ಮಡಿಕೇರಿ ಮೇ 26 NEWS DESK : ಶ್ರೀರಂಗಪಟ್ಟಣ- ಕುಶಾಲನಗರ ಚತುಷ್ಪಥ ಹೆದ್ದಾರಿ ನಿರ್ಮಾಣ ಕಾರ್ಯಕ್ಕೆ ಕೇಂದ್ರ ಸರಕಾರ ಈಗಾಗಲೆ 3,500 ಕೋಟಿ ರೂ. ಬಿಡುಗಡೆಗೊಳಿಸಿದ್ದು, ಖಾಸಗಿ ಜಮೀನು ಸ್ವಾಧೀನ ಪ್ರಕ್ರಿಯೆ ಆರಂಭವಾಗಿದೆ. ಟೆಂಡರ್ ಪ್ರಕ್ರಿಯೆ ಮುಗಿದು ಗುತ್ತಿಗೆದಾರರು ಕಾಮಗಾರಿ ಆರಂಭಿಸಲು ಈಗಾಗಲೇ ಸಾಮಾಗ್ರಿ ದಾಸ್ತಾನು ಮಾಡಿದ್ದಾರೆ. ಹುಣಸೂರು ಮತ್ತು ಪಿರಿಯಾಪಟ್ಟಣ ತಾಲ್ಲೂಕಿನ ಬಹುತೇಕ ರೈತರು ಭೂಮಿಯನ್ನು ಬಿಟ್ಟುಕೊಟ್ಟು ಸೂಕ್ತ ಪರಿಹಾರವನ್ನೂ ಪಡೆದುಕೊಂಡಿದ್ದಾರೆ. ಇನ್ನು ಕೆಲವು ಕಡೆಗಳಲ್ಲಿ ಭೂಸ್ವಾಧೀನ ಆಗಬೇಕಾಗಿದೆ. ಈ ಉದ್ದೇಶಿತ 4130 ಕೋಟಿ ರೂ. ಮೊತ್ತದ ಯೋಜನೆಯ 92 ಕಿಲೋಮೀಟರ್ ಉದ್ದದ ಹೆದ್ದಾರಿಯ ಕಾಮಗಾರಿ 2026 ರ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದೆ. ಅಗ್ರಹಾರ ಗ್ರಾಮದಲ್ಲಿ ಹೆದ್ದಾರಿಯು ಸುಮಾರು 4.9 ಕಿಲೋಮೀಟರ್ ಗಳಷ್ಟು ಉದ್ದಕ್ಕೆ ಹಾದು ಹೋಗಲಿದ್ದು, 60 ಮೀಟರ್ ಅಗಲದವರೆಗೆ ಭೂಸ್ವಾಧೀನ ಮಾಡಿಕೊಳ್ಳಲು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ನಿಗಮ ಉದ್ದೇಶಿಸಿದೆ. ಹೆದ್ದಾರಿ ನಿಗಮ ಪರಿಹಾರ ನೀಡುವಾಗ ಸಬ್ ರಿಜಿಸ್ಟಾçರ್ ಕಚೇರಿಯಲ್ಲಿ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಜಮೀನಿನ ಮಾರಾಟ…
ಲೇಖಕ: admin
ಮಡಿಕೇರಿ ಮೇ 26 NEWS DESK : ಪ್ರಾಥಮಿಕ ಶಾಲೆಯ ಶಿಕ್ಷಕರಿಗೂ ಮತದಾನದ ಹಕ್ಕನ್ನು ಕಲ್ಪಿಸುವುದರ ಮೂಲಕ ಶಿಕ್ಷಕರ ಬಲವನ್ನು ಹೆಚ್ಚಿಸುವುದು ಮತ್ತು ಶಿಕ್ಷಕರ ಕ್ಷೇತ್ರ ಮಲೀನವಾಗದಂತೆ ತಡೆಯುವುದು ನನ್ನ ಆಧ್ಯತೆಯಾಗಿದೆ ಎಂದು ನೈರುತ್ಯ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಟಿ.ಭಾಸ್ಕರ ಶೆಟ್ಟಿ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಕರ ಕ್ಷೇತ್ರವನ್ನು ಶಿಕ್ಷಕರಲ್ಲದವರು ಆವರಿಸಿಕೊಳ್ಳಬಾರದು. ಅವರಿಗೆ ಶಿಕ್ಷಕರ ಸಮಸ್ಯೆಗಳ ಬಗ್ಗೆ ಅರಿವಿರುವುದಿಲ್ಲ. ನಾನು ಶಿಕ್ಷಣ ಇಲಾಖೆಯಲ್ಲಿ ಮೂರುವರೆ ದಶಕಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿ ನಿವೃತ್ತನಾಗಿದ್ದು, ಶಿಕ್ಷಕರ ಸಮಸ್ಯೆಗಳು, ಈ ಕ್ಷೇತ್ರದ ಅಭಿವೃದ್ಧಿಯ ಚಿಂತನೆ ಹಾಗೂ ವಿದ್ಯಾರ್ಥಿಗಳ ಸಮಸ್ಯೆ ಎಲ್ಲವೂ ತಿಳಿದಿದೆ. ಆದ್ದರಿಂದ ಶಿಕ್ಷಕರು ಯಾವುದೇ ಆಮಿಷಗಳಿಗೆ ಒಳಗಾಗದೆ ಕೆಲಸ ಮಾಡುವ ವ್ಯಕ್ತಿಯನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು. ಈ ಬಾರಿಯ ಚುನಾವಣೆಯಲ್ಲಿ ನನಗೆ ಅವಕಾಶ ಕಲ್ಪಿಸಿದ್ದಲ್ಲಿ ಶಿಕ್ಷಕರ ಕ್ಷೇತ್ರದ ಸಮಸ್ಯೆಗೆ ಪರಿಹಾರದೊರಕುವ ಅವಕಾಶಗಳಿವೆ ಹಾಗೂ ಪರಿಷತ್ತಿನ ಒಳಗೆ ಶಿಕ್ಷಕರ ಪರ ಧ್ವನಿ ಗಟ್ಟಿಯಾಗಿ ಮೊಳಗಳಿದೆ. 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು…
ಮಡಿಕೇರಿ ಮೇ 26 NEWS DESK : ನಿರುದ್ಯೋಗದಿಂದಾಗಿ ಸಮಾಜದಲ್ಲಿ ಅನೇಕ ಸಮಸ್ಯೆಗಳು ಕಾಡುತ್ತಿದ್ದು, ತಾವು ಗೆದ್ದು ಬಂದರೆ ನಿರುದ್ಯೋಗದ ಸಮಸ್ಯೆ ನಿವಾರಣೆಗೆ ಮೊದಲ ಆದ್ಯತೆ ನೀಡುವುದಾಗಿ ಕರ್ನಾಟಕ ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಬಿ.ಮಹಮ್ಮದ್ ತುಂಬೆ ಭರವಸೆ ನೀಡಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೊಡಗು ಜಿಲ್ಲೆಯ ಪ್ರಜ್ಞಾವಂತ ಮತದಾರರು ನನಗೆ ಹೆಚ್ಚಿನ ಮತಗಳನ್ನು ನೀಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದರು. ಇಂದು ಅಸಂಖ್ಯಾತ ಪದವೀಧರರು ನಿರುದ್ಯೋಗಿಗಳಾಗಿದ್ದಾರೆ. ತಮ್ಮ ಮುಂದಿನ ಭವಿಷ್ಯದ ಬಗ್ಗೆ ಅತಂತ್ರತೆಯ ಬದುಕನ್ನು ಸಾಗಿಸುತ್ತಿದ್ದಾರೆ. ಇದರಿಂದಾಗಿ ಸಮಾಜದಲ್ಲಿ ಅನೇಕ ಸಮಸ್ಯೆಗಳು ತಲೆದೋರುತ್ತಿವೆ. ಸರಕಾರಗಳು ಈ ಕುರಿತು ಯಾವುದೇ ಯೋಜನೆಗಳನ್ನು ರೂಪಿಸುವಂತೆ ಕಂಡು ಬರುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ನಾನು ಗೆದ್ದು ಬಂದರೆ ನಿರುದ್ಯೋಗಿ ಪದವೀಧರರ ಬೇಡಿಕೆಗಳ ಪರ ಧ್ವನಿಯಾಗುತ್ತೇನೆ. ನಿರುದ್ಯೋಗಿ ಪದವೀಧರರಿಗೆ ಸ್ವ-ಉದ್ಯೋಗ ತರಬೇತಿ ಸಂಸ್ಥೆಗಳನ್ನು ಆರಂಭಿಸುವಂತೆ ಸರಕಾರದ ಗಮನ ಸೆಳೆಯುತ್ತೇನೆ. ಕರ್ನಾಟಕದಲ್ಲಿರುವ ವಿವಿಧ ವಿಶ್ವವಿದ್ಯಾನಿಲಯಗಳ ಪದವಿ/ಸ್ನಾತಕೋತ್ತರ ವಿದ್ಯಾರ್ಥಿಗಳ ಅಂಕಪಟ್ಟಿ ಸಕಾಲದಲ್ಲಿ ಒದಗಿಸಲು ಪ್ರಾಮಾಣಿಕ…
ಗೋಣಿಕೊಪ್ಪ ಮೇ 26 NEWS DESK : ಮೇ 30, 31 ಹಾಗೂ ಜೂನ್ 1 ಮತ್ತು 2 ರಂದು ನಡೆಯಬೇಕಾಗಿದ್ದ ಜಿಪಿಎಲ್ ಕ್ರೀಡಾಕೂಟವನ್ನು ಮಳೆಯ ಕಾರಣದಿಂದ ಮುಂದೂಡಲಾಗಿದೆ ಎಂದು ಜಿಪಿಎಲ್ ಕ್ರೀಡಾ ಸಮಿತಿ ತಿಳಿಸಿದೆ. ಕ್ರೀಡಾಕೂಟದ ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಜಿಪಿಎಲ್ ಸ್ಥಾಪಕ ಅಧ್ಯಕ್ಷ ಶರಫುದ್ದೀನ್ ತಿಳಿಸಿದ್ದಾರೆ.
ಗಾಂಧಿನಗರ ಮೇ 26 NEWS DESK : ಗುಜರಾತ್ನ ರಾಜ್ಕೋಟ್ನಲ್ಲಿರು ಗೇಮ್ ಝೋನ್ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 35 ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಆತಂಕ ಎದುರಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಗೇಮ್ ಝೋನ್ ಸುಟ್ಟು ಕರಕಲಾಗಿದೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ನಂದಿಸಲು ಸಾಕಷ್ಟು ಕಸರತ್ತು ನಡೆಸಿದವು. ಬೆಂಕಿಯ ತೀವ್ರತೆ ಎಷ್ಟಿತ್ತು ಎಂದರೆ ಅದರ ಹೊಗೆ 3 ಕಿಲೋಮೀಟರ್ ದೂರಕ್ಕೆ ಗೋಚರಿಸುತ್ತಿತ್ತು, ಗೇಮಿಂಗ್ ವಲಯದಲ್ಲಿ ಮಹಿಳೆಯರು, ಮಕ್ಕಳು ಸಿಕ್ಕಿ ಹಾಕಿಕೊಂಡಿದ್ದರು. ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುವುದು ಇನ್ನೂ ಸ್ಪಷ್ಟವಾಗಿಲ್ಲ. ಕಟ್ಟಡ ಕುಸಿದಿರುವುದರಿಂದ ಪರಿಹಾರ ಕಾರ್ಯದಲ್ಲಿ ತೊಂದರೆಯಾಗುತ್ತಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.
ಲಖನೌ ಮೇ 26 NEWS DESK : ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿ ಓವರ್ ಲೋಡ್ ಡಂಪರ್ ನಿಯಂತ್ರಣ ತಪ್ಪಿ ಬಸ್ ಮೇಲೆ ಉರುಳಿಬಿದ್ದು 11 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ಶಹಜಹಾನ್ಪುರದಲ್ಲಿ ನಡೆದಿದೆ. ಅಪಘಾತದಲ್ಲಿ 11 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾ. ಮೃತರು ಉತ್ತರ ಪ್ರದೇಶದ ಸೀತಾಪುರದಿಂದ ಉತ್ತರಾಖಂಡದ ಪೂರ್ಣಂಗಿರಿಗೆ ಹೋಗುತ್ತಿದ್ದರು. ಶನಿವಾರ ರಾತ್ರಿ 12.15ರ ಸುಮಾರಿಗೆ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.
ತರೀಕೆರೆ ಮೇ 26 NEWS DESK : ವಿಧಾನ ಪರಿಷತ್ ನೈರುತ್ಯ ಪದವಿಧರ ಮತ್ತು ನೈರುತ್ಯ ಶಿಕ್ಷಕರ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ತರೀಕೆರೆ ಮಂಡಲದ ವತಿಯಿಂದ ಇಲ್ಲಿನ ಅರಮನೆ ಹೋಟೆಲ್ ಸಭಾಂಗಣದಲ್ಲಿ ಬಿಜೆಪಿ ಕಾರ್ಯಕರ್ತರ ಮತ್ತು ಚುನಾವಣಾ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯಲ್ಲಿ ತರೀಕೆರೆ ಮಂಡಲದ ಬಿಜೆಪಿ ವಾರ್ಡ್ ಅಧ್ಯಕ್ಷರು , ಬೂತ್ ಅಧ್ಯಕ್ಷರು, ಮಹಾಶಕ್ತಿ ಕೇಂದ್ರದ ಪ್ರಮುಖರಿಗೆ ಚುನಾವಣೆಯ ರೂಪುರೇಷೆಗಳನ್ನು ತಿಳಿಸಿ ತಮ್ಮ ವ್ಯಾಪ್ತಿಯ ಮಹಾಶಕ್ತಿ ಕೇಂದ್ರಗಳಲ್ಲಿ ಪದವೀಧರ ಮತದಾರರನ್ನು ತಲುಪಿ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮತ್ತು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್. ಎಲ್. ಭೋಜೇಗೌಡರ ಪರವಾಗಿ ಮತಯಾಚಿಸಿ, ಗೆಲ್ಲಿಸುವಂತೆ ಮನವಿ ಮಾಡಲಾಯಿತು. ಈ ವೇಳೆ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ದೇವರಾಜ್ ಶೆಟ್ಟಿ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವರಾದ ವಿ. ಸುನಿಲ್ ಕುಮಾರ್, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್…
ಹಾಸನ ಮೇ 26 NEWS DESK : ಟ್ರಕ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಎಲ್ಲಾ 6 ಮಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ಭಾನುವಾರ ನಸುಕಿನ ಜಾವ ಹಾಸನ ಹೊರವಲಯದ ಈಚನಹಳ್ಳಿ ಬಳಿ ನಡೆದಿದೆ. ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಒಂದು ಮಗು, ಇಬ್ಬರು ಪುರುಷರು ಹಾಗೂ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ. ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮದ್ ಸುಜೇತಾ ಭೇಟಿ ನೀಡಿದರು. ಕಾರಿನೊಳಗಿದ್ದ ಮೃತದೇಹಗಳನ್ನು ಹೊರತೆಗೆಯಲು ಹರಸಾಹಸವೇ ಪಡಬೇಕಾಯಿತು.
ಸಕಲೇಶಪುರ ಮೇ 26 NEWS DESK : ಕಾಡಾನೆ ದಾಳಿ ಮಾಡಿದ ಪರಣಾಮ ವೃದ್ದೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಕೆಸಗುಲಿ ಗ್ರಾಮದಲ್ಲಿ ನಡೆದಿದೆ. ಲಕ್ಕುಂದ ಗ್ರಾಮದ ದ್ರಾಕ್ಷಾಯಿಣಿ (60) ಎಂಬುವವರು ಗಾಯಗೊಂಡಿದ್ದು, ಹಾಸನದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾರ್ಮಿಕ ಮಹಿಳೆ ದ್ರಾಕ್ಷಾಯಿಣಿ ಅವರ ಮೇಲೆ ಕಾಡಾನೆ ಏಕಾಏಕಿ ದಾಳಿ ಮಾಡಿದೆ. ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ ಮೇ 26 NEWS DESK : ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಎನ್.ಡಿ.ಎ ಮೈತ್ರಿ ಕೂಟದ ಅಭ್ಯರ್ಥಿಗಳಾದ ಡಾ.ಧನಂಜಯ ಸರ್ಜಿ ಹಾಗೂ ಎಸ್.ಎಲ್.ಬೋಜೆಗೌಡ ಅವರುಗಳು ಮತದಾರರನ್ನು ಭೇಟಿಯಾಗಿ ಸಮಾಲೋಚನೆ ನಡೆಸಲು ಮೇ 28 ರಂದು ಕೊಡಗು ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಕೊಡಗು ಜಿಲ್ಲಾ ಬಿಜೆಪಿ ವಕ್ತಾರ ಸುಬ್ರಮಣ್ಯ ಉಪಾಧ್ಯಾಯ ಕಾರ್ಯಕ್ರಮದ ವಿವರ ನೀಡಿದ್ದಾರೆ. ಅಂದು ಬೆಳಿಗ್ಗೆ 8.30 ಗಂಟೆಗೆ ಮಡಿಕೇರಿ ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ ಸಂತ ಮೈಕಲರ ಶಾಲೆ, ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜು ಮತ್ತು ಸಂತ ಜೋಸೆಫರ ಶಾಲೆಗೆ ಭೇಟಿ ನೀಡಲಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಬೆಳಿಗ್ಗೆ 10 ಗಂಟೆಗೆ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡು ನಂತರ 10.30 ಗಂಟೆಗೆ ಮತದಾರರ ಹಾಗೂ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 12.30 ಗಂಟೆಗೆ ವಿರಾಜಪೇಟೆಯ ಅರಮೇರಿ ಕಳಂಚೇರಿ ಮಠ ಮತ್ತು ಶಾಲೆಗೆ ಭೇಟಿ, 1.30ಕ್ಕೆ ಗೋಣಿಕೊಪ್ಪದ ಕಾಲ್ಸ್ ಶಾಲೆ, 1.45 ಕಾವೇರಿ ಕಾಲೇಜು ಭೇಟಿ ಮತ್ತು 2 ಗಂಟೆಗೆ…






