ಮಡಿಕೇರಿ ಜೂ.10 NEWS DESK : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ 1999-2002 ರ ವಾಣಿಜ್ಯ ಬ್ಯಾಚ್ ನ ಹಳೇ ವಿದ್ಯಾರ್ಥಿಗಳ ಭಾವನಾತ್ಮಕ ಪುನರ್ಮಿಲನ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ತಮಗೆ ವಿದ್ಯೆ ಕಲಿಸಿದ ಉಪನ್ಯಾಸಕ ವೃಂದದವರಿಗೆ ವಂದಿಸಿದ ಹಳೇ ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದ ನೆನಪುಗಳನ್ನು ಮೆಲುಕು ಹಾಕಿದರು. ಕಾಲೇಜ್ ನ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜು ಪ್ರಾಂಶುಪಾಲ ಮೇಜರ್ ಪ್ರೊ.ಡಾ.ಬಿ.ರಾಘವ ಅವರು ಸಾಮಾಜಿಕ ಜಾಲತಾಣವನ್ನು ಸಮರ್ಥವಾಗಿ ಬಳಸಿ, ಕಳಚಿಹೋದ ಸಂಬಂಧವನ್ನು ಬೆಸೆಯುವತ್ತ ಐತಿಹಾಸಿಕ ಹೆಜ್ಜೆ ಇರಿಸಿದ 1999-2002ನೇ ವಾಣಿಜ್ಯ ಬ್ಯಾಚ್ ನ ವಿದ್ಯಾರ್ಥಿಗಳ ಶ್ರಮ ಶ್ಲಾಘನೀಯ. ಇದು ಕಾಲೇಜ್ ನ ಎಲ್ಲಾ ವಿದ್ಯಾರ್ಥಿಗಳಿಗೆ ಆದರ್ಶವಾಗಲಿದೆ ಎಂದು ಬಣ್ಣಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ.ಗಾಯತ್ರಿ ದೇವಿ ಮಾತನಾಡಿ, ವಿದ್ಯೆ ಕಲಿಸಿದ ಗುರುಗಳನ್ನು ನೆನಪಿಸಿಕೊಳ್ಳದ ಇಂದಿನ ದಿನಗಳಲ್ಲಿ, ಒಂದು ನಿರ್ದಿಷ್ಟ ಬ್ಯಾಚ್ನ ವಿದ್ಯಾರ್ಥಿಗಳು ಕಾಲೇಜಿನ ಉಪನ್ಯಾಸಕರನ್ನು ಕೃತಜ್ಞತಾಪೂರ್ವಕವಾಗಿ ವಂದಿಸಿರುವ ಕಾರ್ಯ ಕಾಲೇಜ್ ನ ಇತಿಹಾಸದ ಪುಟಗಳಲ್ಲಿ…
ಲೇಖಕ: admin
ಮಡಿಕೇರಿ ಜೂ.10 NEWS DESK : ಕಂಡಕರೆ ಗಾಂಧಿ ಯುವಕ ಸಂಘ ಹಾಗೂ ಸರ್ವಧರ್ಮೀಯ ಬಡಹೆಣ್ಣುಮಕ್ಕಳ ಸಾಮೂಹಿಕ ವಿವಾಹ ಆಚರಣಾ ಸಮಿತಿ ವತಿಯಿಂದ ಸಮಾಜ ಸೇವಕ, ಕೆ.ನಿಡುಗಣೆ ಗ್ರಾ.ಪಂ ಸದಸ್ಯ ಜಾನ್ಸನ್ ಪಿಂಟೋ ಅವರಿಗೆ ‘ಮಾದರಿ ಜನಪ್ರತಿನಿಧಿ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಂಡಕರೆಯಲ್ಲಿ ನಡೆದ ಸರ್ವಧರ್ಮೀಯ ಬಡಹೆಣ್ಣುಮಕ್ಕಳ ಸಾಮೂಹಿಕ ವಿವಾಹ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಸಮಿತಿಯ ಪ್ರಮುಖರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಈ ಸಂದರ್ಭ ಸೇವ್ ದಿ ಡ್ರೀಮ್ಸ್ ಮುಖ್ಯಸ್ಥರಾದ ಜಾಬಿರ್ ನಿಝಾಮಿ, ಅಂತರಾಷ್ಟ್ರೀಯ ಮಾಜಿ ರಗ್ಬಿ ಆಟಗಾರ ಹಾಗೂ ವಿರಾಜಪೇಟೆ ನಗರ ಕಾಂಗ್ರೆಸ್ ಅಧ್ಯಕ್ಷ ಮಾದಂಡ ತಿಮ್ಮಯ್ಯ, ಗಾಂಧಿ ಯುವಕ ಸಂಘದ ಅಧ್ಯಕ್ಷ ಹಾಗೂ ಪತ್ರಕರ್ತ ಇಸ್ಮಾಯಿಲ್ ಕಂಡಕರೆ, ಕೊಡಗು ಜಿಲ್ಲಾ ಹಿಂದೂ ಮಲಯಾಳಿ ಸಮಾಜದ ಸಲಹೆಗಾರ, ಹಾಗೂ ಎಸ್.ಎನ್.ಡಿ.ಪಿ ಮಡಿಕೇರಿ ಶಾಖಾ ಅಧ್ಯಕ್ಷರಾದ ಟಿ.ಆರ್ ವಾಸುದೇವ್, ಕರ್ನಾಟಕ ರಾಜ್ಯ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಉಸ್ಮಾನ್ ಮತ್ತಿತರರು ಉಪಸ್ಥಿತರಿದ್ದರು.
ಮಡಿಕೇರಿ ಜೂ.10 NEWS DESK : ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಸಭೆ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಜಿ.ಪೀಟರ್ ಅವರು ಮಡಿಕೇರಿ ಬ್ಲಾಕ್ ನಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವ ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಪಿ.ಎ.ಹನೀಫ್ ಅವರು ಮಾತನಾಡಿ ಕಾಂಗ್ರೆಸ್ ಪಕ್ಷಕ್ಕೆ ಶೇ.100 ರಷ್ಟು ಮತಗಳನ್ನು ನೀಡುತ್ತಾ ಬರುತ್ತಿರುವ ಅಲ್ಪಸಂಖ್ಯಾತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಮತ್ತು ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು. ಒಂದು ವೇಳೆ ಕಡೆಗಣಿಸಿದರೆ ಅಲ್ಪಸಂಖ್ಯಾತರಿಗೆ ನಾವು ದ್ರೋಹ ಮಾಡಿದಂತಾಗುತ್ತದೆ ಎಂದರು. ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ ಕೊಟ್ಟಮುಡಿ, ಕೊಡಗು ಜಿಲ್ಲಾ ಕಾಂಗ್ರೆಸ್ ಗೌರವ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ನಗರಸಭಾ ಸದಸ್ಯ ಯಾಕುಬ್ ಮಾತನಾಡಿದರು. ಸಭೆಯಲ್ಲಿ ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಎಂ.ಸೈಯ್ಯದ್ ಬಾವ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಂಘÀಟನಾ ಕಾರ್ಯದರ್ಶಿ ಮುನೀರ್ ಮಾಚಾರ್, ಗ್ಯಾರಂಟಿ ಯೋಜನೆ ಸಮಿತಿ…
ಮಡಿಕೇರಿ ಜೂ.10 NEWS DESK : ಸೌಹಾರ್ದತೆಯ ಸಮಾಜ ನಿರ್ಮಾಣ ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯವಾಗಿದೆ ಎಂದು ಸೇವ್ ದಿ ಡ್ರೀಮ್ಸ್ ಮುಖ್ಯಸ್ಥ ಜಾಬಿರ್ ನಿಝಾಮಿ ಅಭಿಪ್ರಾಯಪಟ್ಟರು. ಕಂಡಕರೆಯಲ್ಲಿ ನಡೆದ ಗಾಂಧಿ ಯುವಕ ಸಂಘ ಹಾಗೂ ಸರ್ವಧರ್ಮೀಯ ಬಡಹೆಣ್ಣುಮಕ್ಕಳ ಸಾಮೂಹಿಕ ವಿವಾಹ ಆಚರಣಾ ಸಮಿತಿ ವತಿಯಿಂದ ಸರ್ವಧರ್ಮೀಯ ಬಡಹೆಣ್ಣುಮಕ್ಕಳ ಸಾಮೂಹಿಕ ವಿವಾಹ ಮೊದಲ ಹಂತ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಅವರು ಮಾತನಾಡಿದರು. ಭಾರತ ದೇಶವು ಎಲ್ಲಾ, ಜಾತಿ ಧರ್ಮಗಳನ್ನೊಳಗೊಂಡ ದೇಶವಾಗಿದೆ. ಸಮಾಜದಲ್ಲಿ ಸೌಹಾರ್ದತೆ ಸ್ಥಾಪಿಸಲು ಎಲ್ಲರೂ ಶ್ರಮಿಸಬೇಕಾಗಿದೆ. “ಸೌಹಾರ್ದ ನಮ್ಮ ಉದ್ದೇಶ, ಸೌಹಾರ್ದತೆ ನಮ್ಮ ಸಂದೇಶ” ಎಂಬ ಅಮೂಲ್ಯವಾದ ಧ್ಯೇಯವಾಕ್ಯದೊಂದಿಗೆ ಗಾಂಧಿ ಯುವಕ ಸಂಘವು ಸರ್ವಧರ್ಮೀಯ ಬಡಹೆಣ್ಣುಮಕ್ಕಳ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಸುತ್ತಿರುವುದು ಎಲ್ಲರಿಗೂ ಮಾದರಿಯಾಗಿದೆ. ವೈಯಕ್ತಿಕವಾಗಿ ನಾನು ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ವಿರೋಧಿಸುವವನು.ಆದರೆ ಗಾಂಧಿ ಯುವಕ ಸಂಘವು ಬಡ, ಅನಾಥ ಹೆಣ್ಣುಮಗಳನ್ನು ಗುರುತಿಸಿ, ಅರ್ಹರಿಗೆ ಸಹಾಯ ಮಾಡುವ ಮೂಲಕ ಸಾಮೂಹಿಕ…
ಕಡಂಗ ಜೂ.10 NEWS DESK : ಸರಕಾರಿ ಪ್ರಾಥಮಿಕ ಹಿರಿಯ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಿಸಲಾಯಿತು. ಪೊದ್ದಮಾನಿ ಗ್ರಾಮಸ್ಥರಾದ ಅನ್ನಂಭೀರ ಗಿರೀಶ್ ಮತ್ತು ಕುಟುಂಬದವರು ವಿದ್ಯಾರ್ಥಿಗಳಿಗೆ ನೋಟ್ ಬುಕ್ ಹಾಗೂ ಇನ್ನಿತರ ಶೈಕ್ಷಣಿಕ ಸಾಮಾಗ್ರಿಗಳನ್ನು ವಿತರಿಸಿದರು. ಈ ಸಂದರ್ಭ ಶಾಲೆಯ ಅಧ್ಯಾಪಕರು, ವಿದ್ಯಾರ್ಥಿಗಳು ಹಾಜರಿದ್ದರು. ವರದಿ : ನೌಫಲ್
ಸೋಮವಾರಪೇಟೆ ಜೂ.10 NEWS DESK : ಸೋಮವಾರಪೇಟೆ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿರುವ ವೈದ್ಯರ ಕೊರತೆಯನ್ನು ಖಂಡಿಸಿ ಇಂದು ಬಿಜೆಪಿ ಪ್ರತಿಭಟನೆ ನಡೆಸಿತು. ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ನೇಮಕಕ್ಕೆ ಒತ್ತಾಯಿಸಿ ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಮೆರವಣಿಗೆಯಲ್ಲಿ ತೆರಳಿ ತಹಶೀಲ್ದಾರ್ ನವೀನ್ ಕುಮಾರ್ ಅವರಿಗೆ ಮನವಿ ಸಲ್ಲಿಸಲು ಮುಂದಾದರು. ತಡವಾಗಿ ಹೊರಬಂದ ತಹಶೀಲ್ದಾರ್ ವಿರುದ್ಧ ಅಸಮಾಧಾನ ಹೊರಹಾಕಿದ ಪ್ರತಿಭಟನಾಕಾರರು ವೈದ್ಯರ ನೇಮಕಕ್ಕೆ ಒಂದು ವಾರದ ಗಡುವು ನೀಡಿದರು. ಈ ಸಂದರ್ಭ ಮಾತನಾಡಿದ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಎಸ್.ಜಿ.ಮೆದಪ್ಪ ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಹಲವು ಸಮಯಗಳಿಂದ ವೈದ್ಯರುಗಳಿಲ್ಲದೆ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ.ಇರುವ ವೈದ್ಯರು ಆಸ್ಪತ್ರೆಗೆ ಬರುವ ರೋಗಿಗಳನ್ನು ಮಡಿಕೇರಿ, ಮೈಸೂರು ಹಾಗೂ ಮಂಗಳೂರಿಗೆ ಕಳುಹಿಸುತ್ತಿದ್ದಾರೆ. ಇದರಿಂದ ಬಡ ರೋಗಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಇದೆಲ್ಲಾ ಅರಿವಿದ್ದರೂ ಸ್ವತಃ ವೈದ್ಯರಾಗಿರುವ ಶಾಸಕರು ನಿರ್ಲಕ್ಷ್ಯ ಭಾವನೆ ತೋರುತಿದ್ದಾರೆ ಎಂದು ಆರೋಪಿಸಿದರು. ಸುತ್ತಮುತ್ತಲೂ ಗುಡ್ಡಗಾಡು ಪ್ರದೇಶ ಆಸ್ಪತ್ರೆಗೆ ದಿನನಿತ್ಯ ನೂರಾರು ಮಂದಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬರುತ್ತಾರೆ…
ನಾಪೋಕ್ಲು ಜೂ.10 NEWS DESK : ಭಾರತೀಯ ಜನತಾ ಪಕ್ಷದ ಮಡಿಕೇರಿ ಗ್ರಾಮಾಂತರ ಮಂಡಲ ಓ ಬಿ ಸಿ ವತಿಯಿಂದ ನಾಪೋಕ್ಲು ಗ್ರಾಮದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮಡಿಕೇರಿ ಗ್ರಾಮಾಂತರ ಮಂಡಲ ಓ ಬಿ ಸಿ ಅಧ್ಯಕ್ಷ ಬಿ ಎಂ ಪ್ರತೀಪ ನೇತೃತ್ವದಲ್ಲಿ ಗಿಡಗಳನ್ನು ನೆಟ್ಟು ಚೋನಕೆರೆ ಸಮೀಪದ ಹಿಂದುಳಿದ ವರ್ಗದ ಕುಟುಂಬಗಳ ಜಮೀನಿನಲ್ಲಿ ವಿವಿಧ ಜಾತಿಯ ನೂರಾರು ಗಿಡಗಳನ್ನು ನೀಡಲಾಯಿತು. ಈ ಸಂದರ್ಭ ಚನಿಯ, ಸುಬ್ಬಯ್ಯ, ಸುನಿತಾ, ತಿಮ್ಮಯ್ಯ, ಕಲ್ಲೆಂಗಡ ಮೀರು ಸೇರಿದಂತೆ ಇನ್ನಿತರ ಹಾಜರಿದ್ದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಜೂ.10 NEWS DESK : ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 22.62 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.23 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 425.79 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 181.65 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 33.35 ಮಿ.ಮೀ. ಕಳೆದ ವರ್ಷ ಇದೇ ದಿನ 1.15 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 606.56 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 268.58 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 23.65 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 369.75 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 122.51 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 15.91 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ…
ವಿರಾಜಪೇಟೆ ಜೂ.10 NEWS DESK : ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿರಾಜಪೇಟೆಯ ಅಮ್ಮತ್ತಿ ಕಾರ್ಮಾಡು ಗ್ರಾಮದಲ್ಲಿ ನಡೆದಿದೆ. ಟಿ.ಎನ್.ರವಿ (41) ಎಂಬುವವರೇ ಮೃತ ವ್ಯಕ್ತಿ. ಪತ್ನಿ ತವರು ಮನೆಗೆ ಹೋಗಿದ್ದ ಸಂದರ್ಭ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿರಾಜಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಮಡಿಕೇರಿ ಜೂ.10 NEWS DESK : ಬಾಲ್ಯದಿಂದಲೇ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸುವುದರಿಂದ ಮಕ್ಕಳಲ್ಲಿ ಸೂಕ್ತ ಸಂಸ್ಕಾರ ಬೆಳೆಸುವಲ್ಲಿ ಶಿಕ್ಷಕ ವಗ೯ ಮತ್ತು ಪೋಷಕರು ಗಮನ ನೀಡುವಂತೆ ಚಿಕ್ಕಅಳುವಾರದಲ್ಲಿನ ಕನ್ನಡ ವಿಶ್ವವಿದ್ಯಾನಿಲಯದ ಕನ್ನಡ ಉಪನ್ಯಾಸಕ ಡಾ ಜಮೀರ್ ಅಹಮ್ಮದ್ ಕರೆ ನೀಡಿದ್ದಾರೆ. ನಗರದ ರೆಡ್ ಬ್ರಿಕ್ಸ್ ನ ಸತ್ಕಾರ್ ಸಬಾಂಗಣದಲ್ಲಿ ಆಯೋಜಿತ, ವಿರಾಜಪೇಟೆ ಸಂತ ಅನ್ನಮ್ಮ ಕಾಲೇಜಿನ ಉಪನ್ಯಾಸಕಿ ಪ್ರತಿಮಾ ಹರೀಶ್ ರೈ ವಿರಚಿತ ಅಂತರಗಂಗೆ ಕೃತಿ ಲೋಕಾಪ೯ಣೆ ಸಮಾರಂಭದಲ್ಲಿ ಕೃತಿಯ ಬಗ್ಗೆ ಮಾತನಾಡಿದ ಜಮೀರ್ ಅಹಮ್ಮದ್, ಸಾಮಾಜಿಕ ಹೊಣೆಗಾರಿಕೆ ಹೆಚ್ಚಿಸುವಲ್ಲಿ ಪುಸ್ತಕಗಳ ಪಾತ್ರ ಮಹತ್ವದ್ದಾಗಿದ್ದು, ಬಾಲ್ಯದಿಂದಲೇ ಮಕ್ಕಳಲ್ಲಿ ಉತ್ತಮ ಸಂಸ್ಕಾರ ರೂಪಿಸುವ ನಿಟ್ಟಿನಲ್ಲಿ ಒ ಳ್ಳೆಯ ಮಾಹಿತಿಯುಳ್ಳ ಕೃತಿಗಳು ತಮ್ಮದೇ ಕೊಡುಗೆ ನೀಡುತ್ತವೆ ಎಂದರು, ಬದುಕಿನ ನೈಜ ಸೌಂದಯ೯ ಅನುಭವಿಸುಲ್ಲಿ ಕೖತಿಗಳು ಸಹಕಾರಿ ಎಂದು ಅನಿಸಿಕೆ ವ್ಯಕ್ತಪಡಿಸಿದ ಡಾ, ಜಮೀರ್ ಅಹಮ್ಮದ್, ಪುಸ್ತಕಗಳ ಓದಿನಿಂದ ಯುವಪೀಳಿಗೆಯ ಮನದಲ್ಲಿ ಸದ್ವಿಚಾರಗಳು ಮೂಡುತ್ತವೆ ಇಂಥ ಯುವಪೀಳಿಗೆಯ ಸದ್ವಳಕೆಯಿಂದ ಸದೃಢ ಭಾರತ ನಿಮಾ೯ಣವಾಗುತ್ತದೆ ಎಂದು…






