ಲೇಖಕ: admin

ಬೆಂಗಳೂರು ಜೂ.14 NEWS DESK : ವಿಶ್ವ ರಕ್ತದಾನಿಗಳ ದಿನಾಚರಣೆಯ ಪ್ರಯುಕ್ತ ಭಾರತೀಯ ಸೇನೆ, ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಮತ್ತು ಲಯನ್ಸ್ ಕ್ಲಬ್ ಬ್ಲಡ್ ಬ್ಯಾಂಕ್‌ಗಳ ಸಹಯೋಗದೊಂದಿಗೆ ಬಾಣಸವಾಡಿ ಮಿಲಿಟರಿ ನಿಲ್ದಾಣದಲ್ಲಿ  ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಗ್ಯಾರಿಸನ್ ಕಮಾಂಡರ್, ಭಾರತೀಯ ಸೇನೆಯು ಸಮಾಜ ಕಲ್ಯಾಣಕ್ಕೆ ಅಚಲವಾದ ಬದ್ಧತೆ ಮತ್ತು ಮಾನವೀಯ ಗುಣಗಳನ್ನು ಹೊಂದಿದೆ ಎಂದರು. ಜೀವ ಉಳಿಸುವಲ್ಲಿ ರಕ್ತದಾನದ ಮಹತ್ವವನ್ನು ವಿವರಿಸಿದ ಅವರು, ಪ್ರತಿಯೊಬ್ಬರೂ ರಕ್ತದಾನವನ್ನು ತಮ್ಮ ಜೀವನದ ಒಂದು ಭಾಗವಾಗಿ ಮಾಡಿಕೊಳ್ಳುವಂತೆ ಪ್ರೋತ್ಸಾಹಿಸಿದರು. ಬಾಣಸವಾಡಿ ಮಿಲಿಟರಿ ಠಾಣೆಯ ರಕ್ತದಾನ ಅಭಿಯಾನವು ಆರೋಗ್ಯ ಮತ್ತು ಕಲ್ಯಾಣ ಉಪಕ್ರಮಗಳನ್ನು ಬೆಂಬಲಿಸಲು ಭಾರತೀಯ ಸೇನೆಯ ನಿರಂತರ ಪ್ರಯತ್ನಗಳಿಗೆ ಸಾಕ್ಷಿಯಾಗಿದೆ. ಇದು ವೈದ್ಯಕೀಯ ಸೌಲಭ್ಯಗಳಿಗೆ ಹೆಚ್ಚು ಅಗತ್ಯವಿರುವ ಸಂಪನ್ಮೂಲಗಳನ್ನು ಒದಗಿಸುವುದು ಮಾತ್ರವಲ್ಲದೆ ನಾಗರಿಕ ಕರ್ತವ್ಯ ಮತ್ತು ಸಹಾನುಭೂತಿಯ ಪ್ರಬಲ ಉದಾಹರಣೆಯಾಗಿದೆ ಎಂದು ತಿಳಿಸಿದರು. ಭಾರತೀಯ ಸೇನೆಯು ಆರೋಗ್ಯಕರ ಮತ್ತು ಹೆಚ್ಚು ಸ್ಥಿತಿಸ್ಥಾಪಕ ಸಮಾಜಕ್ಕೆ ಕೊಡುಗೆ ನೀಡುವ ಪ್ರಯತ್ನಗಳಲ್ಲಿ ಸಕ್ರಿಯವಾಗಿ…

Read More

ಬೆಂಗಳೂರು ಜೂ.14 NEWS DESK : ಕಾಳು ಮೆಣಸಿನ ದರ ದೇಶದ ಮಾರುಕಟ್ಟೆಯಲ್ಲಿ ಏರುಮುಖವಾಗಿ ಸಾಗುತ್ತಿದೆ. ಕಳೆದ ಜನವರಿ ತಿಂಗಳಿನಲ್ಲಿ ಕಿಲೋಗೆ 500-520 ರ ಸಮೀಪ ಇದ್ದ ಕಾಳು ಮೆಣಸಿನ ದರ ಈಗ ಕೆಜಿಗೆ 700 ಕ್ಕೆ ತಲುಪಿದೆ. ಬುಧವಾರ ಕೊಚಿನ್‌, ಸಕಲೇಶಪುರ ಹಾಗೂ ಚಿಕ್ಕಮಗಳೂರಿನ ಮಾರುಕಟ್ಟೆಗಳಲ್ಲಿ ಕಾಳು ಮೆಣಸು 700 ರೂಪಾಯಿಗಳವರೆಗೆ ಮಾರಾಟವಾಯಿತು. ಕೊಡಗಿನ ವಿವಿದ ಪಟ್ಟಣಗಳಲ್ಲಿ ಮೆಣಸಿನ ಬೆಲೆ 680-695 ರ ವರೆಗೆ ಇತ್ತು. ಈ ಮೊದಲು 2018 ರಲ್ಲಿ ಮೆಣಸು ಸರ್ವಕಾಲಿಕ ದಾಖಲೆಯ 800 ರೂಪಾಯಿಗಳ ವರೆಗೆ ತಲುಪಿತ್ತು. ನಂತರ ವಿಯಟ್ನಾಂ ಮತ್ತು ಶ್ರೀಲಂಕಾದಿಂದ ಅಗ್ಗದ ಕಾಳು ಮೆಣಸು ಆಮದಾಗಿ ಅಂತರ್ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರತದ ಕಾಳು ಮೆಣಸಿಗೆ ಬೇಡಿಕೆ ಕಡಿಮೆಯಾಗಿ ಬೆಲೆ ಕುಸಿತ ಕಂಡಿದ್ದು ಬೆಳೆಗಾರರಲ್ಲಿ ಆತಂಕವನ್ನೂಮೂಡಿಸಿತ್ತು.ಇದೀಗ ಬೆಲೆ ಮತ್ತೆ ಏರುಮುಖವಾಗುತ್ತಿರುವುದು ಬೆಳೆಗಾರರ ಮುಖದಲ್ಲಿ ಮಂದಹಾಸವನ್ನು ಮೂಡಿಸಿದೆ. ವಿಶ್ವದಲ್ಲಿ ವಿಯಟ್ನಾಂ ಕಾಳು ಮೆಣಸು ಬೆಳೆಯ ಅತ್ಯಂತ ದೊಡ್ಡ ಉತ್ಪಾದಕನಾಗಿದ್ದು 2019 ರಲ್ಲಿ ಸುಮಾರು ಮೂರು ಲಕ್ಷ ಟನ್‌…

Read More

ಬೆಂಗಳೂರು ಜೂ.14 NEWS DESK : ರಾಜ್ಯದ ವಕೀಲ ಸಮುದಾಯವನ್ನು ಸಂಭವನೀಯ ಹಲ್ಲೆ , ಬೆದರಿಕೆ , ಕಿರುಕುಳದಂತಹ ಕೃತ್ಯಗಳಿಂದ ರಕ್ಷಿಸಲು ರಾಜ್ಯ ಸರ್ಕಾರವು “ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಅಧಿನಿಯಮ-2023′ Karnataka Prohibition of violence against advocates act ̳̄2023(KPVA act) ಜಾರಿಗೆ ತಂದಿದೆ. ಈ ಕುರಿತು ಜೂನ್‌ 10ರಂದು ರಾಜ್ಯ ಸರ್ಕಾರವು ಗೆಜೆಟ್‌ ಅಧಿಸೂಚನೆ ಹೊರಡಿಸಿದ್ದು ನೂತನ ಕಾಯ್ದೆ , ಆ ದಿನದಿಂದಲೇ ಜಾರಿಗೆ ಬರಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಿದೆ. ಅದರಂತೆ, ಇನ್ನು ಮುಂದೆ ವಕೀಲರು ತಮ್ಮ ವೃತ್ತಿಪರ ಕರ್ತವ್ಯಗಳನ್ನು ನಿರ್ವಹಿಸುತ್ತಿರುವಾಗ ಅವರ ಮೇಲೆ ಹಲ್ಲೆ ನಡೆಸುವುದು, ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಬೆದರಿಕೆ ಹಾಕುವುದು ಅಥವಾ ಕಿರುಕುಳ ನೀಡುವುದು ನಿಷೇಧಿಸಲಾಗಿದ್ದು, ಒಂದೊಮ್ಮೆ ಇಂತಹ ಕೃತ್ಯಗಳು ನಡೆದಲ್ಲಿ ಅದು ಶಿಕ್ಷಾರ್ಹ ಅಪರಾಧವಾಗಲಿದೆ. ತಮ್ಮ ಕರ್ತವ್ಯವನ್ನು ನಿರ್ವಹಿಸುವಾಗ, ವಕೀಲರು ಪ್ರತಿವಾದಿ ಕಕ್ಷಿದಾರರ ದುರುದ್ದೇಶಪೂರಿತ ಮತ್ತು ನಿಷ್ಪ್ರಯೋಜಕ ಕಾನೂನು ಕ್ರಮಕ್ಕೆ ಗುರಿಯಾಗುತ್ತಾರೆ, ಅದು ಅವರ ಕರ್ತವ್ಯಗಳ ಕಾರ್ಯಕ್ಷಮತೆ ಮತ್ತು ನ್ಯಾಯದ ಆಡಳಿತಕ್ಕೆ…

Read More

ಮಡಿಕೇರಿ ಜೂ.14 NEWS DESK : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ನೂತನ ಸಂಸದ ಯದುವೀರ್ ಅವರು ಜೂ.15 ಮತ್ತು 16 ರಂದು ಕೊಡಗು ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದಾರೆ. ಜೂ.15ರ ಬೆಳಗ್ಗೆ 8.30ಕ್ಕೆ ತಲಕಾವೇರಿಯಲ್ಲಿ ಪೂಜೆ ಸಲ್ಲಿಸಲಿರುವ ಯದುವೀರ್ ಅವರು, 10 ಗಂಟೆಗೆ ಭಾಗಮಂಡಲ, 11 ಗಂಟೆಗೆ ನಾಪೋಕ್ಲುವಿನಲ್ಲಿ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 12ಗಂಟೆಗೆ ಪಾಡಿ ಶ್ರೀ ಇಗ್ಗುತಪ್ಪ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಅವರು, 2 ಗಂಟೆಗೆ ಪಾರಾಣೆ, 3.30 ಗಂಟೆಗೆ ಮೂರ್ನಾಡು ಹಾಗೂ 5 ಗಂಟೆಗೆ ನೆಲ್ಲಿಹುದಿಕೇರಿಯಲ್ಲಿ ಸಭೆ ನಡೆಸಲಿದ್ದಾರೆ. ಜೂ.16ರಂದು ಬೆಳಗ್ಗೆ 9.30ಕ್ಕೆ ಹೆಬ್ಬಾಲೆ, 11 ಗಂಟೆಗೆ ಕೊಡ್ಲಿಪೇಟೆ, ಮಧ್ಯಾಹ್ನ 12 ಗಂಟೆಗೆ ಶನಿವಾರಸಂತೆ, 2 ಗಂಟೆಗೆ ಸೋಮವಾರಪೇಟೆ, 3 ಗಂಟೆಗೆ ಮಾದಾಪುರ, 4 ಗಂಟೆಗೆ ಸುಂಟಿಕೊಪ್ಪ ಹಾಗೂ 5 ಗಂಟೆಗೆ ಕುಶಾಲನಗರದಲ್ಲಿ ಸಭೆ ನಡೆಸಲಿರುವುದಾಗಿ ಕೊಡಗು ಜಿಲ್ಲಾ ಬಿಜೆಪಿ ಪ್ರಕಟನೆಯಲ್ಲಿ ತಿಳಿಸಿದೆ.

Read More

ಮಡಿಕೇರಿ ಜೂ.14 NEWS DESK : 2023-24 ನೇ ಸಾಲಿನಲ್ಲಿ ಆಯವ್ಯಯ ಕಂಡಿಕೆ-144 ಘೋಷಣೆಯನ್ವಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯಮಿಗಳು ಪಡೆಯುವ ಸಾಲಕ್ಕೆ ರೂ.2 ಕೋಟಿಗಳವರೆಗೆ ಸಮಾನಾಂತರ ಖಾತರಿ ನೀಡುವ ಯೋಜನೆಯನ್ನು ವಿಸ್ತರಿಸಿ ಆದೇಶಿಸಲಾಗಿದ್ದು ಅರ್ಹ ಅರ್ಜಿದಾರರು ನಿಗದಿತ ಅರ್ಜಿ ನಮೂನೆಯನ್ನು ಸಮಾಜ ಕಲ್ಯಾಣ ಇಲಾಖೆಯಲ್ಲಿ ಪಡೆದುಕೊಳ್ಳುವುದು. ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ತಾಲ್ಲೂಕು. ದೂ.ಸಂ. 08272-225531, ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ತಾಲ್ಲೂಕು. ದೂ.ಸಂ. 9480843155, ಸಹಾಯಕ ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ ತಾಲ್ಲೂಕು. ದೂ.ಸಂ. 08276-281115 ಹಾಗೂ ಸಹಾಯಕ ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ, ವಿರಾಜಪೇಟೆ ತಾಲ್ಲೂಕು ದೂ.ಸಂ. 9480843157 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

Read More

ಮಡಿಕೇರಿ ಜೂ.13 NEWS DESK : ಕೊಡಗು ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಮತ್ತು ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸುವ ಕುರಿತು ಪ್ರವಾಸೋದ್ಯಮ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುವುದಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೊಡಗು ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರವನ್ನು ಮತ್ತಷ್ಟು ಅಭಿವೃಧ್ಧಿ ಪಡಿಸಬೇಕು. ಮೂಲಸೌಲಭ್ಯಗಳನ್ನು ಕಲ್ಪಿಸಬೇಕು, ಪ್ರವಾಸಿಗರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾದಂತೆ ಕ್ರಮಗಳನ್ನು ಕೈಗೊಳ್ಳಬೇಕು ಎಂದರು. ಹೋಂಸ್ಟೇಗಳಿಗೆ ಸಂಬಂಧಿಸಿದಂತೆ ವಾಣಿಜ್ಯ ಬಳಕೆ ಹಾಗೂ ಗೃಹ ಬಳಕೆ ವಿದ್ಯುತ್ ಶುಲ್ಕ ಸಂಬಂಧ ಒಂದೇ ರೀತಿಯ ಡೆಫಿನೇಶನ್ ಇರಬೇಕು. ವಿದ್ಯುತ್ ಶುಲ್ಕ ಸಂಬಂಧ ಪ್ರವಾಸೋದ್ಯಮ ಸಚಿವರು, ಉನ್ನತ ಮಟ್ಟದ ಅಧಿಕಾರಿಗಳು ಹಾಗೂ ಆರು ಜಿಲ್ಲೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು. ಪ್ರವಾಸೋದ್ಯಮದ ಆಕರ್ಷಣೆಗೆ ಸ್ವಚ್ಛತೆ ಕಾಪಾಡುವುದು ಅಗತ್ಯ, ಎಲ್ಲೆಂದರಲ್ಲಿ ಕಸ ಹಾಕಬಾರದು. ಪ್ಲಾಸ್ಟಿಕ್‌ನ್ನು ಕಡ್ಡಾಯವಾಗಿ…

Read More

ಮಡಿಕೇರಿ ಜೂ.13 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನೂತನ ಅಧ್ಯಕ್ಷರಾಗಿ ಸದಾನಂದ ಗೌಡ ಮಾವಜಿ ಅವರು ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ. ನಗರದ ಕಾಫಿ ಕೃಪಾ ಕಟ್ಟಡದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ ರಿಜಿಸ್ಟಾçರ್ ಚಿನ್ನಸ್ವಾಮಿ, ಸಿಬ್ಬಂದಿಗಳಾದ ಜ್ಯೋತಿ, ಶೋಭ ಇದ್ದರು. ಸದಾನಂದಗೌಡ ಮಾವಜಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಳ ತಾಲ್ಲೂಕಿನ ಮಂಡೆಕೋಲು ಗ್ರಾಮದ ಮಾವಜಿ ಕುಟುಂಬದವರಾಗಿದ್ದಾರೆ. ಅಧಿಕಾರ ವಹಿಸಿಕೊಂಡ ಬಳಿಕ ನಗರದ ಜಿಲ್ಲಾಡಳಿತ ಭವನಕ್ಕೆ ತೆರಳಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್‌ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅವರನ್ನು ಭೇಟಿ ಮಾಡಿ ಪರಿಚಯಿಸಿಕೊಂಡರು. ಈ ಸಂದರ್ಭದಲ್ಲಿ ಶಾಸಕರಾದ ಡಾ.ಮಂತರ್‌ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅವರು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ…

Read More

ಮಡಿಕೇರಿ ಜೂ.13 NEWS DESK : ಕರ್ನಾಟಕ ಸರ್ಕಾರದ ಬಸ್ ಸೇವೆಗಳಲ್ಲಿ ಒಂದಾದ ನೂತನ ‘ಅಶ್ವಮೇಧ’ ಬಸ್‌ಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಗುರುವಾರ ಚಾಲನೆ ನೀಡಿದರು. ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಿ ಮಾತನಾಡಿದ ಶಾಸಕರು ಮಡಿಕೇರಿ-ಸೋಮವಾರಪೇಟೆ ಮಾರ್ಗದಲ್ಲಿ ಬೆಂಗಳೂರಿಗೆ ತೆರಳಲು ಸಾರ್ವಜನಿಕರ ಬಹುದಿನದ ಬೇಡಿಕೆಯಾಗಿತ್ತು, ಬೇಡಿಕೆಯನ್ನು ಈಡೇರಿಸಲಾಗಿದೆ ಎಂದರು. ಮಡಿಕೇರಿ ಕೆಎಸ್‌ಆರ್‌ಟಿಸಿ ಘಟಕದಿಂದ ಸೋಮವಾರಪೇಟೆ ಮಾರ್ಗ 3 ಬಸ್‌ಗಳು, ಕುಶಾಲನಗರದಿಂದ 2 ಬಸ್‌ಗಳು ಸಂಚರಿಸುತ್ತಿವೆ. ಮಡಿಕೇರಿ ಕೆಎಸ್‌ಆರ್‌ಟಿಸಿ ಘಟಕದಲ್ಲಿ 97 ಬಸ್‌ಗಳು ವಿವಿಧ ಮಾರ್ಗದಲ್ಲಿ ಸಂಚಾರ ಮಾಡುತ್ತಿವೆ. ಕುಶಾಲನಗರ ಕೆಎಸ್‌ಆರ್‌ಟಿಸಿ ಆರಂಭವಾದ ನಂತರ ಮತ್ತಷ್ಟು ಬಸ್‌ಗಳು ಸಂಚರಿಸಲಿವೆ ಮಡಿಕೇರಿ-ಸೋಮವಾರಪೇಟೆ-ಅರಕಲಗೋಡು-ಚೆನ್ನರಾಯಪಟ್ಟಣ ಮಾರ್ಗ ಪ್ರತಿ ದಿನ ಬೆಳಗ್ಗೆ 10.15 ಗಂಟೆಗೆ ಹೊರಟು ಸಂಜೆ 4.45 ಗಂಟೆಗೆ ಬೆಂಗಳೂರು ತಲುಪಲಿದೆ ಎಂದು ಶಾಸಕರು ಮಾಹಿತಿ ನೀಡಿದರು. ಮಡಿಕೇರಿ ಕೆಎಸ್‌ಆರ್‌ಟಿಸಿ ಘಟಕದ ವ್ಯವಸ್ಥಾಪಕರಾದ ವೀರಭದ್ರಸ್ವಾಮಿ, ಸಂಚಾರಿ ನಿಯಂತ್ರಕರು ಮತ್ತಿತರರು ಇದ್ದರು.

Read More

ಸುಂಟಿಕೊಪ್ಪ ಜೂ.13 NEWS DESK : ಹರದೂರು ಅಂಚೆ ಕಚೇರಿಯಲ್ಲಿ ಕಳೆದ 42 ವರ್ಷಗಳಿಂದ ಪೋಸ್ಟ್ ಮಾಸ್ಟರಾಗಿ ಸೇವೆ ಸಲ್ಲಿಸುತ್ತಿದ್ದ ಬಿ.ಬಿ.ಜಿನ್ನಪ್ಪ ಅವರು ನಿವೃತ್ತಿ ಹೊಂದಿದ್ದು, ಅವರ ಸೇವೆಯನ್ನು ಸ್ಮರಿಸಿ ಹರದೂರು ಗ್ರಾಮಸ್ಥರು ಬೀಳ್ಕೊಡುಗೆ ನೀಡಿದರು. ಗ್ರಾಮದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಹರದೂರು, ಗರಗಂದೂರು ಗ್ರಾಮಸ್ಥರು ಬಿ.ಬಿ.ಜಿನ್ನಪ್ಪ ಅವರನ್ನು ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭ ಮಾತನಾಡಿದ ಗ್ರಾ.ಪಂ ಸದಸ್ಯ ಎ.ಸಿ.ಸುಬ್ಬಯ್ಯ, ಬಿ.ಬಿ.ಜಿನ್ನಪ್ಪ ಅವರು ಗ್ರಾಮ ವ್ಯಾಪ್ತಿಯಲ್ಲಿ ಉತ್ತಮ ಸೇವೆ ಸಲ್ಲಿಸಿ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ. ಈ ಭಾಗದ ಜನರ ಸಂಕಷ್ಟಕ್ಕೆ ನೆರವಾಗಿದ್ದಾರೆ. ಸಮಾಜ ಸೇವೆಯಲ್ಲಿ ಮುಂದಾಗಿದ್ದ ಇವರ ನಿವೃತ್ತಿ ಜೀವನ ಸುಖಕರವಾಗಿರಲೆಂದು ಹಾರೈಸಿದರು. ಗ್ರಾಮಸ್ಥರಾದ ಚಂಗಪ್ಪ ಮಾತನಾಡಿ, ಪೋಸ್ಟ್ ಮಾಸ್ಟರಾಗಿ ನಗು ನಗುತ್ತಾ ಕಾರ್ಯನಿರ್ವಹಿಸುತ್ತಿದ್ದರು.     ಜನರ ಸೇವೆಯಲ್ಲಿ ಮುಂದಾಗಿದ್ದ ಇವರು ಎಲ್ಲರೊಂದಿಗೆ ಬೆರೆತು ಜನರ ಕಷ್ಟಗಳಿಗೆ ನೆರವಾಗುತ್ತಿದ್ದರು ಇವರ ಸೇವೆ ಸ್ಮರಣೀಯ ಎಂದರು. ಈ ಸಂದರ್ಭ ಗ್ರಾಮಸ್ಥರಾದ ಎ.ಸಿ.ಪೊನ್ನಪ್ಪ, ಎಂ.ಎ.ವಸಂತ, ರಾಘವೇಂದ್ರ ಭಟ್, ಉಮೇಶ್‍ಚಂದ್ರ(ಪವಿ), ಸತೀಶ್‍ಚಂದ್ರ, ಎಸ್.ವಿಶ್ವನಾಥ್, ಶ್ರುತಿ ವಿಸ್ವನಾಥ್ ಹಾಗೂ…

Read More

ಮಡಿಕೇರಿ ಜೂ.13 NEWS DESK : ರಾಷ್ಟ್ರೀಯ ಸಮಗ್ರತೆ ಮತ್ತು ಶಾಂತಿಯ ಸಂದೇಶವನ್ನು ಸಾರುವ ನಿಟ್ಟಿನಲ್ಲಿ ಜುಲೈನಲ್ಲಿ ಕೊಡಗಿನಿಂದ ಕನ್ಯಾಕುಮಾರಿಯವರೆಗೆ ಪಾದಯಾತ್ರೆ ಹಮ್ಮಿಕೊಂಡಿರುವುದಾಗಿ ಉಡುಪಿಯ ಕಡೆಕಾರ್ ನಿವಾಸಿ ಜಯಪ್ರಕಾಶ್ ಶೆಟ್ಟಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಿಂದ ಜುಲೈ ಎರಡನೇ ವಾರದಲ್ಲಿ ಪಾದಯಾತ್ರೆ ಆರಂಭಿಸಲಿದ್ದೇನೆ. 40 ದಿನಗಳಲ್ಲಿ 900 ಕಿ.ಮೀ ಕ್ರಮಿಸುವ ಉದ್ದೇಶವಿದ್ದು, ಪಾದಯಾತ್ರೆಯ ಸಮಯದಲ್ಲಿ ಕಾಂಗ್ರೆಸ್ ಮುಖಂಡರಾಗಿದ್ದ ದಿ.ಆಸ್ಕರ್ ಫೆರ್ನಾಂಡಿಸ್‍ ಬೆಂಬಲಿಗರು ನನ್ನೊಂದಿಗೆ ಪಾಲ್ಗೊಳ್ಳುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು. ದಿವಂಗತ ಆಸ್ಕರ್ ಫೆರ್ನಾಂಡಿಸ್‍ರ ಸರಳತೆ ಮತ್ತು ಸತ್ಯ ನಿಷ್ಟತೆಗೆ ಈ ಪಾದಯಾತ್ರೆಯನ್ನು ಅರ್ಪಿಸುತ್ತಿದ್ದು, ಜಾತ್ಯತೀತವಾಗಿ ಮತ್ತು ಪಕ್ಷಾತೀತವಾಗಿ ಯಾತ್ರೆಯನ್ನು ಕೈಗೊಂಡಿರುವುದಾಗಿ ಹೇಳಿದರು. 2017ರಲ್ಲಿ ಉಡುಪಿಯಿಂದ ಮುಂಬೈಗೆ 32 ದಿನಗಳ 1050 ಕಿ.ಮೀ. ದೂರದ ಪಾದಯಾತ್ರೆ, ಸಾಬರಮತಿಯಿಂದ ದಂಡಿಗೆ 14 ದಿನಗಳಲ್ಲಿ 410 ಕಿ.ಮೀ. ಮತ್ತು ದೆಹಲಿಯಿಂದ ವಾಘಾ-ಅಟ್ಟಾರಿ ಗಡಿಯವರೆಗೆ 16 ದಿನಗಳಲ್ಲಿ 500 ಕಿ.ಮೀ. ಪಾದಯಾತ್ರೆ ನಡೆಸಿರುವುದಾಗಿ ಮಾಹಿತಿ ನೀಡಿದ ಜಯಪ್ರಕಾಶ್…

Read More