ಬೆಂಗಳೂರು ಜೂ.5 NEWS DESK : ಬೆಂಗಳೂರಿನ ವಾಯುಸೇನೆಯ ಸಲಕರಣೆಗಳ ನಿರ್ವಹಣಾ ಘಟಕದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಏರ್ ಕಮಾಡೋರ್ ಮನೋಜ್ ಕುಮಾರ್ ನೇತೃತ್ವದಲ್ಲಿ ಏರ್ ಆಫೀಸರ್ ಕಮಾಂಡಿಂಗ್, ಸಿಬ್ಬಂದಿಗಳು ಡಿಪೋ ಕ್ಯಾಂಪಸ್ ಮತ್ತು ಗಗನ್ ವಿಹಾರದಲ್ಲಿ 100 ಕ್ಕೂ ಹೆಚ್ಚು ಸಸಿಗಳನ್ನು ನೆಟ್ಟು ಪರಿಸರ ಜಾಗೃತಿ ಮೂಡಿಸಿದರು. ಅಲ್ಲದೆ ತಮ್ಮ ತೋಟಗಳಲ್ಲಿ ಹೆಚ್ಚಿನ ಮರಗಳನ್ನು ನೆಡುವಂತೆ ಸಲಹೆ ನೀಡಿದರು. ಇದೇ ಸಂದರ್ಭ ಡಿಪೋದ ಎಲ್ಲಾ ಸಿಬ್ಬಂದಿಗಳು ಪರಿಸರ ಸಂರಕ್ಷಣೆಯ ಕುರಿತು ಪ್ರತಿಜ್ಞೆ ಮಾಡಿದರು.
ಲೇಖಕ: admin
ಮಡಿಕೇರಿ ಜೂ.5 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಯದುವೀರ್ ಅವರು ಜಯಭೇರಿ ಬಾರಿಸಿದ್ದಾರೆ. ಇದು ಪ್ರಜಾಪ್ರಭುತ್ವದ ಗೆಲುವಾಗಿದ್ದು, ಜಾತ್ಯತೀತ ಜನತಾದಳದ ಬಲ ಮತ್ತಷ್ಟು ಹೆಚ್ಚಾಗಿದೆ ಎಂದು ಕೊಡಗು ಜಿಲ್ಲಾ ಜೆಡಿಎಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮೂಟೆರ ಪುಷ್ಪಾವತಿ ರಮೇಶ್ ಹರ್ಷ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ದೇಶದಲ್ಲಿ ಎನ್ಡಿಎ ಮೈತ್ರಿ ಕೂಟ ಬಹುಮತ ಪಡೆದುಕೊಂಡಿದೆ. ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಯ ಫಲವಾಗಿ 19 ಸ್ಥಾನಗಳು ಲಭಿಸಿದೆ. ಮೈಸೂರು- ಕೊಡಗು ಕ್ಷೇತ್ರ ನಿರೀಕ್ಷೆಯಂತೆ ಮೈತ್ರಿ ಅಭ್ಯರ್ಥಿಯ ಪಾಲಾಗಿದೆ. ಇದು ಜೆಡಿಎಸ್ ಗೆ ಇರುವ ಜನಬೆಂಬಲಕ್ಕೆ ಸಾಕ್ಷಿಯಾಗಿದೆ. ಯದುವೀರ್ ಅವರಿಗೆ ಕೊಡಗು ಜೆಡಿಎಸ್ ಅಭಿನಂದನೆ ಸಲ್ಲಿಸುತ್ತದೆ ಎಂದು ತಿಳಿಸಿದ್ದಾರೆ. ಜೆಡಿಎಸ್ ವರಿಷ್ಠರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಕ್ಷೇತ್ರದಲ್ಲಿ 2,84,620 ಬೃಹತ್ ಮತಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಕೋಲಾರ ಕ್ಷೇತ್ರದಲ್ಲೂ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್…
ವಿರಾಜಪೇಟೆ ಜೂ.5 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ವಿರಾಜಪೇಟೆ ತಾಲೂಕು ಕಾನೂರು ವಲಯ ಬ್ರಹ್ಮಗಿರಿ ಕಾರ್ಯ ಕ್ಷೇತ್ರದ ತ್ರೈಮಾಸಿಕ ಒಕ್ಕೂಟ ಸಭೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಿರಿಯ ವೈಧ್ಯರಾದ ಶರತ್ ಮಾತನಾಡಿ, ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳು, ಕ್ಯಾನ್ಸರ್ ಕಾಯಿಲೆಗಳು, ಸ್ತ್ರೀಯರಲ್ಲಿ ಉಂಟಾಗುವ ದುಷ್ಪರಿಣಾಮಗಳು ಹಾಗೂ ಅದರಿ0ದ ಹಂತ ಹಂತವಾಗಿ ಹೊರಗೆ ಬರಬೇಕು ಎಂಬುದರ ಬಗ್ಗೆ ಮಾಹಿತಿ ನೀಡಿದರು. ವಲಯ ಮೇಲ್ವಿಚಾರಕರಾದ ಸುಜೀರ್ ಕುಲಾಲ್ ಯೋಜನೆಯ ಕಾರ್ಯಕ್ರಮಗಳು ಹಾಗೂ ತಂಬಾಕು ಸೇವನೆಯ ದುಷ್ಪರಿಣಾಮಗಳ ಬಗ್ಗೆ ತಿಳಿಸಿದರು. ಒಕ್ಕೂಟ ಅಧ್ಯಕ್ಷರಾದ ಸುನೀತ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೇವಾ ಪ್ರತಿನಿಧಿ ಮುತ್ತಪ್ಪ, ದಿವ್ಯ, ಒಕ್ಕೂಟದ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಹಾಜರಿದ್ದರು.
ಮಡಿಕೇರಿ ಜೂ.5 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಇಂಡಿಯಾ ಕೂಟದ ಅಭ್ಯರ್ಥಿಗೆ ಸೋಲಾಗಿದೆ, ಜನರು ನೀಡಿರುವ ತೀರ್ಪನ್ನು ಸ್ವಾಗತಿಸುತ್ತೇವೆ ಎಂದು ಇಂಡಿಯಾ ಮಿತ್ರ ಪಕ್ಷ ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ತಿಳಿಸಿದ್ದಾರೆ. ಜನಸಾಮಾನ್ಯರ ಆಶಯಗಳಿಗೆ ವಿರುದ್ಧವಾಗಿದ್ದ ಎನ್ಡಿಎ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ “ಬೈ ಬೈ ಮೋದಿ” ಅಭಿಯಾನವನ್ನು ಆಮ್ ಆದ್ಮಿ ಪಾರ್ಟಿ ಹಮ್ಮಿಕೊಂಡಿತ್ತು. ಆದರೆ ಮತದಾರರು ಮತ್ತೆ ಮೋದಿ ಹಾಗೂ ಎನ್ಡಿಎ ಅಭ್ಯರ್ಥಿಗೆ ಬಹುಮತ ನೀಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯ ಈ ತೀರ್ಪನ್ನು ಪಕ್ಷ ಸ್ವಾಗತಿಸುತ್ತದೆ ಎಂದು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ನೂತನ ಸಂಸದ ಯದುವೀರ್ ಒಡೆಯರ್ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಜಿ.ಪಂ ಮತ್ತು ತಾ.ಪಂ ಚುನಾವಣೆ ವೇಳೆಗೆ ಆಮ್ ಆದ್ಮಿ ಪಾರ್ಟಿಯನ್ನು ಬಲಿಷ್ಠವಾಗಿ ಸಂಘಟಿಸಲಾಗುವುದು ಎಂದು ಭೋಜಣ್ಣ ಸೋಮಯ್ಯ ತಿಳಿಸಿದ್ದಾರೆ.
ವಿರಾಜಪೇಟೆ ಜೂ.5 NEWS DESK : ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಎನ್. ಎಸ್. ಎಸ್ ಘಟಕ, ನೇಚರ್ ಕ್ಲಬ್ ಘಟಕ, ಯುವ ರೆಡ್ ಕ್ರಾಸ್ ಘಟಕ, ಅರಣ್ಯ ಇಲಾಖೆ, ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಗಿಡ ನೆಡುವುದರ ಮೂಲಕ ಪರಿಸರ ಜಾಗೃತಿ ಮೂಡಿಸಿದರು. ಕಾರ್ಯಕ್ರಮದಲ್ಲಿ ವಿರಾಜಪೇಟೆಯ ಉಪ ಅರಣ್ಯಾಧಿಕಾರಿ ಮಧುಕುಮಾರ್ ಮಾತನಾಡಿ, ವಿದ್ಯಾರ್ಥಿಗಳಿಗೆ ಗಿಡ ನೆಡುವುದರ ಮತ್ತು ಪರಿಸರ ಸಂರಕ್ಷಣೆಯಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ವಿವರಿಸಿದರು. ವಿದ್ಯಾರ್ಥಿಗಳು ಪರಿಸರವನ್ನು ಉಳಿಸಿ ಬೆಳೆಸಬೇಕು, ಆ ನಿಟ್ಟಿನಲ್ಲಿ ಸಮಾಜದಲ್ಲಿ ಜಾಗೃತಿ ಮೂಡಿಸುವ ಕಾರ್ಯ ಆಗಬೇಕು ಎಂದ ಅವರು ಅರಣ್ಯ ಇಲಾಖೆಯು ಪರಿಸರ ಸಂರಕ್ಷಣೆಗೆ ವಹಿಸಿರುವ ಕ್ರಮಗಳ ಬಗ್ಗೆ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪ ಮತ್ತು ಪಿಯು ಕಾಲೇಜು ಪ್ರಾಂಶುಪಾಲರಾದ ರೆ. ಫಾ. ಮದಲೈ ಮುತ್ತು, ನಾವು ಪರಿಸರವನ್ನು ಸಂರಕ್ಷಿಸಿದರೆ ಮುಂದೊಂದು ದಿನ ಅದು ನಮ್ಮನ್ನು…
ಕೊಳ್ಳೇಗಾಲ ಜೂ.5 NEWS DESK : ಕಾಮಗೆರೆಯ ಸಂತ ಫ್ರಾನ್ಸಿಸ್ ಕ್ಷೇವಿಯರ್ ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಜಾಗೃತಿ ಜಾಥಾ ನಡೆಯಿತು. ವಿದ್ಯಾಸಂಸ್ಥೆಯ ವ್ಯವಸ್ಥಾಪಕರಾದ ರೆ.ಫಾ.ಐಸಾಕ್ ರತ್ನಾಕರ್ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿದ್ದು, ವಿದ್ಯಾರ್ಥಿಗಳು ಸಾರ್ವಜನಿಕ ಜಾಗೃತಿಯನ್ನು ಮೂಡಿಸಿ ಪ್ರತಿಯೊಬ್ಬರಲ್ಲೂ ಪರಿಸರ ಪ್ರಜ್ಞೆ ಮೂಡಿಸಬೇಕೆಂದು ಹೇಳಿದರು. ಜಾಥಾವು ಕಾಮಗೆರೆ ಗ್ರಾಮದಾದ್ಯಂತ ಸಾಗಿ ಘೋಷಣೆಗಳನ್ನು ಕೂಗುವುದರ ಮೂಲಕ ಸಾರ್ವಜನಿಕ ಜಾಗೃತಿ ಮೂಡಿಸುವ ಪ್ರಯತ್ನವನ್ನು ಶಾಲಾ ಮಕ್ಕಳು ಮಾಡಿದರು. ನಂತರ ಶಾಲೆಯಲ್ಲಿ ಗಿಡವನ್ನು ನೆಟ್ಟು ಪ್ರತಿಯೊಬ್ಬರು ಪರಿಸರ ಸಂರಕ್ಷಣೆಗೆ ಪಣತೊಡಬೇಕೆಂದರು. ಈ ಸಂದರ್ಭ ಮುಖ್ಯ ಶಿಕ್ಷಕ ಅಂತೋಣಿರಾಜ್, ಶಿಕ್ಷಕರು, ಸಿಬ್ಬಂದಿಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳು ಹಾಜರಿದ್ದರು.
ಪುತ್ತೂರು ಜೂ.5 NEWS DESK : ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಕೆ.ಎಸ್.ಕಾರ್ತಿಕ್ 99.8976127 ಪರ್ಸಂಟೈಲ್ ನೊಂದಿಗೆ 698 ಅಂಕಗಳನ್ನು ಗಳಿಸಿರುತ್ತಾರೆ. ಕೆ.ನೇಹಾ ಉದಪುಡಿ 99.8815839 ಪರ್ಸಂಟೈಲ್ ನೊಂದಿಗೆ 696 ಅಂಕಗಳನ್ನು ಗಳಿಸಿ ಅಭೂತಪೂರ್ವ ಸಾಧನೆಗೈದಿದ್ದಾರೆ. ಇತರ ವಿದ್ಯಾರ್ಥಿಗಳಾದ ಆದಿತ್ಯ ಶೇಟ್ 687, ಆನ್ಯಾ ಡಿ.ಜೆ ಗೌಡ 683, ಪ್ರೇಮ್ ಸಾಗರ್ ಪಾಟೀಲ್ 675, ಸತೀಶ್ ಗೌಡ ಪಿ. ಎಂ 678, ಫರ್ಹಾನ್ ಟಿ.ಪಿ 675, ಸ್ನೇಹಾ ವಸ್ತ್ರದ್ 673, ಆರ್ಯ ರಾವ್ ಟಿ.ಪಿ 666, ಸಿಂಚನ ಆರ್. ಹೆಚ್ 664, ಪ್ರಿಯಾಂಕ ಕೆ.ಬಿ 660, ಸಿ ಜನಶ್ರೀ ಕುಮಾರ್ 663, ಪಂಕಜ್ ಭಟ್ 662, ಹೇಮಶ್ರೀ ಬಿ. ಕೆ 647, ವಿಶ್ರುತ ಎಂ. ಎಸ್ 645, ಅಭಿನವ್ ಹೆಚ್.ಬಿ 640, ಬಿ.ಇ ಹಿತೈಷ್ 639,…
ಮಡಿಕೇರಿ ಜೂ.5 NEWS DESK : ಹಾಕತ್ತೂರು ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಹೆಚ್.ಡಿ.ಎಫ್.ಸಿ ಬ್ಯಾಂಕ್ ಮಡಿಕೇರಿಯ ಶಾಖೆ, ಹಾಕತ್ತೂರು ತೊಂಭತ್ತಮನೆಯ ತ್ರಿನೇತ್ರ ಯುವಕ ಸಂಘ, ಕೊಡಗು ಜಿಲ್ಲಾ ಹಾಗೂ ಮಡಿಕೇರಿ ತಾಲ್ಲೂಕು ಯುವ ಒಕ್ಕೂಟ ಮತ್ತು ಹಾಕತ್ತೂರು ಸರಕಾರಿ ಪ್ರೌಢ ಶಾಲೆಯ ಸಹಯೋಗದಲ್ಲಿ ಶಾಲಾ ಮೈದಾನದಲ್ಲಿ ಗಣ್ಯರು ಹಾಗೂ ವಿದ್ಯಾರ್ಥಿಗಳು ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಿದರು. ಈ ಸಂದರ್ಭ ಹೆಚ್ಡಿಎಫ್ಸಿ ಬ್ಯಾಂಕ್ ಮಡಿಕೇರಿ ಶಾಖೆ ವ್ಯವಸ್ಥಾಪಕ ನಾರಾಯಣ್, ಸಿಬ್ಬಂದಿ ಗಳಾದ ಕವನ, ಮಂಜುಳಾ, ಹಿತೇಶ್, ಕುಮಾರ್, ಭರತ್ ಶ್ರೀನಿವಾಸ, ತ್ರಿನೇತ್ರ ಯುವಕ ಸಂಘದ ಅಧ್ಯಕ್ಷ ಪಿ.ಪಿ.ಸುಕುಮಾರ್, ಮಾಜಿ ಅಧ್ಯಕ್ಷ ಟಿ.ಕೆ.ಸಂತೋಷ್. ಗ್ರಾ.ಪಂ ಸಿಬ್ಬಂದಿಗಳಾದ ಸೋವಿಯತ್, ಅಹ್ಮದ್, ಗ್ರಂಥಪಾಲಕಿ ಸುನೀತಾ, ಹಾಕತ್ತೂರು ಸರಕಾರಿ ಪ್ರೌಢಶಾಲೆ ಶಿಕ್ಷಕರಾದ ಎಂ.ವನಜ, ಸಿ.ಎಂ.ಮುನೀರ್, ಬಿ.ಎನ್.ಜಯಂತಿ, ಕೆ.ಕೆ.ಪುಷ್ಪ, ಕೆ.ಜಿ.ಭವಾನಿಶಂಕರ್, ಕೆ.ಎಸ್.ಸಹನಾ ಶಾಲಾ ವಿದ್ಯಾರ್ಥಿಗಳು ಹಾಜರಿದ್ದರು.
:: 28 ಕ್ಷೇತ್ರಗಳ ವಿಜೇತ ಅಭ್ಯರ್ಥಿಗಳು :: ಬಾಗಲಕೋಟೆ ಕ್ಷೇತ್ರ: ಪಿ.ಸಿ.ಗದ್ದಿಗೌಡರ್-ಬಿಜೆಪಿ ಬೆಂಗಳೂರು ಕೇಂದ್ರ ಕ್ಷೇತ್ರ: ಪಿ.ಸಿ.ಮೋಹನ್- ಬಿಜೆಪಿ ಬೆಂಗಳೂರು ಉತ್ತರ ಕ್ಷೇತ್ರ: ಶೋಭಾ ಕರಂದ್ಲಾಜೆ-ಬಿಜೆಪಿ ಬೆಂಗಳೂರು ದಕ್ಷಿಣ ಕ್ಷೇತ್ರ: ತೇಜಸ್ವಿ ಸೂರ್ಯ- ಬಿಜೆಪಿ ಬೆಂಗಳೂರು ಗ್ರಾಮಾಂತರ: ಡಾ. ಮಂಜುನಾಥ್-ಬಿಜೆಪಿ ಬೆಳಗಾವಿ ಕ್ಷೇತ್ರ: ಜಗದೀಶ್ ಶೆಟ್ಟರ್- ಬಿಜೆಪಿ ಬಳ್ಳಾರಿ ಕ್ಷೇತ್ರ: ಇ. ತುಕಾರಾಂ- ಕಾಂಗ್ರೆಸ್ ಬೀದರ್ ಕ್ಷೇತ್ರ: ಸಾಗರ್ ಈಶ್ವರ ಖಂಡ್ರೆ- ಕಾಂಗ್ರೆಸ್ ಬಿಜಾಪುರ ಕ್ಷೇತ್ರ: ರಮೇಶ್ ಜಿಗಜಿಣಗಿ- ಬಿಜೆಪಿ ಚಾಮರಾಜನಗರ ಕ್ಷೇತ್ರ: ಸುನಿಲ್ ಬೋಸ್- ಕಾಂಗ್ರೆಸ್ ಚಿಕ್ಕಬಳ್ಳಾಪುರ ಕ್ಷೇತ್ರ: ಕೆ.ಸುಧಾಕರ್- ಬಿಜೆಪಿ ಚಿಕ್ಕೋಡಿ ಕ್ಷೇತ್ರ: ಪ್ರಿಯಾಂಕಾ ಸತೀಶ್ ಜಾರಕಿಹೊಳಿ- ಕಾಂಗ್ರೆಸ್ ಚಿತ್ರದುರ್ಗ ಕ್ಷೇತ್ರ: ಗೋವಿಂದ ಕಾರಜೋಳ- ಬಿಜೆಪಿ ದಕ್ಷಿಣ ಕನ್ನಡ ಕ್ಷೇತ್ರ: ಬ್ರಿಜೇಶ್ ಚೌಟಾ- ಬಿಜೆಪಿ ದಾವಣಗೆರೆ ಕ್ಷೇತ್ರ: ಪ್ರಭಾ ಮಲ್ಲಿಕಾರ್ಜುನ್- ಕಾಂಗ್ರೆಸ್ ಧಾರವಾಡ ಕ್ಷೇತ್ರ: ಪ್ರಲ್ಹಾದ್ ಜೋಶಿ- ಬಿಜೆಪಿ ಕಲಬುರಗಿ ಕ್ಷೇತ್ರ: ರಾಧಾಕೃಷ್ಣ-ಕಾಂಗ್ರೆಸ್ ಹಾವೇರಿ ಕ್ಷೇತ್ರ: ಬಸವರಾಜ ಬೊಮ್ಮಾಯಿ- ಬಿಜೆಪಿ ಕೋಲಾರ ಕ್ಷೇತ್ರ: ಎಂ ಮಲ್ಲೇಶ್ ಬಾಬು- ಜೆಡಿಎಸ್…
ಮಡಿಕೇರಿ ಜೂ.5 NEWS DESK : ಲಯನ್ಸ್ ಕ್ಲಬ್ ಸೋಮವಾರಪೇಟೆ ಮತ್ತು ಲಯನ್ಸ್ ಕ್ಲಬ್ ಹೆರಿಟೇಜ್ ಸಿಟಿ ಮೈಸೂರು ಸಹಯೋಗದೊಂದಿಗೆ ಸೋಮವಾರಪೇಟೆಯ ಬಸವೇಶ್ವರ ರಸ್ತೆಯಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಕುರ್ಚಿಗಳನ್ನು ನೀಡಲಾಯಿತು. ಲಯನ್ಸ್ ವಲಯಾಧ್ಯಕ್ಷ ಚೆಟ್ಟಿಮಾಡ ರೋಹಿತ್ ಅಂಗನವಾಡಿ ಕಾರ್ಯಕರ್ತೆಗೆ ಹಸ್ತಾಂತರಿಸಿದರು. ಈ ಸಂದರ್ಭ ಲಯನ್ಸ್ ಸೋಮವಾರಪೇಟೆ ಅಧ್ಯಕ್ಷ ಎ.ಎಸ್.ಮಹೇಶ್, ಕಾರ್ಯದರ್ಶಿ ಕೆ.ಡಿ.ವೀರಪ್ಪ, ಸಿ.ಕೆ.ಲೀಲಾರಾಮ್ ಮಲ್ಲಪ್ಪ ಹಾಜರಿದ್ದರು.






