ಮೂರ್ನಾಡು ಮೇ 29 NEWS DESK : ಕಾಂತೂರು ಗ್ರಾಮದ ಕೆರೆಮನೆ ಸ್ಥಳದಲ್ಲಿರುವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ವಿಗ್ರಹ ಪ್ರತಿಷ್ಠಾಪನೆ ಮಹೋತ್ಸವ ಮೇ 30 ಮತ್ತು 31ರಂದು ನಡೆಯಲಿದೆ. ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಶಿಲಾವಿಗ್ರಹ ಪ್ರತಿಷ್ಠಾಪನೆಯು ಇರಿಟ್ಟಿಯ ನಾಗರಾಜ ಮಹೇಶ್ಭಟ್ ಮತ್ತು ಗಣಪತಿಭಟ್ ಅವರ ನೇತೃತ್ವದಲ್ಲಿ ನಡೆಯಲಿದೆ. ಮೇ 30 ರಂದು ಬೆಳಗ್ಗೆ 10ಗಂಟೆಗೆ ಮಹಾಸಂಕಲ್ಪ, ಗಣಪತಿ ಪೂಜೆ, ದೀಪಲಕ್ಷಿಪೂಜೆ, ಪುಣ್ಯಾಹವಾಚನ, ದೇವನಾಂದಿ, ಮಾತೃಕಾ ಪೂಜೆ, ರಕ್ಷಾಬಂಧನ, ಅಂಕುರಾರ್ಪಣೆ, ಬ್ರಹ್ಮಕೂರ್ಚಹವನ, ಮಧುಪರ್ಕ ಪೂಜೆ, ಅಷ್ಠಮೂರ್ತಿಪ್ರಾರ್ಥನೆ, ಸಂಜೆಯ ವೇಳೆಗೆ ಕಲಶ ಸ್ಥಾಪನೆ, ಮೂರ್ತಿ ಪರಿಗ್ರಹಣ, ದೇವಾಲಯ ಪರಿಗ್ರಹಣ, ಗಣಹೋಮ, ವಾಸ್ತುಹೋಮ, ರಾಕ್ಷೋಘ್ನ ಹೋಮ, ಅಧಿವಾಸ ಹೋಮಪೂಜೆ, ಮಹಮಂಗಳಾರತಿ ಮತ್ತು ದಿಗ್ಭಲಿ ಪೂಜಾ ಕಾರ್ಯಕ್ರಮ ನಡೆಯಲಿದೆ. ನಂತರ ಅನ್ನಸಂತರ್ಪಣೆ ನೆರವೇರಲಿದೆ. ಮೇ 31 ರಂದು ಬೆಳಗ್ಗೆ 6.30ಗಂಟೆಗೆ ಗಣಪತಿಹೋಮ, ವಿಗ್ರಹಪ್ರತಿ ಷ್ಠಾಪನೆ, ರತ್ನನ್ಯಾಸ, ಪೀಠನ್ಯಾಸ ಹೋಮ, ಪಂಚಸೂಕ್ತ ಹೋಮ, ಪ್ರತಿಷ್ಠಾಹೋಮ, ಕಲಾಹವನಾದಿಗಳು, ಪೂರ್ಣಾಹುತಿ, ಕಲಶಕುಂಭಾಭಿಷೇಕ, ಪಂಚಾಮೃತಾಭಿಷೇಕ, ಅಲಂಕಾರಸೇವೆ, ಮಹಾನೈವೇದ್ಯ, ರಾಷ್ಟ್ರಾಶೀರ್ವಾದ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ…
ಲೇಖಕ: admin
ಮಡಿಕೇರಿ ಮೇ 29 NEWS DESK : ಕೊಡಗು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕಾಡಾನೆಗಳ ಅಸಹಜ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿದೆ. ಸುಂಟಿಕೊಪ್ಪ ಸಮೀಪ ಕೊಡಗರಳ್ಳಿ ಗ್ರಾಮದ ಪಂಪ್ ಹೌಸ್ ಬಳಿ ವಿದ್ಯುತ್ ತಂತಿ ತಗುಲಿ ಕಾಡಾನೆಯೊಂದು ಮೃತಪಟ್ಟಿದೆ. ಈ ಘಟನೆ ಇಂದು ಬೆಳಿಗ್ಗೆ ನಡೆದಿರಬಹುದೆಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಮೂರು ದಿನಗಳ ಹಿಂದೆಯಷ್ಟೇ ಜಿಲ್ಲೆಯ ವಿವಿಧೆಡೆ ಎರಡು ಕಾಡಾನೆಗಳ ಮೃತದೇಹ ಪತ್ತೆಯಾಗಿತ್ತು.
ಮಡಿಕೇರಿ ಮೇ 29 NEWS DESK : ಶಿಕ್ಷಣ ಕ್ಷೇತ್ರದ ಗುಣಮಟ್ಟ ಹೆಚ್ಚಳಕ್ಕೆ ಮುಖ್ಯಮಂತ್ರಿಗಳು ಬಜೆಟ್ನಲ್ಲಿ ಹಣ ಮೀಸಲಿಟ್ಟಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಬದಲಿಸಿ, ರಾಜ್ಯ ಶಿಕ್ಷಣ ನೀತಿ ಜಾರಿಗೂ ಮುನ್ಸೂಚನೆ ಸಿಕ್ಕಿದೆ ಎಂದು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕುಮಾರ್ ಹೇಳಿದರು. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನಗರ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಈ ಹಿಂದೆ ಶಿಕ್ಷಕರ ಕೇತ್ರವನ್ನು ಪ್ರತಿನಿಧಿಸಿದ್ದವರು ಗೆದ್ದ ಬಳಿಕ ಕ್ಷೇತ್ರದ ಕಡೆ ತಿರುಗಿಯೂ ನೋಡಲಿಲ್ಲ. ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸದೇ ಅವರು ಕೇವಲ ವಿದೂಷಿಯ ಪಾತ್ರ ನಿರ್ವಹಿಸಿದ್ದರು. ಇದನ್ನು ತೀವ್ರವಾಗಿ ಖಂಡಿಸುವುದಾಗಿ ಮಂಜುನಾಥ್ ಕುಮಾರ್ ಹೇಳಿದರು. ಶಿಕ್ಷಕರ ಸಮಸ್ಯೆಗಳನ್ನು ಅರಿತು ಅದನ್ನು ಪರಿಹರಿಸಲು ಓರ್ವ ಶಿಕ್ಷಕನಿಂದಲೇ ಸಾಧ್ಯ. ಈ ಹಿನ್ನೆಲೆಯಲ್ಲಿ ಈ ಬಾರಿ ಜೂ.3ರಂದು ನಡೆಯುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಪರಾಭವಗೊಳಿಸುವಂತೆ ಮನವಿ ಮಾಡಿದರು.
ಮಡಿಕೇರಿ ಮೇ 29 NEWS DESK : ಶಿಕ್ಷಕರು ಹಾಗೂ ಪದವೀಧರರು ಎದುರಿಸುತ್ತಿರುವ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಸರಕಾರ ಬದ್ಧವಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮಡಿಕೇರಿಗೆ ಆಗಮಿಸಿದ ಸಚಿವರು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರ ಸಭೆ ನಡೆಸಿದರು. ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕುಮಾರ್ ಮತ್ತು ಪದವೀಧರರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್ ಅವರುಗಳ ಗೆಲುವಿಗೆ ಪಣ ತೊಡುವಂತೆ ಕರೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ರಾಜ್ಯ ಸರಕಾರಿ ಚುನಾವಣೆ ಪೂರ್ವ ನೀಡಿದ್ದ ಗ್ಯಾರಂಟಿಗಳನ್ನು ಅನುಷ್ಟಾನಕ್ಕೆ ತಂದಿದ್ದು ಹೆಮ್ಮೆ ಎನಿಸಿದೆ. ರಾಜ್ಯದಲ್ಲಿ 43 ಸಾವಿರ ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಮಾತ್ರವಲ್ಲದೇ ನೂತನ ಪಿಂಚಣಿ ವ್ಯವಸ್ಥೆಯನ್ನು ಬದಲಿಸಿ ಮತ್ತೆ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೂ ನೀತಿ ಸಂಹಿತೆ ಮುಕ್ತಾಯವಾದ ಬಳಿಕ ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಶಿಕ್ಷಕರು ಮತ್ತು ಪದವೀಧರರು…
ಮಡಿಕೇರಿ ಮೇ 28 NEWS DESK : ಮುಂದಿನ ವರ್ಷ ನಡೆಯಲಿರುವ ಕೊಡವ ಕುಟುಂಬಗಳ ನಡುವಿನ 25ನೇ ವರ್ಷದ ಪ್ರತಿಷ್ಠಿತ ಮುದ್ದಂಡ ಹಾಕಿ ಹಬ್ಬಕ್ಕೆ ಮುದ್ದಂಡ ಕುಟುಂಬಸ್ಥರು ಪೂರ್ವಭಾವಿ ತಯಾರಿಯಲ್ಲಿ ತೊಡಗಿದ್ದಾರೆ. ನಗರದ ಹೊರ ವಲಯದ ಕರವಲೆ ಶ್ರೀ ಭಗವತಿ ಮಹಿಷ ಮರ್ದಿನಿ ದೇವಾಲಯದಲ್ಲಿ ಮುದ್ದಂಡ ಕುಟುಂಬಸ್ಥರು ಹಾಗೂ ಕೊಡವ ಹಾಕಿ ಅಕಾಡೆಮಿ ಪ್ರಮುಖರು ವಿಶೇಷ ಪೂಜೆ ಸಲ್ಲಿಸಿ ಹಾಕಿ ಹಬ್ಬದ ಯಶಸ್ಸಿಗಾಗಿ ಪ್ರಾರ್ಥಿಸಿದರು. 2025 ರಲ್ಲಿ ಹಾಕಿ ಹಬ್ಬ ನಡೆಸಲು ಮುದ್ದಂಡ ಕುಟುಂಬಕ್ಕೆ ಕೊಡವ ಹಾಕಿ ಅಕಾಡೆಮಿ ಅಧಿಕೃತವಾಗಿ ಹಕ್ಕೋಲೆ (ಹಕ್ಕುಪತ್ರ) ನೀಡುವ ಮೂಲಕ ಶುಭ ಹಾರೈಸಿತು. ಈ ಸಂದರ್ಭ ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡAಡ ಬೋಪಣ್ಣ, ಉಪಾಧ್ಯಕ್ಷರುಗಳಾದ ಕುಕ್ಕೇರ ಜಯ ಚಿಣ್ಣಪ್ಪ, ಬರಕಡ ಡೀನಾ ಪೂವಯ್ಯ, ಗೌರವ ಕಾರ್ಯದರ್ಶಿ ಮಾಳೇಟಿರ ಶ್ರೀನಿವಾಸ್, ಜಂಟಿ ಕಾರ್ಯದರ್ಶಿ ಚೆಯ್ಯಂಡ ಸತ್ಯ, ಎಲ್ಲಾ ನಿರ್ದೇಶಕರುಗಳು, ಮುದ್ದಂಡ ಹಾಕಿ ಉತ್ಸವ ಸಮಿತಿಯ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ, ಗೌರವಾಧ್ಯಕ್ಷ ಮುದ್ದಂಡ.ಬಿ.ದೇವಯ್ಯ, ಕಾರ್ಯಕಾರಿ ಮಂಡಳಿಯ ಮುದ್ದಂಡ…
ಸೋಮವಾರಪೇಟೆ ಮೇ 28 NEWS DESK : ಚನ್ನಾಪುರ ಗ್ರಾಮದೇವತೆಯ ವಾರ್ಷಿಕ ಪೂಜೆಯು ಶ್ರದ್ಧಾಭಕ್ತಿಯಿಂದ ನೆರವೇರಿತು. ಗ್ರಾಮದಲ್ಲಿರುವ ದೇವರ ಬನದಲ್ಲಿ ಗ್ರಾಮದ ಹಿರಿಯರು ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಿ, ಗ್ರಾಮದ ಸಮೃದ್ಧಿಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಪ್ರಕೃತಿಯ ಅರಾಧಕರಾಗಿದ್ದ ನಮ್ಮ ಹಿರಿಯರು, ಬಸರಿ ಮರದ ಬುಡದಲ್ಲಿ ಕಲ್ಲುಗಳನ್ನು ಇಟ್ಟು ನೂರಾರು ವರ್ಷಗಳಿಂದ ಪೂಜೆ ಸಲ್ಲಿಸುತ್ತ ಬಂದಿದ್ದಾರೆ. ಅದನ್ನು ಇಂದಿನ ಪೀಳಿಗೆಯವರು ಮುಂದುವರಿಸಿಕೊಂಡು ಹೋಗುತ್ತಿದ್ದೇವೆ. ಗ್ರಾಮದಲ್ಲಿ ಯಾವುದೇ ಶುಭ ಕಾರ್ಯಕ್ರಮಗಳು ಗ್ರಾಮ ದೇವತೆಗೆ ಪೂಜೆ ಸಲ್ಲಿಸದ ನಂತರವೇ ನಡೆಯುತ್ತವೆ. ನಂಬಿದವರನ್ನು ತಾಯಿ ಯಾವತ್ತು ಕೈಬಿಟ್ಟಿಲ್ಲ ಎಂದು ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಸಿ.ಎನ್.ಅಶ್ವಥ್ ಹೇಳಿದರು. ಕಾರ್ಯದರ್ಶಿ ಸಿ.ಎಸ್.ವೀರೇಶ್, ಸಿ.ಎನ್.ಅಶೋಕ್, ಸಿ.ಎ.ಗಣೇಶ್ ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಮಡಿಕೇರಿ ಮೇ 28 NEWS DESK : ಆರೋಗ್ಯ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ತನ್ನನ್ನು ನೈಋತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಪಕ್ಷದ ವರಿಷ್ಠರು ನಿಲ್ಲಿಸಿದ್ದಾರೆ, ತನ್ನ ವಿರುದ್ಧ ಮಾತನಾಡಲು ಯಾವುದೇ ವಿಚಾರಗಳು ಇಲ್ಲದಿರುವ ಹಿನ್ನೆಲೆಯಲ್ಲಿ ಅನಗತ್ಯ ಅಪಪ್ರಚಾರವನ್ನಷ್ಟೆ ಮಾಡಲಾಗುತ್ತಿದೆ ಎಂದು ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ತಿಳಿಸಿದರು. ಮಡಿಕೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ತಾನು ತನ್ನ ಹತ್ತನೇ ವಯಸ್ಸಿನಿಂದಲೆ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆಯಲ್ಲಿ ತೊಡಗಿಸಿಕೊಂಡು ಬಂದವನು. ಚುನಾವಣಾ ಸ್ಪರ್ಧೆಗೆ ತನಗೆ ಅವಕಾಶ ನೀಡುವುದಕ್ಕೂ ಮುನ್ನ ತಾನು ಸಂಘದ ವಿಕಾಸ ಸೇವಾ ಟ್ರಸ್ಟ್ ಅಧ್ಯಕ್ಷನಾಗಿ ಕಾರ್ಯನಿರ್ವಹಿಸುತ್ತಿದ್ದೆ. ಅದಕ್ಕೆ ರಾಜೀನಾಮೆಯನ್ನಿತ್ತು ಇದೀಗ ಚುನಾವಣಾ ಸ್ಪರ್ಧೆಗೆ ಇಳಿದಿದ್ದೇನೆ ಎಂದರು. ಬಿಜೆಪಿಯಿಂದ ಸ್ಪರ್ಧಿಸುವುದಕ್ಕೂ ಮುನ್ನ ಕಾಂಗ್ರೆಸ್ನಿಂದ ಸ್ಪರ್ಧಿಸುವ ಒತ್ತಡವಿತ್ತಾದರು, ಪಕ್ಷ ಮತ್ತು ಸಂಘ ಪರಿವಾರದ ಮುಖಂಡರು ತನ್ನ ಸ್ಪರ್ಧೆಗೆ ಅವಕಾಶ ನೀಡಿದ್ದಾರೆ. ಪ್ರಸ್ತುತ ರಾಜಕೀಯ ವಾತಾವರಣ ಬಿಜೆಪಿಗೆ ಪೂರಕವಾಗಿದ್ದು, ತನ್ನ ಗೆಲುವು ನಿಶ್ಚಿತವಾಗಿದೆ. ನನ್ನ ವಿರುದ್ಧ ಮಾತನಾಡಿರುವ ರಘುಪತಿ ಭಟ್ಟರಿಗೆ ಈ ಹಿಂದೆ…
ಮಡಿಕೇರಿ ಮೇ 28 NEWS DESK : ಸರಕಾರ ಮತ್ತು ಪದವೀಧರರ ನಡುವಿನ ಕೊಂಡಿಯಾಗಿ ಕಾರ್ಯನಿರ್ವಹಿಸುವ ಮೂಲಕ ಪದವೀಧರರ ಸಮಸ್ಯೆಗಳಿಗೆ ಪರಿಹಾರವನ್ನು ಕಂಡು ಕೊಳ್ಳುವ ಚಿಂತನೆ ತನ್ನದೆಂದು ನೈಋತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ತಿಳಿಸಿದ್ದಾರೆ. ಮಡಿಕೇರಿ ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೈದ್ಯಕೀಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ತಾನು ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧೆಗೆ ಇಳಿದಿದ್ದೇನೆ. ರಾಜಕೀಯ ಪಾವಿತ್ರ್ಯತೆಯನ್ನು ಉಳಿಸಿಕೊಳ್ಳುವುದು ನನ್ನ ಬದ್ಧತೆಯಾಗಿದೆ ಎಂದು ಹೇಳಿದರು. ಉದ್ಯೋಗಿಗಳಿಗೆ ಇಎಸ್ಐ ಮೂಲಕ ಉಚಿತ ಆರೋಗ್ಯ ಸೇವೆ ಪಡೆಯಲು 18 ಸಾವಿರ ವೇತನ ಮಿತಿ ಇದ್ದು, ಅದನ್ನು 21 ಸಾವಿರಕ್ಕೆ ಏರಿಸುವ ಪ್ರಸ್ತಾಪವಿದೆ. ಈ ನಿಟ್ಟಿನಲ್ಲಿ ವೇತನದ ಮಿತಿ ಮತ್ತಷ್ಟು ಹೆಚ್ಚಿಸಿ ಖಾಸಗಿ ವಲಯದ ಸಿಬ್ಬಂದಿಗೆ ಉಚಿತ ಆರೋಗ್ಯ ಸೇವೆ ದೊರಕಿಸಿಕೊಡುವ ಕೆಲಸ ಮಾಡಲಾಗುವುದು. ಅದರೊಂದಿಗೆ ಸರಕಾರಿ ಉದ್ಯೋಗಿಗಳಿಗಿರುವ ಜ್ಯೋತಿ ಸಂಜಿವಿನಿ ಆರೋಗ್ಯ ಸೇವೆ ಅನುದಾನಿತ, ಅನುದಾನರಹಿತ ಶಿಕ್ಷಕರಿಗೂ ವಿಸ್ತರಣೆ ಮಾಡುವ ನಿಟ್ಟಿನಲ್ಲಿ ಸರಕಾರದ ಗಮನ ಸೆಳೆದು…
ಮಡಿಕೇರಿ ಮೇ 28 NEWS DESK : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ನಿಗಮದ ಅಧೀಕ್ಷಕ ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಮತ್ತು ನಿಗಮದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಕೊಡಗು ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ನಿಗಮದ ಅನುದಾನದಲ್ಲಿ ಅವ್ಯವಹಾರ ನಡೆದಿದೆ ಎಂದು ಕೆಲವು ಪ್ರಭಾವಿಗಳ ಹೆಸರು ಪ್ರಸ್ತಾಪಿಸಿ ಡೆತ್ ನೋಟ್ ಬರೆದಿಟ್ಟು ಅಧಿಕಾರಿ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಖಂಡನೀಯ ಮತ್ತು ಅತ್ಯಂತ ಗಂಭೀರ ವಿಚಾರವಾಗಿದೆ ಎಂದು ತಿಳಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಬಳಕೆಯಾಗಬೇಕಿದ್ದ ಅನುದಾನವನ್ನು ಬೇರೆ ಉದ್ದೇಶಕ್ಕೆ ಬಳಸಿಕೊಳ್ಳಲು ಪ್ರಭಾವಿಗಳು ಒತ್ತಡ ಹೇರಿರುವ ಶಂಕೆ ವ್ಯಕ್ತವಾಗಿದೆ. ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆಗೆ ಶರಣಾಗಿರುವುದನ್ನು ಗಮನಿಸಿದರೆ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿರುವುದು ಸ್ಪಷ್ಟವಾಗುತ್ತದೆ. ಇದೇ ಕಾರಣಕ್ಕೆ ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ಕುಂಟಿತಗೊಂಡಿದೆ ಎಂದು…
ಮಡಿಕೇರಿ ಮೇ 28 NEWS DESK : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ‘ನೀರಿನ ಭದ್ರತೆಗಾಗಿ ಸುಸ್ಥಿರ ಅಂತರ್ಜಲ ನಿರ್ವಹಣೆ’(ಸಸ್ಟೈನೇಬಲ್ ಗ್ರೌಂಡ್ ವಾಟರ್ ಮ್ಯಾನೇಜ್ಮೆಂಟ್ ಫಾರ್ ವಾಟರ್ ಸೆಕ್ಯುರಿಟಿ) ಎಂಬ ವಿಷಯದ ಕುರಿತು ಜೂನ್, 19 ರಿಂದ ಜೂನ್, 21 ರವರೆಗೆ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳಿಂದ ನುರಿತ ವಿಜ್ಞಾನಿಗಳು ವಿಷಯಾಧಾರಿತ ಉಪನ್ಯಾಸ ನೀಡಲಿದ್ದಾರೆ. ಈ ಸಮ್ಮೇಳನದಲ್ಲಿ ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಯುವ ವಿಜ್ಞಾನಿಗಳು ಭಾಗವಹಿಸಲು ಅವಕಾಶವಿದೆ. ಅಲ್ಲದೇ ಈ ಸಮ್ಮೇಳನದಲ್ಲಿ ರಿಸರ್ಚ್ ಪೇಪರ್ ಮಂಡಿಸಬಹುದಾಗಿದ್ದು, ಆಯ್ಕೆಯಾದ ರಿಸರ್ಚ್ ಪೇಪರ್ಗಳಿಗೆ ನಗದು ಬಹುಮಾನ ನೀಡಲಾಗುವುದು. ಈ ಸಮ್ಮೇಳನದಲ್ಲಿ ಭಾಗವಹಿಸಲು ಜೂನ್, 10 ರೊಳಗೆ ಗೂಗಲ್ ಫಾರ್ಮ್ (https://forms.gle/QDXV64LDibFbHydc9) ಮೂಲಕ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಕಾರ್ಯಕ್ರಮ ಸಂಯೋಜಕರು (ಮೊ. 9845258894 ಮತ್ತು 9743084194) ಅಥವಾ ಅಕಾಡೆಮಿಯ ವೆಬ್ಸೈಟ್ www.kstacademy.in ವೀಕ್ಷಿಸಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ…






