ ಜಿಲ್ಲಾ ವಕ್ತಾರ ಮಹೇಶ್ ಜೈನಿ, ಬಿಜೆಪಿ ಮಡಿಕೇರಿ ನಗರಾಧ್ಯಕ್ಷ ಮನು ಮಂಜುನಾಥ್, ಬಿಜೆಪಿ ಎಸ್ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ, ಪ್ರಮುಖರಾದ ತಳೂರು ಕಿಶೋರ್ ಕುಮಾರ್, ರಾಬೀನ್ ದೇವಯ್ಯ, ಜಗದೀಶ್, ಬೊಳ್ಳಜಿರ ಬಿ.ಅಯ್ಯಪ್ಪ ಹಾಗೂ ಮತ್ತಿತರ ಕಾರ್ಯಕರ್ತರು ಪಾಲ್ಗೊಂಡಿದ್ದರು.






