ಕಡಂಗ ಮೇ 28 NEWS DESK : ವಿರಾಜಪೇಟೆಯಿಂದ ನಾಪೋಕ್ಲುವಿಗೆ ತೆರಳುವ ಹಾಗೂ ಕಡಂಗ ಮತ್ತು ಕಾಕೋಟುಪರಂಬುವಿಗೆ ಸಂಪರ್ಕ ಕಲ್ಪಿಸುವ ಕುಂಜಲಗೇರಿ ರಸ್ತೆ ಸಂಪೂರ್ಣವಾಗಿ ಹದಗಿಟ್ಟಿದ್ದು, ಪಾದಾಚಾರಿಗಳು ಹಾಗೂ ವಾಹನ ಚಾಲಕರ ಸಂಚಾರಕ್ಕೆ ಅಡಚಣೆಯನ್ನುಂಟು ಮಾಡುತ್ತಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಕೋಟುಪರಂಬು ಗ್ರಾ.ಪಂ ವ್ಯಾಪ್ತಿಗೆ ಒಳಪಡುವ ಕುಂಜಿಲಗೇರಿ ಗ್ರಾಮದ ರಸ್ತೆಯು ಕಳೆದ 15 ವರ್ಷಗಳಿಂದ ಸಂಪೂರ್ಣವಾಗಿ ಹದಗೆಟ್ಟಿದ್ದು, ಗ್ರಾಮಸ್ಥರು ಸಂಚರಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಹಲವು ವರ್ಷಗಳಿಂದ ರಸ್ತೆ ದುರಸ್ತಿಗೆ ಆಗ್ರಹಿಸಿ ಗ್ರಾಮಸ್ಥರು ಶಾಸಕರು, ಸಂಸದರು, ಪರಿಷತ್ ಸದಸ್ಯರು ಹಾಗೂ ಜಿಲ್ಲಾ ಪಂಚಾಯ್ತಿ ತಾಲ್ಲೂಕು ಪಂಚಾಯಿತಿ ಸದಸ್ಯರಿಗೆ ಮನವಿ ಸಲ್ಲಿಸಲಾಗಿದ್ದು, ಇಲ್ಲಿಯವರೆಗೆ ಯಾವುದೇ ಸ್ಪಂದನೆ ದೊರೆತ್ತಿಲ್ಲವೆಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದರು. ಕಡಂಗ, ಪಾರಣೆ ಮುಖ್ಯ ರಸ್ತೆಯಲ್ಲಿ ಹೋಗುವಾಗ ಕುಂಜಲಗೇರಿಯ ವಲ್ಲಂಡ ಕೊಟ್ಟ್ ಎಂಬಲ್ಲಿ ಮುಖ್ಯ ರಸ್ತೆಯು ಸಹ ಈ ರಸ್ತೆಯಿಂದ ಮಳೆಗಾಲದಲ್ಲಿ ಬರುವ ಕೆಸರಿನಿಂದ ದುಸ್ಥಿತಿಯಲ್ಲಿದ್ದು, ರಸ್ತೆ ದುರಸ್ತಿ ಆಗ್ರಹಿಸಿ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೆ ಕೇವಲ ಭರವಸೆಗಳಷ್ಟೇ ನೀಡುತ್ತಿದ್ದಾರೆ…
ಲೇಖಕ: admin
ಮಡಿಕೇರಿ ಮೇ 28 NEWS DESK : ಕೊಡವ ಮಕ್ಕಡ ಕೂಟದ ವತಿಯಿಂದ ಹಿರಿಯ ಸಾಹಿತಿಗಳಾದ ಬಾಚರಣಿಯಂಡ ಅಪ್ಪಣ್ಣ ಹಾಗೂ ರಾಣು ಅಪ್ಪಣ್ಣ ಅವರು ಬರೆದ “ಅಲಾಸ್ಕ” ಪ್ರವಾಸ ಕಥನ ಕನ್ನಡ ಪುಸ್ತಕವನ್ನು ಮಡಿಕೇರಿಯಲ್ಲಿ ಬಿಡುಗಡೆಗೊಳಿಸಲಾಯಿತು. ನಗರದ ಪತ್ರಿಕಾ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಐ.ಎ.ಪಿ. ಪ್ರೈವೆಟ್ ಲಿಮಿಟೆಡ್ನ ಸಿ.ಇ.ಒ ಮುಕ್ಕಾಟಿರ ಸೋಮಣ್ಣ ಅವರು ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿ, ಕೊಡವ ಮಕ್ಕಡ ಕೂಟದಿಂದ ಬರಹಗಾರರನ್ನು ಪ್ರೋತ್ಸಾಹಿಸವ ಕಾರ್ಯ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಪುಸ್ತಕಗಳು ಹೊರ ಬರಲಿ ಎಂದು ಶುಭ ಹಾರೈಸಿದರು. ಹಿರಿಯ ಸಾಹಿತಿ ಹಾಗೂ “ಅಲಾಸ್ಕ” ಪುಸ್ತಕದ ಬರಹಗಾರ ಬಾಚರಣಿಯಂಡ ಪಿ.ಅಪ್ಪಣ್ಣ ಅವರು ಮಾತನಾಡಿ, ಹೃದಯವಂತ ಸಾಹಿತ್ಯ ಪೋಷಕರು ಇದ್ದಾಗ ಮಾತ್ರ ಸಾಹಿತ್ಯ ಕ್ಷೇತ್ರ ಅಗಾಧ ರೂಪದಲ್ಲಿ ಬೆಳೆಯಲು ಸಾಧ್ಯ ಎಂದರು. 2015ರಲ್ಲಿ ಯು.ಎಸ್.ಎ ಯ ಪ್ರತ್ಯೇಕವಾದ ಭೂ ಸ್ವರೂಪ ಮತ್ತು ವಿಶಿಷ್ಟ ಸಂಸ್ಕøತಿಯ ಮೂಲ ನಿವಾಸಿಗಳನ್ನು ಹೊಂದಿರುವ ಅಲಾಸ್ಕ ಪ್ರದೇಶವನ್ನು ಅಧ್ಯಯನ ಮಾಡಿ ದಿನಚರಿಯನ್ನಾಗಿಸಲಾಯಿತು. ಇದನ್ನು ಆಧರಿಸಿ ಪುಸ್ತಕ…
ಮಡಿಕೇರಿ ಮೇ 28 NEWS DESK : ಮಡಿಕೇರಿ ತಾಲ್ಲೂಕು ಹಿಂದೂ ಮಲಯಾಳಿ ಸಂಘದ ನೂತನ ಆಡಳಿತ ಮಂಡಳಿಯನ್ನು ರಚಿಸಲಾಗಿದ್ದು, ಅಧ್ಯಕ್ಷರಾಗಿ ಕೆ.ವಿ.ಧರ್ಮೇಂದ್ರ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಎಂ.ಎಸ್.ದಿನೇಶ್ ಆಯ್ಕೆಯಾಗಿದ್ದಾರೆ. ನಗರದಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗೌರವ ಅಧ್ಯಕ್ಷರಾಗಿ ಕೆ.ಎಸ್.ರಮೇಶ್, ಖಜಾಂಚಿಯಾಗಿ ಎಂ.ಪಿ.ರವಿ, ಉಪಾಧ್ಯಕ್ಷರುಗಳಾಗಿ ಪಿ.ಟಿ.ಉತ್ತಮನ್, ವಿಜಯ ಕುಮಾರ್, ಟಿ.ವಿ.ಗೋಪಿನಾಥ್, ಕಾರ್ಯದರ್ಶಿಯಾಗಿ ಹೆಚ್.ಪಿ.ಅಶೋಕ್, ಸಹ ಖಜಾಂಚಿಯಾಗಿ ಪಿ.ವಿ.ಸುಬ್ರಮಣಿ, ಸಂಘಟನಾ ಕಾರ್ಯದರ್ಶಿಯಾಗಿ ಟಿ.ಆರ್.ಪ್ರಮೋದ್ ಸಹ ಸಂಘಟನಾ ಕಾರ್ಯದರ್ಶಿಯಾಗಿ ಒ.ಎನ್.ಬಾಬು, ಕಚೇರಿ ಕಾರ್ಯದರ್ಶಿಗಳಾಗಿ ಕೆ.ಕೆ.ಮೋಹನ್, ಪ್ರಚಾರ ಸಮಿತಿ ಸಂಚಾಲಕರಾಗಿ ರವಿ ಅಪ್ಪು ಕುಟ್ಟನ್ ಹಾಗೂ ಪ್ರಚಾರ ಸಮಿತಿ ಸಹ ಸಂಚಾಲಕರಾಗಿ ಪ್ರಕಾಶ್ (ಉಣ್ಣಿ ), ಯುವ ಘಟಕದ ಅಧ್ಯಕ್ಷರಾಗಿ ಆರ್.ಅರವಿಂದ, ಉಪಾಧ್ಯಕ್ಷರಾಗಿ ಕೆ.ಎ.ಹರೀಶ್, ಕಾರ್ಯದರ್ಶಿಯಾಗಿ ಎಸ್.ಸಂದೀಪ್, ಸಹ ಕಾರ್ಯದರ್ಶಿಯಾಗಿ ಮನು ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ರದೀಶ್ ಅವರುಗಳು ಸರ್ವಾನುಮತದಿಂದ ಆಯ್ಕೆಯಾದರು. ನೂತನ ನಿರ್ದೇಶಕರುಗಳಾಗಿ ಚಂದ್ರ, ಎನ್.ಸಿ.ಸುನಿಲ್, ಪ್ರಭಾಕರ್, ಎಂ.ಎಂ.ಸುರೇಶ್, ಪಿ.ಪಿ.ಶ್ರೀಧರ್, ಸಿ.ಕೆ.ಹರೀಶ್, ಗೌರವ ಸಲಹೆಗಾರರಾಗಿ ಟಿ.ಆರ್.ವಾಸುದೇವ, ಟಿ.ಕೆ.ಸುಧೀರ್,…
ಮಡಿಕೇರಿ ಮೇ 28 NEWS DESK : ವಿಧಾನ ಪರಿಷತ್ ಗೆ ನಡೆಯುವ ಪದವೀಧರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಆಯನೂರ್ ಮಂಜುನಾಥ್ ಹಾಗೂ ಶಿಕ್ಷಕರ ಕ್ಷೇತ್ರದಿಂದ ಕೆ.ಕೆ.ಮಂಜುನಾಥ್ ಸ್ಪರ್ಧಿಸಿದ್ದು, ಜೂ.3 ರಂದು ನಡೆಯುವ ಚುನಾವಣೆಯಲ್ಲಿ ಇಬ್ಬರು ಅಭ್ಯರ್ಥಿಗಳೂ ಗೆಲ್ಲುವ ವಿಶ್ವಾಸವನ್ನು ವಿರಾಜಪೇಟೆ ಕ್ಷೇತ್ರದ ಶಾಸಕರು, ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ವ್ಯಕ್ತಪಡಿಸಿದರು. ಗೋಣಿಕೊಪ್ಪಲು ಸಿಲ್ವರ್ ಸ್ಕೈ ಸಭಾಂಗಣದಲ್ಲಿ ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ಕಳೆದ ಒಂದು ವರ್ಷದಲ್ಲಿ ಕೊಡಗಿನಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯ ಹಾಗೂ ಗ್ಯಾರಂಟಿ ಯೋಜನೆಗಳಿಂದಾಗಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಅಭಿಪ್ರಾಯಪಟ್ಟರು. ಪದವೀಧರ ಕ್ಷೇತ್ರದ ಮತದಾರರನ್ನು ಶಾಲಾ ಕಾಲೇಜಿಗೆ ತೆರಳಿ ಮತಯಾಚನೆ ಮಾಡುತ್ತಿದ್ದು, ದೂರವಾಣಿ ಮೂಲಕವೂ ಸಂಪರ್ಕಿಸಲಾಗುತ್ತಿದೆ. ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದಲ್ಲಿ 1800 ಕ್ಕೂ ಅಧಿಕ ಮತದಾರರು ಇರುವದಾಗಿ ಮಾಹಿತಿ ನೀಡಿದರು. ಶಿಕ್ಷಕರಿಗೆ ಹಲವು ಸಮಸ್ಯೆಗಳಿವೆ. ಹೊಸಾ ಪಿಂಚಣಿ ಯೋಜನರ 7ನೇ ವೇತನ ಆಯೋಗದ ಶಿಫಾರಸ್ಸನ್ನು ರದ್ದುಗೊಳಿಸಿ ಹಳೇ ಪಿಂಚಣಿ ಯೋಜನೆಯನ್ನು ಶಿಕ್ಷಕರಿಗೆ ಜಾರಿಗೊಳಿಸಲು ಸರ್ಕಾರ…
ಮಡಿಕೇರಿ ಮೇ 28 NEWS DESK : ಕುಶಾಲನಗರ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿರುದ್ಧ ಕುಶಾಲನಗರ ತಾಲ್ಲೂಕು ಸಮಾನ ಮನಸ್ಕರ ವತಿಯಿಂದ ಪ್ರಾಧಿಕಾರದ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಕುಶಾಲನಗರ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಚೇರಿಯಲ್ಲಿ ಸಾರ್ವಜನಿಕರಿಗೆ ಸ್ಪಂದಿಸದೆ ದರ್ಪದಿಂದ ವರ್ತಿಸುತ್ತಿದ್ದು ಕಚೇರಿಗೆ ಬರುವ ಸಾಮಾನ್ಯ ಜನರೊಂದಿಗೆ ಸರ್ವಾಧಿಕಾರಿ ಧೋರಣೆ ತಾಳುತ್ತಿದ್ದಾರೆ ಎಂದು ಆರೋಪಿಸಿ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಸ್ಥಳಕ್ಕೆ ಜಿಲ್ಲಾಧಿಕಾರಿ ಆಗಮಿಸುವಂತೆ ಪಟ್ಟುಹಿಡಿದರು. ತಪ್ಪಿದಲ್ಲಿ ಅನಿರ್ದಿಷ್ಟಾವಧಿ ಹೋರಾಟ ನಡೆಸುವುದಾಗಿ ಎಚ್ಚರಿಸಿದರು. ಪ್ರತಿಭಟನೆಯ ಮಾಹಿತಿ ತಿಳಿದ ಮಡಿಕೇರಿ ಉಪವಿಭಾಗಾಧಿಕಾರಿ ವಿನಾಯಕ್ ನಾರ್ವಡೆ ಸ್ಥಳಕ್ಕೆ ಭೇಟಿ ನೀಡಿ, ಪ್ರತಿಭಟನಾಕಾರರ ದೂರುಗಳನ್ನು ಆಲಿಸಿ ಮನವಿ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು, ಕುಶಾಲನಗರ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರಿಗೆ ಸಂಬಂಧಿಸಿದಂತೆ ಸಾರ್ವಜನಿಕರು ದೂರು ಬಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ದೂರಿನ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗವುದು. ಕಚೇರಿಯಲ್ಲಿ ಸಿಸಿ ಕ್ಯಾಮರಾ ಹಾಗೂ ಬಯೋಮೆಟ್ರಿಕ್ ಅಳವಡಿಸುವ…
ಮಡಿಕೇರಿ ಮೇ 28 NEWS DESK : ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ. ಸಿಪೆಟ್ ಸಂಸ್ಥೆಯು ಭಾರತ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದೆ. ಸಂಸ್ಥೆಯು ದೇಶದ ಪಾಲಿಮರ್/ಪೆಟ್ರೋಕೆಮಿಕಲ್ಸ್/ ಪ್ಲಾಸ್ಟಿಕ್ಸ್ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲಕ್ಕೆ ಶೈಕ್ಷಣಿಕ ತರಬೇತಿ ನೀಡಲಾಗುತ್ತಿದೆ ಮತ್ತು ಸಿಪೆಟ್ ಕರ್ನಾಟಕದ ವಿದ್ಯಾರ್ಥಿಗಳು ಪಾಲಿಮರ್ ಕೈಗಾರಿಕಾ ವಲಯದಲ್ಲಿ ಜಾಗತಿಕವಾಗಿ ಗುರುತಿಸಲ್ಪಟ್ಟಿದ್ದಾರೆ. ಸಿಪೆಟ್ 2024-25ನೇ ಸಾಲಿನ ಉದ್ಯೋಗಾದಾರಿತ ಮತ್ತು ಉದ್ಯೋಗ ಖಚಿತ ಡಿಪ್ಲೊಮಾ ಕೋರ್ಸ್ಗಳ ಪ್ರವೇಶಕ್ಕೆ ಆನ್ಲೈನ್/ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಡಿಪ್ಲೊಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ (ಡಿಪಿಟಿ), ಡಿಪ್ಲೊಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ(ಡಿಪಿಎಂಟಿ)–3 ವರ್ಷದ ಕೋರ್ಸ್ಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ಸಿಪೆಟ್ ಸಂಸ್ಥೆಯ ನಿರ್ದೇಶಕರು ಮತ್ತು ಮುಖ್ಯಸ್ಥರಾದ ಆರ್.ಟಿ.ನಾಗರಳ್ಳಿ ಅವರು ತಿಳಿಸಿದ್ದಾರೆ. ಎಸ್ಎಸ್ಎಲ್ಸಿ ಮತ್ತು ಪಿಯುಸಿ(ವಿಜ್ಞಾನ) ಪರೀಕ್ಷೆಯಲ್ಲಿ ತೇರ್ಗಡೆಯಾದವರು/ ಹಾಜರಾದವರು ಆನ್ಲೈನ್/ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.…
ಮಡಿಕೇರಿ ಮೇ 28 NEWS DESK : 2024-25 ನೇ ಸಾಲಿಗೆ ಅನುದಾನಿತ ಕೋರ್ಸುಗಳಾದ ಆರ್ಕಿಟೆಕ್ಟರ್ ಅಸಿಸ್ಟೆಂಟ್ಷಿಪ್, ಕಮರ್ಷಿಯಲ್ ಪ್ರಾಕ್ಟೀಸ್, ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್, ಅನುದಾನ ರಹಿತ ಕೋರ್ಸುಗಳಾದ ಜ್ಯುಯಲರಿ ಡಿಸೈನ್ ಮತ್ತು ಟೆಕ್ನಾಲಜಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್, ಕಂಪ್ಯೂಟರ್ ಅಪ್ಲಿಕೇಷನ್ಸ್ (ಫಾರ್ ವಿಜ್ಯುವಲಿ ಇಂಪೇರ್ಡ್) ಹಾಗೂ ಅಪಾರೇಲ್ ಡಿಸೈನ್ ಮತ್ತು ಫ್ಯಾಬ್ರಿಕೇಷನ್ ಟೆಕ್ನಾಲಜಿ ಮೂರು ವರ್ಷಗಳ ಅವಧಿಯ ಡಿಪ್ಲೋಮಾ ಕೋರ್ಸುಗಳ ಪ್ರವೇಶಕ್ಕೆ (ಅಖಿಲ ಭಾರತ ಮಟ್ಟದಲ್ಲಿ) ವಿಶೇಷ ಚೇತನ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ ಶೇ.35 ಅಂಕಗಳೊಂದಿಗೆ ತೇರ್ಗಡೆ ಹಾಗೂ ಮೂಳೆ ಮತ್ತು ಕೀಲು ಅಂಗವಿಕಲತೆ ಶೇ.40 ಮತ್ತು ಮೇಲ್ಪಟ್ಟು, ಕಿವುಡು ಮತ್ತು ಮೂಗು ಅಂಗವಿಕಲತೆ ಶೇ.60 ಡಿಬಿ ಮತ್ತು ಮೇಲ್ಪಟ್ಟು, ಭಾಗಶಃ ಮತ್ತು ಪೂರ್ಣ ಅಂಧತ್ವ 6/60 ಅಥವಾ 20/200 ಸ್ನೆಲೆನ್(ಕಂಪ್ಯೂಟರ್ ಅಪ್ಲಿಕೇಷನ್ಸ್ (ಫಾರ್ ವಿಜ್ಯುವಲಿ ಇಂಪೇರ್ಡ್) ಕೋರ್ಸಿಗೆ) ಅಂಗವೈಕಲ್ಯತೆಯ ಲಕ್ಷಣಗಳು ಹೊಂದಿರಬೇಕು. ಅರ್ಹ ವಿದ್ಯಾರ್ಥಿಗಳಿಗೆ ರಾಜ್ಯ…
ಮಡಿಕೇರಿ ಮೇ 28 NEWS DESK : 2023-24 ನೇ ಸಾಲಿನಲ್ಲಿ ಆರ್ಎಸ್ಪಿಡಿ ಲೆಕ್ಕ ಶೀರ್ಷಿಕೆಯಡಿ ಬೆಳೆಸಿರುವ ಸಸಿಗಳನ್ನು 2024 ನೇ ಸಾಲಿನ ಮಳೆಗಾಲದಲ್ಲಿ ಸಾರ್ವಜನಿಕರಿಗೆ ಹಾಗೂ ರೈತರಿಗೆ ಚಾಲ್ತಿಯಲ್ಲಿರುವ ಕಾನೂನು ನಿಯಮಗಳಿಗೆ ಅನುಸಾರವಾಗಿ ವಿತರಿಸಲು ಉದ್ದೇಶಿಸಿದೆ. ಅದರಂತೆ, ವಿರಾಜಪೇಟೆ ವಿಭಾಗದ ತಿತಿಮತಿ ವಲಯದ ಮಜ್ಜಿಗೆಹಳ್ಳ ಸಸ್ಯ ಕ್ಷೇತ್ರದಲ್ಲಿ ರೈತರಿಗೆ ಹಾಗೂ ಸಾರ್ವಜನಿಕರಿಗೆ ವಿತರಿಸಲು ಬೆಳೆಸಲಾದ 6*9 ಗಾತ್ರದ 75 ಸಾವಿರ ಹಾಗೂ 8*12 ಗಾತ್ರದ 5 ಸಾವಿರ ಒಟ್ಟು 80 ಸಾವಿರ ಸಸಿಗಳು ದಾಸ್ತಾನಿರುತ್ತದೆ. ಆಸಕ್ತ ಫಲಾನುಭವಿಗಳು ತಮ್ಮ ವೈಯಕ್ತಿಕ ವಿವರಗಳಾದ ಗುರುತಿನ ಚೀಟಿ, ಆರ್ಟಿಸಿ, ಆಧಾರ್ ಕಾರ್ಡ್ ಮತ್ತಿತರ ಅಗತ್ಯ ದಾಖಲಾತಿಗಳನ್ನು ಅರ್ಜಿಯೊಂದಿಗೆ ಜೂ.1 ರಿಂದ ವಲಯ ಅರಣ್ಯಾಧಿಕಾರಿ, ತಿತಿಮತಿ ವಲಯ, ತಿತಿಮತಿಯವರ ಕಚೇರಿಗೆ ತೆರಳಿ ನಗದು ಪಾವತಿಸಿ ರಶೀದಿ ಪಡೆದುಕೊಂಡು ಸಸಿಗಳನ್ನು ಪಡೆದುಕೊಳ್ಳಬಹುದು ಎಂದು ವಿರಾಜಪೇಟೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.
ಸೋಮವಾರಪೇಟೆ ಮೇ 28 NEWS DESK : ಪ್ರವಾಸಿತಾಣ ಎಂದೇ ಕರೆಸಿಕೊಳ್ಳುವ ಮಕ್ಕಳ ಗುಡಿ ಬೆಟ್ಟಕ್ಕೆ ತೆರಳುವ ರಸ್ತೆ ಎರಡೂ ಬದಿಯಲ್ಲಿ ಕಾಡು ಬೆಳೆದು, ಅಲ್ಲಲ್ಲಿ ಇದ್ದ ತ್ಯಾಜ್ಯದ ರಾಶಿಯನ್ನು ಕಂಡ ಬೆಂಗಳೂರಿನ ಉದ್ಯಮಿಯೊಬ್ಬರು ಜೇಸಿಬಿ ಮೂಲಕ ಸ್ವಚ್ಛಗೊಳಿಸಿದ್ದು, ಗ್ರಾಮಸ್ಥರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಕಿರಗಂದೂರು ಗ್ರಾ.ಪಂ ವ್ಯಾಪ್ತಿಯ ಮಕ್ಕಳ ಗುಡಿ ಪ್ರವಾಸಿ ತಾಣವಾಗಿದ್ದು, ಸಾಕಷ್ಟು ಪ್ರವಾಸಿಗರು ಇಲ್ಲಿಗೆ ಆಗಮಿಸಿ ಪ್ರಕೃತಿಯ ಸೊಬಗನ್ನು ಸವಿಯುತ್ತಾರೆ. ಆದರೆ ಪ್ರವಾಸೋದ್ಯಮ ಇಲಾಖೆಗೆ ಸೇರ್ಪಡೆಗೊಳ್ಳದ ಹಿನ್ನೆಲೆಯಲ್ಲಿ ಅಭಿವೃದ್ಧಿ ಕೆಲಸಗಳು ನಡೆದಿಲ್ಲ. ಸೂಕ್ತ ಭದ್ರತೆಯೂ ಇಲ್ಲದಂತಾಗಿದೆ. ಆದರೂ ಪ್ರವಾಸಿಗರನ್ನು ಸೆಳೆಯುತ್ತಿದೆ. ಮಕ್ಕಳಗುಡಿ ಬೆಟ್ಟದ ವ್ಯೂ ಪಾಯಿಂಟ್ ನಲ್ಲಿ ಯಾವುದೇ ರೀತಿಯ ಸುರಕ್ಷತೆಗಳು ಇಲ್ಲ. ಇಲ್ಲಿ ಎಲ್ಲೆಂದರಲ್ಲಿ ಮದ್ಯದ ಬಾಟಲು, ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹವಾಗಿದೆ. ರಸ್ತೆಯ ಎರಡೂ ಬದಿಯ ಕಾಡುಗಳು ರಸ್ತೆಯನ್ನು ಆಕ್ರಮಿಸಿಕೊಂಡಿತ್ತು. ಇದರ ಸ್ವಚ್ಛತೆಗೆ ಸ್ಥಳೀಯ ಗ್ರಾ.ಪಂ ಮುಂದಾಗದಿರುವುದರಿಂದ, ಪ್ರವಾಸಿಗರು ಕಷ್ಟದಲ್ಲಿ ಈ ಸ್ಥಳಕ್ಕೆ ಆಗಮಿಸುತ್ತಿದ್ದರು. ಸಂಜೆ ಸಮಯವಾದರೆ ಬೆಟ್ಟಕ್ಕೆ ಹೋಗಲು ಜನರು ಭಯಪಡುವಂತಾಗಿತ್ತು. ಉದ್ಯಮಿ ಸುರೇಶ್ ಮಾತನಾಡಿ,…
ಸೋಮವಾರಪೇಟೆ ಮೇ 28 NEWS DESK : ಆಲೇಕಟ್ಟೆ ರಸ್ತೆಯಲ್ಲಿರುವ ಹಾಲು ಸಂಗ್ರಹ ಡೈರಿಗೆ ಯಡೂರು ಬಿಟಿಸಿಜಿ ಕಾಲೇಜಿನ ವಿದ್ಯಾರ್ಥಿಗಳು ಭೇಟಿ ನೀಡಿ ಹೈನುಗಾರಿಕೆಯ ಬಗ್ಗೆ ಮಾಹಿತಿ ಪಡೆದರು. ಚೌಡ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿರುವ ಹಾಲು ಉತ್ಪಾದಕರ ಸಹಕಾರ ಸಂಘದ ಡೈರಿಗೆ ಭೇಟಿ ನೀಡಿದ ಕಾಲೇಜಿನ ಅಂತಿಮ ವರ್ಷದ ಬಿ.ಕಾಂ.ವಿದ್ಯಾರ್ಥಿಗಳಾದ ಕಾವ್ಯ, ಅಂಕಿತ, ಚೈತನ್ಯ ಡೈರಿಯ ಕೆಲಸ ಕಾರ್ಯಗಳ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಸರ್ಕಾರದಿಂದ ಡೈರಿಗಳ ಮೂಲಕ ಹೈನುಗಾರರಿಗೆ ಸಿಗುವ ಸೌಲಭ್ಯಗಳು, ಫೀಡ್ಸ್, ಔಷಧಿಗಳ ಬಗ್ಗೆ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಯೋಗೇಂದ್ರ ವಿವರಣೆ ನೀಡಿದರು. ಹಾಲಿನ ಗುಣಮಟ್ಟ, ಹವಾಮಾನ ವೈಪರೀತ್ಯದಿಂದ ಹಾಲಿನ ಉತ್ಪಾದನೆ ಮೇಲೆ ಆಗುವ ಏರಿಳಿತ, ಹಸುಗಳ ಸಾಕಾಣಿಕೆ, ಮೇವು, ಹಾಲಿನ ಸಾಗಾಟ, ಸಂಗ್ರಹ, ಉತ್ಪಾದನಾ ವೆಚ್ಚ, ಮಾರುಕಟ್ಟೆಯ ಬೇಡಿಕೆ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ ವಿದ್ಯಾರ್ಥಿಗಳು ಮಾಹಿತಿ ಪಡೆದರು.






