ಮಡಿಕೇರಿ ಜೂ.12 NEWS DESK : ಅವಘಡದಿಂದ ವ್ಯಕ್ತಿಯೊಬ್ಬರ ಸಾವಿಗೆ ಕಾರಣನಾದ ಆರೋಪದಡಿ ದ್ವಿಚಕ್ರ ವಾಹನವನ್ನು ಚಲಾಯಿಸಿದ್ದ ಅಪ್ರಾಪ್ತ ಬಾಲಕನನ್ನು ನ್ಯಾಯಾಲಯದ ಸೂಚನೆಯಂತೆ ಸುಧಾರಣೆಗಾಗಿ ಮೈಸೂರಿನ ಸರ್ಕಾರಿ ವೀಕ್ಷಣಾಲಯಕ್ಕೆ ಕಳುಹಿಸಲಾಗಿದೆ. ವಾಹನದ ಮಾಲೀಕರಾದ ಆತನ ತಾಯಿ ಯಶೋಧ ಎಂಬುವವರ ವಿರುದ್ಧ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶನಿವಾರಸಂತೆ ಪೊಲೀಸ್ ಠಾಣಾ ವ್ಯಾಪ್ತಿಯ ದುಂಡಳ್ಳಿ ಪಂಚಾಯತ್ ರಸ್ತೆಯಲ್ಲಿ ಜೂ.1 ರಂದು ರಾತ್ರಿ ಸುಮಾರು 7.15 ಗಂಟೆಗೆ ಪಾದಾಚಾರಿ ಜಯಪ್ಪ ಎಂಬುವರಿಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಹಾಸನ ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಜೂ.2 ರಂದು ಕೊನೆಯುಸಿರೆಳೆದಿದ್ದರು. ಘಟನೆಗೆ ಸಂಬಂಧಿಸಿದಂತೆ ಶನಿವಾರಸಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಅಪ್ರಾಪ್ತನಿಂದ ಅಪಘಾತವಾಗಿದೆ ಎಂದು ತಿಳಿದು ಬಂದಿತ್ತು. ಸಕಲೇಶಪುರ ತಾಲ್ಲೂಕು ಚಂಗಡಹಳ್ಳಿ ಗ್ರಾಮದ ನಿವಾಸಿ ಯಶೋಧ ಎಂಬುವವರ ಅಪ್ರಾಪ್ತ ವಯಸ್ಸಿನ ಪುತ್ರ ಸ್ಕೂಟಿಯನ್ನು ಚಲಾಯಿಸುತ್ತಿದ್ದ ಎಂದು ಆರೋಪಿಸಲಾಗಿದೆ. ದ್ವಿಚಕ್ರ ವಾಹನದ ಮಾಲೀಕರಾದ ಯಶೋಧ ಹಾಗೂ ಬಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡ…
ಲೇಖಕ: admin
ಮಡಿಕೇರಿ ಜೂ.12 NEWS DESK : ಅಕ್ರಮವಾಗಿ ಬೀಟೆ ಮರದ ನಾಟಾಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕುಶಾಲನಗರ ವಲಯ ಅರಣ್ಯ ಸಿಬ್ಬಂದಿಗಳು ಪತ್ತೆ ಹಚ್ಚಿದ್ದಾರೆ. ಕುಶಾಲನಗರದಿಂದ ಮೈಸೂರು ಕಡೆಗೆ ತೆರಳುತ್ತಿದ್ದ ವಾಹನವೊಂದನ್ನು ನಸುಕಿನ 2ಗಂಟೆ ವೇಳೆಗೆ ಅರಣ್ಯ ತಪಾಸಣಾ ಕೇಂದ್ರದ ಬಳಿ ತಪಾಸಣೆ ನಡೆಸಿದಾಗ ಲಕ್ಷಾಂತರ ರೂ. ಮೌಲ್ಯದ ಬೀಟೆ ಮರವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಸಿಬ್ಬಂದಿಗಳು ಕಾರ್ಯಪ್ರವೃತ್ತರಾಗುತ್ತಿದ್ದಂತೆ ಚಾಲಕ ಹಾಗೂ ಮತ್ತೊಬ್ಬ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾರೆ. ಬೀಟೆ ಮರದ 22 ನಾಟಗಳು ಮತ್ತು ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಕುಶಾಲನಗರ ವಲಯ ಅರಣ್ಯ ಅಧಿಕಾರಿ ರತನ್ ಕುಮಾರ್ ಪ್ರಕರಣದ ಕುರಿತು ಮಾಹಿತಿ ನೀಡಿದರು. ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ರತನ್ ಕುಮಾರ್, ಉಪವಲಯ ಅರಣ್ಯಾಧಿಕಾರಿ ದೇವಯ್ಯ, ಸಿದ್ದರಾಮ ನಾಟಿಕಾರ್, ಸಾಹೇಬಣ್ಣ ತಳವಾರ್, ತಪಾಸಣಾ ಕೇಂದ್ರದ ಸಿಬ್ಬಂದಿಗಳಾದ ಮೇದಪ್ಪ ಹಾಗೂ ಹೆಚ್.ವಿ.ಧರ್ಮರಾಜು ಪಾಲ್ಗೊಂಡಿದ್ದರು.
ಮಡಿಕೇರಿ ಜೂ.12 NEWS DESK : ರಾಷ್ಟ್ರವು ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯತ್ತ ಹೆಜ್ಜೆ ಹಾಕುತ್ತಿದ್ದು, ಆ ದಿಸೆಯಲ್ಲಿ ಮತ್ತಷ್ಟು ಪರಿಣಾಮಕಾರಿ ಕಾರ್ಯಗಳು ಆಗಬೇಕಿದೆ ಎಂದು ವಕೀಲರಾದ ಯಾಲದಾಳು ಮನೋಜ್ ಬೋಪಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಗಾಂಧಿ ಭವನದಲ್ಲಿ ನಡೆದ ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. 14 ವರ್ಷದೊಳಗಿನ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಶಾಲೆಯಲ್ಲಿ ಓದಿಕೊಂಡು ತಮ್ಮ ಕುಟುಂಬದಲ್ಲಿ ಕೃಷಿ, ಮನೆ ಕೆಲಸಗಳನ್ನು ಮಾಡಿದರೆ ಬಾಲ ಕಾರ್ಮಿಕ ಪದ್ಧತಿ ಆಗುವುದಿಲ್ಲ. ಮಕ್ಕಳು ಆರೋಗ್ಯ ಮತ್ತು ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಬೇಕು ಎಂದು ಮನೋಜ್ ಬೋಪಯ್ಯ ವಿವರಿಸಿದರು. ನಾವೂ…
ಮಡಿಕೇರಿ ಜೂ.12 NEWS DESK : ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಸಂಬಂಧಿಸಿದ ಪ್ರಕರಣಗಳು ವರದಿಯಾದಲ್ಲಿ ಮಾಹಿತಿ ನೀಡಲು ವಿಪತ್ತು ನಿರ್ವಹಣಾ ಕೇಂದ್ರ ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರ-08272-221077, 08272-221099, ವಾಟ್ಸಾಪ್ ನಂ. 8550001077, ಮಡಿಕೇರಿ ತಾಲ್ಲೂಕು- ವಿಪತ್ತು ನಿರ್ವಹಣಾ ಕೇಂದ್ರ- 08272-228396, ವಿರಾಜಪೇಟೆ ತಾಲ್ಲೂಕು-ವಿಪತ್ತು ನಿರ್ವಹಣಾ ಕೇಂದ್ರ 08274-257328, ಸೋಮವಾರಪೇಟೆ ತಾಲ್ಲೂಕು-ವಿಪತ್ತು ನಿರ್ವಹಣಾ ಕೇಂದ್ರ 08276-282045, ಕುಶಾಲನಗರ ತಾಲ್ಲೂಕು- ವಿಪತ್ತು ನಿರ್ವಹಣಾ ಕೇಂದ್ರ 08276-200198 ಹಾಗೂ ಪೊನ್ನಂಪೇಟೆ ತಾಲ್ಲೂಕು- ವಿಪತ್ತು ನಿರ್ವಹಣಾ ಕೇಂದ್ರ 08274-249700 ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದ್ದಾರೆ.
ಮಡಿಕೇರಿ ಜೂ.12 NEWS DESK : ಗಾಳಿಬೀಡು ಮುಖ್ಯರಸ್ತೆಯಿಂದ 1ನೇ ಮೊಣ್ಣಂಗೇರಿ, ಫೈರಿಂಗ್ ರೇಂಜ್ ವರೆಗಿನ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ವಾಹನಗಳ ಸಂಚಾರ ಮತ್ತು ಪಾದಾಚಾರಿಗಳ ಓಡಾಟಕ್ಕೂ ಅನಾನುಕೂಲವಾಗಿದ್ದು, ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ಥಳೀಯ ಗ್ರಾಮಸ್ಥ ಗುಡ್ಡೆಮನೆ ಉಮೇಶ್, ಗಾಳಿಬೀಡು ಗ್ರಾ.ಪಂ ವ್ಯಾಪ್ತಿಯ ಗಾಳಿಬೀಡು, 1ನೇ ಮೊಣ್ಣಂಗೇರಿ ಹಾಗೂ ಫೈರಿಂಗ್ ರೇಂಜ್ ರಸ್ತೆ ಸಂಪೂರ್ಣವಾಗಿ ಗುಂಡಿಮಯವಾಗಿದೆ. ವಾಹನಗಳ ಸಂಚಾರ ಅಸಾಧ್ಯವಾಗಿದ್ದು, ವಿದ್ಯಾರ್ಥಿಗಳು ನಿತ್ಯ ಕಷ್ಟ ಪಡುತ್ತಿದ್ದಾರೆ. ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ರಸ್ತೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳದಿದ್ದಲ್ಲಿ ಗ್ರಾಮಸ್ಥರು ಒಗ್ಗೂಡಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. 1ನೇ ಮೊಣ್ಣಂಗೇರಿಯಲ್ಲಿ ಬೃಹತ್ ಕಟ್ಟಡಗಳ ವಿವಿಧ ಕಾಮಗಾರಿಗಳು ನಡೆಯುತ್ತಿದ್ದು, ಕಿರಿದಾದ ರಸ್ತೆಯಲ್ಲಿ ದೊಡ್ಡ ದೊಡ್ಡ ವಾಹನಗಳು ಸಂಚರಿಸುತ್ತಿವೆ. ಉತ್ತಮ ರೀತಿಯಲ್ಲಿದ್ದ ಕಾಂಕ್ರಿಟ್ ರಸ್ತೆ ಇದೀಗ ಸಂಪೂರ್ಣವಾಗಿ ಹದಗೆಟ್ಟಿದೆ. ಈ ಬಗ್ಗೆ ನೂತನ ರೆಸಾರ್ಟ್ ಮತ್ತು ವಿಲ್ಲಾಗಳ ಮಾಲೀಕರೊಂದಿಗೆ ಸಭೆ ನಡೆಸಿ ಗ್ರಾಮಸ್ಥರು ಚರ್ಚಿಸಿದಾಗ ರಸ್ತೆ…
ಕುಶಾಲನಗರ ಜೂ.12 NEWS DESK : ಕುಶಾಲನಗರ ಹಾಗೂ ಹಾರಂಗಿ ರಸ್ತೆಯಲ್ಲಿ ವಾಹನಗಳ ವೇಗ ನಿಯಂತ್ರಣಕ್ಕಾಗಿ ಹಂಪ್ ಅಳವಡಿಸುವಂತೆ ಆಗ್ರಹಿಸಿ ಕೂಡುಮಂಗಳೂರು ಗ್ರಾ.ಪಂ ಸದಸ್ಯ ಕೆ.ಬಿ.ಶಂಶುದ್ಧೀನ್ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಕುಶಾಲನಗರ ತಾಲ್ಲೂಕು ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಅವರು ಕುಶಾಲನಗರ ಹಾರಂಗಿ ರಸ್ತೆಯಲ್ಲಿ ವಿಪರೀತವಾಗಿ ಅಪಘಾತಗಳು ಸಂಭವಿಸುತ್ತಿವೆ. ಮೂಕಾಂಬಿಕ ಕಾಲೇಜು, ಸುಂದರನಗರ ಪ್ರಥಮ ದರ್ಜೆ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಹಾಗೂ ಕಾರ್ಮಿಕರು ರಸ್ತೆಯಲ್ಲಿ ನಡೆದಾಡುತ್ತಾರೆ. ವಾಹನಗಳ ಅತಿವೇಗದಿಂದ ಸಾರ್ವಜನಿಕರು ರಸ್ತೆಯಲ್ಲಿ ಭಯದಿಂದ ಸಂಚರಿಸುವಂತಾಗಿದೆ. ಕುಶಾಲನಗರ ಹಾರಂಗಿ ರಸ್ತೆಯು ಹೊಸದಾಗಿ ಡಾಂಬರೀಕರಣ ಹಾಗೂ ರಸ್ತೆ ಅಗಲೀಕರಣವಾಗಿರುವುದರಿಂದ ವಾಹನಗಳು ಅತಿವೇಗವಾಗಿ ಸಂಚರಿಸುತ್ತಿರುತ್ತವೆ. ಹದಿನೈದು ದಿನಗಳ ಹಿಂದೆ 22 ವರ್ಷದ ಯುವಕ ಅಪಘಾತದಿಂದ ಸಾವನ್ನಪ್ಪಿದ್ದಾನೆ. ರಸ್ತೆಹುಬ್ಬು ಇಲ್ಲದ ಕಾರಣ ವಾಹನಗಳ ಅತಿವೇಗ ಹಾಗೂ ಅಜಾಗರೂಕತೆಯಿಂದ ರಸ್ತೆಯಲ್ಲಿ ಆಗಾಗ ಅಪಘಾತಗಳು ಸಂಭವಿಸುತ್ತಿವೆ. ಸಂಬಂಧಪಟ್ಟ ಪೊಲೀಸ್ ಇಲಾಖೆಗೆ ಪಂಚಾಯಿತಿಯಿಂದ ಪತ್ರ ವ್ಯವಹಾರ ನಡೆಸಲಾಗಿದ್ದು, ಯಾವುದೇ ಕ್ರಮಕೈಗೊಂಡಿರುವುದಿಲ್ಲ ಎಂದು ಆರೋಪಿಸಿದರು. ಆದ್ದರಿಂದ ಇದನ್ನು ಗಂಭೀರವಾಗಿ ಪರಿಗಣಿಸಿ, ಕುಶಾಲನಗರ…
ಮಡಿಕೇರಿ ಜೂ.12 NEWS DESK : ಸಮರ್ಥ ಕನ್ನಡಿಗರು ಸಂಸ್ಥಯ ಕೊಡಗು ಜಿಲ್ಲಾ ಘಟಕದ ವತಿಯಿಂದ ನಿಮ್ಮ ಪ್ರತಿಭೆ ನಮ್ಮ ಪ್ರೋತ್ಸಾಹ ಕಾಯ೯ಕ್ರಮ ಆಯೋಜಿಲಾಗಿದ್ದು, ಮಕ್ಕಳಿಗೆ ವೈಯಕ್ತಿಕ ನೃತ್ಯ ಹಾಗೂ ಕಥೆ ಹೇಳುವ ಆನ್ ಲೈನ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಸಂಘಟನೆಯ ಜಿಲ್ಲಾ ಸಂಚಾಲಕಿ ಕೆ.ಜಯಲಕ್ಷ್ಮಿ ತಿಳಿಸಿದ್ದಾರೆ. ಸ್ಪಧೆ೯ಯ ವಿವರ ಇಂತಿದೆ : ಕಥೆ ಹೇಳುವ ಸ್ಪರ್ಧೆ : ನಿಯಮಗಳು : ವೈಯಕ್ತಿಕ ಸ್ಪರ್ಧೆಯಾಗಿದ್ದು, 3 ವರ್ಷದಿಂದ 6 ವರ್ಷದ ಒಳಗಿನ ಮಕ್ಕಳು ಮಾತ್ರ ಭಾಗವಹಿಸಬೇಕು, ಮೂರು ನಿಮಿಷ ಅವಧಿಯಲ್ಲಿ ಕಥೆಯ ನೀತಿಯನ್ನು ಹೇಳಬೇಕು., ಕಥೆ ಕನ್ನಡದಲ್ಲಿಯೇ ಇರಬೇಕು. ನೃತ್ಯ ಸ್ಪರ್ಧೆ : 7 ವರ್ಷದಿಂದ 12 ವರ್ಷದ ಒಳಗಿನ ಮಕ್ಕಳು ಭಾಗವಹಿಸಬಹುದು. ಕನ್ನಡ ಭಕ್ತಿಗೀತೆಗಳಿಗೆ 3 ನಿಮಿಷದ ಅವಧಿಯೊಳಗೆ ನೃತ್ಯ ಮಾಡಬೇಕು. ಭರತನಾಟ್ಯ ಸ್ಪರ್ಧೆ : ಚಲನಚಿತ್ರದ ಗೀತೆಗೆ ಭರತನಾಟ್ಯ ಮಾಡುವಂತಿಲ್ಲ, ಭರತನಾಟ್ಯ ದ ಉಡುಗೆ – ತೊಡುಗೆ ಕಡ್ಡಾಯ., 3 ನಿಮಿಷದ ಅವಧಿ, 12 ವರ್ಷದಿಂದ 18 ವರ್ಷದ…
ಮಡಿಕೇರಿ, ಜೂ.12 NEWS DESK : ರೋಟರಿ ಮಿಸ್ಟಿಹಿಲ್ಸ್ ವತಿಯಿಂದ ಫೀ.ಮಾ.ಕಾರ್ಯಪ್ಪ ಕಾಲೇಜಿಗೆ ಅವಶ್ಯವಿದ್ದ ಶೌಚಾಲಯವನ್ನ ನಿರ್ಮಿಸಿ ಕೊಡಲಾಗಿದೆ. ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪಿ.ಎಲ್.ಧರ್ಮ, ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ, ಮಿಸ್ಟಿಹಿಲ್ಸ್ ಅಧ್ಯಕ್ಷ ಪ್ರಮೋದ್ ರೈ, ಪ್ರಾಂಶುಪಾಲ ಡಾ. ಸಿ.ಬಿ.ರಾಮಚಂದ್ರ, ಕೊಟ್ಟುಕತ್ತಿರ ಯಶೋಧ ಪ್ರಕಾಶ್, ಕುಲಸಚಿವ ಡಾ.ಸೀನಪ್ಪ ಶೌಚಾಲಯ ಕಟ್ಟಡ ಉದ್ಘಾಟಿಸಿದರು. ಪ್ರಾಂಶುಪಾಲ ಮೇ. ಡಾ.ರಾಘವ ಮಾತನಾಡಿ, ಮಿಸ್ಟಿಹಿಲ್ಸ್ ಕಾಲೇಜಿನ ಏಳಿಗೆಗೆ ಕೈ ಜೋಡಿಸುತ್ತಿರುವುದಾಗಿ ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರಮೋದ್ ರೈ ಮಾತನಾಡಿ ಶೌಚಾಲಯವನ್ನು ರೋಟರಿ ಜಿಲ್ಲಾ ಗ್ರಾಂಟ್ನಿಂದ ಸುಮಾರು ರೂ. 1.81 ಲಕ್ಷ ವೆಚ್ಚದಲ್ಲಿ ನಿರ್ಮಿಸಿದುದಾಗಿ ಹೇಳಿದರು. ಸ್ಥಾಪಕ ಅಧ್ಯಕ್ಷ ಬಿ.ಜಿ.ಅನಂತ ಶಯನ ಮಾತನಾಡಿ ಸಂಸ್ಥೆಯು ಎರಡು ದಶಕಗಳಿಂದ ಕಾಲೇಜಿನೊಂದಿಗೆ ಯೋಜನೆಗಳನ್ನು, ಕಾರ್ಯಕ್ರಮಗಳನ್ನು ನಡೆಸುತ್ತಿರುವುದಾಗಿ ವಿವರಿಸಿದರು. ಸ್ಥಳದಲ್ಲಿ ರೋಟರಿ ಉಪರಾಜ್ಯಪಾಲ ಡಿ.ಎಂ.ತಿಲಕ್, ಮಾಜಿ ಎ.ಜಿ.ರವೀಂದ್ರ ರೈ, ನಾಮಾಂಕಿತ ಅಧ್ಯಕ್ಷ ಮಧುಸೂದನ್ ಹಾಗೂ ಸದಸ್ಯರು ಹಾಜರಿದ್ದರು.
ವಿರಾಜಪೇಟೆ ಜೂ.12 NEWS DESK : ಮಂಗಳೂರು ವಿಶ್ವವಿದ್ಯಾಲದ ಬಿ.ಎಸ್ಸಿ ಪದವಿ ಪರೀಕ್ಷೆಯಲ್ಲಿ ಶೇ.97 ರಷ್ಟು ಅಂಕಗಳನ್ನು ಪಡೆದು ವಿಶ್ವವಿದ್ಯಾಲಯ ಮಟ್ಟದಲ್ಲಿ ಆರನೇ ರ್ಯಾಂಕ್ ಪಡೆದ ಸೆಂಟ್ ಆನ್ಸ್ ಪದವಿ ಕಾಲೇಜಿನ ವಿದ್ಯಾರ್ಥಿನಿ ವಿನಿಷಾರನ್ನು ಕಾಲೇಜಿನ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭ ಪದವಿ ಕಾಲೇಜಿನ ವ್ಯವಸ್ಥಾಪಕ ಮತ್ತು ಪಿಯು ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಮದಲೈ ಮುತ್ತು, ಸಂತ ಅನ್ನಮ್ಮ ದೇವಾಲಯದ ಪ್ರಧಾನ ಧರ್ಮಗುರುಗಳು ಮತ್ತು ವಿದ್ಯಾಸಂಸ್ಥೆಯ ವ್ಯವಸ್ಥಾಪಕ ರೆ.ಫಾ.ಜೇಮ್ಸ್ ಡೊಮಿನಿಕ್, ಪದವಿ ಕಾಲೇಜು ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಐಕ್ಯೂಎಸಿ ಸಂಚಾಲಕಿ ಹೇಮ ಮತ್ತು ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು.
ಕುಶಾಲನಗರ ಜೂ.12 NEWS DESK : ಎಸ್.ಕೆ.ಎಸ್.ಎಸ್.ಎಫ್ ಕೊಡಗು ಜಿಲ್ಲಾ ಸಮಿತಿಯ ವತಿಯಿಂದBRUSH UP – 2K24 ಜಿಲ್ಲಾ ಸಮಿತಿ ಹಾಗೂ ಉಪಸಮಿತಿಗಳ ನಾಯಕರಿಗೆ ತರಬೇತಿ ಕಾರ್ಯಕ್ರಮ ನಡೆಯಿತು. ಕುಶಾಲನಗರದ ಬಿಜಿಟಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಎಸ್.ಕೆ.ಎಸ್.ಎಸ್.ಎಫ್ ರಾಜ್ಯ ಸಮಿತಿ ಉಪಾಧ್ಯಕ್ಷ ತಮ್ಲೀಕ್ ದಾರಿಮಿ ಉದ್ಘಾಟಿಸಿದರು. ಪ್ರಸ್ತುತ ಸಾಲಿನಲ್ಲಿ ಎಸ್.ಕೆ.ಎಸ್.ಎಸ್.ಎಫ್ ಶಾಖಾ ಸಮಿತಿಯು ರೋಗಿಗಳಿಗೆ ಸಂಗ್ರಹಿಸುವ ಸಹಾಯ ಧನದಲ್ಲಿ ಜಿಲ್ಲೆಯಲ್ಲಿಯೇ ಅತ್ಯಧಿಕ ಮೊತ್ತವನ್ನು ಸಂಗ್ರಹಿಸಿದ ಸಿದ್ದಾಪುರ, ನೆಲ್ಲಿಹುದಿಕೇರಿ ಹಾಗೂ ಕೊಡ್ಲಿಪೇಟೆ ಶಾಖೆಗಳಿಗೆ ಕಾರ್ಯಕ್ರಮದಲ್ಲಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಮಾಧ್ಯಮ ವಿಭಾಗದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಉನೈಸ್ ಹುಂಡಿ, ಫರ್ಹಾನ್ ನೆಲ್ಲಿಹುದಿಕೇರಿ ಹಾಗೂ ಸಿದ್ದೀಕ್ ಶನಿವಾರಸಂತೆ ಅವರನ್ನು ಅಭಿನಂದಿಸಲಾಯಿತು. ಎಸ್.ಕೆ.ಎಸ್.ಎಸ್.ಎಫ್ ಜಿಲ್ಲಾಧ್ಯಕ್ಷ ಶುಹೈಬ್ ಫೈಝಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್.ಕೆ.ಎಸ್.ಎಸ್.ಎಫ್ ರಾಜ್ಯ ಉಪಾಧ್ಯಕ್ಷರಾದ ಇಕ್ಬಾಲ್ ಬಾಳಿಲ, ಪ್ರಮುಖರಾದ ಹಂಸ ಹಾಜಿ, ಅಬ್ದುಲ್ ಮಜೀದ್, ಅಬ್ದುಲ್ಲಾ ಫ್ಲೈ ಕೂರ್ಗ್ ಹಾಗೂ ಜಿಲ್ಲಾ ಸಮಿತಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಉಪಸಮಿತಿಗಳ ನಾಯಕರುಗಳು ಮತ್ತು ಸದಸ್ಯರುಗಳು ಭಾಗವಹಿಸಿದ್ದರು. ಜಿಲ್ಲಾ ಪ್ರಧಾನ…






