ಲೇಖಕ: admin

ಮಡಿಕೇರಿ ಮೇ 24 NEWS DESK :  ಭಾರತ ಸರ್ಕಾರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು 2024-25 ರ ಸಾಲಿಗೆ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ರಾಷ್ಟ್ರೀಯ ಸಾಗರೋತ್ತರ ವಿದ್ಯಾರ್ಥಿ ವೇತನ ಯೋಜನೆ (ಎನ್‍ಒಎಸ್)ಗೆ ಸ್ನಾತಕೋತ್ತರ ಪದವಿ, ಪಿಎಚ್‍ಡಿ ಉನ್ನತ ವ್ಯಾಸಂಗಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದ್ದು, ಆಸಕ್ತ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಆನ್‍ಲೈನ್ https://overseas.tribal.gov.in ನಲ್ಲಿ ವೆಬ್‍ಸೈಟ್ ಮೂಲಕ ಅರ್ಜಿಯನ್ನು ಮೇ, 31 ರೊಳಗೆ ಸಲ್ಲಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಹೊನ್ನೇಗೌಡ  ತಿಳಿಸಿದ್ದಾರೆ.

Read More

ಮಡಿಕೇರಿ ಮೇ 24 NEWS DESK : ಕೊಡಗು ಜಿಲ್ಲೆಯಲ್ಲಿ `ಪೂರ್ವ ಮುಂಗಾರು’ ಉತ್ತಮವಾಗಿದ್ದು, ಮುಂದಿನ `ಮುಂಗಾರು’ ಸಂದರ್ಭದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ಮುಂಗಾರು ಸಂದರ್ಭದಲ್ಲಿ ಉಂಟಾಗಬಹುದಾದ ಪ್ರಾಕೃತಿಕ ವಿಕೋಪವನ್ನು ಎದುರಿಸಲು ಈಗಿನಿಂದಲೇ ಎಚ್ಚರ ವಹಿಸಬೇಕಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ಮುಂಗಾರು ಸಂದರ್ಭದಲ್ಲಿ ಅಗತ್ಯ ಕಾರ್ಯ ನಿರ್ವಹಣೆ, ಶುದ್ಧ ಕುಡಿಯುವ ನೀರು ಪೂರೈಕೆ ಮತ್ತಿತರ ಸಂಬಂಧ ವಿಡಿಯೋ ಸಂವಾದ ಮೂಲಕ ಅಧಿಕಾರಿಗಳ ಜೊತೆ ಅವರು ಮಾತನಾಡಿದರು. ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ತಹಶೀಲ್ದಾರರು ಮತ್ತು ತಾಲ್ಲೂಕು ಪಂಚಾಯತ್ ಇಒಗಳು ಶುದ್ಧ ಕುಡಿಯುವ ನೀರು ಪೂರೈಕೆ ಮತ್ತು ಪ್ರಾಕೃತಿಕ ವಿಕೋಪ ಎದುರಿಸಲು ಸದಾ ಎಚ್ಚರವಹಿಸಬೇಕು ಎಂದರು. ಹೆಚ್ಚಿನ ಮಳೆಯಾಗಿ ಪ್ರವಾಹ ಉಂಟಾದಲ್ಲಿ, ಪ್ರವಾಹ ಪೀಡಿತ ಪ್ರದೇಶಗಳ ಜನರನ್ನು ಹತ್ತಿರದ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲು ಮುಂದಾಗಬೇಕು. ಕಾಳಜಿ ಕೇಂದ್ರಗಳಲ್ಲಿ ಅಗತ್ಯ ಮೂಲ ಸೌಲಭ್ಯ ಒದಗಿಸಬೇಕು ಎಂದು…

Read More

ಮಡಿಕೇರಿ ಮೇ 24 NEWS DESK : ಕೊಡಗು ಧಮ ವಿಜಯ ಸಂಘಟನೆ ವತಿಯಿಂದ ವೈಶಾಖ ಬುದ್ಧ ಪೂರ್ಣಿಮೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅಕ್ಕ ಐಎಎಸ್ ಅಕಾಡೆಮಿ ಸಂಸ್ಥಾಪಕ ಡಾ.ಶಿವಕುಮಾರ್, ತಿಶರಣ ಹಾಗೂ ಪಂಚಶೀಲ ತತ್ವಗಳನ್ನು ಹೇಗೆ ಮತ್ತು ಏಕೆ ಪಾಲಿಸಬೇಕು ಎಂಬುದರ ಬಗ್ಗೆ ಮಾಹಿತಿ ನೀಡಿದರು. ನಮ್ಮ ಎಲ,್ಲ ಸುಖ ಹಾಗೂ ದುಃಖಗಳಿಗೆ ಕಾರಣವಾದ ನಮ್ಮ ಮನಸ್ಸನ್ನು ಯಾವ ರೀತಿಯಲ್ಲಿ ತರಬೇತಿಗೊಳಿಸಬೇಕು ಎಂದು ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಅಶೋಕ್‍ಪುರ ಅನ್ನಪೂರ್ಣ ಸಮಿತಿಯ ಅಧ್ಯಕ್ಷ ಜಯರಾಮ್ ನಗರದ ಸ್ಥಾಯಿ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್, ನಗರಸಭಾ ಸದಸ್ಯರಾದ ಶಾರದಾ ನಾಗರಾಜು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪ.ಜಾತಿ ನೌಕರರ ಒಕ್ಕೂಟದ ಅಧ್ಯಕ್ಷ ಕುಮಾರಸ್ವಾಮಿ, ವೈದ್ಯರಾದ ಡಾ.ಪ್ರಕಾಶ್, ಡಾ.ಆನಂದ್, ಧಮ್ಮ ವಿಜಯ ಸಂಘಟನೆಯ ಹಿರಿಯ ಸದಸ್ಯ ಶಾಮ್, ನಗರ ಸಭೆಯ ಮಾಜಿ ಸದಸ್ಯರಾದ ಚಿತ್ರ ದೇವರಾಜು ಮೆಣದ ಬತ್ತಿಹಚ್ಚಿ ಬುದ್ಧ ಪ್ರತಿಮೆ…

Read More

ಮಡಿಕೇರಿ ಮೇ 24 NEWS DESK : ಸಮಯವನ್ನು ಹಾಳು ಮಾಡದೆ ಧನಾತ್ಮಕವಾಗಿ ಯೋಚಿಸುವ ಮೂಲಕ ವೈಯುಕ್ತಿಕ ಸಾಮರ್ಥ್ಯ ಹಾಗೂ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳುವಂತೆ ಮಡಿಕೇರಿ ರೋಟರಿಯ ಪ್ರಮುಖ ಎನ್.ಡಿ.ಅಚ್ಚಯ್ಯ ಕರೆ ನೀಡಿದ್ದಾರೆ. ಮೈಸೂರು ಮಣಿಪಾಲ ಆಸ್ಪತ್ರೆ, ರೋಟರಿ ಮಡಿಕೇರಿ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಐಕ್ಯೂಎಸಿ, ರೆಡ್ ಕ್ರಾಸ್, ಎನ್‍ಸಿಸಿ, ಎನ್‍ಎಸ್‍ಎಸ್ ಘಟಕಗಳ ಸಹಯೋಗದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ನಡೆದ ಪ್ರಥಮ ಚಿಕಿತ್ಸಾ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಾರ್ವಜನಿಕವಾಗಿ ಮಾತನಾಡುವ ಮೂಲಕ ಆತ್ಮಸ್ಥೈರ್ಯ ಹೆಚ್ಚಿಸಿಕೊಳ್ಳಬೇಕು. ದೂರದೃಷ್ಟಿಯ ಚಿಂತನೆ ಮತ್ತು ಸಕಾರಾತ್ಮಕವಾಗಿ ಯೋಚಿಸುವ ಜನರ ಜೊತೆ ಒಡನಾಡಬೇಕು. ಅಂತರ್ಜಾಲ ಮಾಹಿತಿಯಷ್ಟೇ ಜ್ಞಾನ ಅಲ್ಲ, ಪುಸ್ತಕಗಳನ್ನು ಓದುವ ಮೂಲಕ, ಅಧ್ಯಯನಶೀಲರಾಗಬೇಕು. ಅದರೊಂದಿಗೆ ಉತ್ತಮ ಸಾಧನೆ ಮಾಡಬೇಕು ಎಂದು ಹೇಳಿದರು. ಗೆಲುವಿನ ಸಂಭ್ರಮ ಸಣ್ಣದೇ ಇರಲಿ ಅಥವಾ ದೊಡ್ಡದೇ ಇರಲಿ ಅದನ್ನು ಆಚರಿಸಿ. ಮಾತ್ರವಲ್ಲ ನಮ್ಮ ತಪ್ಪಿನ ಬಗ್ಗೆ ತಿಳುವಳಿಕೆ ಹೊಂದುವ ಮೂಲಕ ಅದನ್ನು ಪರಿಹರಿಸಿಕೊಳ್ಳಬೇಕು. ಮತ್ತೆ ಆ ತಪ್ಪನ್ನು…

Read More

ಕುಶಾಲನಗರ ಮೇ 24 NEWS DESK :  ಗೌತಮ ಬುದ್ಧರ ಸಂದೇಶ ಸರ್ವಕಾಲಕ್ಕೂ ಮಾದರಿಯಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಹೆಚ್.ಪಿ.ಶಿವಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕುಶಾಲನಗರದಲ್ಲಿ ಬುದ್ಧ ಪೂರ್ಣಿಮೆ ಅಂಗವಾಗಿ ಕಾವೇರಿ ಮಹಾ ಆರತಿ ಬಳಗದ ಆಶ್ರಯದಲ್ಲಿ ಕಾವೇರಿ ಆರತಿ ಕ್ಷೇತ್ರದಲ್ಲಿ ನಡೆದ 159ನೆಯ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬುದ್ಧರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ  ಮಾತನಾಡಿದರು. ಪ್ರತಿಯೊಬ್ಬರೂ ಪ್ರಭುದ್ಧರಾಗಿ ನೆಮ್ಮದಿ ಜೀವನ ಸಾಗಿಸಬೇಕಾಗಿದೆ ಎಂದರು. ಜೀವನದಿ ಕಾವೇರಿಯ ಸಂರಕ್ಷಣೆಯಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು. ಸ್ವಚ್ಛ ಕಾವೇರಿ ಕನಸು ನನಸಾಗಬೇಕು ಎಂದರು. ದಲಿತ ಸಂಘರ್ಷ ಸಮಿತಿ ಭೀಮಾವಾದ ರಾಜ್ಯ ಸಂಘಟನಾ ಸಂಚಾಲಕ ಕೆ.ಬಿ.ರಾಜು ಮಾತನಾಡಿ, ಕಳೆದ ಏಳು ದಶಕಗಳಿಂದ ಎಂದೂ ಕಾಣದ ಪರಿಸ್ಥಿತಿ ಈ ಬಾರಿ ಜೀವನದಿ ಕಾವೇರಿಯಲ್ಲಿ ಕಂಡು ಬಂದಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಪ್ರತಿಯೊಬ್ಬರೂ ಪ್ರಕೃತಿಯ ಸಂರಕ್ಷಣೆಗೆ ಪಣತೊಡಬೇಕಾಗಿದೆ.  ಕಾವೇರಿ ನದಿ ಸಂರಕ್ಷಣೆ ಬಗ್ಗೆ ನಿರಂತರ ಕಾಳಜಿ ಹೊಂದಿರುವ ಕಾವೇರಿ ಮಹಾ ಆರತಿ ಬಳಗದ ಬಗ್ಗೆ ಮೆಚ್ಚುಗೆ…

Read More

ಮಂಗಳೂರು ಮೇ 24 NEWS DESK : ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯ ಅಂಗವಾಗಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಂಗಳೂರಿನ ಕೆನರಾ ಸ್ಕೂಲ್ ಮತ್ತು ಶಾರದಾ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಿ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳೊಂದಿಗೆ ಸಂವಾದ ನಡೆಸಿದರು.

Read More

ನಾಪೋಕ್ಲು ಮೇ 24  NEWS DESK : ಬಲ್ಲಮಾವಟಿ ಗ್ರಾಮದ ರಾಟೆ ಶ್ರೀ ಭಗವತಿ ದೇವರ ಉತ್ಸವವು ಎರಡು ದಿನಗಳ ಕಾಲ ಶ್ರದ್ಧಾಭಕ್ತಿಯಿಂದ ನಡೆಯಿತು. ಬೆಳಿಗ್ಗೆ ಎಡಿಕೇರಿ ದೊಡ್ಡ ಮನೆಯಿಂದ ಭಂಡಾರ ತಂದು ದೇವಾಲಯದಲ್ಲಿ ಇರಿಸಿ ತಂಡ್ರ ಹೊಳೆಯಲ್ಲಿ ಜಳಕ ನೆರವೇರಿಸಿದ ಬಳಿಕ ದೇವಾಲಯದಲ್ಲಿ ವಿಶೇಷ ಪೂಜೆ ಜರುಗಿತು. ಪೀಲಿಯಾಟ್ ಹಾಗೂ ಬೋಡ್ ನಮ್ಮೆ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ವಿಶೇಷ ವೇಷಧರಿಸಿ ದೇವರ ಉತ್ಸವದಲ್ಲಿ ಕುಣಿದು ಸಾಂಪ್ರದಾಯಿಕ ಆಚರಣೆ ನೆರವೇರಿಸಿದರು. ಬೊಡ್ ನಮ್ಮೆ ಉತ್ಸವದಲ್ಲಿ ತಕ್ಕ ಮುಖ್ಯಸ್ಥರು, ನಾಡಿನ ಭಕ್ತರು, ಗ್ರಾಮಸ್ಥರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಉತ್ಸವದ ಅಂಗವಾಗಿ ಆರಾಟ್ ಬೊಳಕಾಟ್ ನಡೆಯಿತು. ಮಹಾಪೂಜೆ ಬಳಿಕ ದೇವರನ್ನು ರಾಟೆಯಲ್ಲಿ ಕೂರಿಸಿ ಸಂಪ್ರದಾಯಿಕವಾಗಿ ತೂಗಲಾಯಿತು. ಸಂಜೆ ಕ್ಷೇತ್ರಪಾಲ, ಶಾಸ್ತಾವು ಹಾಗೂ ಭದ್ರಕಾಳಿ ತೆರೆಗಳು ನಡೆಯಲಿವೆ. ವರದಿ : ದುಗ್ಗಳ ಸದಾನಂದ. 

Read More

ಸೋಮವಾರಪೇಟೆ ಮೇ 24 NEWS DESK  : ಡಿಜಿ ವಿಕಸನ ಕಾರ್ಯಕ್ರಮದಡಿ ಸೋಮವಾರಪೇಟೆ ತಾಲ್ಲೂಕಿನ ಗ್ರಂಥಾಲಯ ಪ್ರಗತಿ ಪರಿಶೀಲನಾಸಭೆ ಮತ್ತು ಮೇಲ್ವಿಚಾರಕರಿಗೆ ತರಬೇತಿ ಕಾರ್ಯಕ್ರಮ ನಡೆಯಿತು. ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ತಾ.ಪಂ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಉದ್ಘಾಟಿಸಿದರು. ಗ್ರಾ.ಪಂ ಗ್ರಂಥಾಲಯವು ಜ್ಞಾನ ಮೂಡಿಸುವ ಕೇಂದ್ರಗಳಾಗಿವೆ. ಪ್ರತಿಯೊಂದು ಮಾಹಿತಿಯೂ ಇಲ್ಲಿ ಸಿಗುವಂತಾಗಬೇಕು. ಡಿಜಿಟಲ್ ಕೌಶಲ್ಯಗಳನ್ನು ಹೆಚ್ಚಿಸಿಕೊಳ್ಳಲು ಶಿಕ್ಷಣ ಫೌಂಡೇಶನ್ ಸಹಯೋಗದ ಗ್ರಾಮ ಡಿಜಿ ವಿಕಸನದಡಿ ನೀಡಿರುವಂತಹ ಮಾನಿಟರ್, ಟಿ.ವಿ, ಮೊಬೈಲ್‍ಗಳಲ್ಲಿ ಪಠ್ಯ ಪುಸ್ತಕಕ್ಕೆ ಸಂಬಂಧಿಸಿದ ವಿಷಯಗಳು, ಡಿಜಿಟಲ್ ಸಂಬಂಧಿಸಿದ ವಿಷಯಗಳನ್ನು ಅಳವಡಿಸಲಾಗಿದೆ. ಹೆಚ್ಚಿನ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳು ಕಲಿಕೆಗೆ ಸ್ಥಳೀಯ ಗ್ರಾ.ಪಂ ಗಳ ಗ್ರಂಥಾಲಯಗಳನ್ನು ಉಪಯೋಗಿಸಿಕೊಳ್ಳಬೇಕು ಎಂದು ಹೇಳಿದರು. ಕಳೆದ ಎರಡು ವರ್ಷದಲ್ಲಿ ಗ್ರಂಥಾಲಯ ನಿರ್ವಹಣೆ, ಅತ್ಯುತ್ತಮ ಅನುಷ್ಠಾನಕ್ಕೆ ಸಂಬಂಧಪಟ್ಟ ಪ್ರಶಸ್ತಿಯನ್ನು ದುಂಡಳ್ಳಿ, 7ನೇ ಹೊಸಕೋಟೆ, ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ಪಡೆಯಿತು. ಗ್ರಂಥಾಲಯ ಮೇಲ್ವಿಚಾರಕರಾದ ಎಸ್.ಪಿ.ದಿವ್ಯ, ಸರಿತಾ, ವಾಸಂತಿ ಪ್ರಶಸ್ತಿ ಸ್ವೀಕರಿಸಿದರು. ಇದೇ ಸಂದರ್ಭ ಲ್ಯಾಪ್ ಟ್ಯಾಪ್ ವಿತರಿಸಲಾಯಿತು.…

Read More

ಮಡಿಕೇರಿ ಮೇ 24 NEWS DESK : ಪತ್ರಕರ್ತೆ ಹಾಗೂ ಸಾಹಿತಿ ರಜಿತ ಕಾರ್ಯಪ್ಪ ಅವರ ಸಾಹಿತ್ಯ ಮತ್ತು ಪತ್ರಿಕೋದ್ಯಮದಲ್ಲಿನ ಸೇವೆಯನ್ನು ಪರಿಗಣಿಸಿ ಸಾಧನಾ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಗತಿ ಸೇವಾ ಟ್ರಸ್ಟ್ (ರಿ) ಪಾಂಡವಪುರ ಹಾಗೂ ಅಮ್ಮನ ಆಸರೆ ಚಾರಿಟೇಬಲ್ ಟ್ರಸ್ಟ್‍ನ ಸಂಯುಕ್ತ ಆಶ್ರಯದಲ್ಲಿ ಡಾ. ನಾಗೇಶ್ ರಾಗಿಮುದ್ದನಹಳ್ಳಿ ಅವರ ಜನ್ಮದಿನದ ಅಂಗವಾಗಿ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಹಾಗನಹಳ್ಳಿ ಗ್ರಾಮದ ಅಮ್ಮನ ಆಸರೆ ಚಾರಿಟೇಬಲ್ ಟ್ರಸ್ಟ್ ಉಚಿತ ವೃದ್ಧಾಶ್ರಮದಲ್ಲಿ  ಗಣ್ಯರು ರಜಿತ ಕಾರ್ಯಪ್ಪ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಈ ಸಂದರ್ಭ ಸರಕಾರಿ ಉಪವಿಭಾಗೀಯ ವೈದ್ಯಾಧಿಕಾರಿ ಡಾ. ಅರವಿಂದ್, ಪ್ರಗತಿ ಸೇವಾ ಟ್ರಸ್ಟ್‍ನ ಅಧ್ಯಕ್ಷ ಡಾ. ನಾಗೇಶ್ ರಾಗಿಮುದ್ದನಹಳ್ಳಿ, ನಿರ್ದೆಶಕರಾದ ಎಂ.ಎಚ್. ವಿಜಯಕುಮಾರ್ ಮಲ್ಲಿಗೆರೆ, ಡಾ, ವಿಜಯಕುಮಾರ್ ಬಲ್ಲೇನಹಳ್ಳಿ, ಅಮ್ಮನ ಆಸರೆ ಚಾರಿಟೇಬಲ್ ಟ್ರಸ್ಟ್‍ನ ಅಧ್ಯಕ್ಷರಾದ ಪ್ರಭುಸ್ವಾಮಿ, ಕಾರ್ಯದರ್ಶಿಗಳಾದ ಪುಷ್ಪಾವತಿ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.

Read More

ಪುತ್ತೂರು ಮೇ 24 NEWS DESK : ಎಳವೆಯಲ್ಲಿಯೇ ವಿದ್ಯಾರ್ಥಿಗಳಲ್ಲಿ ವಿವಿಧ ತಾಂತ್ರಿಕ ಮತ್ತು ವೈಜ್ಞಾನಿಕ ವಿಷಯಗಳಲ್ಲಿ ಆಸಕ್ತಿಯನ್ನು ಮೂಡಿಸಿ ಅವರನ್ನು ಶೈಕ್ಷಣಿಕವಾಗಿ ಮತ್ತು ವೈಯಕ್ತಿಕವಾಗಿ ಆ ಕ್ಷೇತ್ರಗಳಿಗೆ ಆಕರ್ಷಿಸುವಂತೆ ಮಾಡುವ ಉದ್ದೇಶದಿಂದ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬೇಸಿಗೆ ಶಿಬಿರ ನಡೆಯಿತು. ಮೈಕ್ರೋಸಾಫ್ಟ್ ಆಫೀಸ್‍ನ ಬಗ್ಗೆ ವಿದ್ಯಾರ್ಥಿಗಳಲ್ಲಿ ಪ್ರಾವೀಣ್ಯತೆಯನ್ನು ಹೆಚ್ಚಿಸುವುದು, ಎಚ್‍ಟಿಎಂಎಲ್ ಬಳಸಿಕೊಂಡು ವೆಬ್ ಪೇಜ್‍ಗಳ ವಿನ್ಯಾಸ, ಗೂಗಲ್ ಸೈಟ್‍ಗಳಲ್ಲಿ ವಿವಿಧ ವೆಬ್‍ಸೈಟ್‍ಗಳನ್ನು ನಿರ್ಮಿಸುವ ಬಗ್ಗೆ ಮಾರ್ಗದರ್ಶನ, ವಿಜ್ಞಾನ, ತಂತಜ್ಞಾನ. ಎಂಜಿನಿಯರಿಂಗ್ ಮತ್ತು ಗಣಿತ ವಿಷಯಗಳಲ್ಲಿನ ಹೊಸತನಗಳನ್ನು ತಿಳಿದುಕೊಳ್ಳುವುದು ಮುಂತಾದವುಗಳ ಬಗ್ಗೆ ಶಿಬಿರಾರ್ಥಿಗಳಿಗೆ ಮಾಹಿತಿಯನ್ನು ನೀಡಲಾಯಿತು. ನುರಿತ ಸಂಪನ್ಮೂಲ ವ್ಯಕ್ತಿಗಳು ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸೂಕ್ತ ಮಾರ್ಗದರ್ಶನವನ್ನು ನೀಡಿದರು. ಮಾಹಿತಿಯ ಜತೆಗೆ ಅದಕ್ಕೆ ಪೂರಕವಾದ ಪ್ರಾಯೋಗಿಕ ತರಬೇತಿಯನ್ನು ನೀಡಲಾಯಿತು. ನಿರ್ಧಿಷ್ಟ ಗುರಿಗಳ ಕಡೆಗೆ ವಿದ್ಯಾರ್ಥಿಗಳನ್ನು ಕೇಂದ್ರೀಕರಿಸುವ ವಿವಿಧ ಚಟುವಟಿಕೆಗಳನ್ನು ನಡೆಸಲಾಯಿತು. ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್(ರಿ) ಪುತ್ತೂರು ಮತ್ತು ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಇದರ…

Read More