ಲೇಖಕ: admin

ಮಡಿಕೇರಿ ಜೂ.13 NEWS DESK :  ಜೀವನದ ಮೊದಲ ನಾಯಕ ಅಪ್ಪ, ಅಪ್ಪ ಎಂದರೇ ಜೀವನದ ಉದಕ್ಕೂ ಮುಗಿಯದ ಅನುಬಂಧ. ತನ್ನ ಕಷ್ಟಗಳನ್ನು ಯಾರೊಂದಿಗೂ ಹಂಚಿಕೊಳ್ಳದೆ ತನ್ನ ಮಕ್ಕಳ ಶ್ರೇಯೋಭಿವೃದ್ಧಿ ಶ್ರಮಿಸುವ ಒಂದೇ ಒಂದು ಜೀವ ಅದು ಅಪ್ಪ. ಅಪ್ಪ ಎಂಬ ಪದದ ವ್ಯಕ್ತಿ ಯಾರು? ಮಕ್ಕಳ ಬದುಕಿನಲ್ಲಿ ಅಪ್ಪ ಎಂಬ ವ್ಯಕ್ತಿಯ ಪಾತ್ರವೇನ್ನೂ ಎಂಬುದನ್ನು ನಾವು ನೆನಪಿಸಿಕೊಳ್ಳಬೇಕಾದ ದಿನ ಅಪ್ಪಂದಿರ ದಿನ. ಭೂಮಿಗಿಳಿದ ಮಗುವಿನ ಸಕಲ ಜವಾಬ್ದಾರಿಗಳನ್ನು ಹೊರುವ ತಂದೆ. ಇನ್ನೊಂದು ತಾಯಿಯ ಮಮತೆಯ ಮಡಿಲು ಇವು ಜನಿಸಿದ ಮಗುವಿನ ಮೊದಲ ದೇವಲೋಕ, ಏನು ಅರೀವಿಲ್ಲದ ಜೀವನಕ್ಕೆ ತಂದೆ ತಾಯಿಯ ಬೆಲೆ ಹಾಗೂ ಆ ಪದದ ಅರ್ಥ ಗೊತ್ತಾಗುವುದೇ ಅವುಗಳನೂ ಕಳೆದು ಕೊಂಡಾಗ ಮಾತ್ರ ಎನ್ನಬಹುದು. ಪ್ರತಿ ವರ್ಷ ಜೂನ್ 3ನೇ ಭಾನುವಾರದಂದು ಅಪ್ಪಂದಿರಿಗೆ ಗೌರವ ಕೊಡುವ ಸಲುವಾಗಿ ಅಂತರರಾಷ್ಟ್ರೀಯ ಅಪ್ಪಂದಿರ ದಿನವನ್ನು ಆಚರಣೆ ಮಾಡಲಾಗುತ್ತಿದೆ. ಭಾರತ ಅಮೇರಿಕ ಸೇರಿದಂತೆ ಪ್ರಪಂಚದ 100ಕ್ಕೂ ಅಧಿಕ ದೇಶದಲ್ಲಿ ಈ ದಿನವನ್ನು ಅಪ್ಪಂದಿರ…

Read More

ಸೋಮವಾರಪೇಟೆ ಜೂ.12 NEWS DESK : ಸೋಮವಾರಪೇಟೆ ತಾಲ್ಲೂಕು ಜಾನಪದ ಪರಿಷತ್ ಹಾಗು ಒಕ್ಕಲಿಗರ ಯುವ ವೇದಿಕೆ ಆಶ್ರಯದಲ್ಲಿ ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಉಚಿತ ರಕ್ತದಾನ ಶಿಬಿರದಲ್ಲಿ, ಜಿಲ್ಲಾ ರಕ್ತ ನಿಧಿ ಘಟಕದ ಅಧಿಕಾರಿ ಡಾ.ಕರುಂಬಯ್ಯ ಹಾಗೂ ಸೋಮವಾರಪೇಟೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಪ್ರಯೋಗಶಾಲೆಯ ಸಿಬ್ಬಂದಿ ತಸ್ಮಿಯಾ ಬಾನು ಅವರುಗಳನ್ನು ಸನ್ಮಾನಿಸಲಾಯಿತು. ಜಾನಪದ ಪರಿಷತ್ ಅಧ್ಯಕ್ಷ ಕೆ.ಎ. ಪ್ರಕಾಶ್, ಒಕ್ಕಲಿಗರ ಯುವ ವೇದಿಕೆ ಅಧ್ಯಕ್ಷ ಚಕ್ರವರ್ತಿ ಸುರೇಶ್, ಸ್ಥಾಪಕಾಧ್ಯಕ್ಷ ಬಿ.ಜೆ. ದೀಪಕ್, ಆಸ್ಪತ್ರೆಯ ಆಡಳಿತಾಧಿಕಾರಿ ಮೀನಾಕ್ಷಿ ಇದ್ದರು.

Read More

ಸೋಮವಾರಪೇಟೆ ಜೂ.12 NEWS DESK : ಸೋಮವಾರಪೇಟೆ ತಾಲ್ಲೂಕು ಮೊಗೇರ ಸೇವಾ ಸಮಾಜದ ವತಿಯಿಂದ ಪಟ್ಟಣದ ಪತ್ರಿಕಾ ಭವನದಲ್ಲಿ ಈಚೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಸಮುದಾಯದ ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮೊಗೇರ ಸೇವಾ ಸಮಿತಿಯ ರಾಜ್ಯ ಸಮಿತಿ ಸದಸ್ಯ ಪಿ.ಕೆ.ಚಂದ್ರು ಮಾತನಾಡಿ, ಮೊಗೇರ ಸಮಾಜದ ಮಕ್ಕಳು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು. ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನ ಹರಿಸಬೇಕೆಂದು ಕರೆ ನೀಡಿದರು. ಸಂಘಟನೆಯ ಜಿಲ್ಲಾಧ್ಯಕ್ಷ ಜನಾರ್ಧನ್ ಮಾತನಾಡಿ, ಮೊಗೇರ ಸಮಾಜದ ವತಿಯಿಂದ ಸಮುದಾಯದ ಅಭಿವೃದ್ಧಿಗೆ ಹಲವಷ್ಟು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಸಮುದಾಯದವರು ಸಂಘಟನೆಯಾದಲ್ಲಿ ಮಾತ್ರ ಎಲ್ಲಾ ರೀತಿಯ ಸವಲತ್ತು ಪಡೆಯಲು ಸಾಧ್ಯ. ಈ ನಿಟ್ಟಿನಲ್ಲಿ ಸಂಘವನ್ನು ಇನ್ನಷ್ಟು ಬಲಪಡಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷ ಬಿ.ಎಂ. ದಾಮೋಧರ್, ಕಾರ್ಯದರ್ಶಿ ಹರೀಶ್, ತಾಲೂಕು ಅಧ್ಯಕ್ಷ ವಸಂತ್, ಕಾರ್ಯದರ್ಶಿ ಕೆ.ಕೆ. ಗಣೇಶ್, ಉಪಾಧ್ಯಕ್ಷ ಹರೀಶ್, ಖಜಾಂಚಿ ಜಯಪ್ರಕಾಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Read More

ಮಡಿಕೇರಿ ಜೂ.12 NEWS DESK : ಸೋಮವಾರಪೇಟೆ ಬಸವೇಶ್ವರ ರಸ್ತೆಯ ನಿವಾಸಿಗಳಾದ ಶಾರದ ಮತ್ತು ಎ.ಪಿ.ಶಂಕರಪ್ಪ ಅವರು 3.50 ಲಕ್ಷ ರೂ. ವೆಚ್ಚದಲ್ಲಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ನಿರ್ಮಿಸಿಕೊಟ್ಟ ಹಿನ್ನೆಲೆಯಲ್ಲಿ, ಶ್ರೀಗಂಧ ಹಾಲ್‌ನಲ್ಲಿ ನಡೆದ ಲಯನ್ಸ್ ಕಾರ್ಯಕ್ರಮದಲ್ಲಿ ಇಬ್ಬರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಜಿಲ್ಲಾ ಗವರ್ನರ್ ಡಾ. ಮೆಲ್ವಿನ್ ಡಿಸೋಜಾ, ಲಯನ್ಸ್ ಅಧ್ಯಕ್ಷ ಎ.ಎಸ್.ಮಹೇಶ್, ಪದಾಧಿಕಾರಿಗಳಾದ ಕೆ.ಡಿ.ವೀರಪ್ಪ, ರೋಹಿತ್, ಕೆ.ಎಂ. ಜಗದೀಶ್, ಲಿಯೋ ಜಿಲ್ಲಾಧ್ಯಕ್ಷೆ ರಂಜಿತಾ ಶೆಟ್ಟಿ, ಅಧ್ಯಕ್ಷೆ ಪ್ರತೀಕ್ಷ ಇದ್ದರು.

Read More

ಸೋಮವಾರಪೇಟೆ ಜೂ.12 NEWS DESK : ಜಿಲ್ಲಾ ಲೋಕಾಯುಕ್ತ ವತಿಯಿಂದ ಸಾರ್ವಜನಿಕರ ಕೊಂದುಕೊರತೆ ಸಭೆ ಹಾಗೂ ಅಹವಾಲು ಸ್ವೀಕಾರ ಸಭೆ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆಯಿತು. ಲೋಕಾಯುಕ್ತ ಡಿವೈಎಸ್‌ಪಿ ಪವನ್‌ಕುಮಾರ್ ಸಾರ್ವಜನಿಕರ ಸಮಸ್ಯೆ ಆಲಿಸಿದರು. ಕೃಷಿ ಜಮೀನಿಗೆ ತೆರಳಲು ಸೂಕ್ತ ರಸ್ತೆಯಿಲ್ಲ. ಒತ್ತುವರಿ ತೆಗೆಸುವಂತೆ ಕಂದಾಯ ಇಲಾಖೆಗೆ 2020ರಲ್ಲಿ ದೂರು ನೀಡಿದ್ದೇನೆ. ರಸ್ತೆಗೆ ಬೇಲಿ ಹಾಕಿಕೊಂಡಿರುವವರಿಂದ ಜೀವಬೆದರಿಕೆ ಇದೆ. ಪೊಲೀಸ್ ಠಾಣೆಗೆ ದೂರು ನೀಡಿದರೂ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ತಲ್ತಾರೆಶೆಟ್ಟಳ್ಳಿ ಗ್ರಾಮದ ಕೆ.ಡಿ.ಗುರುಪ್ಪ ಸಮಸ್ಯೆ ಹೇಳಿಕೊಂಡರು. ದೂರು ನೀಡಿದಾಗ ಪೊಲೀಸ್ ಇಲಾಖೆ ಎರಡು ಕಡೆಯವರನ್ನು ಕರೆಸಿ ಚರ್ಚಿಸಿ ಸಮಸ್ಯೆಯನ್ನು ಇತ್ಯರ್ಥ ಪಡಿಸಬೇಕು. ಒಂದು ಕಡೆಯಿಂದ ಕರೆದು ಚರ್ಚಿಸಿದರೆ ಯಾವುದೇ ಪ್ರಯೋಜನವಿಲ್ಲ. ಕೂಡಲೇ ಇಬ್ಬರನ್ನು ಕರೆದು ಸಮಸ್ಯೆ ಪರಿಹರಿಸುವಂತೆ ಠಾಣಾಧಿಕಾರಿ ರಮೇಶ್ ಅವರಿಗೆ ಸೂಚಿಸಿದರು. ಕಂದಾಯ ಇಲಾಖಾಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ, ಪೈಸಾರಿ ಜಾಗವಾದಲ್ಲಿ ಕೂಡಲೇ ಬಿಡಿಸಿಕೊಡುವ ಕೆಲಸ ಮಾಡಬೇಕು ಎಂದು ಡಿವೈಎಸ್‌ಸಿ ಸೂಚಿಸಿದರು. ಕೊಡ್ಲಿಪೇಟೆ ಹೇಮಾವತಿ ಹಿನ್ನೀರಿನಲ್ಲಿ ಇಟ್ಟಿಗೆ…

Read More

ಹುಣುಸೂರು ಜೂ.12 NEWS DESK : ಐದು ವರ್ಷದ ಗಂಡು ಹುಲಿಯೊಂದರ ಕಳೇಬರ ನಾಗರಹೊಳೆ ಉದ್ಯಾನವನದಲ್ಲಿ ಪತ್ತೆಯಾಗಿದೆ. ಹುಲಿಗಳ ಕಾದಾಟದಲ್ಲಿ ಈ ಹುಲಿ ಸಾವನ್ನಪ್ಪಿರಬಹುದೆಂದು ಅಂದಾಜಿಸಲಾಗಿದೆ. ಹುಣಸೂರು ವನ್ಯಜೀವಿ ವಲಯದ ಲಕ್ಷ್ಮೀಪುರ ಕಳ್ಳಬೇಟೆ ತಡೆ ಶಿಬಿರದ ಸಿಬ್ಬಂದಿಗಳು ಕೊಳೆತ ಸ್ಥಿತಿಯಲ್ಲಿದ್ದ ಹುಲಿ ಕಳೇಬರವನ್ನು ಪತ್ತೆ ಹಚ್ಚಿದ್ದಾರೆ. ಹಿರಿಯ ಅರಣ್ಯ ಅಧಿಕಾರಿಗಳ ಮಾರ್ಗದರ್ಶನದಂತೆ ಹುಲಿಯ ಮೃತದೇಹವನ್ನು ದಹನ ಮಾಡಲಾಯಿತು.

Read More

ಕುಶಾಲನಗರ ಜೂ.12 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು( ಕ.ಸಾ.ಪ.), ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹೆಬ್ಬಾಲೆ ವಲಯ ಕ.ಸಾ.ಪ.ಘಟಕ ಹಾಗೂ ಹೆಬ್ಬಾಲೆ ಪ್ರೌಢಶಾಲೆಯ ಕನ್ನಡ ಭಾಷಾ ಸಂಘದ ಸಂಯುಕ್ತಾಶ್ರಯದಲ್ಲಿ ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ವಿರಾಜಪೇಟೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಬೆಳವಣಿಗೆ ಹಾಗೂ ಕ.ಸಾ.ಪ.ಅಧ್ಯಕ್ಷರುಗಳು ಕುರಿತು ಬಿ.ಜಿ.ರಘುನಾಥನಾಯಕ್ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ವಿರಾಜಪೇಟೆ ತಾಲ್ಲೂಕಿನಲ್ಲಿನ ಕನ್ನಡ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳು ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರುಗಳ ಸೇವೆಗಳು ಕುರಿತು ಏರ್ಪಡಿಸಿದ್ದ ಬಿ.ಜಿ.ರಘುನಾಥನಾಯಕ್ ಕನ್ನಡ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್,  ಮಕ್ಕಳಲ್ಲಿ ಕಲೆ, ಸಾಹಿತ್ಯ, ಸಂಸ್ಕೃತಿ‌ ಮತ್ತು ಪರಂಪರೆಯ ಅರಿವು ಮೂಡಿಸುವುದು ಮತ್ತು ಅವರನ್ನು ಉತ್ತಮ ಸತ್ಪ್ರಜೆಗಳನ್ನಾಗಿ ರೂಪಿಸುವುದು ಕನ್ನಡ ಸಾಹಿತ್ಯ ಪರಿಷತ್ತಿನ ಉದ್ದೇಶವಾಗಿದೆ ಎಂದರು. ಮಕ್ಕಳು ಕಲೆ, ಸಾಹಿತ್ಯ, ವಿಜ್ಞಾನದ ಪುಸ್ತಕಗಳನ್ನು ಓದುವ ಪ್ರವೃತ್ತಿಯೊಂದಿಗೆ ಬರವಣಿಗೆಯ ಕೌಶಲ್ಯ ಬೆಳೆಸಿಕೊಂಡು…

Read More

ಕೊಡ್ಲಿಪೇಟೆ ಜೂ.12 NEWS DESK : ಎಸ್‍ಎಸ್‍ಎಲ್‍ಸಿ, ದ್ವಿತೀಯ ಪಿಯುಸಿ ಹಾಗೂ ಮದರಸ ಪಬ್ಲಿಕ್ ಪರೀಕ್ಷೆಯಲ್ಲಿ ಜಮಾಅತ್ ವ್ಯಾಪ್ತಿಯಲ್ಲಿ ಅತ್ಯುತ್ತಮ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎಸ್‍ಕೆಎಸ್‍ಎಸ್‍ಎಫ್ ಹಾಗೂ ಎಸ್‍ವೈಎಸ್ ಕೊಡ್ಲಿಪೇಟೆ ಶಾಖೆಯ ವತಿಯಿಂದ ಬಹುಮಾನ ವಿತರಿಸಲಾಯಿತು. ನೂರ್ ಮಹಲ್ ನಲ್ಲಿ ನಡೆದ ಮಾಸಿಕ ಮಜ್ಲಿಸುನ್ನೂರ್ ಕಾರ್ಯಕ್ರಮದಲ್ಲಿ  ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಮುಹಮ್ಮದ್ ಆಶಿರ್ ಹಾಗೂ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಫಾತಿಮಾ ರಿಲಾ ಬಹುಮಾನವನ್ನು ಪಡೆದುಕೊಂಡಿದ್ದಾರೆ. ಮದ್ರಸ +2 ತರಗತಿಯಲ್ಲಿ ನಜ್ಮಾ, 10 ನೇ ತರಗತಿಯಲ್ಲಿ ಫಾತಿಮತ್ ಸ್ವಾಲಿಹ, 7 ನೇ ತರಗತಿಯಲ್ಲಿ ಸಬೀಲ್ ಹಾಗೂ 5 ನೇ ತರಗತಿಯಲ್ಲಿ ಆಯಿಷಾ ತಸೀರ ಪ್ರಥಮ ಬಹುಮಾನವನ್ನು ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಮಸ್ಜಿದುನ್ನೂರ್ ಖತೀಬರಾದ ಶಾಫಿ ಫೈಝಿ, ತಜಲ್ಲಿಯಾತ್ ಮದರಸ ಮುಖ್ಯೋಪಾಧ್ಯಾಯರಾದ ರಝಾಕ್ ಫೈಝಿ, ಮಸ್ಜಿದುನ್ನೂರ್ ಅಧ್ಯಕ್ಷರಾದ ಸುಲೈಮಾನ್, ಎಸ್‍ಕೆಎಸ್‍ಎಸ್‍ಎಫ್ ಕೊಡಗು ಜಿಲ್ಲಾ ಕೋಶಾಧಿಕಾರಿ ಬಾಸಿತ್ ಹಾಜಿ, ರಾಜ್ಯ ಸಮಿತಿ ಸದಸ್ಯ  ಸಿದ್ದೀಕ್ ಹಾಜಿ, ಎಸ್‍ವೈಎಸ್ ಕೊಡ್ಲಿಪೇಟೆ ಶಾಖಾಧ್ಯಕ್ಷರಾದ ಇಬ್ರಾಹಿಂ,…

Read More

ಮಡಿಕೇರಿ ಜೂ.12 NEWS DESK : ವೀರನಾಡು ರಕ್ಷಣಾ ವೇದಿಕೆಯ ನಿರಂತರ ಹೋರಾಟದ ಫಲವಾಗಿ ಮಡಿಕೇರಿ ನಗರದ ಗೌಳಿಬೀದಿಯ ಮುನೀಶ್ವರ ದೇವಾಲಯದ ರಸ್ತೆಯಿಂದ ರಾಜಾಸೀಟ್ ಗೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಅತ್ಯಂತ ಗುಣಮಟ್ಟದ ಕಾಮಗಾರಿ ನಡೆದಿದೆ ಎಂದು ವೇದಿಕೆಯ ಅಧ್ಯಕ್ಷ ಹರೀಶ್ ಜಿ.ಆಚಾರ್ಯ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಮುನೀಶ್ವರ ದೇವಾಲಯದ ಬಳಿಯಿಂದ ಮೇಲ್ಭಾಗದ ರಾಜಾಸೀಟು ರಸ್ತೆಗೆ ಸಂಪರ್ಕ ಕಲ್ಪಿಸುವ ಹಾದಿ ಸುಮಾರು 30 ವರ್ಷಗಳಿಂದ ಹದಗೆಟ್ಟು ವಾಹನ ಸಂಚಾರ ಅಸಾಧ್ಯವಾಗಿತ್ತು. ಪಕ್ಕದ ಶಾಲಾ ವಿದ್ಯಾರ್ಥಿಗಳು ಮನೆಗಳಿಗೆ ತೆರಳಲು ಈ ದಾರಿಯನ್ನೇ ಅವಲಂಬಿಸಿದ್ದರಾದರೂ ತೀರಾ ಹದಗೆಟ್ಟ ಕಾರಣ ಸಮೀಪದ ಹಾದಿಯೊಂದು ನಿಷ್ಪ್ರಯೋಜಕವಾಗಿತ್ತು. ರಾಜಾಸೀಟ್ ರಸ್ತೆಯಲ್ಲಿ ವಾಹನದಟ್ಟಣೆ ಹೆಚ್ಚಾಗುತ್ತಿರುವುದರಿಂದ ಇಲ್ಲಿ ಸುಸಜ್ಜಿತ ರಸ್ತೆ ನಿರ್ಮಾಣಗೊಂಡರೆ ಇದರ ಮೂಲಕವೂ ಸಂಚಾರಕ್ಕೆ ಅನುವು ಮಾಡಿಕೊಡಬಹುದಾಗಿತ್ತು. ಇದನ್ನು ಮನಗಂಡ ವೀರನಾಡು ರಕ್ಷಣಾ ವೇದಿಕೆಯ ಅಧ್ಯಕ್ಷ ಹರೀಶ್ ಜಿ.ಆಚಾರ್ಯ ಅವರು ಸ್ಥಳೀಯ ನಿವಾಸಿಗಳ ಸಹಕಾರದೊಂದಿಗೆ ಕಳೆದ ಕೆಲವು ವರ್ಷಗಳಿಂದ ರಸ್ತೆ ನಿರ್ಮಾಣಕ್ಕಾಗಿ ಒತ್ತಾಯಿಸಿ ಹೋರಾಟ ನಡೆಸುತ್ತಲೇ ಬಂದಿದ್ದರು.…

Read More

ಮಡಿಕೇರಿ ಜೂ.12 NEWS DESK : ಭಾರತೀಯ ಭಾಷಾ ಸಂಸ್ಥಾನ, ಉನ್ನತ ಶಿಕ್ಷಣ ಇಲಾಖೆ, ಶಿಕ್ಷಣ ಸಚಿವಾಲಯ, ಭಾರತ ಸರ್ಕಾರ ಸಹಯೋಗದಲ್ಲಿ ಮೈಸೂರಿನಲ್ಲಿ ಆಯೋಜಿಸಿದ್ದ ಭಾರತೀಯ ಶಾಸ್ತ್ರೀಯ ಭಾಷೆಗಳ ರಾಷ್ಟ್ರೀಯ ಸಮ್ಮೇಳನ (ಸಿ.ಸಿ.ಎಲ್.ಐ-24) ದಲ್ಲಿ ಗೋಣಿಕೊಪ್ಪ ಕಾವೇರಿ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಸಿ.ಎಂ.ರೇವತಿ (ಡಾ. ಮುಲ್ಲೇಂಗಡ ರೇವತಿ ಪೂವಯ್ಯ) ಆಹ್ವಾನಿತ ಸಂಪನ್ಮೂಲ ವ್ಯಕ್ತಿಯಾಗಿ ವಿಚಾರ ಮಂಡಿಸಿದ್ದರು. ಮೈಸೂರಿನ ಭಾರತೀಯ ಭಾಷಾ ಸಂಸ್ಥಾನದ ಸಭಾಂಗಣದಲ್ಲಿ ನಡೆದ ವಿಚಾರ ಗೋಷ್ಠಿಯಲ್ಲಿ ‘ಕನ್ನಡ ಜನಪದದೊಳಗಣ ಕೊಡವ ಜಾನಪದ’ ಎಂಬ ವಿಷಯವಾಗಿ ವಿಚಾರ ಮಂಡಿಸಿ ಗಮನಸೆಳೆದರು. ದೇಶದ ವಿವಿಧ ರಾಜ್ಯಗಳ ವಿವಿಧ ಭಾಷೆಯ ಸಂಪನ್ಮೂಲ ವ್ಯಕ್ತಿಗಳು ಪಾಲ್ಗೊಂಡಿದ್ದರು.

Read More