ನಾಪೋಕ್ಲು ಮೇ 31 NEWS DESK : ಸ್ಕೂಟಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಸ್ಕೂಟರ್ ಸವಾರ ಸಾವನ್ನಪ್ಪಿರುವ ಘಟನೆ ಕಾರುಗುಂದದಲ್ಲಿ ನಡೆದಿದೆ. ಕಕ್ಕಬೆ ಯವಕಪಾಡಿಯ ನಿವಾಸಿ ಸಂತೋಷ್ (29 ) ಮೃತ ವ್ಯಕ್ತಿ. ಗಾಂಭೀರ ಗಾಯಗೊಂಡಿದ್ದ ಸಂತೋಷ್ ನನ್ನು ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಸಾವನ್ನಪ್ಪಿದ್ದಾರೆ. ವರದಿ : ದುಗ್ಗಳ ಸದಾನಂದ.
ಲೇಖಕ: admin
ನಾಪೋಕ್ಲು ಮೇ 31 NEWS DESK : ನೆಲಜಿ ಗ್ರಾಮದಲ್ಲಿ ಕಾಡಾನೆಗಳ ಹಿಂಡು ತೋಟಗಳಿಗೆ ದಾಳಿ ಮಾಡಿ ಅಪಾರ ನಷ್ಟ ಸಂಭವಿಸಿದ್ದು, ಬೆಳೆಗಾರರು ಆತಂಕಕ್ಕೆ ಈಡಾಗಿದ್ದಾರೆ. ಬಲ್ಲಮಾವಟ್ಟಿ ಗ್ರಾ.ಪಂ ವ್ಯಾಪ್ತಿಯ ನೆಲಜಿ ಗ್ರಾಮದ ಮೊಣ್ಣಂಡ ಸೀತಮ್ಮ ಮತ್ತು ಅಪ್ಪಯ್ಯ ಅವರ ತೋಟದಲ್ಲಿ ರಾತ್ರಿ ಅಡ್ಡಾಡಿರುವ ಕಾಡಾನೆಗಳು ಬಾಳೆ, ತೆಂಗು, ಅಡಿಕೆ ಸೇರಿದಂತೆ ವಿವಿಧ ಕೃಷಿ ಗಿಡಗಳನ್ನು ನಾಶಪಡಿಸಿವೆ. ಸುತ್ತಮುತ್ತಲ ಕಾಫಿ ಬೆಳೆಗಾರರ ತೋಟಗಳಿಗೂ ಹಾನಿಯಾಗಿದೆ. 3-4 ಕಾಡಾನೆಗಳ ಹಿಂಡು ನಿರಂತರ ತೋಟಗಳಲ್ಲಿ ಹಾನಿ ಉಂಟುಮಾಡುತ್ತಿದ್ದು, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸಿದರು. ಕಾಡಾನೆಗಳನ್ನು ಕಾಡಿಗಟ್ಟಲು ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. – ವರದಿ : ದುಗ್ಗಳ ಸದಾನಂದ.
ಮಡಿಕೇರಿ ಮೇ 30 NEWS DESK : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮತ ಎಣಿಕಾ ಕಾರ್ಯ ಜೂ.4 ರಂದು ಮೈಸೂರಿನ ಪಡುವಾರಹಳ್ಳಿಯ ವಾಲ್ಮೀಕಿ ರಸ್ತೆ ಬಳಿಯ ಮಹಾರಾಣಿ ಮಹಿಳಾ ವಾಣಿಜ್ಯ ಕಾಲೇಜಿನಲ್ಲಿ ನಡೆಯಲಿದ್ದು, ಇದಕ್ಕಾಗಿ ಅಗತ್ಯ ಸಿದ್ಧತಾ ಕಾರ್ಯಗಳನ್ನು ಮಾಡಿಕೊಳ್ಳಲಾಗಿದೆ. ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟ ಕೊಡಗಿನ ಮಡಿಕೇರಿ, ವಿರಾಜಪೇಟೆ ವಿಧಾನ ಸಭಾ ಕ್ಷೇತ್ರ, ಮೈಸೂರು ಜಿಲ್ಲೆಯ ಹುಣಸೂರು, ಚಾಮರಾಜ, ಕೃಷ್ಣರಾಜ, ಚಾಮುಂಡೇಶ್ವರಿ, ಪಿರಿಯಾಪಟ್ಟಣ, ನರಸಿಂಹರಾಜ ಸೇರಿದಮತೆ ಒಟ್ಟು ಎಂಟು ಕ್ಷೇತ್ರಗಳ ಮತಗಳ ಎಣಿಕೆಗೆ ಪ್ರತ್ಯೇಕ ವ್ಯವಸ್ಥೆಗಳನ್ನು ಮಾಡಲಾಗಿದೆ. ಮಡಿಕೇರಿ ಕ್ಷೇತ್ರದ ಮತಗಳ ಎಣಿಕೆಗೆ ಕಾಲೆೆÃಜಿನ ಎರಡನೇ ಮಹಡಿಯ ಕೊಠಡಿ ಸಂಖ್ಯೆ 211 ರಲ್ಲಿ ಮತ್ತು ವಿರಾಜಪೇಟೆ ಕ್ಷೇತ್ರದ ಮತ ಎಣಿಕೆಗೆ ಎರಡನೇ ಮಹಡಿಯ ಕೊಠಡಿ ಸಂಖ್ಯೆ 203 ರಲ್ಲಿ ವ್ಯವಸ್ಥೆ ಮಾಡಲಾಗಿದ. ಮತ ಎಣಿಕೆಯ ದಿನದಂದು ಬೆಳಗ್ಗೆ 7.30 ಗಂಟೆಗೆ ಮೊಹರಾದ ಮತಯಂತ್ರಗಳನ್ನಿಟ್ಟಿರುವ ಭದ್ರತಾ ಕೊಠಡಿಯನ್ನು ತೆರೆಯಲಾಗುತ್ತದೆ. ಬಳಿಕ 8 ಗಂಟೆಗೆ ಮತ ಎಣಿಕಾ ಕಾರ್ಯ ಆರಂಭಗೊಳ್ಳಲಿದೆ. ::: 20 ಸುತ್ತಿನ…
ಕುಶಾಲನಗರ ಮೇ 30 NEWS DESK : ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮೂಲಕ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಈ ವರ್ಷದ ಅಂತ್ಯದೊಳಗೆ ಎರಡು ಗ್ರಾಮಗಳನ್ನು ಪಾನಮುಕ್ತ ಗ್ರಾಮಗಳನ್ನಾಗಿ ಘೋಷಣೆ ಮಾಡುವ ನಿಟ್ಟಿನಲ್ಲಿ ಕಾರ್ಯಯೋಜನೆ ಸಿದ್ಧಪಡಿಸಲಾಗುವುದು ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಫಾಯಸ್ ತಿಳಿಸಿದ್ದಾರೆ. ನಗರದಲ್ಲಿ ನಡೆದ ವೇದಿಕೆಯ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿ, ಮದ್ಯ ಮತ್ತಿತರ ಚಟಗಳಿಂದ ವ್ಯಕ್ತಿಗಳನ್ನು ಮುಕ್ತರನ್ನಾಗಿಸುವಲ್ಲಿ ವೇದಿಕೆ ಯಶಸ್ವಿಯಾಗಿದೆ. ಇದೀಗ ಗ್ರಾಮಗಳನ್ನು ಪರಿವರ್ತನೆ ಮಾಡುವ ಮೂಲಕ ಪಾನಮುಕ್ತ ಗ್ರಾಮ ನಿರ್ಮಾಣ ಮಾಡುವುದು ವೇದಿಕೆಯ ಚಿಂತನೆಯಾಗಿದೆ ಎಂದರು. ಸರಕಾರ ನೂತನ ಮದ್ಯದ ಅಂಗಡಿಗಳಿಗೆ ಅನುಮತಿ ನೀಡಬಾರದು, ಮನೆ ಮನೆಯಲ್ಲಿ ಮಾರಾಟ ಮಾಡುವ ಪ್ರಕರಣಗಳ ಬಗ್ಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ವೇದಿಕೆ ಜಿಲ್ಲಾಧಿಕಾರಿಗಳು, ಅಬಕಾರಿ ಇಲಾಖೆ ಸೇರಿದಂತೆ ಸಂಬAಧಿಸಿದ ಅಧಿಕಾರಿಗಳಿಗೆ ಹಕ್ಕೊತ್ತಾಯ ಮಂಡನೆ ಮಾಡಲಿದೆ ಎಂದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ ಸಾಲ ಕೊಡುತ್ತಿಲ್ಲ. ಬ್ಯಾಂಕ್ ಮೂಲಕ ಸಾಲ ನೀಡುತ್ತಾರೆ.…
ಮಡಿಕೇರಿ ಮೇ 30 NEWS DESK : ಮನೆಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ಮಾಡಿದ ಸಂದರ್ಭ ಬೆಳೆಗಾರರೊಬ್ಬರು ಗಾಳಿಯಲ್ಲಿ ಗುಂಡು ಹಾರಿಸಿ, ಆ ವ್ಯಕ್ತಿಯನ್ನು ಪಾರು ಮಾಡಿದ ಘಟನೆ ಪಾಲಿಬೆಟ್ಟದಲ್ಲಿ ನಡೆದಿದೆ. ಪಾಲಿಬೆಟ್ಟದಿಂದ ಲೂರ್ಡ್ಸ್ ಶಾಲೆ ಬಳಿ ಇರುವ ಮನೆಗೆ ತೆರಳುತ್ತಿದ್ದ ವಾಹನ ಚಾಲಕ ಚಂದ್ರ ಎಂಬುವವರ ಮೇಲೆ ಕಾಡಾನೆ ದಾಳಿ ಮಾಡಿದೆ. ಗಂಭೀರವಾಗಿ ಗಾಯಗೊಂಡಿರುವ ಚಂದ್ರ ಅವರನ್ನು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಂದ್ರ ಅವರು ರಾತ್ರಿ ಮನೆಗೆ ತೆರಳುತ್ತಿದ್ದ ಸಂದರ್ಭ ಕಾಫಿ ತೋಟದಿಂದ ಹಠಾತ್ತನೆ ಬಂದ ಕಾಡಾನೆಯೊಂದು ದಾಳಿ ಮಾಡಿತು. ತಪ್ಪಿಸಿಕೊಳ್ಳಲು ತೋಟದ ಗೇಟ್ನೊಳಗೆ ನುಸಳಿದಾಗ ಕಾಡಾನೆ ಗೇಟ್ ಮುರಿದು ಮತ್ತೆ ದಾಳಿ ಮಾಡಿದೆ. ಚಂದ್ರ ಅವರ ಕಿರುಚಾಟದ ಶಬ್ಧ ಕೇಳಿ ಸಮೀಪದಲ್ಲೇ ಇದ್ದ ಬೆಳೆಗಾರ ಕುಟ್ಟಂಡ ಶ್ಯಾಂ ಸೋಮಣ್ಣ ಅವರು ತಕ್ಷಣ ಕೋವಿಯೊಂದಿಗೆ ಸ್ಥಳಕ್ಕೆ ಆಗಮಿಸಿದರು. ವ್ಯಕ್ತಿಯ ಮೇಲೆ ದಾಳಿ ಮಾಡುತ್ತಿದ್ದ ಕಾಡಾನೆಗೆ ಕಲ್ಲು ಬೀಸಿದರು. ಆದರೂ ಕಾಡಾನೆ ದಾಳಿ ನಿಲ್ಲಿಸದೆ ಇದ್ದಾಗ ಅವರು…
ಮಡಿಕೇರಿ ಮೇ 30 NEWS DESK : ಚೆನ್ನಂಗಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಸಕ್ತ ಸಾಲಿನ ಶೈಕ್ಷಣಿಕ ಬಲವರ್ಧನೆಗೆ ಪೂರಕವಾದ ‘ವಿದ್ಯಾ ಪ್ರವೇಶ’ ಮತ್ತು ‘ಸೇತು ಬಂಧ’ ಕಾರ್ಯಕ್ರಮಕ್ಕೆ ಅಲಂಕೃತ ನೂತನ ಶಾಲಾ ಕೊಠಡಿಯಲ್ಲಿ ಗಣ್ಯರು ಚಾಲನೆ ನೀಡಿದರು. ಚೆನ್ನಯ್ಯನ ಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೇಕೆರಿರ ಅರುಣ್ ಕುಮಾರ್ ಮಾತನಾಡಿ, ಸರ್ಕಾರಗಳು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಲವಾರು ಯೋಜನೆಗಳನ್ನು ರೂಪಿಸಿವೆ. ಇದರ ಸದ್ಬಳಕೆ ಮಾಡಿಕೊಳ್ಳುವುದರೊಂದಿಗೆ ವಿದ್ಯಾರ್ಥಿಗಳು ಶಾಲೆಗೆ ತಪ್ಪದೆ ಹಾಜರಾಗುವ ಮೂಲಕ ಕಲಿಕೆಯ ಗುರಿಯೊಂದಿಗೆ ಮುನ್ನಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದರು. ಪಾಲಿಬೆಟ್ಟದ ಸಮಾಜ ಸೇವಕ ಡಾ.ಎ.ಸಿ.ಗಣಪತಿ ಮಾತನಾಡಿ, ಈ ಹಿಂದೆ ಮೂಲ ಸಂಕಷ್ಟಗಳ ನಡುವೆಯೂ ಶಿಕ್ಷಣ ಪಡೆದ ಅದೆಷ್ಟೋ ಮಂದಿ ಉನ್ನತ ಹುದ್ದೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇದೀಗ ಸರ್ಕಾರ ಹಾಗೂ ದಾನಿಗಳ ಸಹಕಾರದಿಂದ ವಿದ್ಯಾರ್ಥಿಗಳಿಗೆ ಎಲ್ಲಾ ಸೌಲಭ್ಯಗಳು ಸಿಗುತ್ತಿದ್ದು ಇದರ ಸದುಪಯೋಗಪಡಿಸಿಕೊಂಡು ಮುನ್ನಡೆದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗಲಿದೆ ಎಂದು ತಿಳಿಸಿದರು. ಶಾಲಾ ಸುತ್ತಮುತ್ತಲ ವ್ಯಾಪ್ತಿಯಲ್ಲಿ…
ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿ ಡಾ.ಧನಂಜಯ ಸರ್ಜಿಯವರ ಮಾನವೀಯ ಕಳಕಳಿಯಲ್ಲಿ ಅತೀ ಪ್ರಮುಖ ಸ್ಥಾನ ಪಡೆಯುವುದು ಸರ್ಜಿ ಫೌಂಡೇಶನ್ ನ ವಿಶೇಷಚೇತನ ಮಕ್ಕಳ ಶಾಲೆ. ಸಾಮಾಜಿಕ ಕಳಕಳಿ ಹೊಂದಿರುವ ಡಾ.ಧನಂಜಯ ಸರ್ಜಿ ಅವರು 2016 ರಲ್ಲಿಮಕ್ಕಳ ದಿನಾಚರಣೆ ಸಂದರ್ಭ 160 ವಿಶೇಷಚೇತನ ಹಾಗೂ ಅನಾಥ ಮಕ್ಕಳನ್ನು ಆರೋಗ್ಯಕ್ಕೆ ಸಂಬಂಧಿಸಿದಂತೆ ದತ್ತು ಪಡೆದಿದ್ದಾರೆ. ಇತ್ತೀಚೆಗೆ ಸರ್ಜಿ ಫೌಂಡೇಷನ್ ಅಡಿಯಲ್ಲಿ ಆ ಎಲ್ಲಾ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ವಿಶೇಷ ಕಾಳಜಿ ವಹಿಸಿರುವುದು ಸರ್ಜಿ ಅವರ ಮಾನವೀಯ ಮೌಲ್ಯಕ್ಕೆ ನಿದರ್ಶನವಾಗಿದೆ. ವಿಶೇಷಚೇತನ ಮಕ್ಕಳ ಬಾಳಿಗೆ ಹಾಗೂ ಆ ಕುಟುಂಬದ ಪಾಲಿಗೆ ಬೆಳಕಾಗಿದ್ದು ಸರ್ಜಿ ಇನ್ಸ್ಟಿಟೂಟ್. ಇದು ವಿಶೇಷ ಚೇತನ ಮಕ್ಕಳ ತರಬೇತಿ ಕೇಂದ್ರ. ಡಾ.ಧನಂಜಯ ಸರ್ಜಿಯವರ ಈ ಮಾನವೀಯ ಕಳಕಳಿಯಿಂದ ಅಲ್ಲಿ ಸೇರ್ಪಡೆಗೊಂಡ ಮಕ್ಕಳು ಎಲ್ಲರಂತೆ ತಿರುಗಾಡಬಲ್ಲ, ಓಡಾಡಬಲ್ಲ ಹಾಗೆ ಮಾತೂ ಆಡಬಲ್ಲ ಶಕ್ತಿಯನ್ನು ಪಡೆದಿದ್ದಾರೆ. ಈ ಸಂಸ್ಥೆ ನನ್ನಂತಹ ನೂರಾರು ಕುಟಂಬಗಳ ಬಾಳಿನ ಹೊಸ ಆಶಾಕಿರಣ ಎಂದರೆ ತಪ್ಪಿಲ್ಲ ಎನ್ನುತ್ತಾರೆ ಆ ಮಕ್ಕಳ ಹೆತ್ತವರು. ಶಿವಮೊಗ್ಗದ…
ಮಡಿಕೇರಿ ಮೇ 30 NEWS DESK : ಹಾಡಹಗಲೇ ಪೊಲೀಸ್ ಸಿಬ್ಬಂದಿಯ ಮನೆಗೇ ಕಳ್ಳರು ನುಗ್ಗಿ ನಗದು ಮತ್ತು ಚಿನ್ನಾಭರಣ ದೋಚಿದ ಪ್ರಕರಣ ಕುಶಾಲನಗರ ಸಮೀಪದ ಮಾದಾಪಟ್ಟಣ ಗ್ರಾಮದಲ್ಲಿ ನಡೆದಿದೆ. ಕುಶಾಲನಗರ ಪೊಲೀಸ್ ಠಾಣೆಯ ಸಿಬ್ಬಂದಿ ಪಿ.ಸಿ.ಸುನಿಲ್ ಎಂಬುವವರ ಮನೆಯ ಹಿಂಬಾಗಿಲು ಒಡೆದು ನುಗ್ಗಿದ ಚೋರರು 15 ಸಾವಿರ ರೂ. ನಗದು ಮತ್ತು 40 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದಾರೆ. ಸಮೀಪದ ಮನೆಯಲ್ಲಿ ಕೂಡ ಕಳ್ಳತನಕ್ಕೆ ವಿಫಲ ಯತ್ನ ನಡೆದಿದೆ. ಸ್ಥಳಕ್ಕೆ ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಘಟನೆಗೆ ಸಂಬಂಧಿಸಿದಂತೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೋಮವಾರಪೇಟೆ ಮೇ 30 NEWS DESK : ಕೊಡಗಿನ ಮಹಿಳೆಯೊಬ್ಬರು ಎವರೆಸ್ಟ್ ಬೇಸ್ ಕ್ಯಾಂಪ್ ಮೂಲಕ ಸಾಹಸ ಮಾಡಿದ್ದಾರೆ. ಸೋಮವಾರಪೇಟೆ ತಾಲ್ಲೂಕಿನ ಆಲೂರು ಸಿದ್ದಾಪುರ ಸಮೀಪದ ಬಡುಬನ ಹಳ್ಳಿಯ ನಿವಾಸಿ ದಿವಂಗತ ಮಲ್ಲಪ್ಪನವರ ಪುತ್ರಿ ಡಾ.ಬಿ.ಎಂ.ಲತಾ ಅವರೇ ಎವರೆಸ್ಟ್ ಸಾಧಕಿ. ಬೆಂಗಳೂರಿನಲ್ಲಿ ಸ್ತ್ರೀರೋಗ ತಜ್ಞೆಯಾಗಿರುವ ಇವರು ಕ್ರೀಡೆಯಲ್ಲಿ ಹಾಗೂ ಟ್ರಕ್ಕಿಂಗ್ ನಲ್ಲಿ ಆಸಕ್ತಿ ಹೊಂದಿದವರು. ಇತ್ತೀಚೆಗೆ ಇವರಿಗೆ ಎವರೆಸ್ಟ್ ಶಿಖರ ಏರಬೇಕೆಂಬ ಹಂಬಲ ಶುರುವಾಯಿತು. ಅದಕ್ಕಾಗಿ ನೇಪಾಳ ಮೂಲದ ಕಂಪೆನಿಯೊಂದರ ಮಾರ್ಗದರ್ಶನದಲ್ಲಿ 6 ತಿಂಗಳ ತರಬೇತಿ ಪಡೆದುಕೊಂಡರು. ಪ್ರತಿ ನಿತ್ಯ 10ಕಿ.ಮೀ ಓಡುವುದು, ನಡೆಯುವುದು ಮತ್ತು ಚಿಕ್ಕ ಪುಟ್ಟ ಬೆಟ್ಟಗಳನ್ನು ಹತ್ತುವುದು ಈ ಅಭ್ಯಾಸ ಯಶಸ್ವಿಯಾಗಿ ಮುಗಿಸಿದ ನಂತರ ಏಪ್ರಿಲ್ 28 ರಿಂದ ಮೇ 11ರೊಳಗೆ ಪರ್ವತಾರೋಹಣಕ್ಕೆ ಸಿದ್ಧರಾದರು. ಭಾರತದ ವಿವಿಧೆಡೆಗಳಿಂದ ತಂಡಗಳು ಬಂದಿದ್ದವು. 57 ವರ್ಷದ ಲತಾ ಅವರ ತಂಡದಲ್ಲಿ 30, 40ವರ್ಷದ ಒಟ್ಟು ಎಂಟು ಮಂದಿ ಇದ್ದರು. ಪ್ರತಿನಿತ್ಯ ಹತ್ತರಿಂದ ಹದಿನೈದು ಕಿಲೋಮೀಟರ್ ಏರುವುದು, ನಂತರ ವಿಶಾಂತಿ ಪಡೆಯುವುದು…
ವಿರಾಜಪೇಟೆ ಮೇ 30 NEWS DESK : ಹೆಗ್ಗಳ ಗ್ರಾಮದಲ್ಲಿರುವ ಶ್ರೀ ಭದ್ರಕಾಳಿ ಮತ್ತು ನಾಗ ದೇವಾಲಯದ ವಾರ್ಷಿಕ ಪೂಜಾ ಕಾರ್ಯಕ್ರಮವು ಶ್ರದ್ಧಾಭಕ್ತಿಯಿಂದ ನೆರವೇರಿತು. ದೇವಾಲಯದಲ್ಲಿರುವ ಶ್ರೀ ನಾಗ ದೇವರಿಗೆ ಹಾಲು ಮತ್ತು ಸೀಯಾಳ ದ ಅಭಿಷೇಕ ಹಾಗೂ ನಾಗ ತಂಬಿಲ ಸೇವೆಯು ನಡೆಯಿತು. ನಂತರ ಮಂಗಳಾರತಿ ಸೇವೆಗಳು ನೆರವೇರಿತು. ಶ್ರೀ ಭದ್ರಕಾಳಿ ದೇವರಿಗೆ ವಿಶೇಷ ಅಲಂಕಾರ ಪೂಜೆ, ಉಷಾ ಪೂಜೆ ಸಲ್ಲಿಸಿ ಅರ್ಚನೆ ಮಾಡಲಾಯಿತು. ಮಧ್ಯಾಹ್ನ ಮಹಾಪೂಜೆಯ ಬಳಿಕ ಪ್ರಸಾದ ವಿತರಣೆ, ಅನ್ನ ಸಂತರ್ಪಣಾ ಕಾರ್ಯಕ್ರಮ ಜರುಗಿತು. ಸಂಜೆ ದೀಪಾರಾಧನೆ, ಕುರ್ದಿ ಪೂಜೆ, ಮಹಾ ಮಂಗಳಾರತಿ ಮತ್ತು ಪ್ರಸಾದ ವಿನಿಯೋಗ ಹಾಗೂ ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.






