ಮಡಿಕೇರಿ ಜೂ.8 NEWS DESK : ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಜೆಸಿಐ ಸೋಮವಾರಪೇಟೆ ಪುಷ್ಪಗಿರಿ, ಕೊಡಗು ಜಿಲ್ಲಾ ರಕ್ತ ನಿಧಿ ಘಟಕ, ಸೋಮವಾರಪೇಟೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಹಾಗೂ ಯಡೂರು ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಭಾಗಿತ್ವದಲ್ಲಿ ಜೂ.11 ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಸೋಮವಾರಪೇಟೆ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ವರೆಗೆ ರಕ್ತದಾನ ಶಿಬಿರ ನಡೆಯಲಿದೆ. ಕಾರ್ಯಕ್ರಮವನ್ನು ಸೋಮವಾರಪೇಟೆಯ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಕೆ.ಗೋಪಾಲಕೃಷ್ಣ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಸೋಮವಾರಪೇಟೆ ತಾಲೂಕು ತಹಶೀಲ್ದಾರ್ ನವೀನ್ ಕುಮಾರ್, ಯಡೂರು ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಧನಲಕ್ಷ್ಮಿ, ಸೋಮವಾರಪೇಟೆ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಇಂದು ಕುಮಾರ್ ಭಾಗವಹಿಸಲಿದ್ದಾರೆ ಎಂದು ಜೆಸೆಐ ಸೋಮವಾರಪೇಟೆ ಪುಷ್ಪಗಿರಿ ಘಟಕದ ಅಧ್ಯಕ್ಷ ಜೆಸಿ ವಸಂತ್ ಎಸ್. ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 9448585586, 9972832956, 7337770613 ಸಂಪರ್ಕಿಸಬಹುದಾಗಿದೆ.
ಲೇಖಕ: admin
ಮಡಿಕೇರಿ ಜೂ.8 NEWS DESK : ಬೆಳ್ತಂಗಡಿ ತಾಲ್ಲೂಕಿನ ಬಿಜೆಪಿ ಮುಖಂಡ ಹಾಗೂ ಎಸ್ಟಿ ಯುವ ಮೋರ್ಚಾದ ಅಧ್ಯಕ್ಷ ರಾಜೇಶ್ ನಿಡ್ಡಾಜೆ ಅವರ ಮೇಲೆ ನಡೆದಿರುವ ಹಲ್ಲೆ ಖಂಡನೀಯವೆಂದು ಕೊಡಗು ಜಿಲ್ಲಾ ಬಿಜೆಪಿ ಎಸ್ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕ್ಷುಲ್ಲಕ ಕಾರಣಕ್ಕೆ ಜಾತಿ ನಿಂದನೆ ಮಾಡಿ ರಾಜೇಶ್ ಮೇಲೆ ಮರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿ ಹಲ್ಲೆಗಳು ನಡೆಯುತ್ತಿದ್ದು, ಇದಕ್ಕೆ ರಾಜ್ಯ ಸರಕಾರವೇ ನೇರ ಹೊಣೆಯಾಗಿದೆ ಎಂದು ಆರೋಪಿಸಿದ್ದಾರೆ. ರಾಜೇಶ್ ಮೇಲೆ ಹಲ್ಲೆ ಮಾಡಿದ ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಕಾನೂನು ಸುವ್ಯವಸ್ಥೆಯನ್ನು ಬಿಗಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ::: ಸರಕಾರವೇ ವಜಾಗೊಳ್ಳಲಿ ::: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾಗಿರುವ ಕೋಟ್ಯಾಂತರ ರೂ. ಅವ್ಯವಹಾರಕ್ಕೆ ಸಂಬಂಧಿಸಿದಂತೆ…
ಮಡಿಕೇರಿ ಜೂ.8 NEWS DESK : ದೇಶದ ಹೆಮ್ಮೆಯ ಸಮರ್ಥ ನಾಯಕ ನರೇಂದ್ರ ಮೋದಿ ಅವರು ಜೂ.9 ರಂದು ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಅಧಿಕಾರವಹಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಿದ್ದಾಪುರ ಅಯ್ಯಪ್ಪ ದೇವಾಲಯದಲ್ಲಿ ಮತ್ತು ಶ್ರೀ ರಾಮಮಂದಿರದಲ್ಲಿ ವಿಶೇಷ ಪೂಜೆ ನಡೆಯಲಿದೆ. ಕೇಸರಿ ಯೂತ್ ಮೂವ್ ಮೆಂಟ್ ನೇತೃತ್ವದಲ್ಲಿ ಸಿದ್ಧಾಪುರದ ಶ್ರೀ ನರೇಂದ್ರಮೋದಿ ಅಭಿಮಾನಿ ಬಳಗ ಮತ್ತು ಮಹಾರಾಜ ಯದುವೀರ್ ಯುವ ಬ್ರಿಗೇಡ್ ವತಿಯಿಂದ ಪ್ರಧಾನಿಯವರ ಆರೋಗ್ಯ, ದೇಶದ ಅಭಿವೃದ್ಧಿಗೆ ಕೈಗೊಳ್ಳುವ ಕೆಲಸಕಾರ್ಯಗಳಿಗೆ, ದೇವರ ಅನುಗ್ರಹ ಇರಲಿ ಎಂದು ಪ್ರಾರ್ಥನೆಯೊಂದಿಗೆ ಸಂಜೆ 5.30 ಕ್ಕೆ ಸಿದ್ಧಾಪುರ ಅಯ್ಯಪ್ಪ ದೇವಾಲಯ ಮತ್ತು 6.30 ಕ್ಕೆ ಸಿದ್ಧಾಪುರ ಶ್ರೀರಾಮಮಂದಿರದಲ್ಲಿ ವಿಶೇಷ ಪೂಜೆಯನ್ನು ಏರ್ಪಡಿಸಲಾಗಿದ್ದು, ನಂತರ ಸಿದ್ಧಾಪುರ ನಗರದಲ್ಲಿ ಪಟಾಕಿ ಸಿಡಿಸಿ ಬೃಹತ್ ಸಂಭ್ರಮಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಅಭಿಮಾನಿ ಬಳಗ ತಿಳಿಸಿದೆ.
ಮಡಿಕೇರಿ ಜೂ.8 NEWS DESK : ಇಂದು ರಾತ್ರಿ ದುಲ್ ಹಜ್ಜ್ ತಿಂಗಳ ಪ್ರಥಮ ಚಂದ್ರ ದರ್ಶನವಾಗಿರುವುದರಿಂದ ಜೂ.17 ರಂದು ಜಿಲ್ಲೆಯಲ್ಲಿ ಬಕ್ರೀದ್ ಹಬ್ಬವನ್ನು ಆಚರಿಸಲಾಗುತ್ತದೆ ಎಂದು ಕೊಡಗು ಜಿಲ್ಲಾ ಸಂಯುಕ್ತ ಖಾಝಿಗಳಾದ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಜೂ.8 NEWS DESK : ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾ ಹಾಲಿ ಅಧ್ಯಕ್ಷ ಭೋಜಣ್ಣ ಸೋಮಯ್ಯ ಅವರನ್ನು ರಾಜ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ್ ಸಹಾನೀ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಜೂ.7 NEWS DESK : ಕಾರು ಮತ್ತು ಆಟೋರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಆಟೋ ರಿಕ್ಷಾದಲ್ಲಿದ್ದ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಾಪೋಕ್ಲು-ಕೊಳಕೇರಿ ಮುಖ್ಯ ರಸ್ತೆಯ ಹಳೇ ತಾಲೂಕಿನಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ನಾಪೋಕ್ಲು ಕಡೆಯಿಂದ ಹಳೇ ತಾಲೂಕು ಮಾರ್ಗವಾಗಿ ತೆರಳುತ್ತಿದ್ದ ಆಕಾಶ್ ಎಂಬುವರಿಗೆ ಸೇರಿದ ಕಾರು ಹಾಗೂ ಕೊಳಕೇರಿ ಕಡೆಯಿಂದ ನಾಪೋಕ್ಲುವಿಗೆ ಪ್ರಯಾಣಿಕರನ್ನು ಕರೆ ತರುತ್ತಿದ್ದ ಸಮದ್ ಎಂಬುವರ ಆಟೋರಿಕ್ಷಾ ನಡುವೆ ಕೊಳಕೇರಿ ಹಳೇ ತಾಲೂಕು ಮುಖ್ಯ ರಸ್ತೆಯ ನೂರಂಬಡ ಎಂಬಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಆಟೋರಿಕ್ಷಾ ರಸ್ತೆಯಲ್ಲಿ ಪಲ್ಟಿಯಾಗಿದೆ. ಆಟೋಚಾಲಕ ಹಾಗೂ ಮೂವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ ಜೂ.8 NEWS DESK : ದೇಶದ ಹೆಮ್ಮೆಯ ಸಮರ್ಥ ನಾಯಕ ನರೇಂದ್ರ ಮೋದಿ ಅವರು ಜೂ.9ರಂದು ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಅಧಿಕಾರವಹಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ಕೊಡಗು ಜಿಲ್ಲೆಯಾದ್ಯಂತ ಸ್ವಚ್ಛತಾ ಕಾರ್ಯ ಮತ್ತು ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಜಿಲ್ಲಾ ವಕ್ತಾರ ಸುಬ್ರಮಣ್ಯ ಉಪಾಧ್ಯಾಯ ತಿಳಿಸಿದ್ದಾರೆ. ಭಾನುವಾರ ಸಂಜೆ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸುವುದಕ್ಕೂ ಮೊದಲು ಜಿಲ್ಲೆಯ ನಗರ, ಗ್ರಾಮಾಂತರ ಮಂಡಲ ಸೇರಿದಂತೆ ಎಲ್ಲಾ ಮಂಡಲ ಮತ್ತು ಎಲ್ಲಾ ಶಕ್ತಿ ಕೇಂದ್ರಗಳಲ್ಲಿ, ಶಕ್ತಿ ಕೇಂದ್ರದ ಹಾಗೂ ಮಂಡಲದÀ ಪ್ರಮುಖರು, ಸಹ ಪ್ರಮುಖರು, ಚುನಾಯಿತ ಜನಪ್ರತಿನಿದಿನಗಳು, ಎಲ್ಲಾ ಮೋರ್ಚಾಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಮಂಡಲದ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು, ಬೂತ್ ಅಧ್ಯಕ್ಷರುಗಳು, ಸಮಿತಿ ಸದಸ್ಯರು, ಪಕ್ಷದ ಹಿರಿಯ, ಕಿರಿಯ ಕಾರ್ಯಕರ್ತರು, ಹಿತೈಷಿಗಳು ಸ್ವಚ್ಛತಾ ಕಾರ್ಯ ಮತ್ತು ಗಿಡ ನೆಡುವ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಆ ಮೂಲಕ ವಿಶ್ವಗುರು ನರೇಂದ್ರ ಮೋದಿ ಅವರಿಗೆ ಬೆಂಬಲ ಸೂಚಿಸಿ ಅಭಿನಂದನೆಯನ್ನು…
ಮಡಿಕೇರಿ ಜೂ.8 NEWS DESK : ಕೊಡಗು ಜಿಲ್ಲಾ ಆಮ್ ಆದ್ಮಿ ಪಾರ್ಟಿಯ ನೂತನ ಅಧ್ಯಕ್ಷರಾಗಿ ಅಪ್ಪಯ್ಯ ಎಂ.ಕೆ ಆಯ್ಕೆಯಾಗಿದ್ದಾರೆ. ಹಾಲಿ ಅಧ್ಯಕ್ಷ ಭೋಜಣ್ಣ ಸೋಮಯ್ಯ ಅವರನ್ನು ರಾಜ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ್ ಸಹಾನೀ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾಪೋಕ್ಲು ಜೂ.8 NEWS DESK : ಒಂದೇ ಗಿಡದಲ್ಲಿ 30ಕ್ಕೂ ಹೆಚ್ಚು ಬ್ರಹ್ಮಕಮಲದ ಹೂವು ಏಕಕಾಲದಲ್ಲಿ ಅರಳಿ ಅಚ್ಚರಿ ಮೂಡಿಸಿದೆ. ನಾಪೋಕ್ಲು ಗ್ರಾಮ ಪಂಚಾಯಿತಿಯ ಹಳೆ ತಾಲೂಕು ನಿವಾಸಿ ಶಿವಚಳಿಯ0ಡ ಮಂದಪ್ಪ ಎಂಬವರ ಮನೆಯ ಆವರಣದಲ್ಲಿ ಗುರುವಾರ ರಾತ್ರಿ ಸುಮಾರು 30ಕ್ಕೂ ಅಧಿಕ ಬ್ರಹ್ಮಕಮಲದ ಹೂಗಳು ಅರಳಿ ಸುಗಂಧ ಬೀರಿ ಕಣ್ಣಿಗೆ ಮುದ ನೀಡಿದವು. ನಾಪೋಕ್ಲು ಪಟ್ಟಣದ ನಿವಾಸಿ ಕಾಶಿ ಸುಶೀಲ ಎಂಬವರ ಮನೆಯಂಗಳದಲ್ಲಿ ರಾತ್ರಿ ಬ್ರಹ್ಮಕಮಲದ ಹೂಗಳು ಅರಳಿದ್ದು ಕಂಪು ಬೀರಿದವು.
ಬೆಂಗಳೂರು ಜೂ.8 NEWS DESK : ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ ಚೆರುಕುರಿ ರಾಮೋಜಿ ರಾವ್ ಅವರು ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆಗೆ ಸ್ಪಂಧಿಸನೆ, ಸಾವನ್ನಪ್ಪಿದ್ದಾರೆ. ರಾಮೋಜಿ ಅವರಿಗೆ 87 ವರ್ಷ ವಯಸ್ಸಾಗಿತ್ತು. ಅವರು ದೀರ್ಘಕಾಲದಿಂದಲೂ ರಕ್ತದೊತ್ತಡ ಹಾಗೂ ಉಸಿರಾಟ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದರು. ಜೂ.5ರಂದು ಆಸ್ಪತ್ರೆಗೆ ದಾಖಲಾಗಿದ್ದರು. ರಾಮೋಜಿ ರಾವ್ ಅವರು ಈನಾಡು ಗ್ರೂಪ್ ಆಫ್ ಕಂಪನೀಸ್, ಇಖಿಗಿ ನೆಟ್ವರ್ಕ್, ಮಾರ್ಗದರ್ಶಿ ಚಿಟ್ ಫಂಡ್ ಮತ್ತು ರಾಮೋಜಿ ಫಿಲ್ಮ್ ಸಿಟಿ (RFC)ಗೆ ಮುಖ್ಯಸ್ಥರಾಗಿದ್ದರು. ಪತ್ರಿಕೋದ್ಯಮ, ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಅವರ ಸಾಧನೆಗಳಿಗಾಗಿ 2016ರಲ್ಲಿ ಭಾರತದ ಎರಡನೇ ಅತ್ಯುನ್ನತ ಪ್ರಶಸ್ತಿ ಪದ್ಮವಿಭೂಷಣ ನೀಡಿ ಗೌರವಿಸಲಾಗಿತ್ತು. ರಾಮೋಜಿ ರಾವ್ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, “ಇದು ಅತ್ಯಂತ ದುಃಖಕರ. ಅವರು ಭಾರತೀಯ ಮಾಧ್ಯಮದಲ್ಲಿ ಕ್ರಾಂತಿ ಮಾಡಿದ್ದವರು. ಅವರ ಕೊಡುಗೆಗಳು ಪತ್ರಿಕೋದ್ಯಮ ಮತ್ತು ಚಲನಚಿತ್ರಗಳ ಜಗತ್ತಿನಲ್ಲಿ ಅಳಿಸಲಾಗದ ಛಾಪು ಮೂಡಿಸಿವೆ”…






