ವಿರಾಜಪೇಟೆ ಮೇ 27 NEWS DESK : ಆರ್ಜಿ ಗ್ರಾಮದ ಕಲ್ಲುಬಾಣೆ ಬದ್ರಿಯಾ ಶಾಲಾ ಮೈದಾನದಲ್ಲಿ ಮೊದಲ ವರ್ಷದ ವಿಲೇಜ್ ಲೆವೆಲ್ ಸೂಪರ್ ನೈನ್ ಕ್ರಿಕೆಟ್ ಪಂದ್ಯಾವಳಿ ನಡೆಯಿತು. ಕಲ್ಲು ಕಪ್ ತಂಡದ ವತಿಯಿಂದ ನೂರುದ್ದೀನ್, ಹರ್ಷದ್, ಫಂಸಿರ್ ಹಾಗೂ ರಾಶಿ ಅವರ ಆಯೋಜಕತ್ವದಲ್ಲಿ ಎರಡು ದಿನಗಳ ಕಾಲ ನಡೆದ ಪಂದ್ಯಾವಳಿಯಲ್ಲಿ ಕೊಡಗಿನ ಹಲವಾರು ಭಾಗಗಳಿಂದ ಒಟ್ಟು 30 ತಂಡಗಳು ಭಾಗವಹಿಸಿದ್ದವು. ಫೈನಲ್ ಪಂದ್ಯದಲ್ಲಿ ಚಂಕ್ಸ್ ವಿರಾಜಪೇಟೆ ತಂಡವು 3 ವಿಕೆಟ್ ನಷ್ಟದಲ್ಲಿ 5 ಓವರ್ ಗಳಿಗೆ 66 ರನ್ ಗಳನ್ನು ಬಾರಿಸಿ ಫ್ರೆಂಡ್ಸ್ ವಿರಾಜಪೇಟೆ ತಂಡವನ್ನು ಆಲ್ ಔಟ್ ಮಾಡುವುದರ ಮೂಲಕ ಚಂಕ್ಸ್ ವಿರಾಜಪೇಟೆ ತಂಡವು 45 ರನ್ಗಳ ಭರ್ಜರಿ ಗೆಲುವನ್ನು ಸಾಧಿಸಿ ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿತು. ಪಂದ್ಯಾವಳಿಯ ಫೈನಲ್ ಮ್ಯಾನ್ ಆಫ್ ದಿ ಮ್ಯಾಚ್ ಶಾರುಖ್, ಮ್ಯಾನ್ ಆಫ್ ದಿ ಸಿರೀಸ್ ಇಚಾವೋ, ಬೆಸ್ಟ್ ಬ್ಯಾಟ್ಸ್ ಮ್ಯಾನ್ ರಜಾಕ್, ಬೆಸ್ಟ್ ಬೌಲರ್ ಅಜಯ್, ಬೆಸ್ಟ್ ಕ್ಯಾಚ್ ಸಕ್ಲೇನ್, ಉತ್ತಮ…
ಲೇಖಕ: admin
ದಕ್ಷಿಣ ಕನ್ನಡ ಮೇ 27 : ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಯಕರ್ತರ ಸಭೆಯು ಇಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸುನಿಲ್ ಕುಮಾರ್ ಕಾರ್ಕಳ, ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ, ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್ ಎಲ್ ಭೋಜೇಗೌಡ, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟಾ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಶಾಸಕರುಗಳಾದ ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್ ಯು, ಹರೀಶ್ ಪೂಂಜಾ, ಮಂಗಳೂರು ಬಿಜೆಪಿ ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ, ಜಿಲ್ಲಾ ಸಹಪ್ರಭಾರಿ ರಾಜೇಶ್ ಕಾವೇರಿ, ಬಿಜೆಪಿ ಪ್ರಮುಖರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಬಿಜೆಪಿ ಪ್ರಮುಖರು ಮತ್ತು ಜೆಡಿಎಸ್ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಮಡಿಕೇರಿ ಮೇ 27 NEWS DESK : ಮಾನ್ಸೂನ್ ಆರಂಭಕ್ಕೆ ಇನ್ನು ನಾಲ್ಕೇ ದಿನ ಬಾಕಿ ಉಳಿದಿದೆ. ರಾಜ್ಯವ್ಯಾಪಿ ಕಳೆದ ಎರಡು ವಾರಗಳಿಂದ ಉತ್ತಮ ಮಳೆಯಾಗುತ್ತಿದೆ. ಆದರೆ ಮಳೆಗಾಲದ ಮಳೆ ಮೇ ಮೇ 31 ರಿಂದ ಆರಂಭಗೊಳ್ಳಲಿದೆ ಎಂದು ಹವಾಮಾನ ತಿಳಿಸಿದೆ. ಕೊಡಗು, ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಕಡೆ ಮುಂದಿನ ವಾರದಿಂದ ಮಳೆ ಆರಂಭಗೊಳ್ಳಲಿದೆ. ಚಂಡಮಾರುತದಿಂದ ವ್ಯತ್ಯಾಸಗಳಾದರೆ ಮುಂಗಾರು ನಾಲ್ಕೈದು ದಿನ ವಿಳಂಬವಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಎಲ್ಲಾ ಜಿಲ್ಲೆಗಳಲ್ಲಿಯೂ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ, ವಿಶೇಷವಾಗಿ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳ ಕರ್ನಾಟಕದಲ್ಲಿ ಹೆಚ್ಚು ಮಳೆಯಾಗಲಿದೆ. ಒಟ್ಟಿನಲ್ಲಿ ಜೂನ್ 5 ರ ನಂತರ ರಾಜ್ಯವ್ಯಾಪಿ ಉತ್ತಮ ಮಳೆಯನ್ನು ನಿರೀಕ್ಷಿಸಲಾಗಿದೆ.
ಸಿದ್ದಾಪುರ ಮೇ 27 NEWS DESK : ಮೂರ್ನಾಡು ಪ್ರೌಢಶಾಲಾ ಮೈದಾನದಲ್ಲಿ ಜರುಗಿದ ಪ್ರಥಮ ವರ್ಷದ ನಾಯ್ಡೂಸ್ ಕ್ರಿಕೆಟ್ ಚಾಂಪಿಯನ್ ಆಗಿ ಬೈಲುಕುಪ್ಪೆಯ ಆರ್ಸಿ.ಬಿ.ತಂಡ ಹೊರ ಹೊಮ್ಮಿದೆ. ಫೈನಲ್ ಪಂದ್ಯಾವಳಿಯಲ್ಲಿ ಆರ್.ಸಿ.ಬಿ.ಬೈಲುಕುಪ್ಪೆ ತಂಡವು( 67/0) ವಿರಾಜಪೇಟೆ ಕೊಡಗು ಯುವ ವಾರಿಯರ್ಸ್ (66/5) ತಂಡವನ್ನು ಸೋಲಿಸಿತು. ವಿಜೇತ ತಂಡದ ಪರ ಕಿರಣ್ ಅಜೇಯ (48) ಹಾಗೂ ವಿಜಯ್ ಅಜೇಯ(14) ಅವರ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಚೊಚ್ಚಲ ನಾಯ್ಡೂಸ್ ಕಪ್ ಗೆದ್ದು ಸಂಭ್ರಮಿಸಿದರು. ಇದಕ್ಕೂ ಮುನ್ನ ನಡೆದ ಸೆಮಿಫೈನಲ್ ನಲ್ಲಿ ಕೊಡಗು ಯೂತ್ ವಾರಿಯರ್ಸ್ ವೀರಾಜಪೇಟೆ ತಂಡವು 6 ನಿಗಧಿತ ಓವರ್ ನಲ್ಲಿ ಒಟ್ಟು 74 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಮೂರ್ನಾಡು ಎಕ್ಸ್ ಟ್ರೀಮ್ ಬ್ಲಾಸ್ಟರ್ಸ್ ತಂಡವು ಕೇವಲ 34 ರನ್ ಗಳಿಸಿ ಸೋಲನ್ನಪ್ಪಿತು. ದ್ವಿತೀಯ ಸೆಮಿಫೈನಲ್ ನಲ್ಲಿ ಆರ್.ಸಿ.ಬಿ.ಬೈಲುಕುಪ್ಪೆ (64) ತಂಡವು ಪೆರುಂಬಾಡಿ ಪ್ಯಾಂಥರ್ಸ್ (62) ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿತ್ತು. ಪಂದ್ಯದ ವ್ಯಕ್ತಿ ಕಿರಣ್ ಬೈಲುಕುಪ್ಪೆ, ಸರಣಿ ಪುರುಷೋತ್ತಮ ವಿಜಯ್…
ಕೋಲ್ಕತ್ತಾ ಮೇ 27 NEWS DESK : ರೆಮಲ್ ಚಂಡಮಾರುತ ನಿನ್ನೆ ಭಾನುವಾರ ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶದ ಕರಾವಳಿಯ ನಡುವೆ ಅಪ್ಪಳಿಸಿದ್ದು ತೀವ್ರ ಬಿರುಗಾಳಿಯಿಂದ ಭೂಕುಸಿತ ಉಂಟಾಗಿದೆ, ಗಾಳಿಯ ವೇಗ ಗಂಟೆಗೆ 110-135 ಕಿಮೀ ವೇಗ ಪಡೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ರೆಮಲ್ ಚಂಡಮಾರುತದ ಪರಿಣಾಮ ಪಶ್ಚಿಮ ಬಂಗಾಳದ ದಕ್ಷಿಣ ಮತ್ತು ಉತ್ತರ 24 ಪರಗಣಗಳು, ಪುರ್ಬಾ ಮೇದಿನಿಪುರ್, ಕೋಲ್ಕತ್ತಾ ಹೌರಾ ಮತ್ತು ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಗಳಲ್ಲಿ ಭಾರೀ ಮಳೆಯನ್ನು ತರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ನಿನ್ನೆ ಮತ್ತು ಇಂದು ರಾಜ್ಯದ ಪಶ್ಚಿಮ ಮೇದಿನಿಪುರ್, ಪುರ್ಬಾ ಬರ್ಧಮಾನ್ ಮತ್ತು ನಾಡಿಯಾ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಈಶಾನ್ಯ ಭಾರತದ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮೀನುಗಾರರಿಗೆ ನಾಳೆಯವರೆಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸಾಗರ ದ್ವೀಪ, ಸುಂದರ್ಬನ್ಸ್ ಮತ್ತು ಕಾಕದ್ವೀಪ್ ಸೇರಿದಂತೆ ಕರಾವಳಿ ಪ್ರದೇಶಗಳಿಂದ ಸುಮಾರು 1.10 ಲಕ್ಷ ಜನರನ್ನು ಸ್ಥಳಾಂತರಿಸಲಾಗಿದೆ.…
ತಾಷ್ಕೆಂಟ್ ಮೇ 26 NEWS DESK : ಭಾನುವಾರ ನಡೆದ ಮಹಿಳೆಯರ ವಾಲ್ಟ್ ಸ್ಪರ್ಧೆಯಲ್ಲಿ ಭಾರತದ ಸ್ಟಾರ್ ಅಥ್ಲೀಟ್ ದೀಪಾ ಕರ್ಮಾಕರ್ ಅಗ್ರ ಜಿಮ್ನಾಸ್ಟ್ ಚಿನ್ನದ ಪದಕ ಗೆದ್ದರು. ಏಷ್ಯನ್ ಸೀನಿಯರ್ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕ ಗೆದ್ದ ದೇಶದ ಮೊದಲ ಜಿಮ್ನಾಸ್ಟ್ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾದರು. ವರ್ಷದ ದೀಪಾ ಸ್ಪರ್ಧೆಯ ಕೊನೆಯ ದಿನದ ವಾಲ್ಟ್ ಫೈನಲ್ನಲ್ಲಿ ಸರಾಸರಿ 13.566 ಸ್ಕೋರ್ ಗಳಿಸಿದರು. ಉತ್ತರ ಕೊರಿಯಾದ ಕಿಮ್ ಸನ್ ಹಯಾಂಗ್ (13.466) ಮತ್ತು ಜೋ ಕ್ಯೊಂಗ್ ಬೈಯೊಲ್ (12.966) ಕ್ರಮವಾಗಿ ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ಗೆದ್ದರು. 2016ರ ರಿಯೊ ಒಲಿಂಪಿಕ್ಸ್ನಲ್ಲಿ ವಾಲ್ಟ್ ಫೈನಲ್ನಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದ ದೀಪಾ, 2015ರ ಆವೃತ್ತಿಯಲ್ಲಿ ಇದೇ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿದ್ದರು.
ನವದೆಹಲಿ ಮೇ 26 NEWS DESK : ಮೇ 31 ರಂದು ಸೇವೆಯಿಂದ ನಿವೃತ್ತಿಯಾಗಬೇಕಿದ್ದ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರ ಸೇವಾವಧಿಯನ್ನು ಕೇಂದ್ರ ಸರ್ಕಾರ ಭಾನುವಾರ ಒಂದು ತಿಂಗಳ ಅವಧಿಗೆ ವಿಸ್ತರಿಸಿದೆ. ಸೇನಾ ನಿಯಮಗಳು 1954ರ ನಿಯಮ 16 (ಎ) 4 ಅಡಿಯಲ್ಲಿ ಸೇನಾ ಮುಖ್ಯಸ್ಥ ಜನರಲ್ ಪಾಂಡೆ ಅವರ ನಿವೃತ್ತಿ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲು ನೇಮಕಾತಿ ಸಂಪುಟ ಸಮಿತಿ ಮೇ 26 ರಂದು ಅನುಮೋದನೆ ನೀಡಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
ಕ್ವಾಲಾಲಂಪುರ ಮೇ 26 NEWS DESK : ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯ ಮಹಿಳಾ ಸಿಂಗಲ್ಸ್ ಫೈನಲ್ ನಲ್ಲಿ ಭಾರತದ ಆಟಗಾರ್ತಿ ಪಿ.ವಿ.ಸಿಂಧು ಸೋಲು ಅನುಭವಿಸಿದ್ದಾರೆ. ಅವರು ಚೀನಾದ ವಾಂಗ್ ಝಿಯಿ ವಿರುದ್ಧ 21-16, 5-21 ಮತ್ತು 21-16 ಸೆಟ್ ಗಳಿಂದ ಸೋತು ನಿರ್ಗಮಿಸಿದರು. ಆ ಮೂಲಕ ಸಿಂಧು 2022 ಸಿಂಗಾಪುರ ಓಪನ್ ನಂತರ ತಮ್ಮ ಮೊದಲ BWF ಪ್ರಶಸ್ತಿ ಗೆಲ್ಲುವ ಪ್ರಯತ್ನದಲ್ಲಿ ವಿಫಲರಾದರು.
ಮೈಸೂರು ಮೇ 26 NEWS DESK : ಹುಲಯೊಂದು ಮಹಿಳೆಯೊಬ್ಬರನ್ನು ಕೊಂದು ಮೃತದೇಹವನ್ನು ಕಾಡಿನೊಳಗೆ ಎಳೆದೊಯ್ದ ಘಟನೆ ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆ ತಾಲೂಕಿನಲ್ಲಿ ನಡೆದಿದೆ. ಭಾನುವಾರ ನಸುಕಿನಲ್ಲಿ ಅರಣ್ಯ ಪ್ರದೇಶದಲ್ಲಿ ಶವ ಪತ್ತೆಯಾಗಿದೆ. ಎನ್ ಬೇಗೂರಿನ ಮಲದವಾಡಿ ಹಾಡಿಯ ಚಿಕ್ಕಿ (48) ಎಂಬುವವರೇ ಮೃತ ಮಹಿಳೆ. ಶನಿವಾರ ಕುರಿಗಳನ್ನು ಮೇಯಿಸಲು ಹೋಗಿದ್ದ ಚಿಕ್ಕಿಯವರು ರಾತ್ರಿಯಾದರೂ ಮನೆಗೆ ಬಾರದಿದ್ದಾಗ ಕುಟುಂಬಸ್ಥರು ಆತಂಕಗೊಂಡಿದ್ದರು. ಗ್ರಾಮಸ್ಥರು ಹಾಗೂ ಅರಣ್ಯ ಸಿಬ್ಬಂದಿಗಳು ಹುಡುಕಾಟ ನಡೆಸಿದಾಗ ಇಂದು ನಸುಕಿನಲ್ಲಿ ಅರಣ್ಯ ಪ್ರದೇಶದಲ್ಲಿ ಮೃತದೇಹ ಪತ್ತೆಯಾಗಿದೆ.
ಕಡೂರು ಮೇ 26 NEWS DESK : ವಿಧಾನ ಪರಿಷತ್ ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನಲೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸುರುಚಿ ಹೋಟೆಲ್ ಸಭಾಂಗಣದಲ್ಲಿ ಮತದಾರರ ಮತ್ತು ಪಕ್ಷದ ಪ್ರಮುಖರ ಸಭೆಯನ್ನು ಆಯೋಜಿಸಲಾಗಿತ್ತು. ಮಹಾಶಕ್ತಿ ಕೇಂದ್ರದ ಪ್ರಮುಖರಿಗೆ ಮತದಾರರನ್ನು ಭೇಟಿ ಮಾಡಿ ಅಭ್ಯರ್ಥಿಗಳ ಪರವಾಗಿ ಮತಯಾಚಿಸಿ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮತ್ತು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್.ಭೋಜೇಗೌಡರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಲು ಮನವಿ ಮಾಡಿ ಎಂದು ಸೂಚನೆ ನೀಡಿದರು. ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ದೇವರಾಜ್ ಶೆಟ್ಟಿ, ಮಾಜಿ ಶಾಸಕರಾದ ಬೆಳ್ಳಿ ಪ್ರಕಾಶ್ , ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವರಾದ ವಿ. ಸುನಿಲ್ ಕುಮಾರ್, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್ ದತ್ತಾತ್ರಿ , ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯರಾದ ಡಿ. ಎಸ್.…






