ಲೇಖಕ: admin

ಮಡಿಕೇರಿ ಮೇ 25 NEWS DESK : ಮುನ್ವರುಲ್ ಇಸ್ಲಾಂ ಮದರಸ ಸುಂಟಿಕೊಪ್ಪದಲ್ಲಿ ಎಸ್‌ವೈಎಸ್ ಸೋಮವಾರಪೇಟೆ ವಲಯದ ವಾರ್ಷಿಕ ಸಭೆ ನಡೆಯಿತು. ವಲಯದ ಅಧ್ಯಕ್ಷ  ಅಬ್ದುಲ್ ಸಮದ್ ನಿಸಾಮಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಾರ್ಷಿಕ ವರದಿ ಮತ್ತು ಲೆಕ್ಕ ಪತ್ರ ಮಂಡನೆ ಮಾಡಲಾಯಿತು. ಎಸ್‌ವೈಎಸ್ ಕರ್ನಾಟಕ ರಾಜ್ಯ ಸದಸ್ಯ ಹಸೈನಾರ್ ಮುಸ್ಲಿಯಾರ್ ಉದ್ಘಾಟಿಸಿದರು. ವಾರ್ಷಿಕ ವೀಕ್ಷಕರಾಗಿ ಜಿಲ್ಲಾ ಸಮೀತಿ ಸದಸ್ಯರಾದ ಮುನೀರ್ ಮಹ್ಳರಿ ಉಸ್ತಾದ್, ಎಸ್‌ವೈಎಸ್  ಜಿಲ್ಲಾಧ್ಯಕ್ಷರಾದ ಹಮೀದ್ ಮುಸ್ಲಿಯಾರ್ ಪಾಲ್ಗೊಂಡಿದ್ದರು. ವಲಯದ ಉಸ್ತುವಾರಿಗಳು ಮಾತನಾಡಿ ತಕ್ಷಣವೇ ವಲಯ ಸಮಿತಿಯಿಂದ ಯುನಿಟಿಗಳ ಸಂದರ್ಶನ ನಡೆಯಬೇಕಿದೆ ಎಂದು ಸಲಹೆ ನೀಡಿದರು.  ಕಾರ್ಯದರ್ಶಿ ನಿಜಾಮ್ ಕಂಡಕೆರೆ ಸ್ವಾಗತಿಸಿದರು. ಸಿದ್ದೀಕ್ ಜುಹ್ರಿ ಉಸ್ತಾದ್ ರ ಪ್ರಾರ್ಥನೆಯೊಂದಿಗೆ ಸಭೆ ಮುಕ್ತಾಯಗೊಂಡಿತು.

Read More

ಮಡಿಕೇರಿ ಮೇ 25 NEWS DESK :  ಸ್ವ ಉದ್ಯೋಗಗಳಲ್ಲಿ ಮಹಿಳೆಯರು ಆಸಕ್ತಿಯಿಂದ ತೊಡಗಿಸಿಕೊಳ್ಳುವ ಮೂಲಕ ಆರ್ಥಿಕ ಸ್ವಾವಲಂಬಿಗಳಾಗಿ ಶಾಂತಿ ನೆಮ್ಮದಿಯ ಬದುಕನ್ನು ಕಾಣುವಂತಾಗಬೇಕೆನ್ನುವ ಆಶಯವನ್ನು ನಬಾರ್ಡ್ ಜಿಲ್ಲಾ ಅಧಿಕಾರಿ ರಮೇಶ್ ಬಾಬು ವ್ಯಕ್ತಪಡಿಸಿದರು. ನಗರದ ಬಸಪ್ಪ ಶಿಶು ವಿಹಾರ ಸಭಾಂಗಣದಲ್ಲಿ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್(ನಬಾರ್ಡ್) ಮತ್ತು ಮಹಿಳೋದಯ ಮಹಿಳಾ ಒಕ್ಕೂಟ(ಓಡಿಪಿ)ದ ಸಂಯಕ್ತಾಶ್ರಯದಲ್ಲಿ ಮಡಿಕೇರಿ ಮತ್ತು ಕುಶಾಲನಗರದ ಅರವತ್ತು ಮಹಿಳೆಯರಿಗೆ ಆಯೋಜಿಸಲಾಗಿದ್ದ ‘ಬ್ಯೂಟೀಷಿಯನ್ ಮತ್ತು ಬ್ರೈಡಲ್ ಮೇಕಪ್ ತರಬೇತಿ ಶಿಬಿರ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಬಾರ್ಡ್ ಸಂಸ್ಥೆಯು ರಾಷ್ಟ್ರದ ಮಹಿಳೆಯರು ಮತ್ತು ರೈತರ ಅಭಿವೃದ್ಧಿಗೋಸ್ಕರ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದೆ. ಕೊಡಗು ಜಿಲ್ಲೆಗೆ ಸೀಮಿತವಾಗಿ ಮಹಿಳೆಯರಿಗೆ ವಿವಿಧ ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಈಗ ನಡೆಸಲಾಗುತ್ತಿರುವ ಬ್ಯೂಟೀಷಿಯನ್ ಮತ್ತು ಬ್ರೈಡಲ್ ಮೇಕಪ್ ತರಬೇತಿ ಪಡೆದ ಮಹಿಳೆಯರು ತಮ್ಮ ಕೌಶಲ್ಯವನ್ನು ಹೆಚ್ಚಿಸಿಕೊಂಡು ಸ್ವ ಉದ್ಯೋಗವನ್ನು ಪ್ರಾರಂಭಿಸುವುದರ ಮೂಲಕ ತಮ್ಮ ಕಾಲ ಮೇಲೆ ತಾವು ನಿಲ್ಲಲು ಮುಂದಾಗಬೇಕೆಂದು ಕರೆ…

Read More

ಮಡಿಕೇರಿ ಮೇ 25 NEWS DESK : ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮವರ ತಾಲೂಕಿನ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಜಿ.ಎಂ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಗೆ ಭೇಟಿ ನೀಡಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಭೇಟಿ ನೀಡಿ, ಅಲ್ಲಿನ ಆಡಳಿತವರ್ಗ, ಉಪನ್ಯಾಸಕರು ಮತ್ತು ಸಿಬ್ಬಂದಿವರ್ಗದವರಲ್ಲಿ ಪರಿಷತ್ ಚುನಾವಣೆಯಲ್ಲಿ ಬೆಂಬಲಿಸಿ ಅತ್ಯಧಿಕ ಮತಗಳಿಂದ ಗೆಲ್ಲಿಸುವಂತೆ ಮತಯಾಚಿಸಿದರು. ಈ ಸಂದರ್ಭ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ , ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಸ್ಥಳೀಯ ಬಿಜೆಪಿ ಮುಖಂಡರು, ಕಾಲೇಜಿನ ಆಡಳಿತ ವರ್ಗ, ಉಪನ್ಯಾಸ ವರ್ಗ, ಶಿಕ್ಷಕ ವರ್ಗ ಮತ್ತು ಪದವೀಧರ ಮತದಾರರು ಹಾಜರಿದ್ದರು.  

Read More

ಮಡಿಕೇರಿ ಮೇ 25 NEWS DESK : ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನಲೆ ಉಡುಪಿ ಜಿಲ್ಲೆಯ ಬ್ರಹ್ಮವರ ತಾಲೂಕಿನ ಪ್ರತಿಷ್ಠಿತ ಆಸ್ಪತ್ರೆ ಮಹೇಶ್ ಆಸ್ಪತ್ರೆ ಗೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ಅವರೊಂದಿಗೆ ಭೇಟಿ ನೀಡಿದರು. ಹೆಸರಾಂತ ಮಕ್ಕಳ ತಜ್ಞ ಮತ್ತು ಮಹೇಶ್ ಆಸ್ಪತ್ರೆಯ ವೈದಕೀಯ ನೀರ್ದೇಶಕರಾದ ಡಾ.ರಾಕೇಶ್ ಅಡಿಗ, ಆಡಳಿತ ವರ್ಗ, ಸಿಬ್ಬಂದಿ ವರ್ಗದವರಲ್ಲಿ ವಿಧಾನ ಪರಿಷತ್ ನ ನೈರುತ್ಯ ಪದವಿಧರರ ಚುನಾವಣೆಯಲ್ಲಿ ಗೆಲ್ಲಿಸಲು ನಮ್ಮನ್ನು ಬೆಂಬಲಿಸುವಂತೆ ಮತಯಾಚಿಸಿದರು.

Read More

ಮಡಿಕೇರಿ ಮೇ 25 NEWS DESK : ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮವರ ತಾಲೂಕಿನ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಸೇಂಟ್ ಮೇರೀಸ್ ಸೈರನ್ ಪಿಯು ಕಾಲೇಜಿಗೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ  ಭೇಟಿ ನೀಡಿ ಆಡಳಿತ ವರ್ಗ, ಸಿಬ್ಬಂದಿ ವರ್ಗದವರಲ್ಲಿ ವಿಧಾನ ಪರಿಷತ್ ನ ನೈರುತ್ಯ ಪದವಿಧರರ ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ಮತಯಾಚಿಸಿದರು. ಈ ಸಂದರ್ಭ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ ಪಾಲ್ ಸುವರ್ಣ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಕಾಲೇಜಿನ ಪ್ರಾಂಶುಪಾಲ ಡಾ.ಮಂಜುನಾಥ್ ಉಡುಪ, ಡಾ.ವಿದ್ಯಾಲತಾ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು, ಕಾಲೇಜಿನ ಆಡಳಿತ ವರ್ಗ , ಉಪನ್ಯಾಸ ವರ್ಗ, ಶಿಕ್ಷಕ ವರ್ಗ ಮತ್ತು ಪದವೀಧರ ಮತದಾರರು ಭಾಗವಹಿಸಿದ್ದರು.   

Read More

ನಾಪೋಕ್ಲು ಮೇ 25 NEWS DESK : ಪಾಲೂರು ಗ್ರಾಮ ದೇವತೆಯಾದ ಶ್ರೀ ಕಾಳಿಕಾಂಬ ಅಮನೂರು ತಾಯಿಯ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ವಾರ್ಷಿಕೋತ್ಸವದ ಅಂಗವಾಗಿ ಬೆಳಿಗ್ಗೆ ವಾದ್ಯಗೋಷ್ಠಿಯೊಂದಿಗೆ ಮೆರವಣಿಗೆ ಮೂಲಕ ತೆರಳಿ ದೇವರ ಜಳಕ ಕೈಗೊಂಡರು. ಬಳಿಕ ದೇವಾಲಯದಲ್ಲಿ ಮಹಾಪೂಜೆ ನಡೆಯಿತು. ಪ್ರಸಾದ ವಿತರಣೆಯ ನಂತರ ಇನ್ನಿತರ ದೇವರ ಸೇವೆಗಳು ಜರುಗಿತು. ಈ ಸಂದರ್ಭ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಮ್ಮ ಇಷ್ಟಾರ್ಥ ಸಿದ್ದಿಗೆ ವಿವಿಧ ಹರಕೆ, ಕಾಣಿಕೆ ಒಪ್ಪಿಸಿದರು. ನೆರೆದಿದ್ದ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು. ಕಾರ್ಯಕ್ರಮದಲ್ಲಿ ದೇವಾಲಯದ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ತಕ್ಕ ಮುಖ್ಯಸ್ಥರು ಊರ ಮತ್ತು ಪರವೂರಿನ ಕಾಲಿಕಾಂಬ ಭಕ್ತಾದಿಗಳು ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ. 

Read More

ವಿರಾಜಪೇಟೆ ಮೇ 25 NEWS DESK : ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಸೆಂಟ್ ಆನ್ಸ್ ಪದವಿ ಕಾಲೇಜಿಗೆ ಈ ಶೈಕ್ಷಣಿಕ ಸಾಲಿಗೆ ಪ್ರವೇಶಾತಿ ಆರಂಭವಾಗಿದೆ. ಬಿ.ಕಾಂ, ಬಿಬಿಎ, ಬಿ. ಎಸ್ಸಿ ಮತ್ತು ಬಿಸಿಎ (ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮಿಶನ್ ಲರ್ನಿಂಗ್ ನೂತನ ಕೋರ್ಸುಗಳಿಗೆ )2024-25 ಸಾಲಿನ ಪ್ರವೇಶಾತಿ ಆರಂಭವಾಗಿದೆ. ನುರಿತ ಉಪನ್ಯಾಸಕ ವರ್ಗ, ಸುಸಜ್ಜಿತ ಕೊಠಡಿಗಳು, ಉತ್ತಮ ಗ್ರಂಥಾಲಯ, ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು, ವಿವಿಧ ಘಟಕಗಳಲ್ಲಿ ಭಾಗವಹಿಸುವಿಕೆಯ ಸೌಲಭ್ಯವು ಇರುತ್ತದೆ. ಮತ್ತು ಪದವಿ ಪರೀಕ್ಷೆಗಳ ಪಲಿತಾಂಶದಲ್ಲಿಯೂ ಉತ್ತಮ ಸಾಧನೆಯನ್ನು ಸಂಸ್ಥೆಯ ವಿದ್ಯಾರ್ಥಿಗಳು ಮಾಡಿರುತ್ತಾರೆ. ಪೋಷಕರು ಮತ್ತು ವಿದ್ಯಾರ್ಥಿಗಳು ಕಚೇರಿ ವೇಳೆಯಲ್ಲಿ ಆಗಮಿಸಿ ಪ್ರವೇಶಾತಿಯನ್ನು ಪಡೆಯುವಂತೆ ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕರಾದ ರೆ. ಫಾ. ಐಸಾಕ್ ರತ್ನಾಕರ್ ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ಮಡಿಕೇರಿ ಮೇ 25 NEWS DESK : ಕಂಡಕರೆಗಾಂಧಿ ಯುವಕ ಸಂಘ ಹಾಗೂ ಸರ್ವಧರ್ಮೀಯ ಬಡಹೆಣ್ಣುಮಕ್ಕಳ ಸಾಮೂಹಿಕ ವಿವಾಹ ಆಚರಣಾ ಸಮಿತಿಯ ವತಿಯಿಂದ ನೀಡಲಾಗುತ್ತಿರುವ “ಮಾದರಿ ಜನಪ್ರತಿನಿಧಿ” ಪ್ರಶಸ್ತಿಗೆ ಸಮಾಜ ಸೇವಕ,‌ ಕೆ.ನಿಡುಗಣೆ ಗ್ರಾ.ಪಂ ಸದಸ್ಯ “ಜಾನ್ಸನ್ ಪಿಂಟೋ” ಭಾಜನರಾಗಿದ್ದಾರೆ. ಪ್ರಶಸ್ತಿ ವಿತರಣಾ ಕಾರ್ಯಕ್ರಮವು ಜೂ.9 ರಂದು ಕಂಡಕರೆಯಲ್ಲಿ ನಡೆಯಲಿರುವ ಸರ್ವಧರ್ಮೀಯ ಬಡಹೆಣ್ಣುಮಕ್ಕಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ನೀಡಲಾಗುವುದೆಂದು ಗಾಂಧಿ ಯುವಕ ಸಂಘದ ಅಧ್ಯಕ್ಷ ಇಸ್ಮಾಯಿಲ್ ಕಂಡಕರೆ ತಿಳಿಸಿದ್ದಾರೆ.

Read More

ಬೆಂಗಳೂರು ಮೇ 25 NEWS DESK : ಬಂಗಾಳಕೊಲ್ಲಿಯ ಕೇಂದ್ರ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಇಂದು ಶನಿವಾರ ಬೆಳಗ್ಗೆ ವೇಳೆಗೆ ‘ರೆಮಲ್’ ಎಂಬ ಹೆಸರಿನ ಚಂಡಮಾರುತ ಆರಂಭವಾಗಿ ರಾತ್ರಿ ವೇಳೆಗೆ ತೀವ್ರಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.

Read More

ಮಡಿಕೇರಿ ಮೇ 25  NEWS DESK : ಕರ್ನಾಟಕ ಮುಸ್ಲಿಂ ಜಮಾಅತ್, ಎಸ್.ವೈ.ಎಸ್ ಹಾಗೂ ಎಸ್.ಎಸ್.ಎಫ್ ಸಂಘಟನೆಗಳ ಸಹಯೋಗದಲ್ಲಿ ಬಡಹೆಣ್ಣು ಮಗಳ ವಿವಾಹಕ್ಕೆ ಸಹಾಯ ಹಸ್ತಾಂತರ ಹಾಗೂ ಮಾಸಿಕ ಮಹಳರತುಲ್ ಬದ್ರಿಯ ಸಮಾರಂಭ ನಡೆಯಿತು. ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಕೂರ್ಗ್ ಜಂಇಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಸೈಖುನಾ ಅಶ್ರಫ್ ಅಹ್ಸನಿ ಉಸ್ತಾದ್, ಇಸ್ಲಾಂ ಸರಳ ವಿವಾಹವನ್ನು ಪ್ರೋತ್ಸಾಹಿಸುತ್ತದೆ. ವರದಕ್ಷಿಣೆ ಎನ್ನುವುದು ಇಸ್ಲಾಂಮಿನ ಆಚಾರವಲ್ಲ. ವಧುದಕ್ಷಿಣೆ ಅಥವಾ ಮಹರ್ ನೀಡಿ ಮದುವೆಯಾಗುವುದಾಗಿದೆ ಇಸ್ಲಾಂಮಿನ ಪದ್ದತಿ. ಆದರೆ ಶ್ರೀಮಂತ ಹೆಣ್ಣುಮಕ್ಕಳು ಯತೇಚ್ಚ ಆಭರಣಗಳನ್ನು ಹೊಂದಿ ಮದುವೆಯಾಗುವಾಗ ಬಡ ಹೆಣ್ಣು ಮಕ್ಕಳಿಗೆ ಅಲ್ಪ ಪ್ರಮಾಣದ ಆಭರಣಗಳನ್ನಾದರು ನೀಡುವುದರೊಂದಿಗೆ ಅವರ ಕಣ್ಣೀರು ಒರೆಸುವ ಪ್ರಯತ್ನ ಶ್ಲಾಘನೀಯ ಎಂದು ಹೇಳಿದರು. ಎಸ್.ವೈ.ಎಸ್.ರಾಜ್ಯಾಧ್ಯಕ್ಷ ಅಬ್ದುಲ್ ಹಫೀಲ್ ಸಅದಿ ಮಾತನಾಡಿ, ಮದುವೆ ಎನ್ನುವುದು ಪ್ರವಾದಿ ಸ್ವಲ್ಲಲ್ಲಾಹು ಅಲೈಹಿವಸಲ್ಲಂ ರವರ ಚರ್ಯೆಯಾಗಿದೆ. ಪ್ರವಾದಿ ವರ್ಯರ ಕಾಲದಲ್ಲಿ ಸರಳವಾಗಿತ್ತು. ಆದರೆ ಪ್ರಸ್ತುತ ದಿನಗಳಲ್ಲಿ ವಿವಾಹ ಸಮಾರಂಭವನ್ನು ಆಡಂಬರದಿಂದ ಆಚರಿಸಲಾಗುತ್ತಿದ್ದು, ಬಹಳ ದುಂದುವೆಚ್ಚ ಮಾಡಲಾಗುತ್ತಿದೆ.…

Read More