ಮಡಿಕೇರಿ ಮೇ 28 NEWS DESK : ತಾಜ್ ಯೂತ್ ಕ್ಲಬ್ ಕುಶಾಲನಗರ ಹಾಗೂ ಕೊಡಗು ಜಿಲ್ಲಾ ಮುಸ್ಲಿಂ ಕಪ್ ಫುಟ್ಬಾಲ್ ಅಸೋಸಿಯೇಷನ್ ಸಹಯೋಗದಲ್ಲಿ ಕುಶಾಲನಗರದ ಜಿ.ಎಂ.ಪಿ ಶಾಲಾ ಮೈದಾನದಲ್ಲಿ ನಡೆದ 5ನೇ ವರ್ಷದ ಕೊಡಗು ಜಿಲ್ಲಾ ಮಟ್ಟದ ಮುಸ್ಲಿಂ ಕಪ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ಅಲ್-ಅಮೀನ್ ಪಾಲಿಬೆಟ್ಟ ಚಾಂಪಿಯನ್ ತಂಡವಾಗಿ ಹೊರಹೊಮ್ಮಿದೆ. ದ್ವಿತೀಯ ಸ್ಥಾನವನ್ನು ರೋಜಾರಿಯನ್ಸ್ ಗೋಣಿಕೊಪ್ಪ ತಂಡ ಪಡೆದುಕೊಂಡಿತು. ಎರಡು ಬಲಿಷ್ಠ ತಂಡಗಳಾದ ಅಲ್-ಅಮೀನ್ ಪಾಲಿಬೆಟ್ಟ ಹಾಗೂ ರೋಜಾರಿಯನ್ಸ್ ಗೋಣಿಕೊಪ್ಪ ತಂಡಗಳ ನಡುವಿನ ಫೈನಲ್ ಪಂದ್ಯವು 20-20 ನಿಮಿಷಗಳಲ್ಲಿ ಮೊದಲಾರ್ಧದಲ್ಲಿ ಎರಡು ತಂಡವು ಸಮಬಲದ ಹೋರಾಟ ನಡೆಯಿತು. ದ್ವಿತೀಯಾರ್ಧದಲ್ಲಿ ರೋಜಾರಿಯನ್ಸ್ ತಂಡವು ಆಕ್ರಮಣಕಾರಿ ಆಟಕ್ಕೆ ಮುಂದಾಗಿ ತಂಡದ ಮುನ್ನಡೆ ಆಟಗಾರ ಸುಹೈಲ್ ಅವರ ಗೋಲುಬಾರಿಸುವುದರ ಮೂಲಕ 1-0 ಗೋಲುಗಳ ಅಂತರದಿಂದ ಮುನ್ನಡೆ ಪಡೆಯಿತು. ದ್ವಿತೀಯಾರ್ಧದ ಕೊನೆಯ ಮೂರು ನಿಮಿಷ ಬಾಕಿ ಉಳಿದಿರುವಾಗ ಅಲ್-ಅಮೀನ್ ತಂಡಕ್ಕೆ ಅದೃಷ್ಟ ಲಕ್ಷ್ಮಿಯಿಂತೆ ಫೀಲ್ಡ್ ನಲ್ಲಿ ಪೆನಾಲ್ಟಿ ಏರಿಯಾದಲ್ಲಿ ಎದುರಾಳಿ ತಂಡದ ಆಟಗಾರನ ಕೈ ಚೆಂಡು…
ಲೇಖಕ: admin
ಮಡಿಕೇರಿ ಮೇ 28 NEWS DESK : ವಿಶ್ವ ಪರಿಸರ ದಿನಾಚರಣೆ-2024 ರ ಅಂಗವಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿ, ಕೊಡಗು ವತಿಯಿಂದ ಪರಿಸರ ಸಂರಕ್ಷಣೆ ಕುರಿತು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಾಲಾ ಮಕ್ಕಳಿಗೆ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಯು ಎ.ಎಲ್.ಜಿ. ಕ್ರೆಸೆಂಟ್ ಶಾಲೆ(ಮಹದೇವಪೇಟೆ, ಚೌಡೇಶ್ವರಿ ದೇವಸ್ಥಾನದ ಹತ್ತಿರ, ಮಡಿಕೇರಿ)ಯಲ್ಲಿ ಜೂ.1 ರಂದು ಬೆಳಗ್ಗೆ 9.30 ಗಂಟೆಗೆ ನಡೆಯಲಿದೆ. (ಡ್ರಾಯಿಂಗ್ ಶೀಟ್ ಮಾತ್ರ ನೀಡಲಾಗುವುದು. ಚಿತ್ರ ಕಲೆಗೆ ಬೇಕಾಗುವ ಬಣ್ಣ ಇನ್ನಿತರೆ ವಸ್ತುಗಳನ್ನು ವಿದ್ಯಾರ್ಥಿಗಳೇ ತರಬೇಕು) ಈ ವರ್ಷದ ಘೋಷಣ ವಾಕ್ಯವು “ಭೂ ಮರುಸ್ಥಾಪನೆ, ಮರುಭೂಮೀಕರಣ ಹಾಗು ಬರ ತಡೆಯುವಿಕೆ” (Land Restoration, Desertification and Drought Resilience) ಆಗಿರುತ್ತದೆ. ಸ್ಫರ್ಧೆಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳವರು ಸ್ಥಳದಲ್ಲಿಯೇ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಎಂ.ಜಿ.ರಘುರಾಮ್, ಪರಿಸರ ಅಧಿಕಾರಿಗಳು, 9845026348, ಆಸ್ಟಿನ್ ಕೆ.ಎ. ಯೋಜನಾ ಸಹಾಯಕರನ್ನು 7760738447 (ಕಚೇರಿ: 08272-221855) ಹಾಗೂ ಸ್ಥಳೀಯ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ…
ಮಡಿಕೇರಿ ಮೇ 28 NEWS DESK : ಕೊಡಗು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನೈಋತ್ಯ ಪದವಿಧರ ಮತ್ತು ಶಿಕ್ಷಕರ ಕ್ಷೇತ್ರದ ಸಭೆ ಜಿಲ್ಲಾಧ್ಯಕ್ಷ ರವಿ ಕಾಳಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ನೈಋತ್ಯ ಪದವಿಧರ ಮತ್ತು ಶಿಕ್ಷಕರ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ಎಸ್.ಎಲ್.ಭೋಜೇಗೌಡ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ಸುಜಾಕುಶಾಲಪ್ಪ, ಮಾಜಿ ಶಾಸಕರುಗಳಾದ ಕೆ.ಜಿ.ಬೋಪಯ್ಯ ಮತ್ತು ಅಪ್ಪಚ್ಚು ರಂಜನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ನೆಲ್ಲಿರ ಚಲನ್ ಕುಮಾರ್, ವಿ.ಕೆ.ಲೋಕೇಶ್, ಮಾಜಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ನಗರ ಮಂಡಲ ಅಧ್ಯಕ್ಷ ಉಮೇಶ್ ಸುಬ್ರಮಣಿ, ಡಾ.ನವೀನ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ಅರುಣ್ ಕುಮಾರ್, ಮಡಿಕೇರಿ ಗ್ರಾಮಾಂತರ ಮಂಡಲದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ವಕ್ತಾರರಾದ ಸುಬ್ರಹ್ಮಣ್ಯ ಉಪಾಧ್ಯಾಯ ಹಾಗೂ ಸುವಿನ್ ಗಣಪತಿ ಹಾಗೂ ಪದಾಧಿಕಾರಿಗಳು, ಮತ್ತು ಕಾರ್ಯಕರ್ತರು ಹಾಜರಿದ್ದರು.
ಮಡಿಕೇರಿ ಮೇ 28 NEWS DESK : ಸೊರಬ ವಿಧಾನಸಭಾ ಕ್ಷೇತ್ರದ ಮೂಡಿ ಹಾಗೂ ಆನವಟ್ಟಿ ಮಹಾಶಕ್ತಿ ಕೇಂದ್ರದಲ್ಲಿ ನೈರುತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ್ ಸರ್ಜಿ ಪರವಾಗಿ ಮತಯಾಚನೆ ನಡೆಯಿತು. ಇದೆ ಜೂ.3 ರಂದು ನಡೆಯಲಿರುವ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಅಂಗವಾಗಿ ಡಾ.ಧನಂಜಯ್ ಸರ್ಜಿ ಪರವಾಗಿ ಹಾಗೂ ಮೈತ್ರಿ ಪಕ್ಷದ ಜೆಡಿಎಸ್ ಅಭ್ಯರ್ಥಿ ಭೋಜೇಗೌಡರ ಪರವಾಗಿ ಮತದಾರರ ಮನೆ ಮನೆಗೆ ಭೇಟಿ ನೀಡಿ ಮತ ಯಾಚಿಸಲಾಯಿತು. ಈ ಸಂದರ್ಭ ಸೊರಬ ಮಂಡಲದ ಅಧ್ಯಕ್ಷ ಪ್ರಕಾಶ್ ತಲ್ಕಾಲುಕೊಪ್ಪ, ವಿಭಾಗದ ಸಹ ಸಂಘಟನಾ ಕಾರ್ಯದರ್ಶಿ ನಟರಾಜ್ , ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಅಗಸನಹಳ್ಳಿ, ಸ್ಥಳೀಯ ಮುಖಂಡ ವಿನಯ್ ಶೆರ್ವಿ, ಶಿವನ ಗೌಡ್ರು, ಕೊಟ್ರೇಶ ಸ್ವಾಮಿ, ಹೊನ್ನಪ್ಪ ವಿನಯ ಗುತ್ತೇರ್, ಕರಿಯಪ್ಪ, ವಿಶ್ವನಾಥ್ ಹಾಗೂ ಅನೇಕ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಮಡಿಕೇರಿ ಮೇ 28 NEWS DESK : ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಮೇ, 29 ರಿಂದ ಪುನರ್ ಆರಂಭವಾಗಲಿದ್ದು, ಮೇ, 31 ರಂದು ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಪ್ರಾರಂಭೋತ್ಸವ ಜರುಗಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಶಿಕ್ಷಣಾಧಿಕಾರಿ ಹಾಗೂ ನೋಡಲ್ ಅಧಿಕಾರಿ ಎಂ.ಮಹದೇವಸ್ವಾಮಿ ತಿಳಿಸಿದ್ದಾರೆ. ಪ್ರಸಕ್ತ (2024-25) ನೇ ಶೈಕ್ಷಣಿಕ ಸಾಲಿನಲ್ಲಿ ಶಾಲೆಗಳನ್ನು ಪುನರ್ ಆರಂಭಿಸುವ ಸಂಬಂಧ ಅಗತ್ಯ ಪೂರ್ವ ಸಿದ್ಧತೆಯು ಮೇ 29 ರಂದು ನಡೆಯಲಿದೆ. ಶಾಲಾ ಆವರಣ, ಶಾಲಾ ಕೊಠಡಿ ಹಾಗೂ ಶೌಚಾಲಯ ಸ್ವಚ್ಚತೆ, ಕುಡಿಯುವ ನೀರು, ಸಂಪು, ಟ್ಯಾಂಕ್ ಸ್ವಚ್ಚತೆ, ಅಡುಗೆ ಮನೆ ಪಾತ್ರೆಗಳು, ಆಹಾರ ಧಾನ್ಯಗಳ ವ್ಯವಸ್ಥೆ, ಶಾಲಾ ವೇಳಾಪಟ್ಟಿ, ತರಗತಿ ವೇಳಾಪಟ್ಟಿ, ಶಿಕ್ಷಕರಿಗೆ ವಿಷಯ ಮತ್ತು ತರಗತಿ ಹಂಚಿಕೆ ಮತ್ತಿತರ ಕಾರ್ಯಗಳು ನಡೆಯಲಿವೆ ಎಂದು ವಿವರಿಸಿದರು. ಮೇ 30 ರಂದು ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹಾಗೂ ಪೋಷಕರ ಜೊತೆ ಪೂರ್ವಭಾವಿ ಸಭೆಯು ಆಯಾಯ ಶಾಲೆಗಳಲ್ಲಿ ನಡೆಯಲಿದೆ. ಮೇ 31 ರಂದು…
ಮಡಿಕೇರಿ ಮೇ.28 NEWS DESK : ಕೊಡಗು ಜಿಲ್ಲೆಯಲ್ಲಿ 2023-24 ನೇ ಸಾಲಿನ ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಫ್ರೂಟ್ಸ್ ಐಡಿ ಮುಖಾಂತರ ಫೇಸ್-1 ರಿಂದ ಫೇಸ್-9 ಹಂತದವರೆಗೆ ಒಟ್ಟು 11,935 ಫಲಾನುಭವಿ ರೈತರಿಗೆ ರೂ.191.42 ಲಕ್ಷ ಬೆಳೆ ಪರಿಹಾರ ಪಾವತಿಯಾಗಿರುತ್ತದೆ. ಫೇಸ್-1 ರಿಂದ ಫೇಸ್-9 ನೇ ಹಂತದವರೆಗೆ ಪ್ರತಿ ಫಲಾನುಭವಿಗೆ ಕನಿಷ್ಠ ಬೆಳೆ ಪರಿಹಾರ ಮೊತ್ತ ರೂ. 1,000 ಹಾಗೂ ಗರಿಷ್ಠ ಮೊತ್ತ ರೂ. 2,000 ಗಳಾಗಿರುತ್ತದೆ. ಫೇಸ್-10 ರಲ್ಲಿ 5365 ಫಲಾನುಭವಿ ರೈತರಿಗೆ ರೂ.283.66 ಲಕ್ಷ ಬೆಳೆ ಪರಿಹಾರ ಪಾವತಿಯಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.
ಮಡಿಕೇರಿ ಮೇ 28 NEWS DESK : ಕರ್ನಾಟಕ ವಿಧಾನ ಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಗಳ ಚುನಾವಣೆಯನ್ನು ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜೂ. 1 ರ ಸಂಜೆ 4 ಗಂಟೆಯಿಂದ ಜೂ. 3 ರ ಮಧ್ಯರಾತ್ರಿ 12 ಗಂಟೆಯವರೆಗೆ ಕೊಡಗು ಜಿಲ್ಲೆಯಾದ್ಯಂತ ಎಲ್ಲಾ ವಿಧದ ಮದ್ಯ ಸಾಗಾಣಿಕೆ, ಶೇಖರಣೆ ಮತ್ತು ಎಲ್ಲಾ ರೀತಿಯ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಹೋಟೆಲ್ ಮುಂತಾದವುಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.
ಮಡಿಕೇರಿ ಮೇ 28 NEWS DESK : ಮಡಿಕೇರಿ 66/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಫೀಡರ್ಗಳ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ನಡೆಸಬೇಕಿರುವುದರಿಂದ ಮೇ, 29 ರಂದು ಬೆಳಗ್ಗೆ 10 ರಿಂದ ಸಂಜೆ 05 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಮಡಿಕೇರಿ ನಗರ, ತಾಳತ್ಮನೆ, ಕಾಟಕೇರಿ, ಮದೆನಾಡು, ಜೋಡುಪಾಲ, ಬೋಯಿಕೇರಿ, ಮಕ್ಕಂದೂರು, ಗಾಳಿಬೀಡು, ಕುಂಡಮೇಸ್ತ್ರಿ, ಮೇಕೇರಿ, ಕಡಗದಾಳು, ಸಂಪಾಜೆ, ಭಾಗಮಂಡಲ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಇಇ ಕೋರಿದ್ದಾರೆ.
ಮಡಿಕೇರಿ ಮೇ 28 NEWS DESK : ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಜನಪರ ಚಳುವಳಿಗಳ ಒಕ್ಕೂಟ ಮೇ 30 ರಂದು ಹಮ್ಮಿಕೊಂಡಿರುವ “ನಮ್ಮೆಲ್ಲರ ಹೋರಾಟದ ನಡಿಗೆ ಹಾಸನದ ಕಡೆಗೆ” ಬೃಹತ್ ಪ್ರತಿಭಟನಾ ಮೆರವಣಿಗೆಗೆ ಕೊಡಗು ಜಿಲ್ಲಾ ಸಿಐಟಿಯು ಸಂಘಟನೆ ಬೆಂಬಲ ನೀಡಲಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಜ್ವಲ್ ರೇವಣ್ಣ ನಡೆಸಿದ್ದಾರೆ ಎನ್ನಲಾಗಿರುವ ಮಹಿಳಾ ದೌರ್ಜನ್ಯದಿಂದ ಇಡೀ ದೇಶ ತಲೆ ತಗ್ಗಿಸುವಂತ್ತಾಗಿದೆ. ಮಹಿಳೆಯರಿಗೆ ರಕ್ಷಣೆ ನೀಡಬೇಕಾದ ಜನಪ್ರತಿನಿಧಿಯೇ ದೌರ್ಜನ್ಯ ನಡೆಸಿರುವುದು ಅತ್ಯಂತ ಹೇಯ ಕೃತ್ಯವೆಂದು ಆರೋಪಿಸಿದರು. ಆದಿವಾಸಿಗಳು, ಅಮಾಯಕರು ಯಾವುದೇ ದೊಡ್ಡ ತಪ್ಪು ಮಾಡದಿದ್ದರೂ ತಕ್ಷಣ ಬಂಧಿಸುವ ಆಡಳಿತ ವ್ಯವಸ್ಥೆ ಪ್ರಜ್ವಲ್ ಅವರ ವಿರುದ್ಧ ಗಂಭೀರ ಆರೋಪಗಳಿದ್ದರೂ ವಿದೇಶಕ್ಕೆ ಪಲಾಯನ ಮಾಡಲು ಅವಕಾಶ ನೀಡಿದೆ. ಎಲ್ಲೋ ಕುಳಿತು ರಾಜಾರೋಷವಾಗಿ ವಿಡಿಯೋ ಮಾಡಿ ಮೇ 31 ಕ್ಕೆ ಬರುವುದಾಗಿ…
ಮಡಿಕೇರಿ ಮೇ 28 NEWS DESK : ಗರಗಂದೂರು “ಬಿ” ಗ್ರಾಮದ ಶ್ರೀ ಗುರು ಬಸವೇಶ್ವರ ದೇವಳದ ವಾರ್ಷಿಕ ಪೂಜೋತ್ಸವವು ಶ್ರದ್ಧಭಕ್ತಿಯಿಂದ ನಡೆಯಿತು. ಮುಂಜಾನೆಯಿಂದ ಗಣಪತಿ ಹೋಮ, ಶ್ರೀ ದೇವರ ಮಹಾಪೂಜೆ, ಮಹಾಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿತು. ನಂತರ ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ಗ್ರಾಮದ ವಿವಿಧಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು. ಸುಮಾರು 300 ವರ್ಷಗಳ ಹಳೆಯ ಶ್ರೀ ಗುರುಬಸವೇಶ್ವರ ದೇವಸ್ಥಾನವನ್ನು 2011ರ ಇಸವಿಯಲ್ಲಿ ರೋಹಿತ್ ಅವರ ಮುಂದಾಳತ್ವದಲ್ಲಿ ಮತ್ತು ಗ್ರಾಮಸ್ಥರ ಹಾಗೂ ದಾನಿಗಳ ನೆರವಿನಲ್ಲಿ ಜೀರ್ಣೋದ್ಧಾರ ಮಾಡಲಾಯಿತು. 2011 ರಿಂದ ಇಂದಿನವರೆಗೂ ಸಿ.ಕೆ.ರೋಹಿತ್ ಅವರು ದೇವಾಲಯ ಸಮಿತಿಯ ಅಧ್ಯಕ್ಷತೆ ವಹಿಸಿಕೊಂಡಿದ್ದು, ಪ್ರಸ್ತುತ ಸಾಲಿನಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಕೆ.ಡಿ.ವೀರಪ್ಪ, ಖಜಾಂಜಿಯಾಗಿ ಲಿಖಿತ್ ದಾಮೋದರ್, ಕಾರ್ಯದರ್ಶಿಯಾಗಿ ಅಜಿತ್ ಕುಮಾರ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಉಪ ಗ್ರಾಮಗಳಿಂದ 13 ಜನ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಗಿದೆ.






