ಲೇಖಕ: admin

ಮಡಿಕೇರಿ ಮೇ 22 NEWS DESK : ಇದೇ ಜೂನ್ ಮೊದಲ ವಾರದಲ್ಲಿ `ಮುಂಗಾರು’ ಆರಂಭವಾಗುವ ನಿರೀಕ್ಷೆ ಇದ್ದು, ಪೂರ್ವ `ಮುಂಗಾರು’ ಕೃಷಿಕರಲ್ಲಿ ಸಂತಸ ತಂದಿದೆ. ಕೊಡಗು ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಭತ್ತ ಮತ್ತು ಮುಸುಕಿನ ಜೋಳ ಪ್ರಮುಖ ಬೆಳೆಯಾಗಿದ್ದು, ಕೃಷಿ ಚಟುವಟಿಕೆಗೆ ಭೂಮಿ ಹದ ಮಾಡುವ ಕಾರ್ಯ ನಡೆದಿದೆ. ಜೂ.15 ರ ನಂತರ ಭತ್ತ ಸಸಿಮಡಿ ಕಾರ್ಯ ಆರಂಭವಾಗಲಿದೆ. ಹಾಗೆಯೇ ಮುಂಗಾರು ಆರಂಭದಲ್ಲಿ ಮುಸುಕಿನ ಜೋಳ ಬಿತ್ತನೆ ಕಾರ್ಯ ಸುರುವಾಗಲಿದೆ. ಜಿಲ್ಲೆಯಲ್ಲಿ ಜನವರಿಯಿಂದ ಮೇ ತಿಂಗಳ ಅಂತ್ಯಕ್ಕೆ ವಾಡಿಕೆ ಮಳೆ 252 ಮಿ.ಮೀ. ಆಗಿದ್ದು, ಈಗಾಗಲೇ ಈ ಬಾರಿ ಸರಾಸರಿ 248 ಮಿ.ಮೀ. ಮಳೆಯಾಗಿರುವುದು ವಿಶೇಷವಾಗಿದೆ. ಅದರಲ್ಲೂ ಮೇ ತಿಂಗಳಲ್ಲಿ ಹೆಚ್ಚಿನ ಮಳೆಯಾಗಿದೆ. ಜಿಲ್ಲೆಯಲ್ಲಿ 32,500 ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳುವ ಗುರಿ ಇದ್ದು, ಇದರಲ್ಲಿ 29 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯುವ ಗುರಿ ಹೊಂದಲಾಗಿದೆ. 3,500 ಹೆಕ್ಟೇರ್ ಪ್ರದೇಶದಲ್ಲಿ ಮುಸುಕಿನ ಜೋಳ ಬೆಳೆಯುವ ಗುರಿ ಹೊಂದಲಾಗಿದೆ,…

Read More

ಮಡಿಕೇರಿ ಮೇ 22 NEWS DESK : ಕೊಡಗು ಧಮ್ಮ ವಿಜಯ ಸಂಘಟನೆ ವತಿಯಿಂದ ಮೇ 23 ರಂದು ವೈಶಾಖ ಬುದ್ಧಪೂರ್ಣಿಮೆ ಕಾರ್ಯಕ್ರಮ ನಡೆಯಲಿದೆ. ನಗರದ ಅಂಬೇಡ್ಕರ್ ಭವನದಲ್ಲಿ ಸಂಜೆ 6.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಅಕ್ಕಾ ಐಎಎಸ್ ಅಕಾಡೆಮಿ ಸಂಸ್ಥಾಪಕ ಡಾ.ಶಿವಕುಮಾರ ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಮೇ 22 NEWS DESK : ವಿಶಾಲವಾದ ಮರಗಳ ನೆರಳಿನಲ್ಲಿ ಹಾಗೂ ಪಶ್ಚಿಮ ಘಟ್ಟಗಳ ಕಾವಲಿನ ಅಡಿಯಲ್ಲಿ, ಕೊಡಗಿನ ಹಾಕಿಯ ಇತಿಹಾಸದ ಪಯಣವನ್ನು ಆರಂಭಿಸಿದಾಗ, ಈ ದಾರಿಯನ್ನು ಸುಗಮಗೊಳಿಸಿದವರನ್ನು ನೆನೆಯುತ್ತಾ, ಕೊಡಗಿನಲ್ಲಿ ತಮ್ಮದೇ ಆದ ಛಾಪು ಮೂಡಿಸಿದ ಹಾಕಿ ಆಟಗಾರರಲ್ಲಿ ಕರ್ತಮಾಡ ರಿಕ್ಕಿ ಗಣಪತಿಯವರು ಕೂಡ ಒಬ್ಬರು. ಬಿರುನಾಣಿ ಗ್ರಾಮದ ದಿವಂಗತ ಕರ್ತಮಾಡ ಚಂಗಪ್ಪ ಹಾಗೂ ಸ್ವಾತಿ (ತಾಮನೆ ಮನೆಯಪಂಡ) ದಂಪತಿಯರ ಪುತ್ರನಾಗಿ ರಿಕ್ಕಿ ಗಣಪತಿಯವರು 29 ಮಾರ್ಚ್ 1968ರಂದು ಜನಿಸಿದರು. ಗೋಣಿಕೊಪ್ಪಲು ಸೆಂಟ್ ಥಾಮಸ್ ಶಾಲೆಯಲ್ಲಿ ಓದುತ್ತಿರುವಾಗಲೇ, ಪೊನ್ನಂಪೇಟೆಯ ಪುಚ್ಚಿಮಾಡ ಹರೀಶ್ ಮಾಸ್ಟರ್ ಅವರ ತರಬೇತಿಯಲ್ಲಿ ಹಾಕಿಯ ಭವಿಷ್ಯಕ್ಕೆ ಮುನ್ನುಡಿ ಬರೆದರು. ಪ್ರೌಢ ಶಿಕ್ಷಣವನ್ನು ಪೊನ್ನಂಪೇಟೆ ಶಾಲೆಯಲ್ಲಿ, ಪದವಿ ಪೂರ್ವ ಶಿಕ್ಷಣವನ್ನು ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಪೂರ್ಣಗೊಳಿಸಿದರು. ಅಲ್ಲಿನ ದೈಹಿಕ ಶಿಕ್ಷಣ ಶಿಕ್ಷಕ ದೇವಯ್ಯನವರು ಇವರಿಗೆ ಹಾಕಿಯ ತರಬೇತಿಯಲ್ಲಿ ಮಾರ್ಗದರ್ಶನ ನೀಡಿದರು. ಇವರು ಪದವಿಯನ್ನು ಮಂಗಳೂರಿನ ಸಂತ ಅಲೋಷಿಯಸ್ ಕಾಲೇಜಿನಲ್ಲಿ ಪಡೆದರು. ಕಾಲೇಜು ದಿನಗಳಲ್ಲಿಯೂ ಅನೇಕ ಹಾಕಿ ಪಂದ್ಯಾವಳಿಗಳಲ್ಲಿ…

Read More

ಮಡಿಕೇರಿ ಮೇ 22 NEWS DESK :  ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 17.60 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 12.44 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 248.07 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 136 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 28.13 ಮಿ.ಮೀ. ಕಳೆದ ವರ್ಷ ಇದೇ ದಿನ 19.30 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 353.72 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 199.03 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 8.20 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.60 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 147.55 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 75.81 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 20.70 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ…

Read More

ಮಡಿಕೇರಿ ಮೇ 22 NEWS DESK : GAMMA ಹಾಗೂ IMMA  ವತಿಯಿಂದ ಕೇರಳದ ಕೋಜಿಕೋಡ್ ನಲ್ಲಿ  ನಡೆದ ರಾಷ್ಟ್ರಮಟ್ಟದ ಮಿಶ್ರ ಮಾರ್ಷಲ್ ಆರ್ಟ್ಸ್ ನಲ್ಲಿ ಕೊಡಗಿನ ಕೂರ್ಗ್ ಕೊಂಬಾಟ್ ಕ್ಲಬ್ (C3MMA) ನ ಕ್ರೀಡಾಪಟುಗಳು ಚಿನ್ನ, ಬೆಳ್ಳಿಯ ಪದಕವನ್ನು ಗೆದ್ದುಗೊಂಡಿದ್ದಾರೆ. ಕುಶಾಲನಗರ ಮುಳ್ಳುಸೋಗೆಯ ಎಂ.ಸಿ.ವರುಣ್  ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದು, ಕೊಪ್ಪದ ವೇಣು ವರ್ಧನ್  ಚಿನ್ನದ ಪದಕ ಗೆಲ್ಲುವ ಮೂಲಕ ಥೈಲ್ಯಾಂಡ್ ನಲ್ಲಿ ನಡೆಯಲಿರುವ 2024ರ ಸಾಲಿನ GAMMA ಏಷ್ಯನ್ ಮಿಶ್ರ ಮಾರ್ಷಲ್ ಆರ್ಟ್ಸ್ ಚಾಂಪಿಯನ್ ಶಿಪ್ ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಮತ್ತೋರ್ವ ಕ್ರೀಡಾಪಟು ಶಾಫಿ  ಉತ್ತಮ ಪ್ರದರ್ಶನ ನೀಡಿ ಕ್ರೀಡಾಭಿಮಾನಿಗಳ ಗಮನ ಸೆಳೆದರು. ಜಿಲ್ಲೆಯ ನಾಗರೀಕರು ಕ್ರೀಡಾಪಟುಗಳನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸುವ ಮೂಲಕ ಅವರಿಗೆ ಉತ್ತಮ ಅವಕಾಶವನ್ನು ಕಲ್ಪಿಸುವಂತೆ ಅಮಿತ್ ವಿಶ್ವನಾಥ್ ಮನವಿ ಮಾಡಿದ್ದಾರೆ.

Read More

ಕುಣಿಗಲ್ ಮೇ 22 NEWS DESK  :  ಕುಣಿಗಲ್ ಪಟ್ಟಣ ಕೋಟೆ ಪ್ರದೇಶದ ಸಂತೆ ಮೈದಾನ ವ್ಯಾಪ್ತಿಯ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ತೀವ್ರವಾಗಿ ಗಾಯಗೊಂಡಿದ್ದವರಲ್ಲಿ ಇಬ್ಬರು ಚಿಕಿತ್ಸೆ ಫಲಿಸದೆ ಇಂದು ಬೆಳಿಗ್ಗೆ ಸಾವನ್ನಪ್ಪಿದ್ದಾರೆ. ಸಂತೆ ಮೈದಾನದ ನಿವಾಸಿ ಕುಶಾಲ್ (11) ಹಾಗೂ ಶಿವಣ್ಣ( 45 ) ಮೃತ ದುರ್ದೈವಿಗಳು. ಖಾರಪುರಿ ವ್ಯಾಪಾರಿ ರವಿಕುಮಾರ್ ಅವರ ಮನೆಯಲ್ಲಿ ಅಡುಗೆ ಮಾಡಲು ಉಪಯೋಗಿಸುತ್ತಿದ್ದ ಸಿಲಿಂಡರ್ ಮೇ 17 ರಂದು ಸ್ಫೋಟಗೊಂಡಿತ್ತು. ಮನೆಯಲ್ಲಿದ್ದ ರವಿಕುಮಾರ್ ಅವರ ಪತ್ನಿ ಶೃತಿ, ಪುತ್ರಿ ಹೇಮ ಹಾಗೂ ಕುಶಾಲ್ ಗೆ ತೀವ್ರ ಗಾಯಗಳಾಗಿದ್ದವು. ಸ್ಫೋಟದಿಂದ ಪಕ್ಕದ ಮನೆಗೂ ಹಾನಿಯಾಗಿದ್ದು, ಆ ಮನೆಯಲ್ಲಿದ್ದ ಶಿವಣ್ಣ ಹಾಗೂ ಮಂಜಮ್ಮ ಎಂಬುವವರಿಗೂ ಗಾಯಗಳಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಿವರುಗಳ ಪೈಕಿ ಕುಶಾಲ್ ಹಾಗೂ ಶಿವಣ್ಣ ಮೃತಪಟ್ಟರು.

Read More

ಪಾವಗಡ ಮೇ 22 NEWS DESK : ವ್ಯಕ್ತಿಯೊಬ್ಬರನ್ನು ನಡುರಸ್ತೆಯಲ್ಲೆ ಹತ್ಯೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ನಡೆದಿದೆ. ಬಾಬಯ್ಯನ ಬೀದಿಯ ನಿವಾಸಿ ನಾರಾಯಣಿ (35) ಎನ್ನುವವರೇ ಮೃತಪಟ್ಟಿರುವ ವ್ಯಕ್ತಿ. ಮಂಗಳವಾರ ರಾತ್ರಿ ದೊಣ್ಣೆಯಿಂದ ಹಲ್ಲೆ ಮಾಡಿ ಹತ್ಯೆ ಮಾಡಿರುವ ಕುರಿತು ಸಂಶಯ ವ್ಯಕ್ತವಾಗಿದೆ. ಆರೋಪಿಗಳು ತಲೆ ಮರೆಸಿಕೊಂಡಿದ್ದು, ಪಾವಗಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ ಹಾಗೂ ತಂದೆ, ತಾಯಿಯನ್ನು ಅಗಲಿದ್ದಾರೆ.

Read More

ಮಡಿಕೇರಿ ಮೇ 22 NEWS DESK : ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್. ಎಲ್. ಭೋಜೇಗೌಡ ಅವರು ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿಯ ವಿರಕ್ತಮಠಕ್ಕೆ ಭೇಟಿ ನೀಡಿ ಶ್ರೀ ಗುರುಬಸವ ಮಹಾಸ್ವಾಮೀಜಿಗಳಿಂದ ಆಶೀರ್ವಾದ ಪಡೆದರು. ಈ ವೇಳೆ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಯುವ ನಾಯಕ ಮಾಡಾಳ್ ಮಲ್ಲಿಕಾರ್ಜುನ, ತುಮ್ಕೋಸ್ ಅಧ್ಯಕ್ಷ ರವಿಕುಮಾರ್, ಶಿವಮೊಗ್ಗ ಜಿಲ್ಲಾ ಬಿಜೆಪಿ ಖಜಾಂಚಿ ಎನ್.ಡಿ.ಸತೀಶ್, ಪ್ರಧಾನ ಕಾರ್ಯದರ್ಶಿ ಮಾಲತೇಶ್, ದಾವಣಗೆರೆ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಹರ್ಷ ಪಟೇಲ್, ತುಮ್ಕೋಸ್ ಮಾಜಿ ಅಧ್ಯಕ್ಷ ಎಚ್.ಎಸ್.ಶಿವಕುಮಾರ್, ಚನ್ನಗಿರಿ ಬಿಜೆಪಿ ಮುಖಂಡರಾದ ನಾಗರಾಜ್ ನಾಡಿಗ್, ಸಂಗಮ್ ಹಾಜರಿದ್ದರು.  

Read More

ಮಡಿಕೇರಿ ಮೇ 22 NEWS DESK : ನೈರುತ್ಯ ಪದವಿಧರ ಕ್ಷೇತ್ರದ ಚುನಾವಣೆ ಹಿನ್ನೆಲೆ ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯಿತು. ನಗರ ಮಂಡಲ ಅಧ್ಯಕ್ಷ  ಉಮೇಶ್ ಸುಬ್ರಮಣಿ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ,ಹಾಗೂ ಚುನಾವಣಾ ಸಂಚಾಲಕರುಗಳಾಗಿ ಬಿ.ಕೆ.ಅರುಣ್ ಕುಮಾರ್ ಹಾಗೂ ಪ್ರಶಾಂತ್ ಭೀಮಯ್ಯ, ಚುನಾವಣಾ ಉಸ್ತುವಾರಿ ರವಿಶಂಕರ್ ಹಾಗೂ ಪಕ್ಷದ ಪ್ರಮುಖರು ಹಾಜರಿದ್ದರು.  

Read More

ಮಡಿಕೇರಿ ಮೇ 22 NEWS DESK : ಕೆಸರಿನೋಕುಳಿಯ ಹಬ್ಬವೆಂದು ಪ್ರಸಿದ್ಧಿ ಪಡೆದಿರುವ ಪೊನ್ನಂಪೇಟೆ ತಾಲ್ಲೂಕಿನ ಹಳ್ಳಿಗಟ್ಟು  ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್ ನಮ್ಮೆ ಎರಡು ದಿನಗಳ ಕಾಲ ಸಂಭ್ರಮದಿಂದ ನಡೆಯಿತು. ಬೋಡ್ ನಮ್ಮೆಗೆ ಚಮ್ಮಟೀರ ಬಲ್ಯಮನೆಯಿಂದ ಪೊಲವಂದೆರೆ ಹೊರಡುವ ಮೂಲಕ ಚಾಲನೆ ದೊರೆಯಿತು. ಸಂಜೆ ಗುಂಡಿಯತ್ ಅಯ್ಯಪ್ಪ ದೇವರಿಗೆ ವಿಶೇಷ ಅವುಲ್ ಹಾಕಿ, ರಾತ್ರಿ ಚಮ್ಮಟೀರ ಮಚ್ಚಿಯಂಡ ಹಾಗೂ ಮೂಕಳೇರ ಬಲ್ಯಮನೆಗಳಿಗೆ ಮನೆಕಳಿ ಹೊರಡುವ ಮೂಲಕ ಹಬ್ಬವನ್ನು ಆಚರಿಸಲಾಯಿತು. ಎರಡನೇ ದಿನ ಅಪರಾಹ್ನ ಚಮ್ಮಟೀರ ಬಲ್ಯ ಮನೆಯಿಂದ ಕುದುರೆ ಹಾಗೂ ಮೊಗ ಹೊರಡುತ್ತದೆ ಈ ಎರಡೆರಡು ಕುದುರೆ ಹಾಗೂ ಮೊಗಗಳು ಹಾಗೂ ವಿವಿಧ ವೇಷಧಾರಿಗಳು ಹಳ್ಳಿಗಟ್ಟು ಶ್ರೀ ಭದ್ರಕಾಳಿ ದೇವಸ್ಥಾನದ ಸಮೀಪದ ಕೆರೆಯ ಮೇಲ್ಬಾಗದ ಅಂಬಲದಲ್ಲಿ ಸೇರಿ ಪರಸ್ಪರ ಅಲಂಗಿಸಿಕೊಳ್ಳುತ್ತಾರೆ. ನಂತರ ಊರಿನ ಮಂದಿ ಹತ್ತಿರದ ಕೆರೆಯಲ್ಲಿ ಕೆಸರನ್ನು ತಂದು ಪರಸ್ಪರ ಕೆಸರು ಎರಚಾಡಿಕೊಂಡು ಹಬ್ಬವನ್ನು ಸಂಭ್ರಮಿಸಿದರು. ಇಲ್ಲಿ ಬೇರೆ ಊರು, ನೆಂಟರು…

Read More