ಲೇಖಕ: admin

ಮಡಿಕೇರಿ ಮೇ 28 NEWS DESK : ದಾವಣಗೆರೆಯ ನೇತಾಜಿ ಸುಭಾಶ್ ಚಂದ್ರ ಬೋಸ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಯೋನೆಕ್ಸ್ ಸನ್ ರೈಸ್ ಕರ್ನಾಟಕ ರಾಜ್ಯ ಮಟ್ಟದ ಸಬ್ ಜೂನಿಯರ್ ಬ್ಯಾಡ್ಮಿಂಟನ್ ಪಂದ್ಯಾವಳಿಯ 17 ವರ್ಷದ ಬಾಲಕಿಯರ ವಿಭಾಗದಲ್ಲಿ ಕೊಡಗಿನ ಬೊಪ್ಪಂಡ ದಿಯಾ ಭೀಮಯ್ಯ ಸಿಂಗಲ್ಸ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ದಿಯಾ ಭೀಮಯ್ಯ, ಮೈಸೂರಿನ ಸ್ಪೋರ್ಟ್ಸ್ ಪಾರ್ಕ್ ಅಕಾಡಮಿಯಲ್ಲಿ ಮೇದುರ ಅರುಣ್ ಪೆಮ್ಮಯ್ಯ ಹಾಗೂ ಬಿ.ಪಿ.ಭೀಮಯ್ಯ ಅವರ ಬಳಿ ತರಬೇತಿ ಪಡೆಯುತ್ತಿದ್ದಾರೆ. ದಿಯಾ ಮಡಿಕೇರಿಯ ದೇಚೂರಿನ ಬೊಪ್ಪಂಡ ಕುಸುಮ ಹಾಗೂ ಭೀಮಯ್ಯ ಅವರ ಪುತ್ರಿ.

Read More

ಮಡಿಕೇರಿ ಮೇ 27 NEWS DESK : ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಮೂವರು ಪತ್ರಕರ್ತರು ಭಾಜನರಾಗಿದ್ದಾರೆ. ಹಿರಿಯ ಪತ್ರಕರ್ತ ಕೆ.ಬಿ.ಮಹಂತೇಶ್ ಅವರ ಸ್ಮರಣಾರ್ಥ ಕೊಡಗು ಪ್ರೆಸ್ ಕ್ಲಬ್ ವತಿಯಿಂದ ನೀಡುವ ಅತ್ಯುತ್ತಮ ಪರಿಣಾಮಕಾರಿ ವರದಿ ಪ್ರಶಸ್ತಿಗೆ ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ‘ಏಜೆಂಟರ ಮೋಸಕ್ಕೆ ಬಲಿಯಾಗಿ ವಿದೇಶದಲ್ಲಿ ಸಿಲುಕಿದ ಮಹಿಳೆ’ ಎಂಬ ವರದಿಗೆ ಎ.ಎನ್.ವಾಸು ಪಡೆದುಕೊಂಡಿದ್ದಾರೆ. ಕೋವರ್ ಕೊಲ್ಲಿ ಇಂದ್ರೇಶ್ ಮತ್ತು ಕುಟುಂಬವರ್ಗ ತಮ್ಮ ತಂದೆ ಬಿ.ವಿ ಚಂದ್ರಶೇಖರ್ ಹಾಗೂ ತಾಯಿ ಪುಷ್ಪಲತಾ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಮಾನವೀಯ ವರದಿ ಪ್ರಶಸ್ತಿಗೆ ಸ್ಟಾರ್ ಆಫ್ ಮೈಸೂರು ಪತ್ರಿಕೆಯಲ್ಲಿ ಪ್ರಕಟವಾದ ‘Daredevil act by kodagu born vet saves leopard in mangaluru’ ಎಂಬ ವರದಿಗೆ ಪಿ.ವಿ.ಅಕ್ಷಯ್ ಪಡೆದುಕೊಂಡಿದ್ದಾರೆ. ಎಂ.ಎನ್. ಚಂದ್ರಮೋಹನ್ ಅವರು ತಮ್ಮ ತಂದೆ ಎಂ.ನಾರಾಯಣ ಹಾಗೂ ತಾಯಿ ಎನ್. ಪದ್ಮಾವತಿ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಪರಿಸರ ವರದಿ ಪ್ರಶಸ್ತಿಗೆ ಟಿ.ವಿ. 9 ವಾಹಿನಿಯಲ್ಲಿ ಪ್ರಕಟವಾದ…

Read More

ಹುಣುಸೂರು ಮೇ 27 NEWS DESK : ಟೈಲ್ಸ್ ಸಾಗಿಸುತ್ತಿದ್ದ ಲಾರಿಯ ಚಕ್ರ ಕಳಚಿ ಹಳ್ಳಕ್ಕುರುಳಿದ ಘಟನೆ ಹುಣಸೂರು-ಮೈಸೂರು ಹೆದ್ದಾರಿಯ ಬಿಳಿಕೆರೆ ಜಂಕ್ಷನ್ ನಲ್ಲಿ ನಡೆದಿದೆ. ಆಂಧ್ರದಿಂದ ಮಂಗಳೂರಿಗೆ ಟೈಲ್ಸ್ ಸಾಗಾಟ ಮಾಡುತ್ತಿದ್ದ ಲಾರಿಯ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಹೆದ್ದಾರಿಗೆ ಹಾಕಿರುವ ರಸ್ತೆ ಹುಬ್ಬನ್ನು ಗಮನಿಸದೆ ವೇಗವಾಗಿ ಬಂದಿದ್ದರಿಂದ ಲಾರಿ ಕಿರು ಸೇತುವೆಗೆ ಡಿಕ್ಕಿ ಹೊಡೆದು, ಆಕ್ಸಲ್ ಕಟ್ ಆಗಿದೆ, ಚಕ್ರಗಳು ಕಳಚಿ ಬಿದ್ದು ರಸ್ತೆ ಬದಿಯ ಹಳ್ಳಕ್ಕೆ ಉರುಳಿ ಬಿದ್ದಿದೆ ಎಂದು ತಿಳಿದು ಬಂದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಮಡಿಕೇರಿ ಮೇ 27 NEWS DESK : ಶನಿವಾರಸಂತೆ ಪೊಲೀಸ್ ಠಾಣಾ ವ್ಯಾಪ್ತಿಯ ಸುಳುಗಳಲೆ ಕಾಲೋನಿಯಲ್ಲಿ ಮೇ 24 ರಂದು ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸುಳುಗಳಲೆ ನಿವಾಸಿ ಜೀವನ್ (25) ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಈತನ ಬಳಿಯಿಂದ 43 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಸ್ಥಳೀಯ ನಿವಾಸಿ ಸುಂದರ್.ಬಿ.ಕೆ ಎಂಬುವವರು ಮನೆಗೆ ಬೀಗ ಹಾಕಿ ಕೆಲಸಕ್ಕೆಂದು ತೆರಳಿದ್ದಾಗ ಕಳ್ಳತನ ನಡೆದಿತ್ತು. ಈ ಕುರಿತು ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಆರೋಪಿ ಜೀವನ್ ನನ್ನು ಬಂಧಿಸಿದರು. ಈತನನ್ನು ಹೆಚ್ಚಿನ ವಿಚಾರಣೆಗೆ ಒಳಪಡಸಿದಾಗ ಫೆ.11 ರಂದು ಶನಿವಾರಸಂತೆಯ ತ್ಯಾಗರಾಜ ಕಾಲೋನಿಯಲ್ಲಿನ ಶ್ರೀ ವಿಜಯ ವಿನಾಯಕ ದೇವಾಸ್ಥಾನದ ಕಚೇರಿಯ ಬೀಗವನ್ನು ಒಡೆದು ದೇವಸ್ಥಾನದ ಕಾಣಿಕೆ ಹುಂಡಿಯನ್ನು ಕಳವು ಮಾಡಿರುವ ಮಾಹಿತಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್.ವಿ.ಗಂಗಾಧರಪ್ಪ, ಶನಿವಾರಸಂತೆ ಪಿಐ ಪ್ರೀತಂ.ಡಿ, ಪಿಎಸ್‌ಐಗಳಾದ ರವಿಶಂಕರ್.ಕೆ.ಆರ್, ಗೋವಿಂದರಾಜು ಹಾಗೂ…

Read More

ಮಡಿಕೇರಿ ಮೇ 27 NEWS DESK : ಕೊಡಗಿನ ಕಾವೇರಿ ಮಾತೆಯ ಸ್ಪೂರ್ತಿಯೊಂದಿಗೆ, ಕೈಯಲ್ಲಿ ಹಾಕಿ ಸ್ಟಿಕ್ ಹಿಡಿದು, ಸದೃಢತೆಯೊಂದಿಗೆ ಕೊಡಗಿನ ಹೆಮ್ಮೆಯ ಸಂಕೇತವಾಗಲು, ಸವಾಲುಗಳನ್ನು ಮೀರಿ, ಮಹಿಳಾ ಶಕ್ತಿಯಾಗಿ ಬೆಳದಿದ್ದಾಳೆ. ಅವಳು ಕೇವಲ ಆಟಗಾರ್ತಿಯಲ್ಲ, ಹಲವು ಯುವ ಹಾಕಿ ಆಟಗಾರ್ತಿಯರಿಗೆ ದಾರಿ ದೀಪ, ಅಂತಹ ಒಬ್ಬಳು ಅಂತರಾಷ್ಟ್ರೀಯ ಹಾಕಿ ಆಟಗಾರ್ತಿಯೇ ಪಟ್ಟಮಾಡ ಜಮುನ ಅನೂಪ್. ಕೆಚ್ಚೆಟ್ಟೀರ ಬೆಳ್ಳಿಯಪ್ಪ ಹಾಗು ಬೇಬಿ(ತಾಮನೆ ನಂದಿನೆರುವಂಡ) ದಂಪತಿಯರ ಪುತ್ರಿಯಾಗಿ ಜಮುನ ಅವರು ಮಡಿಕೇರಿಯ ಕಡಗದಾಳು ಗ್ರಾಮದಲ್ಲಿ ಜನಿಸಿದರು. ತಮ್ಮ ಪ್ರಾಥಮಿಕ ಶಿಕ್ಷಣವನ್ನು ಕಡಗದಾಳಿನಲ್ಲಿ ಮುಗಿಸಿ, ಪ್ರೌಢ ಶಿಕ್ಷಣವನ್ನು ಗೋಣಿಕೊಪ್ಪಲಿನಲ್ಲಿ, ಪಿಯುಸಿಯನ್ನು ಕಾವೇರಿ ಕಾಲೇಜು ಗೋಣಿಕೊಪ್ಪಲು ಹಾಗೂ ಪದವಿಯನ್ನು ತೆರೆಸಿಯನ್ ಕಾಲೇಜು ಮೈಸೂರಿನಲ್ಲಿ ಪೂರ್ಣಗೊಳಿಸಿದರು. ಬಾಲ್ಯದಲ್ಲಿ ಹಾಕಿಯ ಬಗ್ಗೆ ಆಸಕ್ತಿ ಹಾಗೂ ಕೌತುಕವನ್ನು ಹೊಂದಿದ್ದ ಜಮುನಾ ಅವರು ಹಾಕಿಯನ್ನು ಆಡಲು ಪ್ರಾರಂಭಿಸಿದ್ದರು. ಅವರ ಈ ಆಸಕ್ತಿಯೇ ಅವರನ್ನು ಅಂತರಾಷ್ಟ್ರೀಯ ಹಾಕಿ ಆಟಗಾರ್ತಿಯಾಗಲು ಪ್ರೇರೇಪಿಸಿತು. :: ಸಬ್ ಜೂನಿಯರ್ ನ್ಯಾಷನಲ್ ::  ಜಮುನ ಅವರು 1979ರ ಬಿಹಾರ…

Read More

ಮಡಿಕೇರಿ ಮೇ 27 NEWS DESK : ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ, ಎಸ್.ಟಿ ಟ್ಯಾಗ್, ಕೊಡವರ ಆಂತರಿಕ ರಾಜಕೀಯ ಸ್ವಯಂ ನಿರ್ಣಯದ ಹಕ್ಕುಗಳನ್ನು ಮಾನ್ಯ ಮಾಡಬೇಕು ಸೇರಿದಂತೆ ಇಡೀ ಕೊಡವ ಜನಾಂಗದ ಯೋಗಕ್ಷೇಮಕ್ಕಾಗಿ ತಲಕಾವೇರಿ ಮತ್ತು ಪಾಡಿ ಶ್ರೀಇಗ್ಗುತ್ತಪ್ಪ ದೇವನೆಲೆಯಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವಿಶೇಷ ಪ್ರಾರ್ಥನೆ ಸಲ್ಲಿಸಿತು. ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಆದಿಮಸಂಜಾತ ಕೊಡವರ ಪವಿತ್ರ ತೀರ್ಥಕ್ಷೇತ್ರ ತಲಕಾವೇರಿ ಹಾಗೂ ಶ್ರೀಇಗ್ಗುತ್ತಪ್ಪ ದೇವನೆಲೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಮುಖರು ರಾಜ್ಯಾಂಗದತ್ತವಾಗಿ ಕರ್ನಾಟಕದ ಅಧೀನದಲ್ಲಿ ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ, ಎಸ್.ಟಿ ಟ್ಯಾಗ್ ಮತ್ತು ಕೊಡವರ ಆಂತರಿಕ ರಾಜಕೀಯ ಸ್ವಯಂ ನಿರ್ಣಯದ ಹಕ್ಕನ್ನು ಮಾನ್ಯ ಮಾಡುವುದರೊಂದಿಗೆ ಕೊಡವ ಜನಾಂಗದ ಅಭ್ಯುದಯಕ್ಕೆ ಆಶೀರ್ವದಿಸುವಂತೆ ಕೋರಿದರು. ::: ಭೂಪರಿವರ್ತನೆ ವಿರುದ್ಧ ಜನಜಾಗೃತಿ ::: ಸಿದ್ದಾಪುರದ ಕಾಫಿ ತೋಟದ ಭೂಪರಿವರ್ತನೆ ಸೇರಿದಂತೆ ಕೊಡಗು ಜಿಲ್ಲೆಯಾದ್ಯಂತ ನಡೆಯುತ್ತಿರುವ ಭೂಪರಿವರ್ತನೆಗಳ ವಿರುದ್ಧ ಜೂ.3 ರಿಂದ ಜಿಲ್ಲಾವ್ಯಾಪಿ ಸಿಎನ್‌ಸಿ ಮಾನವ ಸರಪಳಿ ಜನಜಾಗೃತಿ…

Read More

ವಿರಾಜಪೇಟೆ ಮೇ 27 NEWS DESK : ಬೇಸಿಗೆ ಶಿಬಿರಗಳ ಆಯೋಜನೆಯಿಂದ ಮಕ್ಕಳ ಮನಸ್ಸನ್ನು ಬದಲಾಯಿಸಬಹುದು ಎಂದು ವಿರಾಜಪೇಟೆ ರೋಟರಿ ಶಾಲೆಯ ಮುಖ್ಯೋಪಧ್ಯಾಯರಾದ ವಿಶಾಲಾಕ್ಷಿ ಅಭಿಪ್ರಾಯಪಟ್ಟರು. ವಿರಾಜಪೇಟೆಯ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವತಿಯಿಂದ ವಿದ್ಯಾರ್ಥಿಗಳಿಗಾಗಿ ರೋಟರಿ ಶಾಲಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಒಂದು ತಿಂಗಳ ಅವಧಿಯ ಕಲಾರ್ಣವ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ಪರೀಕ್ಷೆಗಳ ನಂತರ ಬೇಸಿಗೆ ಶಿಬಿರಗಳನ್ನು ಆಯೋಜಿಸುವ ಪರಿಪಾಠ ವಿವಿಧಡೆ ನಡೆಯುತ್ತಾ ಬಂದಿದೆ. ಹಾಕಿ, ಕ್ರಿಕೆಟ್ ಸೇರಿದಂತೆ ಕ್ರೀಡಾ ಹಾಗೂ ವೃತ್ತಿಪರ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳುವುದು ಮುಖ್ಯ ಅಲ್ಲ. ಅದಕ್ಕಿಂತಲೂ ಮಿಗಿಲಾಗಿ ಮಕ್ಕಳಿಂದ ಬದಲಾವಣೆಗಳನ್ನು ನಿರೀಕ್ಷಿಸಬಹುದು. ಪುಟ್ಟ ಮಕ್ಕಳ ಭವಿಷ್ಯವನ್ನು ರೂಪಿಸಲು ಶಿಬಿರಗಳು ಅಗತ್ಯ. ಸ್ವತಂತ್ರವಾಗಿ ಬದುಕುವ ವ್ಯವಸ್ಥೆಯನ್ನು ಇಂತಹ ಶಿಬಿರದಲ್ಲಿ ಕಲಿಸಿಕೊಡಲಾಗುತ್ತದೆ. ಗ್ರಾಮೀಣ ಪ್ರದೇಶದಲ್ಲಿರುವ ಮಕ್ಕಳಿಗೂ ಇದು ಅತ್ಯಂತ ಉಪಯುಕ್ತ ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಸಾಹಿತಿ ರಜಿತ ಕಾರ್ಯಪ್ಪ, ಉತ್ತಮ ಆಶಯದೊಂದಿಗೆ ಮಕ್ಕಳ ಭವಿಷ್ಯ ನಿರ್ಮಿಸುವ ಕಾರ್ಯಕ್ಕೆ ಮುಂದಾಗಿರುವ…

Read More

ಮಡಿಕೇರಿ ಮೇ 27 NEWS DESK : ಪ್ರವಾಹ ಪೀಡಿತ ಮತ್ತು ಭೂಕುಸಿತ ಪ್ರದೇಶದಲ್ಲಿ ಅಗತ್ಯ ಮುನ್ನೆಚ್ಚರ ವಹಿಸಲು ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಡಿಕೇರಿ ತಾಲ್ಲೂಕು ಮಟ್ಟದ ಟಾಸ್ಕ್‍ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಾಕೃತಿಕ ವಿಕೋಪ ಎದುರಿಸುವುದು ಹಾಗೂ ಶುದ್ಧ ಕುಡಿಯುವ ನೀರು ಪೂರೈಕೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ನಗರದ ಉಪ ವಿಭಾಗಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಡಿಕೇರಿ ತಾಲ್ಲೂಕಿನಲ್ಲಿ ಶುದ್ಧ ಕುಡಿಯುವ ನೀರು ಪೂರೈಸುವುದು, ಪ್ರವಾಹ ಪೀಡಿತ ಪ್ರದೇಶ ಹಾಗೂ ಭೂಕುಸಿತ ಪ್ರದೇಶದಲ್ಲಿ ಅಗತ್ಯ ಮುನ್ನೆಚ್ಚರ ವಹಿಸುವುದು ಮತ್ತಿತರ ಸಂಬಂಧ ಸುದೀರ್ಘ ಚರ್ಚೆ ನಡೆಯಿತು. ಪ್ರತೀ ಗ್ರಾ.ಪಂ. ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಸಬೇಕು. ಜೊತೆಗೆ ಪ್ರತಿ ನಿತ್ಯ ಕುಡಿಯುವ ನೀರನ್ನು ಪರೀಕ್ಷೆ ಮಾಡಬೇಕು ಎಂದು ವಿನಾಯಕ ನರ್ವಾಡೆ ಅವರು ಸೂಚಿಸಿದರು. ಹಾಗೆಯೇ ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಅಗತ್ಯ…

Read More

ಮಡಿಕೇರಿ ಮೇ 27 NEWS DESK : ದಕ್ಷಿಣದ ಕಾಶ್ಮೀರವೆಂದೇ ಖ್ಯಾತಿ ಹೊಂದಿರುವ ಕೊಡಗು ಜಿಲ್ಲೆಗೆ ಆಗಮಿಸುತ್ತಿರುವ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಮಿತಿ ಮೀರುತ್ತಲೇ ಇದೆ. ಅಪಾಯದಂಚಿನ ಪ್ರವಾಸಿತಾಣಗಳಲ್ಲಿ ಪ್ರವಾಸಿಗರ ನಿರ್ಲಕ್ಷ್ಯದ ನಡೆ ಅಪಾಯವನ್ನು ಆಹ್ವಾನಿಸುತ್ತಿದೆ. ನಗರದ ಜನರಲ್ ತಿಮ್ಮಯ್ಯ ವೃತ್ತದ ಮೂಲಕ ಮಂಗಳೂರು ರಸ್ತೆ ಕಡೆಗೆ ತೆರಳುವ ಮಾರ್ಗದಲ್ಲಿ ನಿರ್ಮಿಸಲಾಗಿರುವ ತಡೆಗೋಡೆ ಪ್ರದೇಶ ಇದೀಗ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ರಾಜಾಸೀಟು ಉದ್ಯಾನವನದ ಬೆಟ್ಟದ ಕೆಳಗಿರುವ ಈ ತಡೆಗೋಡೆಯ ಅಸುರಕ್ಷಿತ ಪ್ರದೇಶ ಸಾವಿರ ಅಡಿಗೂ ಹೆಚ್ಚು ಪ್ರಪಾತವನ್ನೂ ಹೊಂದಿದೆ. ಇದರ ಅರಿವೇ ಇಲ್ಲದ ಪ್ರವಾಸಿಗರು ಇಲ್ಲಿ ನಿಂತು ತಮ್ಮ ಮೊಬೈಲ್ ಕ್ಯಾಮರಾಗಳ ಮೂಲಕ ಪರಿಸರದ ಸೊಬಗನ್ನು ಸೆರೆ ಹಿಡಿಯುತ್ತಿದ್ದಾರೆ, ಜೊತೆಯಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ. ಅಪಾಯದ ಪರಿವಿಲ್ಲದ ಪ್ರವಾಸಿಗರ ಈ ನಡೆ ಅತ್ಯಂತ ಅಜಾಗರೂಕತೆಯಿಂದ ಕೂಡಿದೆ. ಕೆಲವರು ತಡೆಗೋಡೆ ತುತ್ತ ತುದಿಯಲ್ಲಿ ನಿಂತು ಸೆಲ್ಫಿ ಕ್ಲಿಕ್ಕಿಸಿದರೆ ಮತ್ತೆ ಕೆಲವರು, ರೀಲ್ಸ್ ಮಾಡೋ ನೆಪದಲ್ಲಿ ಹುಚ್ಚು ಧೈರ್ಯ ತೋರುತ್ತಿದ್ದಾರೆ. ಯುವಕ, ಯುವತಿಯರು ಮಾತ್ರವಲ್ಲದೆ ದಂಪತಿಗಳು…

Read More

ಮಡಿಕೇರಿ ಮೇ 27 NEWS DESK : ಸಂಸ್ಕೃತಿಯ, ಪರಂಪರೆ, ಪದ್ಧತಿ ಮತ್ತು ಆಚಾರ ವಿಚಾರಗಳು ಉಳಿಯಬೇಕಾದರೆ ಸಾಹಿತ್ಯ ಕ್ಷೇತ್ರದ ಬೆಳವಣಿಗೆ ಅಗತ್ಯವಾಗಿದೆ ಎಂದು ಸಾಹಿತಿ ಪಿ.ಎಸ್.ವೈಲೇಶ್ ಅಭಿಪ್ರಾಯಪಟ್ಟಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ನಡೆದ ಕೊಡವ ಮಕ್ಕಡ ಕೂಟದ 91ನೇ ಪುಸ್ತಕ, ಲೇಖಕಿ ಚೀರಮ್ಮನ ವಾಣಿ ಚಂಗುವಮ್ಮಯ್ಯ ಅವರ 3ನೇ ಪುಸ್ತಕ “ತಾಳ್ಮೆರ ತಾವರೆ”ಯ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೊಡಗಿನ ಆಚಾರ, ವಿಚಾರ, ಸಂಸ್ಕೃತಿ, ಪದ್ಧತಿ, ಪರಂಪರೆ ಇಂದಿಗೂ ಶ್ರೀಮಂತವಾಗಿರಲು ಸಾಹಿತ್ಯವೇ ಕಾರಣ. ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ, ಕೊಡಗಿನ ಗೌರಮ್ಮ ಸೇರಿದಂತೆ ಅನೇಕ ಹಿರಿಯ ಸಾಹಿತಿಗಳ ಹೆಸರು ಚಿರಸ್ಥಾಯಿಯಾಗಿ ಉಳಿದಿದೆ. ಅವರ ಹೆಸರು, ಖ್ಯಾತಿ ಉಳಿದುಕೊಂಡಿರುವುದು ಸಾಹಿತ್ಯದಿಂದ ಎಂದರು. ಕೊಡಗಿನ ಸಾಹಿತ್ಯ ಕ್ಷೇತ್ರದಲ್ಲಿ ಸಾಹಿತಿಗಳೇ ಇಲ್ಲ ಎಂಬ ಕಾಲಘಟ್ಟವಿತ್ತು. ಆದರೆ ಇಂದು ಜಿಲ್ಲೆಯಲ್ಲ್ಲಿ ಸಾಹಿತ್ಯದ ಸುವರ್ಣಕಾಲ ಆರಂಭವಾಗಿದೆ. ಆದರೆ ನೈಜ ಸಾಧಕರು ಮೂಲೆ ಗುಂಪಾಗುತ್ತಿದ್ದು, ಎಲ್ಲರನ್ನೂ ಗುರುತಿಸುವ ಕೆಲಸ ಆಗಬೇಕು. ಪ್ರಸ್ತುತ…

Read More