ಮಡಿಕೇರಿ ಮೇ 29 NEWS DESK : ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯು 2024-25 ನೇ ಸಾಲಿನಲ್ಲಿಯೂ ಜಾರಿಯಲ್ಲಿದೆ. ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ, ಮುಂತಾದ ಪ್ರಾಕೃತಿಕ ವಿಕೋಪ ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ವಿಮಾ ರಕ್ಷಣೆ ಮತ್ತು ಆರ್ಥಿಕ ಬೆಂಬಲ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಯೋಜನೆಯಡಿ ರೈತರ ವಿಮಾ ಕಂತನ್ನು ಆಹಾರ ಮತ್ತು ಎಣ್ಣೆ ಕಾಳು ಬೆಳೆಗಳಿಗೆ ಮುಂಗಾರು ಹಂಗಾಮಿಗೆ ಶೇ. 2 ಎಂದು ಪರಿಗಣಿಸಲಾಗಿದೆ. ಮುಖ್ಯ ಬೆಳೆಗಳಿಗೆ ಯೋಜನೆಯನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಅಳವಡಿಸಲಾಗುವುದು. ಈ ಯೋಜನೆಯು ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರಿಗೆ ಐಚ್ಛಿಕವಾಗಿದ್ದು, ವಿಮಾ ಮೊತ್ತವು ಒಂದೇ ಆಗಿರುತ್ತದೆ. ಬಿತ್ತನೆ ಅಥವಾ ನಾಟಿ ಕಾಲಕ್ಕೆ ಆಗುವ ನಷ್ಟ, ಬೆಳೆವಣಿಗೆ ಹಂತದಲ್ಲಿ ಆಗುವ ನಷ್ಟ ಹಾಗೂ ಕಟಾವಿನ ನಂತರದ ನಷ್ಟವನ್ನು ಸಹ ಪರಿಗಣಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ, ಓರಿಯಂಟಲ್ ಜನರಲ್…
ಲೇಖಕ: admin
ಪುತ್ತೂರು ಮೇ 29 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಮತ್ತು ಐಇಇಇ ಮಂಗಳೂರು ಉಪ ವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ ಐಎಸ್ಟಿಇ ನವದೆಹಲಿ, ವಿವೇಕಾನಂದ ಸೆಂಟರ್ ಫಾರ್ ರೀಸರ್ಚ್ ಸ್ಟಡೀಸ್, ಇನ್ಸ್ಟಿಟ್ಯೂಶನ್ ಇನ್ನೋವೇಶನ್ ಕೌನ್ಸಿಲ್ ಹಾಗೂ ಐಇಇಇ ವಿಸಿಇಟಿ ವಿದ್ಯಾರ್ಥಿ ವಿಭಾಗದ ಸಹಭಾಗಿತ್ವದಲ್ಲಿ ಮೇ 31 ರಂದು ರಾಜ್ಯಮಟ್ಟದ ಐ2 ಕನೆಕ್ಟ್-2024 (I2CONECCT-2024) ಪ್ರಾಜೆಕ್ಟ್ಗಳ ಪ್ರದರ್ಶನ ಕಾಲೇಜಿನ ಆವರಣದಲ್ಲಿ ನಡೆಯಲಿದೆ. ಐಇಇಇ ಮಂಗಳೂರು ಉಪ ವಿಭಾಗದ ಪ್ರಮುಖ ಕಾರ್ಯಕ್ರಮವಾಗಿದ್ದು, ವಿದ್ಯಾರ್ಥಿಗಳ ನವ-ನವೀನ ಯೋಜನೆಗಳ ಪ್ರದರ್ಶನಕ್ಕೆ ವೇದಿಕೆಯಾಗಿದೆ. ಅಲ್ಲದೆ ಅತ್ಯುತ್ತಮ ಸಾಧನೆಗಳನ್ನು ಗುರುತಿಸುವ ಸ್ಪರ್ಧೆಯೂ ಇರುತ್ತದೆ. ರಾಜ್ಯಾದ್ಯಂತ ವಿವಿಧ ಇಂಜಿನಿಯರಿಂಗ್, ಎಂಬಿಎ ಮತ್ತು ಎಂಸಿಎ ವಿಭಾಗದ 200ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಇದರಲ್ಲಿ ಪಾಲ್ಗೊಳ್ಳುತ್ತಾರೆ. ಅಂದು ಬೆಳಿಗ್ಗೆ 9.30ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಮಂಗಳೂರಿನ ಯುನಿಕೋರ್ಟ್ ಸಂಸ್ಥೆಯ ಹಿರಿಯ ವ್ಯವಸ್ಥಾಪಕ ಆಂಟೋನಿಯೋ ಧರ್ಮದಾಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸುತ್ತಾರೆ. ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಟಿ.ಎಸ್.ಭಟ್…
ಮಡಿಕೇರಿ ಮೇ 29 NEWS DESK : ಕರ್ನಾಟಕ ವಿಧಾನ ಪರಿಷತ್ ನ 11 ಸದಸ್ಯರುಗಳ ಅಧಿಕಾರವಧಿ ಜೂನ್ 17 ರಂದು ಕೊನೆಗೊಳ್ಳಲಿದೆ. ಈ ಬಾರಿ ಕೊಡಗು ಜಿಲ್ಲೆಯ ಓರ್ವ ಅಲ್ಪಸಂಖ್ಯಾತ ಅಭ್ಯರ್ಥಿಗೆ ವಿಧಾನ ಪರಿಷತ್ ಪ್ರವೇಶಿಸಲು ಅವಕಾಶ ನೀಡುವ ಮೂಲಕ ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರ ಋಣ ತೀರಿಸಲಿ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಜಿಲ್ಲಾಧ್ಯಕ್ಷ ಅಬ್ದುಲ್ ಅಡ್ಕಾರ್ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಈಗಾಗಲೇ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕಾಗಿ ತೆರೆಮರೆಯಲ್ಲಿ ಕಸರತ್ತು ಆರಂಭಗೊಂಡಿದೆ. ಶೇಕಡಾ 20 ರಷ್ಟಿರುವ ಅಲ್ಪಸಂಖ್ಯಾತ ಸಮುದಾಯಕ್ಕೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಸ್ಥಾನಗಳನ್ನು ಪಡೆಯಲು ಸಾಧ್ಯವಾಗಿಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದಲ್ಲಿಂದ ಇಲ್ಲಿಯವರೆಗೆ ಕೊಡಗು ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯ ಕಾಂಗ್ರೆಸ್ ಪಕ್ಷವನ್ನೇ ಬೆಂಬಲಿಸುತ್ತಾ ಬಂದಿದೆ. ಕಳೆದ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಯಲ್ಲಿ ಕೂಡ ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯದ ಶೇ.99 ರಷ್ಟು ಮತಗಳು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ನೀಡಿರುವುದು ಗಮನಾರ್ಹ.…
ಮಡಿಕೇರಿ ಮೇ 29 NEWS DESK : ಖಾಲಿ ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ ಕೈಗೊಳ್ಳುವ ಮೂಲಕ ಪದವೀಧರರ ನಿರುದ್ಯೋಗ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಲಾಗುವುದು ಎಂದು ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಡಾ.ಶೇಖ್ ಬಾವ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯ ಪ್ರಭಾವದಿಂದ ಲೋಕಸಭೆ ಮತ್ತು ವಿಧಾನಸಭೆಗೆ ಚಿಂತನಾಶೀಲರು ಆಯ್ಕೆಯಾಗಿ ಬರುವ ಅವಕಾಶ ಕಡಿಮೆ ಎಂದು ಸಂವಿಧಾನಕರ್ತರು ಮೇಲ್ಮನೆಯ ವ್ಯವಸ್ಥೆಯನ್ನು ಮಾಡಿದರು. ಮೇಲ್ಮನೆಗೆ ಪರೋಕ್ಷ ಚುನಾವಣೆ ಇರುವುದರಿಂದ ಸಮರ್ಥರು ಹಾಗೂ ಯೋಗ್ಯರು ಆಯ್ಕೆಯಾಗುವ ಅಗತ್ಯವಿದೆ. ಆದರೆ ಅವಕಾಶವಾದಿಗಳಿಗೆ, ಪಕ್ಷಾಂತರಿಗಳಿಗೆ, ಅನರ್ಹರಿಗೂ ಅವಕಾಶ ಕಲ್ಪಿಸುವ ಮೂಲಕ ಸಂವಿಧಾನದ ಆಶಯಗಳ ವಿರುದ್ಧ ಎಲ್ಲಾ ರಾಜಕೀಯ ಪಕ್ಷಗಳು ವಿಧಾನ ಪರಿಷತ್ತನ್ನು ತಮ್ಮ ರಾಜಕೀಯ ಮೇಲಾಟಕ್ಕೆ ಒಳಸಿಕೊಳ್ಳುತ್ತಿರುವುದು ವಿಷಾದಕರ ಎಂದರು. ನಾನು ಉನ್ನತ ಶಿಕ್ಷಣವನ್ನು ಪಡೆದು ಕೊಲ್ಲಿ ದೇಶದ ಹೆಸರಾಂತ ಕಂಪನಿಗಳಲ್ಲಿ ಹುದ್ದೆಗಳನ್ನು ನಿರ್ವಹಿಸಿ ಅಪಾರ ಅನುಭವಗಳಿಸಿದ್ದೇನೆ. ನನ್ನ ಸೇವಾವಧಿಯಲ್ಲಿ ಮತ್ತು ಸ್ವದೇಶಕ್ಕೆ ಮರಳಿದ ನಂತರವೂ ಹಲವು ಸಮಾಜ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದೇನೆ. ನನ್ನ…
ಸುಂಟಿಕೊಪ್ಪ ಮೇ 29 NEWS DESK : ವೃಕ್ಷೋದ್ಭವ ಶಕ್ತಿ ಗಣಪತಿ ದೇವಾಲಯದ 20ನೇ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ದೇವಾಲಯದ ಪ್ರಧಾನ ಅರ್ಚಕ ಮಹಾಬಲಭಟ್ ಹಾಗೂ ಹಿರಿಯ ಅರ್ಚಕ ಹಾ.ಮಾ.ಗಣೇಶ್ ಶರ್ಮಾ ನೇತೃತ್ವದಲ್ಲಿ ನಾಗಮಂಡಲದ ಅರ್ಚಕರಾದ ಸಂತೋಷ್ ಹೆಬ್ಬಾರ್, ರಾಘವೇಂದ್ರ ಭಟ್, ರವಿ ಭಟ್ ಮುಂಜಾನೆಯಿಂದಲೇ ದೇವರಿಗೆ ಶುದ್ಧಪೂಜೆ, ಪ್ರಾರ್ಥನೆ, ಪುಣ್ಯಾಹವಾಚನ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ಹರದೂರು ಹೊಳೆಯಿಂದ ಜಲಕುಂಭಗಳನ್ನು ತಂದು ದೇವರಿಗೆ ಅಭಿಷೇಕ ಮಾಡಲಾಯಿತು. ನಂತರ ನವಗ್ರಹ ಹೋಮ, ಪೂರ್ವಕ 9 ತೆಂಗಿನಕಾಯಿಗಳ ಗಣಹೋಮ, ಪೂರ್ಣಾಹುತಿಯ ನಂತರ ದೇವರಿಗೆ ಪಂಚಾಮೃತಾಭಿಷೇಕ, ಪೂರ್ವಕತವಕ, ಕಲಭಿಷೇಕ, ಪೂರ್ವಕ ಮಹಾಪೂಜೆಯ ನಂತರ ಅಲಂಕಾರ, ವಿವಿಧ ಹೂವುಗಳ ಪೂಜೆಗಳು ನಡೆದವು. ಮಧ್ಯಾಹ್ನ ಮಹಾಮಂಗಳಾರತಿ, ಅಷ್ಟವದನ ಸೇವೆ, ತೀರ್ಥಪ್ರಸಾದ ವಿನಿಯೋಗದ ನಂತರ ನೆರೆದಿದ್ದ ಭಕ್ತರಿಗೆ ಅನ್ನಸಂರ್ಪಣೆ ನೆರವೇರಿತು. ದೇವಾಲಯದ ಟ್ರಸ್ಟಿ ಎ.ಲೋಕೇಶ್ ಕುಮಾರ್, ಉತ್ಸವ ಸಮಿತಿಯ ಅಧ್ಯಕ್ಷ ಎಂ.ಮಂಜುನಾಥ್, ಕಾರ್ಯದರ್ಶಿ ಸುನಿಲ್ ಕುಮಾರ್, ಪದಾಧಿಕಾರಿಗಳಾದ ಸದಾಶಿವ ರೈ, ಚಂದುಸುರೇಶ್, ಅರುಣ್ ಪೂಜಾರಿ, ದಿವಾಕರ…
ಸುಂಟಿಕೊಪ್ಪ ಮೇ 29 NEWS DESK : ಸುಂಟಿಕೊಪ್ಪ ಗ್ರಾ.ಪಂ ಮತ್ತು ಕೊಡಗು ಜಿಲ್ಲಾ ಕಾರ್ಮಿಕರ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಕಟ್ಟಡ ಕಾರ್ಮಿಕರಿಗೆ ಮತ್ತು ಇತರೆ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಸುಂಟಿಕೊಪ್ಪ ಗ್ರಾ.ಪಂ ಕಚೇರಿಯಲ್ಲಿ ನಡೆದ ಶಿಬಿರದಲ್ಲಿ ನುರಿತ ವೈದ್ಯರಿಂದ ಕಣ್ಣು, ಕಿವಿ, ಹೃದಯ, ಲಿವರ್, ಕಿಡ್ನಿಯ ಕಾರ್ಯ ಕ್ಷಮತೆಯನ್ನು ಮತ್ತು ಬಿ.ಪಿ, ಶುಗರ್ ಪರೀಕ್ಷಿಸಿ ಸೂಕ್ತ ಮಾರ್ಗದರ್ಶನ ನೀಡಲಾಯಿತು. ಅಲ್ಲದೆ ಅಗತ್ಯವಿರುವವರಿಗೆ ಔಷಧಿ ನೀಡಲಾಯಿತು. ಡಾ. ಜಿ.ಎಸ್.ಸಚಿನ್, ನೇತ್ರ ತ್ರಜ್ಞ ಪ್ರಕಾಶ್, ಶ್ರವಣ ತ್ರಜ್ಞರಾದ ಪಿ.ಎಚ್.ಮೋನಿಶಾ, ಲ್ಯಾನ್ಸಿ, ರೇಷ್ಮ ಪರ್ವೀನ್, ಟಿ.ಕೆ.ಮೋನಿಕಾ, ಟಿ.ಎಲ್.ಯಶ್ವಂತ್ ಶಿಬಿರವನ್ನು ನಡೆಸಿಕೊಟ್ಟರು. ಸುಂಟಿಕೊಪ್ಪ ವ್ಯಾಪ್ತಿಯ ನೊಂದಾಯಿತ 70ಕ್ಕೂ ಹೆಚ್ಚು ಮಂದಿ ಕಟ್ಟಡ ಕಾರ್ಮಿಕರು ಹಾಗೂ ಕುಟುಂಬಸ್ಥರು ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡಿದ್ದರು.
ಮಡಿಕೇರಿ ಮೇ 29 NEWS DESK : ಶಿಕಾರಿಪುರ ನ್ಯಾಯಾಲಯ ಸಂಘದ ಆವರಣದಲ್ಲಿ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮೈತ್ರಿಕೂಟದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಅವರ ಪರವಾಗಿ ಮತಯಾಚಿಸಿ, ಇಬ್ಬರೂ ಅಭ್ಯರ್ಥಿಗಳನ್ನು ಅಧಿಕ ಮತಗಳಿಂದ ಗೆಲ್ಲಿಸುವಂತೆ ಮನವಿ ಮಾಡಿದರು. ಈ ಸಂದರ್ಭ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ನ್ಯಾಯಾಲಯ ಸಂಘದ ಪದಾಧಿಕಾರಿಗಳು, ವಕೀಲರು, ಸ್ಥಳೀಯ ಬಿಜೆಪಿ ಮುಖಂಡರು ಹಾಜರಿದ್ದರು.
ಮಡಿಕೇರಿ ಮೇ 29 NEWS DESK : ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಬಿಜೆಪಿಯ ವಿವಿಧ ನಾಯಕರು, ಮುಖಂಡರೊಂದಿಗೆ ತೆರಳಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರಲ್ಲಿ ಮತಯಾಚಿಸಿದರು. ಈ ಸಂದರ್ಭ ಪ್ರಾಂಶುಪಾಲರಾದ ಮೇಜರ್ ಡಾ. ಬಿ.ರಾಘವ, ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ಡಿ.ಎಸ್. ಅರುಣ್, ಮಡಿಕೇರಿ ಮಾಜಿ ಶಾಸಕರಾದ ಅಪ್ಪಚ್ಚು ರಂಜನ್, ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಜಿಲ್ಲಾ ವಕ್ತಾರ ತಳೂರ್ ಕಿಶೋರ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ಚಲನ್ ಕುಮಾರ್, ವಿ.ಕೆ.ಲೋಕೇಶ್, ನೈರುತ್ಯ ಪದವೀಧರ ಕ್ಷೇತ್ರದ ಚುನಾವಣಾ ಸಂಚಾಲಕರಾದ ಡಾ.ನವೀನ್, ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಎಚ್.ಮಾಲ್ತೇಶ್ ಸೇರಿದಂತೆ ಬಿಜೆಪಿಯ ವಿವಿಧ ಮುಖಂಡರು ಹಾಜರಿದ್ದರು.
ನಾಪೋಕ್ಲು ಮೇ 29 NEWS DESK : ಧಾರ್ಮಿಕ ಮತ್ತು ಲೌಕಿಕ ಸಮನ್ವಯ ವಿದ್ಯಾಭ್ಯಾಸವನ್ನು ಒಳಗೊಂಡ ಸಂಸ್ಥೆಯನ್ನು ಶೀಘ್ರದಲ್ಲಿ ಸ್ಥಾಪಿಸಿ ಸಮುದಾಯದ ಶೈಕ್ಷಣಿಕ ಹಾಗೂ ಸಾಮಾಜಿಕ ಏಳಿಗೆಗಾಗಿ ಶ್ರಮಿಸಲಾಗುವುದು ಎಂದು ಕೊಡಗು ಜಿಲ್ಲಾ ಖಾಜಿ ಎಂ.ಎಂ.ಅಬ್ದುಲ್ ಫೈಜಿ ಉಸ್ತಾದ್ ಹೇಳಿದರು. ನಾಪೋಕ್ಲುವಿನಲ್ಲಿ ಆರಂಭಿಸಲು ಉದ್ದೇಶಿಸಿರುವ ಬುಖಾರ ಇನ್ಸ್ಟಿಟ್ಯೂಟ್ ಫಾರ್ ಅಡ್ವಾನ್ಸ್ಡ್ ಸ್ಟಡೀಸ್ ಸಂಸ್ಥೆಯ ನೂತನ ಕಚೇರಿ ಉದ್ಘಾಟನೆ ಮತ್ತು ಸ್ನೇಹ ಸಮ್ಮೇಳನ ಕಾರ್ಯಕ್ರಮಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮಾರಂಭದಲ್ಲಿ ಸೈಯದ್ ಉಮರಲಿ ಶಿಯಾಬ್ ತಂಗಳ್, ಪೂಕಳಂ ಅಬ್ದುಲ್ ಉಸ್ತಾದ್ ,ಟ್ರಸ್ಟ್ ಅಧ್ಯಕ್ಷ ಹಮೀದ್ ಹಾಜಿ ಬೆಟ್ಟಗೇರಿ, ಬುಖಾರದ ಕೇರಳ ಘಟಕದ ಅಧ್ಯಕ್ಷ ಸುರೂರ್ ಮೊಯಿದು ಹಾಜಿ , ಕಾರ್ಯದರ್ಶಿ ಅಬ್ದುಲ್ ರಹಿಂ ರಿಜ್ವ, ಕೋಶಾಧಿಕಾರಿ ನಾಸಿರ್ ಹಾಜಿ, ಪ್ರಮುಖರಾದ ಬಶೀರ್ ಆರಂಗಡಿ ,ನಾಪೋಕ್ಲು ಜಮಾಯತ್ ಅಧ್ಯಕ್ಷ ಎಂ, ಹೆಚ್ ಅಬ್ದುಲ್ ರಹಿಮಾನ್, ಬುಕಾರ ಸಂಸ್ಥೆಯ ಕೊಡಗು ಘಟಕದ ಸಂಚಾಲಕ ಪಿ.ಎ0.ಅಬ್ದುಲ್ ರಶೀದ್, ಚೇರಿ ಕಾರ್ಯದರ್ಶಿ ಎಂ.ಎಸ್ ಮೊಹಮ್ಮದ್ ಅಲಿ ಹಳೆತಾಲೂಕು,ಬ್ಲಾಕ್ ಕಾಂಗ್ರೆಸ್…
ಸುಂಟಿಕೊಪ್ಪ ಮೇ 29 NEWS DESK : ಮಾದಾಪುರ ಸಮೀಪದ ಕುಂಬೂರುವಿನಲ್ಲಿ ನೂತನವಾಗಿ ಲೋಕಾರ್ಪಣೆಗೊಂಡ ಪವಿತ್ರ ಕುಟುಂಬ ದೇವಾಲಯದಲ್ಲಿ ಪ್ರಥಮ ಬಲಿಪೂಜೆ ಹಾಗೂ ಮಕ್ಕಳಿಗೆ ನೂತನ ಪರಮ ಪ್ರಸಾದವನ್ನು ನೀಡಲಾಯಿತು. ಕುಂಬೂರುವಿನ ಪವಿತ್ರ ಕುಟುಂಬ ದೇವಾಲಯದಲ್ಲಿ ಹಟ್ಟಿಹೊಳೆ ಜಪಸರಮಾತೆ ದೇವಾಲಯದ ಧರ್ಮಗುರುಗಳಾದ ರೇ.ಫಾ.ಗಿಲ್ಬರ್ಟ್ ಡಿಸಿಲ್ವ, ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ಸಹಾಯಕ ಧರ್ಮಗುರು ರೇ.ಪಾ.ನವೀನ್ ಕುಮಾರ್ ಹಾಗೂ ಪವಿತ್ರ ಕುಟುಂಬ ದೇವಾಲಯದ ಧರ್ಮಗುರುಗಳಾದ ರಾಜೇಶ್ ಅಡಂಬರ ಬಲಿಪೂಜೆ ಹಾಗೂ ಮಕ್ಕಳಿಗೆ ನೂತನ ಪರಮ ಪ್ರಸಾದವನ್ನು ನೀಡಿದರು. ಮಾದಾಪುರ, ಸುಂಟಿಕೊಪ್ಪ, ಹಟ್ಟಿಹೊಳೆ ಮಡಿಕೇರಿ, ಸೋಮವಾರಪೇಟೆ ಸೇರಿದಂತೆ ವಿವಿಧೆಡೆಗಳಿಂದ ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಬಲಿಪೂಜೆಯಲ್ಲಿ ಪಾಲ್ಗೊಂಡಿದ್ದರು.






