ಲೇಖಕ: admin

ನಾಪೋಕ್ಲು ಜೂ.6 NEWS DESK  : ನಾಪೋಕ್ಲುವಿನ ವಿವಿಧ ಶಾಲೆಗಳಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆ, ಕಕ್ಕಬ್ಬೆ ಪ್ರೌಢಶಾಲೆ, ಬೆಟ್ಟಗೇರಿಯ ಉದಯ ಪ್ರೌಢಶಾಲೆ, ಸ್ಥಳೀಯ ಕೆಪಿಎಸ್ ಶಾಲೆ ಸೇರಿದಂತೆ ವಿವಿಧ ಶಾಲೆಗಳಲ್ಲಿ ಹಲಸು, ನೆಲ್ಲಿ, ರಾಮಫಲ, ನೇರಳೆ, ಜಂಬೂ ನೇರಳೆ ಇತ್ಯಾದಿ ಹಣ್ಣಿನ ಗಿಡಗಳನ್ನು ನೆಟ್ಟು ಪರಿಸರ ಜಾಗೃತಿ ಮೂಡಿಸಿದರು. ಸಂಪಾಜೆ ಸಂಯುಕ್ತ ಪದವಿ ಪೂರ್ವ ಕಾಲೇಜು, ಪದವಿ ಪೂರ್ವ ಕಾಲೇಜು ಮತ್ತು ಪ್ರೌಢ ಶಾಲಾ ವಿಭಾಗದಲ್ಲಿ ಜಂಟಿಯಾಗಿ ಪರಿಸರ ದಿನಾಚರಣೆ ಆಚರಿಸಲಾಯಿತು ಮತ್ತು ವಿದ್ಯಾರ್ಥಿಗಳಿಗೆ ಸಸಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಸಂಚಾಲಕ ಶಂಕರನಾರಯಣ ಭಟ್ ಮತ್ತು ಪ್ರಾಂಶುಪಾಲರು, ಉಪನ್ಯಾಸ ವರ್ಗದವರು, ಮುಖ್ಯ ಶಿಕ್ಷಕರು, ಅಧ್ಯಾಪಕವೃಂದದವರು ವಿದ್ಯಾರ್ಥಿಗಳು ಹಾಜರಿದ್ದರು. ವರದಿ : ದುಗ್ಗಳ ಸದಾನಂದ. 

Read More

ಸುಂಟಿಕೊಪ್ಪ ಜೂ.6 NEWS DESK : ನಮ್ಮ ಪರಿಸರ ಉಳಿಸುವುದರೊಂದಿಗೆ ಜಲಮೂಲಗಳು ಕಲುಷಿತಗೊಳ್ಳದಂತೆ ತಡೆಯುವ ಕೆಲಸಕ್ಕೆ ನಾವೆಲ್ಲಾರೂ ಪಣತೊಡಬೇಕೆಂದು ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ವಿದ್ಯಾರ್ಥಿನಿ ಎ.ಎಸ್.ಶ್ರೀಶಾ ಹೇಳಿದರು. ಸುಂಟಿಕೊಪ್ಪ ಪೊಲೀಸ್ ಠಾಣೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಆಯೋಜಿಸಲಾದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಶ್ರೀಶಾ, ನಾವು ಮೊದಲು ಪರಿಸರ ಸ್ನೇಹಿಗಳಗೋಣ. ಅಗತ್ಯಗಳಿಗಷ್ಟೇ ಸಂಪನ್ಮೂಲಗಳನ್ನು ಉಳಿಸಿ ಬಳಸುವಂತಾಗಬೇಕು. ನಮ್ಮ ಪೂರ್ವಿಕರು ನಮಗೆ ನೀಡಿರುವ ಈ ಸುಂದರ ಪರಿಸರವನ್ನು ಮುಂದಿನ ಪೀಳಿಗೆಗೂ ಉಳಿಸಿಕೊಳ್ಳುವ ಕಾರ್ಯಕ್ಕೆ ಈಗಿನಿಂದಲೇ ನಾವು ಸನ್ನದ್ಧರಾಗಬೇಕು ಎಂದರು. ಕಾವೇರಿ ನದಿಗೆ ಕಲುಷಿತ ನೀರನ್ನು ಬಿಡಬಾರದು. ನದಿ ಮೂಲಗಳನ್ನು ನಾವುಗಳು ಸಂರಕ್ಷಿಸಬೇಕೆಂದು ಕರೆ ನೀಡಿದರು. ಇದೇ ಸಂದರ್ಭ ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಎಂ.ಸಿ.ಶ್ರೀಧರ್ ಹಾಗೂ ಅಪರಾಧ ವಿಭಾಗದ ಎಸ್.ಐ.ನಾಗರಾಜು ಠಾಣಾ ಆವರಣದಲ್ಲಿ ಗಿಡಗಳನ್ನು ನೆಟ್ಟರು. ಎ.ಎಸ್.ಐ ತೀರ್ಥಕುಮಾರ್, ಪೊಲೀಸ್ ಪೇದೆಗಳಾದ ಜಗದೀಶ್, ಗ್ರಾಮಸ್ಥರಾದ ಧನುಕಾವೇರಪ್ಪ, ಪ್ರಶಾಂತ್(ಕೋಕಾ), ತ್ಯಾಗರಾಜು ಮತ್ತಿತರರು ಇದ್ದರು.

Read More

ಬೆಂಗಳೂರು ಜೂ.6 NEWS DESK : ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ ಕನ್ನಡಿಗರ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಹವಾಮಾನ ವೈಪರಿತ್ಯದಿಂದಾಗಿ 20 ಚಾರಣಿಗರಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ. ಲ್ಯಾಂಬ್ಟಾಲ್ ಕ್ಯಾಂಪ್ ಸೈಟ್ ನಿಂದ ಸಹಸ್ರತಾಲ್ ಗೆ ತೆರಳಿದ್ದ 20 ಮಂದಿಯ ತಂಡ ಚಾರಣದ ಗುರಿ ತಲುಪಿ ನಂತರ ಮರಳುತ್ತಿದ್ದಾಗ ಹಿಮಗಾಳಿ ಬೀಸಿ ಹಿಮಪಾತವಾಗಿದೆ. ಈ ಸಂದರ್ಭ 9 ಚಾರಣಿಗರು ಸಾವನ್ನಪ್ಪಿದ್ದಾರೆ. ಕನ್ನಡಿಗರ ರಕ್ಷಣೆಯ ಬಗ್ಗೆ ಕ್ರಮ ಕೈಗೊಳ್ಳಲು ಮತ್ತು ಮೃತದೇಹ ತರಲು ಸಚಿವ ಕೃಷ್ಣಬೈರೇಗೌಡ ಅವರು ಉತ್ತರಾಖಂಡಕ್ಕೆ ಭೇಟಿ ನೀಡಿದ್ದಾರೆ. ಉತ್ತರಾಖಂಡದ ಮುಖ್ಯ ಕಾರ್ಯದರ್ಶಿ ರಾಧಾ ರಾತುರಿ ಹಾಗೂ ವಿಪತ್ತು ನಿರ್ವಹಣೆಯ ಕಾರ್ಯದರ್ಶಿ ರಂಜಿತ್ ಸಿನ್ಹಾ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ.

Read More

ಸುಂಟಿಕೊಪ್ಪ ಜೂ.6 NEWS DESK  : ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿಂದೂ ಮಲಯಾಳಿ ಸಮಾಜದ ಅಧ್ಯಕ್ಷರಾಗಿ ಕೆ.ಜಿ.ರಾಜ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಎಂ.ಎಂ.ಶಂಕರನಾರಾಯಣ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರುಗಳಾಗಿ ಪಿ.ಎಸ್.ಅಜಿತ್‍ಕುಮಾರ್, ಸುಮತಿ ಸುಕುಮಾರ್, ಸಹಕಾರ್ಯದರ್ಶಿಯಾಗಿ ಕೆ.ಎಸ್.ಸೌಮ್ಯ, ಸಂಘಟನಾ ಕಾರ್ಯದರ್ಶಿಯಾಗಿ ವಿನುತ ಸುರೇಶ್, ಖಜಾಂಜಿಯಾಗಿ ಕೆ.ಕೆ.ರಾಜೇಶ್, ಗೌರವಧ್ಯಕ್ಷರಾಗಿ ವಿ.ಕೆ.ಗಂಗಾಧರ ನೇಮಕಗೊಂಡಿದ್ದಾರೆ.

Read More

ಮಡಿಕೇರಿ ಜೂ.6 NEWS DESK : ಬಾಳೆಲೆ ಗ್ರಾ.ಪಂ ಯ ಸಹಯೋಗದಲ್ಲಿ ಪ್ರತಿಭಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಮತ್ತು ವಿಶ್ವ ಪರಿಸರ ದಿನಾಚರಣೆ ನಡೆಯಿತು. ಶಾಲೆಯ ಪ್ರಾಂಶುಪಾಲರಾದ ಗೀತಾ ನಾಯ್ಡು ಮಾತನಾಡಿ ಪರಿಸರವು ಜೀವರಾಶಿಗಳ ತಾಣ, ಪರಿಸರದ ಸಮೃದ್ಧಿ ಆರೋಗ್ಯಕರ ಜೀವನ ಮತ್ತು ಭೂಮಿಯ ಮೇಲಿನ ಪ್ರತಿಯೊಂದು ಜೀವಿಯ ಜೀವನದ ಅಸ್ತಿತ್ವಕ್ಕೆ ಕಾರಣವಾಗಿದೆ ಎಂದರು. ಮಾನವ, ಇತರೆ ಪ್ರಾಣಿ ಪಕ್ಷಿಗಳು ಸೇರಿದಂತೆ ಪ್ರತಿಯೊಂದು ಜೀವಸಂಕುಲ ಆಹಾರ ,ಗಾಳಿ ,ನೀರು ಮತ್ತು ಇತರೆ ಅಗತ್ಯತೆಗಳಿಗಾಗಿ ಪರಿಸರವನ್ನು ಅವಲಂಬಿಸಿದೆ. ಹೀಗಾಗಿ ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಅವಶ್ಯಕತೆ ಒದಗಿ ಬಂದಿದೆ ಪರಿಸರದ ಬಗ್ಗೆ ಜಾಗೃತಿಯನ್ನು ಮೂಡಿಸುತ್ತಾ ಪರಿಸರವನ್ನು ಹಾಳು ಮಾಡುವುದನ್ನು ತಡೆಯಬೇಕಿದೆ. ಇದಕ್ಕೆ ವಿದ್ಯಾವಂತರಾದ ನಾವುಗಳು ಪರಿಸರ ಪ್ರೇಮಿಯಾಗಿ ಪರಿಸರ ಉಳಿಸುವ ಇಲಾಖೆಗಳೊಂದಿಗೆ ಹಾಗೂ ಸಂಸ್ಥೆಗಳೊಂದಿಗೆ ಕೈಜೋಡಿಸಬೇಕು ಮತ್ತು ಉಸಿರಿಗಾಗಿ ಪರಿಸರವನ್ನು ಇಂದು ಉಳಿಸುವ ಅತ್ಯಾವಶ್ಯಕತೆ ನಮ್ಮಲ್ಲಿದೆ. ಪ್ರತೀ ವಿದ್ಯಾರ್ಥಿಯು ಒಂದೊಂದು ಗಿಡವನ್ನು ದತ್ತು ಪಡೆದು ಅವುಗಳ ಪೋಷಣೆಯನ್ನು ಮಾಡಿ ಸಸಿಯನ್ನು ಹೆಮ್ಮರವಾಗಿಸಿ…

Read More

ಗುಂಡ್ಲುಪೇಟೆ ಜೂ.6 NEWS DESK : ದಾರಿ ತಪ್ಪಿ ಕಾಡಿನಿಂದ ನಾಡಿಗೆ ಬಂದ ಕರಡಿಯನ್ನು ಗುಂಡ್ಲುಪೇಟೆ ತಾಲ್ಲೂಕಿನ ಅಣ್ಣೂರುಕೇರಿ ಗ್ರಾಮದಲ್ಲಿ ಸೆರೆ ಹಿಡಿಯಲಾಗಿದೆ. ಗ್ರಾಮಸ್ಥರ ಕೂಗಾಟದಿಂದ ಸಿಕ್ಕ ಸಿಕ್ಕಲ್ಲಿ ಓಡಾಡಿದ ಕರಡಿ ನಿತ್ರಾಣಗೊಂಡು ಜಮೀನೊಂದರಲ್ಲಿ ಸೆರೆಯಾಯಿತು. ಸ್ಥಳೀಯರು ನೀಡಿದ ಮಾಹಿತಿ ಹಿನ್ನೆಲೆ ಗುಂಡ್ಲುಪೇಟೆ ಬಫರ್ ಜೋನ್ ಅರಣ್ಯಾಧಿಕಾರಿಗಳು ಸ್ಥಳಕ್ಕಾಗಿಮಿಸಿ ಪರಿಶೀಲನೆ ನಡೆಸಿದರು. ಬಂಡೀಪುರ ಹುಲಿ ಯೋಜನೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಪ್ರಭಾಕರನ್ ಮಾರ್ಗದರ್ಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ರವೀಂದ್ರ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಸುಮಾರು 6 ವರ್ಷದ ಕರಡಿಯನ್ನು ಬಲೆಯ ಮೂಲಕ ಸೆರೆ ಹಿಡಿದು ಮೂಲೆಹೊಳೆ ಅರಣ್ಯಕ್ಕೆ ಬಿಡಲಾಯಿತು. ಸೆರೆಯಾದ ಕರಡಿಗೆ ಅರಣ್ಯ ಇಲಾಖಾ ಪಶು ವೈಧ್ಯಾಧಿಕಾರಿ ಡಾ.ಮಿರ್ಜಾ ವಾಸೀಂ ಚಿಕಿತ್ಸೆ ನೀಡಿದರು.

Read More

ಸುಂಟಿಕೊಪ್ಪ ಜೂ.6 NEWS DESK : ವಿಶ್ವ ಪರಿಸರ ದಿನದ ಅಂಗವಾಗಿ ಸಂತ ಅಂತೋಣಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪರಿಸರ ಸಂರಕ್ಷಣೆಯ ಕುರಿತು ಪಟ್ಟಣದಲ್ಲಿ ಜಾಗೃತಿ ಜಾಥ ನಡೆಯಿತು. ಶಾಲೆಯ ಸ್ಕೌಟ್, ಗೈಡ್ಸ್, ಬುಲ್‍ಬುಲ್ ಹಾಗೂ ಕಫ್ಸ್ ಸೇವಾದಳದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಸಾಗಿ ಪರಿಸರದ ಬಗ್ಗೆ ಘೋಷಣೆಗಳನ್ನು ಕೂಗುತ್ತ ನೀರನ್ನು ಮಿತವಾಗಿ ಬಳಸಿ, ಗಿಡ ಮರಗಳನ್ನು ಬೆಳೆಸುವುದರೊಂದಿಗೆ ಪರಿಸರವನ್ನು ಸಂರಕ್ಷಿಸಿ ಎಂದು ಜಾಗೃತಿ ಮೂಡಿಸಿದರು.

Read More

ಮೈಸೂರು ಜೂ.5 : ಮೈಸೂರು ಕೊಡಗು ನೂತನ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಸಂಜೆ ಶ್ರೀ ಸುತ್ತೂರು ಮಠಕ್ಕೆ ಭೇಟಿ ನೀಡಿ ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳವರ ದರ್ಶನಾಶಿರ್ವಾದ ಪಡೆದರು. ಈ ಸಂದರ್ಭ ಮೈಸೂರು ಬಿಜೆಪಿ ಗ್ರಾಮಾಂತರ ಅಧ್ಯಕ್ಷರಾಧ ಎಲ್ಆರ್ ಮಹಾದೇವಸ್ವಾಮಿ ಹಾಗೂ ಶ್ರೀ ಮಠದ ಭಕ್ತರು ಉಪಸ್ತಿತರಿದ್ದರು.

Read More

ಬೆಂಗಳೂರು ಜೂ.5 : ಉತ್ತರಾಖಂಡದ ಶಾಸ್ತ್ರತಾಳ್ ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಚಾರಣಕ್ಕೆ ತೆರಳಿದ್ದ ರಾಜ್ಯದ ಐವರು ಚಾರಣಿಗರು ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಈಗಾಗಲೇ ರಕ್ಷಣಾ ಕಾರ್ಯಾಚರಣೆಯ ಮೂಲಕ 11 ಜನರನ್ನು ಸುರಕ್ಷಿತ ಪ್ರದೇಶಕ್ಕೆ ವಾಪಸು ಕರೆತರಲಾಗಿದ್ದು, ಇನ್ನೂ ಕೆಲವು ಚಾರಣಿಗರ ರಕ್ಷಣೆ ಆಗಬೇಕಿದೆ. ಪ್ರತಿಕೂಲ ಹವಾಮಾನವು ರಕ್ಷಣಾ ಕಾರ್ಯಕ್ಕೆ ತೀವ್ರ ಅಡಚಣೆ ಉಂಟುಮಾಡುತ್ತಿದ್ದು, ಎಲ್ಲರನ್ನೂ ಸುರಕ್ಷಿತವಾಗಿ ಕರೆತರಲು ನಮ್ಮ ಸರ್ಕಾರವು ಶಕ್ತಿಮೀರಿ ಪ್ರಯತ್ನಿಸುತ್ತಿದೆ.ಸಚಿವರಾದ Krishna Byre Gowda ಅವರಿಗೆ ಇಂದೇ ಡೆಹ್ರಾಡೂನ್‌ಗೆ ತೆರಳಿ ರಕ್ಷಣಾ ಕಾರ್ಯದ ಉಸ್ತುವಾರಿ ವಹಿಸುವಂತೆ ಸೂಚಿಸಿದ್ದೇನೆ. ಸ್ಥಳೀಯವಾಗಿ ಲಭ್ಯವಿರುವ ಹೆಲಿಕಾಪ್ಟರ್‌ಗಳು ಹಾಗೂ ಸೇನಾ ಹೆಲಿಕಾಪ್ಟರ್ ಗಳನ್ನು ಬಳಕೆ ಮಾಡಿಕೊಂಡು ಅಪಾಯದಲ್ಲಿ ಸಿಲುಕಿರುವ ಕನ್ನಡಿಗರನ್ನು ಮರಳಿ ಗೂಡು ಸೇರಿಸಲಾಗುವುದು. (ಸಿದ್ದರಾಮಯ್ಯ ಮುಖ್ಯಮಂತ್ರಿಗಳು)

Read More

ಸೋಮವಾರಪೇಟೆ ಜೂ.5 NEWS DESK : ಜೇಸಿಐ ಸೋಮವಾರಪೇಟೆ ಪುಷ್ಪಗಿರಿ ವತಿಯಿಂದ ವಿಶ್ವಪರಿಸರ ದಿನಾಚರಣೆ ಅಂಗವಾಗಿ ವಿವಿಧೆಡೆ ಸಸಿ ನೆಡುವ ಮೂಲಕ ಪರಿಸರ ದಿನಾಚರಣೆ ಆಚರಿಸಲಾಯಿತು. ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸಂಸ್ಥೆಯ ಅಧ್ಯಕ್ಷ ಎಸ್.ಆರ್.ವಸಂತ್ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಅವರು ಮಾತನಾಡಿ, ಪರಿಸರ ನಾಶವಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗಿನಲ್ಲೂ ಅನೇಕ ಅನಾಹುತಗಳನ್ನು ಅನುಭವಿಸುತ್ತಿದ್ದೇವೆ, ಮಳೆಗಾಲದಲ್ಲಿ ಬೆಟ್ಟಗುಡ್ಡಗಳು ಕುಸಿಯುತ್ತಿವೆ. ಪ್ರಸಕ್ತ ವರ್ಷ ಅನೇಕ ಕಡೆ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸಬೇಕಾಯಿತು. ಬೇಸಿಗೆಯಲ್ಲಿ ಅತೀಹೆಚ್ಚು ಬಿಸಿಲಿನ ತಾಪದಿಂದ ತೊಂದರೆ ಅನುಭವಿಸುವಂತಾಗಿದೆ. ನಾವೆಲ್ಲರೂ ಪರಿಸರ ರಕ್ಷಣೆಗೆ ಪ್ರತಿಜ್ಞೆ ಮಾಡಬೇಕಾಗಿದೆ. ಮನೆಯ ಶುಭ ಸಮಾರಂಭಗಳಲ್ಲಿ ಪ್ರತಿಯೊಬ್ಬರು ಗಿಡ ನೆಡುವ ಮೂಲಕ ಸಂಭ್ರಮ ಪಡಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಂಗವಾಗಿ ಪಟ್ಟಣದ ಸರ್ಕಾರಿ ಆಸ್ಪತ್ರೆ ಹಾಗು ಮಹಿಳಾ ಸಮಾಜ ಆವರಣದಲ್ಲಿ ಗಿಡ ನೆಡಲಾಯಿತು. ಕಾರ್ಯಕ್ರಮದಲ್ಲಿ ಜೇಸಿಐ ಮಹಿಳಾ ಘಟಕದ ಅಧ್ಯಕ್ಷೆ ವಿನುತ ಸುದೀಪ್, ಕಾರ್ಯದರ್ಶಿ ಜಗದಾಂಭ ಗುರುಪ್ರಸಾದ್, ಪದಾಧಿಕಾರಿಗಳಾದ ನೆಲ್ಸನ್,…

Read More