ಮಡಿಕೇರಿ ಜೂ.13 NEWS DESK : ಕೂಡಿಗೆಯ ಎ ಕ್ರಿಯೇಟಿವ್ ಡ್ಯಾನ್ಸ್ ಅಕಾಡೆಮಿಯ ತೃತೀಯ ವಾರ್ಷಿಕೋತ್ಸವದ ಅಂಗವಾಗಿ ಜು.6 ಮತ್ತು 7 ರಂದು ರಾಜ್ಯಮಟ್ಟದ ನೃತ್ಯ ಸ್ಪರ್ಧೆ `ಡ್ಯಾನ್ಸ್-ಡ್ಯಾನ್ ಸೀಸನ್-1′ ನಡೆಯಲಿದೆ ಎಂದು ಅಕಾಡೆಮಿಯ ಸ್ಥಾಪಕ ಹಾಗೂ ನೃತ್ಯ ಸಂಯೋಜಕ ಕೆ.ಎಸ್.ಅಕ್ತರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗಿನ ನೃತ್ಯ ಕಾರ್ಯಕ್ರಮಗಳಲ್ಲಿ ಮೊದಲ ಬಾರಿಗೆ ರಿಯಾಲಿಟಿ ಶೋ ಮಾದರಿಯ ನೃತ್ಯ ಸ್ಪರ್ಧೆ ನಡೆಯುತ್ತಿದ್ದು, ಕುಶಾಲನರದ ಸಹಕಾರ ಭವನದಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು. ಸೋಲೋ, ಕಪಲ್ ಹಾಗೂ ಗುಂಪು ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು, ಈ ಮೂರು ವಿಭಾಗಗಳಲ್ಲಿಯೂ ಸ್ಪರ್ಧಾಳುಗಳ ವಯೋಮಿತಿ 3 ರಿಂದ 9 ವರ್ಷದ ಮಕ್ಕಳು (ಸಬ್ ಜೂನಿಯರ್ ವಿಭಾಗ), 10 ರಿಂದ 14 ವರ್ಷದ ಮಕ್ಕಳು (ಜೂನಿಯರ್ ವಿಭಾಗ) ಹಾಗೂ 15 ವರ್ಷ ಮೇಲ್ಪಟ್ಟವರ (ಸೀನಿಯರ್ ವಿಭಾಗ)ದಲ್ಲಿ ಸ್ಪರ್ಧೆ ನಡೆಯಲಿದೆ. ಒಟ್ಟು ರೂ.1.50 ಲಕ್ಷದ…
ಲೇಖಕ: admin
ವಿರಾಜಪೇಟೆ ಜೂ.13 NEWS DESK : ವಿರಾಜಪೇಟೆ ಮದರ್ ತೆರೇಸಾ ಸೇವಾ ಕೇಂದ್ರದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ಹಾಗೂ ಲೇಖನ ಸಾಮಾಗ್ರಿಗಳನ್ನು ವಿತರಿಸಲಾಯಿತು. ಪಟ್ಟಣದ ಸಂತ ಅನ್ನಮ್ಮ ಶಾಲಾ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ 175 ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಹಾಗೂ ಲೇಖನ ಸಾಮಾಗ್ರಿಗಳನ್ನು ವಿತರಿಸಲಾಯಿತು. ಈ ಸಂದರ್ಭ ಮಾತನಾಡಿದ ಸಂತ ಅನ್ನಮ್ಮ ದೇವಾಲಯದ ಮುಖ್ಯ ಗುರುಗಳಾದ ವಂ. ಜೇಮ್ಸ್ ಡೋಮಿನಿಕ್, ಸಂಘದ ಕಾರ್ಯವನ್ನು ಶ್ಲಾಘಿಸಿದರು. ಮದರ್ ತೆರೇಸಾ ಅವರ ಆದರ್ಶಗಳು ಮಕ್ಕಳಿಗೆ ದಾರಿದೀಪವಾಗಬೇಕು ಎಂದು ತಿಳಿಹೇಳಿದರು. ಸಂತ ಅನ್ನಮ್ಮ ಪಿ.ಯು ಕಾಲೇಜಿನ ಪ್ರಾಂಶುಪಾಲರಾದ ವಂ. ಗುರುಗಳಾದ ಮದಲೈ ಮುತ್ತು ಮಕ್ಕಳಿಗೆ ಆಶೀರ್ವಚನ ನೀಡುತ್ತಾ, ಮಕ್ಕಳು ಇದರ ಪ್ರಯೋಜನವನ್ನು ಪಡೆದು ಮುಂದೆ ಒಳ್ಳೆಯ ವ್ಯಕ್ತಿಗಳಾಗಿ ಸಮಾಜ ಸೇವೆ ಮಾಡಲು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಡಾ. ಅದ್ವೈತ ಸುರೇಶ್, ಪೊವೆಲ್ ಮೆನೇಜಸ್ ಎಂಬಿಎ ಪ್ರಥಮ ರ್ಯಾಂಕ್, ಕುಮಾರಿ ಅನುಷಾ ಮಚಾಡೋ ಎಂಬಿಎನಲ್ಲಿ ಚಿನ್ನದ ಪದಕ ವಿಜೇತೆ ಹಾಗೂ ವಿರಾಜಪೇಟೆ ಕಾವೇರಿ…
ಕುಶಾಲನಗರ ಜೂ.13 NEWS DESK : ಸ್ಕೌಟ್ಸ್ ಮತ್ತು ಗೈಡ್ಸ್ ಗಳು ಸನ್ನಡತೆ, ಸದ್ಭಾವನೆ, ಶಿಸ್ತು ಮತ್ತು ಸೇವಾ ಮನೋಭಾವನೆಗಳಂತಹ ಶಿಕ್ಷಣವನ್ನು ನೀಡುವುದರೊಂದಿಗೆ ಭಾರತದ ಸಂಪನ್ಮೂಲ ವ್ಯಕ್ತಿಯಾಗಿ ರೂಪಿಸುವಲ್ಲಿ ಮಹತ್ತರ ಪಾತ್ರ ನಿರ್ವಹಿಸುತ್ತದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಗೈಡ್ಸ್ ಆಯುಕ್ತರು ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ ಹೇಳಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆ ಹಾಗೂ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸಂಘಟನೆ ಹಾಗೂ ಕಾರ್ಯಚಟುವಟಿಕೆಗಳ ಪರಿಚಯ ಕುರಿತು ಹಾಗೂ ವಿಶ್ವ ಬಾಲ ಕಾರ್ಮಿಕರ ದಿನಾಚರಣೆಯ ಮಹತ್ವ ಕುರಿತು ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗಿಗಳಾಗುವುದರಿಂದ ಶಿಸ್ತು, ದಕ್ಷತೆ, ನಾಯಕತ್ವ ಗುಣಗಳು ಬೆಳೆಯುತ್ತವೆ ಎಂದರು. ಜೂ.18 ರಿಂದ 24 ರ…
ಮಡಿಕೇರಿ ಜೂ.13 NEWS DESK : ಹರದೂರು ಗ್ರಾ.ಪಂ ವ್ಯಾಪ್ತಿಯ ಗರಗಂದೂರು ಮುಖ್ಯ ರಸ್ತೆ ಬದಿ ನಡೆಯುತ್ತಿರುವ ನೂತನ ಕಾಂಕ್ರೀಟ್ ಚರಂಡಿ ನಿರ್ಮಾಣ ಕಾಮಗಾರಿಯ ಗುಣಮಟ್ಟವನ್ನು ಶಾಸಕ ಡಾ.ಮಂತರ್ ಗೌಡ ಪರಿಶೀಲಿಸಿದರು. ಈ ಸಂದರ್ಭ ಪಂಚಾಯಿತಿ ಉಪಾಧ್ಯಕ್ಷ ಸಲೀಂ, ಅಧಿಕಾರಿಗಳು ಹಾಗೂ ಮತ್ತಿತರರು ಹಾಜರಿದ್ದರು.
ವಿರಾಜಪೇಟೆ ಜೂ.13 NEWS DESK : ಬ್ರಿಟಿಷರ ವಿರುದ್ಧ ಯುದ್ಧ ಮಾಡಿ ಗೆದ್ದ ಪ್ರಥಮ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ ಇಂದಿಗೂ ಮಹಿಳೆಯರಿಗೆ ಆದರ್ಶ ಪ್ರಾಯವಾಗಿದ್ದಾರೆ ಎಂದು ಹನುಗೋಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಬಿ.ಕೆ ಪ್ರಕಾಶ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತಿಹಾಸ ವಿಭಾಗದಿಂದ ನಡೆದ ವಿಶೇಷ ಉಪನ್ಯಾಸನ ಕಾರ್ಯಕ್ರಮದಲ್ಲಿ “ಕರ್ನಾಟಕ ಸ್ವಾತಂತ್ರ್ಯ ಹೋರಾಟದ ಮೈಲುಗಳು” ಎಂಬ ವಿಷಯದ ಕುರಿತು ಮಾತನಾಡಿದ ಅವರು, ಕಿತ್ತೂರಿನ ಚಿಕ್ಕ ಸಂಸ್ಥಾನದಲ್ಲಿ ರಾಜ್ಯಭಾರ ಮಾಡುತ್ತಿದ್ದ ರಾಣಿ ಚೆನ್ನಮ್ಮ, ಬ್ರಿಟೀಷರು ತಮ್ಮ ಸ್ವಾತಂತ್ರ್ಯ ಸಂಸ್ಥಾನ ಹಾಗೂ ಬೊಕ್ಕಸದ ಮೇಲೆ ಕಣ್ಣು ಹಾಕಿದ್ದನ್ನು ಕಂಡು ಪ್ರತಿ ಉತ್ತರ ಕೊಟ್ಟ ದಿಟ್ಟ ಮಹಿಳೆ ಇಂದಿಗೂ ನಮಗೆಲ್ಲ ಆದರ್ಶರಾಗಿದ್ದಾರೆ. ಚೆನ್ನಮ್ಮನವರ ದೃಢ ನಿರ್ಧಾರ, ಹೋರಾಟದ ಮನೋಭಾವ ಎಲ್ಲರಿಗೂ ತಿಳಿಸುವ ಸಲುವಾಗಿ ಪ್ರತಿ ವರ್ಷ ರಾಜ್ಯ ಸರ್ಕಾರ ಅಕ್ಟೋಬರ್ ತಿಂಗಳಿನಲ್ಲಿ ಕಿತ್ತೂರು ಉತ್ಸವ ನಡೆಸಿಕೊಂಡು ಬರುತ್ತಿದೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ…
ಮಡಿಕೇರಿ ಜೂ.13 NEWS DESK : ಸೋಮವಾರಪೇಟೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ವತಿಯಿಂದ ಬಳಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಬಳಗುಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೆಚ್.ಆರ್.ಮೋಹನ ಮಾತನಾಡಿ, ಸಾರ್ವಜನಿಕರು ಮನೆಯಿಂದ ಕಸ ನೀಡುವ ಸಂದರ್ಭ ಒಣ ಕಸ ಹಾಗೂ ಹಸಿ ಕಸ ವಿಂಗಡಿಸಿ ನೀಡಬೇಕು. ಅತಿಯಾದ ಪ್ಲಾಸ್ಟಿಕ್ ಹಾಗೂ ರಾಸಾಯನಿಕ ವಸ್ತುಗಳನ್ನು ಬಳಸದಂತೆ ಮಕ್ಕಳಿಗೆ ಸಲಹೆ ನೀಡಿದರು. ಪ್ರತಿಯೊಬ್ಬರು ಗಿಡನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದರು. ಕಾರ್ಯಕ್ರಮದಲ್ಲಿ ಸೋಮವಾರಪೇಟೆ ಆರಕ್ಷಕ ಠಾಣೆಯ ಆರಕ್ಷಕ ಶಶಿಕುಮಾರ್, ಶಾಲೆಯ ಮುಖ್ಯೋಪಾಧ್ಯಾಯರಾದ ಭಾಗ್ಯ, ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ರಶಿದ್, ಆಶಾ ಕಾರ್ಯಕರ್ತರಾದ ಬಿ.ಆರ್.ಶಾರದ, ಶಾಂತಳ್ಳಿ ವಲಯದ ಮೇಲ್ವಿಚಾರಕ ಲಕ್ಷ್ಮಣ್, ಕೃಷಿ ಮೇಲ್ವಿಚಾರಕರಾದ ರಾಜಣ್ಣ, ಸೇವಾ ಪ್ರತಿನಿಧಿ ಸುನಿತಾ, ಶಾಲಾ ಸಹ ಶಿಕ್ಷಕರು, ಗ್ರಾ.ಪಂ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.
ಸುಂಟಿಕೊಪ್ಪ ಜೂ.13 NEWS DESK : ಸುಂಟಿಕೊಪ್ಪ ಪೊಲೀಸ್ ಠಾಣೆಯ ಠಾಣಾಧಿಕಾರಿ ಎಂ.ಸಿ.ಶ್ರೀಧರ್ ಅವರು ರಸ್ತೆ ಸುರಕ್ಷತಾ ನಿಯಮಗಳು ಮತ್ತು ಪಾಲನೆಯ ಬಗ್ಗೆ ಸುಂಟಿಕೊಪ್ಪ ವ್ಯಾಪ್ತಿಯ ಶಾಲಾ ಕಾಲೇಜು ಮಕ್ಕಳಲ್ಲಿ ಜಾಗೃತಿ ಮೂಡಿಸಿದರು. ಸಂತ ಮೇರಿ ಶಾಲಾ ವಾಹನದಲ್ಲಿ ಹಾಗೂ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ತೆರಳಿ ರಸ್ತೆ ಸುರಕ್ಷತಾ ನಿಯಮಗಳು, ಅವುಗಳನ್ನು ಪಾಲಿಸುವ ಬಗ್ಗೆ ಮತ್ತು ವೈಯಕ್ತಿಕ ಸುರಕ್ಷತೆಯ ಕಾನೂನು ನಿಯಮಗಳ ಕುರಿತು ಮಕ್ಕಳಲ್ಲಿ ಅರಿವು ಮೂಡಿಸಿದರು. ಕಾಲೇಜು ಪ್ರಾಂಶುಪಾಲರಾದ ಶ್ರೀಲತಾ ಹಾಗೂ ಉಪನ್ಯಾಸಕರು ಇದ್ದರು. ರಾಜ್ಯ ಹೆದ್ದಾರಿಯಲ್ಲಿ ಶಾಲಾ ವಾಹನ ಹಾಗೂ ದ್ವಿಚಕ್ರ ವಾಹನಗಳ ಸವಾರರಿಗೆ ರಸ್ತೆ ಸುರಕ್ಷತೆ ಕುರಿತು ವಿವರಿಸಿದ ಠಾಣಾಧಿಕಾರಿಗಳು ಮಕ್ಕಳನ್ನು ಶಾಲೆಗಳಿಗೆ ಕರೆದೊಯ್ಯುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಪೋಷಕರಿಗೆ ಕಿವಿಮಾತು ಹೇಳಿದರು.
ಸುಂಟಿಕೊಪ್ಪ ಜೂ.13 NEWS DESK : ಬಿದ್ದು ಸಿಕ್ಕಿದ ಹಣವನ್ನು ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಆಶಾ ಕಾರ್ಯಕರ್ತೆ ಹಾಗೂ ಬೆಳೆಗಾರರೊಬ್ಬರು ಪ್ರಾಮಾಣಿಕತೆ ಮೆರೆದಿದ್ದಾರೆ. ಸುಂಟಿಕೊಪ್ಪದ ಗಿರಿಯಪ್ಪ ಮನೆ ನಿವಾಸಿ ಯಂಕನ ಕೌಶಿಕ್ ಎಂಬುವವರಿಗೆ ಸೇರಿದ ರೂ.500 ಮುಖಬೆಲೆಯ ಒಟ್ಟು ರೂ.16 ಸಾವಿರ ಕಳೆದು ಹೋಗಿತ್ತು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ವೈರಲ್ ಆಗಿತ್ತು. ಸುಂಟಿಕೊಪ್ಪದ ವಿಎಸ್ಎಸ್ಎನ್ ಮುಂಭಾಗದಲ್ಲಿ ಆಶಾ ಕಾರ್ಯಕರ್ತೆ ವೀಣಾ ಹಾಗೂ ಬೆಳೆಗಾರ ಸತೀಶ್ ಎಂಬುವವರಿಗೆ ಹಣ ದೊರೆತ್ತಿತ್ತು. ಇವರಿಬ್ಬರು ಸುಂಟಿಕೊಪ್ಪ ಪೊಲೀಸ್ ಠಾಣೆಗೆ ಹಣವನ್ನು ತಲುಪಿಸಿದರು. ವಿಷಯ ತಿಳಿದ ಯಂಕನ ಕೌಶಿಕ್ ತಮ್ಮ ಹಣದ ಲೆಕ್ಕಾಚಾರ ಮತ್ತು ಸೂಕ್ತ ದಾಖಲೆಯನ್ನು ಠಾಣಾಧಿಕಾರಿ ಎಂ.ಸಿ.ಶ್ರೀಧರ್ ಅವರ ಮುಂದೆ ಹಾಜರುಪಡಿಸಿ ಹಣವನ್ನು ಮರಳಿ ಪಡೆದರು. ಪ್ರಮಾಣಿಕತೆ ಮೆರೆದು ಮಾದರಿಯಾದ ವೀಣಾ ಹಾಗೂ ಸತೀಶ್ ಅವರಿಗೆ ಕೌಶಿಕ್ ಕೃತಜ್ಞತೆ ಸಲ್ಲಿಸಿದರು.
ಮಡಿಕೇರಿ ಜೂ.13 NEWS DESK : ಇತ್ತೀಚೆಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ನೇತೃತ್ವದ ಎನ್ಡಿಎ ಸರಕಾರ ಸಚಿವ ಸಂಪುಟದಲ್ಲಿ ಪರಿಶಿಷ್ಟರಿಗೆ ಸೂಕ್ತ ಸ್ಥಾನ ನೀಡದೆ ಕಡೆಗಣಿಸಿದೆ ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕರ್ನಾಟಕ ರಾಜ್ಯದಲ್ಲಿ 17 ಬಿಜೆಪಿ ಮತ್ತು ಇಬ್ಬರು ಜೆಡಿಎಸ್ ಸೇರಿ 19 ಮಂದಿ ಎನ್ಡಿಎ ಮೈತ್ರಿ ಕೂಟದ ಸಂಸದರಿದ್ದಾರೆ. ಇವರಲ್ಲಿ ಐವರು ಪ್ರಬಲ ಸಮುದಾಯದವರಿಗೆ ಮಾತ್ರ ಸಚಿವ ಸಂಪುಟದಲ್ಲಿ ಸ್ಥಾನ ನೀಡಿ ಪರಿಶಿಷ್ಟರನ್ನು ನಿರ್ಲಕ್ಷಿಸಲಾಗಿದೆ ಎಂದು ಟೀಕಿಸಿದ್ದಾರೆ. ಬಿಜೆಪಿ ಕೇವಲ ಮತ ಬ್ಯಾಂಕ್ ರಾಜಕಾರಣದಲ್ಲಿ ತೊಡಗಿದೆ, ಭಾವನಾತ್ಮಕ ವಿಚಾರಗಳ ಮೂಲಕ ಪರಿಶಿಷ್ಟರ ಮತಗಳನ್ನು ಕೂಡ ತನ್ನೆಡೆಗೆ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಪರಿಶಿಷ್ಟರು ಬೆಂಬಲಿಸಿದ ಕಾರಣದಿಂದಾಗಿ ರಾಜ್ಯದಲ್ಲಿ ಬಿಜೆಪಿ 17 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿದೆ. ಮತ ಗಳಿಕೆಗೆ ಮಾತ್ರ ಪರಿಶಿಷ್ಟರನ್ನು ಬಳಸಿಕೊಂಡು ಅಧಿಕಾರಕ್ಕೆ ಬಂದ ನಂತರ ಉನ್ನತ ಸ್ಥಾನಮಾನವನ್ನು ನೀಡದೆ ಕಡೆಗಣಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಇತ್ತೀಚಿನ…
ವಿರಾಜಪೇಟೆ ಜೂ.13 NEWS DESK : ವಿರಾಜಪೇಟೆಯ ಕೊಡಗು ಬಾಲವಲೀಕಾರ್ ಉತ್ತಮ ಜೀವನ ಸಹಕಾರ ಸಂಘಕ್ಕೆ ಅಪೆಕ್ಸ್ ಬ್ಯಾಂಕ್ 1.50 ಲಕ್ಷ ರೂ. ಅನುದಾನ ನೀಡಿದೆ. ಈ ಕುರಿತು ಮಾಹಿತಿ ನೀಡಿದ ಸಂಘದ ಅಧ್ಯಕ್ಷ ಬಿ.ಜಿ.ನಟರಾಜ್ ಬೋರ್ಕರ್ ಅವರು, ಕೊಡಗು ಡಿಸಿಸಿ ಬ್ಯಾಂಕ್ ನ ಅಧ್ಯಕ್ಷ ಕೊಡಂದೇರ ಪಿ.ಬಾಂಡ್ ಗಣಪತಿ ಅವರ ಸಹಕಾರದಿಂದ ಈ ಅನುದಾನ ಸಂಘಕ್ಕೆ ದೊರೆತ್ತಿದ್ದು, ಆಡಳಿತ ಮಂಡಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು. ದೊರೆತ ಅನುದಾನವನ್ನು ಸಂಘದ ಅಭಿವೃದ್ಧಿ ಕಾರ್ಯಗಳಿಗೆ ಬಳಸಲಾಗುವುದು ಎಂದರು. ಈ ಸಂದರ್ಭ ಸಂಘದ ಉಪಾಧ್ಯಕ್ಷರಾದ ಸ್ವಾತಿ ಬಿ.ಪಿ, ಕಾರ್ಯದರ್ಶಿ ಉದಯಶಂಕರ್ ಬಿ.ಆರ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.






