ಮಡಿಕೇರಿ ಜೂ.7 NEWS DESK : ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಜೂ.12 ರಂದು ಸೋಮವಾರಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮತ್ತು ಜೂ.14 ರಂದು ಮಡಿಕೇರಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಆಯಾಯ ದಿನಗಳಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಿ, ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಜೂ.7 NEWS DESK : ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಜು.13 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ್ ಅದಾಲತ್’ ನಡೆಯಲಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳು: ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು (ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು ಮತ್ತಿತರ), ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು. ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು: ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್…
ಮಡಿಕೇರಿ ಜೂ.7 NEWS DESK : ಪ್ರಕೃತಿಯನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಮುಂದಿನ ಪೀಳಿಗೆಗೆ ಪ್ಲಾಸ್ಟಿಕ್ ಮುಕ್ತ ಪರಿಸರವನ್ನು ನೀಡುವುದು ಅಗತ್ಯವಾಗಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ತೋಟಗಾರಿಕಾ ಇಲಾಖೆ, ವಕೀಲರ ಸಂಘ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಹಾಗೂ ಸಂತ ಜೋಸೆಫರ ಶಾಲೆಯ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಸಂತ ಜೊಸೆಫರ ಶಾಲೆಯ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಿಡನೆಟ್ಟು ಮಾತನಾಡಿದ ಅವರು, ಮನುಷ್ಯನ ಜೀವನಕ್ಕೆ ಉತ್ತಮವಾದ ವಾತಾವರಣ ಮುಖ್ಯ. ನೀರು, ಗಾಳಿ, ಆಹಾರ ಪ್ರಕೃತಿದತ್ತವಾಗಿದ್ದು, ಗಾಳಿ ಇಲ್ಲದೆ ಬದುಕಲು ಸಾಧ್ಯವಿಲ್ಲ. ಗಾಳಿ, ಬೆಳಕು, ಆಹಾರ ಚೆನ್ನಾಗಿದ್ದರೆ ಆರೋಗ್ಯವೂ ಚೆನ್ನಾಗಿರುತ್ತದೆ. ಆದ್ದರಿಂದ ಪರಿಶುದ್ಧ ಪರಿಸರ ಅಗತ್ಯ ಎಂದರು. ವಿಶ್ವ ಪರಿಸರ ದಿನಾಚರಣೆ ಅತ್ಯಂತ…
ಮಡಿಕೇರಿ ಜೂ.6 NEWS DESK : ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ಮಡಿಕೇರಿ ಸಹಕಾರ ತರಬೇತಿ ಸಂಸ್ಥೆಯು 2024 ರ ಜು.1 ರಿಂದ 6 ತಿಂಗಳ ಅವಧಿಯ ರೆಗ್ಯೂಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ಕೋರ್ಸ್ ಸಹಕಾರ ತರಬೇತಿಯನ್ನು ಪ್ರಾರಂಭಿಸಲಾಗುತ್ತಿದ್ದು, ಕೊಡಗು, ಹಾಸನ ಹಾಗೂ ಮೈಸೂರು ಜಿಲ್ಲೆಯ ಪಿರಿಯಪಟ್ಟಣ ತಾಲ್ಲೂಕು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕುಗಳು ನಮ್ಮ ತರಬೇತಿ ಸಂಸ್ಥೆಯ ವ್ಯಾಪ್ತಿಯಲ್ಲಿ ಬರುವುದರಿಂದ ಅರ್ಜಿ ಆಹ್ವಾನಿಸಲಾಗಿದೆ. ರೆಗ್ಯೂಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ಕೋರ್ಸ್ ತರಬೇತಿ ಪಡೆಯಲು ಕನಿಷ್ಠ ವಿದ್ಯಾರ್ಹತೆ ಎಸ್ಎಸ್ಎಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ತರಬೇತಿ ಅವಧಿಯಲ್ಲಿ ಪ್ರತಿ ತಿಂಗಳು ಸಾಮಾನ್ಯ ಅಭ್ಯರ್ಥಿಗಳಿಗೆ ರೂ.500 ಶಿಷ್ಯವೇತನ ಮತ್ತು ವಿಶೇಷ ನಿರುದ್ಯೋಗ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂ.600 ಶಿಷ್ಯವೇತನ ನೀಡಲಾಗುವುದು ಹಾಗೂ ಪ್ರವೇಶ ಪಡೆದ ಅಭ್ಯರ್ಥಿಗಳಿಗೆ ಉಚಿತ ವಸತಿ ಗೃಹದ ವ್ಯವಸ್ಥೆ ಇರುತ್ತದೆ. ದೂರಶಿಕ್ಷಣ ‘ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್’ ಪ್ರವೇಶ ಪ್ರಾರಂಭ ಕೋರ್ಸ್ ಅವಧಿ 6…
ಮಡಿಕೇರಿ ಜೂ.7 NEWS DESK : ಪ್ರಸಕ್ತ (2024-25) ಸಾಲಿನ ಮುಂಗಾರು ಹಂಗಾಮಿನಲ್ಲಿ ಕೊಡಗು ಜಿಲ್ಲೆಯಲ್ಲಿ ಈವರೆಗೆ 351 ಮಿ.ಮಿ. ಮಳೆಯಾಗಿದ್ದು, ವಾಡಿಕೆಗಿಂತ ಶೇ.20 ರಷ್ಟು ಹೆಚ್ಚಾಗಿ ಮಳೆಯಾಗಿರುತ್ತದೆ. ರೈತರು ಮುಂಗಾರು ಹಂಗಾಮಿನ ಪೂರ್ವ ಸಿದ್ದತೆಯಲ್ಲಿದ್ದು, ಜಿಲ್ಲೆಯಲ್ಲಿ ಭತ್ತದ ಸಸಿ ಮಡಿ ಕಾರ್ಯವು ಜೂನ್ ಮಾಹೆಯಲ್ಲಿ ನಡೆಯಲಿದ್ದು, ಜುಲೈ ಮತ್ತು ಆಗಸ್ಟ್ ಮಾಹೆಗಳಲ್ಲಿ ನಾಟಿ ಕಾರ್ಯಕೈಗೊಳ್ಳಲಾಗುತ್ತದೆ. ಮುಸುಕಿನ ಜೋಳದ ಬಿತ್ತನೆ ಕಾರ್ಯವನ್ನು ಜೂನ್ ಮಾಹೆಯಲ್ಲಿ ಕೈಗೊಳ್ಳಲಾಗುತ್ತದೆ. ಆದ್ದರಿಂದ ರೈತರಿಗೆ ಅನುಕೂಲವಾಗುವಂತೆ ಅಗತ್ಯವಿರುವ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಇತರೆ ಕೃಷಿ ಪರಿಕರಗಳನ್ನು ಇಲಾಖೆಯ ರೈತ ಸಂಪರ್ಕ ಕೇಂದ್ರಗಳು, ಸಹಕಾರ ಸಂಘಗಳು ಮತ್ತು ಖಾಸಗಿ ಮಾರಾಟಗಾರರಲ್ಲಿ ದಾಸ್ತಾನೀಕರಿಸಲಾಗಿದೆ. ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಒಟ್ಟು 1871 ಕ್ವಿಂಟಾಲ್ ಭತ್ತ ಮತ್ತು 41 ಕ್ವಿಂಟಾಲ್ ಮುಸುಕಿನ ಜೋಳದ ಬಿತ್ತನೆ ಬೀಜಗಳನ್ನು ಸರಬರಾಜು ಮಾಡುವ ಗುರಿ ಹೊಂದಲಾಗಿದ್ದು, ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಸ್ತುತ ದಿನಾಂಕದವರೆಗೆ ಒಟ್ಟು 1067.5 ಕ್ವಿಂಟಾಲ್ ಭತ್ತ ಹಾಗೂ 2.4 ಕ್ವಿಂಟಾಲ್ ಮುಸುಕಿನ ಜೋಳದ…
ಮಡಿಕೇರಿ ಜೂ.7 NEWS DESK : ಲೇಖಕಿ ಪ್ರತಿಮಾ ಹರೀಶ್ ರೈ ಬರೆದಿರುವ ಅಂತರಗಂಗೆ ಪುಸ್ತಕ ಜೂ.9 ರಂದು ಲೋಕಾಪ೯ಣೆಯಾಗಲಿದೆ. ನಗರದ ರೆಡ್ ಬ್ರಿಕ್ಸ್ ಇನ್ ನ ಸತ್ಕಾರ್ (ಪಾಕಶಾಲಾ ಮೇಲ್ಭಾಗ) ಸಭಾಂಗಣದಲ್ಲಿ ಬೆಳಿಗ್ಗೆ 10.30 ಘಂಟೆಗೆ ನಡೆಯುವ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಕ.ಸಾ.ಪ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಉದ್ಘಾಟಿಸಲಿದ್ದು, ಸಾಹಿತಿ ಶ. ಗ. ನಯನತಾರಾ ಅಂತರಗಂಗೆ ಪುಸ್ತಕವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಮಡಿಕೇರಿ ಆಕಾಶವಾಣಿ ಉಧ್ಘೋಷಕ ಸುಬ್ರಾಯ ಸಂಪಾಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕೊಡಗು ವಿಶ್ವವಿದ್ಯಾನಿಲಯದ ಕನ್ನಡ ಉಪನ್ಯಾಸಕ ಡಾ. ಜಮೀರ್ ಅಹಮ್ಮದ್ ಕೃತಿ ವಿಮರ್ಶೆ ಮಾಡಲಿದ್ದಾರೆ. ಅಥಿತಿಗಳಾಗಿ ಶಕ್ತಿ ದಿನಪತ್ರಿಕೆಯ ಪ್ರಧಾನ ಸಂಪಾದಕ ಜಿ.ರಾಜೇಂದ್ರ, ಮಡಿಕೇರಿ ತಾಲ್ಲೂಕು ಜಾನಪದ ಪರಿಷತ್ ಅಧ್ಯಕ್ಷ ಅನಿಲ್ ಹೆಚ್.ಟಿ., ಕೊಡಗು ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ಡಿ.ಜಗದೀಶ್ ರೈ ಪಾಲ್ಗೊಳ್ಳಲಿದ್ದಾರೆ ಎಂದು ಪ್ರತಿಮಾ ಹರೀಶ್ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಜೂ.7 NEWS DESK : ಕಡಂಗ ಸರ್ಕಾರಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಪಿ.ಎಂ.ಶಾಂತಿಕುಮಾರಿ ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರತಿಯೊಬ್ಬರು ಪರಿಸರದ ಸ್ವಚ್ಛತೆ ಕಾಪಾಡುವ ಮೂಲಕ ಉತ್ತಮ ಪರಿಸರಕ್ಕೆ ಪಣತೊಡಬೇಕೆಂದರು. ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ವಿವಿಧ ಹಣ್ಣಿನ ಗಿಡಗಳನ್ನು ನೆಟ್ಟರು.
ಬೆಂಗಳೂರು ಜೂ.7 NEWS DESK : ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪ್ರಚಂಡ ಗೆಲುವು ಸಾಧಿಸಿದ ಡಾ.ಧನಂಜಯ ಸರ್ಜಿ ಅವರು ಹಿರಿಯ ನಾಯಕರು, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರನ್ನು ಬೆಂಗಳೂರಿನ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಭೇಟಿಯಾದರು. ಗೆಲುವಿನ ಬಗ್ಗೆ ಹರ್ಷ ವ್ಯಕ್ತಪಡಿಸಿದ ಯಡಿಯೂರಪ್ಪ ಅವರು ಡಾ.ಧನಂಜಯ ಸರ್ಜಿ ಅವರನ್ನು ಅಭಿನಂದಿಸಿದರು. ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ್ರು, ಕಡೂರು ಶಾಸಕ ಬೆಳ್ಳಿ ಪ್ರಕಾಶ್, ಡಾ.ಧನಂಜಯ ಸರ್ಜಿ ಪತ್ನಿ ನಮಿತಾ ಸರ್ಜಿ, ಸೋದರ ಹರ್ಷ ಸರ್ಜಿ, ನಾಗವೇಣಿ ಸರ್ಜಿ ಮತ್ತಿತರರು ಹಾಜರಿದ್ದರು.
ಮಡಿಕೇರಿ ಜೂ.7 NEWS DESK : ಕಕ್ಕಬ್ಬೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿದ್ಯಾರ್ಥಿಗಳು ಶಾಲೆಯ ಆವರಣದಲ್ಲಿ ಹಣ್ಣಿನ ಗಿಡಗಳನ್ನು ನೆಟ್ಟು ಪರಿಸರ ಜಾಗೃತಿ ಮೂಡಿಸಿದರು. ಭಾಗಮಂಡಲ ಉಪ ವಲಯ ಅರಣ್ಯಾಧಿಕಾರಿ ಫಿರೋಜ್ಖಾನ್ ಹಾಗೂ ಕಾಳೇಗೌಡ ಮತ್ತು ಅರಣು ಇಲಾಖೆ ಸಿಬ್ಬಂದಿಗಳು ಮಾತನಾಡಿ, ಪರಿಸರ ಸಂರಕ್ಷಣೆಯ ಕುರಿತು ಮಾಹಿತಿ ನೀಡಿದರು. ಈ ಸಂದರ್ಭ ಕುಂಜಿಲ-ಕಕ್ಕಬ್ಬೆ ಗ್ರಾ.ಪಂ ಪಿಡಿಒ ವೈ.ಬಿ.ಅಶೋಕ್ ಕುಮಾರ್, ಗ್ರಾ.ಪಂ ಸದಸ್ಯರಾದ ಹೆಚ್.ಡಿ.ಇಂದಿರಾ, ಶಾಲಾ ಶಿಕ್ಷಕರಾದ ಮಾಲತಿ ನಾಗರಾಜ್, ಎಂ.ಹೆಚ್.ರಜೀನಾ, ಕೆ.ಎ.ಜಲಜಾಕ್ಷಿ ಹಾಗೂ ಮಕ್ಕಳು ಹಾಜರಿದ್ದರು.
ಮಡಿಕೇರಿ ಜೂ.7 NEWS DESK : ಪೊನ್ನಂಪೇಟೆಯ ಕಾಟ್ರಕೊಲ್ಲಿಯ ಎಸ್ಎನ್ಡಿಪಿ ಸದಸ್ಯರಾದ ಮಣಿ ಹಾಗೂ ಶುಭ ದಂಪತಿಗಳ ಪ್ರಥಮ ಪುತ್ರಿ ಅಶ್ವದಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆಯು ಇಂದು ಮಧ್ಯಾಹ್ನದ ನಂತರ ಪೊನ್ನಂಪೇಟೆಯ ಹಿಂದೂ ರುದ್ರಭೂಮಿಯಲ್ಲಿ ನಡೆಯಲಿದೆ. ಅಶ್ವದಿ ವಿರಾಜಪೇಟೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ಬಿ.ಎ.ಪದವಿ ವ್ಯಾಸಂಗ ಮಾಡುತ್ತಿದ್ದು, ಕಾಲೇಜಿನ ಪ್ರಾಂಶುಪಾಲರು ಭೋದಕ ಮತ್ತು ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.






