ಮಡಿಕೇರಿ ಮೇ 26 NEWS DESK : ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಎನ್.ಡಿ.ಎ ಮೈತ್ರಿ ಕೂಟದ ಅಭ್ಯರ್ಥಿಗಳಾದ ಡಾ.ಧನಂಜಯ ಸರ್ಜಿ ಹಾಗೂ ಎಸ್.ಎಲ್.ಬೋಜೆಗೌಡ ಅವರುಗಳ ಗೆಲುವು ನಿಶ್ಚಿತವೆಂದು ಕೊಡಗು ಜಿಲ್ಲಾ ಬಿಜೆಪಿ ವಕ್ತಾರ ಸುಬ್ರಮಣ್ಯ ಉಪಾಧ್ಯಾಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಪ್ರಜ್ಞಾವಂತ ಮತದಾರರು ಬಿಜೆಪಿಯ ಇಬ್ಬರು ಸಮರ್ಥ ಅಭ್ಯರ್ಥಿಗಳನ್ನು ಗೆಲ್ಲಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಜಿಲ್ಲಾ ಬಿಜೆಪಿ ವತಿಯಿಂದ ಕೊಡಗಿನ ಪ್ರತಿ ಮಂಡಲ ವ್ಯಾಪ್ತಿಯ ಮತದಾರರನ್ನು ಭೇಟಿಯಾಗಿ ಧನಂಜಯ ಸರ್ಜಿ ಹಾಗೂ ಬೋಜೆಗೌಡರನ್ನು ಗೆಲ್ಲಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ. ವಿದ್ಯಾವಂತ ಮತದಾರರಿಂದ ಉತ್ತಮ ಸ್ಪಂದನೆ ದೊರೆತ್ತಿದ್ದು, ಇಬ್ಬರ ಗೆಲುವು ಕೂಡ ಸುಲಭವಾಗಲಿದೆ. ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಪ್ರತಿ ಸಮಸ್ಯೆಗಳ ಬಗ್ಗೆ ಬಿಜೆಪಿಯ ಇಬ್ಬರೂ ಅಭ್ಯರ್ಥಿಗಳು ತಿಳಿದುಕೊಂಡಿದ್ದಾರೆ. ಗೆದ್ದ ನಂತರ ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ಶಾಶ್ವತ ಪರಿಹಾರಕ್ಕೆ ಶ್ರಮಿಸಲಿದ್ದಾರೆ ಎಂದು ಭರವಸೆ ನೀಡಿದ್ದಾರೆ. ಡಾ.ಧನಂಜಯ ಸರ್ಜಿ ಹಾಗೂ ಎಸ್.ಎಲ್.ಬೋಜೆಗೌಡ ಅವರುಗಳು…
ಲೇಖಕ: admin
ಮಡಿಕೇರಿ ಮೇ 25 NEWS DESK : ಕೊಡಗು ಜಿಲ್ಲೆಯ ಕಾಫಿ ತೋಟಗಳಲ್ಲಿ ಎರಡು ಕಾಡಾನೆಗಳ ಕಳೇಬರಗಳು ಪತ್ತೆಯಾಗಿದೆ. ಸುಂಟಿಕೊಪ್ಪ ಸಮೀಪದ 7ನೇ ಹೊಸಕೋಟೆ ಬಳಿಯ ಕಾಫಿ ತೋಟ ಮತ್ತು ಕುಶಾಲನಗರ ತಾಲ್ಲೂಕಿನ ತ್ಯಾಗತ್ತೂರು ಗ್ರಾಮದ ತೋಟದಲ್ಲಿ ಕಾಡಾನೆಗಳ ಮೃತದೇಹ ಕಂಡು ಬಂದಿದೆ. 7ನೇ ಹೊಸಕೋಟೆ ಬಳಿಯ ಕಾಫಿ ತೋಟದÀಲ್ಲಿ ಅಂದಾಜು 20 ವರ್ಷದ ಕಾಡಾನೆಯ ಕಳೇಬರ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಮಡಿಕೇರಿ ಡಿಎಫ್ಓ ಭಾಸ್ಕರ್, ಎಸಿಎಫ್ ಗೋಪಾಲ್, ಆರ್ಎಫ್ಓ ರತನ್, ಡಿಆರ್ಎಫ್ಓ ದೇವಯ್ಯ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳದಲ್ಲೇ ಕಳೇಬರದ ಮರಣೋತ್ತರ ಪರೀಕ್ಷೆ ನಡೆಸಿ, ಹೂಳಲಾಯಿತು. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಕಾಡಾನೆ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತ್ಯಾಗತ್ತೂರು ಗ್ರಾಮದ ತೋಟದಲ್ಲಿ ಅಂದಾಜು 20 ವರ್ಷ ಪ್ರಾಯದ ಗಂಡಾನೆ ಮೃತಪಟ್ಟಿರುವುದು ತಡವಾಗಿ ಬೆಳಕಿಗೆ ಬಂದಿದೆ. ಕಾರ್ಮಿಕರು ಕಾಫಿ ತೋಟದೊಳಗೆ ಕೆಲಸಕ್ಕೆ ತೆರಳುವ ಸಂದರ್ಭ ಕಾಡಾನೆಯ ಮೃತದೇಹ ಕಂಡು ಅರಣ್ಯ…
ಮಡಿಕೇರಿ ಮೇ 25 NEWS DESK : ಸೋಮವಾರಪೇಟೆ ತಾಲ್ಲೂಕಿನ ಸೂರ್ಲಬ್ಬಿಯ ಕುಂಬಾರಗಡಿಗೆಯಲ್ಲಿ ಇತ್ತೀಚೆಗೆ ನಡೆದ ವಿದ್ಯಾರ್ಥಿನಿ ಮೀನಾ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಬೇಕೆಂದು ಗರ್ವಾಲೆ ಕೊಡವ ಸಮಾಜ ಮತ್ತು ಬೆಂಗಳೂರಿನ ಏಳ್ನಾಡ್ ಕೊಡವ ಸಂಘಗಳು ಒತ್ತಾಯಿಸಿವೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಏಳ್ನಾಡ್ ಕೊಡವ ಸಂಘದ ಅಧ್ಯಕ್ಷ ಮಂಡೀರ ಬೋಪಯ್ಯ, ವಿದ್ಯಾರ್ಥಿನಿ ಮೀನಾಳ ಹತ್ಯೆಗೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸರಿಂದ ಸೂಕ್ತ ರೀತಿಯಲ್ಲಿ ತನಿಖೆ ನಡೆಯುತ್ತಿಲ್ಲವೆಂದು ಆರೋಪಿಸಿದರು. ಗರ್ವಾಲೆ ಕೊಡವ ಸಮಾಜದ ನಿರ್ದೇಶಕ ಸರ್ಕಂಡ ಸೋಮಯ್ಯ ಮಾತನಾಡಿ, ವಿದ್ಯಾರ್ಥಿನಿಯ ಕುತ್ತಿಗೆ ಕಡಿದು ಹತ್ಯೆ ಮಾಡಿರುವ ಘಟನೆ ಇಡೀ ಮನುಕುಲವೆ ತಲೆ ತಗ್ಗಿಸುವ ಕೃತ್ಯವಾಗಿದೆ. ಪೊಲೀಸರಿಂದ ಘಟನೆ ಕುರಿತು ನಡೆದ ತನಿಖೆ ಹಲವು ಸಂಶಯಗಳನ್ನು ಹುಟ್ಟು ಹಾಕಿದೆ. ದುಷ್ಕೃತ್ಯಕ್ಕೆ ಬಳಸಿದ ಮಾರಕಾಯುಧ ಸಿಕ್ಕಿದ ಸ್ವಲ್ಪ ದೂರದಲ್ಲಿಯೇ ಮೀನಾಳ ರುಂಡವಿದ್ದರು ಅದನ್ನು ಪತ್ತೆ ಮಾಡಲು ಯಾಕೆ ಸಾಧ್ಯವಾಗಿಲ್ಲವೆಂದು ಪ್ರಶ್ನಿಸಿದರು. ದುಷ್ಕೃತ್ಯವೆಸಗಿದ ಆರೋಪಿಯೊಂದಿಗೆ ಇದ್ದ ವ್ಯಕ್ತಿ ಇಂದಿಗೂ ಸೂಕ್ತ ವಿಚಾರಣೆಯಿಲ್ಲದೆ ಹೊರಗಿದ್ದಾನೆ ಎಂದು ಆರೋಪಿಸಿದ ಅವರು, ಸೂಕ್ತ…
ಕುಶಾಲನಗರ ಮೇ 25 NEWS DESK : ಪತ್ರಿಕೆಗಳು ಓದುಗರನ್ನು ಹಿಡಿದಿಟ್ಟುಕೊಳ್ಳುವಂತಹ ವರದಿಗಳನ್ನು ನಿರಂತರವಾಗಿ ಪ್ರಕಟಿಸಬೇಕು ಎಂದು ಕುಶಾಲನಗರ ವಿವೇಕಾನಂದ ಎಜುಕೇಶನ್ ಟ್ರಸ್ಟ್ ಆಡಳಿತ ಅಧಿಕಾರಿ ಮಹೇಶ್ ಅಮೀನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕುಶಾಲನಗರ ವಿವೇಕಾನಂದ ಕಾಲೇಜು ಸಭಾಂಗಣದಲ್ಲಿ ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಾಲೇಜು ಆಡಳಿತ ಮಂಡಳಿ ಸಹಯೋಗದೊಂದಿಗೆ ಹೋಬಳಿ ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಸಂಭ್ರಮದ ಪ್ರಯುಕ್ತ ನಡೆದ ಪರಿಸರ ಮತ್ತು ಮಾಧ್ಯಮ ವಿಷಯಗಳ ಬಗ್ಗೆ ಹಮ್ಮಿಕೊಂಡ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಮೊಬೈಲ್ ನಲ್ಲಿ ಮುಳುಗಿರುವ ಯುವ ಪೀಳಿಗೆ ಓದುವ ಹವ್ಯಾಸವನ್ನು ಮರೆತಂತಿದೆ ಎಂದು ವಿಷಾದ ವ್ಯಕ್ತಪಡಿಸಿದ ಅವರು ಪತ್ರಿಕೆಗಳನ್ನು ಓದುವ ಮೂಲಕ ಹೆಚ್ಚಿನ ಜ್ಞಾನ ಪಡೆಯಲು ಸಾಧ್ಯ ಎಂದರು. ಈ ಸಂದರ್ಭ ಮಾತನಾಡಿದ ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ ಎನ್ ಚಂದ್ರಮೋಹನ್, ವಿದ್ಯಾರ್ಥಿಗಳು ದಿನನಿತ್ಯದ ಆಗುಹೋಗುಗಳ ಬಗ್ಗೆ ಅರಿವು ಪಡೆಯಬೇಕು. ಪತ್ರಿಕೆಯನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಈ ಮೂಲಕ…
ಮಡಿಕೇರಿ ಮೇ 25 NEWS DESK : ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಅಸಮರ್ಥ ಸಚಿವರು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ನೀಡಿರುವ ಹೇಳಿಕೆ ಖಂಡನೀಯವೆಂದು ಶೋಷಿತ ಸಮುದಾಯಗಳ ವೇದಿಕೆಯ ವಿಭಾಗೀಯ ಸಂಚಾಲಕ, ಸುಂಟಿಕೊಪ್ಪ ಗ್ರಾ.ಪಂ ಸದಸ್ಯ ಹೆಚ್.ಯು.ರಫೀಕ್ ಖಾನ್ ಹಾಗೂ ವೇದಿಕೆಯ ಜಿಲ್ಲಾಧ್ಯಕ್ಷ ಟಿ.ಈ.ಸುರೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರುಗಳು ಡಾ.ಜಿ.ಪರಮೇಶ್ವರ್ ಅವರು ಸಜ್ಜನ ರಾಜಕಾರಣಿಯಾಗಿದ್ದು, ಗೃಹ ಖಾತೆ ಮೇಲೆ ಹಿಡಿತ ಹೊಂದಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲೂ ಹದಗೆಟ್ಟಿಲ್ಲ, ಅಸಮರ್ಥರೆಂದು ಹೇಳಿಕೆ ನೀಡುವುದು ಮತ್ತು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸುವುದು ಕೇವಲ ಪ್ರಚಾರಕ್ಕಾಗಿ ಹೊರತು ಬೇರೆ ಯಾವುದೇ ಕಾರಣದಿಂದ ಅಲ್ಲವೆಂದು ಟೀಕಿಸಿದ್ದಾರೆ. ಸಮರ್ಥ ನಾಯಕತ್ವ ಎಂದರೆ ಏನು ಎನ್ನುವುದಕ್ಕೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಉತ್ತರ ನೀಡಿದ್ದಾರೆ. ಪಿ.ರಾಜೀವ್ ಅಸಮರ್ಥರು ಎನ್ನುವುದನ್ನು ಕ್ಷೇತ್ರದ ಜನರು ಸೋಲಿಸುವ ಮೂಲಕ ತೋರಿಸಿಕೊಟ್ಟಿದ್ದಾರೆ. ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಿದ್ಧಾಂತದಡಿ ಕೆಲಸ ಮಾಡುತ್ತಿರುವ ಡಾ.ಜಿ.ಪರಮೇಶ್ವರ್ ಅವರ…
ಮಡಿಕೇರಿ ಮೇ 25 NEWS DESK : ಸ್ವ ಉದ್ಯೋಗಗಳಲ್ಲಿ ಮಹಿಳೆಯರು ಆಸಕ್ತಿಯಿಂದ ತೊಡಗಿಸಿಕೊಳ್ಳುವ ಮೂಲಕ ಆರ್ಥಿಕ ಸ್ವಾವಲಂಬಿಗಳಾಗಿ ನೆಮ್ಮದಿಯ ಬದುಕನ್ನು ಕಾಣುವಂತಾಗಬೇಕು ಎಂದು ನಬಾರ್ಡ್ ಜಿಲ್ಲಾ ಅಧಿಕಾರಿ ರಮೇಶ್ ಬಾಬು ವ್ಯಕ್ತಪಡಿಸಿದರು. ನಗರದ ಬಸಪ್ಪ ಶಿಶು ವಿಹಾರ ಸಭಾಂಗಣದಲ್ಲಿ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್(ನಬಾರ್ಡ್) ಮತ್ತು ಮಹಿಳೋದಯ ಮಹಿಳಾ ಒಕ್ಕೂಟ(ಓಡಿಪಿ)ದ ಸಂಯಕ್ತಾಶ್ರಯದಲ್ಲಿ ಮಡಿಕೇರಿ ಮತ್ತು ಕುಶಾಲನಗರದ ಅರವತ್ತು ಮಹಿಳೆಯರಿಗೆ ಆಯೋಜಿಸಲಾಗಿದ್ದ ‘ಬ್ಯೂಟೀಷಿಯನ್ ಮತ್ತು ಬ್ರೈಡಲ್ ಮೇಕಪ್ ತರಬೇತಿ ಶಿಬಿರ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಬಾರ್ಡ್ ಸಂಸ್ಥೆಯು ರಾಷ್ಟ್ರದ ಮಹಿಳೆಯರು ಮತ್ತು ರೈತರ ಅಭಿವೃದ್ಧಿಗೋಸ್ಕರ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದೆ. ಕೊಡಗು ಜಿಲ್ಲೆಗೆ ಸೀಮಿತವಾಗಿ ಮಹಿಳೆಯರಿಗೆ ವಿವಿಧ ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಈಗ ನಡೆಸಲಾಗುತ್ತಿರುವ ಬ್ಯೂಟೀಷಿಯನ್ ಮತ್ತು ಬ್ರೈಡಲ್ ಮೇಕಪ್ ತರಬೇತಿ ಪಡೆದ ಮಹಿಳೆಯರು ತಮ್ಮ ಕೌಶಲ್ಯವನ್ನು ಹೆಚ್ಚಿಸಿಕೊಂಡು ಸ್ವ ಉದ್ಯೋಗವನ್ನು ಪ್ರಾರಂಭಿಸುವುದರ ಮೂಲಕ ತಮ್ಮ ಕಾಲ ಮೇಲೆ ತಾವು ನಿಲ್ಲಲು ಮುಂದಾಗಬೇಕೆಂದು ಕರೆ ನೀಡಿದರು.…
ಮಡಿಕೇರಿ ಮೇ 25 NEWS DESK : ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರ ಪರವಾಗಿ ಶಿವಮೊಗ್ಗ ನಗರದ ವಿವಿಧ ವಿದ್ಯಾ ಸಂಸ್ಥೆಗಳಿಗೆ ಭೇಟಿ ನೀಡಿ ಅಲ್ಲಿನ ಆಡಳಿತ ವರ್ಗ, ಉಪನ್ಯಾಸವರ್ಗ ಮತ್ತು ಸಿಬ್ಬಂದಿ ವರ್ಗದವರಲ್ಲಿ ತಮ್ಮನ್ನು ಬೆಂಬಲಿಸಿ ಅತ್ಯಧಿಕ ಮತಗಳಿಂದ ಗೆಲ್ಲಿಸುವಂತೆ ಮತಯಾಚಿಸಲಾಯಿತು. ಈ ಸಂದರ್ಭ ನಾಗವೇಣಿ ಸರ್ಜಿ, ಡಾ.ರಜತ್, ಡಾ.ಪ್ರಾಣೇಶ್, ಡಾ.ರಾಘವಾಂಕ, ಮೋಹನ್ ಸೇರಿದಂತೆ ಹಲವರು ಹಾಜರಿದ್ದರು.
ಮಡಿಕೇರಿ ಮೇ 25 NEWS DESK : ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆಯನ್ನು ಮೇ 30 ರೊಳಗೆ ಪ್ರದರ್ಶಿಸಬೇಕೆಂದು ನೀಡಿರುವ ಗಡುವನ್ನು ಡಿ.31 ರವರೆಗೆ ವಿಸ್ತರಿಸಬೇಕೆಂದು ಕೊಡಗು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಜಿಲ್ಲಾಡಳಿತದ ಬಳಿ ಮನವಿ ಮಾಡಿದೆ. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಅವರು ಕೊಡಗು ಜಿಲ್ಲೆಯಲ್ಲಿ ಈಗಾಗಲೇ ಮಳೆ ಪ್ರಾರಂಭವಾಗಿದ್ದು, ನಾಮಫಲಕವನ್ನು ಬದಲಾಯಿಸಲು ಅಡಚಣೆಯಾಗಿದೆ. ಅಲ್ಲದೆ ಆರ್ಥಿಕ ಪರಿಸ್ಥಿತಿಯೂ ಹಿನ್ನಡೆಯನ್ನುಂಟು ಮಾಡುತ್ತಿದೆ ಎಂದರು. ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಿರುವಂತೆ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕದಲ್ಲಿ ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಕಾರ್ಯನಿರ್ವಹಿಸುತ್ತಿರುವ ವಾಣಿಜ್ಯ, ಕೈಗಾರಿಕೆ, ವ್ಯವಹಾರ ಉದ್ಯಮಗಳು, ಟ್ರಸ್ಟ್ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್ಗಳು ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.60 ರಷ್ಟು ಪ್ರದರ್ಶಿಸಬೇಕೆಂದು ಸರಕಾರದಿಂದ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಕೊಡಗು ಜಿಲ್ಲಾ ವಾಣಿಜ್ಯ ಮತ್ತು…
ಕುಶಾಲನಗರ ಮೇ 25 NEWS DESK : ನೃತ್ಯ ಮೂಲಕ ಚಲನೆಯ ವ್ಯಾಪ್ತಿ, ದೈಹಿಕ ಶಕ್ತಿ ಮತ್ತು ದೇಹದ ತ್ರಾಣವನ್ನು ಅಧಿಕಗೊಳಿಸುತ್ತದೆ ಎಂದು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕುಶಾಲನಗರದಲ್ಲಿ ನಡೆದ ಟೀಮ್ ಡ್ರೀಮ್ ಸ್ಟಾರ್ ನೃತ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ರಾಜ್ಯಮಟ್ಟದ ನೃತ್ಯ ಸ್ಪರ್ಧೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ನೃತ್ಯ ವ್ಯಾಯಾಮದ ಒಂದು ಭಾಗವಾಗಿದೆ ಮತ್ತು ಚಿಕ್ಕ ವಯಸ್ಸಿನಿಂದಲೇ ನೃತ್ಯದ ಹಿಡಿತ ಜೀವನದಲ್ಲಿ ಸಕ್ರಿಯವಾಗಿರಲು ಪ್ರೇರಪಣೆ ನೀಡುತ್ತದೆ ಎಂದರು. ಜಿ.ಪಂ ಮಾಜಿ ಸದಸ್ಯರಾದ ವಿ.ಪಿ.ಶಶಿಧರ್, ನಗರ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆದಮ್ ಮತ್ತಿತರರು ಮಾತನಾಡಿದರು. ಪಟ್ಟಣದ ಕೊಡವ ಸಮಾಜ ಸಭಾಂಗಣದಲ್ಲಿ ಆಯೋಜಿಸಿದ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ನೂರಕ್ಕೂ ಅಧಿಕ ಕಲಾವಿದರು ಪಾಲ್ಗೊಂಡಿದ್ದರು. ಜೂನಿಯರ್ ವಿಭಾಗದಲ್ಲಿ ಕೂಡಿಗೆಯ ಎ ಕ್ರಿಯೇಟಿವ್ ನೃತ್ಯ ಸಂಸ್ಥೆ ಪ್ರಥಮ, ಮಡಿಕೇರಿಯ ನಾಟ್ಯಕಲ ದ್ವಿತೀಯ, ಕಿಂಗ್ಸ್ ಆಫ್ ಕೂರ್ಗ್ ತೃತೀಯ ಬಹುಮಾನ ಪಡೆಯಿತು. ಸೀನಿಯರ್ ವಿಭಾಗದಲ್ಲಿ ಸೋಮವಾರಪೇಟೆಯ ಟೀಮ್ ಅಡ್ವೆಂಚರ್…
ಮಡಿಕೇರಿ ಮೇ 25 NEWS DESK : ಶಿಕ್ಷಣದಿಂದ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಮೊಗೇರ ಸೇವಾ ಸಮಾಜದ ಜಿಲ್ಲಾ ಗೌರವ ಸಲಹೆಗಾರ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ನಿಕಟ ಪೂರ್ವ ಸದಸ್ಯ ಪಿ.ಎಂ. ರವಿ ಹೇಳಿದರು. ಸೋಮವಾರಪೇಟೆಯ, ಬಜೆಗುಂಡಿ ಮೊಗೇರ ಸೇವಾ ಸಮಾಜ ಮತ್ತು ಕುಸುಬೂರು ಮೊಗೇರ ಗ್ರಾಮ ಸಮಿತಿಯ ವತಿಯಿಂದ ಕುಸುಬೂರಿನಲ್ಲಿ ಮೊಗೇರ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಸಮಾಜವು ಬಲಿಷ್ಠವಾಗಬೇಕಾದರೆ ಶಿಕ್ಷಣವು ಪ್ರಮುಖವಾಗಿದ್ದು, ಪೋಷಕರು ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣವನ್ನು ನೀಡುವಲ್ಲಿ ಶ್ರಮವಹಿಸಬೇಕೆಂದರು. ಪ್ರಸ್ತುತ ದಿನಗಳಲ್ಲಿ ಮೊಗೇರ ಸಮುದಾಯದವರು ಎಲ್ಲಾ ಕ್ಷೇತ್ರದಲ್ಲೂ ಮುಂದೆ ಬರುತ್ತಿದ್ದು, ಸಮಾಜದ ಅಭಿವೃದ್ಧಿಗೆ ಎಲ್ಲರ ಕೊಡುಗೆ ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಸಮಾಜ ಬಾಂಧವರು ಕೈಜೋಡಿಸುವಂತೆ ಮನವಿ ಮಾಡಿದರು. ವಿದ್ಯಾರ್ಥಿಗಳಿಗೆ ಮಕ್ಕಳಿಗೆ ಸರಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದೇವೆ ಎಂಬ ಕೀಳರಿಮೆ ಬೇಡ. ಸರ್ಕಾರಿ ಶಾಲೆಯಲ್ಲೂ ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದು, ಸರಕಾರದ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ…






