ಲೇಖಕ: admin

ಮಡಿಕೇರಿ ಮೇ 25 NEWS DESK : ಹುದೂರು ಶ್ರೀ ಭಗವತಿ ಹಾಗೂ ಶ್ರೀ ಭದ್ರಕಾಳಿ ದೇವರ ವಾರ್ಷಿಕ ಬೋಡ್ ನಮ್ಮೆಯು ಶ್ರದ್ಧಾಭಕ್ತಿಯಿಂದ ನಡೆಯಿತು. ಅಡ್ಡಂಡ ಬಲ್ಯಮನೆ ಸಮೀಪದ ಅಂಬಲದಿಂದ ಕುದುರೆ ಹಾಗೂ ಮೊಗ ಹೊರಟು ಸಿಐಟಿ ಕಾಲೇಜು ಸಮೀಪವಿರುವ ಶ್ರೀ ಭಗವತಿ ದೇವಸ್ಥಾನದಲ್ಲಿ ಹರಕೆ ಕಾಣಿಕೆಗಳನ್ನು ಸಲ್ಲಿಸಲಾಯಿತು. ನಾಡ್ ತಕ್ಕರಾದ ಪ್ರಕಾಶ್ ಕುಶಾಲಪ್ಪ ಹಾಗೂ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಅಡ್ಡಂಡ ಡಾಲಿ ಜನಾರ್ಧನ ಮುಂದಾಳತ್ವದಲ್ಲಿ ನಡೆಯಿತು. ಎರಡು ದಿನಗಳ ಕಾಲ ನಡೆದ ಬೋಡ್‍ನಮ್ಮೆಯಲ್ಲಿ ಈ ಹಿಂದಿನ ಸಂಪ್ರದಾಯದಂತೆ ಈ ಬಾರಿ ಹಳ್ಳಿಗಟ್ಟು, ಹುದೂರು ಗ್ರಾಮಸ್ಥರು ಪಾಲ್ಗೊಂಡಿರುವುದು ವಿಶೇಷ. ದೇವಸ್ಥಾನ ಅಭಿವೃದ್ಧಿ ಸಮೀತಿ ಸದಸ್ಯರು, ಊರು ತಕ್ಕರು ಸೇರಿದಂತೆ ವಿವಿಧ ಕುಟುಂಬಸ್ಥರು ಪಾಲ್ಗೊಂಡಿದ್ದರು.

Read More

ಮಡಿಕೇರಿ ಮೇ 25 NEWS DESK :  ಹುಲಿ ದಾಳಿಗೆ ಎರಡು ನಾಯಿಗಳು ಬಲಿಯಾಗಿರುವ ಘಟನೆ ವಿರಾಜಪೇಟೆಯ ಕುಟ್ಟಂದಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕೆ.ಕೆ.ಗ್ರೂಪ್ ಎಸ್ಟೇಟ್ ನ ಹಸ್ಕಿ ಮತ್ತು ಫಿಟ್ ಬುಲ್ ವಿದೇಶಿ ತಳಿಯ ನಾಯಿಗಳು ಬಲಿಯಾಗಿದೆ. ತೋಟದ ಒಳಗೆ ಹುಲಿ ಹೆಜ್ಜೆಗಳು ಪ್ರತ್ಯಕ್ಷಗೊಂಡು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ.

Read More

ಮಡಿಕೇರಿ ಮೇ 24 NEWS DESK : ಖಾಸಗಿ ಹಿಡುವಳಿ ಜಾಗದಲ್ಲಿ ಮೇ 1 ರಿಂದ ಸೆ.30 ರವರೆಗೆ ಮರಕಡಿತಲೆಗೆ ಅನುಮತಿ ನೀಡುವುದನ್ನು ತಡೆ ಹಿಡಿದಿರುವ ಅರಣ್ಯ ಇಲಾಖೆ ಕ್ರಮ ರೈತ ವಿರೋಧಿಯಾಗಿದೆ ಎಂದು ಕೊಡಗು ಜಿಲ್ಲಾ ಭೂಮಾಲೀಕರು ಮತ್ತು ಮರ ವ್ಯಾಪಾರಿಗಳ ಸಂಘ ಆರೋಪಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಅರವಿಂದ್ ಕುಟ್ಟಪ್ಪ ಹಾಗೂ ಪದಾಧಿಕಾರಿಗಳು ಅರಣ್ಯ ಇಲಾಖೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿವರ್ಷ ಮಳೆಗಾಲದ ಸಂದರ್ಭ ಜೂ.1 ರಿಂದ ಸೆ.30 ರವರೆಗೆ ಮರಕಡಿತಲೆಗೆ ಅನುಮತಿ ನಿರಾಕರಿಸಲಾಗುತ್ತಿತ್ತು. ಆದರೆ ಪ್ರಸ್ತುತ ವರ್ಷ ಒಂದು ತಿಂಗಳು ಮೊದಲೇ ಅನುಮತಿಯನ್ನು ಸ್ಥಗಿತಗೊಳಿಸಲಾಗಿದೆ. ಕಾಫಿ ತೋಟದಲ್ಲಿ ಅತೀ ಹೆಚ್ಚು ನೆರಳು ನೀಡುವ ಮರಗಳನ್ನು ಕಾಫಿ ಹಣ್ಣು ಬಲಿತ ಸಮಯವನ್ನು ಹೊರತು ಪಡಿಸಿ ಅರಣ್ಯ ಇಲಾಖೆಯ ಅನುಮತಿ ಪಡೆದು ಕಡಿಯಲು ಕೇವಲ 2- 3 ತಿಂಗಳು ಮಾತ್ರ ಅವಕಾಶವಿರುತ್ತದೆ. ಇದೀಗ ಒಂದು ತಿಂಗಳು ಮೊದಲೇ ಅನುಮತಿ ಸ್ಥಗಿತಗೊಳಿಸಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಲಿದ್ದಾರೆ. ವಿದ್ಯುತ್…

Read More

ಮಡಿಕೇರಿ ಮೇ 24 NEWS DESK : ಬಿಜೆಪಿ ತನ್ನ ಸಿದ್ಧಾಂತವನ್ನು ಪಾಲಿಸುತ್ತಿಲ್ಲ, ಕಾರ್ಯಕರ್ತರ ಅಭಿಪ್ರಾಯಕ್ಕೆ ಮನ್ನಣೆ ನೀಡುತ್ತಿಲ್ಲ. ಪಕ್ಷಕ್ಕಾಗಿ ದುಡಿದ ಹಿರಿಯರನ್ನು ಅಭ್ಯರ್ಥಿಯನ್ನಾಗಿ ಮಾಡಿದ್ದರೆ ನಾನು ಸ್ಪರ್ಧಿಸುತ್ತಿರಲಿಲ್ಲ. ಗೆಲ್ಲುವುದಕ್ಕಾಗಿ ನಾನು ಸ್ಪರ್ಧೆಗಿಳಿದಿದ್ದೇನೆಯೇ ಹೊರತು ಯಾರನ್ನೂ ಸೋಲಿಸುವುದಕ್ಕಾಗಿ ಅಲ್ಲವೆಂದು ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ಹಾಗೂ ಉಡುಪಿಯ ಮಾಜಿ ಶಾಸಕ ಕೆ.ರಘುಪತಿ ಭಟ್ ಸ್ಪಷ್ಟಪಡಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಎರಡು ಬಾರಿ ನನಗೆ ಟಿಕೆಟ್ ಕೈತಪ್ಪಿದೆ. ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನನಗೆ ಅವಕಾಶ ದೊರೆಯಲಿಲ್ಲ. ಈ ಕಾರಣದಿಂದ ಕಾರ್ಯಕರ್ತರ ಅಭಿಪ್ರಾಯ ಮತ್ತು ಒತ್ತಡದ ಹಿನ್ನೆಲೆ ಬಿಜೆಪಿ ಕಾರ್ಯಕರ್ತರ ಬೆಂಬಲಿತ ಅಭ್ಯರ್ಥಿಯಾಗಿ ನೈರುತ್ಯ ಪದವೀದರ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದೇನೆ. ರಾಜಕಾರಣಿಯಾದ ನನಗೆ ಜನಸೇವೆಗೆ ಈ ಸ್ಪರ್ಧೆ ಅನಿವಾರ್ಯವಾಗಿತ್ತು ಎಂದು ತಿಳಿಸಿದರು. ಮೂರು ಬಾರಿ ಟಿಕೆಟ್ ತಪ್ಪಿದೆ, ಯಾರೋ ನನಗೆ ಟಿಕೆಟ್ ತಪ್ಪಿಸಿದ್ದಾರೆ, ಯಾರು ತಪ್ಪಿಸಿದ್ದಾರೆ ಮತ್ತು ಯಾಕಾಗಿ ತಪ್ಪಿಸಿದ್ದಾರೆ ಎನ್ನುವ ಬಗ್ಗೆ ನನಗೆ…

Read More

ಸೋಮವಾರಪೇಟೆ ಮೇ 24 NEWS DESK : ಸೋಮವಾರಪೇಟೆ  ತಾಲೂಕಿನ ಶಾಂತಳ್ಳಿ ಗ್ರಾಮದ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಧರ್ಮದೇವತೆ ತಂಡದ ಸದಸ್ಯರಾದ ವೇದಾವತಿಯವರ ಪತಿ ಪರಮೇಶ್‌ ಅವರು ಮರದಿಂದ ಬಿದ್ದು ಸೊಂಟದ ಮೂಳೆ ಮುರಿತಕ್ಕೊಳಗಾಗಿದ್ದಾರೆ. ಇವರ ಚಿಕಿತ್ಸೆಗೆ 3 ಲಕ್ಷದವರೆಗೆ ವೆಚ್ಚವಾದ ಹಿನ್ನೆಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ 30 ಸಾವಿರ ರೂ ನೆರವನ್ನು ನೀಡಲಾಯಿತು. ಚೆಕ್ಕನ್ನು ತಾಲೂಕಿನ ಯೋಜನಾಧಿಕಾರಿಗಳಾದ ಶ್ರೀ ರೋಹಿತ್‌ ವಿತರಿಸಿದರು. ಈ ಸಂದರ್ಭ ಕುಟುಂಬಸ್ತರು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

Read More

ಮಡಿಕೇರಿ ಮೇ 24 NEWS DESK : ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನಲೆಯಲ್ಲಿ ಎನ್ ಡಿ ಎ ಮೈತ್ರಿ ಕೂಟದ ಪದವೀಧರ  ಮತ್ತು ಶಿಕ್ಷಕರ ಕ್ಷೇತ್ರದ  ಅಭ್ಯರ್ಥಿಗಳಾದ ಡಾ ಧನಂಜಯ ಸರ್ಜಿ ಮತ್ತು ಎಸ್.ಲ್ ಬೋಜೆಗೌಡ ಅವರು ಉಡುಪಿಯ ತೆಂಕನಿಡಿಯೂರ್ ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿ  ಅಲ್ಲಿನ ಉಪನ್ಯಾಸವರ್ಗ ಮತ್ತು ಸಿಬ್ಬಂಧಿವರ್ಗದವರಲ್ಲಿ ಮತಯಾಚಿಸಲಾಯಿತು. ಈ ವೇಳೆ ಕಾಲೇಜಿನ ಪ್ರಾಂಶುಪಾಲರಾದ ಸುರೇಶ ರೈ,   ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ , ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್  ಸೇರಿದಂತೆ ,  ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕಿಶೋರ್ ಕುಮಾರ್ ಸೇರಿದಂತೆ ಕಾಲೇಜಿನ  ಆಡಳಿತ ವರ್ಗ ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

Read More

ಉಡುಪಿ ಮೇ 24 NEWS DESK : ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನಲೆಯಲ್ಲಿ ಎನ್ ಡಿ ಎ ಮೈತ್ರಿ ಕೂಟದ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ  ಅಭ್ಯರ್ಥಿಗಳಾದ ಡಾ.ಧನಂಜಯ ಸರ್ಜಿ ಮತ್ತು ಎಸ್.ಎಲ್.ಬೋಜೆಗೌಡ ಅವರು ಉಡುಪಿಯ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಡಾ ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕ್ಕೆ ಭೇಟಿ ನೀಡಿ ಅಲ್ಲಿನ ಉಪನ್ಯಾಸಕರು ಮತ್ತು ಸಿಬ್ಬಂದಿವರ್ಗದವರಲ್ಲಿ ವಿಧಾನ  ಪರಿಷತ್ ಚುನಾವಣೆಯಲ್ಲಿ  ಗೆಲ್ಲಿಸುವಂತೆ ಮತಯಾಚನೆ ಮಾಡಲಾಯಿತು. ಈ ವೇಳೆ, ಕಾಲೇಜು ಪ್ರಾಂಶುಪಾಲರಾದ ಭಾಸ್ಕರ್ ಶೆಟ್ಟಿ ,  ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ , ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ್ ಪೂಜಾರಿ,  ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹರಿಕೃಷ್ಣ ಸೇರಿದಂತೆ, ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

Read More

ಕುಶಾಲನಗರ ಮೇ 24 NEWS DESK : ಶಿಕ್ಷಣದ ಮೂಲಕ ಮಾತ್ರ ಸ್ವಾವಲಂಬಿಗಳಾಗಬಹುದು ಎಂದು ಆದಿಚುಂಚನಗಿರಿ ವಿಶ್ವವಿದ್ಯಾಲಯ ಕುಲಸಚಿವರಾದ ಡಾ.ಸಿ.ಕೆ.ಸುಬ್ಬರಾಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕುಶಾಲನಗರ ಸರಕಾರಿ ಇಂಜಿನಿಯರಿಂಗ್ ಕಾಲೇಜು ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹೆಣ್ಣು ಮಕ್ಕಳಿಗೆ ಶಿಕ್ಷಣ ಅತ್ಯಗತ್ಯವಾಗಿದ್ದು, ಆರ್ಥಿಕ ಕೊರತೆ ಹೆಸರಿನಲ್ಲಿ ಶಿಕ್ಷಣವನ್ನು ಮೊಟಕುಗೊಳಿಸಬಾರದು ಎಂದು ಹೇಳಿದರು. ಶಿಸ್ತು ಮತ್ತು ಗುರು ಹಿರಿಯರಿಗೆ ವಿಧೇಯತೆ ಮೂಲಕ ಸಾಧನೆ ಸಾಧ್ಯ, ಗುಣಮಟ್ಟ ಸೃಷ್ಟಿಸಲು ಅತ್ಯಂತ ಶ್ರಮದ ಅಗತ್ಯತೆ ಇದೆ ಎಂದರು. ಪ್ರಕೃತಿ ಮತ್ತು ವಿಜ್ಞಾನ ಎಲ್ಲರ ಧ್ವನಿಗಿಂತ ಮಿಗಿಲಾಗಿದ್ದು, ಅದರ ಮೂಲಕ ಪ್ರತಿಯೊಬ್ಬರೂ ನೆಮ್ಮದಿಯ ಜೀವನ ಸಾಗಿಸಲು ಸಾಧ್ಯ ಎಂದರು. ಸರಕಾರಿ ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲರಾದ ಸತೀಶ್ ಎನ್.ಎಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಬೆಂಗಳೂರಿನ ಕ್ಯೂ ಸ್ಪೈಡರ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಗಿರೀಶ್ ಶಿವಣ್ಣ, ಶನಿವಾರಸಂತೆ ವಿಘ್ನೇಶ್ವರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಜಯಕುಮಾರ್  ಮಾತನಾಡಿದರು. ಪ್ರಾಂಶುಪಾಲರಾದ ಡಾ ಸತೀಶ್ ಎನ್ ಎಸ್ ಅವರು…

Read More

ಮಡಿಕೇರಿ ಮೇ 24 NEWS DESK : ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರು ಮತ್ತು ಮಾಜಿ ಸಚಿವ ದಿ. ಶ್ರೀ ಡಾ ವಿ.ಎಸ್.ಆಚಾರ್ಯ ಅವರ ಉಡುಪಿಯ ಮಣಿಪಾಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಪತ್ನಿ ಡಾ. ಶಾಂತಾ ಆಚಾರ್ಯ ಮತ್ತು ಕುಟುಂಬದವರನ್ನು ಭೇಟಿ ಮಾಡಿ ಕುಶಲೋಪಚರಿ ವಿಚಾರಿಸಿದರು. ಈ ಸಂದರ್ಭ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ ಪಾಲ್ ಸುವರ್ಣ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ್ ಪೂಜಾರಿ, ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರಿಕೃಷ್ಣ ಸೇರಿದಂತೆ, ಸ್ಥಳೀಯ ಬಿಜೆಪಿ ಮುಖಂಡರು ಹಾಜರಿದ್ದರು.

Read More

ಮಡಿಕೇರಿ ಮೇ 24 NEWS DESK : ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರು ಮತ್ತು ಮಾಜಿ ಸಚಿವರಾದ ದಿ. ಡಾ ವಿ.ಎಸ್.ಆಚಾರ್ಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭ  ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ ಪಾಲ್ ಸುವರ್ಣ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ್ ಪೂಜಾರಿ , ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರಿಕೃಷ್ಣ ಸೇರಿದಂತೆ, ಸ್ಥಳೀಯ ಬಿಜೆಪಿ ಮುಖಂಡರು ಹಾಜರಿದ್ದರು.

Read More