ಮಡಿಕೇರಿ ಜೂ.8 NEWS DESK : ಕಂಡಕರೆ ಗಾಂಧಿ ಯುವಕ ಸಂಘ ಹಾಗೂ ಸರ್ವಧರ್ಮೀಯ ಬಡಹೆಣ್ಣುಮಕ್ಕಳ ಸಾಮೂಹಿಕ ವಿವಾಹ ಆಚರಣಾ ಸಮಿತಿ ವತಿಯಿಂದ ಜೂ.9 ರಂದು ಸರ್ವಧರ್ಮೀಯ ಬಡಹೆಣ್ಣುಮಕ್ಕಳ ಸಾಮೂಹಿಕ ವಿವಾಹ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಕಂಡಕರೆಯ ಹಯಾತುಲ್ ಇಸ್ಲಾಮ್ ಮದರಸ ಮೈದಾನದಲ್ಲಿ ನಡೆಯಲಿದೆ ಎಂದು ಗಾಂಧಿ ಯುವಕ ಸಂಘದ ಅಧ್ಯಕ್ಷ ಇಸ್ಮಾಯಿಲ್ ಕಂಡಕರೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲೇಖಕ: admin
ಸುಂಟಿಕೊಪ್ಪ ಜೂ.7 NEWS DESK : ಶಾಲಾ-ಕಾಲೇಜು ಮಕ್ಕಳಿಗೆ ರಸ್ತೆ ನಿಯಮಗಳ ಕುರಿತು ಅರಿವು ಮೂಡಿಸುವುದು ಅಗತ್ಯ ಎಂದು ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಎಂ.ಸಿ.ಶ್ರೀಧರ್ ತಿಳಿಸಿದರು. ಸುಂಟಿಕೊಪ್ಪದಲ್ಲಿ ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿದರು. ನಂತರ ಮಾತನಾಡಿದ ಅವರು, ಮಾದಾಪುರ ರಸ್ತೆಯ ಶಾಲಾ-ಕಾಲೇಜು ಬಿಡುವ ಸಂದರ್ಭ ಶಾಲಾ ಮಕ್ಕಳಿಗೆ ದ್ವಿಚಕ್ರ ಸವಾರರಿಗೆ ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಸೂಚಿಸಿದರು. ವಾಹನ ಸವಾರರು ವಾಹನ ಚಾಲನೆ ಮಾಡುವ ಸಂದರ್ಭದಲ್ಲಿ ಪರವಾನಗಿಯನ್ನು ಕಡ್ಡಾಯವಾಗಿ ಹೊಂದಿರಬೇಕು. ಆಟೋ ಚಾಲಕರು ಮಿತಿಗಿಂತ ಅಧಿಕ ಸಂಖ್ಯೆಯಲ್ಲಿ ಮಕ್ಕಳನ್ನು ಕರೆದೊಯ್ಯುವುದು ಕಂಡು ಬಂದಲ್ಲ್ಲಿ ಆಟೋಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ದ್ವಿಚಕ್ರ ಸವಾರರು ತಾವು ಹೆಲ್ಮೆಟ್ ಹಾಕುವುದರೊಂದಿಗೆ ಹಿಂಬದಿ ಸವಾರರಿಗೂ ಹೆಲ್ಮೆಟ್ ಧರಿಸುವಂತೆ ಸೂಚಿಸುವುದು ಒಳಿತು. ಹಾಗೆಯೇ ಕಾರು ಚಾಲಕರು ಸೀಟು ಬೆಲ್ಟ್ ಹಾಕುವುದರೊಂದಿಗೆ ರಸ್ತೆ ನಿಯಮವನ್ನು ಪಾಲಿಸಿ ಇತರ ಚಾಲಕರಿಗೆ ಮಾದರಿಯಾಗಬೇಕು ಎಂದರು. ಈ ಸಂದರ್ಭ ಅಪರಾಧ ವಿಭಾಗದ ಎಸ್.ಐ.ನಾಗರಾಜು, ಪೊಲೀಸ್ ಸಿಬ್ಬಂದಿಗಳಾದ ಕೆ.ಆರ್.ಜಗದೀಶ್.…
ಸೋಮವಾರಪೇಟೆ ಜೂ.8 NEWS DESK : ಸೋಮವಾರಪೇಟೆ ತಾಲ್ಲೂಕು ಜಾನಪದ ಪರಿಷತ್ ಮತ್ತು ಒಕ್ಕಲಿಗರ ಯುವ ವೇದಿಕೆ ಸಹಯೋಗದಲ್ಲಿ ವಿಶ್ವ ರಕ್ತದಾನದ ದಿನಾಚರಣೆಯ ಪ್ರಯುಕ್ತ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಜೂ.10 ರಂದು ರಕ್ತದಾನ ಶಿಬಿರ ನಡೆಯಲಿದೆ ಎಂದು ಪರಿಷತ್ ತಾಲ್ಲೂಕು ಅಧ್ಯಕ್ಷ ಕೆ.ಎ.ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಜೂ.7 NEWS DESK : ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ಕಳೆದ ಏಳು ದಿನಗಳಿಂದ ನಡೆದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ(ಎನ್ಎಸ್ಎಸ್)ದ ವಿಶೇಷ ವಾರ್ಷಿಕ ಶಿಬಿರದ ಸಮಾರೋಪ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲ ಓ.ಎಂ.ಪಂಕಜಾಕ್ಷನ್, ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಮಾತ್ರವಲ್ಲದೆ ಜೀವನದ ಸಾರವನ್ನು ತಿಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇಲ್ಲಿ ಎಲ್ಲರೂ ಒಂದೇ, ನಾನು ನೀನು ಎನ್ನುವ ಭೇದಭಾವಕ್ಕೆ ಅವಕಾಶವಿಲ್ಲ. ಪರಸ್ಪರ ಸಹಕಾರಿ ಮನೋಭಾವ ರೂಪಿಸಿಕೊಳ್ಳಲು ಬಹಳ ಮುಖ್ಯವಾಗಿದೆ ಎಂದು ಹೇಳಿದರು. ಗಾಳಿಬೀಡು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಶಿಕಿರಣ್ ಮಾತನಾಡಿ, ನಮ್ಮ ಗ್ರಾಮದಲ್ಲಿ ಹೀಗೊಂದು ಶಿಬಿರ ನಡೆಯುತ್ತಿರುವುದು ನಮಗೆ ಹೆಮ್ಮೆಯ ವಿಚಾರ. ರಾ.ಸೇ.ಯೋಜನೆಯ ವಿಚಾರಧಾರೆಗಳು ಪ್ರತಿಯೊಬ್ಬ ಮನುಷ್ಯನಿಗೂ ಬಹಳ ಅಗತ್ಯ. ವಿದ್ಯಾರ್ಥಿ ದಿಸೆಯಲ್ಲೇ ಎನ್.ಎಸ್.ಎಸ್ ವಿಚಾರಗಳು ಮನದಲ್ಲಿ ಬೇರೂರಿದರೆ, ಮಾನಸಿಕ ದೃಢತೆಗೆ ಸಹಕಾರಿಯಾಗಲಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಫೀಲ್ಡ್…
ಮಡಿಕೇರಿ ಜೂ.7 NEWS DESK : ಆರೋಗ್ಯಕರ ಪರಿಸರ ಮತ್ತು ಸಾಂಸ್ಕೃತಿಕ ಚಟುವಟಿಕೆ ಮಕ್ಕಳ ಮನೋವೃದ್ಧಿಗೆ ಸಹಕಾರಿಯಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ಅಧಿಕಾರಿ ಮಂಜುಳಾ ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ಶುಕ್ರವಾರ ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ “ಜಿಲ್ಲಾ ಮಟ್ಟದ ಮಕ್ಕಳ ಹಬ್ಬ” ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಮಕ್ಕಳ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಸಾಂಸ್ಕೃತಿಕ ಚಟುವಟಿಕೆ, ಆಟೋಟಗಳು, ಮನರಂಜನೆ ಮತ್ತು ಉತ್ತಮ ಪರಿಸರದ ಅಗತ್ಯವಿದೆ. ಬಾಲ್ಯದಲ್ಲಿ ಗುಣಮಟ್ಟದ ಆಹಾರವನ್ನು ನೀಡಿ ಆರೋಗ್ಯವನ್ನು ವೃದ್ಧಿಸಬೇಕು. ಶಿಕ್ಷಣದೊಂದಿಗೆ ಜ್ಞಾನಾರ್ಜನೆಗೆ ಪೂರಕವಾದ ಪಠ್ಯೇತರ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡಬೇಕೆಂದು ಕರೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಮಕ್ಕಳಿಗೆ ಶಾಲಾ ಶಿಕ್ಷಣದೊಂದಿಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಆಸಕ್ತಿ ಮೂಡಿಸಬೇಕು. ಆ ಮೂಲಕ…
ಮಡಿಕೇರಿ ಜೂ.7 NEWS DESK : ಕರ್ನಾಟಕ ಸರ್ಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಸಂಸ್ಥೆ, ಎಪಿಡಿಮಿಯಾಲಾಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಅವರ ಸಹಯೋಗದಲ್ಲಿ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ ‘ಯುವ ಸ್ಪಂದನ’ ಯೋಜನೆ ಯುವಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳನ್ನು ಒದಗಿಸಲು ಹಾಗೂ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನದಡಿಯಲ್ಲಿ ಕಚೇರಿ ಕೆಲಸಕ್ಕೆ ಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆದ್ದರಿಂದ 21 ರಿಂದ 35 ವರ್ಷದೊಳಗಿನ ಪದವಿ ಹಾಗೂ ಮೇಲ್ಪಟ್ಟು ವಿದ್ಯಾಭ್ಯಾಸ ಮಾಡಿರುವ, ಕನ್ನಡವನ್ನು ಬರೆಯುವ ಹಾಗೂ ಸ್ಪಷ್ಟವಾಗಿ ಮಾತನಾಡುವ ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಹಾಗೂ ಹುಮ್ಮಸ್ಸು, ಉತ್ತಮ ಅಂರ್ತವ್ಯಕ್ತಿತ್ವ, ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯವನ್ನು ಹೊಂದಿರುವ, ಕೊಡಗು ಜಿಲ್ಲೆಯಲ್ಲಿ ಪ್ರಯಾಣಿಸುವಂತಹ, ಸೇವಾ ಮನೋಭಾವ ಹೊಂದಿರುವ ಅಭ್ಯರ್ಥಿಗಳು ತಮ್ಮ ಸ್ವ ವಿವರಗಳು ಮತ್ತು ಅಂಕಪಟ್ಟಿಯೊಂದಿಗೆ ಜೂ.19 ರಂದು ನೇರ ಸಂದರ್ಶನಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,…
ಮಡಿಕೇರಿ ಜೂ.7 NEWS DESK : ಕರ್ನಾಟಕ ರಾಜ್ಯ ಸರ್ಕಾರದ ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ, ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು (6 ರಿಂದ 10 ನೇ ತರಗತಿ) ಗಳಿಗೆ ವಾರ್ಷಿಕ ರೂ.10 ಸಾವಿರ ದಂತೆ ಪ್ರೋತ್ಸಾಹಿಕ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡುವ ಯೋಜನೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಜಾರಿಯಲ್ಲಿದ್ದು, ಈ ಯೋಜನೆಯನ್ವಯ ಪ್ರಸ್ತುತ ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರುವ ಕ್ರೀಡಾಪಟುಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು. ಆಸಕ್ತ ಕ್ರೀಡಾಪಟುಗಳು ಇಲಾಖಾ ಅಧಿಕೃತ ಜಾಲತಾಣ http://sevasindhuservices.karnataka.gov.in ಮೂಲಕ ಆನ್ಲೈನ್ನಲ್ಲಿ 2024ರ ಜೂ.30 ಒಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು 2024-25 ನೇ ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು, ಮಾಧ್ಯಮಿಕ ಅಥವಾ ಪ್ರೌಢಶಾಲೆ (6 ರಿಂದ 10 ನೇ ತರಗತಿ)ಯಲ್ಲಿ ಓದುತ್ತಿರಬೇಕು. ಅರ್ಜಿದಾರರು ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೋಂದಾಯಿತವಾದ ಕ್ರೀಡಾ ಸಂಸ್ಥೆಗಳು 2023 ರ ಏಪ್ರಿಲ್, 01 ರಿಂದ 2024 ರ ಮಾರ್ಚ್, 31 ರವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ…
ಮಡಿಕೇರಿ ಜೂ.7 NEWS DESK : ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ಗಳಲ್ಲಿ ಖಾಲಿ ಇರುವ 5585 ಕ್ಕೂ ಹೆಚ್ಚು ಕ್ಲರಿಕಲ್ ಹುದ್ದೆಗಳು ಹಾಗೂ 3499 ಕ್ಕೂ ಹೆಚ್ಚು ಪ್ರೊಬೇಶನರಿ ಆಫ಼ೀಸರ್ ಹುದ್ದೆಗಳ ನೇಮಕಾತಿಗೆ ಐಬಿಪಿಎಸ್ ಸಂಸ್ಥೆ ಅರ್ಜಿ ಆಹ್ವಾನಿಸಿದೆ. ಒಟ್ಟು 9000 ಕ್ಕೂ ಹೆಚ್ಚು ಹುದ್ದೆಗಳಿದ್ದು ಹಾಸನ ಜಿಲ್ಲೆಯ ಪದವೀಧರ ವಿದ್ಯಾರ್ಥಿಗಳು ಈ ಅವಕಾಶದ ಸದುಪಯೋಗಪಡಿಸಿಕೊಳ್ಳಬೇಕಾಗಿದೆ. ಪದವೀಧರ ವಿದ್ಯಾರ್ಥಿಗಳು ಜೂನ್, 27 ರೊಳಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್ಸೈಟ್ https://www.ibps.in/ ವೀಕ್ಷಿಸಬಹುದಾಗಿದೆ. ಈ ಹುದ್ದೆಗಳ ಹಾಗೂ ಮುಂಬರುವ ಎಲ್ಲಾ ಬ್ಯಾಂಕ್ ನೇಮಕಾತಿ ಪರೀಕ್ಷೆಗಳ ತಯಾರಿಗಾಗಿ ಜೂನ್, 19 ರಂದು ಹಾಸನದ ಸಾಲಗಾಮೆ ರಸ್ತೆಯಲ್ಲಿರುವ ಕೃಷಿಕ್ ಸರ್ವೋದಯ ಫೌಂಡೇಶನ್ ನಲ್ಲಿ ಉಚಿತ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ. ಕೆನರಾ ಬ್ಯಾಂಕ್ನ ನಿವೃತ್ತ ಜನರಲ್ ಮ್ಯಾನೇಜರ್ ಹಾಗೂ ಸಂಪನ್ಮೂಲ ವ್ಯಕ್ತಿಗಳು ಈ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಆಸಕ್ತ ಪದವೀಧರ ವಿದ್ಯಾರ್ಥಿಗಳು ಮೊಬೈಲ್ ಸಂಖ್ಯೆ 8660217739 ಸಂಪರ್ಕಿಸಬಹುದು ಎಂದು ಹಾಸನ…
ಮಡಿಕೇರಿ ಜೂ.7 NEWS DESK : ಸೋಮವಾರಪೇಟೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಜೂ.8 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಸೋಮವಾರಪೇಟೆ ಟೌನ್, ಶಾಂತಳ್ಳಿ, ಗೌಡಳ್ಳಿ, ಅಬ್ಬೂರುಕಟ್ಟೆ, ಐಗೂರು, ಬಜೇಗುಂಡಿ, ದೊಡ್ಡಮಳ್ತೆ, ಮಸಗೋಡು, ಕರ್ಕಳ್ಳಿ, ಹಾನಗಲ್ಲು, ಬೇಳೂರು, ಯಡವಾರೆ, ಕುಂಬೂರು ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಸುಂಟಿಕೊಪ್ಪ ಜೂ.7 NEWS DESK : ಸುಂಟಿಕೊಪ್ಪ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಆವರಣದಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಗಿಡಗಳನ್ನು ನೆಟ್ಟು ಪರಿಸರದ ಮಹತ್ವದ ಕುರಿತು ಜಾಗೃತಿ ಮೂಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಶ್ರೀಲತಾ, ಪರಿಸರದ ಮೇಲೆ ಆಗುತ್ತಿರುವ ಅಪಾಯಕಾರಿ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಪರಿಸರ ಸಂರಕ್ಷಣೆಯು ನಮ್ಮೆಲ್ಲದ ಆದ್ಯ ಕರ್ತವ್ಯವಾಗಬೇಕು. ಪರಿಸರ ಮಾಲಿನ್ಯವನ್ನು ಉಂಟು ಮಾಡುವ ಯಾವುದೇ ಕೆಲಸದಲ್ಲಿ ವಿದ್ಯಾರ್ಥಿಗಳು ತೊಡಗಬಾರದೆಂದು ಸಲಹೆ ನೀಡಿದರು. ಅರಣ್ಯ ನಾಶದಿಂದಾಗಿ ಪ್ರಸ್ತುತ ತಾಪಮಾನವು ದಿನದಿಂದ ದಿನಕ್ಕೆ ಏರುತ್ತಿರುವುದರಿಂದ ಜೀವಸಂಕುಲದ ಉಳಿಯುವಿಕೆಗೆ ಮಾರಕವಾಗಿದೆ ಎಂದರು. ಜೀವಶಾಸ್ತ್ರ ವಿಭಾಗದ ಉಪನ್ಯಾಸಕಿ ಹಾಗೂ ನಿಸರ್ಗ ಇಕೋಕ್ಲಬ್ ಸಂಚಾಲಕಿ ಪದ್ಮಾವತಿ ದಿನದ ಮಹತ್ವದ ಕುರಿತು ಮಾತನಾಡಿ, ವಿಶ್ವಪರಿಸರ ದಿನಾಚರಣೆಯ -2024 ರ ಘೋಷವಾಕ್ಯವಾದ “ಭುಮಿಯ ಪುನರುತ್ತಾನ ಹಾಗೂ ಮರುಭುಮಿ ತಡೆಗಟ್ಟುವಿಕೆ” ವಿಚಾರದ ಬಗ್ಗೆ ಮಾಹಿತಿಯನ್ನು ನೀಡಿದರು. ಅರಣ್ಯನಾಶದಿಂದಾಗಿ ಭೂಮಿ ಮರುಭೂಮಿಯಾಗುತ್ತಿರುವ ಬಗ್ಗೆ ಗಂಭೀರ ಸಮಸ್ಯೆಯ ಕುರಿತು…






