ಬೆಂಗಳೂರು ಮೇ 23 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆ ಕುರಿತು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಚುನಾವಣಾ ನೀತಿ ಸಂಹಿತೆ ಸಮಯ ಈ ಬಾರಿ ದೀರ್ಘವಾಗಿತ್ತು. ಇದರಿಂದ ಆಡಳಿತ ಯಂತ್ರ ಸ್ಥಗಿತವಾದಂತೆ ಆಗಿತ್ತು. ಅಭಿವೃದ್ಧಿ ಕೆಲಸಗಳಿಗೆ ಗಮನ ಹರಿಸಲು ಅಧಿಕಾರಿಗಳಿಂದ ಸಾಧ್ಯ ಆಗಿರಲಿಲ್ಲ.ನಮ್ಮ ಮನವಿ ಮೇರೆಗೆ ಚುನಾವಣಾ ಆಯೋಗ ನೀತಿ ಸಂಹಿತೆ ಸಡಿಲಿಸಿದೆ ಎಂದು ಹೇಳಿದರು. ಈಗ ಮಳೆ ವಾಡಿಕೆಗಿಂತ ಅಧಿಕವಾಗಿದೆ. ಕೃಷಿ ಚಟುವಟಿಕೆ ಆರಂಭವಾಗಿದೆ. ಚುನಾವಣಾ ಸಿದ್ಧತೆ ಜನವರಿಯಲ್ಲೇ ಶುರುವಾಗಿತ್ತು. ನೀತಿ ಸಂಹಿತೆ ಜೂನ್ 6ರ ವರೆಗೆ ಇದೆ. ಆದರೂ ತುರ್ತು ಕೆಲಸಗಳಿಗೆ ಗಮನ ನೀಡಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದರು. ಪೂರ್ವ ಮುಂಗಾರು ಮಳೆ ಪ್ರಾರಂಭವಾಗಿದೆ. ಈ ಬಾರಿ ನೀತಿ ಸಂಹಿತೆ ಅನುಷ್ಠಾನದ ಅವಧಿ ಸುದೀರ್ಘವಾಗಿತ್ತು. ಸರ್ಕಾರದ ಆಡಳಿತವನ್ನು ನಿಧಾನವಾಗಿಸಿತ್ತು. ಎಲ್ಲ ಜಿಲ್ಲಾಧಿಕಾರಿಗಳು ಚುನಾವಣಾಧಿಕಾರಿಗಳಾಗಿದ್ದರು. ಚುನಾವಣಾ ಕೆಲಸದಲ್ಲಿ…
ಲೇಖಕ: admin
ಮಡಿಕೇರಿ ಮೇ 23 NEWS DESK : ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಎಸ್.ಜೆ.ಎಂ ಪಾಲಿಬೆಟ್ಟ ರೇಂಜ್ ಸಮಿತಿಯ ವಾರ್ಷಿಕ ಮಹಾಸಭೆ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು. ರೇಂಜ್ನ ಕೇಂದ್ರ ಮದ್ರಸ ಪಾಲಿಬೆಟ್ಟ ಮುಹಿಮಾತುದ್ದೀನ್ ಮದ್ರಸ ವಠಾರದಲ್ಲಿ ನಡೆದ ಕಾರ್ಯಕ್ರಮವನ್ನು ಪಾಲಿಬೆಟ್ಟ ಮುಹ್ಯುದ್ದೀನ್ ಜುಮಾ ಮಸ್ಟಿದ್ ಖತೀಬ್ ಝುಬೈರ್ ಸಖಾಫಿ ಕಾರ್ಯಕ್ರಮ ಉದ್ಘಾಟಿಸಿದರು. ರೇಂಜ್ ಅಧ್ಯಕ್ಷ ಮುಸ್ತಫ ಸಖಾಫಿ ಅಧ್ಯಕ್ಷತೆ ವಹಿಸಿದ್ದರು. ಪಾಲಿಬೆಟ್ಟ ಮುಹ್ಯುದ್ದೀನ್ ಜುಮಾ ಮಸೀದ್ ಖತೀಬ್ ಆಡಳಿತ ಮಂಡಳಿ ಅಧ್ಯಕ್ಷ ಇಸ್ಮಾಯಿಲ್ ಹಾಜಿ, ಪ್ರಧಾನ ಕಾರ್ಯದರ್ಶಿ ಶಮೀರ್ ಮುನ್ನಾ, ಸದಸ್ಯ ಫಝಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಎಸ್.ಜೆ.ಎಂ ಕೇಂದ್ರ ಸಮಿತಿ ಆಯೋಜಿಸಿದ ಸ್ಮಾರ್ಟ್ ಸ್ಕಾಲರ್ಶಿಪ್ ಪರೀಕ್ಷೆಯ ಕೊಡಗು ಜಿಲ್ಲೆಯಲ್ಲಿ ಪ್ರಥಮ ಸ್ಥಾನಿಗಳಾದ ಪಾಲಿಬೆಟ್ಟ ಮುಹಿಮಾತುದ್ದೀನ್ ಮದ್ರಸ ವಿದ್ಯಾರ್ಥಿ ಆದಿಲ್ ಮತ್ತು ಮಟ್ಟಂ ಹಯಾತುಲ್ ಇಸ್ಲಾಂ ಮದ್ರಸ ವಿದ್ಯಾರ್ಥಿ ಆಶಿಖ್ ಅವರನ್ನು ಸನ್ಮಾನಿಸಲಾಯಿತು. ರೇಂಜ್ ಸಮಿತಿಯ ಒಂದು ವರ್ಷದ ವಾರ್ಷಿಕ ವರದಿಯನ್ನು ಪ್ರಧಾನ ಕಾರ್ಯದರ್ಶಿ ಸಬಾಹ್ ಸಖಾಫಿ ಅಲ್ ಹಿಮಮಿ…
ಮಡಿಕೇರಿ ಮೇ 23 NEWS DESK : ತಾಳತ್ತಮನೆ ನೇತಾಜಿ ಬಡಾವಣೆಯಲ್ಲಿ ಪುನರ್ ನಿರ್ಮಿಸಿರುವ ಶ್ರೀ ಗುಳಿಗರಾಜ (ಭೂಮಿ ಗುಳಿಗ) ಸಾನಿಧ್ಯದಲ್ಲಿ ಮೇ 24 ರಂದು ಶ್ರೀ ಗುಳಿಗರಾಜ ದೈವದ ಕೋಲ ನಡೆಯಲಿದೆ. ಸಂಜೆ 7 ಗಂಟೆಗೆ ಗುಳಿಗನ ಕಟ್ಟೆಯಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ಕೋಲ ನೆರವೇರಲಿದ್ದು, ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಶ್ರೀ ಗುಳಿಗರಾಜ(ಭೂಮಿ ಗುಳಿಗ) ಸಾನಿಧ್ಯ ಜೀರ್ಣೋದ್ಧಾರ ಹಾಗೂ ಸೇವಾ ಸಮಿತಿಯ ಕಾರ್ಯಕಾರಿ ಸಮಿತಿ ಸದಸ್ಯರು ಮನವಿ ಮಾಡಿದ್ದಾರೆ.
ಮಡಿಕೇರಿ ಮೇ 23 NEWS DESK : ನಾಪೋಕ್ಲು ಹೋಬಳಿ ವ್ಯಾಪ್ತಿಯ ಕೊಳಕೇರಿ ಗ್ರಾಮದ ಕಾಂಡಂಡ ಚರ್ಮಣ ಎಂಬವರ ಮನೆಯ (ಕಂಪೌಂಡ್) ತಡೆಗೋಡೆ ಮಳೆಯಿಂದಾಗಿ ಕುಸಿದು ನಷ್ಟ ಸಂಭವಿಸಿದೆ. ಚರ್ಮಣನವರು ಕೆಲವು ಸಮಯಗಳ ಹಿಂದೆ ಮನೆಗೆ ತಡೆಗೋಡೆ ನಿರ್ಮಿಸಿದ್ದು, ರಾತ್ರಿ ಸುರಿದ ಮಳೆಗೆ ತಡೆಗೋಡೆ ಸಂಪೂರ್ಣ ಕುಸಿದು ಬಿದ್ದಿದೆ. ಘಟನಾ ಸ್ಥಳಕ್ಕೆ ನಾಪೋಕ್ಲು ಕಂದಾಯ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವರದಿ : ದುಗ್ಗಳ ಸದಾನಂದ
ನಾಪೋಕ್ಲು ಮೇ 23 NEWS DESK : ಬೇಸಿಗೆ ಶಿಬಿರಗಳ ಆಯೋಜನೆಯಿಂದ ಮಕ್ಕಳ ಮನಸ್ಸನ್ನು ಬದಲಾಯಿಸಬಹುದು ಎಂದು ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ.ನಾಣಯ್ಯ ಹೇಳಿದರು. ಪೇರೂರಿಯನ್ಸ್ ಕ್ಲಬ್ ವತಿಯಿಂದ ಸಮೀಪದ ಪೇರೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದ ಬೇಸಿಗೆ ಶಿಬಿರದ ಸಮರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಇಂದಿನ ಸಾಮಾಜಿಕ ವ್ಯವಸ್ಥೆಯಲ್ಲಿ ಮಕ್ಕಳು ಮೊಬೈಲ್ ಮೊರೆ ಹೋಗುತ್ತಿದ್ದಾರೆ. ತಂಟೆ ಮಾಡುವ ಮಕ್ಕಳನ್ನು ಸುಮ್ಮನಾಗಿರಿಸಲು, ಅಳುವ ಮಗುವನ್ನು ಸಮಾಧಾನಗೊಳಿಸಲು ಪೋಷಕರೇ ಇಂದು ಮಕ್ಕಳ ಕೈಗೆ ಮೊಬೈಲ್ ಕೊಡುವ ವ್ಯವಸ್ಥೆಗೆ ತಲುಪಿದೆ. ಪರೀಕ್ಷೆಗಳು ಕಳೆದ ನಂತರ ಮಕ್ಕಳು ಸಮಯವನ್ನು ವ್ಯರ್ಥ ಮಾಡುವ ಬದಲು ಇಂತಹ ಶಿಬಿರಗಳಲ್ಲಿ ಪಾಲ್ಗೊಳ್ಳುವುದರಿಂದ ಉತ್ತಮ ಹವ್ಯಾಸಗಳನ್ನು ವೃದ್ಧಿಸಿಕೊಳ್ಳಬಹುದು ಎಂದರು. ವಿದ್ಯಾರ್ಥಿಗಳಿಗೆ ಪರೀಕ್ಷೆಗಳ ನಂತರ ಬೇಸಿಗೆ ಶಿಬಿರಗಳನ್ನು ಆಯೋಜಿಸುವ ಪರಿಪಾಠ ವಿವಿಧಡೆ ನಡೆಯುತ್ತಾ ಬಂದಿದೆ. ಹಾಕಿ, ಕ್ರಿಕೆಟ್ ಸೇರಿದಂತೆ ಕ್ರೀಡಾ ಹಾಗೂ ವೃತ್ತಿಪರ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳುವುದು ಮುಖ್ಯ ಅಲ್ಲ. ಅದಕ್ಕಿಂತಲೂ…
ಮಡಿಕೇರಿ ಮೇ 23 NEWS DESK : ನೈರುತ್ಯ ಪಧವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಪುತ್ತಿಗೆ ಮಠದ ಪೀಠಾಧಿಪತಿ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಈ ಸಂದರ್ಭ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ ಪಾಲ್ ಸುವರ್ಣ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ರಾಜ್ಯ ಪ್ರಕೋಷ್ಠಗಳ ಸಂಯೋಜಕ ಎಸ್. ದತ್ತಾತ್ರಿ , ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರಿಕೃಷ್ಣ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಮಡಿಕೇರಿ ಮೇ 23 NEWS DESK : ನೈರುತ್ಯ ಪಧವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಉಡುಪಿಯ ಶ್ರೀ ಕೃಷ್ಣ ದೇಗುಲಕ್ಕೆ ಭೇಟಿ ನೀಡಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಈ ಸಂದರ್ಭ ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕ ಯಶಪಾಲ್ ಸುವರ್ಣ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್ , ರಾಜ್ಯ ಪ್ರಕೋಷ್ಠಗಳ ಸಂಯೋಜಕ ಎಸ್. ದತ್ತಾತ್ರಿ , ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರಿಕೃಷ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮಡಿಕೇರಿ ಮೇ 23 NEWS DESK : ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 35.79 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 2.62 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 283.86 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 138.62 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 17.98 ಮಿ.ಮೀ. ಕಳೆದ ವರ್ಷ ಇದೇ ದಿನ 3.50 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 371.70 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 202.53 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 52.10 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 199.65 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 75.81 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 86.79 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ…
ಮಡಿಕೇರಿ ಮೇ 23 NEWS DESK : ಕಿರುಗೂರು ಶ್ರೀ ಕುಟ್ಟಿಚಾತನ್ ಹಾಗೂ ಚಾಮುಂಡಿ ದೇವರ ಉತ್ಸವವು ಮೇ 26 ಮತ್ತು 27ರಂದು ನಡೆಯಲಿದೆ. ಮೇ 26 ರಂದು ರಾತ್ರಿ 7 ಗಂಟೆಗೆ ಶ್ರೀ ಕುಟ್ಟಿಚಾತನ್, ಚಾಮುಂಡಿ ದೇವರ ಉತ್ಸವವು ಪ್ರಾರಂಭವಾಗಿ ಮೇ 27ರ ರಾತ್ರಿ 8ಗಂಟೆಯವರಗೆ ವಿವಿಧ ದೇವತಾ ಕಾರ್ಯಗಳೊಂದಿಗೆ ನಡೆಯಲಿದೆಯೆಂದು ಕಿರುಗೂರು ಶ್ರೀ ಕುಟ್ಟಿಚಾತ, ಚಾಮುಂಡಿ ದೇವಸ್ಥಾನದ ಅಡಳಿತ ಮಂಡಳಿಯ ಪ್ರಕಟಣೆಯಲ್ಲಿ ತಿಳಿಸಿದೆ.
ಮಡಿಕೇರಿ ಮೇ 23 NEWS DESK : ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಆನಂದಪುರ ಬೆಕ್ಕಿನಕಲ್ಮಠದ ಜಗದ್ಗುರು ಡಾ.ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭ ರಾಜ್ಯ ಪ್ರಕೋಷ್ಟಗಳ ಸಂಯೋಜಕ ಎಸ್.ದತ್ತಾತ್ರಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಲತೇಶ್ ಮತ್ತಿತರರು ಹಾಜರಿದ್ದರು.






