ಲೇಖಕ: admin

ಮಡಿಕೇರಿ ಮೇ 22 NEWS DESK : ಕಳೆದ ಎರಡು ವಾರಗಳಿಂದ ಕೊಡಗು ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಬರದ ಛಾಯೆ ಮರೆಯಾಗಿದೆ. ಅತಿಯಾದ ಉಷ್ಣಾಂಶದಿಂದ ಬತ್ತಿ ಹೋಗಿದ್ದ ನದಿತೊರೆಗಳು ಜೀವಕಳೆ ಪಡೆದುಕೊಂಡಿವೆ. ಹನಿ ನೀರಿಲ್ಲದೆ ಮರಳು, ಬಂಡೆಗಳು ಕಾಣುತ್ತಿದ್ದ ನದಿಗಳಲ್ಲಿ ಮಳೆ ನೀರು ಹರಿಯತೊಡಗಿದೆ. ಕೊಡಗು ಜಿಲ್ಲೆಯಾದ್ಯಂತ ಪೂರ್ವ ಮುಂಗಾರು ಕಳೆದ ಕೆಲವು ದಿನಗಳಿಂದ ಚುರುಕಾಗುವ ಮೂಲಕ ಕುಡಿಯುವ ನೀರಿನ ಸಮಸ್ಯೆ ಕೊಂಚ ಬಗೆ ಹರಿಯುವ ಲಕ್ಷಣ ಕಂಡು ಬಂದಿದೆ. ಭಾಗಮಂಡಲ, ಕಕ್ಕಬ್ಬೆ, ನಾಪೋಕ್ಲು, ಮೂರ್ನಾಡು, ವಿರಾಜಪೇಟೆ, ಕದನೂರು, ನಂಜರಾಯಪಟ್ಟಣ, ಗುಡ್ಡೆಹೊಸೂರು, ಕುಶಾಲನಗರ, ಕಣಿವೆ, ಕೂಡಿಗೆ ಸೇರಿದಂತೆ ಕಾವೇರಿ ನದಿ ಹರಿಯುವ ಪ್ರದೇಶಗಳಲ್ಲೂ ಉತ್ತಮ ಮಳೆಯಾಗಿದೆ. ಇದರಿಂದ ನದಿಯಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ. ಕುಶಾಲನಗರ ತಾಲೂಕಿನ ಗುಡ್ಡೆಹೊಸೂರು ಬಳಿಯ ತೂಗು ಸೇತುವೆಯ ಬಳಿ ಕಾವೇರಿ ನದಿ ನೀರಿನಲ್ಲಿ 5 ಅಡಿಗಳಷ್ಟು ಏರಿಕೆ ಕಂಡು ಬಂದಿದೆ. ಸಂಪೂರ್ಣವಾಗಿ ಬತ್ತಿ ಹೋಗಿ ಆತಂಕ ಮೂಡಿಸಿದ್ದ ಕಾವೇರಿ ನದಿಯಲ್ಲಿ ಈಗ ಮಳೆನೀರು ಜೀವಕಳೆಯೊಂದಿಗೆ ಹರಿಯುತ್ತಿದ್ದು, ಕೃಷಿಕ ವರ್ಗದಲ್ಲಿ…

Read More

ಮಡಿಕೇರಿ ಮೇ 22 NEWS DESK : ಪ್ರತಿ ವರ್ಷ ಮೇ 22 ರಂದು ವಿಶ್ವ ಜೀವ – ವೈವಿಧ್ಯ ದಿನ. (ವರ್ಲ್ಡ್ ಬಯೋ ಡೈವರ್ಸಿಟಿ ಡೇ) ವನ್ನು ವಿಶ್ವದಾದ್ಯಂತ ಆಚರಿಸಲಾಗುತ್ತದೆ. ಈ ದಿನವು ವಿಶ್ವ ಜೀವ-ವೈವಿಧ್ಯ ಸಂರಕ್ಷಣೆಯ ಜಾಗತಿಕ ಜಾಗೃತಿ ದಿನವಾಗಿದೆ. ರಾಷ್ಟ್ರೀಯ ಮತ್ತು ಜಾಗತಿಕ ಮಟ್ಟದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿ, ಜೀವ ವೈವಿಧ್ಯ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲು ಈ ದಿನ ಸಂಕಲ್ಪ ಮಾಡಲಾಗುತ್ತದೆ. 2024 ರ ಶೀರ್ಷಿಕೆ: ಯೋಜನೆಯ ಭಾಗವಾಗಿರಿ: ವಿಶ್ವ ಜೀವ – ವೈವಿಧ್ಯ ದಿನದ ಈ ವರ್ಷದ ಶೀರ್ಷಿಕೆ: ‘ಯೋಜನೆಯ ಭಾಗವಾಗಿರಿ’ (ಬಿ ಪಾರ್ಟ್ ಆಫ್ ದಿ ಪ್ಲಾನ್) ಎಂಬ ಶೀರ್ಷಿಕೆಯಡಿ 2024 ರ ಸಾಲಿನ ವಿಶ್ವ ಜೀವ – ವೈವಿಧ್ಯ ದಿನ ವನ್ನು ಆಚರಿಸಲಾಗುತ್ತಿದೆ. ನಾವು ನಮ್ಮಲ್ಲಿ ಪ್ರತಿಯೊಬ್ಬರೂ ಪರಿಸರ ವ್ಯವಸ್ಥೆಯ ಪರಿಹಾರದ ಒಂದು ಭಾಗವಾಗಿ ಪರಿಸರವನ್ನು ಸಂರಕ್ಷಿಸುವಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕಿದೆ ಎಂಬುದು ಈ ಶೀರ್ಷಿಕೆಯ ಮಹತ್ವವಾಗಿದೆ. 1993 ರಿಂದ ಪ್ರತಿ…

Read More

ಹುಣಸೂರು ಮೇ 21 NEWS DESK : ಮಂಗಳವಾರ ಸಂಜೆ ಸುರಿದ ಧಾರಾಕಾರ ಮಳೆಗೆ ಹುಣುಸೂರು ತಾಲ್ಲೂಕಿನ ಹನಗೋಡಿನಲ್ಲಿ ಕೃಷಿಭೂಮಿ, ಅಂಗಡಿ, ಬೇಕರಿ ಹಾಗೂ ಮನೆಗಳಿಗೆ ನೀರು ನುಗ್ಗಿ ಸಾಕಷ್ಟು ಹಾನಿಯಾಗಿದೆ. ಮನೆಯೊಂದರ ಗೋಡೆ ಕುಸಿದು ಬಿದ್ದಿದೆ, ಅಲ್ಲದೆ ಕೃಷಿ ಫಸಲು ನಾಶವಾಗಿದೆ. ಮಳಿಗೆಗಳಿಗೆ ನುಗ್ಗಿದ ನೀರನ್ನು ಹರಸಾಹಸಪಟ್ಟು ಹೊರ ಹಾಕಲಾಯಿತು. ಹರೀಶ್‌ ಎಂಬುವವರಿಗೆ ಸೇರಿದ ಮನೆ ಗೋಡೆ ಕುಸಿದು ಬಿದ್ದು, ಮನೆಯೊಳಗಿದ್ದ ದವಸ, ಧಾನ್ಯ, ಬಟ್ಟೆ ಸೇರಿದಂತೆ ಪದಾರ್ಥಗಳು ನೀರಿನಲ್ಲಿ ಹಾಳಾಗಿದೆ. ಅಲ್ಲದೆ ಹನಗೋಡು, ಬಿ.ಆರ್.ಕಾವಲ್ ಗ್ರಾಮದ ಜಮೀನುಗಳಲ್ಲಿದ್ದ  ಶುಂಠಿ ಹಾಗೂ ತಂಬಾಕು ನೀರಿನಲ್ಲಿ ಮುಳುಗಿವೆ. ಹರೀನಹಳ್ಳಿ, ಮುತ್ತುರಾಯನಹೊಸಹಳ್ಳಿ, ಕಣಗಾಲು, ಕಲ್ಲಹಳ್ಳಿ, ಅತ್ತಿಕುಪ್ಪೆ ಸೇರಿದಂತೆ ಬಹುತೇಕ ಗ್ರಾಮಗಳಲ್ಲಿ ಭಾರೀ ಮಳೆಯಾಗಿದೆ. ಕೆಲ ಹೊತ್ತು ವಿರಾಜಪೇಟೆ-ಹುಣಸೂರು ರಸ್ತೆ ಸಂಚಾರವೇ ಬಂದ್ ಆಗಿತ್ತು.

Read More

ಸುಂಟಿಕೊಪ್ಪ ಮೇ 21 NEWS DESK : ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ ವ್ಯಾಪ್ತಿಯ ಕುಂಬೂರಿನಲ್ಲಿ ನಿರ್ಮಿಸಲಾಗಿರುವ ಪವಿತ್ರ ಕುಟುಂಬ ದೇವಾಲಯವನ್ನು ಮಂಗಳವಾರದಂದು ಮೈಸೂರು ಧರ್ಮಕ್ಷೇತ್ರದ ಆಡಳಿತಾಧಿಕಾರಿ ಪರಮಪೂಜ್ಯ ಡಾ. ಬರ್ನಾಡ್ ಮೊರಾಸ್ ಲೋಕಾರ್ಪಣೆಗೊಳಿಸಿ ಆಶೀರ್ವಚನ ನೀಡಿದರು. ನೂತನ ಬಲಿಪೀಠದಲ್ಲಿ ಪರಮಪೂಜ್ಯ ಡಾ.ಬರ್ನಾಡ್ ಮೊರಾಸ್ ಹಾಗೂ ಸಹಗುರುಗಳು ಬಲಿಆರ್ಪಣೆಯನ್ನು ಸಲ್ಲಿಸಿದರು. ಕುಂಬೂರುವಿನ ಪವಿತ್ರ ಕುಟುಂಬ ದೇವಾಲಯಕ್ಕೆ ನೂರಾರು ವರ್ಷಗಳ ಇತಿಹಾಸವಿದ್ದು, ಇಂದು ಕಾಣುತ್ತಿರುವ ಭವ್ಯ ದಿವ್ಯ ನವೀನ ದೇವಾಲಯಕ್ಕೆ 10 ಹಲವು ಧರ್ಮಗುರುಗಳು ಮತ್ತು ಭಕ್ತರ ತ್ಯಾಗ ಪರಿಶ್ರಮ, ಭಕ್ತಿಯ ಸಮರ್ಪಣೆಯಾಗಿದೆ ಎಂದು ಶ್ಲಾಘಿಸಿದರು. ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಮಾತನಾಡಿ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶ ನಮ್ಮದಾಗಿದ್ದು, ವಿವಿಧ ಧಾರ್ಮಿಕ ನಂಬಿಕೆಗಳು ಆಚಾರ ವಿಚಾರಗಳು ವೇಷಭೂಷಣಗಳು ಬೇರೆ ಬೇರೆಯಾಗಿದ್ದರೂ ಕೂಡ ಎಲ್ಲಾ ಧರ್ಮಗಳ ಸಾರ ಒಂದೇ ಎಂದು ಹೇಳಿದರು. ಧರ್ಮಕೇಂದ್ರದ ಧರ್ಮಗುರುಗಳಾದ ರೇ.ಫಾ.ರಾಜೇಶ್ ಮಾತನಾಡಿ ಹುಲ್ಲುಹಾಸಿನ ಕಟ್ಟಡದಿಂದ ಪವಿತ್ರ ಕುಟುಂಬ ದೇವಾಲಯದ ಪರಿಶ್ರಮವನ್ನು ವಿವರಿಸಿದರು. ಜೀರ್ಣೋದ್ಧಾರಕ್ಕೆ ವಂ. ಫಾ. ಸಂತೋಷ್ ಅವರು…

Read More

ಸೋಮವಾರಪೇಟೆ ಮೇ 21 NEWS DESK : ಸೋಮವಾರಪೇಟೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಆಂಬುಲೆನ್ಸ್ ಕಳೆದ ಒಂದು ತಿಂಗಳಿನಿಂದ ಸಾರ್ವಜನಿಕರ ಸೇವೆಗೆ ಲಭ್ಯವಿರದ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.  ವೇದಿಕೆಯ ಕೊಡಗು ಜಿಲ್ಲಾಧ್ಯಕ್ಷ ದೀಪಕ್ ಅವರ ನೇತೃತ್ವದಲ್ಲಿ ಕಛೇರಿಗೆ ಮುತ್ತಿಗೆ ಹಾಕಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಆಸ್ಪತ್ರೆಯ ಆಡಳಿತಾಧಿಕಾರಿ ಮೀನಾಕ್ಷಿ ಅವರು ಮಾತನಾಡಿ, ನಾನು ಇತ್ತೀಚೆಗಷ್ಟೇ ಅಧಿಕಾರವಹಿಸಿಕೊಂಡಿದ್ದು, ಈ ಬಗ್ಗೆ ಗಮನ ಹರಿಸಲು ಸಾಧ್ಯವಾಗಲಿಲ್ಲ. ಎರಡು ದಿನಗಳೊಳಗೆ ಸಮಸ್ಯೆ ಸರಿಪಡಿಸುವುದಾಗ ಭರವಸೆ ನೀಡಿದರು. ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊರತೆಯಿಂದ ರೋಗಿಗಳಿಗೆ ಸಮಸ್ಯೆಯಾಗಿದೆ. ಆಸ್ಪತ್ರೆಯ ಖಾಲಿ ಹುದ್ದೆಗಳು ಭರ್ತಿ ಆಗಿಲ್ಲ. ಗ್ರಾಮೀಣ ಭಾಗದ ಬಡ ರೋಗಿಗಳು ಈ ಆಸ್ಪತ್ರೆಯನ್ನೇ ಅವಲಂಭಿಸಿದ್ದಾರೆ. ತಜ್ಞ ವೈದ್ಯರಿಲ್ಲದೆ ಪ್ರಾಥಮಿಕ ಚಿಕಿತ್ಸೆ ಮಾತ್ರ ದೊರೆಯುತ್ತಿದೆ. ರೋಗಿ ನಗರ ಪ್ರದೇಶಗಳಿಗೆ ತೆರಳಬೇಕಾಗಿದೆ ಎಂದು ಪದಾಧಿಕಾರಿಗಳು ಬೇಸರ ವ್ಯಕ್ತಪಡಿಸಿದರು. ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಸೇರಿದಂತೆ ಆಸ್ಪತ್ರೆಗೆ ಬೇಕಾಗಿರುವ ಅಗತ್ಯ ಸೌಲಭ್ಯಗಳ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ವೈದ್ಯಾಧಿಕಾರಿ…

Read More

ಸೋಮವಾರಪೇಟೆ ಮೇ 21 NEWS DESK : ಸೋಮವಾರಪೇಟೆ ಪಟ್ಟಣದ ಜನತಾ ಕಾಲೋನಿಯ ಚೌಡೇಶ್ವರಿ ಬ್ಲಾಕ್‌ನ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ 23ನೇ ವರ್ಷದ ದೇವಿಯ ಮಹಾಪೂಜೆ ಶ್ರದ್ಧಾಭಕ್ತಿಯಿಂದ ಮಂಗಳವಾರ ನಡೆಯಿತು. ಮಹಾಪೂಜೆ, ಅಭಿಷೇಕ ಪೂಜೆ ನಂತರ ಮಹಾಮಂಗಳಾರತಿ ನಡೆಯಿತು. ನೆರೆದಿದ್ದ ಭಕ್ತರಿಗೆ ಮಧ್ಯಾಹ್ನ ಅನ್ನಸಂತರ್ಪಣೆ ವ್ಯವಸ್ಥೆ ಕಲ್ಪಿಸಲಾಗಿತ್ತು. ದೇವಾಲಯ ಸಮಿತಿಯ ಅಧ್ಯಕ್ಷ ಸುಹಾಸ್, ಕಾರ್ಯದರ್ಶಿ ವೀಕ್ಷಿತ್ ಲೊಕೇಶ್, ಸಂತೋಷ್, ಮಂಜುನಾಥ್ ಇದ್ದರು.

Read More

ಮಡಿಕೇರಿ ಮೇ 21 NEWS DESK :  ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ  ದೇವರಪುರ ಗ್ರಾಮದಲ್ಲಿ ಶ್ರೀ ಅಯ್ಯಪ್ಪ ಮತ್ತು ಭದ್ರಕಾಳಿ ದೇವರ ಬೇಡು(ಕುಂಡೆ) ಹಬ್ಬವು ಮೇ 22 ಮತ್ತು 23 ರಂದು ನಡೆಯಲಿದ್ದು,  ಈ ಹಿನ್ನೆಲೆ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮೇ 22 ರ ಬೆಳಿಗ್ಗೆ 6 ಗಂಟೆಯಿಂದ ಮೇ 23 ರ ಮಧ್ಯರಾತ್ರಿ 12 ಗಂಟೆಯವರೆಗೆ ಗೋಣಿಕೊಪ್ಪ ಮತ್ತು ಸುತ್ತಮುತ್ತಲಿನ 15 ಕಿ.ಮೀ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೋಟೆಲ್ ಮತ್ತು ಕ್ಲಬ್‍ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟರಾಜ್ ಆದೇಶಿಸಿದ್ದಾರೆ.

Read More

ಮಡಿಕೇರಿ ಮೇ 21 NEWS DESK : ಕರ್ನಾಟಕ ವಿಧಾನ ಪರಿಷತ್ತು ದ್ವೈವಾರ್ಷಿಕ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈರುತ್ಯ ಪದವೀಧರರ ಕ್ಷೇತ್ರಗಳ ಚುನಾವಣೆಯು ಜೂನ್, 03 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈರುತ್ಯ ಪದವೀಧರರ ಕ್ಷೇತ್ರಗಳಲ್ಲಿ ಮೇ, 20 ಉಮೇದುವಾರಿಕೆ ಹಿಂಪಡೆಯಲು ಅಂತಿಮ ದಿನವಾಗಿತ್ತು. ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ 02, ನೈರುತ್ಯ ಶಿಕ್ಷಕರ ಕ್ಷೇತ್ರದಿಂದ -01 ಹಾಗೂ ನೈರುತ್ಯ ಪದವೀಧರರ ಕ್ಷೇತ್ರದಿಂದ -01 ಅಭ್ಯರ್ಥಿ ನಾಮಪತ್ರಗಳನ್ನು ಹಿಂಪಡೆದಿದ್ದು, ಅಂತಿಮವಾಗಿ ಕಣದಲ್ಲಿ ಉಳಿದಿರುವ ಅಭ್ಯರ್ಥಿಗಳ ವಿವರ ಇಂತಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ 11 ಅಭ್ಯರ್ಥಿಗಳು, ನೈರುತ್ಯ ಶಿಕ್ಷಕರ ಕ್ಷೇತ್ರದಿಂದ 08 ಅಭ್ಯರ್ಥಿಗಳು ಹಾಗೂ ನೈರುತ್ಯ ಪದವೀಧರರ ಕ್ಷೇತ್ರದಿಂದ 10 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಭಾರತ ಚುನಾವಣಾ ಆಯೋಗ ಸೂಚಿಸಿರುವಂತೆ ಮತದಾರನ ಬೆರಳಿಗೆ ಅಳಿಸಲಾಗದ ಶಾಯಿಯನ್ನು…

Read More

ಮಡಿಕೇರಿ ಮೇ 21 NEWS DESK : ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಉಪಸ್ಥಿತಿಯಲ್ಲಿ ಮಂಗಳವಾರ ‘ಭಯೋತ್ಪಾದನಾ ವಿರೋಧಿ’ ದಿನಾಚರಣೆ ಪ್ರಯುಕ್ತ ‘ಪ್ರತಿಜ್ಞಾ ವಿಧಿ’ ಸ್ವೀಕರಿಸುವ ಕಾರ್ಯಕ್ರಮ ನಡೆಯಿತು. ಪ್ರತಿಜ್ಞಾ ವಿಧಿಯನ್ನು ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ ಅವರು ಬೋಧಿಸಿದರು. ಅಹಿಂಸೆ ಹಾಗೂ ಸಹನೆಗೆ ಹೆಸರಾದ ಭಾರತ ರಾಷ್ಟ್ರದ ಭವ್ಯ ಪರಂಪರೆಯಲ್ಲಿ ದೃಢ ವಿಶ್ವಾಸದಿಂದ ಎಲ್ಲಾ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲ ಶಕ್ತಿ ಸಾಮಥ್ರ್ಯದಿಂದ ಎದುರಿಸುತ್ತೇವೆ ಎಂದು ಈ ಮೂಲಕ ಪ್ರತಿಜ್ಞಾ ವಿಧಿ ಬೋಧಿಸಿದರು. ಶಾಂತಿ, ಸಾಮಾಜಿಕ ಸೌಹಾರ್ದತೆ ಮತ್ತು ಪರಸ್ಪರ ಅರಿವು ಸಾಧಿಸಲು ಹಾಗೂ ಉತ್ತೇಜಿಸಲು ಮತ್ತು ಮಾನವ ಜೀವಕ್ಕೆ ಹಾಗೂ ಮೌಲ್ಯಗಳಿಗೆ ಬೆದರಿಕೆಯೊಡ್ಡುತ್ತಿರುವ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಹೋರಾಡಲು ಎಲ್ಲರೂ ಪಣತೊಡಬೇಕು ಎಂದು ಬಸಪ್ಪ ಅವರು ಪ್ರಮಾಣ ವಚನ ಬೋಧಿಸಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಪುಟ್ಟರಾಜು, ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಜಿಲ್ಲಾ ಸಾಂಖ್ಯಿಕ…

Read More

ಮಡಿಕೇರಿ ಮೇ 21 NEWS DESK : ಕವಿತೆ ರಚನೆಗೆ ಯಾವುದೇ ಛಂದ, ಬಂಧ, ಪ್ರಾಸ, ಧೋರಣೆ, ವಸ್ತು, ಆಶಯಗಳಂತಹ ಸಿದ್ದ ರಚನೆ ಇರಬೇಕಿಲ್ಲ. ವಾಸ್ತವಿಕ ನೆಲೆಗಟ್ಟಿನಲ್ಲಿ ಭಾವನಾತ್ಮಕ ಸನ್ನಿವೇಶದಲ್ಲಿ ಸ್ವಾಭಾವಿಕವಾಗಿ ಹುಟ್ಟಿಕೊಳ್ಳುವ ಕವಿತೆಗಳು ಗಟ್ಟಿಯಾಗಿ ನೆಲೆಯೂರುತ್ತವೆ ಎಂದು ಮಡಿಕೇರಿ ತಾಲ್ಲೂಕಿನ ಗಾಳಿಬೀಡು ಜವಹರ್ ನವೋದಯ ವಿದ್ಯಾಲಯದ ಕನ್ನಡ ಅಧ್ಯಾಪಕ ಹಾಗೂ ಸಾಹಿತಿ ಮಾರುತಿ ದಾಸಣ್ಣನವರ್ ಅಭಿಪ್ರಾಯಪಟ್ಟರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು (ಕ.ಸಾ.ಪ.) ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಸಹಯೋಗದೊಂದಿಗೆ ಕರ್ನಾಟಕ ಸುವರ್ಣ ಸಂಭ್ರಮ: 50 ರ ಸಂದರ್ಭದಲ್ಲಿ ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ವಿಭಾಗದ ಆಶ್ರಯದಲ್ಲಿನಡೆದ 2023-24ನೇ ಸಾಲಿನ ಕಥೆಗಾರ್ತಿ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿಯನ್ನು ಮೂರ್ನಾಡಿನ ಕವಿಯಿತ್ರಿ, ಶಿಕ್ಷಕಿ ಕೆ.ಜಿ.ರಮ್ಯ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಕವಿತೆ – ಕಾವ್ಯ ರಚನೆ ಕುರಿತು ಮಾತನಾಡಿದರು. ಪೂರ್ವಾಗ್ರಹದ ಕನ್ನಡಕ ಹಾಕಿಕೊಂಡೇ ಒಂದು…

Read More